ಸೋಮವಾರಪೇಟೆ NEWS DESK ಜ.30 : ಹಿಂದುತ್ವದ ಉಳಿವಿಗಾಗಿ, ಈ ರಾಷ್ಟ್ರದ ರಕ್ಷಣೆಗಾಗಿ, ಹಿಂದೂ ರಕ್ಷಣೆಯ ಸಂಕಲ್ಪದೊಂದಿದೆ ಹಿಂದೂ ಸಂಗಮ ಕಾರ್ಯಕ್ರಮ ಫೆ.1 ರಂದು ಸೋಮವಾರಪೇಟೆಯಲ್ಲಿ ಆಯೋಜನೆ ಮಾಡಲಾಗಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ತಾಲ್ಲೂಕು ಅಧ್ಯಕ್ಷ ಕೆ.ಟಿ.ಸನತ್ ತಿಳಿಸಿದ್ದಾರೆ. ನಗರದ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಪೂರ್ವ ಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಹಾಗೂ ದೇಶಭಕ್ತಿಯನ್ನು ಇನ್ನಷ್ಟು ಬಲಪಡಿಸುವ ಗುರಿ ನಮ್ಮದಾಗಿದೆ ಎಂದರು. ಕಾರ್ಯಕ್ರಮದ ತಾಲ್ಲೂಕು ಆಯೋಜಕ ಬಿ. ಎ.ಭಾಸ್ಕರ್ ಮಾತನಾಡಿ ಸಮಾಜದಲ್ಲಿನ ಎಲ್ಲಾ ಜನಾಂಗ ಬಾಂಧವರನ್ನು ಒಗ್ಗೂಡಿಸಿಕೊಂಡು ಆಚರಿಸುವ ಆಚರಣೆಯ ಮೂಲಕ ಹಿಂದೂ ಸಂಘಟನೆಗಳಿಗೆ ಬಲ ತುಂಬುವುದು. ಶಿಸ್ತು, ದೇಶಾಭಿಮಾನ, ಧೈರ್ಯ, ಪ್ರಾಮಾಣಿಕತೆಯಿಂದ ಕೂಡಿದ ಸಂಪನ್ಮೂಲ ವ್ಯಕ್ತಿಗಳ ನಿರ್ಮಾಣ ಮಾಡುವ ಮೂಲಕ ಸಮಾಜವನ್ನು ಸದೃಢಗೊಳಿಸುವ ಪ್ರಯತ್ನ ಇದಾಗಲಿದೆ. ಸಮಾಜದಲ್ಲಿ ಸಮರಸತೆಯ ಬದುಕನ್ನು ರೂಪಿಸುವುದು, ಕುಟುಂಬ ಪ್ರಬೋಧನ್, ಪರಿಸರ ಸಂರಕ್ಷಣೆ, ಸ್ವದೇಶಿ ಜೀವನ ಶೈಲಿ, ಸಮಾಜದಲ್ಲಿ…
ಲೇಖಕ: admin
ಮಡಿಕೇರಿ NEWS DESK ಜ.30 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಫೆಬ್ರವರಿ ಅಂತ್ಯದೊಳಗೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಕಾರ್ಯಕ್ರಮ ಅನುಷ್ಠಾನದಲ್ಲಿ ವಿಳಂಬ ಮಾಡಿದ್ದಲ್ಲಿ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದರು. ವಿವಿಧ ಇಲಾಖೆಗಳ ಕಾಮಗಾರಿ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸೋಮಶೇಖರ್ ಅವರು ಹೇಳಿದರು. ಪೌರಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜೊತೆಗೆ ಖಾಸಗಿ ಆಸ್ಪತ್ರೆಗೆ ಮನವಿ ಮಾಡಿದ್ದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಆ ನಿಟ್ಟಿನಲ್ಲಿ ಮನವಿ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ…
ಮಡಿಕೇರಿ NEWS DESK ಜ.30 : ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ ಗೌರವದೊಂದಿಗೆ ನಮನ ಸಲ್ಲಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗಣ್ಯರು ನೆರವೇರಿಸಿದರು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ ಎಚ್.ಬಿ.ಗಣೇಶ್ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟçಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಿದರು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯ ತಂಡದವರು ರಾಷ್ಟçಗೀತೆ ಹಾಡಿ ಗಮನ ಸೆಳೆದರು.…
ಮಡಿಕೇರಿ ಜ.30 NEWS DESK : ಹಾಕತ್ತೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ನೂತನ ವಲಯಾಧ್ಯಕ್ಷ ಬಿ.ಕೆ.ನಾರಾಯಣ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಅಧ್ಯಕ್ಷ ಪಿಯೂಷ್ ಪೆರೇರ ಅವರ ಉಪಸ್ಥಿತಿಯಲ್ಲಿ ನಡೆಯಿತು. ಕಗ್ಗೋಡ್ಲುವಿನ ನೆಲ್ಲಿಪೂಣಿ ಭುವನ್ ಅವರ ಮನೆಯಲ್ಲಿ ಮೂರು ಬೂತ್ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಬೂತ್ ಗಳ ನೂತನ ಅಧ್ಯಕ್ಷರು, ಬಿಎಲ್ಓಗಳ ನೇಮಕ, ಪಕ್ಷ ಸಂಘಟನೆ ಮತ್ತಿತರ ವಿಚಾರಗಳ ಕುರಿತು ಚರ್ಚಿಸಲಾಯಿತು. ವಲಯ ಉಪಾಧ್ಯಕ್ಷರಾಗಿ ಕೆ.ವೈ.ಜಲೀಲ್ ಹಾಗೂ ಕಾರ್ಯದರ್ಶಿಯಾಗಿ ಭುವನ್ ನೆಲ್ಲಿಪೂಣಿ ನೇಮಕಗೊಂಡರು. ಹುಲಿತಾಳ ಬೂತ್ ಅಧ್ಯಕ್ಷರಾಗಿ ದಯಾನಂದ (ಅಣ್ಣು), ಬಿಎಲ್ಒಗಳಾಗಿ ಅಶ್ವಥ್ ಕುಮಾರ್ ಹಾಗೂ ಶಶಿಕುಮಾರ್, ಕಗ್ಗೋಡ್ಲು ಬೂತ್ ಅಧ್ಯಕ್ಷರಾಗಿ ಎಂ.ಬಿ.ಪ್ರವೀಣ್, ಬಿಎಲ್ಓಗಳಾಗಿ ಕೊರಗಪ್ಪ ಪೂಜಾರಿ ಹಾಗೂ ಕಿಶೋರ್, ತೊಂಭತ್ತುಮನೆ ಬೂತ್ ಅಧ್ಯಕ್ಷರಾಗಿ ಹೆಚ್.ಬಿ.ಸುರೇಶ್, ಬಿ.ಎಲ್.ಓಗಳಾಗಿ ಕೆ.ವೈ.ಜಲೀಲ್ ಹಾಗೂ ಬಿ.ಎ.ಷರೀಫ್ ಆಯ್ಕೆಯಾದರು. ಸಭೆಯಲ್ಲಿ ಪ್ರಮುಖರಾದ ದಂಬೆಕೋಡಿ ಕವನ ಭೀಷ್ಮ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಡಿಕೇರಿ ಜ.30 NEWS DESK : ಪ್ರಸವಪೂರ್ವ ಹಂತದಲ್ಲಿ ಅಂಗವೈಕಲ್ಯವನ್ನು ತಡೆಗಟ್ಟುವ ಸವಾಲುಗಳು ಮತ್ತು ಅಪಾಯಗಳನ್ನು ಗುರುತಿಸಲು ಪ್ರಸವಪೂರ್ವ ಆರೈಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸುಂಟಿಕೊಪ್ಪದ ಸ್ವಸ್ಥ ಕೇಂದ್ರದಲ್ಲಿ ಅಂಗನವಾಡಿ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಮತ್ತು ವಿಶೇಷಚೇತನರ ಆರೈಕೆದಾರರಿಗಾಗಿ ಆಯೋಜಿಸಲಾಗಿತ್ತು. ಮೈಸೂರಿನ ಪ್ರಸಿದ್ಧ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಸೋನಿಯಾ ಮಂದಪ್ಪ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಗರ್ಭಧಾರಣೆ, ಸುರಕ್ಷಿತ ಹೆರಿಗೆ ಮತ್ತು ಆರೈಕೆಯಲ್ಲಿ ಅರೋಗ್ಯ ಕಾರ್ಯಕರ್ತರ ಪಾತ್ರದ ಕುರಿತು ಮಾತನಾಡಿದ ಡಾ. ಸೋನಿಯಾ, ಕಾರ್ಯಕರ್ತರ ವೃತ್ತಿಕೌಶಲ್ಯವನ್ನು ಶ್ಲಾಘಿಸಿದರು. ಪ್ರಸವಪೂರ್ವ ಆರೈಕೆಯಲ್ಲಿನ ವಿವಿಧ ಅಂಶಗಳ ಬಗ್ಗೆ, ಬೆಳೆಯುತ್ತಿರುವ ಮಗುವಿನ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಗಭಿ೯ಣಿಯರು ವಹಿಸಬೇಕಾದ ಪೋಷಣೆ, ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ದೈಹಿಕ ಯೋಗಕ್ಷೇಮದ ಕಾಳಜಿಯ ಬಗ್ಗೆ ಸಲಹೆ ನೀಡಿದರು. ಶಿಶುಗಳಿಗೆ ಅಗತ್ಯವಿರುವ ವಿವಿಧ ರೋಗಗಳನ್ನು ತಡೆಗಟ್ಟುವ ಲಸಿಕೆಗಳ ಬಗ್ಗೆ ಮತ್ತು ಬಾಣಂತಿಯರ ಕಾಳಜಿಯ ಬಗ್ಗೆಯೂ ಸೋನಿಯಾ ಮಾಹಿತಿ ನೀಡಿದರು. ಶಿಕ್ಷಕರು ಮತ್ತು ಕಾರ್ಯಕರ್ತೆಯರು ವೈದ್ಯರೊಂದಿಗೆ ಅವರು ಸಂವಾದ ನಡೆಸಿದರು. ಸ್ವಸ್ಥ ಸಂಸ್ಥೆಯ…
ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಸರ್ವೋದಯ ದಿನವನ್ನು ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
ಮಡಿಕೇರಿ ಜ.30 NEWS DESK : ಕೊಡಗು ಜಿಲ್ಲೆಯ ವೈದ್ಯಕೀಯ ಶಿಕ್ಷಣ ಅಭಿವೃದ್ಧಿಪಡಿಸುವಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಂಧಿವಾತ ಶಾಸ್ತ್ರದ ಬಗ್ಗೆ ಉನ್ನತ ಮಟ್ಟದ ಸಿ.ಎಂ.ಇ ಕಾರ್ಯಾಗಾರ ನಡೆಯಿತು. ಕರ್ನಾಟಕ ರುಮಟಾಲಜಿ ಅಸೋಸಿಯೇಷನ್ ಮತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ಸಂಸ್ಥೆ ನಿರ್ದೇಶಕರು ಹಾಗೂ ಡೀನ್ ಲೋಕೇಶ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. 2018ರ ನಂತರ ಈ ವಿಷಯದ ಬಗ್ಗೆ ಜಿಲ್ಲೆಯಲ್ಲಿ ನಡೆದ ಮೊದಲ ದೊಡ್ಡ ಕಾರ್ಯಕ್ರಮ ಇದಾಗಿದ್ದು, ಸ್ಥಳೀಯ ವೈದ್ಯಕೀಯ ಸಮುದಾಯದಲ್ಲಿ ಈ ವಿಷಯದ ಬಗ್ಗೆ ಸುಧೀರ್ಘವಾದ ಚರ್ಚೆ ನಡೆಯಿತು. ಈ ವಿಚಾರ ಸಂಕಿರಣದಲ್ಲಿ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸೇರಿದಂತೆ ಇತರೆ ರಾಜ್ಯದ ವೈದ್ಯರುಗಳು, ವಿವಿಧ ಕಾಲೇಜುಗಳ ಪ್ರತಿನಿಧಿಗಳು ಇದರಲ್ಲಿ ನೋಂದಾಯಿಸಿಕೊಂಡಿದ್ದರು. ಡಾ.ಶಿವಪ್ರಸಾದ್ ಬಿ.ಎನ್. ಅವರು ಸಂವಾದಾತ್ಮಕ ಸೆಷನ್ ಮೂಲಕ ಚರ್ಚೆ ಆರಂಭಿಸಿದರು. ಡಾ.ಮಂಜುನಾಥ್, ಡಾ.ಪುರುಷೋತ್ತಮ್, ಡಾ.ಸಿಡ್ನಿ ಡಿಸೋಜಾ, ಡಾ.ಸುಧೇಂದ್ರ ರಾವ್ ಮತ್ತು ಡಾ.ಮುಖ್ಯಪ್ರಾಣ ಪ್ರಭು ಅವರ ನೇತೃತ್ವದಲ್ಲಿ ಶೈಕ್ಷಣಿಕ…
ವಿರಾಜಪೇಟೆ ಜ.30 NEWS DESK : ಕಂಡಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಕೆಂಜೇಂಗಡ ಗಣಪತಿ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಹಾಗೂ ಸಾಮೂಹಿಕ ಕವಾಯತು ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೊಡಗು ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ನಾಸಿರ್ ಮಾತನಾಡಿ, ಕಂಡಂಗಾಲ ಶಾಲೆಯ ಶೈಕ್ಷಣಿಕ ವಾತಾವರಣವು ಮಾದರಿಯಾಗಿದ್ದು, ಇಲ್ಲಿನ ವಿದ್ಯಾರ್ಥಿಗಳ ಶಿಸ್ತು ಹಾಗೂ ಶಿಕ್ಷಕರ ಕಾರ್ಯದಕ್ಷತೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅವರು ಗಣರಾಜ್ಯೋತ್ಸವದ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಾಜಿ ಸೈನಿಕ ಹಾಗೂ ಕ್ರೀಡಾ ಸಮಿತಿಯ ಮಾಜಿ ಅಧ್ಯಕ್ಷ ಕೊಂಗಂಡ ಡಬ್ಲ್ಯೂ ಭೀಮಯ್ಯ ಅವರು ಮಾತನಾಡಿ, ಸ್ಥಳೀಯ ಶಿಕ್ಷಣ ಸಂಸ್ಥೆಗಳು ನಮ್ಮನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು.…
ಮಡಿಕೇರಿ ಜ.30 NEWS DESK : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ಮಡಿಕೇರಿಯಲ್ಲಿ ನಡೆಯಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮೈದಾನದಲ್ಲಿರಿಸಿ ಗಾಂಧೀ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು. ನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಸರ್ವಧರ್ಮ ಗುರುಗಳು ಸಂದೇಶಗಳನ್ನು ಬೋಧಿಸಿದರು. ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.…
ಮಡಿಕೇರಿ ಜ.30 NEWS DESK : ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು. ಎಸ್ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ ಪುಟಾಣಿಗಳು, ಸಾರ್ವಜನಿಕರು, ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜೆಸ್ಸಿ ಕೆ.ಎಫ್. ಸ್ವಾಗತಿಸಿದರು. ಪಿ.ಸಿ. ಉಷಾ ನಿರೂಪಿಸಿದರು. ಪ್ರಜ್ಞಾ ವಂದಿಸಿದರು. ಗ್ರಾಪಂ ಸದಸ್ಯೆ ಪ್ರಭಾ, ಎಸ್ಡಿಎಂಸಿ ಉಪಾಧ್ಯಕ್ಷೆ ಜಯಶ್ರೀ, ಪೋಷಕರು, ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.






