ಲೇಖಕ: admin

ವಿರಾಜಪೇಟೆ ಮೇ 24 : ಚೆಂಬೆಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಮಗ್ಗುಲ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪಾಲ್‍ತಿರಿಕೆ ಅಯ್ಯಪ್ಪ ದೇಗುಲದ ಪುನರ್ ಪತ್ರಿಷ್ಠಾಪನಾ ಕಾರ್ಯಕ್ರಮಗಳು ಮೇ 25 ರಿಂದ 27ರ ವರೆಗೆ ನಡೆಯಲಿದೆ. ಸುಮಾರು 365 ವರ್ಷಗಳ ಇತಿಹಾಸ ಹೊಂದಿರುವ, ಗೊಲ್ಲ ಸಮುದಾಯದಿಂದ ಪ್ರತಿಷ್ಠಾಪಿಸಲಾದ ಶ್ರೀ ಪಾಲ್ ತಿರಿಕೆ ಅಯ್ಯಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಬಹ್ಮಶ್ರೀ ವೇದಮೂರ್ತಿ ಶ್ರೀ ಗಿರೀಶ್ ತಂತ್ರಿಗಳ ನೇತೃತ್ವದಲ್ಲಿ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಮೇ 25 ರಂದು ಸಂಜೆ ದೇವತಕ್ಕರ ಮನೆಯಿಂದ ಭಂಡಾರ ತರುವುದು, ನಂತರ ಪಂಚಗವ್ಯ ಪುಣ್ಯಾಹ, ಸ್ಥಳಶುದ್ಧಿ, ಆಚಾರ್ಯ ವರ್ಣ, ಪ್ರಾಶಾ ಶುದ್ಧಿ, ಅಂಕುರ ಪೂಜೆ, ವಾಸ್ತು ಹೋಮ, ಸುದರ್ಶನ ಹೋಮ, ವಾಸ್ತು ಬಲಿ, ದಿಕ್ಪಾಲಕ ಬಲಿ ನಡೆಯಲಿದೆ. ಮೇ 26 ರಂದು ಬೆಳಿಗ್ಗೆ ಅಂಕುರ ಪೂಜೆ, ಗಣ ಹೋಮ, ದುರ್ಗಾ ಹೋಮ, ಆಶ್ಲೇಷ ಬಲಿ ಹಾಗೂ ಪ್ರಧಾನ ಹೋಮ ಜರುಗಲಿದ್ದು, ಅಪರಾಹ್ನ 4 ಗಂಟೆಗೆ…

Read More

ಮಡಿಕೇರಿ ಮೇ 24 : ಮಡಿಕೇರಿಯ  ಕಲ್ಯಾಣಿ ಮೋಟಾರ್ಸ್  ವತಿಯಿಂದ  ಮೇ 26 ರಂದು  ಮೆಗಾ ಉದ್ಯೋಗ ಮೇಳ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಫೋರ್ಟ್ ಮರ್ಕರಾದಲ್ಲಿ  ‘ಉದ್ಯೋಗ ಮೇಳ’  ನಡೆಯಲಿದೆ. ಲೊಕೇಶನ್ ಗಾಗಿ ಕ್ಲಿಕ್ ಮಾಡಿ : https://g.co/kgs/q7K8vq ನೋಂದಣಿಗಾಗಿ ಕ್ಲಿಕ್ ಮಾಡಿ : https://forms.gle/TVFcFYGhkFo5jVSd6 ಹೆಚ್ಚಿನ ಮಾಹಿತಿಗಾಗಿ  ಸೂರ್ಯ (ಎಚ್. ಆರ್.) ಮೊಬೈಲ್: 9845378454  ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಮೇ 24 : ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯವಳಿಯ ದಿನದ ರೋಚಕ ಪಂದ್ಯದಲ್ಲಿ ಕಾಫಿ ಕ್ರಿಕೆಟರ್ಸ್ ಮತ್ತು ಜಿ.ಕಿಂಗ್ಸ್ ಸಿದ್ದಲಿಂಗಪುರ(ಜಿಕೆಎಸ್) ತಂಡಗಳು ಗೆಲುವು ಸಾಧಿಸಿ ಪೂರ್ಣ ಅಂಕಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡವು. ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಆಯೋಜಿತ ಪಂದ್ಯಾವಳಿಯ ದಿನದ ಮೊದಲ ಪಂದ್ಯದಲ್ಲಿ ಕಾಫಿ ಕ್ರಿಕೆಟರ್ಸ್ ತಂಡವು 7 ವಿಕೆಟ್‍ಗಳ ಗೆಲುವನ್ನು ಎದುರಾಳಿ ಕುಕ್ಕನೂರು ಬುಲ್ಸ್ ತಂಡದ ವಿರುದ್ಧ ಸಾಧಿಸಿತು. ಮೊದಲಿಗೆ ಬ್ಯಾಟ್ ಮಾಡಿದ ಕುಕ್ಕನೂರು ತಂಡ ನಿಗದಿತ ಹತ್ತು ಓವರ್‍ಗಳಲ್ಲಿ 7 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿತು. ಐಕಾನ್ ಆಟಗಾರ ಬೈಲೆ ಡ್ಯೂಕ್ ಕಾವೇರಿ ಮೂರು ಬೌಂಡರಿ ಮತ್ತು ಒಂದು ಸಿಕ್ಸ್‍ನಿಂದ 23(17 ಬಾಲ್)ರನ್ ಗಳಿಸಿ ತಂಡದ ಗೌರವದ ಮೊತ್ತಕ್ಕೆ ಕಾರಣರಾದರು. ಕಾಫಿ ಕ್ರಿಕೆಟರ್ಸ್‍ನ ವಿವಾನ್ 2 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು. ನಂತರ ಬ್ಯಾಟ್ ಮಾಡಿದ ಕಾಫಿ ಕ್ರಿಕೆಟರ್ಸ್ 8.4 ಓವರ್‍ಗಳಲ್ಲಿ 3 ವಿಕೆಟ್ ನಷ್ಟಕ್ಕೆ 81 ರನ್‍ಗಳಲ್ಲಿ ಗುರಿತಲುಪಿ…

Read More

ಮಡಿಕೇರಿ ಮೇ 24 :  ಜಿಲ್ಲೆಯ ವಿವಿಧೆಡೆ ಸುರಿದ  ಧಾರಕಾರ ಮಳೆಯಿಂದಾಗಿ  ಮನೆ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಮಾಲಂಬಿ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಪರಿವರ್ತಕ  ಹಾಗೂ ವಿದ್ಯುತ್  ಕಂಬಗಳಿಗೆ ಹಾನಿಯಾಗಿದೆ.  ಎಮ್ಮೆಮಾಡು ಗ್ರಾಮದ ಶಫೀಕ್  ಎಂಬವರ  ಮನೆಯ ಮೇಲೆ ಸಿಲ್ವರ್ ಮರ ಬಿದ್ದುದರ ಪರಿಣಾಮವಾಗಿ ಮೇಲ್ಛಾವಣಿಯ 5 ಶೀಟುಗಳು ಹಾನಿಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಮೇ 24 : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಶ್ರದ್ಧಾಭಕ್ತಿಯಿಂದ ಜರುಗಿತು. ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು. ವಾರ್ಷಿಕೋತ್ಸವದ ಪ್ರಯುಕ್ತ ಮುಂಜಾನೆಯಿಂದಲೇ ಮಹಾಗಣಪತಿ ಹೋಮ, ನವಕ ಪಂಚಗವ್ಯ, ಕಳಸ ಪೂಜೆ, ಕಳಶಾಭಿಷೇಕ ಸರ್ವಾಲಂಕಾರ, ಮಹಾಪೂಜೆ ಹಾಗೂ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಮತ್ತು ಮಂಗಳಾರತಿ, ವಿಶ್ಲೇಷ ಬಲಿ, ನಾಗಪೂಜೆ, ಕ್ಷೇರಾಭಿಷೇಕ ನಡೆಯಿತು. ಪೂರ್ವಾಹ್ನ ನಾಗದರ್ಶನ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ಉಡುಪಿಯ ಪೆಲರ್ಂಪಾಡಿ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಟ್ಟರು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

Read More

ಸುಂಟಿಕೊಪ್ಪ ಮೇ 24 : ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಜಿ.ಯಂ.ಪಿ. ಶಾಲಾ ಮೈದಾನದಲ್ಲಿ ನಡೆಯುತ್ತಿರುವ 25ನೇ ವರ್ಷದ ಡಿ.ಶಿವಪ್ಪ ಸ್ಮಾರಕ ಬೆಳ್ಳಿ ಮಹೋತ್ಸವದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯದಲ್ಲಿ ವಿಜಯ ನಗರ ಎಫ್.ಸಿ. ಮೈಸೂರು ಮತ್ತು ಪೈಟರ್ ಎಫ್.ಸಿ. ಕೂತುಪರಂಬು ಕ್ವಾರ್ಟರ್ ಪೈನಲ್ ಹಂತಕ್ಕೆ ಪ್ರವೇಶ ಪಡೆದರು. ಎಸ್.ಯು. ಎಫ್.ಸಿ. ನಂಜನಗೂಡು/ ಯಾಮಿಟಿ ಎಫ್.ಸಿ. ಗದ್ದೆ ಹಳ್ಳ ತಂಡಗಳ ನಡುವೆ ನಡೆದ ಮೊದಲ ಪಂದ್ಯದ ಮೊದಲಾರ್ಧದಲ್ಲಿ ಎರಡು ತಂಡಗಳು ಚುರುಕು ತನದ ಪ್ರದರ್ಶನ ನೀಡಿದ ಆಟಗಾರರು ಕ್ರೀಡಾಭಿಮಾನಿಗಳಿಗೆ ರಸದೌತನ ನೀಡಿದರು. ಉತ್ತಮ ಹೊಂದಾಣಿಕೆ ಆಟವಾಡಿ ವಿಜಯ ನಗರ ತಂಡದ ಮುನ್ನಡೆ ಆಟಗಾರ ಪ್ರೀತಮ್ 29ನೇ ನಿಮಿಷದಲ್ಲಿ ಗೋಲು ಹೊಡೆಯುವ ಮೂಲಕ ಯಶಸ್ವಿಯಾದರು. ನಂತರ ನಡೆದ ದ್ವಿತೀಯಾರ್ಧ ಪಂದ್ಯದಲ್ಲಿ ಗದ್ದೆ ಹಳ್ಳದ ಯಾಮಿಟಿ ತಂಡ ರಬಸದ ಆಟಕ್ಕೆ ಒತ್ತು ನೀಡಿದರೂ ಎದುರಾಳಿ ತಂಡ ಗೋಲು ಗಳಿಸುವುದಕ್ಕೆ ಆಟದ ಕೊನೆಯವರೆಗೂ ಅವಕಾಶ ನೀಡದೆ ತಮ್ಮ ಆಟವನ್ನು ಪ್ರದರ್ಶಿಸಿ 1-0 ಗೋಲುಗಳಿಂದ ವಿಜಯ ನಗರ…

Read More

ಮಡಿಕೇರಿ ಮೇ 23 :  ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್  ಅವರ ಜೊತೆ ವಿಡಿಯೋ ಸಂವಾದ ಮೂಲಕ‌  ಸಭೆ ನಡೆಯಿತು. ಈ ಸಂದರ್ಭ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Read More

ಮಡಿಕೇರಿ ಮೇ 23 : ಸಹಾರ ಯೂಥ್ ಕ್ಲಬ್ ಆಶ್ರಯದಲ್ಲಿ ಚೆನ್ನಯ್ಯನಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ 4ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕಾಲ್ಚೆಂಡು ಪಂದ್ಯಾವಳಿಗೆ ಸಾಗರ್ ಯೂಥ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಎಚ್.ಎ ಮುಸ್ತಫ ಚಾಲನೆ ನೀಡಿದರು. ಈ ಸಂದರ್ಭ ಮಾಲ್ದಾರೆ ಗ್ರಾ.ಪಂ ಅಧ್ಯಕ್ಷ ಸಮೀರ್ ಮಾತನಾಡಿ, ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಗ್ರಾಮದಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. ಕ್ರೀಡಾಪಟುಗಳು ರಾಜಕೀಯ ಹಾಗೂ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಕ್ರೀಡಾ ಮನೋಭಾವ ಮೈಗೂಡಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು. ಚೆನ್ನಯ್ಯನ ಕೋಟೆ ಗ್ರಾ.ಪಂ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರ ಮೂಲಕ ಕ್ರೀಡಾಭಿಮಾನದಿಂದ ಕ್ರೀಡಾಪಟುಗಳು ಪಾಲ್ಗೊಳ್ಳುತ್ತಿರುವುದು ಶ್ಲಾಘನೆ ಎಂದರು. ಕೊಡಗು ಚಾಂಪಿಯನ್ ಲೀಗ್ (ಕೆಸಿಎಲ್) ಸ್ಥಾಪಕ ಎ.ಎಸ್.ಮುಸ್ತಫ ಮಾತನಾಡಿ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರ ಮೂಲಕ ಕ್ರೀಡಾ…

Read More

ಮಡಿಕೇರಿ ಮೇ 23 : ಶಾಸಕ ಎ.ಎಸ್ ಪೊನ್ನಣ್ಣ ಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿರಾಜಪೇಟೆ ನಗರ ಕಾಂಗ್ರೆಸ್ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ವಿರಾಜಪೇಟೆ ನಗರ ಅಧ್ಯಕ್ಷರಾದ ಮಾದಂಡ ತಿಮ್ಮಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ ಸಮಿತಿ ಸದಸ್ಯರು, ಈ ಬಾರಿ ಕೊಡಗಿನ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಇಬ್ಬರು ಶಾಸಕರು ವಿದ್ಯಾವಂತರಾಗಿದ್ದಾರೆ. ಆದ್ದರಿಂದ ಈ ಬಾರಿ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರ ಘಟಕದ ಎಲ್ಲಾ ಸದಸ್ಯರು, ವಿರಾಜಪೇಟೆ ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಮೇ 23 : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಕರ್ನಾಟಕ ರಾಜ್ಯದ ನೂತನ ಸರ್ಕಾರದ ಗಮನ ಸೆಳೆಯಲು ಮೇ 25 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ಕೊಡವ ನೆಲ, ಭಾಷೆ, ಸಂಸ್ಕೃತಿ, ಪರಂಪರೆಯ ಉಳಿವಿಗಾಗಿ ಮತ್ತು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರ ಸಬಲೀಕರಣಕ್ಕಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಕಲ್ಪಿಸಬೇಕು, ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸಬೇಕು, ಕೊಡವರಿಗೆ ಸಾಂವಿಧಾನಿಕ ಭದ್ರತೆಯನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

Read More