ಮಡಿಕೇರಿ ಏ.14 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ‘ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಇತರರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ‘ಶಿಕ್ಷಣ ಪ್ರಬಲ ಮತ್ತು ಪರಿಣಾಮಕಾರಿ ಅಸ್ತ್ರ’ ಎಂಬುದನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಒತ್ತಿ ಹೇಳಿದ್ದಾರೆ ಎಂದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದಲ್ಲಿಯೇ ಮಾದರಿ ಹಾಗೂ ಅತ್ಯಂತ ಶ್ರೇಷ್ಠ ಸಂವಿಧಾನನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದಾರೆ. ಭಾರತದ ಸಂವಿಧಾನದ ಮೂಲಕ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಂವಿಧಾನ ನೀಡಿದ್ದಾರೆ. ಎಲ್ಲರಿಗೂ ಸಮಾನ…
ಲೇಖಕ: admin
ನಾಪೋಕ್ಲು ಏ.20 : ಲಯನ್ಸ್ ಕ್ಲಬ್ ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಹಾಗೂ ಲಿಯೋ ಕ್ಲಬ್ ಪದಗ್ರಹಣ ಸಮಾರಂಭ ನಡೆಯಿತು. ಲಯನ್ಸ್ ಜಿಲ್ಲಾ ಗವರ್ನರ್ ಸಂಜೀತ್ ಶೆಟ್ಟಿ ನಾಪೋಕ್ಲು ಲಯನ್ಸ್ ಕ್ಲಬ್ ಗೆ ಅಧಿಕೃತ ಭೇಟಿ ನೀಡಿ ಹಳೆ ತಾಲೂಕಿನ ಬಸ್ಸು ತಂಗುದಾಣವನ್ನು ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ದತ್ತು ಸ್ವೀಕರಿಸಿ ಬಸ್ಸು ತಂಗುದಾಣದ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿದರು. ನಂತರ ಲಯನ್ಸ್ ವಲಯ ಅಧ್ಯಕ್ಷ ಮುಕ್ಕಾಟಿರ ಎಂ ವಿನಯ್ ಅಧ್ಯಕ್ಷತೆಯಲ್ಲಿ ಕೊಡವ ಸಮಾಜದ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಲಯನ್ಸ್, ಮಲ್ಟಿಪಲ್ ಚೇರ್ಮನ್ ವಸಂತಶೆಟ್ಟಿ, ಲಿಯೋ ಪದಗ್ರಹಣ ಅಧಿಕಾರಿ ಪ್ರೀತಮ್ ಪೊನ್ನಪ್ಪ, ಪ್ರಗತಿಶೆಟ್ಟಿ, ಖಜಾಂಜಿ ಕುಟ್ಟಪ್ಪ ಎಂ.ಬಿ , ಪ್ರಾಂತೀಯ ಅಧ್ಯಕ್ಷ ಕೋಟೆರ ಶಾಶ್ವತ್ ಬೋಪಣ್ಣ, ವಲಯ ಅಧ್ಯಕ್ಷ ಮೋಹನ್ ಕುಮಾರ್, ಪ್ರಾಂತೀಯ ಅಂಬಾಸಿಡರ್ ನವೀನ್ ಅಂಬೆಕಲ್, ಲಯನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳು : ನೂತನವಾಗಿ ಲಿಯೋ ಕ್ಲಬ್ ಅನ್ನು ಉದ್ಘಾಟಿಸಲಾಯಿತು. ಕ್ಲಬ್ನ ನೂತನ…
ನಾಪೋಕ್ಲು ಏ.14 : ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸಂಸ್ಥೆ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ, ಅಂಬೇಡ್ಕರ್ ಜನ್ಮದಿನಾಚರಣೆ ಮತ್ತು ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಉಪಪ್ರಾಂಶುಪಾಲ ಎಂ.ಎಸ್ ಶಿವಣ್ಣ ಉದ್ಘಾಟಿಸಿ ಮಾತನಾಡಿ, ದೇಶಕ್ಕೆ ಸಂವಿಧಾನವನ್ನು ರಚಿಸಿದ ಮಹಾನ್ ವ್ಯಕ್ತಿ ಡಾ.ಅಂಬೇಡ್ಕರ್ ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಹೊಂದಬೇಕೆಂದು ಸಲಹೆ ನೀಡಿದರು. ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ. ಹಾರಿಸ್ ಮಾತನಾಡಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಇಡೀ ವಿಶ್ವವೇ ನಮ್ಮ ದೇಶವನ್ನು ಗಮನಿಸುವಂತೆ ಮಾಡಿದೆ. ಅಲ್ಲದೇ ಎಲ್ಲರೂ ಸಮಾನತೆಯಿಂದ ಉನ್ನತ ಸ್ಥಾನಕ್ಕೆರಲು ಸಾಧ್ಯವಾಗಿದೆ ಎಂದರು. ಪ್ರತಿಯೊಬ್ಬರೂ ಅವರ ಜೀವನ ಚರಿತ್ರೆಗಳನ್ನು ಓದಿ ತಮ್ಮ ಜೀವನದಲ್ಲಿ ಅಳವಡಿಸುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಶ್ರಮಿಸಬೇಕೆಂದರು. ಕಾರ್ಯಕ್ರಮಕ್ಕೂ ಮೊದಲು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿ ಅಂಬೇಡ್ಕರ್ ಜನ್ಮದಿನ ಆಚರಿಸಿದರು. ಬಳಿಕ ಭಾರತ್ ಸ್ಕೌಟ್ಸ್…
ಮಡಿಕೇರಿ ಏ.14 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಜೀವನದ ಉದ್ದಕ್ಕೂ ಹೋರಾಟವನ್ನೆ ಕಂಡಿರುವ ಮಹಾ ಚೇತನ. ಅವರನ್ನು ಒಂದು ವರ್ಗಕ್ಕೆ ಸಿಮೀತಗೊಳಿಸದೇ ಅವರ ಆದರ್ಶ ಗುಣಗಳನ್ನು ಬೆಳೆಸಿಕೊಳ್ಳುವಂತಾಗಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜನ್ಮ ಜಯಂತಿ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರು ಮಂತ್ರಗಳನ್ನು ದೇಶಕ್ಕೆ ನೀಡಿದ್ದಾರೆ. ತುಳಿತಕ್ಕೆ ಒಳಗಾದವರಿಗೆ, ಅಸ್ಪøಷ್ಯರಿಗೆ, ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯವನ್ನು ನೀಡುವ ಕೆಲಸ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಹೋರಾಟ ನಡೆಸಿದ್ದಾರೆ. ರಾಷ್ಟ್ರೀಯವಾದಿಯಾಗಿ, ಕಾನೂನು ತಜ್ಞರಾಗಿ, ರಾಜಕೀಯ ನೇತರರಾಗಿ, ಕ್ರೀಯಾಶಿಲ ಸಮಾಜಿಕ ಕಾರ್ಯಕರ್ತನಾಗಿ, ಚಿಂತಕರಾಗಿ, ಇತಿಹಾಸಕಾರರಾಗಿ, ಮಹಾನ್ ದಾರ್ಶನಿಕರಾಗಿ, ಸಮೃದ್ದ ಬರಹಗಾರರಾಗಿ, ಬೌಧ ಧರ್ಮದ ಪುನರುಜೀವನಕ್ಕಾಗಿ, ಮಾನವ ಶಾಸ್ತ್ರಜ್ಞಾರಾಗಿ, ವಾಕ್ಪಟುವಾಗಿ, ಅರ್ಥಶಾಸ್ತ್ರಜ್ಞರಾಗಿ, ಸಂವಿಧಾನದ ಪ್ರಮುಖ ಶಕ್ತಿಯಾಗಿ ಮಹತ್ತರ…
ಮಡಿಕೇರಿ ಏ.14 : ಇಂದಿನ ಯುವ ಸಮೂಹ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ನಾಯಕತ್ವ ಗುಣವನ್ನು ರೂಢಿಸಿಕೊಂಡರೆ, ಸಂವಿಧಾನದ ಹಿತಾಸಕ್ತಿಯಂತೆ ಸಮಾನ, ಸಹೋದರತ್ವ, ಸಾಮರಸ್ಯದಿಂದ ಕೂಡಿದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಮಹದೇವಯ್ಯ ಅಭಿಪ್ರಾಯಪಟ್ಟರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಜನ್ಮ ಜಯಂತಿಯಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಅವರು, ಭಾರತೀಯ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಮಹಾನ್ ಕೊಡುಗೆಯನ್ನು ವಿವರಿಸಿದರು. ಅಂಬೇಡ್ಕರ್ ಅವರಿಗೆ ಅಷ್ಟೊಂದು ಅರ್ಹತೆಯಿದ್ದರೂ ಅವರಿಗೆ ಉನ್ನತ ಜವಾಬ್ದಾರಿಯನ್ನು ಒದಗಿಸಲು ಸತಾಹಿಸಿದ ಮನಸ್ಥಿತಿಗಳ ನಡುವೆಯೂ ಅವರು ಜನಸಾಮ್ಯರ ಒಳಿತಿಗಾಗಿ ಕಠಿಣ ಪರಿಶ್ರಮದಿಂದ ಈ ದೇಶದ ಉಜ್ವಲ ಭವಿಶ್ಯಕ್ಕಾಗಿ ಅಡಿಪಾಯ ಹಾಕಿಕೊಟ್ಟಿದ್ದಾರೆ ಎಂದರು. ಅಂಬೇಡ್ಕರ್ ಅವರ ಜೀವನ, ಸಾಧನೆಯ ಕುರಿತು ವಿಶ್ವದಾದ್ಯಂತ ಹಲವಾರು ವಿಶ್ವವಿದ್ಯಾನಿಲಯಗಳಲ್ಲಿ ಸಂಶೋಧನೆಗಳು ನಡೆಯುತ್ತಿದ್ದು, ಭಾರತೀಯರಿಗಿಂತ ವಿದೇಶಿಯರು…
ಮಡಿಕೇರಿ ಏ.14 : ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಕರಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಡಿಕೇರಿ ಏ.14 : ಅಪರಾಧ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಿಲ್ಲೆಯ ಇಬ್ಬರನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ. ಚುನಾವಣೆ ಹಿನ್ನೆಲೆಯಲ್ಲಿ ರೌಡಿ ಲಿಸ್ಟ್ನಲ್ಲಿರುವ ಆರೋಪಿಗಳನ್ನು ಬೇರೆಡೆಗೆ ಗಡಿಪಾರು ಮಾಡಲಾಗುತ್ತಿದ್ದು, ಮಡಿಕೇರಿ ನಿವಾಸಿಗಳಾದ ಲೋಕೇಶ್ ಹಾಗೂ ಸುಜಿತ್ ಎಂಬಿಬ್ಬರನ್ನು ಗಡಿಪಾರು ಮಾಡಲಾಗಿದೆ. ಈ ಹಿಂದೆ ಗುಂಡು ಹಾರಿಸಿ ವ್ಯಕ್ತಿಗಳನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣ ಸೇರಿದಂತೆ ಲೋಕೇಶ್ ಮೇಲೆ ಆರು ಪ್ರಕರಣ ಹಾಗೂ ಸುಜಿತ್ ಮೇಲೆ ಐದು ಪ್ರಕರಣಗಳಿದ್ದು, ಈ ಹಿನ್ನೆಲೆಯಲ್ಲಿ ಲೋಕೇಶ್ನನ್ನು ಉಡುಪಿ ಜಿಲ್ಲೆಗೆ ಹಾಗೂ ಸುಜಿತ್ನನ್ನು ಚಾಮರಾಜನಗರಕ್ಕೆ ಮೂರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ ಎಂದು ಮಡಿಕೇರಿ ನಗರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.
ಮಡಿಕೇರಿ, ಏ. 14: ನಗರದ ಅಶೋಕಪುರದ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ದೇವಾಲಯ ಆವರಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಪ್ರಮುಖರಾದ ಹೆಚ್. ಆರ್.ಮುತ್ತಪ್ಪ ಮಾತನಾಡಿ, ತಾರತಮ್ಯದ ನಡುವೆ ಶಿಕ್ಷಣವನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಅಂಬೇಡ್ಕರ್ ಶೋಷಿತರ ಧನಿಯಾಗಿ ಕೆಲಸ ಮಾಡಿದರು. ಪ್ರಜಾಪ್ರಭುತ್ವದ ಬುನಾದಿಯಾದ ಸಂವಿಧಾನ ರಚಿಸುವ ಮೂಲಕ ಸಮಸಮಾಜ ನಿರ್ಮಾಣದಲ್ಲಿ ಅಂಬೇಡ್ಕರ್ ಪಾತ್ರ ಮಹತ್ತರವಾಗಿದೆ. ಅವರ ತತ್ವ, ಆದರ್ಶ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಎಂ. ಜಯರಾಮ್, ಪ್ರಧಾನ ಕಾರ್ಯದರ್ಶಿ ಹೆಚ್.ಟಿ. ವೆಂಕಪ್ಪ, ಉಪಾಧ್ಯಕ್ಷ ಎಂ.ಡಿ. ಧರ್ಮೇಂದ್ರ, ಸಹಕಾರ್ಯದರ್ಶಿ ಎಂ.ಪಿ. ಜಯಪ್ರಕಾಶ್, ಪ್ರಮುಖರಾದ ಹೆಚ್.ಟಿ. ಶಾಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕುಶಾಲನಗರ ಏ.13 : ಭಾರತದಲ್ಲಿ ಸಾಮಾಜಿಕವಾಗಿ ಸ್ವಾಭಿಮಾನದ ಕೂಗು ಬದಲಾವಣೆ ತರುವಲ್ಲಿ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಅವರ ಚಿಂತನೆ ಅತ್ಯಂತ ಮಹತ್ವದ್ದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಬೌದ್ಧಿಕ ಪ್ರಮುಖ ಡಾ ಶ್ರೀಧರ ಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಜ್ಞಾನಭಾರತಿ ಶಾಲಾ ಸಭಾಂಗಣದಲ್ಲಿ ಸಾಮರಸ್ಯ ವೇದಿಕೆ ಆಶ್ರಯದಲ್ಲಿ ನಡೆದ ಡಾ.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ಸ್ಮರಣೆ ಪ್ರೇರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನಸು ನನಸು ಮಾಡಿದ ಅಂಬೇಡ್ಕರ್ ಅವರ ಜೀವನ ಸಂದೇಶ ಜೀವನದ ಅವಲೋಕನ ಸಂವಿಧಾನ ರಚನೆ ಇದೀಗ ನಮ್ಮ ನಡುವೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಅಂಬೇಡ್ಕರ್ ಅವರ ಯಾವುದೇ ಕಾರ್ಯಕ್ರಮಗಳು ದಲಿತ ಸಮುದಾಯಕ್ಕೆ ಸೀಮಿತವಾಗಿರದೆ ಇಡೀ ದೇಶದ ಸರ್ವ ಜನತೆಯ ನಿತ್ಯ ಕಾರ್ಯಕ್ರಮಗಳಾಗಬೇಕಾಗಿದೆ ಎಂದರು. ಹೊಸ ಬದಲಾವಣೆ ನವ ಚಿಂತನೆಗಳ ಮೂಡಿಸಿದಂತಹ ಸಮಾಜ ಸುಧಾರಕರು ಆಗಿರುವ ಡಾ ಅಂಬೇಡ್ಕರ್ ಅವರ ಚಿಂತನೆ ತಿಳಿಯುವಂತಾಗಬೇಕು ಸ್ಪೃಶ್ಯ -ಅಸ್ಪೃಶ್ಯ ಅನ್ನುವ ಪದಗಳು ಯಾವುದೇ ಶಾಸ್ತ್ರಗಳಲ್ಲಿ…
ಮಡಿಕೇರಿ ಏ.13 : ಸುಮಾರು 980 ವರ್ಷಗಳ ಇತಿಹಾಸವಿರುವ ಹಾಗೂ ದೇವಸ್ಥಾನದ ಎದುರು ದೇವಸ್ಥಾನಕ್ಕೆ ಮುಖಮಾಡಿ ನಿಂತಿರುವ ಐರಾವತ (ಕಲ್ಲಿನ ಆನೆ) ಹೊಂದಿರುವ ಜಿಲ್ಲೆಯ ಏಕೈಕ ದೇವಸ್ಥಾನವೆಂಬ ಹೆಗ್ಗಳಿಕೆ ಹೊಂದಿರುವ ಪೊನ್ನಂಪೇಟೆ ತಾಲ್ಲೂಕಿನ ಹಳ್ಳಿಗಟ್ಟು ಗ್ರಾಮಕ್ಕೆ ಸೇರಿದ ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಬಿಸು ಚಂಗ್ರಾಂದಿ ಹಾಗೂ ಎಡಮ್ಯಾರ್ ಒಂದ್ ನೂತನ ವರ್ಷಾಚರಣೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಭದ್ರಕಾಳಿ, ಗುಂಡಿಯತ್ ಅಯ್ಯಪ್ಪ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಹಾಗೂ ತಕ್ಕಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ತಕ್ಕಮುಖ್ಯಸ್ಥರಾದ ಚಮ್ಮಟೀರ ಸುಗುಣ ಮುತ್ತಣ್ಣ ಮಾಹಿತಿ ನೀಡಿ ಬಿಸು ಸಂಕ್ರಮಣದ ಎಡಮ್ಯಾರ್ ಒಂದ್ ಪ್ರಯುಕ್ತ ಇದೇ ಏಪ್ರಿಲ್ 14ನೇ ಶುಕ್ರವಾರ ಬೆಳಿಗ್ಗೆ 8.00 ಗಂಟೆಗೆ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದ ಆವರಣದಲ್ಲಿ ಗಣಪತಿ ಹೋಮವನ್ನು ಹಮ್ಮಿಕೊಳ್ಳಲಾಗಿದ್ದು, ಬಳಿಕ 11.00 ಗಂಟೆಗೆ ಶ್ರೀ ಭದ್ರಕಾಳಿ ದೇವಿಯ ವಿಗ್ರಹಕ್ಕೆ ದೇವಸ್ಥಾನದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಬೆಳ್ಳಿಯ ಕವಚ…






