ಮಡಿಕೇರಿ ಏ.13 : ಸಮಾರಂಭಗಳಲ್ಲಿ ಮದ್ಯವನ್ನು ಬಳಸುವುದು ಕೊಡಗಿನ ಸಂಪ್ರದಾಯವಾಗಿದೆ. ಚುನಾವಣೆ ನೀತಿ ಸಂಹಿತೆಯ ನೆಪದಲ್ಲಿ ಇದಕ್ಕೆ ಕಡಿವಾಣ ಹಾಕುವುದು ಸರಿಯಲ್ಲವೆಂದು ಕೊಡಗು ರಕ್ಷಣಾ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಸಮಾರಂಭಗಳಲ್ಲಿ ಮದ್ಯವನ್ನು ಬಳಸದಂತೆ ಕಡಿವಾಣ ಹಾಕಿರುವುದರಿಂದ ಕೊಡಗಿನ ಜನರ ಭಾವನೆಗೆ ದಕ್ಕೆಯಾಗಿದೆ. ಮದ್ಯ ಬಳಕೆಗೆ ಅವಕಾಶ ನೀಡದಿದ್ದರೆ ಕೊಡವ ಸಮಾಜ, ಗೌಡ ಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಸಂದರ್ಭ ರೂ.11,500 ಸನ್ನದು ಶುಲ್ಕ ಪಾವತಿಸಿ ಸಭೆ, ಸಮಾರಂಭಗಳಲ್ಲಿ ಮದ್ಯವನ್ನು ಬಳಕೆ ಮಾಡಲು ಅನುಮತಿ ಪಡೆಯಬಹುದಾಗಿತ್ತು. ಆದರೆ ಅಬಕಾರಿ ಇಲಾಖೆಯ ಅಧಿಕಾರಿಗಳ ಸೂಚನೆಯ ಹಿನ್ನೆಲೆ ಏ.12 ರಿಂದ ಅನುಮತಿ ನೀಡಲಾಗುತ್ತಿಲ್ಲ. ಇದು ತಪ್ಪು ನಿರ್ಧಾರವಾಗಿದ್ದು, ಅಧಿಕಾರಿಗಳು ಜಿಲ್ಲೆಯ ಜನರ ಭಾವನೆಗಳಿಗೆ ದಕ್ಕೆ ತಾರದೆ ತಮ್ಮ ನಿಲುವನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೊಡಗಿನಲ್ಲಿ ಯಾವುದೇ ಸಮಾರಂಭಗಳಲ್ಲಿ ಮದ್ಯವನ್ನು ನ್ಯಾಯಯುತವಾಗಿ ಖರೀದಿಸಿ ವಿತರಿಸಲಾಗುತ್ತದೆ. ಅಲ್ಲದೆ ಇಲ್ಲಿಯವರೆಗೆ…
ಲೇಖಕ: admin
ಸೋಮವಾರಪೇಟೆ ಏ.13 : ಬೆಟ್ಟದಳ್ಳಿಯ ಸಿದ್ಧಾರ್ಥ ನಗರದ ಗ್ರಾಮಾಭಿವೃದ್ಧಿ ಸಮಿತಿ ಮತ್ತು ಮಾನವತಾ ಯುವಕ ಸಂಘದ ವತಿಯಿಂದ ಏ.14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಮತ್ತು ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಸಿ.ಜಗದೀಶ್ ತಿಳಿಸಿದ್ದಾರೆ. ಏ.14 ರಂದು ಬೆಳಿಗ್ಗೆ 7ಕ್ಕೆ ಗ್ರಾಮಾಭಿವೃದ್ಧಿ ಸಮಿತಿ ಖಜಾಂಚಿ ಬಿ.ಆರ್. ಅಜಿತ್ ಧ್ವಜಾರೋಹಣ ನಡೆಸಲಿದ್ದಾರೆ. 10 ಗಂಟೆಗೆ ಸೋಮವಾರಪೇಟೆಯ ಬಾಣಾವಾರ ರಸ್ತೆಯಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಗ್ರಾಮಾಭಿವೃದ್ಧಿ ಸಮಿತಿ ಸದಸ್ಯ ಬಿ.ಆರ್. ಯೋಗೇಶ್ ಮಾಲಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಕುಂದಳ್ಳಿ ರವಿ, ಪ್ರಗತಿಪರ ಚಿಂತಕರಾದ ರಾ. ಚಿಂತನ್, ಸಕಲೇಶಪುರದ ಡಿಎಸ್ಎಸ್ ರಾಜ್ಯ ಸಂಚಾಲಕ ಎಸ್.ಎನ್. ಮಲ್ಲಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಏ.15 ರಂದು ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್, ಮಕ್ಕಳಿಗೆ ಮತ್ತು ಹಿರಿಯರಿಗೆ ಇತರೆ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಕುರಿತು…
ಸೋಮವಾರಪೇಟೆ ಏ.13 : ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ.ವೆಚ್ಚದಲ್ಲಿ ಪಟ್ಟಣದಲ್ಲಿ ಶೇ.80 ರಷ್ಟು ಕಾಮಗಾರಿಗಳು ನಡೆದಿದ್ದು, ವಾರ್ಡ್ ಸದಸ್ಯರ ಸಮ್ಮುಖದಲ್ಲಿ ಗುಣಮಟ್ಟದ ಕಾಮಗಾರಿ ನಡೆದಿದೆ ಎಂದು ಪ.ಪಂ ಅಧ್ಯಕ್ಷ ಪಿ.ಕೆ.ಚಂದ್ರು ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯ ರಸ್ತೆಯ ಸೋಮೇಶ್ವರ ಬಳಿ ಕೆಲ ಕಡೆ ಕಾಂಕ್ರೀಟ್ ರಸ್ತೆ ಹಾಳಾಗಿದ್ದ ಹಿನ್ನೆಲೆಯಲ್ಲಿ ವಾರ್ಡ್ ಸದಸ್ಯರ ಮನವಿ ಮೇರೆಗೆ ಇಂಜಿನಿಯರ್ ಸಲಹೆ ಪಡೆದು ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ ಮಾಡಲಾಗಿದೆ ಹೇಳಿದರು. ಉಪಾಧ್ಯಕ್ಷ ಬಿ.ಸಂಜೀನ ಮಾತನಾಡಿ, ನಮ್ಮ ವಾರ್ಡ್ಗಳಲ್ಲಿ ನಡೆದ ಕಾಮಗಾರಿಗಳನ್ನು ನಿಂತು ಮಾಡಿಸಲಾಗಿದೆ. ಕಳಪೆ ಕಾಮಗಾರಿ ನಡೆದಿದ್ದರೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಆರೋಪಿಸಿದ ಅವರು, ಕಳೆದ 10 ತಿಂಗಳಿನಿಂದ ಪಂಚಾಯಿತಿಗೆ ಇಂಜಿನಿಯರ್ ನೇಮಕ ಮಾಡಿಲ್ಲ. ಕಾಮಗಾರಿಯ ಗುಣಮಟ್ಟವನ್ನು ನೋಡಿಕೊಳ್ಳುವುದಕ್ಕೆ ಇಂಜಿನಿಯರ್ ಇಲ್ಲದ ಮೇಲೆ ನಾವೇನೂ ಮಾಡಲು ಸಾಧ್ಯ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್ ಮಾತನಾಡಿ, ಹೊಸ ಬಡವಣೆ ಸೇರಿದಂತೆ ತಮ್ಮ ವಾರ್ಡ್ನಲ್ಲಿ…
ಮಡಿಕೇರಿ ಏ.13 : ಕೊಡಗು ಜಿಲ್ಲೆಯಲ್ಲಿ ನಿರಂತರ ಶೋಷಣೆಗೆ ತುತ್ತಾಗುತ್ತಿರುವ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವ ಶೋಷಿತ ಸಮುದಾಯಗಳು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಅಥವಾ ಎರಡೂ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಏ.14 ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ತಿಳಿಸಿದ್ದಾರೆ. ಇಂದು ಸುಂಟಿಕೊಪ್ಪದ ಮೊಗೇರ ಸಮಾಜದ ಪ್ರಧಾನ ಕಚೇರಿಯಲ್ಲಿ ವಿವಿಧ ಸಂಘಟನೆಗಳ ಹಾಗೂ ಸಮುದಾಯಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು ಶುಕ್ರವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಿದ ನಂತರ ನೊಂದವರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕೊಡಗಿನ ಮೊಗೇರ ಸಮುದಾಯ, ಕೊಡಗು ಶೋಷಿತ ಸಮುದಾಯಗಳ ವೇದಿಕೆ, ಬಹುಜನ ಕಾರ್ಮಿಕ ಸಂಘಟನೆಗಳು, ದಲಿತ ಮುಖಂಡರುಗಳು ಹಾಗೂ ಕೊಡಗಿನಲ್ಲಿ ನಿರಂತರ ಶೋಷಣೆಗೆ ಒಳಪಟ್ಟ ಇತರೆ ಸಮುದಾಯಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಶೋಷಿತ ಸಮುದಾಯಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ಹೋರಾಟಗಳನ್ನು ನಡೆಸಿವೆ. ಅಹೋರಾತ್ರಿ ಧರಣಿ ಮತ್ತು ಉಪವಾಸ ಸತ್ಯಾಗ್ರಹಗಳನ್ನು ನಡೆಸಿ ನಿವೇಶನ…
ಸುಂಟಿಕೊಪ್ಪ,ಏ.13: ಸುಂಟಿಕೊಪ್ಪ ಸಿ.ಎಸ್.ಐ ವತಿಯಿಂದ ನೂತನ ದೇವಾಲಯ ಕಟ್ಟಡದ ಪ್ರತಿಷ್ಠಾಪನೆ ಹಾಗೂ ದೃಢೀಕರಣ ಸಂಸ್ಕಾರವು ಏ.14 ರಂದು ನೆರವೇರಲಿದೆ. ಇಮ್ಮಾನೂವೆಲ್ ನೂತನ ದೇವಾಲಯದ ಲೋಕಾರ್ಪಣೆ, ದೇವರ ವಾಕ್ಯದ ಸಂದೇಶವನ್ನು ಸಿ.ಐ.ಎಸ್., ಕೆ.ಎಸ್.ಡಿ. ಬಿಷೋಪ್ ರೈಟ್, ರೆವೆ, ಹೇಮಚಂದ್ರಕುಮಾರ್ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿ.ಐ.ಎಸ್., ಕೆ.ಎಸ್.ಡಿ. ವಿಶ್ರಾಂತ ಬಿಷೋಪ್ರುಗಳು, ಪದಾಧಿಕಾರಿಗಳು, ಮಂಗಳೂರು, ಉಡುಪಿ, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ವಲಯದ ಅಧ್ಯಕ್ಷರುಗಳು, ನಮ್ಮ ಸಭೆಯಲ್ಲಿ ಸೇವೆ ಸಲ್ಲಿಸಿದ ಸಭಾಪಾಲಕರುಗಳು ಹಾಗೂ ಸಭಾಪಾಲಕ ರೆವ, ಅಮೃತರಾಜ್, ಸಭಾ ಸೇವಕರ ಸಂಧ್ಯಾ ಸುಪ್ರಿತ ಆಗಮಿಸಲಿದ್ದಾರೆ.
ಸುಂಟಿಕೊಪ್ಪ,ಏ.13: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ಸ್, ಬುಲ್ ಬುಲ್ಗಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಸಂತ ಅಂತೋಣಿ ಶಾಲಾ ಸಭಾಂಗಣದಲ್ಲಿ ನಾಲ್ಕು ದಿನಗಳ ಶಿಬಿರಕ್ಕೆ ರಾಜ್ಯ ಗೈಡ್ ಸಂಸ್ಥೆಯ ಸದಸ್ಯೆ ಡೈಸಿ ಹಾಗೂ ಶಾಲೆಯ ಮುಖ್ಯೋಪಾದ್ಯಾಯನಿ ಸೀಸ್ಟರ್ ವೀರ ಚಾಲನೆ ನೀಡಿದರು.. ಬೇಸಿಗೆ ಶಿಬಿರದಲ್ಲಿ 125 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದು, ಪ್ರಾರ್ಥನೆ, ಧ್ವಜಾರೋಹಣ, ಸಭಾ ಕಾರ್ಯಕ್ರಮ, ಆಟೋಟ ಸ್ಪರ್ಧೆಗಳು, ಪ್ರಥಮ ಚಿಕಿತ್ಸೆ, ಘನವಂದನೆ, ಸಂಸ್ಥೆಯ ಉದ್ದೇಶ, ನಿಯಮ ಪ್ರತಿಜ್ಞೆ, ಪುನರಾವರ್ತನೆ, ಕರಕುಶಲ ವಸ್ತುಗಳ ತಯಾರಿಕೆ, ಹಾಗೂ ಪ್ರದರ್ಶನ, ಗ್ರಾಮ ಸ್ವಚ್ಛತೆ, ಹೊರ ಸಂಚಾರ, ನೃತ್ಯ ಮನರಂಜನೆ ಸೇರಿದಂತೆ ತರಬೇತಿಗಳನ್ನು ್ಲ ನೀಡಲಾಯಿತು. ಕಬ್ಸ್ ಮಾಸ್ಟರ್ ಈವಾ ಜೀತಾ ಬೆನ್ನಿಸ್, ಮಹೇಶ್, ಗೈಡ್ ನಾಯಕಿ ಪ್ರೀತ್ ಜೋಯ್ಸ್ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.
ಮಡಿಕೇರಿ ಏ.13: ಬಿಜೆಪಿ ಹೈ ಕಮಾಂಡ್ ಮೊದಲ ಪಟ್ಟಿಯಲ್ಲೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕರನ್ನೇ ಅಧಿಕೃತ ಅಭ್ಯರ್ಥಿಯನ್ನಾಗಿಸಿದ ಹಿನ್ನೆಲೆಯಲ್ಲಿ ಶಾಸಕ ಕೆ.ಜಿ.ಬೋಪಯ್ಯ, ಪಕ್ಷ ಪ್ರಮುಖರು ಹಾಗೂ ಆಪ್ತ ವರ್ಗದವರೊಂದಿಗೆ ತಲಕಾವೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಸಂಪ್ರದಾಯದಂತೆ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತು ಶ್ರೀ ಭಗಂಡೇಶ್ವರ ಸನ್ನಿಧಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ನಂತರ ತಲಕಾವೇರಿಗೆ ತೆರಳಿ ಕಾವೇರಿ ಮಾತೆಯ ತೀರ್ಥ ಕುಂಡಿಕೆ ಬಳಿ ವಿಶೇಷ ಪೂಜೆ, ಪ್ರಾರ್ಥನೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೋಪಯ್ಯ, ಮೊದಲ ಪಟ್ಟಿಯಲ್ಲಿಯೇ ಕೊಡಗಿನ ಎರಡೂ ಕ್ಷೇತ್ರಗಳಿಗೆ ಹಾಲಿ ಶಾಸಕರನ್ನೇ ವರಿಷ್ಠರು ಅಭ್ಯರ್ಥಿಯನ್ನಾಗಿ ಘೋಷಿಸಿದ್ದಾರೆ. ಗೆಲ್ಲುವ ವಿಶ್ವಾಸವನ್ನಿಟ್ಟು ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ವಿಶ್ವಾಸವನ್ನು ಉಳಿಸಿಕೊಳ್ಳವ ಕಾರ್ಯವನ್ನು ನಾವು ಮಾಡುತ್ತೇವೆ. ತಲಕಾವೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ ಎಂದು ಹೇಳಿದರು. ಇದೀಗ ಮಳೆಯ ಕೊರತೆ ಕಂಡು ಬಂದಿದೆ. ಇದರಿಂದಾಗಿ ರೈತಾಪಿ ವರ್ಗ ಹಾಗೂ ಕೃಷಿಕರು ಕಂಗಾಲಾಗಿದ್ದಾರೆ. ಜನರ ನೆಮ್ಮದಿಯ ಬದುಕು ಮತ್ತು…
ಮಡಿಕೇರಿ ಏ.13 : ವಿಧಾನಸಭಾ ಚುನಾವಣಾ ಅಧಿಸೂಚನೆ ಇಂದು ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆಯ ಆರಂಭಿಕ ದಿನದಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಮಿನ್ ಮೊಹಿಸಿನ್ ಅವರು ಮಡಿಕೇರಿ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿಗಳಾದ ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರಿಗೆ ಅಮೀನ್ ಮೊಹಿಸಿನ್ ನಾಮಪತ್ರವನ್ನು ಸಲ್ಲಿಸಿದರು. ::: ಮೆರವಣಿಗೆ ::: ನಾಮಪತ್ರ ಸಲ್ಲಿಸುವುದಕ್ಕು ಮೊದಲು ಎಸ್ಡಿಪಿಐ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ::: ಬ್ಯಾಲೆಟ್ ಹೋರಾಟ ::: ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅಮಿನ್ ಮೊಹಿಸಿನ್, ಕಳೆದ ಒಂದೂವರೆ ದಶಕಗಳಿಂದ ಜನಪರವಾಗಿ ಎಸ್ಡಿಪಿಐ ಸಾಕಷ್ಟು ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಇದೀಗ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವಾಗಿ ‘ಬ್ಯಾಲೆಟ್ ಹೋರಾಟ’ಕ್ಕೆ ಮುಂದಾಗಿರುವುದಾಗಿ ತಿಳಿಸಿದರು. ಇತರೆ ಯಾವುದೇ ರಾಜಕೀಯ ಪಕ್ಷಗಳ ಲಾಭ, ನಷ್ಟಗಳು ಎಸ್ಡಿಪಿಐ ಪಕ್ಷಕ್ಕೆ ಸಂಬಂಧಪಡುವುದಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿರುವ ಎಸ್ಡಿಪಿಐ ಮೂಲಕ ಜನಪರ ಕಾಳಜಿಯೊಂದಿಗೆ ಚುನಾವಣಾ ಸ್ಪರ್ಧೆಗೆ…
ಮಡಿಕೇರಿ ಏ.13 : ಚುನಾವಣೆಯನ್ನು ಸಮರ್ಪಕವಾಗಿ ನಿಭಾಯಿಸುವ ಸಲುವಾಗಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಯಲ ಅಧ್ಯಕ್ಷರುಗಳಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಪ್ರಚಾರ ಸಮಿತಿ ಸಹಯೋಗದಲ್ಲಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದ ಆರು ಬ್ಲಾಕ್ನ 273 ಮತಗಟ್ಟೆಯ ಪದಾಧಿಕಾರಿಗಳಿಗೆ, ವಯಲ ಅಧ್ಯಕ್ಷರುಗಳಿಗೆ ಕೆಪಿಸಿಸಿಯ ನುರಿತ ತರಬೇತುದಾರರಿಂದ ಕಾರ್ಯಾಗಾರ ನಡೆಯಲಿದೆ ಎಂದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಹಂತದಲ್ಲಿ ಕಾರ್ಯಾಗಾರ ನಡೆಯಲಿದ್ದು, ಏ.15 ರಂದು ಬೆಳಿಗ್ಗೆ 10 ಗಂಟೆಗೆ ಪೊನ್ನಂಪೇಟೆ ಬ್ಲಾಕ್ನ ಗೋಣಿಕೊಪ್ಪ ಪರಿಮಳ ಕಲ್ಯಾಣ ಮಂಟಪ, ಮಧ್ಯಾಹ್ನ 12.30ಕ್ಕೆ ವಿರಾಜಪೇಟೆ ಬ್ಲಾಕ್ನ ಅಭ್ಯರ್ಥಿ ಕಚೇರಿ ಹಾಗೂ 3.30ಕ್ಕೆ ನಾಪೋಕ್ಲು ಬ್ಲಾಕ್ನ ಕಾರುಗುಂದ ವಿಎಸ್ಎಸ್ ಸಭಾಂಗಣದಲ್ಲಿ ಪೊನ್ನಂಪೇಟೆಯಲ್ಲಿ 96 ಮತಗಟ್ಟೆ, ವಿರಾಜಪೇಟೆಯ 94 ಮತಗಟ್ಟೆ, ನಾಪೋಕ್ಲುವಿನ 83 ಮತಗಟ್ಟೆಯ ಪದಾಧಿಕಾರಿಗಳಿಗೆ ಕಾರ್ಯಾಗಾರ ನಡೆಯಲಿದೆ ಎಂದು…
ಮಡಿಕೇರಿ ಏ.13 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಲಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾಧಿಕಾರಿಗಳ ಕಚೇರಿ ಆವರಣದ ವ್ಯಾಪ್ತಿಯ 100 ಮೀಟರ್ ಪ್ರದೇಶದಲ್ಲಿ ಸಾರ್ವಜನಿಕ ವಾಹನ ನಿಲುಗಡೆ, ಪ್ರವೇಶ ಮತ್ತು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಪಡಿಸಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಸಿಆರ್ಪಿಸಿ 1973 ರ ಕಲಂ 144 ರೀತ್ಯಾ ಪ್ರತಿಬಂಧಕಾಜ್ಞೆ ಹೊರಡಿಸಲು ಆರಕ್ಷಕ ವೃತ್ತ ನಿರೀಕ್ಷಕರು, ವಿರಾಜಪೇಟೆ ವೃತ್ತ ಅವರು ಕೋರಿದ್ದು, ಆ ನಿಟ್ಟಿನಲ್ಲಿ ಏಪ್ರಿಲ್ 20 ರವರೆಗೆ ನಾಮಪತ್ರಗಳ ಸ್ವೀಕೃತಿ, ಏಪ್ರಿಲ್, 21 ರಂದು ನಾಮಪತ್ರಗಳ ಪರಿಶೀಲನೆ ಮತ್ತು ಏಪ್ರಿಲ್, 24 ರವರೆಗೆ ನಾಮಪತ್ರಗಳ ವಾಪಾಸ್ಸಾತಿಗೆ ಚುನಾವಣಾ ವೇಳಾಪಟ್ಟಿ ಇದೆ. ಈ ಅವಧಿಯಲ್ಲಿ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಯಾದ ವಿರಾಜಪೇಟೆ ತಾಲ್ಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಯಾಗುವ ಸಂಭವ ಇರುತ್ತದೆ. ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಅವರ ಬೆಂಬಲಿಗರು ಒಂದೇ ಕಡೆ…






