ಮಡಿಕೇರಿ ಮೇ 23 : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಕರ್ನಾಟಕ ರಾಜ್ಯದ ನೂತನ ಸರ್ಕಾರದ ಗಮನ ಸೆಳೆಯಲು ಮೇ 25 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ಕೊಡವ ನೆಲ, ಭಾಷೆ, ಸಂಸ್ಕೃತಿ, ಪರಂಪರೆಯ ಉಳಿವಿಗಾಗಿ ಮತ್ತು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರ ಸಬಲೀಕರಣಕ್ಕಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಕಲ್ಪಿಸಬೇಕು, ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸಬೇಕು, ಕೊಡವರಿಗೆ ಸಾಂವಿಧಾನಿಕ ಭದ್ರತೆಯನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮೇ 23 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಮೇ 25 ರಂದು ಅಖಿಲ ಕೊಡವ ಸಮಾಜದ ಸಭೆ ನಡೆಯಲಿದೆ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡವ ಜನಾಂಗದ ವಿವಿಧ ಸಮಾಜ ಹಾಗೂ ಸಂಘ ಸಂಸ್ಥೆಗಳ ಸಭೆ ಕರೆಯಲಾಗಿದ್ದು, ಕೊಡವ ಜನಾಂಗ ಚುನಾಯಿತ ಪ್ರತಿನಿಧಿಯೊಬ್ಬರಿಗೆ ಸುಧೀರ್ಘ ಅವಧಿಯ ಬಳಿಕ ಸಚಿವ ಸ್ಥಾನ ದೊರಕುವ ಅವಕಾಶವಿದ್ದು, ನಾವೆಲ್ಲರೂ ಪಕ್ಷಬೇಧ ಮರೆತು ಒತ್ತಾಯಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕೊಡವ ಸಮಾಜ, ಹಾಗೂ ಕೊಡವ ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಲಾ ಇಬ್ಬರಂತೆ ಸಭೆಗೆ…
ಮಡಿಕೇರಿ ಮೇ 23 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಮೇ 27 ರಂದು ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಕೊಡಗು ಪ್ರೆಸ್ ಕ್ಲಬ್ ಆರೋಗ್ಯ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಹಿಯರಿಂಗ್ ಸ್ಪೀಚ್ ಇಂಪ್ಲಾಂಟ್ ಕ್ಲಿನಿಕ್, ಶ್ರೀದೇವಿ ಮೆಡಿಕಲ್ ಸೆಂಟರ್ ಹಾಗೂ ಮೂರ್ನಾಡು ಆಸ್ಪತ್ರೆಯ ಸಹಯೋಗದೊಂದಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮೂರ್ನಾಡಿನ ಶ್ರೀ ದೇವಿ ಮೆಡಿಕಲ್ ಸೆಂಟರ್ ಹಾಗೂ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು. ಶಿಬಿರದಲ್ಲಿ ಶೀತ, ಕೆಮ್ಮು, ನೆಗಡಿ, ಜ್ವರ ಹೊಟ್ಟೆಗೆ ಸಂಬಂಧಿಸಿದ ಖಾಯಿಲೆ ಹಾಗೂ ಹೃದಯ ಸಂಬಂದಿ ಖಾಯಿಲೆ, ರಕ್ತದೊತ್ತಡ, ಮದುಮೇಹ, ಮೂಳೆ ಸಂಬಂಧಿಸಿದ ಎಲ್ಲಾ ತರಹದ ಚಿಕಿತ್ಸೆ, ಕಿವಿ,…
ಮಡಿಕೇರಿ ಮೇ 23 : ಮುಂದಿನ ಜನಾಂಗಕ್ಕೆ ಒಳ್ಳೆಯ ವಾತಾವರಣ, ಸಂಸ್ಕಾರ ಜೀವನವನ್ನು ನೀಡುವ ದೂರದೃಷ್ಟಿ ಮತ್ತು ಆಶಯದೊಂದಿಗೆ ಜೂ.11 ರಂದು ಸಿದ್ದಾಪುರದಲ್ಲಿ ದಶಲಕ್ಷ್ಮಿ ಹೋಮ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕಿ ನಡಿಕೇರಿಯಂಡ ಸ್ವಾತಿ ಮಂದಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪರಿಸರ ಮತ್ತು ಜನಜೀವನದ ಸರ್ವೋತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಣ್ಣೂರಿನ ಋಷಿದೇವ್ ಪ್ರತಿಷ್ಠಾನದ ಮುಖ್ಯಸ್ಥ ಸದ್ಗುರು ನರೇಂದ್ರನ್ ಜೀ ಅವರ ಉಪಸ್ಥಿತಿಯಲ್ಲಿ ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ಪೂರ್ವಾಹ್ನ 10 ರಿಂದ ಸಂಜೆ 4 ರವರೆಗೆ ಹೋಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪರಿಸರ ಕಲುಷಿತವಾಗಿದೆ. ಮನುಷ್ಯ ಸಂಬಂಧಗಳು ಹಾಳಾಗಿದೆ. ಪ್ರತಿಯೊಬ್ಬರಲ್ಲೂ ಒಂದು ರೀತಿಯ ಚಿಂತನೆಗಳು ತುಂಬುತ್ತಿದೆ. ಇದರ ಫಲವಾಗಿ ದೈಹಿಕ ಮತ್ತು ಮಾನಸಿಕ ರೋಗಗಳು ಹೆಚ್ಚಾಗುತ್ತಿದೆ. ಇವಲ್ಲವನ್ನು ನಿವಾರಣೆ ಮಾಡುವ ಸಲುವಾಗಿ ಶ್ರೀ ಲಕ್ಷ್ಮಿ, ಐಶ್ವರ್ಯ ಲಕ್ಷ್ಮಿ, ಧನಲಕ್ಷ್ಮಿ, ಸೌಭಾಗ್ಯ ಲಕ್ಷ್ಮಿ, ಆರೋಗ್ಯ ಲಕ್ಷ್ಮಿ, ವಿದ್ಯಾಲಕ್ಷ್ಮಿ, ಸಿದ್ಧಿ ಲಕ್ಷ್ಮಿ, ಮೋಕ್ಷಲಕ್ಷ್ಮಿ, ದೈರ್ಯ ಲಕ್ಷ್ಮಿ, ನಾಗಲಕ್ಷ್ಮಿ…
ಮಡಿಕೇರಿ ಮೇ 23 : ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ಲಿ ನಲ್ಲಿ ಪುಳಿಙೋಂ ವಲಿಯುಲ್ಲಾ ಸ್ಮರಣಾರ್ಥ ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ ಕಾರ್ಯಕ್ರವು ಮೇ 27 ಮತ್ತು 28 ರಂದು ನಡೆಯಲಿದೆ ಎಂದು ಮಸ್ಜಿದ್ ರಹಮಾನ್ ವಯಕೋಲ್ ಕಾರ್ಯದರ್ಶಿ ವಿ.ಇ.ನಿಸಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಮೇ 27 ರಂದು ಮಗ್ರಿಬ್ ನಮಾಜಿನ ಬಳಿಕ ಮಸ್ಜಿದ್ ರಹಮಾನ್ ವಯಕೋಲ್ ಅಧ್ಯಕ್ಷ ವಿ.ಎ.ಹಂಸ ಧ್ವಜಾರೋಹಣದ ಮೂಲಕ ಉರೂಸ್ ಸಮಾರಂಭಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮವನ್ನು ಕುಂಜಿಲ ಸದರ್ ಮುಅಲ್ಲಿಂ ಅಬ್ದುಲ್ಲ ಸಖಾಫಿ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಪಯ್ನರಿ ಜುಮಾ ಮಸೀದಿ ಖದೀಬ ಉಸ್ತಾದ್ ನಿಝಾರ್ ಅಹ್ಸನಿ ಕಕ್ಕಡಿಪುರಣ ಮುಖ್ಯ ಪ್ರಭಾಷಣ ಮತ್ತು ದುಆ ನೇತೃತ್ವ ವಹಿಸಲಿದ್ದಾರೆ ಎಂದರು. ಮೇ 28 ರಂದು ಮಧ್ಯಾಹ್ನ 1 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಯಕೋಲ್ ಮಸ್ಜಿದ್ ರಹಮಾನ್ ಇಮಾಂ ರಫೀಕ್…
ಮಡಿಕೇರಿ ಮೇ 23 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳು:- ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ Indian Meteorlogical Department (ಐಎಂಡಿ) ನಿಂದ ನೀಡುವ ಗುಡುಗು-ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocol (ಸಿಎಪಿ) ನ ಮೂಲಕ ಪ್ರಸಾರ ಮಾಡುವುದು…
ಮಡಿಕೇರಿ ಮೇ 23 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ಮೇ 30 ರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. 1 ನೇ ತರಗತಿಯಿಂದ ವೃತ್ತಿಪರ ಕೋರ್ಸ್ ವರೆಗೆ ವ್ಯಾಸಾಂಗ ಮಾಡುತ್ತಿರುವ ಸದಸ್ಯರ ಮಕ್ಕಳು 2022-23 ನೇ ಸಾಲಿನಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಅಂಕಪಟ್ಟಿ ಹಾಗೂ ಭಾವಚಿತ್ರ ನೀಡುವುದು ಖಡ್ಡಾಯ. ಮೇ 30 ರ ಒಳಗಾಗಿ ಅರ್ಜಿಯನ್ನು ಪ್ರೆಸ್ ಕ್ಲಬ್ ಗೆ ತಲುಪಿಸಲು ಕೋರಲಾಗಿದೆ.
ಮಡಿಕೇರಿ ಮೇ 23 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕುಶಾಲನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಮೇ 23 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಕೊಡಮಾಡುವ ಕೆ.ಬಿ ಮಹಂತೇಶ್ ಸ್ಮರಣಾರ್ಥ ಅತ್ಯುತ್ತಮ ಪರಿಣಾಮಕಾರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಪ್ರೆಸ್ ಕ್ಲಬ್ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, 2022 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗಾಗಿ ಪ್ರಕಟವಾದ ವರದಿಯನ್ನು ಸಲ್ಲಿಸಬೇಕು. ಒಬ್ಬ ಸದಸ್ಯ ಒಂದು ವರದಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಮೇ 30 ರ ಒಳಗಾಗಿ ಅರ್ಜಿಯನ್ನು ತಲುಪಿಸಬೇಕು. ಪ್ರಶಸ್ತಿಯು 5 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದ್ದು, ಪ್ರೆಸ್ ಕ್ಲಬ್ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮೇ 23 : ಬದಲಾಗುತ್ತಿರುವ ಹವಾಮಾನ, ಜಾಗತಿಕ ತಾಪಮಾನ ಏರಿಕೆ ಪ್ರಪಂಚದಾದ್ಯಂತ ಎಲ್ಲಾ ರಾಷ್ಟ್ರಗಳು ಎದುರಿಸುತ್ತಿರುವ ಸವಾಲಾಗಿದೆ. ಈ ಜಾಗತಿಕ ಗಂಡಾಂತರ ತಡೆಗಟ್ಟಲು ಹಸಿರು ಪ್ರೀತಿಯನ್ನು ಜಾಗೃತಗೊಳಿಸಿ, ಜನರ ಬೇಡಿಕೆಗೆ ಅನುಸಾರವಾಗಿ ಸಸಿಗಳನ್ನು ಪೂರೈಸುವ ಜವಾಬ್ದಾರಿಯಿಂದ ವಿವಿಧ ಯೋಜನೆಗಳಡಿಯಲ್ಲಿ ‘ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದಿಂದ’ ಸೋಮವಾರಪೇಟೆ-ಕುಶಾಲನಗರ ರಸ್ತೆಯಲ್ಲಿ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ 50 ವಿವಿಧ ಸಸಿಗಳನ್ನು ಬೆಳೆಸಲಾಗಿದೆ. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಚೀಟಿ ಹೊಂದಿರುವ ಬಿಪಿಎಲ್ ಕಾರ್ಡುದಾರರು ಈ ಯೋಜನೆಯಲ್ಲಿ ಉಚಿತವಾಗಿ ಸಸಿಗಳನ್ನು ಪಡೆಯಬಹುದು ಹಾಗೂ ಇತರೆ ಯೋಜನೆಗಳಲ್ಲಿ ಸರ್ಕಾರ ನಿಗಧಿಪಡಿಸಿರುವ 6*9 ಅಳತೆಯ ಚೀಲದ ಸಸಿ ಒಂದಕ್ಕೆ ರೂ.6 ಹಾಗೂ 8*12 ಅಳತೆಯ ಚೀಲದ ಸಸಿ ಒಂದಕ್ಕೆ ರೂ.23 ಗಳನ್ನು ಪಾವತಿಸಿ ಪಡೆದುಕೊಳ್ಳಬಹುದು. ಹುದುಗೂರು ಸಸ್ಯಕ್ಷೇತ್ರದಲ್ಲಿ ನೇರಳೆ, ಮಹಾಗನಿ, ನೆಲ್ಲಿ, ಸೀತಾಫಲ, ಜಂಬು ನೇರಳೆ, ಮರಸೇಬು, ಆಮೆಹಣ್ಣು, ಬಿಳಿ ಧೂಪ, ಸಂಪಿಗೆ, ಹಿಪ್ಪೆ, ರುದ್ರಾಕ್ಷಿ, ಬಿದಿರು, ಮೊಟ್ಟೆ ಹಣ್ಣು, ಕಾಚಂಪುಳಿ,…






