ಸುಂಟಿಕೊಪ್ಪ ಮೇ 24 : ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಜಿ.ಯಂ.ಪಿ. ಶಾಲಾ ಮೈದಾನದಲ್ಲಿ ನಡೆಯುತ್ತಿರುವ 25ನೇ ವರ್ಷದ ಡಿ.ಶಿವಪ್ಪ ಸ್ಮಾರಕ ಬೆಳ್ಳಿ ಮಹೋತ್ಸವದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯದಲ್ಲಿ ವಿಜಯ ನಗರ ಎಫ್.ಸಿ. ಮೈಸೂರು ಮತ್ತು ಪೈಟರ್ ಎಫ್.ಸಿ. ಕೂತುಪರಂಬು ಕ್ವಾರ್ಟರ್ ಪೈನಲ್ ಹಂತಕ್ಕೆ ಪ್ರವೇಶ ಪಡೆದರು. ಎಸ್.ಯು. ಎಫ್.ಸಿ. ನಂಜನಗೂಡು/ ಯಾಮಿಟಿ ಎಫ್.ಸಿ. ಗದ್ದೆ ಹಳ್ಳ ತಂಡಗಳ ನಡುವೆ ನಡೆದ ಮೊದಲ ಪಂದ್ಯದ ಮೊದಲಾರ್ಧದಲ್ಲಿ ಎರಡು ತಂಡಗಳು ಚುರುಕು ತನದ ಪ್ರದರ್ಶನ ನೀಡಿದ ಆಟಗಾರರು ಕ್ರೀಡಾಭಿಮಾನಿಗಳಿಗೆ ರಸದೌತನ ನೀಡಿದರು. ಉತ್ತಮ ಹೊಂದಾಣಿಕೆ ಆಟವಾಡಿ ವಿಜಯ ನಗರ ತಂಡದ ಮುನ್ನಡೆ ಆಟಗಾರ ಪ್ರೀತಮ್ 29ನೇ ನಿಮಿಷದಲ್ಲಿ ಗೋಲು ಹೊಡೆಯುವ ಮೂಲಕ ಯಶಸ್ವಿಯಾದರು. ನಂತರ ನಡೆದ ದ್ವಿತೀಯಾರ್ಧ ಪಂದ್ಯದಲ್ಲಿ ಗದ್ದೆ ಹಳ್ಳದ ಯಾಮಿಟಿ ತಂಡ ರಬಸದ ಆಟಕ್ಕೆ ಒತ್ತು ನೀಡಿದರೂ ಎದುರಾಳಿ ತಂಡ ಗೋಲು ಗಳಿಸುವುದಕ್ಕೆ ಆಟದ ಕೊನೆಯವರೆಗೂ ಅವಕಾಶ ನೀಡದೆ ತಮ್ಮ ಆಟವನ್ನು ಪ್ರದರ್ಶಿಸಿ 1-0 ಗೋಲುಗಳಿಂದ ವಿಜಯ ನಗರ…
ಲೇಖಕ: admin
ಮಡಿಕೇರಿ ಮೇ 23 : ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಜೊತೆ ವಿಡಿಯೋ ಸಂವಾದ ಮೂಲಕ ಸಭೆ ನಡೆಯಿತು. ಈ ಸಂದರ್ಭ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಮೇ 23 : ಸಹಾರ ಯೂಥ್ ಕ್ಲಬ್ ಆಶ್ರಯದಲ್ಲಿ ಚೆನ್ನಯ್ಯನಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ 4ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕಾಲ್ಚೆಂಡು ಪಂದ್ಯಾವಳಿಗೆ ಸಾಗರ್ ಯೂಥ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಎಚ್.ಎ ಮುಸ್ತಫ ಚಾಲನೆ ನೀಡಿದರು. ಈ ಸಂದರ್ಭ ಮಾಲ್ದಾರೆ ಗ್ರಾ.ಪಂ ಅಧ್ಯಕ್ಷ ಸಮೀರ್ ಮಾತನಾಡಿ, ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಗ್ರಾಮದಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. ಕ್ರೀಡಾಪಟುಗಳು ರಾಜಕೀಯ ಹಾಗೂ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಕ್ರೀಡಾ ಮನೋಭಾವ ಮೈಗೂಡಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದರು. ಚೆನ್ನಯ್ಯನ ಕೋಟೆ ಗ್ರಾ.ಪಂ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರ ಮೂಲಕ ಕ್ರೀಡಾಭಿಮಾನದಿಂದ ಕ್ರೀಡಾಪಟುಗಳು ಪಾಲ್ಗೊಳ್ಳುತ್ತಿರುವುದು ಶ್ಲಾಘನೆ ಎಂದರು. ಕೊಡಗು ಚಾಂಪಿಯನ್ ಲೀಗ್ (ಕೆಸಿಎಲ್) ಸ್ಥಾಪಕ ಎ.ಎಸ್.ಮುಸ್ತಫ ಮಾತನಾಡಿ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವುದರ ಮೂಲಕ ಕ್ರೀಡಾ…
ಮಡಿಕೇರಿ ಮೇ 23 : ಶಾಸಕ ಎ.ಎಸ್ ಪೊನ್ನಣ್ಣ ಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿರಾಜಪೇಟೆ ನಗರ ಕಾಂಗ್ರೆಸ್ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ವಿರಾಜಪೇಟೆ ನಗರ ಅಧ್ಯಕ್ಷರಾದ ಮಾದಂಡ ತಿಮ್ಮಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ ಸಮಿತಿ ಸದಸ್ಯರು, ಈ ಬಾರಿ ಕೊಡಗಿನ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಇಬ್ಬರು ಶಾಸಕರು ವಿದ್ಯಾವಂತರಾಗಿದ್ದಾರೆ. ಆದ್ದರಿಂದ ಈ ಬಾರಿ ಶಾಸಕ ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರ ಘಟಕದ ಎಲ್ಲಾ ಸದಸ್ಯರು, ವಿರಾಜಪೇಟೆ ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಮಡಿಕೇರಿ ಮೇ 23 : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಕರ್ನಾಟಕ ರಾಜ್ಯದ ನೂತನ ಸರ್ಕಾರದ ಗಮನ ಸೆಳೆಯಲು ಮೇ 25 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ಕೊಡವ ನೆಲ, ಭಾಷೆ, ಸಂಸ್ಕೃತಿ, ಪರಂಪರೆಯ ಉಳಿವಿಗಾಗಿ ಮತ್ತು ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರ ಸಬಲೀಕರಣಕ್ಕಾಗಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಕಲ್ಪಿಸಬೇಕು, ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕು, ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸಬೇಕು, ಕೊಡವರಿಗೆ ಸಾಂವಿಧಾನಿಕ ಭದ್ರತೆಯನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.
ಮಡಿಕೇರಿ ಮೇ 23 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಮೇ 25 ರಂದು ಅಖಿಲ ಕೊಡವ ಸಮಾಜದ ಸಭೆ ನಡೆಯಲಿದೆ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡವ ಜನಾಂಗದ ವಿವಿಧ ಸಮಾಜ ಹಾಗೂ ಸಂಘ ಸಂಸ್ಥೆಗಳ ಸಭೆ ಕರೆಯಲಾಗಿದ್ದು, ಕೊಡವ ಜನಾಂಗ ಚುನಾಯಿತ ಪ್ರತಿನಿಧಿಯೊಬ್ಬರಿಗೆ ಸುಧೀರ್ಘ ಅವಧಿಯ ಬಳಿಕ ಸಚಿವ ಸ್ಥಾನ ದೊರಕುವ ಅವಕಾಶವಿದ್ದು, ನಾವೆಲ್ಲರೂ ಪಕ್ಷಬೇಧ ಮರೆತು ಒತ್ತಾಯಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕೊಡವ ಸಮಾಜ, ಹಾಗೂ ಕೊಡವ ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಲಾ ಇಬ್ಬರಂತೆ ಸಭೆಗೆ…
ಮಡಿಕೇರಿ ಮೇ 23 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಮೇ 27 ರಂದು ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಕೊಡಗು ಪ್ರೆಸ್ ಕ್ಲಬ್ ಆರೋಗ್ಯ ಸಮಿತಿ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಹಿಯರಿಂಗ್ ಸ್ಪೀಚ್ ಇಂಪ್ಲಾಂಟ್ ಕ್ಲಿನಿಕ್, ಶ್ರೀದೇವಿ ಮೆಡಿಕಲ್ ಸೆಂಟರ್ ಹಾಗೂ ಮೂರ್ನಾಡು ಆಸ್ಪತ್ರೆಯ ಸಹಯೋಗದೊಂದಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮೂರ್ನಾಡಿನ ಶ್ರೀ ದೇವಿ ಮೆಡಿಕಲ್ ಸೆಂಟರ್ ಹಾಗೂ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು. ಶಿಬಿರದಲ್ಲಿ ಶೀತ, ಕೆಮ್ಮು, ನೆಗಡಿ, ಜ್ವರ ಹೊಟ್ಟೆಗೆ ಸಂಬಂಧಿಸಿದ ಖಾಯಿಲೆ ಹಾಗೂ ಹೃದಯ ಸಂಬಂದಿ ಖಾಯಿಲೆ, ರಕ್ತದೊತ್ತಡ, ಮದುಮೇಹ, ಮೂಳೆ ಸಂಬಂಧಿಸಿದ ಎಲ್ಲಾ ತರಹದ ಚಿಕಿತ್ಸೆ, ಕಿವಿ,…
ಮಡಿಕೇರಿ ಮೇ 23 : ಮುಂದಿನ ಜನಾಂಗಕ್ಕೆ ಒಳ್ಳೆಯ ವಾತಾವರಣ, ಸಂಸ್ಕಾರ ಜೀವನವನ್ನು ನೀಡುವ ದೂರದೃಷ್ಟಿ ಮತ್ತು ಆಶಯದೊಂದಿಗೆ ಜೂ.11 ರಂದು ಸಿದ್ದಾಪುರದಲ್ಲಿ ದಶಲಕ್ಷ್ಮಿ ಹೋಮ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕಿ ನಡಿಕೇರಿಯಂಡ ಸ್ವಾತಿ ಮಂದಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಪರಿಸರ ಮತ್ತು ಜನಜೀವನದ ಸರ್ವೋತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಣ್ಣೂರಿನ ಋಷಿದೇವ್ ಪ್ರತಿಷ್ಠಾನದ ಮುಖ್ಯಸ್ಥ ಸದ್ಗುರು ನರೇಂದ್ರನ್ ಜೀ ಅವರ ಉಪಸ್ಥಿತಿಯಲ್ಲಿ ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ಪೂರ್ವಾಹ್ನ 10 ರಿಂದ ಸಂಜೆ 4 ರವರೆಗೆ ಹೋಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಪರಿಸರ ಕಲುಷಿತವಾಗಿದೆ. ಮನುಷ್ಯ ಸಂಬಂಧಗಳು ಹಾಳಾಗಿದೆ. ಪ್ರತಿಯೊಬ್ಬರಲ್ಲೂ ಒಂದು ರೀತಿಯ ಚಿಂತನೆಗಳು ತುಂಬುತ್ತಿದೆ. ಇದರ ಫಲವಾಗಿ ದೈಹಿಕ ಮತ್ತು ಮಾನಸಿಕ ರೋಗಗಳು ಹೆಚ್ಚಾಗುತ್ತಿದೆ. ಇವಲ್ಲವನ್ನು ನಿವಾರಣೆ ಮಾಡುವ ಸಲುವಾಗಿ ಶ್ರೀ ಲಕ್ಷ್ಮಿ, ಐಶ್ವರ್ಯ ಲಕ್ಷ್ಮಿ, ಧನಲಕ್ಷ್ಮಿ, ಸೌಭಾಗ್ಯ ಲಕ್ಷ್ಮಿ, ಆರೋಗ್ಯ ಲಕ್ಷ್ಮಿ, ವಿದ್ಯಾಲಕ್ಷ್ಮಿ, ಸಿದ್ಧಿ ಲಕ್ಷ್ಮಿ, ಮೋಕ್ಷಲಕ್ಷ್ಮಿ, ದೈರ್ಯ ಲಕ್ಷ್ಮಿ, ನಾಗಲಕ್ಷ್ಮಿ…
ಮಡಿಕೇರಿ ಮೇ 23 : ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ಲಿ ನಲ್ಲಿ ಪುಳಿಙೋಂ ವಲಿಯುಲ್ಲಾ ಸ್ಮರಣಾರ್ಥ ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ ಕಾರ್ಯಕ್ರವು ಮೇ 27 ಮತ್ತು 28 ರಂದು ನಡೆಯಲಿದೆ ಎಂದು ಮಸ್ಜಿದ್ ರಹಮಾನ್ ವಯಕೋಲ್ ಕಾರ್ಯದರ್ಶಿ ವಿ.ಇ.ನಿಸಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಮೇ 27 ರಂದು ಮಗ್ರಿಬ್ ನಮಾಜಿನ ಬಳಿಕ ಮಸ್ಜಿದ್ ರಹಮಾನ್ ವಯಕೋಲ್ ಅಧ್ಯಕ್ಷ ವಿ.ಎ.ಹಂಸ ಧ್ವಜಾರೋಹಣದ ಮೂಲಕ ಉರೂಸ್ ಸಮಾರಂಭಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮವನ್ನು ಕುಂಜಿಲ ಸದರ್ ಮುಅಲ್ಲಿಂ ಅಬ್ದುಲ್ಲ ಸಖಾಫಿ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಪಯ್ನರಿ ಜುಮಾ ಮಸೀದಿ ಖದೀಬ ಉಸ್ತಾದ್ ನಿಝಾರ್ ಅಹ್ಸನಿ ಕಕ್ಕಡಿಪುರಣ ಮುಖ್ಯ ಪ್ರಭಾಷಣ ಮತ್ತು ದುಆ ನೇತೃತ್ವ ವಹಿಸಲಿದ್ದಾರೆ ಎಂದರು. ಮೇ 28 ರಂದು ಮಧ್ಯಾಹ್ನ 1 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಯಕೋಲ್ ಮಸ್ಜಿದ್ ರಹಮಾನ್ ಇಮಾಂ ರಫೀಕ್…
ಮಡಿಕೇರಿ ಮೇ 23 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳು:- ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ Indian Meteorlogical Department (ಐಎಂಡಿ) ನಿಂದ ನೀಡುವ ಗುಡುಗು-ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocol (ಸಿಎಪಿ) ನ ಮೂಲಕ ಪ್ರಸಾರ ಮಾಡುವುದು…






