ಲೇಖಕ: admin

ನಾಪೋಕ್ಲು ಏ.13 : ಯವಕಪಾಡಿ ಗ್ರಾಮದ ಶ್ರೀ ಪನ್ನಂಗಾಲತ್ತಮ್ಮೆ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಸಮೀಪವಿರುವ ಅಮ್ಮಂಗೇರಿಯಲ್ಲಿ ಶ್ರೀ ದೇವಿಯ ದೇವತಾ ಕೆಲಸಕ್ಕೆ ನಿಯೋಜಿಸಲ್ಪಟ್ಟ ಕಣಿಯ ಜನಾಂಗದವರು ಶುದ್ಧ, ಶ್ರದ್ಧಾಭಕ್ತಿಯಿಂದ ಓಲೆ (ತಾಳೆ ಜಾತಿ ಸೇರಿದ ಮರದ ಗರಿ) ಯಲ್ಲಿ ತಯಾರಿಸಿದ ಎರಡು ಕೊಡೆಗಳನ್ನು ದೈವ ದರ್ಶನ ಹಾಗೂ ಎತ್ತೇರಾಟ, ತಕ್ಕ ಮುಖ್ಯಸ್ಥರು, ಭಕ್ತಾದಿಗಳೊಂದಿಗೆ ಪನ್ನಂಗಾಲತ್ತಮ್ಮೆ ದೇವಸ್ಥಾನಕ್ಕೆ ತರಲಾಯಿತು. ಈ ಕೊಡೆಯಲ್ಲಿ ಪನ್ನಂಗಾಲ ತಮ್ಮೆ ನೆಲೆಸಿರುವಳೆಂದೂ, ಅಣ್ಣನ ಮನೆಯಿಂದ ಅವಳನ್ನು ತನ್ನ ಮನೆಗೆ ಕರೆತರಲಾಗುವ ಪದ್ಧತಿ ಇದೆಂಬ ನಂಬಿಕೆ ಗ್ರಾಮಸ್ಥರಲ್ಲಿ ಮತ್ತು ಭಕ್ತರಲ್ಲಿದೆ. ಅಣ್ಣನನ್ನು(ಇಗ್ಗುತ್ತಪ್ಪ) ಬಿಟ್ಟು ಹೋಗಲು ಮನಸ್ಸಿಲ್ಲದ ತಂಗಿಯು ಮಾರ್ಗ ಮಧ್ಯೆ ಸಿಗುವ (ಮೊದಲ ಬಾರಿಗೆ ಜನರಿಗೆ ಬೆಳ್ಳಕ್ಕಿ ರೂಪದಲ್ಲಿ ದರ್ಶನ ನೀಡಿದಳೆಂದು ಹೇಳಲಾದ) ಭತ್ತದ ಗದ್ದೆಯಿಂದ ಹಿಂತಿರುಗಿ ಹೋಗಲು ಯತ್ನಿಸುವ ದೃಶ್ಯ ಭಕ್ತರನ್ನು ರೋಮಾಂಚನಗೊಳಿಸುತ್ತದೆ. ಹಿಂತಿರುಗಲು ಪ್ರಯತ್ನಿಸುವ ಕೊಡೆಯನ್ನು ತಡೆ ಹಿಡಿಯಲು ಎರಡು ಜನ (ಅದಕ್ಕೆಂದೆ ಶುದ್ಧ ನಿಷ್ಠೆಯಿಂದ ಇರುವವರು) ಕೊಡೆಗೆ ಜೋಡಿಸಿದ…

Read More

ಮಡಿಕೇರಿ ಏ.13 :  ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಇವರ ವತಿಯಿಂದ, ಮತದಾನದ ಜಾಗೃತಿ ಸಾರುವ ನಿಟ್ಟಿನಲ್ಲಿ ನಗರದ ಚೇಂಬರ್ ಆಫ್ ಕಾಮರ್ಸ್ ಮಡಿಕೇರಿ, ಸ್ವಾಮಿ ವಿವೇಕಾನಂದ ಯೂಥ್ ಮೂವ್‍ಮೆಂಟ್ ಇವರ ಸಹಯೋಗದೊಂದಿಗೆ, ಮುಂಬರುವ ವಿಧಾನಸಭಾ ಚುನಾವಣೆ ಯ ಮತದಾನ ಜಾಗೃತಿ ಅಭಿಯಾನವನ್ನು ಬೈಕ್ ಜಾಥಾದ ಮೂಲಕ ಆಯೋಜಿಸಲಾಗಿದೆ. ಬೈಕ್ ಜಾಥಾವು ಇದೇ ಏಪ್ರಿಲ್, 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಬನ್ನಿಮಂಟಪದಿಂದ ಪ್ರಾರಂಭಗೊಂಡು ರಾಜಾಸೀಟು ಉದ್ಯಾನವನದಲ್ಲಿ ಕೊನೆಗೊಳ್ಳಲಿದೆ. ಈ ಮತದಾನ ಜಾಗೃತಿ ಬೈಕ್ ಜಾಥಾದಲ್ಲಿ ವರ್ತಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಏ.13 :  ಮತದಾನದ ಪ್ರಕ್ರಿಯೆಯಲ್ಲಿ ನಾವು ಪಾಲ್ಗೊಂಡರೆ ಮಾತ್ರ ನಮ್ಮನ್ನು ಆಳುವ ಸೂಕ್ತ ನಾಯಕನ್ನು ಆಯ್ಕೆ ಮಾಡಲು ಸಾಧ್ಯ ಎಂದು ಕುಶಾಲನಗರ ಉಪ ಖಜಾನೆ ಅಧಿಕಾರಿ ಎಲ್.ಎಸ್ ವಿಜಯ ಕುಮಾರ್  ತಿಳಿಸಿದರು. ಕುಶಾಲನಗರ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ರಾಜ್ಯಶಾಸ್ತ್ರ ವಿಭಾಗ ಮತ್ತು ಮತದಾರರ ಜಾಗೃತಿ ಸಂಘದ ವತಿಯಿಂದ ಆಯೋಜಿಸಿದ್ದ  ರಾಜ್ಯಶಾಸ್ತ್ರ ಸಂಘ ಮತ್ತು ಮತದಾರರ ಸಂಘವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ನಾವು ಮತದಾನ ಮಾಡುವಾಗ ನಮ್ಮ ಇಚ್ಚೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿದು ಮತದಾನ ಮಾಡಬೇಕು. 1988 ರಲ್ಲಿ ಸಂವಿಧಾನದ 61 ತಿದ್ದುಪಡಿಯನ್ನು ಮಾಡಿ 18 ವರ್ಷದ ಯುವಜನರಿಗೆ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. ಭಾರತದ ಸಂವಿಧಾನದ 15 ನೇ ಭಾಗದಲ್ಲಿ 324 ರಿಂದ 329 ವಿಧಿಗಳು ಮತದಾನದ ಕುರಿತು ತಿಳಿಸುತ್ತದೆ. ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ ಘೋಷಣೆ ಮಾಡುವ ಮೂಲಕ ಮತದಾನ ಮಹತ್ವದ ಬಗ್ಗೆ ತಿಳಿಸಲಾಗಿದೆ. ಯುವಜನರು ಮತದಾನದಲ್ಲಿ ಭಾಗವಹಿಸುವುದಲ್ಲದೆ…

Read More

ಸೋಮವಾರಪೇಟೆ ಏ.12 : ಸೋಮವಾರಪೇಟೆ ಜೇಸಿ ಸಂಸ್ಥೆಯ ವತಿಯಿಂದ ಪಟ್ಟಣ ಪಂಚಾಯಿತಿಯ (ಹೊರಗುತ್ತಿಗೆ) ಪೌರಕಾರ್ಮಿಕರಾದ ಎಚ್ ಬಿ ಮಂಜುನಾಥ ಅವರಿಗೆ ‘ಸೆಲ್ಯೂಟ್ ದಿ ಸೈಲೆಂಟ್ ವರ್ಕರ್’ ಪ್ರಶಸ್ತಿಯನ್ನು ಜೇಸಿ ಅಧ್ಯಕ್ಷೆ ಎಂ.ಎ. ರುಬೀನಾ ನೀಡಿ ಗೌರವಿಸಿದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೇಸಿ ಸದಸ್ಯರಾದ ಕೆ.ಎ. ಪ್ರಕಾಶ್, ಅಶೋಕ್, ಪದ್ಮಜಾ, ಕಸ್ತೂರಿ, ರವಿಕುಮಾರ್, ಜೂನಿಯರ್ ಜೇಸಿ ಚೇರ್ ಪರ್ಸನ್ ರಿಶಾ ಮತ್ತು ಪಟ್ಟಣ ಪಂಚಾಯಿತಿ ಸದಸ್ಯ ಜೀವನ್, ಆದಿಲ್, ಶೇಖರ್ ಮತ್ತಿತರರು ಇದ್ದರು.

Read More

ಮಡಿಕೇರಿ ಏ.12 : ಬೈಕ್ ಸವಾರನ ಮೇಲೆ ಒಂಟಿ ಸಲಗ ದಾಳಿ ಮಾಡಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಯಡವಾರೆ-ಕಾಜೂರು ಮುಖ್ಯ ರಸ್ತೆಯ ಕಾಜೂರು ಅರಣ್ಯದ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಕಂಚಿಲ್ಪಾಡಿ ರವಿ ಹಾಗೂ ಆಮೆಮನೆ ನಾರಾಯಣಪ್ಪ ಅವರು ಬೆಳಿಗ್ಗೆ 7.30ರ ಸಮಯದಲ್ಲಿ ಸೋಮವಾರಪೇಟೆ ಪಟ್ಟಣದ ಆಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ರಸ್ತೆಯಲ್ಲಿ ಸಲಗ ಪ್ರತ್ಯಕ್ಷವಾಗಿದೆ. ಬೈಕ್ ಸವಾರ ಬೈಕ್‌ನ್ನು ಬಿಟ್ಟು ಪಕ್ಕದಲ್ಲಿ ಆನೆ ಕಂದಕಕ್ಕೆ ಇಳಿದು ತಪ್ಪಿಸಿಕೊಂಡಿದ್ದಾರೆ. ಬೈಕ್‌ನ್ನು ತುಳಿದು ದೂರ ಎಸೆದ ಆನೆ ಅಲ್ಲಿಂದ ತೆರಳಿದೆ. ಬೈಕ್‌ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Read More

ಮಡಿಕೇರಿ ಏ.12 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವ ಹೊಸ ವರ್ಷಾಚರಣೆ ಎಡ್ಮಾö್ಯರ್ ಪ್ರಯುಕ್ತ ಏ.14 ಮತ್ತು 15 ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಹೊಸ ವರ್ಷವನ್ನು ಕಳೆದ 28 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಸಾರ್ವಜನಿಕ ಕಾರ್ಯಕ್ರಮವಾಗಿ ನಡೆಸಿಕೊಂಡು ಬರುತ್ತಿದೆ. 29 ನೇ ಆಚರಣೆಯಾಗಿ ಏ.14 ರಂದು ಸಂಜೆ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಗುವುದು. ಆ ಮೂಲಕ ಕೊಡವ ಬುಡಕಟ್ಟು ಜನಾಂಗದ ಪರವಾದ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಹೇಳಿದ್ದಾರೆ. ಏ.15 ರಂದು ಬೆಳಿಗ್ಗೆ ಬೆಟ್ಟತ್ತೂರು ಗ್ರಾಮದ ಕೂಪದಿರ ಮೋಹನ್ ಅವರ ಗದ್ದೆಯಲ್ಲಿ ಉಳುಮೆ ಕಾರ್ಯ ಮಾಡಿ ಭೂದೇವಿಗೆ ನಮಿಸಲಾಗುವುದು. ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆ ಆವರಣದಲ್ಲಿ ಹತ್ಯೆಗೀಡಾದ ಕೊಡವರ ಪರವಾಗಿ ಪ್ರಾರ್ಥಿಸಲಾಗುವುದು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನವನ್ನು ಕೂಡ ಆಚರಿಸಲಾಗುವುದು ಎಂದು ನಾಚಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಏ.12 : ವಿಧಾನಸಭಾ ಚುನಾವಣೆ ಸಂಬಂಧ ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆ ಸಂಬಂಧ ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳು ಇವೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಒಟ್ಟು 4,52,642 ಮತದಾರರಿದ್ದು, 4,51,216 ಸಾಮಾನ್ಯ ಮತದಾರರು ಮತ್ತು 1,426 ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,30,359 ಮತದಾರರು ಇದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,22,283 ಮಂದಿ ಮತದಾರರಿದ್ದಾರೆ ಎಂದರು. ನಾಮಪತ್ರ ಸಲ್ಲಿಸಲು ಏಪ್ರಿಲ್, 20 ಕೊನೆಯ ದಿನವಾಗಿದೆ.…

Read More

ಮಡಿಕೇರಿ ಏ.12 : ಕಾಂಗ್ರೆಸ್ ಪಕ್ಷದಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಿರುವ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಅವರುಗಳ ಗೆಲುವಿಗಾಗಿ ಅವಿರತ ಶ್ರಮ ವಹಿಸುವುದಾಗಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಇಬ್ಬರ ಗೆಲುವು ಅನಿವಾರ್ಯವಾಗಿದ್ದು, ಮತದಾರರ ಒಲವು ಈ ಉತ್ಸಾಹಿ ಅಭ್ಯರ್ಥಿಗಳ ಪರ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಯುವ ಮುಖಂಡರುಗಳ ಯೋಜನೆ ಮತ್ತು ಯೋಚನೆಗಳು ಕೊಡಗಿನ ಅಭಿವೃದ್ಧಿಗೆ ಪೂರಕವಾಗಿದೆ. ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಪರ ಚಿಂತನೆಯ ಮೂಲಕವೇ ಜನ ಮಾನಸದಲ್ಲಿ ಹೆಸರು ಮಾಡಿದ್ದಾರೆ. ಕೊಡಗಿನಲ್ಲಿ ಪುಷ್ಪ ಹರಾಜು ಕೇಂದ್ರ ಹಾಗೂ ಪುಷ್ಪ ಸಂಸ್ಕರಣಾ ಕೇಂದ್ರ ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಇದರಿಂದ ಸ್ಥಳೀಯ ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮಗೊಳ್ಳಲಿದೆ ಎಂದರು. ಸಣ್ಣ ಉದ್ಯಮಗಳ ಪ್ರೋತ್ಸಾಹಕ್ಕೆ ಕುಶಾಲನಗರದಲ್ಲಿ ಇನ್‍ಕ್ಯುಬೇಟರ್ ಸೆಂಟರ್, ಕೃಷಿ ಆಧಾರಿತ ಉದ್ಯಮ, ಆಹಾರ ಉತ್ಪನ್ನಗಳ ಕೈಗಾರಿಕೆ, ಉದ್ಯೋಗ…

Read More

ಮಡಿಕೇರಿ ಏ.12 : ಸಾಹಿತಿ ಪರದಂಡ ಚಂಗಪ್ಪ ಅವರ ಜನ್ಮದಿನಾಚರಣೆ ಪ್ರಯುಕ್ತ ಅಲ್ಲಾರಂಡ ರಂಗಚಾವಡಿ ವತಿಯಿಂದ ಸ್ಪರ್ಧಾತ್ಮಕ ಲೇಖನವನ್ನು ಆಹ್ವಾನಿಸಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಂಗಚಾವಡಿಯ ಸಂಸ್ಥಾಪಕ ಅಲ್ಲಾರಂಡ ವಿಠಲ ನಂಜಪ್ಪ, ಪರಂದಡ ಚಂಗಪ್ಪ ಅವರ ಸಾಧನೆಯ ನೆನಪಿಗಾಗಿ ಪ್ರತೀ ಹುಟ್ಟುಹಬ್ಬದ ದಿನದಂದು ಕೊಡಗು ಮತ್ತು ಕೊಡವ ಚರಿತ್ರೆ ಪರಂಪರೆಗಳ ಬಗ್ಗೆ ಯುವರಲ್ಲಿ ಮತ್ತು ಅಧ್ಯಕ್ಷಯಶೀಲರಿಗೆ ಉತ್ಸಾಹ ಮತ್ತು ಪ್ರೋತ್ಸಾಹ ತುಂಬುವ ನಿಟ್ಟಿನಲ್ಲಿ ಪ್ರತೀ ವರ್ಷ ಚಾರಿತ್ರಿಕ ಹಿನ್ನೆಲೆಯ ಕಾರ್ಯಕ್ರಮ, ಶಾಲಾ, ಕಾಲೇಜಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಅವರ ಪುಸ್ತಕಗಳ ವಿಮರ್ಶಾತ್ಮಕ ಬರಹಗಳು ಇತ್ಯಾದಿ ಕಾರ್ಯಕ್ರಮಗಳನ್ನು ಅಲ್ಲಾರಂಡ ರಂಗಚಾವಡಿ ಕೈಗೆತ್ತಿಕೊಂಡು ಕಾರ್ಯಪ್ರವೃತ್ತವಾಗಿದೆ ಎಂದು ಮಾಹಿತಿ ನೀಡಿದರು. ಸಾಹಿತಿ ಪರದಂಡ ಚಂಗಪ್ಪ ಅವರ ಪುಸ್ತಕಗಳ ಬಗ್ಗೆ ಕೊಡಗಿನ ಸಾಹಿತಿಗಳಿಂದ ವಿಮರ್ಶನಾ ಲೇಖನಗಳು, ನಾ ಬಲ್ಲಂತೆ ಪರದಂಡ ಚಂಗಪ್ಪ ಎಂಬ ವಿಷಯದ ಕುರಿತು ಲೇಖನ ಆಹ್ವಾನಿಸಲಾಗಿದ್ದು, ಆಸಕ್ತರು ಏ.30ರ ಒಳಗೆ vtl.coorg@gmail.com ಗೆ ಕಳುಹಿಸುವಂತೆ ತಿಳಿಸಿದರು. ಆಯ್ಕೆಯಾದ ಪ್ರತೀ ಮೂರು ಲೇಖನಗಳಿಗೆ ಪ್ರಥಮ,…

Read More

ಮಡಿಕೇರಿ ಏ.12 : ಪ್ರಾದೇಶಿಕ ಭಾಷಾ ಚಲನಚಿತ್ರಗಳಿಗೆ ಸರ್ಕಾರದಿಂದ ಕೊಡಮಾಡುವ ಸಹಾಯಧನ ಮತ್ತು ಪ್ರಶಸ್ತಿಗಳನ್ನು ಪಡೆಯುವ ಏಕಮಾತ್ರ ಉದ್ದೇಶದಿಂದ ಕೊಡವ ಭಾಷಾ ಚಲನಚಿತ್ರಗಳನ್ನು ನಿರ್ಮಿಸುವ ಕ್ರಮವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡವ ಭಾಷಾ ಚಲನಚಿತ್ರ ನಿರ್ದೇಶಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವ ಭಾಷಾ ಬೆಳವಣಿಗೆಗೆ ಪೂರಕವಾಗಿ ಕೊಡವ ಭಾಷೆಯ ಚಲನಚಿತ್ರಗಳನ್ನು ನಿರ್ಮಿಸಬೇಡಿ ಎನ್ನುವುದಿಲ್ಲ. ಆದರೆ, ಇಲ್ಲಿನ ಮೂಲ ಸಂಸ್ಕೃತಿಗಳ ಅರಿವಿಲ್ಲದೆ, ಕೇವಲ ಕೊಡವ ಭಾಷೆ ಆಧರಿಸಿ ನಿರ್ಮಿಸುವ ಚಲನಚಿತ್ರಗಳು ಹೊರ ಜಗತ್ತಿಗೆ ಕೊಡವ ಸಮುದಾಯದ ಬಗ್ಗೆ ತಪ್ಪು ಭಾವನೆಗಳನ್ನು ಮೂಡಿಸುತ್ತದೆ ಎಂದು ಹೇಳಿದರು. ಪ್ರಾದೇಶಿಕ ಭಾಷಾ ಎರಡು ಚಲನಚಿತ್ರಗಳಿಗೆ ವಾರ್ಷಿಕ 18 ರಿಂದ 20 ಲಕ್ಷ ರೂ. ಸಹಾಯಧನವನ್ನು ಸರ್ಕಾರ ಒದಗಿಸುತ್ತದೆ. ಇದನ್ನು ಪಡೆಯುವ ಏಕಮಾತ್ರ ಉದ್ದೇಶದಿಂದ ಚಲನಚಿತ್ರಗಳನ್ನು ನಿರ್ಮಿಸುವುದು ಮತ್ತು ಪ್ರಶಸ್ತಿಗಾಗಿ ಲಾಬಿ ನಡೆಸುವ ಪಕ್ರಿಯೆಗಳು ಇಂದು ನಡೆಯುತ್ತಿದೆ. ಇಂತಹ ಚಿತ್ರಗಳು ಸೆನ್ಸಾರ್ ಮಂಡಳಿಯ ಮುಂದೆ ಬಂದಾಗ ಅದು ಯೋಗ್ಯವೇ ಅಲ್ಲವೇ ಎಂದಬುದನ್ನು ನಿರ್ಧರಿಸಲು ಕೊಡವ…

Read More