ಮಡಿಕೇರಿ ಮೇ 23 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ಮೇ 30 ರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. 1 ನೇ ತರಗತಿಯಿಂದ ವೃತ್ತಿಪರ ಕೋರ್ಸ್ ವರೆಗೆ ವ್ಯಾಸಾಂಗ ಮಾಡುತ್ತಿರುವ ಸದಸ್ಯರ ಮಕ್ಕಳು 2022-23 ನೇ ಸಾಲಿನಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಅಂಕಪಟ್ಟಿ ಹಾಗೂ ಭಾವಚಿತ್ರ ನೀಡುವುದು ಖಡ್ಡಾಯ. ಮೇ 30 ರ ಒಳಗಾಗಿ ಅರ್ಜಿಯನ್ನು ಪ್ರೆಸ್ ಕ್ಲಬ್ ಗೆ ತಲುಪಿಸಲು ಕೋರಲಾಗಿದೆ.
ಲೇಖಕ: admin
ಮಡಿಕೇರಿ ಮೇ 23 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕುಶಾಲನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಮೇ 23 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಕೊಡಮಾಡುವ ಕೆ.ಬಿ ಮಹಂತೇಶ್ ಸ್ಮರಣಾರ್ಥ ಅತ್ಯುತ್ತಮ ಪರಿಣಾಮಕಾರಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಪ್ರೆಸ್ ಕ್ಲಬ್ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, 2022 ರ ಜನವರಿ 1 ರಿಂದ ಡಿಸೆಂಬರ್ 31 ರ ಒಳಗಾಗಿ ಪ್ರಕಟವಾದ ವರದಿಯನ್ನು ಸಲ್ಲಿಸಬೇಕು. ಒಬ್ಬ ಸದಸ್ಯ ಒಂದು ವರದಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಮೇ 30 ರ ಒಳಗಾಗಿ ಅರ್ಜಿಯನ್ನು ತಲುಪಿಸಬೇಕು. ಪ್ರಶಸ್ತಿಯು 5 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದ್ದು, ಪ್ರೆಸ್ ಕ್ಲಬ್ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಮೇ 23 : ಬದಲಾಗುತ್ತಿರುವ ಹವಾಮಾನ, ಜಾಗತಿಕ ತಾಪಮಾನ ಏರಿಕೆ ಪ್ರಪಂಚದಾದ್ಯಂತ ಎಲ್ಲಾ ರಾಷ್ಟ್ರಗಳು ಎದುರಿಸುತ್ತಿರುವ ಸವಾಲಾಗಿದೆ. ಈ ಜಾಗತಿಕ ಗಂಡಾಂತರ ತಡೆಗಟ್ಟಲು ಹಸಿರು ಪ್ರೀತಿಯನ್ನು ಜಾಗೃತಗೊಳಿಸಿ, ಜನರ ಬೇಡಿಕೆಗೆ ಅನುಸಾರವಾಗಿ ಸಸಿಗಳನ್ನು ಪೂರೈಸುವ ಜವಾಬ್ದಾರಿಯಿಂದ ವಿವಿಧ ಯೋಜನೆಗಳಡಿಯಲ್ಲಿ ‘ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದಿಂದ’ ಸೋಮವಾರಪೇಟೆ-ಕುಶಾಲನಗರ ರಸ್ತೆಯಲ್ಲಿ ಹುದುಗೂರು ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯ ವಲಯದ ಸಸ್ಯಕ್ಷೇತ್ರದಲ್ಲಿ 50 ವಿವಿಧ ಸಸಿಗಳನ್ನು ಬೆಳೆಸಲಾಗಿದೆ. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಚೀಟಿ ಹೊಂದಿರುವ ಬಿಪಿಎಲ್ ಕಾರ್ಡುದಾರರು ಈ ಯೋಜನೆಯಲ್ಲಿ ಉಚಿತವಾಗಿ ಸಸಿಗಳನ್ನು ಪಡೆಯಬಹುದು ಹಾಗೂ ಇತರೆ ಯೋಜನೆಗಳಲ್ಲಿ ಸರ್ಕಾರ ನಿಗಧಿಪಡಿಸಿರುವ 6*9 ಅಳತೆಯ ಚೀಲದ ಸಸಿ ಒಂದಕ್ಕೆ ರೂ.6 ಹಾಗೂ 8*12 ಅಳತೆಯ ಚೀಲದ ಸಸಿ ಒಂದಕ್ಕೆ ರೂ.23 ಗಳನ್ನು ಪಾವತಿಸಿ ಪಡೆದುಕೊಳ್ಳಬಹುದು. ಹುದುಗೂರು ಸಸ್ಯಕ್ಷೇತ್ರದಲ್ಲಿ ನೇರಳೆ, ಮಹಾಗನಿ, ನೆಲ್ಲಿ, ಸೀತಾಫಲ, ಜಂಬು ನೇರಳೆ, ಮರಸೇಬು, ಆಮೆಹಣ್ಣು, ಬಿಳಿ ಧೂಪ, ಸಂಪಿಗೆ, ಹಿಪ್ಪೆ, ರುದ್ರಾಕ್ಷಿ, ಬಿದಿರು, ಮೊಟ್ಟೆ ಹಣ್ಣು, ಕಾಚಂಪುಳಿ,…
ಮಡಿಕೇರಿ ಮೇ.23 : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೇ 30 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.
ಮಡಿಕೇರಿ ಮೇ 23 : ದೇವಸ್ತೂರು ಗ್ರಾಮದಲ್ಲಿ ಎಂಆರ್ಎಫ್ ರ್ಯಾಲಿ ಆಫ್ ಕೂರ್ಗ್ ದ್ವಿಚಕ್ರ ವಾಹನದ ರಾಷ್ಟ್ರೀಯ ಚಾಂಪಿಯನ್ಶಿಪ್ ಏಸ್ ಇವೆಂಟ್ಸ್ ನೇತೃತ್ವದಲ್ಲಿ ನಡೆಯಿತು. 10 ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಚಂಡಿಘಡ್, ಡಾರ್ಜಲಿಂಗ್, ಕುಲುಮಲಾನಿ, ಪುಣೆ, ಕೊಲ್ಕತ್ತ, ಗುವಾಹಟಿ ಇನ್ನಿತರ ಕಡೆಗಳಿಂದ 125 ರ್ಯಾಲಿ ಪಟುಗಳು ಭಾಗವಹಿಸಿದ್ದರು. ಟಿವಿಎಸ್ ರೇಸಿಂಗ್ ತಂಡದ ರಾಜೇಂದ್ರ ಸ್ಯಾಮುಯೆಲ್, ತನ್ವೀರ್ ಅಹಮ್ಮದ್, ಅಂತರಾಷ್ಟ್ರೀಯ ಚಾಂಪಿಯನ್, ಮಹಿಳಾ ರ್ಯಾಲಿ ಪಟು ಹಾಗೂ ಬಿಗ್ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಐಶ್ವರ್ಯ ಪಿಸೆ, ಟೀಂ ಹೀರೋ ರೇಸಿಂಗ್ ತಂಡದ ಯುವ, ತನಿಕ, ರಾಷ್ಟ್ರೀಯ ಚಾಂಪಿಯನ್ ಗಳಾದ ನಟರಾಜ್, ಜತೀನ್ ಜೈನ್, ಶರತ್ ಮೋಹನ್, ಸಿನಾಸ್, ಸೌರಭ್ ಹಾಂಡ ಸೇರಿದಂತೆ ರ್ಯಾಲಿ ಕ್ಷೇತ್ರದ ದಿಗ್ಗಜರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ವಿಶೇಷವಾಗಿತ್ತು. ಓಪನ್ ಕ್ಲಸ್ನಲ್ಲಿ 8 ಮಂದಿ ಮಹಿಳಾ ರ್ಯಾಲಿ ಪಟುಗಳು ಪಾಲ್ಗೊಂಡು ಗಮನಸೆಳೆದರು. ದೇವಸ್ತೂರು ವ್ಯಾಪ್ತಿಯಲ್ಲಿ ಕೃತಕವಾಗಿ ಮಾಡಿದ ‘ಡರ್ಟ್ ಟ್ರ್ಯಾಕ್’ನಲ್ಲಿ ಹಲವು ಸುತ್ತುಗಳನ್ನು ಸುತ್ತಿ 80…
ಮಡಿಕೇರಿ ಮೇ 23 : ಅತ್ಯಪರೂಪದ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣಿನ ದ್ವಿತೀಯ ವರ್ಷದ ‘ಮಾವು ಮತ್ತು ಹಲಸಿನ ಮೇಳ’ ಜಿಲ್ಲಾ ಕೇಂದ್ರ ಮಡಿಕೇರಿಯ ಹಾಪ್ ಕಾಮ್ಸ್ ಆವರಣದಲ್ಲಿ ಮೇ 26 ಹಾಗೂ 27 ರಂದು ಆಯೋಜಿತವಾಗಿದೆ. ಹಾಪ್ ಕಾಮ್ಸ್ ಮಳಿಗೆಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬೆಳೆಗಾರರಿಗೆ ತಾವು ಬೆಳೆದ ಹಣ್ಣುಗಳ ಮಾರಾಟಕ್ಕೆ ಅನುವು ಮಾಡಿಕೊಡುವ ಮತ್ತು ವಿವಿಧ ತಳಿಯ, ವಿಭಿನ್ನ ರುಚಿಯ ಮಾವು ಹಲಸನ್ನು ಗ್ರಾಹಕರಿಗೆ ಪರಿಚಯಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಮತ್ತು ಹಾಪ್ ಕಾಮ್ಸ್ ವತಿಯಿಂದ ಆಯೋಜಿತ ಮೇಳವನ್ನು ಆರಂಭಿಕ ದಿನದಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಶಾಸಕರು, ಚುನಾಯಿತ ಜನಪ್ರತಿನಿದಿಗಳು ಉದ್ಘಾಟಿಸಲಿದ್ದಾರೆ ಎಂದರು. ಕಳೆದ ಸಾಲಿನಲ್ಲಿ ಆಯೋಜಿತ ಮಾವು ಮೇಳಕ್ಕೆ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಬಂದ ಹಿನ್ನೆಲೆಯಲ್ಲಿ ಈ ಬಾರಿ ಮಾವಿನೊಂದಿಗೆ ಹಲಸಿನ ಹಣ್ಣನ್ನು ಒಳಗೊಂಡಂತೆ ಮೇಳವನ್ನು ಆಯೋಜಿಸಲಾಗುತ್ತಿದೆ.…
ಮಡಿಕೇರಿ ಮೇ 23 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ 27ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್, ಅಂದು ಬೆಳಿಗ್ಗೆ 10 ಗಂಟೆಗೆ ತಾಳತ್ತಮನೆಯ ಸಂಘದ ನಿವೇಶನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯನ್ನು ಉಡುಪಿ ಸಹಾಯಕ ಔಷಧಿ ನಿಯಂತ್ರಕ ಶಂಕರ್ ನಾಯ್ಕ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಬು ನಾಯ್ಕ್ ಡಿ. ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ::: ಪ್ರತಿಭಾ ಪುರಸ್ಕಾರ ::: 2021-22ನೇ ಸಾಲಿನ 7ನೇ ತರಗತಿ, 10ನೇ ತರಗತಿ, ಪದವಿ ಪೂರ್ವ, ಅಂತಿಮ ಪದವಿ ಹಾಗೂ ಕೊಡಗಿನಲ್ಲಿ ವ್ಯಾಸಂಗ ಮಾಡಿರುವ ಮತ್ತು ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲೆಯ ಹೊರ ಭಾಗದಲ್ಲಿ ವ್ಯಾಸಂಗ ಮಾಡಿ ಅತೀ ಹೆಚ್ಚು ಅಂಕ ಗಳಿಸಿದ…
ನಾಪೋಕ್ಲು ಮೇ 23 : ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಯಿತು. ಮಡಿಕೇರಿಯ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಪ್ರಿಯದರ್ಶಿನಿ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇದು ಸೂಕ್ತವಾದ ವೇದಿಕೆಯಾಗಿದೆ. ಯಾವುದೇ ಹಿಂಜರಿಕೆ ಇಲ್ಲದೆ ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರೇಖಾ ಚಿಣ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಈ ರೀತಿಯ ವೇದಿಕೆಯನ್ನು ಹೆಚ್ಚು ಹೆಚ್ಚು ಉಪಯೋಗಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಉಪಾಧ್ಯಕ್ಷ ಪುದಿಯೋಕ್ಕಡ ಸುಬ್ರಮಣ್ಯ ಮಾತನಾಡಿ ಶೈಕ್ಷಣಿಕ ಪಠ್ಯಗಳ ನಡುವೆ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ತರುತ್ತದೆ ಎಂದು ಅಭಿಪ್ರಾಯಪಟ್ಟರು. ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕರಾದ ತೇಲಪಂಡ ಶೈಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕ ಮೂಡೇರ ಕಾಳಯ್ಯ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮೇ 23 : ಮಡಿಕೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಜೆಡಿಎಸ್ನ ನಾಪಂಡ ಮುತ್ತಪ್ಪ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳು ಸತ್ಯಕ್ಕೆ ದೂರವೆಂದು ಸಾಬೀತು ಪಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಆಣೆ ಪ್ರಮಾಣ ಮಾಡಿದರು. ಜೆಡಿಎಸ್ನ ಪರಾಜಿತ ಅಭ್ಯರ್ಥಿ ನಾಪಂಡ ಮುತ್ತಪ್ಪ ವಿಧಾನಸಭಾ ಚುನಾವಣೆಯ ಮತದಾನದ ಹಿಂದಿನ ದಿನ ಯಾವುದೇ ಪ್ರಚಾರ ನಡೆಸದೆ ತಟಸ್ಥ ನಿಲುವು ಹೊಂದಿದ್ದರು. ಈ ಸಂದರ್ಭ ಅವರ ವಿರುದ್ಧ ಹಣ ಪಡೆದ ಆರೋಪ ಕೇಳಿ ಬಂದಿತ್ತಲ್ಲದೇ, ಮತ ಎಣಿಕೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಅವರ ಗೆಲುವಿಗೆ ನಾಪಂಡ ಮುತ್ತಪ್ಪ ಕಾರಣರಾಗಿದ್ದಾರೆ ಎಂಬ ಆರೋಪಗಳನ್ನು ಹೊರಿಸಲಾಗಿತ್ತು. ಎರಡು ರಾಷ್ಟ್ರೀಯ ಪಕ್ಷಗಳಿಂದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಾವು ಹಣ ಪಡೆದಿರುವುದು ನಿಜವೇ ಆಗಿದ್ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಇತರ ಪಕ್ಷಗಳಿಗೆ ಸವಾಲೆಸಗಿದ್ದರು. ಅದರಂತೆ ನಾಪಂಡ ಮುತ್ತಪ್ಪ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ…






