ಲೇಖಕ: admin

ಸುಂಟಿಕೊಪ್ಪ ಏ.12 : ರಕ್ತಕ್ಕೆ ಪರ್ಯಯವಾಗಿ ಯಾವುದು ಇಲ್ಲ. ರಕ್ತದಾನದಿಂದ ಆರೋಗ್ಯ ಮತ್ತು ಜೀವನವನ್ನು ಉಳಿಸಿಕೊಳ್ಳಬಹುದು. ಆದ್ದರಿಂದ ಪ್ರತಿಯೊಬ್ಬರು ಮೂರು ತಿಂಗಳಿಗೊಮ್ಮೆ ರಕ್ತದಾನದಂತ ಪವಿತ್ರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಇಂಡಿಯನ್ ರೆಡ್ ಕ್ರಾಸ್ ಸಭಾಪತಿ ರವೀಂದ್ರ ರೈ ಮನವಿ ಮಾಡಿದರು. ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕೊಡಗು ಯೂತ್ ರೆಡ್ ಕ್ರಾಸ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ, ಮಡಿಕೇರಿ ರಕ್ತ ನಿಧಿ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ವಿವೇಕ ಜಾಗೃತ ಬಳಗ, ಉಡುಪಿ (ಡಿವೈನ್ ಪಾರ್ಕ್ ಟ್ರಸ್ಟ್) ನ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ರಕ್ತಕ್ಕೆ ಹೆಚ್ಚು ಬೇಡಿಕೆ ಇದೆ. ಕೆಲವು ಸಂದರ್ಭಗಳಲ್ಲಿ ಓರ್ವ ರೋಗಿಗೆ 8 ರಿಂದ 10 ಲೀಟರ್ ರಕ್ತ ಬೇಕಾಗುತ್ತದೆ. ಇದು ರಕ್ತದಾನದ ಅವಶ್ಯಕತೆಯನ್ನು ಎತ್ತಿ ತೋರಿಸಿದೆ ಎಂದು ಹೇಳಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು…

Read More

ಮಡಿಕೇರಿ ಏ.12 :  ಕುದುಕುಳಿ ಐನ್ ಮನೆ ಕ್ರಿಕೆಟ್ ಕಪ್ ನ ಮೊದಲನೇ ಸುತ್ತಿನ ಪಂದ್ಯದಲ್ಲಿ ಕಟ್ಟೆಕೋಡಿ ತಂಡದ ವಿರುದ್ಧ ತೊತ್ತಿಯನ ತಂಡ 6 ವಿಕೆಟ್‍ಗಳ ಗೆಲುವು ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ನೇಯ್ಯಣಿರ ತಂಡ ಆಗಮಿಸಿದ ಕಾರಣದಿಂದ ಕುಲ್ಲಚೆಟ್ಟಿ ತಂಡ ಗೆಲುವು ಸಾಧಿಸಿತು. ಮೂರನೇ ಪಂದ್ಯದಲ್ಲಿ ಕೇಕಡ ತಂಡ ಆಗಮಿಸಿದ ಕಾರಣ ವಾಡಿಯಪ್ಪನ ತಂಡ ಜಯ ಸಾಧಿಸಿದರೆ ನಾಲ್ಕನೇ ಪಂದ್ಯದಲ್ಲಿ ಕೆದಂಬಾಡಿ ತಂಡ ಪೋಡೋನೊಳನ ತಂಡದ ವಿರುದ್ಧ 7 ವಿಕೆಟ್ ಗಳ ಜಯ ಸಾಧಿಸಿತು. ಎರಡನೇ ಸುತ್ತಿನ ಮೊದಲ ಪಂದ್ಯದಲ್ಲಿ ಪರ್ಲಕೋಟಿ ತಂಡ ವಾಡಿಯಪ್ಪನ ತಂಡದ ವಿರುದ್ಧ 31 ರನ್ ಗಳ ಜಯ ಸಾಧಿಸಿದರೆ ಎರಡನೇ ಪಂದ್ಯದಲ್ಲಿ ಕೆದಂಬಾಡಿ ತಂಡ ತೊತ್ತಿಯನ ತಂಡದ ವಿರುದ್ಧ 14 ರನ್ ಗಳ ಜಯ ಸಾಧಿಸಿ ಕ್ವಾಟರ್ ಫೈನಲ್ ಹಂತಕ್ಕೆ ಲಗ್ಗೆ ಇಟ್ಟಿತು. ಕುಲ್ಲಚೆಟ್ಟಿ ತಂಡದ ವಿರುದ್ಧ ಪರ್ಲಕೋಟಿ ತಂಡ 43 ರನ್ ಗಳ ಗೆಲುವು ಸಾಧಿಸಿ ಕ್ವಾಟರ್ ಫೈನಲ್ ಗೆ ಲಗ್ಗೆ ಇಟ್ಟಿತು. ಕೆದಂಬಾಡಿ…

Read More

ಮಡಿಕೇರಿ ಏ.12 : ವಿಧಾನಸಭಾ ಚುನಾವಣೆ ಹಿನ್ನೆಲೆ ಕೊಡಗು ಜಿಲ್ಲಾ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಚುನಾವಣಾ ಸಂಘಟನೆಯ ಮಹಿಳಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಅಖಿಲ ಭಾರತ ಮಹಿಳಾ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರಾದ ನೆಟ್ಟಾ ಡಿಸೋಜಾ ಅವರ ಆದೇಶದ ಮೇರೆಗೆ ಮಡಿಕೇರಿ ಕ್ಷೇತ್ರದ ಚುನಾವಣಾ ಸಂಘಟನೆಯ ಉಸ್ತುವಾರಿಗಳಾಗಿ ಎಂ.ಬಿ.ಸುನೀತಾ ಹಾಗೂ ಫಿಲೋಮಿನಾ ಅವರನ್ನು ನೇಮಕಗೊಳಿಸಲಾಗಿದೆ. ವಿರಾಜಪೇಟೆ ಕ್ಷೇತ್ರಕ್ಕೆ ಕಾರ್ತಂಡ ಶೈಲಾ ಕುಟ್ಟಪ್ಪ ಹಾಗೂ ಬಿದ್ದಾಂಡ ಸುಮಿತ ಮಾದಪ್ಪ ಅವರನ್ನು ನೇಮಕಗೊಳಿಸಿ, ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್ ತಿಳಿಸಿದ್ದಾರೆ ಎಂದು ಸುರಯ್ಯ ಅಬ್ರಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಏ.12 :  ಪವಿತ್ರ ರಂಝಾನ್ (ರಮಳಾನ್) ತಿಂಗಳ ಅಂಗವಾಗಿ  ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ  ಬೃಹತ್ ಝಿಕ್ರ್ ಮಜ್ಲಿಸ್ ಮತ್ತು ಇಫ್ತಾರ್ ಸಂಗಮ ನಡೆಯಿತು. ಕುಂಜಿಲ ಪೈನರಿ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಪ್ರಮುಖರಾದ   ಅಬ್ದುಲ್ ರಶೀದ್ ದಾರಿಮಿ, ಮುನೀರ್ ಮಳ್ಹರಿ, ಮಹಮದ್ ಹಾಜಿ, ಮುಂತಾದ ಗಣ್ಯರು ಸೇರಿದಂತೆ, ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 2021-22ರ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಕುಂಜಿಲ ರೌಲತುಲ್ ಉಲೂಮ್ ಮದ್ರಸ ವಿದ್ಯಾರ್ಥಿನಿ ಫರೀದ ಎಮ್ ಎಸ್ ಹಾಗೂ ಮದ್ರಸ ಸದರ್ ಹಾಗೂ ಶಿಕ್ಷಕಿ ಅಬ್ದುಲ್ಲ ಸಖಾಫಿ ಉಸ್ತಾದರನ್ನು ಗೌರವಿಸಲಾಯಿತು.

Read More

ಮಡಿಕೇರಿ ಏ.12 : ಪ್ರಾದೇಶಿಕ ಭಾಷಾ ಚಲನಚಿತ್ರಗಳಿಗೆ ಸರ್ಕಾರದಿಂದ ಕೊಡಮಾಡುವ ಸಹಾಯಧನ ಮತ್ತು ಪ್ರಶಸ್ತಿಗಳನ್ನು ಪಡೆಯುವ ಏಕಮಾತ್ರ ಉದ್ದೇಶದಿಂದ ಕೊಡವ ಭಾಷಾ ಚಲನಚಿತ್ರಗಳನ್ನು ನಿರ್ಮಿಸುವ ಕ್ರಮವನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡವ ಭಾಷಾ ಚಲನಚಿತ್ರ ನಿರ್ದೇಶಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವ ಭಾಷಾ ಬೆಳವಣಿಗೆಗೆ ಪೂರಕವಾಗಿ ಕೊಡವ ಭಾಷೆಯ ಚಲನಚಿತ್ರಗಳನ್ನು ನಿರ್ಮಿಸಬೇಡಿ ಎನ್ನುವುದಿಲ್ಲ. ಆದರೆ, ಇಲ್ಲಿನ ಮೂಲ ಸಂಸ್ಕೃತಿಗಳ ಅರಿವಿಲ್ಲದೆ, ಕೇವಲ ಕೊಡವ ಭಾಷೆ ಆಧರಿಸಿ ನಿರ್ಮಿಸುವ ಚಲನ ಚಿತ್ರಗಳು ಹೊರ ಜಗತ್ತಿಗೆ ಕೊಡವ ಸಮುದಾಯದ ಬಗ್ಗೆ ತಪ್ಪು ಭಾವನೆಗಳನ್ನು ಮೂಡಿಸುತ್ತದೆಂದು ತೀಕ್ಷ್ಣವಾಗಿ ನುಡಿದರು. ಪ್ರದೇಶಿಕ ಭಾಷಾ ಎರಡು ಚಲನಚಿತ್ರಗಳಿಗೆ ವಾರ್ಷಿಕ 18 ರಿಂದ 20 ಲಕ್ಷ ರೂ. ಸಹಾಯಧನವನ್ನು ಸರ್ಕಾರ ಒದಗಿಸುತ್ತದೆ. ಇದನ್ನು ಪಡೆಯುವ ಏಕಮಾತ್ರ ಉದ್ದೇಶದಿಂದ ಚಲನಚಿತ್ರಗಳನ್ನು ನಿರ್ಮಿಸುವುದು ಮತ್ತು ಪ್ರಶಸ್ತಿಗಾಗಿ ಲಾಬಿ ನಡೆಸುವ ಪಕ್ರಿಯೆಗಳು ಇಂದು ನಡೆಯುತ್ತಿದೆ. ಇಂತಹ ಚಿತ್ರಗಳು ಸೆನ್ಸಾರ್ ಮಂಡಳಿಯ ಮುಂದೆ ಬಂದಾಗ ಅದು ಯೋಗ್ಯವೇ ಅಲ್ಲವೇ ಎಂದಬುದನ್ನು ನಿರ್ಧರಿಸಲು…

Read More

ಮಡಿಕೇರಿ ಏ.12 :  ಚೆಟ್ಟಳ್ಳಿಯ ಶ್ರೀಮಂಗಲ (ಪೊವ್ವೊದಿ ) ಭಗವತಿ ಉತ್ಸವವು ಏ.14 ಮತ್ತು 15 ರಂದು  ನಡೆಯಲಿದೆ. ಏ. 11 ರಂದು ರಾತ್ರಿ ತಕ್ಕಮುಖ್ಯಸ್ಥರ ಸಮ್ಮುಖದಲ್ಲಿ ಶುದ್ದಕಳಸ ಪೂಜೆ ಸಲ್ಲಿಸಿ ಬೊಳಕ್ ಮರವನ್ನಿಟ್ಟು ಹಬ್ಬಕಟ್ಟು ಹಾಕಲಾಯಿತು. ಏ.14 ರಂದು ಪಟ್ಟಣಿಹಬ್ಬ, ಮಧ್ಯಾಹ್ನ 2 ಗಂಟೆಗೆ ದೇವಾಲಯ ತಕ್ಕರಾದ ಮುಳ್ಳಂಡ ಐನ್ ಮನೆಯಿಂದ ಎತ್ತು ಪೋರಾಟದೊಂದಿಗೆ ದೇವರ ಭಂಡಾರವನ್ನು ತರುವುದು. ಏ.15 ರಂದು ದೊಡ್ದಹಬ್ಬವಾಗಿದ್ದು ದೇವರ ಭಂಡಾರವನ್ನು ದೇವಾಲಯಕ್ಕೆ ತರಲಾಗುವುದು. ನಂತರ ವಿಶೇಷ ಪೂಜೆ, ತೆಂಗಿಕಾಯಿ ಎಳೆಯುವುದು, ತೆಂಗಿನ ಕಾಯಿಗೆ ಗುಂಡು ಹೊಡೆಯುವುದು, ಬೊಳಕ್ ಮರವನ್ನು ದೇವಾಲಯಕ್ಕೆ ಇಡಲಾಗುವುದು.  ನಂತರ ಪ್ರಸಾದ ವಿತರಣೆ ನೆರವೇರಲಿದೆ. ಏ.16 ರಂದು ಪೂರ್ವಾಹ್ನ 7 ಗಂಟೆಗೆ ಶುದ್ದ ಕಳಸ ಪೂಜೆ ನೆವೇರಿಸಿ, ದೇವರ ಭಂಡಾರವನ್ನು ತಕ್ಕರಾದ ಮುಳ್ಳಂಡ ಐನ್ ಮನೆಯಲ್ಲಿ ಒಪ್ಪಿಸಲಾಗುವುದು.

Read More

ಮಡಿಕೇರಿ ಏ.12 : ಕಳೆದ ಹಲವಾರು ವರ್ಷಗಳಲ್ಲಿ ಬಾಹ್ಯಾಕಾಶದಲ್ಲಿ ದೇಶ ಮಾಡಿದ ಸಾಧನೆಗಳನ್ನು ಪ್ರದರ್ಶಿಸಲು ಮತ್ತು ಮಕ್ಕಳಲ್ಲಿ ಬಾಹ್ಯಾಕಾಶದ ಹೆಚ್ಚಿನ ಆಸಕ್ತಿ ಬೆಳೆಸಲು ಏ.18 ರಂದು ಪೊನ್ನಂಪೇಟೆಯಲ್ಲಿ ಉಡಾವಣಾ ವಾಹನಗಳು, ಉಪಗ್ರಹಗಳು ಇತ್ಯಾದಿಗಳ ಮಾದರಿಗಳನ್ನು ಸಾಗಿಸುವ ’ಸ್ಪೇಸ್ ಆನ್ವೀಲ್ಸ್’ ಪ್ರದರ್ಶನ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಪ್ರಾಶುಂಪಾಲ ಡಾ.ಎಂ.ಬಸವರಾಜು ಹಾಗೂ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ.ರೋಹಿಣಿ, ಭಾರತೀಯ ಬಾಹ್ಯಾಕಾಶಸಂಸ್ಥೆ, ಕೂರ್ಗ್‌ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಕೂರ್ಗ್‌ಇನ್ಸ್ಟಿಟ್ಯೂಟ್ ಆಫ್ ಯೂನಿವರ್ಸಿಟಿಯ ಸಹಯೋಗದೊಂದಿಗೆ ಕೂರ್ಗ್‌ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿ ಕಾಲೇಜಿನ ಆವರಣದಲ್ಲಿ ಭಾರತೀಯ ಬಾಹ್ಯಾಕಾಶ ಕೇಂದ್ರವು ಪ್ರಪ್ರಥಮ ಬಾರಿಗೆ ಕೊಡಗಿನಲ್ಲಿ ’ಸ್ಪೇಸ್‌ಆನ್ವೀಲ್ಸ್’ ಪ್ರದರ್ಶನ ನಡೆಸುತ್ತಿದೆ ಎಂದರು. ಅಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಇಸ್ರೋದ ವಿಜ್ಞಾನಿ ಶ್ರೀನಿವಾಸ್ ಮತ್ತು ಕೊಡವ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ವೈಜ್ಞಾನಿಕ ಅಭಿವೃದ್ಧಿಯ ಭಾರತದ ದೃಷ್ಟಿಯನ್ನು ಸಾಕಾರಗೊಳಿಸಲು ರಾಕೆಟ್‌ಗಳು, ಉಪಗ್ರಹಗಳು ಮತ್ತು…

Read More

ವಿರಾಜಪೇಟೆ ಏ.12 : ಬಿಟ್ಟಂಗಾಲ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪೊನ್ನಿಮನೆ ಅಯ್ಯಪ್ಪ ಮತ್ತು ಬೋಟೆ ಚಾಮುಂಡಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಭಂಡಾರ ಹೊರಡುವುದು, ದೇವಸ್ಥಾನದಲ್ಲಿ ಕೊಟ್ಟಿ ಪಾಟ್ ಮತ್ತು ವಿವಿಧ ಧಾರ್ಮಿಕ ಕೋಲಗಳಾದ ಬೋಟೆ ಚಾಮುಂಡಿ ಹಾಗೂ ವಿಷ್ಣುಮೂರ್ತಿ ದೇವರ ತೆರೆ ಸೇರಿದಂತೆ ವಿವಿಧ ತೆರೆಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ವಿವಿಧ ಗ್ರಾಮದ ಭಕ್ತಾದಿಗಳು ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಏ.12 : ನಗರದ ಶ್ರೀ ಓಂಕಾರೇಶ್ವರ ದೇವಾಲಯದ ಸಮೀಪವಿರುವ ಮಧುಕೃಪದ ಆವರಣದಲ್ಲಿ ಮಕ್ಕಳಿಗಾಗಿ “ಬಾಲಗೋಕುಲ”  ವಸಂತ ಉಚಿತ ಬೇಸಿಗೆ ಶಿಬಿರ ನಡೆಯಿತು. ಶಿಬಿರದಲ್ಲಿ ಐದರಿಂದ ಹದಿನೈದನೆಯ ವಯಸ್ಸಿನ ಐವತ್ತಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಸಂಭ್ರಮಿಸಿದರು. ಶಿಬಿರದಲ್ಲಿ ವಿವಿಧ ಕ್ಷೇತ್ರಗಳ  ನುರಿತ ವ್ಯಕ್ತಿಗಳು ಮಕ್ಕಳಿಗೆ ಅಮೃತ ವಚನ, ಶ್ಲೋಕಗಳು, ಕಬೀರನ ದೋಹಗಳು, ಗಾದೆಗಳು, ಒಗಟುಗಳು, ಮಂಕುತಿಮ್ಮನ ಕಗ್ಗ, ದೇಶಭಕ್ತಿ ಗೀತೆಗಳು, ಅಭಿನಯ ಗೀತೆಗಳು, ದೇಶಿಯ ಆಟಗಳು, ಯೋಗಾಸನ, ಸಂಗೀತ, ಕ್ರಾಫ್ಟ್ ಮುಂತಾದವುಗಳ ಬಗ್ಗೆ ಮಾರ್ಗದರ್ಶನ ನೀಡಿದರು.  ಜೊತೆಗೆ  ಮರೆಯಾಗುತ್ತಿರುವ ದೇಶಿಯ ಆಟಗಳನ್ನು ಮಕ್ಕಳು ಆಟವಾಡಿ ಸಂಭ್ರಮಿಸಿದರು. ಸಮಾರೋಪ ಸಮಾರಂಭ : ಶಿಬಿರದ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ   ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೊಡಗು ಜಿಲ್ಲಾ ಸಂಘಚಾಲಕ  ಚಕ್ಕೇರ ಮನು ಕಾವೇರಪ್ಪ  ಮಾತನಾಡಿ, “ಇಂದಿನ ಸಮಾಜದಲ್ಲಿ ಸಂಸ್ಕಾರ ಹಾಗೂ ಸಂಸ್ಕೃತಿಯ ಕೊರತೆ ಬಹಳಷ್ಟು ಇದೆ. ಇದನ್ನು ಹೋಗಲಾಡಿಸಲು ಬಾಲ ಗೋಕುಲದಂತಹ ಕಾರ್ಯಕ್ರಮಗಳು ಅಗತ್ಯ ಹಾಗೂ ಅನಿವಾರ್ಯ’ ಎಂದರು.  ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶ್ಲೋಕ, ಕಥೆ…

Read More

ನಾಪೋಕ್ಲು ಏ.12 : ಬಲ್ಲಮಾವಟಿ ಗ್ರಾಮ ಪಂಚಾಯತಿಯ ಪೇರೂರಿಯನ್ಸ್ ಹಾಕಿ ಕೋಚಿಂಗ್ ಕ್ಯಾಂಪ್ ವತಿಯಿಂದ ಆಯೋಜಿಸಲಾಗಿರುವ ಉಚಿತ ಕ್ರೀಡಾ ತರಬೇತಿ ಶಿಬಿರವನ್ನು ಬಲ್ಲಮಾವಟಿ ಗ್ರಾ.ಪಂ ಅಧ್ಯಕ್ಷ ಮುಕ್ಕಾಟಿರ ಸುತನ್ ಸುಬ್ಬಯ್ಯ ಹಾಗೂ ಮಂಡಲ ಮಾಜಿ ಪ್ರಧಾನ ಕಾರ್ಯದರ್ಶಿ ಮೂವೇರ ನಾಣಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು. ಪೇರೂರು ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಚಿಂಗ್ ಕ್ಯಾಂಪ್ ಅಧ್ಯಕ್ಷ ಮೊವೇರ ಪಟ್ಟು ತಮ್ಮಯ್ಯ ವಹಿಸಿದ್ದರು. ಈ ಸಂದರ್ಭ ಕೋಚಿಂಗ್ ಕ್ಯಾಂಪು ಕಾರ್ಯದರ್ಶಿ ತಾಪಂಡ ಅಪ್ಪಣ್ಣ, ಗ್ರಾ.ಪಂ ಸದಸ್ಯರಾದ ಮಚ್ಚೂರ ರವೀಂದ್ರ, ಚೋಕಿರ ಬಾಬಿ ಬೀಮಯ್ಯ, ಚ0ಗೇಟ್ಟಿರ ಕುಮಾರ್ ಸೋಮಣ್ಣ, ಪಾಲಯಾಡ ಸಂತೋಷ ದೇವಯ್ಯ, ಅಯ್ಯಪ್ಪ, ತರಬೇತಿದಾರ ಮಾಜಿ ಸೈನಿಕ ಕುಮ್ಮಂಡ ವಿಠಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಈ ಕೋಚಿಂಗ್ ಕ್ಯಾಂಪ್ 18 ವರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಏ.28ರ ವರೆಗೆ ಪೇರೂರು ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಬೆಳಿಗ್ಗೆ 6.30 ಗಂಟೆಯಿಂದ ಬೆಳಿಗ್ಗೆ 9 ಗಂಟೆವರೆಗೆ ಜರುಗಲಿದೆ. ವರದಿ : ದುಗ್ಗಳ ಸದಾನಂದ 

Read More