ಲೇಖಕ: admin

ನನಗೆ ವಿರಾಜಪೇಟೆ ಕ್ಷೇತ್ರದ ಟಿಕೆಟ್ ನೀಡದೆ ಇರುವ ಪಕ್ಷದ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ.  ನಾನು ರಾಜಕೀಯಕ್ಕೆ ವೈಯುಕ್ತಿಕವಾಗಿ ಏನನ್ನೋ ಪಡೆಯಬೇಕೆಂದು ಬಂದವನಲ್ಲ. ಜನರಿಗಾಗಿ ಏನಾದರು ಮಾಡೋಣ ಎಂದು ಬಂದವನು. ಕಳೆದ 30 ವರ್ಷಗಳಿಂದ ಕೊಡಗು ಜಿಲ್ಲೆಯ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದೇ ನನ್ನ ಭಾಗ್ಯ. ಪ್ರವಾಹ ಮತ್ತು ಕೋವಿಡ್ ಸಂದರ್ಭದಲ್ಲಿ ಜನರ ಕಷ್ಟವನ್ನು ಹತ್ತಿರದಿಂದ ನೋಡಿದವನು ನಾನು. ಜೀವನದುದ್ದಕ್ಕೂ ಜನಸೇವೆಯಲ್ಲೇ ತೊಡಗಿಸಿಕೊಳ್ಳಬೇಕಂದು ನಿರ್ಧರಿಸಿದವನು ನಾನು. ಎಲ್ಲಾ ಸಂದರ್ಭಗಳಲ್ಲೂ ಕೊಡಗಿನ ಜನತೆ ನನ್ನ ಜೊತೆಯಲ್ಲಿರುವುದೇ ನಾನು ಮಾಡಿದ ಸೇವೆಗೆ ಸಿಕ್ಕ ಜನಾಶೀರ್ವಾದ. ರಾಜಕೀಯ ನನಗೆ ವ್ಯಾಪಾರವು ಅಲ್ಲ, ಜೀವನವು ಅಲ್ಲ ಕೇವಲ ಒಂದು ಸೇವಾಕ್ಷೇತ್ರ ಮಾತ್ರ. ಆದುದರಿಂದ ಬಿಜೆಪಿ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ದುಡಿದಿದ್ದೇನೆ, ಇನ್ನು ಮುಂದೆಯೂ ದುಡಿಯುತ್ತೇನೆ. ಕೊಡಗು ಜಿಲ್ಲೆಯ ಜನರು ಕರೆ ಮಾಡಿ ಅವರ ಭಾವನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿಮ್ಮ ನಿರೀಕ್ಷೆಯಂತೆ ನನಗೆ ಈ ಬಾರಿ ನಿಮ್ಮನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿಲ್ಲ. ಹಾಗೆಂದು ನಾನು ನಿಮ್ಮ ಸೇವೆಯನ್ನು ಮತ್ತು ನಿಮ್ಮ ಪರವಾದ…

Read More

ಮಡಿಕೇರಿ ಏ.12 : ಅರಮೇರಿಯ ಎಸ್‌ಎಂಎಸ್ ವಿದ್ಯಾ ಸಂಸ್ಥೆಯಲ್ಲಿ ಮಾರ್ಚ್ 27ರಿಂದ ಏಪ್ರಿಲ್ 5 ರವರೆಗೆ ಹತ್ತು ದಿನಗಳ ಕಾಲ ವಿದ್ಯಾರ್ಥಿಗಳಿಗೆ  ಬೇಸಿಗೆ ಶಿಬಿರ ನಡೆಯಿತು. ಶಿಬಿರದಲ್ಲಿ  ಪಾಲ್ಗೊಂಡಿದ್ದ 145 ಶಿಬಿರಾರ್ಥಿಗಳಿಗೆ ಕಸದಿಂದ ರಸ, ಕಲೆ, ಕರಕುಶಲ, ಕ್ರೀಡೆ, ಅಡುಗೆ, ಇನ್ನಿತರ ಚಟುವಟಿಕೆಗಳ ಜೊತೆಗೆ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕಾಂತ್ ರಾವ್ ಬೇಟೋಳಿ ಮತ್ತು ದೇವರ ಕಾಡುಗಳಲ್ಲಿ ಪಕ್ಷಿಗಳ ಚಲನವಲನಗಳ ಕುರಿತು ಮಾರ್ಗದರ್ಶನ ನೀಡಿದರು. ಶಿಬಿರದಲ್ಲಿ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬ್ಯಾಡ್ಜ್ ಗಳನ್ನು ಸಂಪಾದಿಸಿಕೊಂಡರು. ಕೊಡಗು ರೆಡ್ ಕ್ರಾಸ್ ಸೊಸೈಟಿಯ ಡಾ. ರವೀಂದ್ರಕಾಮತ್, ಶ್ರೀಮುರಳಿಧರ್ ಪ್ರಥಮ ಚಿಕಿತ್ಸೆಯ ಕಾರ್ಯಾಗಾರ ನಡೆಸಿದರು. ದಂತ ವೈದ್ಯರಾದ ಡಾ.ಸುಪ್ರೀತಾ ದೀಪಕ್ ಮಕ್ಕಳ ಹಲ್ಲುಗಳ ಶುಚಿತ್ವ ಕಾಪಾಡುವ ಬಗೆಗೆ ಮಾಹಿತಿ ನೀಡಿದರು. ಜನರಲ್ ತಿಮ್ಮಯ್ಯ ಜನ್ಮದಿನದ ಪ್ರಯುಕ್ತ ಮಡಿಕೇರಿಯ ತಿಮ್ಮಯ್ಯ ವೃತ್ತದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ಕೆ.ಟಿ ಬೇಬಿ ಮ್ಯಾಥ್ಯು ತಿಮ್ಮಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಶಿಬಿರಾರ್ಥಿಗಳೊಡನೆ…

Read More

ಮಡಿಕೇರಿ ಏ.12 : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಡಿಕೇರಿ ಕ್ಷೇತ್ರದಿಂದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಕೆ.ಜಿ.ಬೋಪಯ್ಯ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿಗಳಾದ ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್ ಅವರುಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಒಟ್ಟು 224 ಕ್ಷೇತ್ರಗಳ ಪೈಕಿ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.   

Read More

ಮಡಿಕೇರಿ ಏ.11 : ಅಯ್ಯಪ್ಪ ಸ್ವಾಮಿ ಮಾಲಾಧಾರಿ ತಂದೆ ಹಾಗೂ ಮಗ ನದಿ ಪಾಲಾದ ಘಟನೆ ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕ ಬೆಟ್ಟಗೇರಿಯಲ್ಲಿ ನಡೆದಿದೆ. ಸೋಮವಾರಪೇಟೆ ಮೂಲದ ಮಣಿಕಂಠ (47) ಹಾಗೂ ಅವರ ಮಗ ಪ್ರೀತಂ (15) ಮೃತ ದುರ್ದೈವಿಗಳು. ಗುಡ್ಡೆಹೊಸೂರು ಚಿಕ್ಕ ಬೆಟ್ಟಗೇರಿಯಲ್ಲಿರುವ ಸಂಬoಧಿಕರಾದ ಅಂಬಾಡಿ ರವಿ ಎಂಬುವವರ ಮನೆಗೆ ಬಂದಿದ್ದ ಇಬ್ಬರು ಮಂಗಳವಾರ ಮಧ್ಯಾಹ್ನ ಕಾವೇರಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸ್ನಾನಕ್ಕೆಂದು ನಾಲ್ವರು ನದಿಗೆ ಇಳಿದಿದ್ದರು ಎಂದು ತಿಳಿದು ಬಂದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಕುಶಾಲನಗರ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಏ.11 : ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾಗಿರುವ ಶ್ರೀ ಕೃಷ್ಣ ಗೋಶಾಲೆಯ ಸಂಸ್ಥಾಪಕ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏ.13 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು, ಕೊಡಗಿನ ಜನ ಬದಲಾವಣೆಯನ್ನು ಬಯಸುತ್ತಿದ್ದು, ನಮ್ಮಂತಹ ಸಾಮಾನ್ಯ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಕಾಲ ಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿಂದೆ ಶಿವಸೇನೆ ಮತ್ತು ಹಿಂದೂಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜಕೀಯವಾಗಿ ತೊಡಗಿಸಿಕೊಂಡಿದ್ದೆ. ನಂತರದ ದಿನಗಳಲ್ಲಿ ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಮತ್ತು ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷನಾಗಿ ಅನೇಕ ಜನಪರ ಹೋರಾಟಗಳನ್ನು ಮಾಡಿದ್ದೇನೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆದಿದ್ದೇನೆ. 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಅನಾಥವಾಗಿ ಅಲೆದಾಡುತ್ತಿದ್ದ ಗೋವುಗಳಿಗೆ ಆಶ್ರಯ ನೀಡುವ ಸಲುವಾಗಿ ಶ್ರೀಕೃಷ್ಣ ಗೋಶಾಲೆಯನ್ನು ಸ್ಥಾಪಿಸಿದ್ದೇನೆ.…

Read More

ಮಡಿಕೇರಿ ಏ.11 :  ಪದ್ಮಶ್ರೀ ಪ್ರಶಸ್ತಿ ಪಡೆದು ಕುಶಾಲನಗರಕ್ಕೆ ಆಗಮಿಸಿದ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಜಿಲ್ಲೆ ಗಡಿಭಾಗ ಕುಶಾಲನಗರದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಲಾಯಿತು. ಕುಶಾಲನಗರ ಕೊಪ್ಪ ಗಡಿ ಭಾಗದ ಕಾವೇರಿ ಪ್ರತಿಮೆ ಬಳಿ ಕುಶಾಲನಗರ ಜಾನಪದ ಪರಿಷತ್ತು ಮತ್ತು ಕುಶಾಲನಗರ ಕೊಡವ ಸಮಾಜ ಪ್ರಮುಖರು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಪ್ರಶಸ್ತಿ ಪುರಸ್ಕೃತ ರನ್ನು  ಗೌರವಿಸಲಾಯಿತು. ಈ ಸಂದರ್ಭ ಮಾತನಾಡಿದ ರಾಣಿ ಮಾಚಯ್ಯ , ತನಗೆ ಸಂದ ಪ್ರಶಸ್ತಿ ಕೊಡಗು ಜಿಲ್ಲೆಗೆ ಹಾಗೂ ಕಲಾ ಕ್ಷೇತ್ರಕ್ಕೆ ಲಭಿಸಿದ ಗೌರವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ, ಉಪಾಧ್ಯಕ್ಷ  ಪುಲಿಯಂಡ ಚಂಗಪ್ಪ, ಸಮಾಜದ ನಿರ್ದೇಶಕರುಗಳಾದ ಚೌರಿರ ತಿಮ್ಮಯ್ಯ, ಕೊಕ್ಕಲೆರ ಧರಣಿ, ಮುಕ್ಕಾಟಿ ಪೊನ್ನಣ್ಣ, ಬೊಪ್ಪಂಡ ನಂದ, ನಲ್ಲಪಟ್ಟಿರ ಸೂರಪ್ಪ, ಗೌಡ ಯುವಕ ಸಂಘದ ಅಧ್ಯಕ್ಷ  ಕೊಡಗನ ಹರ್ಷ, ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷ ಚಂದ್ರಮೋಹನ್, ಗೌರವಾಧ್ಯಕ್ಷ  ಫ್ಯಾನ್ಸಿ…

Read More

ನಾಪೋಕ್ಲು ಏ.11 :  ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರೀಯ ಕೈಗಾರಿಕಾ ಮೀಸಲು ಪಡೆ ಮತ್ತು ಪೊಲೀಸರು ನಾಪೋಕ್ಲುವಿನಲ್ಲಿ ಪಥಸಂಚಲನ ನಡೆಸಿದರು. ನಾಪೋಕ್ಲು ಮಾರುಕಟ್ಟೆ ಬಳಿ ಇರುವ ಪೊಲೀಸ್ ಠಾಣಾ ಮೈದಾನದಿಂದ ಪಟ್ಟಣದ ಮುಖ್ಯಬೀದಿಯ ಮೂಲಕ ಹಳೇ ತಾಲೂಕುವರೆಗು ಕೇಂದ್ರೀಯ ಕೈಗಾರಿಕಾ ಮೀಸಲುಪಡೆ ಮತ್ತು ನಾಪೋಕ್ಲು ಪೊಲೀಸರು ಪಥ ಸಂಚಲನ ನಡೆಸುವ ಮೂಲಕ ಭಯಮುಕ್ತ ಚುನಾವಣೆ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಸುಂದರ್ ರಾಜ್ ಅವರ ಮಾರ್ಗದರ್ಶನದಂತೆ ಡಿವೈಎಸ್ಪಿ ಜಗದೀಶ್ ಮುಂದಾಳತ್ವದಲ್ಲಿ ನಡೆದ ಪಥಸಂಚಲನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಶೇಖರ್, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಮಡಿಕೇರಿ ಮಹಿಳಾ ಠಾಣಾ ಇನ್ಸ್ಪೆಕ್ಟರ್ ಯಶ್ವಂತ್, ಭಾಗಮಂಡಲ ಠಾಣಾಧಿಕಾರಿ ಪ್ರಿಯಾಂಕ ಹಾಗೂ ನಾಪೋಕ್ಲು ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ :ಝಕರಿಯ ನಾಪೋಕ್ಲು 

Read More

ಮಡಿಕೇರಿ,ಏ.11 : ಹಾಕಿ, ಫುಟ್ಬಾಲ್, ಕ್ರಿಕೆಟ್ ಮುಂತಾದ ಗುಂಪು ಕ್ರಿಡೆಯಿಂದ ನಮ್ಮಲ್ಲಿ ಹೊಂದಾಣಿಕೆ, ಒಗ್ಗಟ್ಟು, ತ್ಯಾಗ ಹಾಗೂ ಮತ್ತೋರ್ವರಿಗೆ ಸಹಾಯ ಮಾಡುವ ಮನೋಭಾವ ಮೂಡುತ್ತದೆ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕ್ರೀಡಾಪಟು ಕಾರೇರ ಕವನ್ ಮಾದಪ್ಪ ಹೇಳಿದರು. ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ  ನಗರದ  ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಮಕ್ಕಳ ಬೇಸಿಗೆ ಕ್ರೀಡಾ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮನುಷ್ಯ ಕ್ರೀಡೆ ಅಥವಾ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳದಿದ್ದರೆ ಜೀವನ ಪರಿಪೂರ್ಣವಾಗುವದಿಲ್ಲ. ಗುಂಪು ಕ್ರೀಡೆಗಳಲ್ಲಿ ಹೊಂದಾಣಿಕೆ, ತ್ಯಾಗ, ಸಹಾಯ ಮಾಡುವ ಮನೋಭಾವ ಮೂಡುತ್ತದೆ. ಸೇನೆಯಲ್ಲಿಯೂ ಇದೇ ರೀತಿಯ ಮನೋಭಾವವಿರುತ್ತದೆ. ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವದರಿಂದ ಹೊಸ ಮಾನವರಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಹಿಂದೆ ಯೋಗದ ಮಹತ್ವ ಯಾರಿಗೂ ತಿಳಿದಿರಲಿಲ್ಲ, ಯೋಗ ಹೇಳಿಕೊಡುವವರೂ ಇರಲಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಯೋಗದ ಬಗ್ಗೆ ವಿಶ್ವದೆಲ್ಲೆಡೆ ಪರಿಚಯವಾಗಿದೆ. ಮನುಷ್ಯ ಚಟುವಟಿಕೆಯಿಂದ ಇದ್ದರೆ ಮಾನಸಿಕ ಒತ್ತಡದಿಂದ…

Read More

ಮಡಿಕೇರಿ ಏ.11 : ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಏ.14 ರಂದು ಸೌರಮಾನ ಯುಗಾದಿ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ಅಂದು ಪೂರ್ವಹ್ನ 10.30 ಗಂಟೆಗೆ ನಡೆಯಲಿರುವ ಸತ್ಯನಾರಾಯಣ ಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಸುಂಟಿಕೊಪ್ಪ ಏ.11: ಹಳೆಯ ವಿದ್ಯಾರ್ಥಿಗಳ ಗೆಳೆಯರ ಬಳಗ ಗುಂಡುಗುಟ್ಟಿ ಹಾಗೂ ಪನ್ಯ ಎಫ್.ಸಿ. ವತಿಯಿಂದ ಗುಂಡುಗುಟ್ಟಿ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪ್ರಥಮ ವರ್ಷದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಹೇಶ್ ಪ್ರೆಂಡ್ಸ್ ತಂಡ ಚಾಂಪಿಯನ್‍ಶಿಪ್ ಪಡೆದುಕೊಂಡರೆ, ದ್ವಿತೀಯ ಮಹೇಶ್ ಪ್ರೆಂಡ್ಸ್ ‘ಬಿ’ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮುಕ್ತ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಒಟ್ಟು 16 ತಂಡಗಳು ಪಾಲ್ಗೊಂಡಿದ್ದವು. ಗುಂಡುಗುಟ್ಟಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಹಳೆಯ ನೆನಪುಗಳನ್ನು ಹಂಚಿಕೊಂಡು ಸ್ನೇಹ, ಪ್ರೀತಿ, ಸೌಹಾರ್ದತೆಗೆ ನಾಂದಿ ಹಾಡಿದರು. ಹಳೆಯ ವಿದ್ಯಾರ್ಥಿ ಗೆಳೆಯ ಬಳಗದ ಅಧ್ಯಕ್ಷ ವಿಶ್ವ, ಉಪಾಧ್ಯಕ್ಷರುಗಳಾದ ಮಂಜು, ಶ್ರೀನಿವಾಸ್, ಲಿಖಿತ್, ಕಾರ್ಯದರ್ಶಿ ಕೇಶವ, ಖಜಾಂಚಿ ತೇಜಸ್, ಸಂಘಟನಾ ಕಾರ್ಯದರ್ಶಿಗಳಾದ ಸುಜಿ, ಪೊನ್ನಪ್ಪ, ರಮೇಶ್, ಗಣೇಶ್ ಪದಾಧಿಕಾರಿಗಳಾದ ಅರುಣ, ಅಣ್ಣಪ್ಪ, ಕಾರ್ತಿಕ್, ಕಿರಣ್‍ಕುಮಾರ್, ಕೊರಗಪ್ಪ (ಅರುಣ), ಗಣೇಶ್, ಪ್ರಜ್ವಲ್, ಪ್ರವೀಣ ಹಾಗೂ ಮತ್ತಿತರರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More