ಸುಂಟಿಕೊಪ್ಪ ಏ.11 : ಕೊಡಗರಹಳ್ಳಿಯಲ್ಲಿ ನೆಲೆಸಿರುವ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆ ಶ್ರೀಗಣ ಹೋಮದೊಂದಿಗೆ ವಾಷೀಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಶ್ರೀ ಬೈತೂರಪ್ಪ ಪೊವ್ವೆದಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಮತ್ತು ರುದ್ರಾಭೀಷೇಕವನ್ನು ದೇವಾಲಯದ ಪ್ರಧಾನ ಆರ್ಚಕ ಭಾನು ಪ್ರಕಾಶ್ ಭಟ್, ರಘುಪತಿ ಭಟ್ ಹಾಗೂ ರಮೇಶ್ ವೈದ್ಯ ಅವರ ತಂಡ ನೆರವೇರಿಸಿದರು. ದೇವತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ ಅವರ ಮನೆಯಿಂದ ದೇವರ ಭಂಡಾರವನ್ನು ಅರ್ಚಕ ನರಸಿಂಹ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿ ದುಡಿಕೊಟ್ ಪಾಟ್ ಸಾಂಪ್ರಾದಾಯಿಕ ಕೊಡವ ಒಲಗದೊಂದಿಗೆ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಲಾಯಿತು. ಮಾಹಾಪೂಜೆಯ ಬಳಿಕ ತೀರ್ಥ ಪ್ರಸಾದ ವಿತರಿಸಲಾಯಿತು. ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರಾದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರಾದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದರು. ವಿಶೇಷವೆಂದರೆ ಹಬ್ಬದ…
ಲೇಖಕ: admin
ಮಡಿಕೇರಿ ಏ.11 : ಸಸ್ಯಗಳ ಲೋಕ, ಪ್ರಾಕೃತಿಕ ಸೌಂದರ್ಯ ಒಳಗೊಂಡಿರುವ ರಾಜಸೀಟು ಉದ್ಯಾನವನದಲ್ಲಿ ಜಿಫ್ಲೈನ್ ಸಾಹಸ ಕ್ರೀಡೆಯು ಸೇರ್ಪಡೆಯಾಗಿದೆ. ನಗರದ ರಾಜಸೀಟು ಉದ್ಯಾನವನದಲ್ಲಿ ಜಿಫ್ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಚಾಲನೆ ನೀಡಿದರು. ಸ್ವತಃ ತಾವೇ ಜಿಫ್ಲೈನ್ನಲ್ಲಿ ಸಾಹಸ ಕ್ರೀಡೆಯಲ್ಲಿ ಪಾಲ್ಗೊಂಡು ಗಮನಸೆಳೆದರು. ಬಳಿಕ ಜಿಫ್ಲೈನ್ ಸಾಹಸ ಕ್ರೀಡೆಯ ಅನುಭವ ಹಂಚಿಕೊಂಡ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಒಟ್ಟು 310 ಮೀಟರ್ ಉದ್ದದ ಜಿಫ್ಲೈನ್ ಅಳವಡಿಸಲಾಗಿದೆ ಎಂದರು. ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಜೊತೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ಸುರಕ್ಷತೆ ಸಂಬಂಧ ಪ್ರಮಾಣ ಪತ್ರ ಪಡೆಯಬೇಕು. ಜೊತೆಗೆ ಸಾಹಸ ಅಕಾಡೆಮಿಯ ಅಗತ್ಯ ಮಾರ್ಗದರ್ಶನ ಪಾಲಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ನಾಯಕ್ ಅವರು ಜಿಫ್ಲೈನ್ ಸಾಹಸ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಒಬ್ಬರಿಗೆ 300 ರೂ. ನಿಗದಿ ಮಾಡಲಾಗಿದೆ ಎಂದರು. ಇಲಾಖಾ ಖಾಸಗಿ ಸಹಭಾಗಿತ್ವದಲ್ಲಿ ಜಿಪ್ಲೈನ್ ಸಾಹಸ ಕ್ರೀಡೆ…
ಮಡಿಕೇರಿ ಏ.11 : ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಏಪ್ರಿಲ್, 15 ರಂದು ವಿಶ್ವ ಚಿತ್ರಕಲಾ ದಿನಾಚರಣೆ ಸಂದರ್ಭ ಕೊಡಗು ಮತ್ತು ಮತದಾನ ವಿಷಯದ ಸಂಬಂಧಿತ ಚಿತ್ರಕಲಾ ಸ್ಪರ್ಧೆ ಆಯೋಜಿಸಿದೆ. ನಗರದ ರಾಜಾಸೀಟು ಉದ್ಯಾನವನದಲ್ಲಿ ಏಪ್ರಿಲ್ 15 ರಂದು ಬೆಳಗ್ಗೆ 10 ಗಂಟೆಯಿಂದ ಚಿತ್ರಕಲಾ ಸ್ಪರ್ಧೆಯು 14 ವಷ೯ದೊಳಗಿನ ವಿದ್ಯಾರ್ಥಿಗಳ ವಿಭಾಗ, 14 ರಿಂದ 18 ವಷ೯ದೊಳಗಿನ ವಿದ್ಯಾಥಿ೯ ವಿಭಾಗ ಮತ್ತು 18 ವಷ೯ಕ್ಕೆ ಮೇಲ್ಪಟ್ಟವರ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ. ವಿಶ್ವ ಚಿತ್ರಕಲಾ ದಿನದ ಪ್ರಯುಕ್ತ ಜಿಲ್ಲೆಯ ಚಿತ್ರ ಕಲಾವಿದರು ಕೂಡ ವೈವಿಧ್ಯಮಯ ಚಿತ್ರಕಲೆ ರಚಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯುವ ಚಿತ್ರಕಲಾ ಸ್ಪರ್ಧೆಯಲ್ಲಿ ಮತದಾನದ ಮಹತ್ವದ ವಿಷಯದಲ್ಲಿ ಕೊಡಗು ಮತ್ತು ಮತದಾನ ವಿಚಾರದ ಬಗ್ಗೆ ಚಿತ್ರಕಲೆ ರಚಿಸಬಹುದಾಗಿದೆ. ಇದೇ ಸಂದರ್ಭ ‘ನಾನು ಮತದಾನ ಮಾಡುತ್ತೇನೆ’ ಎಂಬ ಬೃಹತ್ ಕ್ಯಾನ್ವಸ್ನ್ನು ರಾಜಾಸೀಟು ಉದ್ಯಾನವನದಲ್ಲಿ ಕೊಡಗಿನ…
ನಾಪೋಕ್ಲು ಏ.11 : ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆದ ಉತ್ಸವದಲ್ಲಿ ಊರಿನ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಹಾಪೂಜೆ, ಧ್ವಜಾರೋಹಣ, ದೀಪಾರಾಧನೆ, ದೇವರ ಬಲಿಯೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಿತು. ದೇವಾಲಯದಲ್ಲಿ ಬೆಳಿಗ್ಗೆ ದರ್ಶ ಬಲಿ, ಮಹಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ, ವಿಶೇಷ ಸೇವೆಗಳು ಜರುಗಿದವು. ದೇವರ ನೃತ್ಯಬಲಿ (ಪಟ್ಟಣಿ ) ನಂತರ ಪ್ರಸಾದ ವಿತರಣೆ ನೆರವೇರಿತು. ಸಂಜೆ ಪಟ್ಟಣದಲ್ಲಿ ದೇವರ ಉತ್ಸವ ಮೂರ್ತಿಯನ್ನು ಚೆಂಡೆ, ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾವೇರಿನದಿಯಲ್ಲಿ ಅವಭೃತಸ್ನಾನದ ಬಳಿಕ ದೇವರ ದರ್ಶನಬಲಿ ಜರುಗಿತು. ನಂತರ ಶುದ್ಧ ನವಕ ಕಲಶ, ಮಹಾಪೂಜೆ, ಮಂತ್ರಾಕ್ಷತೆಯೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ದೇವಾಲಯದ ಮುಖ್ಯ ಅರ್ಚಕ ಸುಧೀರ, ರಮೇಶ್ ಶರ್ಮಾ, ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಈ ಸಂದರ್ಭ ಆಡಳಿತ ಮಂಡಳಿ ಅಧ್ಯಕ್ಷ ಟಿ.ಎಸ್.ಮಂಜಯ್ಯ, ಕಾರ್ಯದರ್ಶಿ ಟಿ.ಎ.ಸುಜಿಕುಮಾರ್, ಖಜಾಂಚಿ ಎಂ.ಪಿ.ಗೋಪಾಲ, ಉಪಾಧ್ಯಕ್ಷ ಟಿ.ಆರ್.ಶ್ರೀನಿವಾಸ, ಕಾರ್ಯಾಧ್ಯಕ್ಷ ಟಿ.ಎನ್.ರಮೇಶ್, ಹಿರಿಯರಾದ ಶ್ರೀನಿವಾಸ, ಆನಂದ…
ಮಡಿಕೇರಿ ಏ.11 : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಎಸ್ಸೋಸಿಯೇಷನ್, ಕೊಡಗು ಜಿಲ್ಲೆ (ನೀಮಾ, ಕೊಡಗು) ವತಿಯಿಂದ ಏ.13 ರಂದು ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚಿನ ಆಯುವೇ೯ದ ವೈದ್ಯರು ತಮ್ಮ ಚಿಕಿತ್ಸಾಲಯಗಳಲ್ಲಿ ನೀಮಾ ದಿನಾಚರಣೆ ಆಯೋಜಿಸಿದ್ದಾರೆ. ಏ.13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಆರೋಗ್ಯ ಚಿಕಿತ್ಸಾ ಕಾಯ೯ಕ್ರಮಗಳು ಆಯೋಜಿತವಾಗಿದೆ. ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಅನೇಕ ಕಾಯ೯ಕ್ರಮಗಳು ಜರುಗಲಿದೆ. ಸೋಮವಾರಪೇಟೆ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ, ಮಾಹಿತಿ, ಕುಶಾಲನಗರ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ವಿಶೇಷ ಚೇತನರಿಗೆ ಚಿಕಿತ್ಸೆ, ಮಾಹಿತಿ, ಮಡಿಕೇರಿ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ಮಹಿಳೆಯರಿಗೆ ಚಿಕಿತ್ಸೆ,ಮಾಹಿತಿ, ವಿರಾಜಪೇಟೆ ತಾಲೂಕಿನ ಆಯುವೇ೯ದ ಚಿಕಿತ್ಸಾಲಯಗಳಲ್ಲಿ ಯುವಕ, ಯುವತಿಯರಿಗೆ ಆರೋಗ್ಯ ಸಂರಕ್ಷಣೆಯ ಮಾಹಿತಿ, ಚಿಕಿತ್ಸೆ ಕಾಯ೯ಕ್ರಮಗಳನ್ನು ಅಂದಿನ ದಿನ ಆಯೋಜಿಸಲಾಗಿದೆ. ಅಲ್ಲದೇ ಈಗ ಹಲವರಿಗೆ ಕಾಡುತ್ತಿರುವ ಥೈರಾಯ್ಡ್, ಬೊಜ್ಜುತನ, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಪಿ.ಸಿ.ಓ.ಡಿ ಸಮಸ್ಯೆಗಳಿಗೆ ಮನೆಯಲ್ಲೇ ಮಾಡಬಹುದಾದ ಯೋಗಾಸನಗಳ ಮಾಹಿತಿಯನ್ನು ಎಲ್ಲರ ಉಪಯೋಗಕ್ಕಾಗಿ…
ಸೋಮವಾರಪೇಟೆ ಏ.11 : ಬೆಟ್ಟದಳ್ಳಿ ಯಶೋದೆ ರಂಗಟ್ರಸ್ಟ್ ಹಾಗೂ ಸಾಂದೀಪನಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಏ.15ರಿಂದ ಮೇ 3ರ ವರೆಗೆ ಮಕ್ಕಳ ಕಲಾಕಲಿಕೆ ಶಿಬಿರ ನಡೆಯಲಿದೆ ಎಂದು ಶಿಬಿರ ಸಂಚಾಲಕ ನಿಶಾಂತ್ ಮುತ್ತಣ್ಣ ತಿಳಿಸಿದ್ದಾರೆ. ಚೌಡ್ಲು ಸಾಂದೀಪನಿ ಶಾಲಾ ಆವರಣ ಹಾಗೂ ಗೌಡಳ್ಳಿ ಶ್ರಿ ನವದುರ್ಗಾ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಡ್ರಾಮಾ ಜೂನಿಯರ್ಸ್, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮಾರ್ಗದರ್ಶಕರಿಂದ ರಂಗಾಟ, ಅಭಿನಯ, ಚಿತ್ರಕಲೆ, ಕರಕುಶಲತೆ, ಯಕ್ಷಗಾನ, ಮೂಕಾಭಿನಯ, ಜಾನಪದ ಕುಣಿತ ಸೇರಿದಂತೆ ಇನ್ನಿತರ ರಂಗ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 8123557304 ಹಾಗೂ 7259479331 ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.
ಬೆಂಗಳೂರು ಏ.11 : ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಬಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನಮಾನವನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.
ಪರೀಕ್ಷೆ ಎಂಬುದು ನಾವು ವಿಷಯವನ್ನು ಎಷ್ಟರ ಮಟ್ಟಿಗೆ ತಿಳಿದುಕೊಂಡಿದ್ದೇವೆ ಎಂಬುದಕ್ಕೆ ಒಂದು ಮಾಪನ ಅಷ್ಟೇ. ಪರೀಕ್ಷಾ ಫಲಿತಾಂಶ ಎಂದರೆ “ವಿದ್ಯಾರ್ಥಿಯ ಸಾಮಥ್ರ್ಯವನ್ನು ಅಳೆಯುವ ಹಲವಾರು ವಿಧಾನಗಳಲ್ಲಿ ಒಂದು. ಫಲಿತಾಂಶಕ್ಕೆ ತೀರಾ ಹೆಚ್ಚು ಬೆಲೆ ಕೊಡಬಾರದು. ಅಂಕ ಕಡಿಮೆ ಬಂದಾಗ ವಿದ್ಯಾರ್ಥಿಗಳಿಗೆ ಬರುವ ಯೋಚನೆಗಳು ಯಾರಿಗೂ ಮುಖ ತೋರಿಸುವುದು ಬೇಡ, ನನಗೆ ಭವಿಷ್ಯವೇ ಇಲ್ಲ, ಫಲಿತಾಂಶ ಯಾರಿಗೂ ಹೇಳುವುದೇ ಬೇಡ, ನಕಾರಾತ್ಮಕ ಚಿಂತನೆ, ಸದಾ ದುಃಖದಿಂದ ಇರುವುದು, ಭಯ/ಆತಂಕದ ಮನಸ್ಥಿತಿ, ಒಂಟಿಯಾಗಿರುವುದು, ಆತ್ಮಹತ್ಯಾ ಆಲೋಚನೆ, ಮನೆ ಬಿಟ್ಟು ಓಡಿಹೋಗುವುದು, ಅಂಕಗಳ ಬಗ್ಗೆ ಸುಳ್ಳು ಹೇಳುವ ಆಲೋಚನೆಗಳು ಬರುತ್ತವೆ. ಆದರೆ ಬೇರೆಯವರಿಂದ ಬಚ್ಚಿಡುವುದರಲ್ಲಿ ಅರ್ಥವಿಲ್ಲ, ಅಂಕ ಕಡಿಮೆ/ಫೇಲ್ ಆದರೆ ಏಕೆ ಹೀಗಾಯಿತೆಂದು ವಿಮರ್ಶೆ ಮಾಡಿಕೊಂಡು ಮುಂದಿನ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಬೇಕು. ಫಲಿತಾಂಶ ಸಮಯದಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗುತ್ತದೆ. ಹಾಗಾಗಿ ನಿಮ್ಮ ಮಕ್ಕಳನ್ನು ಬೇರೆ ಮಕ್ಕಳೊಂದಿಗೆ ಹೋಲಿಸಬೇಡಿ ಮತ್ತು ಚುಚ್ಚು ಮಾತನಾಡಬೇಡಿ. ಫಲಿತಾಂಶ ಬರುವ ಸಮಯದಲ್ಲಿ ಮಗುವಿನ ಜೊತೆ ಇದ್ದರೆ ತುಂಬಾ ಒಳ್ಳೆಯದು. ಮಗುವಿನ…
ಸಾಧಾರಣವಾಗಿ ಹೆಚ್ಚಿನವರು ಸಂಸ್ಕರಿತ ಆಹಾರ ಪದಾರ್ಥಗಳ ವ್ಯಸನ ಅಥವಾ ಜಂಕಫುಡ್ ವ್ಯಸನ ಎಂಬ ಪದಗಳನ್ನು ಕೇಳಿರುತ್ತೀರಿ. ನಾವೀಗ ಅದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ಸೇವಿಸುವ ಪದಾರ್ಥಗಳಲ್ಲಿ ಹೆಚ್ಚಿನಂಶವು ವ್ಯಸನವಾಗಿ ಮಾರ್ಪಟ್ಟು ಇಡೀ ಆಹಾರ ವ್ಯಸನವೇ ಆಗಿ ಹೋಗಿದೆ. ಹಿರಿಯರು, ಮಧ್ಯವಯಸ್ಕರು, ಮಕ್ಕಳು ಎಂಬಿತ್ಯಾದಿಯಾಗಿ ಬೇಧಭಾವವಿಲ್ಲದೆ ನಾವು ನೋಡುವ ಎಲ್ಲರೂ ಆಹಾರದ ವ್ಯಸನಿಗಳೇ ಆಗಿದ್ದಾರೆ. ಯಾವುದೇ ಒಂದು ಪದಾರ್ಥಕ್ಕೆ ಅದು ವ್ಯಸನವನ್ನುಂಟು ಮಾಡುತ್ತದೆ ಎಂದು ಯಾವಾಗ ಹೇಳುತ್ತೇವೆಂದರೆ ಆ ಪದಾರ್ಥದಿಂದ ದೂರವಿರಲು ನಮ್ಮಿಂದ ಸಾಧ್ಯವಾಗದೇ ಇದ್ದಾಗ ಅಥವಾ ನಿಂತಲ್ಲಿ, ಕೂತಲ್ಲಿ, ಹೋದಲ್ಲಿ, ಬಂದಲ್ಲಿ ಆ ವಸ್ತುವಿನ ಚಿಂತೆ ಹತ್ತಿ ಅದೇ ಬೇಕೆಂದು ಅನಿಸಿದಾಗ. ಈಗಿನ ಆಹಾರವೇ ವ್ಯಸನಯುಕ್ತ ಆಹಾರವಾಗಿ ಪರಿವರ್ತನೆಗೊಂಡಿದೆ. ಅತಿಯಾದ ಉಪ್ಪು, ಸಕ್ಕರೆ, ಮೈದಾ, ಮಾಂಸಾಹಾರ, ಮಸಾಲೆ ಪದಾರ್ಥ, ಎಣ್ಣೆ (ಕೊಬ್ಬು) ಇತ್ಯಾದಿಗಳ ಬಳಕೆಯಿಂದಾಗಿ ಎಣ್ಣೆ + ಮಸಾಲೆ ಪದಾರ್ಥ + ಉಪ್ಪು ಅಥವಾ ಎಣ್ಣೆ +ಮೈದಾ+ಸಕ್ಕರೆ ಅಥವಾ ಎಣ್ಣೆ + ಕಡಲೇ ಹಿಟ್ಟು + ಸಕ್ಕರೆ ಇವುಗಳನ್ನು ಬಳಸದೇ…
ಮಡಿಕೇರಿ ಏ.10 : ಯೋಗಾಸನ, ಪ್ರಾಣಾಯಾಮ ಅಭ್ಯಾಸ ಮಾಡುವದರಿಂದ ಉತ್ತಮ ಮನುಜನಾಗಲು ಸಾಧ್ಯವೆಂದು ಶಕ್ತಿ ಪತ್ರಿಕೆ ಸಲಹಾ ಸಂಪಾದಕ, ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ ಹೇಳಿದರು. ವಾಂಡರ ರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ ಇಲ್ಲಿನ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಮಕ್ಕಳ ಬೇಸಿಗೆ ಕ್ರೀಡಾ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮನುಜ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು, ಆತ್ಮಶಕ್ತಿ ವೃದ್ಧಿಗೊಳ್ಳಲು ಮಾನಸಿಕ ಸಮತೋಲನ ಮುಖ್ಯ. ಮನಸು ಯಾರಿಗೂ ಕಾಣುವದಿಲ್ಲ. ಮನಸಿನ ಬೀಗವನ್ನು ತೆರೆಯಲು ಯೋಗ, ಪ್ರಾಣಾಯಾಮದಿಂದ ಸಾಧ್ಯ, ಇದು ನಮ್ಮೊಳಗಿರುವ 72ಸಾವಿರ ನರ ನಾಡಿಗಳನ್ನು ಶುಧ್ಧ ಮಾಡುವದಲ್ಲದೆ ಗಟ್ಟಿಗೊಳಿಸುತ್ತದೆ. ಯೋಗ ಮಾಡುವದರಿಂದ ಏಕಾಗ್ರತೆ ಮೂಡುತ್ತದೆ. ಮನಸು ಕ್ರಿಯಾಶೀಲವಾಗಿ ಚಟುವಟಿಕೆಯಿಂದಿರಲು ಸಾಧ್ಯವಾಗುತ್ತದೆ. ಉತ್ತಮ ಮಾನವನಾಗಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಶಿಬಿರದಲ್ಲಿ ಕಲಿಸುವದನ್ನು ನಿರಂತರವಾಗಿ ಅಭ್ಯಾಸ ಮಾಡಬೇಕೆಂದು ಕಿವಿಮಾತು ಹೇಳಿದರು. ಗೋವಾ ಮೂಲದ ಸಮಾಜ ಸೇವಕಿ ರೂಬಿ ಮಾತನಾಡಿ; ಜೀವನದಲ್ಲಿ ಮತ್ತೊಬ್ಬರಿಗೆ ಸಹಾಯ ಮಾಡಿದಲ್ಲಿ ನಮಗೆ ಅದಕ್ಕಿಂತ…






