ಲೇಖಕ: admin

ಮಡಿಕೇರಿ ಏ.10 : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರನ್ನು ಭೇಟಿಯಾದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿಯೋಗ ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಎಂಬ ಶಾಸ್ತ್ರೀಯ ಪದ ಬಳಕೆಯ ಕುರಿತು ಚರ್ಚಿಸಿತು. ಬೆಂಗಳೂರಿನ ದೇವರಾಜ ಅರಸು ಭವನದಲ್ಲಿರುವ ಹಿಂದುಳಿದ ವರ್ಗಗಳ ಆಯೋಗದ ಕಛೇರಿಯಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮತ್ತಿತರರು ಹೆಗಡೆ ಅವರನ್ನು ಭೇಟಿಯಾಗಿ ನ್ಯಾಯಾಲಯದ ಆದೇಶವಿದ್ದರೂ ಸರ್ಕಾರ “ಕೊಡವ” ಪದ ಬಳಕೆಗೆ ಕ್ರಮ ಕೈಗೊಳ್ಳದಿರುವುದನ್ನು ಮತ್ತೊಮ್ಮೆ ಕಾನೂನಿನ ಮೂಲಕ ಪ್ರಶ್ನಿಸುವುದಾಗಿ ತಿಳಿಸಿದರು. ಉಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಗೆಜೆಟ್ ಅಧಿಸೂಚನೆಯ ಮೂಲಕ ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ಕೊಡವ ಎಂಬ ಶಾಸ್ತ್ರೀಯ ಪದವನ್ನು ಅಳವಡಿಸುವ ಕುರಿತು ಚರ್ಚಿಸಲಾಗಿದೆ. 2021 ಡಿ.8 ರಂದು, ಡಾ.ದ್ವಾರಕನಾಥ್ ಆಯೋಗದ ವರದಿ ಕೂಡ ಇದನ್ನು ಶಿಫಾರಸು ಮಾಡಿದೆ. ಹೈಕೋರ್ಟ್ ತೀರ್ಪು ನೀಡಿ ಈಗಾಗಲೇ 16 ತಿಂಗಳು ಕಳೆದಿದೆ. ಆದರೆ ಆದೇಶವನ್ನು ಅನುಷ್ಠಾನಗೊಳಿಸುವ ಬದ್ಧತೆಯನ್ನು ಸರ್ಕಾರ ಪ್ರದರ್ಶಿಸುತ್ತಿಲ್ಲ. ಈಗಾಗಲೇ ಕರ್ನಾಟಕ ಹೈಕೋರ್ಟ್ ನಲ್ಲಿ ಸಂಬಂಧಪಟ್ಟವರ ವಿರುದ್ದ ನಾವು…

Read More

ಮಡಿಕೇರಿ ಏ.10 : ಕರ್ನಾಟಕ ರಾಜ್ಯದ ರೈತರ ಜೀವನಾಡಿಯಾಗಿರುವ ಕೆಎಂಎಫ್ ನಂದಿನಿಯನ್ನು ಅಮೂಲ್ ನೊಂದಿಗೆ ಯಾವುದೇ ಕಾರಣಕ್ಕು ವಿಲೀನ ಮಾಡಬಾರದು ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬಿ.ಎನ್.ಮುದ್ದುರಾಜು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುಜರಾತ್‌ನ ಅಮುಲ್ ಸಂಸ್ಥೆ ನಂದಿನಿಯನ್ನು ಅತಿಕ್ರಮಿಸಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರ ನೆರವು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಗೋ ಬ್ಯಾಕ್ ಅಮೂಲ್ ಅಭಿಯಾನದ ಮೂಲಕ ರಾಜ್ಯದ ರೈತರು ಹಾಗೂ ಜನರು ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಕೂಡ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ. ಬೆಲೆ ಏರಿಕೆಯ ದುಬಾರಿ ಜೀವನದ ಈ ದಿನಗಳಲ್ಲಿ ಆರ್ಥಿಕತೆಯನ್ನು ಸರಿದೂಗಿಸಲು ರೈತರು ಕೃಷಿಯೊಂದಿಗೆ ಹಸುಗಳನ್ನು ಸಾಕಾಣಿಕೆ ಮಾಡಿ ಹಾಲು ಮಾರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಯಥೇಚ್ಚವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಲಭ್ಯತೆ ಇದ್ದರೂ ಸರ್ಕಾರ ಕೃತಕ ಕೊರತೆಯನ್ನು ಸೃಷ್ಟಿಸುತ್ತಿದೆ. ಗುಜರಾತ್ ನ ಸಂಸ್ಥೆಗೆ ಲಾಭ ಮಾಡಿಕೊಡಲು ಕರ್ನಾಟಕದ ರೈತರ ಜೀವನದ…

Read More

ಮಡಿಕೇರಿ ಏ.10 :  ಓಕಿನವ ಡ್ರ್ಯಾಗನ್ ಮಾರ್ಷಿಯಲ್ ಆರ್ಟ್ಸ್ ಶೋಟೋಕನ್ ರಿಜಿಸ್ಟರ್ಡ್ ಸಂಸ್ಥೆಯಲ್ಲಿ  ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯನ್ನು ಅರುಣ್ ಮಚಯ್ಯ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರ್ ದೀಲಿತ್ ಉತ್ತಪ್ಪ  ಪಂದ್ಯಾವಳಿಯನ್ನು ನಡೆಸಿಕೊಟ್ಟು, ಎಲ್ಲಾ ಕರಾಟೆ ತರಬೇತುದಾರರಿಗೆ  ಧನ್ಯವಾದ ಸಲ್ಲಿಸಿದರು.

Read More

ಶನಿವಾರಸಂತೆ ಏ.10 : ಶನಿವಾರಸಂತೆ ಹೊಬಳಿ ವ್ಯಾಪ್ತಿಯ  30, 40,46,45,50 ಮತಗಟ್ಟೆಗಳಿಗೆ  ಸೆಟ್ಟರ್ ಆಫೀಸರ್ ಯಾದವ್ ಬಾಬು ಹಾಗೂ ಉಪ ತಹಶೀಲ್ದಾರ್ ನಾಗರಾಜ್, ಗ್ರಾಮ ಲೆಕ್ಕಾಧಿಕಾರಿ ವಾಣಿ ಹಾಗೂ ಇತರ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ, ಅಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳ ಬಗ್ಗೆ ಪಂಚಾಯಿತಿ ಪಿಡಿಓ ಗಳಿಗೆ  ಗಮನಹರಿಸಿ ಸರಿಪಡಿಸುವಂತೆ ಸೂಚಿಸಿದರು.

Read More

ಸುಂಟಿಕೊಪ್ಪ,ಏ.10: ಹರದೂರು ಗ್ರಾಮದ ಶ್ರೀ ಆದಿನಾಗಬಹ್ಮ ಮೊಗೇರ್ಕಳ ಸೇವಾ ಸಮಿತಿ ವತಿಯಿಂದ ಶ್ರೀ ಆದಿನಾಗಬಹ್ಮ ಮೊಗೇರ್ಕರ ದೈವಗಳ ಕೊರಗ ತನಿಯ ದೈವದ 83ನೇ ನೇಮೋತ್ಸವವು ಏ.15 ಮತ್ತು 16ರಂದು ನಡೆಯಲಿದೆ. ಏ.15 ರಂದು ಮದ್ಯಾಹ್ನ 12 ಗಂಟೆಗೆ ಆಯುಧಾ ಪೂಜೆ, ಸಂಜೆ 6 ಗಂಟೆಗೆ ಮಂತ್ರವಾದಿ ಗುಳಿಗನ ನೇಮ, ರಾತ್ರಿ 8.30 ಗಂಟೆಗೆ ಶ್ರೀ ಆದಿನಾಗಬಹ್ಮ ಮೊಗೇರ ದೈವಗಳ ಗರಡಿ ಇಳಿಯುವುದು, ರಾತ್ರಿ 12.30 ಗಂಟೆಗೆ ಆದಿ ಮಾಯೆ ತನ್ನಿ ಮಾನಿಗ ಗರಡಿ ಇಳಿಯುವುದು. ಏ.16 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಕೊರಗ ದೈವದ ನೇಮ ನಡೆಯಲಿದೆ ಎಂದು ಶ್ರೀ ಆದಿನಾಗಬಹ್ಮ ಮೊಗೇರ್ಕಳ ಸೇವಾ ಸಮಿತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

Read More

ಸಿದ್ದಾಪುರ ಏ.10 :  ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಶ್ರೀಸಾಮಾನ್ಯರಿಗೆ ಧೈರ್ಯ ತುಂಬಿ, ಸಮಾಜ ಘಾತುಕ ಶಕ್ತಿಗಳಿಗೆ ಎಚ್ಚರಿಕೆ ನಿಡುವ ಹಿನ್ನೆಲೆಯಲ್ಲಿ ಇಂದು ಪಟ್ಟಣದಲ್ಲಿ ಅರೆ ಸೇನಾ ಪಡೆ ಮತ್ತು ಜಿಲ್ಲಾ ಪೊಲೀಸರಿಂದ ಪಥ ಸಂಚಲನ ನಡೆಯಿತು. ಚುನಾವಣೆ ಸಮದರ್ಭ ಸಮಾಜ ಘಾತುಕ ಶಕ್ತಿಗಳು ಶಾಂತಿ ಕದಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆನ್ನುವ ಸ್ಪಷ್ಟ ಸಂದೇಶ ಸಾರುವ ನಿಟ್ಟಿನಲ್ಲಿ ನೆಲ್ಲಿಹುದಿಕೇರಿಯಿಂದ ಸಿದ್ದಾಪುರದವರೆಗೆ  ನಡೆದ ಪಥ ಸಂಚಲನದಲ್ಲಿ ನೂರಕ್ಕೂ ಹೆಚ್ಚಿನ ಪೊಲೀಸ್ ಮತ್ತು ಅರೆ ಸೇನಾ ಪಡೆದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More

ಸುಂಟಿಕೊಪ್ಪ ಏ.10 : ಮಳ್ಳೂರು ಗ್ರಾಮದ ಕೊರಗಜ್ಜ ದೈವ ಸ್ಥಾನದಲ್ಲಿ ಪ್ರಥಮ ವರ್ಷದ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ನಾಕೂರು ಶಿರಂಗಾಲ ವ್ಯಾಪ್ತಿಯ ಮಳ್ಳೂರು ಗ್ರಾಮದಲ್ಲಿ ಕೊರಗ, ತನಿಯ, ಕೊರಗಜ್ಜ ಮೂರು ದೈವಗಳ ಕೋಲ ನೆರವೇರಿತು. ಭಾನುವಾರ ರಾತ್ರಿ 10 ಗಂಟೆಗೆ ಪ್ರಾರಂಭವಾದ ಕೋಲವು ಇಂದು ಮುಂಜಾನೆಯವರೆಗೆ ನಡೆಯಿತು. ಮಳೂರು, ನಾಕೂರು ಶಿರಂಗಾಲ, 7ನೇ ಹೊಸಕೋಟೆ, ಸುಂಟಿಕೊಪ್ಪ ಸೇರಿದಂತೆ ವಿವಿಧ ಗ್ರಾಮದ ಭಕ್ತಾಧಿಗಳು ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದರು. ನೆರೆದಿದ್ದ ನೂರಾರು ಭಕ್ತರಿಗೆ ಗಂಧ ಪ್ರಸಾದ ವಿತರಿಸಲಾಯಿತು.  

Read More

ಸೋಮವಾರಪೇಟೆ ಏ.10 : ಪಟ್ಟಣದ ಮುಖ್ಯ ರಸ್ತೆಯಿಂದ ಸೋಮೇಶ್ವರ ದೇವಾಲಯದವರೆಗೆ ನಗರೋತ್ಥಾನ ಯೋಜನೆಯಡಿ ಕಾಂಕ್ರೀಟ್ ರಸ್ತೆಯ ಮೇಲೆ ಡಾಂಬರೀಕರಣ ಮಾಡುತ್ತಿದ್ದು, ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಗುಂಡಿಬಿದ್ದ ರಸ್ತೆಯಲ್ಲೇ ರೈತರು ಎರಡು ದಶಕಗಳಿಂದ ಹೆಣಗಾಡುತ್ತಿದ್ದು, ಇಲ್ಲಿಯವರೆಗೆ ರಸ್ತೆಗೆ ಅನುದಾನ ನೀಡಿಲ್ಲ ಎಂದು ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ ಮಾಡುತ್ತಿರುವ ಸಂದರ್ಭ ಪಟ್ಟಣ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ ಮಾಡುತ್ತಿರುವುದು ಹಸ್ಯಸ್ಪದ ಎಂದರು. ನರರೋತ್ಥಾನ ಯೋಜನೆಯಲ್ಲಿ ಪಟ್ಟಣ ಪಂಚಾಯಿತಿಗೆ 2.26ಕೋಟಿ ರೂ. ಹಣ ಬಿಡುಗಡೆಯಾಗಿ 4 ತಿಂಗಳು ಕಳೆದಿದ್ದು, ಚುನಾವಣೆ ಸಂದರ್ಭದಲ್ಲಿ ಕಾಮಗಾರಿ ನಡೆಯುತ್ತಿರುವುದು ಚುನಾವಣಾ ಗಿಮಿಕ್ ಎಂದು ಟೀಕಿಸಿದ್ದಾರೆ. ಕಳೆದ 10 ವರ್ಷಗಳ ಹಿಂದೆ 5ಕೋಟಿ ರೂ.ಗಳ ವೆಚ್ಚದಲ್ಲಿ ಮುಖ್ಯ ರಸ್ತೆ ಸೇರಿದಂತೆ ಕೆಲ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸಲಾಗಿದ್ದು, ಇನ್ನು 10 ವರ್ಷಗಳ ಕಾಲ ಕಾಂಕ್ರೀಟ್ ರಸ್ತೆ ಬಾಳಿಕೆ ಬರುತ್ತಿತ್ತು. ಪ್ರಶ್ನೆ ಮಾಡಬೇಕಾದ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿಪ್ರಾಯ: ಕಾಂಕ್ರೀಟ್…

Read More

ಮಡಿಕೇರಿ ಏ.10 : ವಿರಾಜಪೇಟೆ ತಾಲ್ಲೂಕಿನ ಹಾಲುಗುಂದ ಶ್ರೂ ಬೇಟೆಗಾರ ದೇವಾಲಯದ ಹಬ್ಬವು  ಏ.13 ಮತ್ತು 14 ರಂದು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ‌ ತಿಳಿಸಿದೆ. ಏ.13 ರಂದು ಪಟ್ಟಣಿ ಹಬ್ಬ, ರಾತ್ರಿ 10 ಗಂಟೆಗೆ ಬೊಳ್ಳಾಟ ಜರುಗಲಿದೆ. ಏ.14 ರಂದು ಬೆಳಗಿನ ಜಾವ 5 ಗಂಟೆಗೆ ದೇವರ ಕೋಲ ಹಾಗೂ ಅಪಾಹ್ನ 3 ಗಂಟೆಗೆ ಎತ್ತು ಪೋರಾಟ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಮಡಿಕೇರಿ ಏ.10 : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಸಿ-ವಿಜಿಲ್ ಸಿಟಿಜನ್ ವಿಜಿಲೆನ್ಸ್ ಆ್ಯಪ್‍ನಲ್ಲಿ ಸಾರ್ವಜನಿಕರು, ರಾಜಕೀಯ ಪಕ್ಷಗಳು, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಂಡುಬರುವ ಚುನಾವಣಾ ಅಕ್ರಮಗಳ ಬಗ್ಗೆ ಅಥವಾ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಬಗ್ಗೆ ರಾಜಕೀಯ ಜಾಹಿರಾತು ಪ್ರಕಟ/ ಪ್ರಸಾರ ಸಂಬಂಧ ಅನುಮತಿ/ ದೂರು ಬಗ್ಗೆ ಸಿ-ವಿಜಿಲ್ ಆ್ಯಪ್ ಮೂಲಕ ಮಾಹಿತಿ ನೀಡಬಹುದಾಗಿದೆ ಎಂದು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಶಬನಾ ಎಂ.ಶೇಖ್ ಅವರು ತಿಳಿಸಿದ್ದಾರೆ.

Read More