ಲೇಖಕ: admin

ಮಡಿಕೇರಿ ಏ.10 : ಹಿರಿಯ ನಾಗರಿಕರ ವೇದಿಕೆಯ 2022-23 ನೇ ಸಾಲಿನ ಸಾಮಾನ್ಯ ಸಭೆಯು ಏ.15 ರಂದು ಬೆಳಗ್ಗೆ 10 ಗಂಟೆಗೆ ಕಡಗದಾಳು ರಸ್ತೆಯ ‘ಕ್ಯಾಪಿಟಲ್ ವಿಲೇಜ್’ ನಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕೊಂಗಾಂಡ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ  ತಿಳಿಸಿದ್ದಾರೆ.

Read More

ಮಡಿಕೇರಿ ಏ.10 : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಅಥವಾ ದೂರಿನ ಬಗ್ಗೆ ಕ್ರಮವಹಿಸಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ 24*7 ನಿಯಂತ್ರಣಾ ಕೊಠಡಿ(ದೂರವಾಣಿ ಸಂಖ್ಯೆ 08274-256328) ತೆರೆಯಲಾಗಿದ್ದು, ಚುನಾವಣಾ ಸಂಬಂಧ ಯಾವುದೇ ದೂರುಗಳು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮಾಹಿತಿ ನೀಡಬಹುದಾಗಿದೆ ಎಂದು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಸೋಮವಾರಪೇಟೆ ಏ.10 : ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದಲ್ಲಿ ಐತಿಹಾಸಿಕ ಕೂತಿನಾಡು ಸುಗ್ಗಿ ಉತ್ಸವವು ಸಾವಿರಾರು ಭಕ್ತಾಧಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮದೇವತೆ ಸಬ್ಬಮ್ಮ ದೇವಿಗೆ 18 ಗ್ರಾಮಗಳಲ್ಲಿ 15ದಿನಗಳ ಕಾಲ ವಿಶೇಷ ಪೂಜೆಗಳನ್ನು ಸಲ್ಲಿಸಿದ ಗ್ರಾಮಸ್ಥರು, ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಪ್ರದಕ್ಷಿಣೆ ಹಾಕಿ ಗ್ರಾಮಗಳ ಸುಭೀಕ್ಷೆ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುಮಾರು 800ವರ್ಷಗಳ ಇತಿಹಾಸವಿರುವ ಸುಗ್ಗಿ ಉತ್ಸವದಲ್ಲಿ ಗ್ರಾಮದ ನಿವಾಸಿಗಳು, ಮಹಿಳೆಯರು, ಮಕ್ಕಳು, ಹಿರಿಯರು ಭಾಗವಹಿಸಿ ಇಷ್ಟಾರ್ಥಗಳ ನೆರವೇರಿಕೆಗೆ ಗ್ರಾಮ ದೇವತೆಯನ್ನು ಪ್ರಾರ್ಥಿಸಿದರು. ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗಲಾಯಿತು. ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ದತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಕಡವೆ ಬೇಟೆಯಾಡುವ ಪ್ರಸಂಗ ಅಕರ್ಷಿಸಿತು. ಕೊನೆಯಲ್ಲಿ ಕಡವೆ ಕಾಡು…

Read More

ಮಡಿಕೇರಿ ಏ.10 : ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ನಿವಾಸಿಗಳಿಗೆ ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಕಳೆದ 15 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ ಯಾವುದೇ ಸ್ಪಂದನೆ ನೀಡಿಲ್ಲ. ಆದ್ದರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ನಿವಾಸಿಗಳು ನಿರ್ಧರಿಸಿದ್ದಾರೆ ಎಂದು ಗ್ರಾಮದ ಪ್ರಮುಖ ಪಿ.ಎ.ಧನಂಜಯ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಪಾಲೇಮಾಡಿಗೆ ಭೇಟಿ ನೀಡಿ ಬೇಡಿಕೆಗಳನ್ನು ಈಡೇರಿಸಬೇಕು. ತಪ್ಪಿದಲ್ಲಿ ಏ.13 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದರು. ಕಡು ಬಡವರ ಬೇಡಿಕೆಗಳಿಗೆ ಸ್ಪಂದನೆ ನೀಡದೆ ನಿರ್ಲಕ್ಷಿಸಲಾಗುತ್ತಿದೆ. ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಇಲ್ಲಿನ ನಿವಾಸಿಗಳು ಎಚ್ಚರಿಕೆ ನೀಡಿದರೂ ಯಾವ ಅಧಿಕಾರಿಯೂ ನಮ್ಮ ನೋವನ್ನು ಆಲಿಸುತ್ತಿಲ್ಲ ಎಂದು ಆರೋಪಿಸಿದರು.

Read More

ಮಡಿಕೇರಿ ಏ.10 : ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಬೇಂಗೂರು ಗ್ರಾಮದಲ್ಲಿ ಪ್ರಾಯೋಗಿಕವಾಗಿ ಬಾಣೆ ಜಮೀನುಗಳಿಗೆ ಕಂದಾಯ ನಿಗದಿ ಮಾಡಲು ಸರ್ವೆ ಕಾರ್ಯ ನಡೆಸುವಂತೆ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಹೊರಡಿಸಲಾಗಿರುವ ಆದೇಶಕ್ಕೆ ಸೇವ್ ಕೊಡಗು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಪದಾಧಿಕಾರಿ ಕೆ.ಬಿ.ಬೋಪಣ್ಣ, ಜನರನ್ನು ಕತ್ತಲೆಯಲ್ಲಿಟ್ಟು ಸರ್ವೆ ಕಾರ್ಯ ನಡೆಸಿದರೆ ತಡೆಯೊಡ್ಡುವುದಾಗಿ ಎಚ್ಚರಿಕೆ ನೀಡಿದರು. ಬಾಣೆ ಜಮೀನಿಗೆ ಕಂದಾಯ ನಿಗದಿ ಮಾಡುವ ಕ್ರಮ ಸ್ವಾಗತಾರ್ಹ, ಆದರೆ ಜಿಲ್ಲೆಯ ಜನರಿಗೆ ಯಾವುದೇ ಮಾಹಿತಿಯನ್ನು ನೀಡದೆ ಮತ್ತು ಸರ್ವೆ ಪ್ರಕ್ರಿಯೆ ಬಗ್ಗೆ ವಿವರಿಸದೆ ಏಕಾಏಕಿ ಚುನಾವಣೆ ಸಂದರ್ಭದಲ್ಲಿ ಏ.1 ರಿಂದಲೇ ಸರ್ವೆ ಕಾರ್ಯ ಆರಂಭಿಸಬೇಕೆಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಆದೇಶ ಮಾಡಿರುವುದು ಸರಿಯಲ್ಲ. ಇದರ ಹಿಂದೆ ಡೋಂಗಿ ಪರಿಸರವಾದಿಗಳ ಒತ್ತಡವಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು. ಕಂದಾಯ ಇಲಾಖೆ ಕಂದಾಯ ಅದಾಲತ್ ನಡೆಸುವ ಮೂಲಕ ಕಂದಾಯ ನಿಗದಿ ಮತ್ತು ಸರ್ವೆ ಕಾರ್ಯದ ಬಗ್ಗೆ ಬಾಣೆ ಜಮೀನು ಹೊಂದಿರುವವರಿಗೆ ಸಂಪೂರ್ಣ…

Read More

ಮಡಿಕೇರಿ ಏ.10 : ಯೂಟಗ್ ಆನ್ಲೈನ್ ಡಿಜಿಟಲ್ ನೆಟ್ವರ್ಕ್ ಮಾರ್ಕೆಟಿಂಗ್ ನಲ್ಲಿ ಕೊಡಗಿನ ಐವರು ಬೆಳ್ಳಿ ಹಾಗೂ ಕಂಚಿನ ಸಾಧನೆ ಮಾಡಿದ್ದಾರೆ. ನಾಪೋಕ್ಲುವಿನ ಸೋಮಯ್ಯ ಬೆಳ್ಳಿ ರ‍್ಯಾಂಕ್ ಪಡೆದಿದ್ದು, ಮಡಿಕೇರಿಯ ಸುರೇಶ್, ರಾಧಾ ಮನೋಜ್, ಪ್ರೀತಾ ಕೃಷ್ಣ ಹಾಗೂ ನಾಪೋಕ್ಲುವಿನ ಬೆಳ್ಯಪ್ಪ ಕಂಚಿನ ರ‍್ಯಾಂಕ್ ಪಡೆದಿದ್ದಾರೆ. ಇದೊಂದು ಸ್ವದೇಶೀ ಅಪ್ಲಿಕೇಶನ್ ಆಗಿದ್ದು, ಆನ್ಲೈನ್ ಡಿಜಿಟಲ್ ನೆಟ್ವರ್ಕ್ ಮಾರ್ಕೆಟಿಂಗ್ ಆಗಿದೆ ಎಂದು ಕಂಚಿನ ರ‍್ಯಾಂಕ್ ಪಡೆದ ಪ್ರೀತಾ ಕೃಷ್ಣ ತಿಳಿಸಿದ್ದಾರೆ.

Read More

ಮಡಿಕೇರಿ ಏ.10 : ಸಿರಿಗನ್ನಡ ವೇದಿಕೆ ಕೊಡಗು ಹಾಗೂ ಮಡಿಕೇರಿ ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ವತಿಯಿಂದ ಏ.13 ರಂದು ಪದಾಧಿಕಾರಿಗಳ ಪದಗ್ರಹಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಡೆಯಲಿದೆ. ನಗರದ ಭಾರತೀಯ ವಿದ್ಯಾ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಿರಿಗನ್ನಡ ವೇದಿಕೆ ರಾಜ್ಯ ಸಮಿತಿ ಕಾರ್ಯಾಧ್ಯಕ್ಷರು ಹಾಗೂ ವಿಶ್ವಾಸಿ ಮಂಡಳಿ ಟ್ರಸ್ಟಿ ಡಾ.ಸೌಗಂಧಿಕಾ ವಿ. ಜೋಯಿಸ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಾಹಿತಿ, ನಿರ್ಮಾಪಕರು, ನಟಿ ಹಾಗೂ ಸಿರಿಗನ್ನಡ ವೇದಿಕೆ ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ವಹಿಸಲಿದ್ದಾರೆ. ಅತಿಥಿಗಳಾಗಿ ಸುಳ್ಯ ಕೆ.ವಿ.ಜಿ.ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರು ಹಾಗೂ ನಗರದ ಇ.ಎನ್.ಟಿ. ವರ್ಟಿಗೋ ಕ್ಲಿನಿಕ್‍ನ ಸಮಾಲೋಚಕರಾದ ಡಾ. ಮೋಹನ್ ಅಪ್ಪಾಜಿ ಕೋಲೆಯಂಡ, ವಿರಾಜಪೇಟೆ ತೂಕ್ ಬೊಳಕ್ ಪತ್ರಿಕೆಯ ಸಂಪಾದಕ ಮುಲ್ಲೇಂಗಡ ಮಧೋಷ್ ಪೂವಯ್ಯ, ಶಕ್ತಿ ದಿನಪತ್ರಿಕೆಯ ಹಿರಿಯ ಉಪಸಂಪಾದಕ, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಕುಡೆಕಲ್ ಸಂತೋಷ್ ಪಾಲ್ಗೊಳ್ಳಲಿದ್ದು, ಗೌರವಾಧ್ಯಕ್ಷರಾಗಿ ಅಲ್ಲಾರಂಡ ರಂಗಚಾವಡಿ ಅಧ್ಯಕ್ಷರು ಹಾಗೂ ಕೊಡಗು…

Read More

ಮಡಿಕೇರಿ ಏ.10 : ಅಲ್ಪಸಂಖ್ಯಾತರು ವಾಸವಿರುವ ಪ್ರದೇಶಗಳು ರಾಜಕೀಯ ಪಕ್ಷಗಳ ನಿರ್ಲಕ್ಷ್ಯದಿಂದ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿವೆ ಎಂದು ಆರೋಪಿಸಿರುವ ಹೊದ್ದೂರು ಗ್ರಾ.ಪಂ ಸದಸ್ಯ ಕೆ.ಎಂ.ಮೊಯ್ದು ಕೊಟ್ಟಮುಡಿ, ಸರ್ವಜನರ ಹಿತ ಕಾಯುವುದಕ್ಕಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 70 ವರ್ಷಗಳಿಂದ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಮತ ನೀಡುತ್ತಾ ಬಂದಿದ್ದಾರೆ. ಆದರೆ ಇಲ್ಲಿಯವರೆಗೆ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನವನ್ನು ನೀಡಿಲ್ಲ ಎಂದು ಟೀಕಿಸಿದರು. ಕೊಡಗು ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಯಾವುದೇ ಪಕ್ಷದವರು ವಿಧಾನಸಭೆ ಮತ್ತು ವಿಧಾನ ಪರಿಷತ್ ಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಲ್ಲ. ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನವನ್ನು ಕೂಡ ನೀಡಿಲ್ಲ. ಅಲ್ಪಸಂಖ್ಯಾತರು ವಾಸವಿರುವ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆಸಕ್ತಿ ತೋರಿಲ್ಲ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 45 ಸಾವಿರಕ್ಕೂ ಅಧಿಕ ಮತದಾರರು ಅಲ್ಪಸಂಖ್ಯಾತರೇ ಆಗಿದ್ದಾರೆ. ಆದರೆ ಯಾವ ರಾಜಕೀಯ ಪಕ್ಷದಿಂದಲೂ ಯಾವುದೇ ರೀತಿಯ ಲಾಭವಾಗಿಲ್ಲ. ಆದ್ದರಿಂದ ಎಲ್ಲಾ ಸಮುದಾಯದವರ ಅಭಿಪ್ರಾಯ ಮತ್ತು ಬೆಂಬಲ…

Read More

ಮಡಿಕೇರಿ ಏ.10 :  ಆಟೋಟಗಳು ಅನೇಕ ರೀತಿಯಲ್ಲಿ ಜೀವನ ಪಾಠಗಳನ್ನು ಕಲಿಸುವುದರಿಂದಾಗಿ ಪ್ರತೀಯೋವ೯ರೂ ಕ್ರೀಡಾಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಕೂಡಿಗೆ ಕ್ರೀಡಾಶಾಲೆಯ ನಿವೃತ್ತ ಪ್ರಾಂಶುಪಾಲೆ ಕುಂತಿಬೋಪಯ್ಯ ಕರೆ ನೀಡಿದ್ದಾರೆ. ವಿರಾಜಪೇಟೆ ಬಳಿಯ ಅರಮೇರಿ ಕಳಂಚೇರಿ ಮಠದ ಶ್ರೀ ಲಿಂಗರಾಜೇಂದ್ರ ಪ್ರಸಾದ ಭವನದಲ್ಲಿ ಆಯೋಜಿತ 209 ನೇ ಹೊಂಬೆಳಕು ತತ್ವ ಚಿಂತನಾಗೋಷ್ಟಿ ಕಾಯ೯ಕ್ರಮದಲ್ಲಿ ಕುಂತಿಟೀಚರ್ ಸಾಕ್ಷ್ಯ ಚಿತ್ರ ಪ್ರದಶ೯ನ ಕಾಯ೯ಕ್ರಮದಲ್ಲಿ ಮಾತನಾಡಿದ ಅವರು. ಕ್ರೀಡೆಯಂತೆ ಜೀವನದಲ್ಲಿ ಕೂಡ ಎದುರಾಗುವ ಸೋಲು ಗೆಲವುಗಳನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ಇಂಥ ಮನೋಭಾವನೆಯನ್ನು ಜೀವನದಲ್ಲಿ ಕ್ರೀಡೆ ಕಲಿಸುತ್ತದೆ. ಆಧುನಿಕ ಯುಗದಲ್ಲಿ ಮೊಬೈಲ್ ಆಟದತ್ತಲೇ ಮಕ್ಕಳು ಹೆಚ್ಚಿನ ಆಸಕ್ತಿತೋರುತ್ತಿದ್ದಾರೆ. ಹೀಗಾಗಿ ಮಾನಸಿಕವಾಗಿಯೂ, ದೈಹಿಕವಾಗಿಯೂ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ ಎಂದು ಕುಂತಿ ಕಳವಳ ವ್ಯಕ್ತಪಡಿಸಿದರು. ವಿದ್ಯಾಥಿ೯ಗಳ .ಸವ೯ತೋಮುಖ ಬೆಳವಣಿಗೆಗೆ ಕ್ರೀಡೆ ಅತ್ಯಂತ ಅಗತ್ಯ . ಮಾನಸಿಕ ಉಲ್ಲಾಸಕ್ಕೆ ಕ್ರೀಡೆ ಸಹಕಾರಿ. ಜತೆಗೆ ಕ್ರೀಡೆ ವ್ಯಕ್ತಿಯ ಮನೋಸ್ಥೆಯ೯ದೊಂದಿಗೆ ಉತ್ಸಾಹವನ್ನೂ ಹೆಚ್ಚಿಸುವುದಲ್ಲದೇ ಸಂಘಟನಾ ಚಾತುಯ೯ಕ್ಕೂ ಕಾರಣವಾಗಿದೆ. ಎಂದು ಕ್ರೀಡೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.…

Read More

ಮಡಿಕೇರಿ ಏ.10 :  ವಿದ್ಯಾರ್ಥಿಗಳು ಸಾರ್ವಜನಿಕ ಸಭೆ ಮತ್ತು ವೇದಿಕೆಗಳಲ್ಲಿ ಮುಕ್ತವಾಗಿ ಮಾತನಾಡುವ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಡಾ. ಕೆ.ಸಿ.ದಯಾನಂದ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ಉದ್ಯೋಗ ಕೋಶ ಸಮಿತಿ ಹಾಗೂ ಜೆಸಿಐ ಪೊನ್ನಂಪೇಟೆ ನಿಸರ್ಗ ಇವರ ಸಂಯುಕ್ತ ಆಶ್ರಯದಲ್ಲಿ  ನಡೆದ ಪರಿಣಾಮಕಾರಿ ಭಾಷಣ ಕಲೆ ಮತ್ತು ಸಂಸತ್ತಿನ ನಡವಳಿ ಕುರಿತ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವದ ಗುಣ ಮತ್ತು ಪ್ರತಿಭಟಿಸುವ ಮನೋಭಾವವನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕೆಂದು ತಿಳಿಸಿದರು.  ಪ್ರಸಕ್ತ ರಾಜಕೀಯದ ಕುರಿತು ಜ್ಞಾನ ಪಡೆದುಕೊಂಡು ಸಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜೆ ಸಿ ಐ ಪೊನ್ನಂಪೇಟೆ ನಿಸರ್ಗದ ಅಧ್ಯಕ್ಷರಾದ ನೀತ್ ಅಯ್ಯಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಸಮಾಜದ ಕಲ್ಯಾಣಕ್ಕಾಗಿ ನಮ್ಮ ಸಂಸ್ಥೆಯು ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ರಾಷ್ಟ್ರದ ಏಳಿಗೆಗೆ ನಿರಂತರವಾಗಿ ಶ್ರಮಿಸುತ್ತಿದೆ. ಸಮಾಜ ಸೇವೆಯೇ ನಮ್ಮ…

Read More