ವಿರಾಜಪೇಟೆ ಮೇ 20 : ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ವಿರಾಜಪೇಟೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರದ ಗಡಿಯಾರ ಕಂಬ ಹಾಗೂ ಖಾಸಗಿ ಬಸ್ಸು ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಈ ಸಂದರ್ಭ ವಿರಾಜಪೇಟೆ ಪುರಸಭೆ ಸದಸ್ಯ ಡಿ.ಪಿ.ರಾಜೇಶ್ ಮಾತನಾಡಿ, ಸಿದ್ದರಾಮಯ್ಯ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ನಮ್ಮ ನಾಯಕರಾಗಿದ್ದು, ಇಬ್ಬರು ಜೋಡೆತ್ತುಗಳಂತೆ ಸರ್ಕಾರನ್ನು ಮುನ್ನಡೆಸಿ ಕಾಂಗ್ರೆಸ್ ಪಕ್ಷದ 5 ಪ್ರಮುಖ ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯಲಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಆರ್.ಕೆ.ಸಲಾಂ, ವಿರಾಜಪೇಟೆ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಪೊನ್ನಕ್ಕಿ ಇದೇ ಸಂದರ್ಭ ಮಾತನಾಡಿದರು. ಪುರಸಭೆ ಸದಸ್ಯ ಸಿ.ಕೆ.ಪೃಥ್ವಿನಾಥ್, ನಗರ ಘಟಕದ ಮಾಜಿ ಅಧ್ಯಕ್ಷ ಜಿ.ಜಿ. ಮೋಹನ್, ಡಿ.ಸಿ.ದ್ರುವ ಕುಮಾರ್, ಮಾಳೇಟಿರ…
ಲೇಖಕ: admin
ಚೆಟ್ಟಳ್ಳಿ ಮೇ 20 : ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಸುಸಜ್ಜಿತವಾಗಿ ನವೀಕರಿಸಿದ ವರಕ್ಕಲ್ ಸಮಸ್ತ ಭವನ ಹಾಗೂ ಖಾಝಿ ಹೌಸ್ ಉದ್ಘಾಟನಾ ಸಮಾರಂಭ ಮೇ 21 ರಂದು ಸಿದ್ದಾಪುರದಲ್ಲಿ ನಡೆಯಲಿದ್ದು,ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ತಮ್ಲೀಕ್ ದಾರಿಮಿ ಕರೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಕೊಡಗು ಖಾಝಿ ಸಯ್ಯಿದ್ ಮುಹಮ್ಮದ್ ಕೋಯ ತಂಙಳ್ ಜಮಲುಲ್ಲೈಲಿ ಹಾಗೂ ಕೊಡಗು ಉಪ ಖಾಝಿ ಶೈಖುನಾ ಎಂ. ಎಂ ಅಬ್ದುಲ್ಲಾ ಫೈಝಿ, ಅಬ್ದುಲ್ ರಹ್ಮಾನ್ ಮುಸ್ಲಿಯಾರ್, ಬಶೀರ್ ಹಾಜಿ ಹೀಗೆ ಸಮಸ್ತದ ಹಲವು ಉಲಮಾ, ಉಮರಾ ನೇತಾರರು ಭಾಗವಹಿಸಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಸ್.ಕೆ.ಎಸ್.ಎಸ್.ಎಫ್ ಕೊಡಗು ಜಿಲ್ಲಾ ಸಮಿತಿ ತಿಳಿಸಿದೆ.
ಸುಂಟಿಕೊಪ್ಪ ಮೇ 20 : ಬ್ಲೂಬಾಯ್ಸ್ ಯೂತ್ ಕ್ಲಬ್ ವತಿಯಿಂದ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ 25ನೇ ವರ್ಷದ ಡಿ.ಶಿವಪ್ಪ ಸ್ಮಾರಕ ರಾಜ್ಯ ಮಟ್ಟದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ದೊರೆಯಿತು. ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರೀಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಧ್ವಜಾರೋಹಣ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಬ್ಲೂ ಬಾಯ್ಸ್ ಯೂತ್ ಕ್ಲಬ್ ಮತ್ತು ಪನ್ಯ ಎಫ್.ಸಿ. ಪನ್ಯ ತಂಡಗಳ ನಡುವಿನ ಪಂದ್ಯಾವಳಿಯನ್ನು ಚೆಂಡು ಹೊದೆಯುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಸುಂಟಿಕೊಪ್ಪ ಪಿಎಸ್ಐ ಶ್ರೀಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಸದಸ್ಯರಾದ ರಫೀಕ್ ಖಾನ್, ಪಿ.ಎಫ್.ಸಭಾಸ್ಟೀನ್, ಶಬೀರ್, ವಸಂತಿ, ಶಾಂತಿ, ಬ್ಲೂ ಬಾಯ್ಸ್ ಯುವಕ ಸಂಘದ ಸ್ಥಾಪಕಾಧ್ಯಕ್ಷ ಜೆರ್ಮಿ ಡಿಸೋಜ,ಅಧ್ಯಕ್ಷ ಆಲಿಕುಟ್ಟಿ, ಹಿರಿಯ ಆಟಗಾರರಾದ ಕೆ.ಪಿ.ಜಗನ್ನಾಥ್, ಪ್ಯಾಟ್ರಿಕ್, ಎನ್.ಎಸ್.ದೇವಪ್ಪ, ಶುಂಠಿ ರಾಮಣ್ಣ, ಎನ್.ಎಸ್.ಸೋಮಣ್ಣ, ಆದಿಶೇಷ, ಬೆಟ್ಟಗೇರಿ ತೋಟದ ವ್ಯವಸ್ಥಾಪಕ ಚಂಗಪ್ಪ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಪಂದ್ಯಾವಳಿಯ ಸಂಚಾಲಕ ಟಿ.ವಿ. ಪ್ರಸನ್ನ ಹಾಜರಿದ್ದರು.…
ಮಡಿಕೇರಿ ಮೇ 20 : ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಸಚಿವರುಗಳ ಪದಗ್ರಹಣ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ನಡೆಯಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಕೆ.ಯು.ಅಬ್ದುಲ್ ರಜಾಕ್, ಪ್ರಕಾಶ್ ಆಚಾರ್ಯ, ಚುಮ್ಮಿದೇವಯ್ಯ, ಕಲೀಲ್ ಬಾಷ, ಜುಲೇಕಾಬಿ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಿ.ಎನ್.ಪ್ರತ್ಯು, ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಎಸ್.ಸಿ.ಘಟಕದ ನಗರಾಧ್ಯಕ್ಷ ಮುದ್ದುರಾಜ್, ಮಹಿಳಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ಪ್ರಭುರೈ, ಸದಾಮುದ್ದಪ್ಪ, ಯಾಕುಬ್, ಮುತ್ತು ಬೇಗಂ, ಬಿ.ಗಣೇಶ್, ಗೀತಾ ಸೇರಿದಂತೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.
ಬೆಂಗಳೂರು ಮೇ 20 : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ 8 ಸಚಿವರ ವಿವರ ಎಂ. ಬಿ. ಪಾಟೀಲ್ ಡಾ. ಜಿ. ಪರಮೇಶ್ವರ್ ಪ್ರಿಯಾಂಕ ಖರ್ಗೆ ಕೆ.ಎಚ್. ಮುನಿಯಪ್ಪ ಕೆ. ಜೆ. ಜಾರ್ಜ್ ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಖಾನ್ ರಾಮಲಿಂಗಾ ರೆಡ್ಡಿ
ಮಡಿಕೇರಿ ಮೇ 20 : ನಿವೃತ್ತ ಸಬ್ ಇನ್ಸ್ಪೆಕ್ಟರ್ ಬೊಳ್ಳಜಿರ ಬೋಪಯ್ಯ ಹಾಗೂ ಯಶೋಧ ಬೋಪಯ್ಯ (ತಾಮನೆ : ಅಜ್ಜಮಾಡ) ಇದೀಗ ಬಿಟ್ಟಂಗಾಲದಲ್ಲಿ ವಾಸವಿರುವ ದಂಪತಿಗಳ ಪ್ರಥಮ ಪುತ್ರನಾದ ಬೊಳ್ಳಜಿರ ಬಿ. ಅಯ್ಯಪ್ಪ (40 ವರ್ಷ) ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಬಿ.ಕಾಂ (ಸಿ.ಎ) ಪದವಿ ಪಡೆದಿದ್ದಾರೆ. ಇದೀಗ ಅದೇ ಕಾಲೇಜಿನಲ್ಲಿ ಎಂ.ಎ. (ಕೊಡವ) ವ್ಯಾಸಾಂಗ ಮಾಡುತ್ತಿದ್ದಾರೆ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಮನ್ನೇರ ನಂಜಪ್ಪ ಹಾಗೂ ರಾಣಿ ನಂಜಪ್ಪ (ತಾಮನೆ: ಅಪ್ಪಾರಂಡ) ದಂಪತಿಗಳ ನಾಲ್ಕನೇ ಮಗಳು ಯಮುನಾಳನ್ನು ವಿವಾಹವಾದ ಇವರಿಗೆ ದೇಚಮ್ಮ ಮತ್ತು ಬೋಪಣ್ಣ ಎಂಬ ಇಬ್ಬರು ಮಕ್ಕಳಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿಯೇ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಬೊಳ್ಳಜಿರ ಬಿ. ಅಯ್ಯಪ್ಪ ಎನ್. ಸಿ. ಸಿ ಯಲ್ಲಿ ಉತ್ತಮ ಸಾಧನೆ ಮಾಡಿರುತ್ತಾರೆ. ಸೈನ್ಯಕ್ಕೆ ಸೇರುವುದು ಇವರ ಕನಸಾಗಿತ್ತದರೂ ಕಾರಣಾಂತರಗಳಿಂದ ಅದು ಫಲಿಸಲಿಲ್ಲ. ಮುಂದೆ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದಾರೆ. ಉತ್ತಮ ನಡವಳಿಕೆ…
ಕೊಡ್ಲಿಪೇಟೆ ಮೇ 20 : ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಹಾಗೂ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಜಮಾಅತ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್ಕೆಎಸ್ಎಸ್ಎಫ್ ಹಾಗೂ ಎಸ್ವೈಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಬಹುಮಾನ ವಿತರಿಸಲಾಯಿತು. ಕೊಡ್ಲಿಪೇಟೆ ಸಮೀಪದ ನೂರ್ ಮಹಲ್ ನಲ್ಲಿ ಆಯೋಜಿಸಿದ ಮಾಸಿಕ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫಾತಿಮತ್ ಸಫ್ನಾ ಪ್ರಥಮ ಹಾಗೂ ಸನಾ ದ್ವಿತೀಯ ಮತ್ತು ದ್ವಿತೀಯ ಪಿಯುಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಸಫಾ ಹಾಗೂ ಕಲಾ ವಿಭಾಗದಲ್ಲಿ ನಫೀಸತ್ ನಾಫಿಯಾ ಅವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಜಲ್ಲಿಯಾತ್ ಮದರಸ ಮುಖ್ಯೋಪಾಧ್ಯಾಯ ರಝಾಕ್ ಫೈಝಿ, ಸಮದ್ ಫೈಝಿ, ಮಸ್ಜಿದುನ್ನೂರ್ ಅಧ್ಯಕ್ಷ ಸುಲೈಮಾನ್, ಪ್ರಧಾನ ಕಾರ್ಯದರ್ಶಿ ಹಾಗೂ ಗ್ರಾ.ಪಂ ಸದಸ್ಯ ಹನೀಫ್, ಎಸ್ಕೆಎಸ್ಎಸ್ಎಫ್ ಕೊಡಗು ಜಿಲ್ಲಾ ಕೋಶಾಧಿಕಾರಿ ಸಿದ್ದೀಕ್ ಹಾಜಿ, ಎಸ್ವೈಎಸ್ ಕೊಡ್ಲಿಪೇಟೆ ಶಾಖಾಧ್ಯಕ್ಷ ಇಬ್ರಾಹಿಂ, ಎಸ್ಕೆಎಸ್ಎಸ್ಎಫ್ ಅಧ್ಯಕ್ಷ ಬಾಸಿತ್ ಹಾಜಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಝಹೀರ್ ನಿಝಾಮಿ ನಿರೂಪಿಸಿದರು.
ಮಡಿಕೇರಿ ಮೇ 20 : ಬೆಂಗಳೂರಿನ ಕೈವಲ್ಯ ಕಲಾ ಕೇಂದ್ರದಿಂದ ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಇಂದು (ಮೇ 20) ರಂದು ಮಾಧವಿ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 7 ಗಂಟೆಯಿಂದ 65 ನಿಮಿಷಗಳ ಕಾಲ ನಡೆಯಲಿರುವ ನಾಟಕವನ್ನು ಸುಧಾ ಅಡುಕಳ ಇವರು ರಚಿಸಿದ್ದು ಡಾ ಶ್ರೀಪಾದ ಭಟ್ಟ್ ನಿರ್ದೇಸಿರುತ್ತಾರೆ. ಈ ನಾಟಕದಲ್ಲಿ ಇಬ್ಬರು ಕಲವಿದರಾದ ಮಾಚಂಗಡ ಶರತ್ ಬೋಪಣ್ಣ ಮತ್ತು ದಿವ್ಯಶ್ರೀ ನಾಯಕ್ ಸುಳ್ಯ ಅಭಿನಯಿಸಿದ್ದಾರೆ. ಬೆಳಕು ಮತ್ತು ನಾಟಕದ ಸಹ ನಿರ್ದೇಶನವನ್ನು ಗಣೇಶ್. ಎಮ್. ಭೀಮನಕೋಣೆ ನಿರ್ವಹಿಸಿದ್ದಾರೆ. “ಹಾಡುತ್ತದೆ ಪಂಜರದ ಹಕ್ಕಿ ಭಯ ಕಂಪಿತ ದನಿಯಲ್ಲಿ ತಿಳಿಯದ ಲೋಕದ ಬಗೆಗೆ ಹಂಬಲಿಸುವ ಲೋಕದ ಬಗೆಗೆ, ಕೇಳುತ್ತದೆ ಅದರ ದನಿ ದೂರದ ಬೆಟ್ಟಕ್ಕೆ ಯಾಕೆಂದರೆ ಅದರ ಹಾಡು ಬಿಡುಗಡೆಯ ಪಾಡು” ಜ.ನ.ತೇಜಶ್ರೀ ಅನುವಾದಿಸಿದ ಮಾಯಾ ಏಂಜಲೋ ಅವರ ಕವನದ ಸಾಲುಗಳಿವು. ಬಿಡುಗಡೆಯ ಪಾಡನ್ನು ಹಾಡುವ ಯಾರದೇ ದನಿಯಿರಲಿ ಅದು ದೂರದ ಬೆಟ್ಟಕ್ಕೂ ಕೇಳಿಸಲೇ ಬೇಕು.…
ಕಡಂಗ ಮೇ 20 : ಕಳೆದ ವಾರ ಸುರಿದ ಬಾರಿ ಗಾಳಿ ಮಳೆಯಿಂದ ಕಾಕೋಟು ಪರಂಬು ಗ್ರಾ.ಪಂ ವ್ಯಾಪ್ತಿಯ ಕಲ್ಲು ಮೊಟ್ಟೆ ವಿರಾಜಪೇಟೆ ಕಡಂಗ ಮುಖ್ಯ ರಸ್ತೆಯಲ್ಲಿ ಬಿದ್ದಿದ್ದ ಭಾರೀ ಗಾತ್ರದ ಮರದ ತಂಡುಗಳು ರಸ್ತೆಬದಿಯಲ್ಲಿ ಬಿದ್ದಿದ್ದು, ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು. ಇದನ್ನು ಮನಗಂಡ ಕಡಂಗ ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸದಸ್ಯರು ಅಲ್ಲಿದ್ದ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಮತಗಳ ತುಂಡುಗಳ ತೆರವಿಗೆ ಸಂಬಂಧಪಟ್ಟ ಅಧಿಕಾರಿಗಳೂ ಮತ್ತು ಕಾಕೊಟು ಗ್ರಾ.ಪಂ ಮಾಹಿತಿ ನೀಡಿದರೂ ಯಾವುದೇ ಸ್ಪಂದನೆ ದೊರೆಯದ ಕಾರಣ ಕಡಂಗ ಎಸ್ ವೈ ಎಸ್, ಎಸ್ ಕೆ ಎಸ್ ಎಸ್ ಎಫ್ ಸದಸ್ಯರೇ ತೆರವುಗೊಳಿಸಿರು. ಇವರ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಸದಸ್ಯರಾದ ಜಮಾತ್ ಅಧ್ಯಕ್ಷ ಅಬ್ದುಲ್ಲ ಝಕರಿಯ, ಇರ್ಶಾದ್ ಇಸಾಕ್, ಸಿಯಬ್ ,ಸಿದ್ದಿಕ್, ರಜಾಕ್ ಹಾರಿಸ್ ಮುಂತಾದವರು ಹಾಜರಿದ್ದರು. ವರದಿ : ನೌಫಲ್ ಕಡಂಗ
ನಾಪೋಕ್ಲು ಮೇ 20 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಆಯೋಜಿಸಲಾದ 23ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರ ಪ್ರಾಂಶುಪಾಲೆ ಡಾ. ಅವನಿಜ ಸೋಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅಕಾಡೆಮಿಯ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ, ಈ ವರ್ಷದ ಬೇಸಿಗೆ ಶಿಬಿರದ ತರಬೇತಿಯಲ್ಲಿ 80 ಮಕ್ಕಳು ಭಾಗವಹಿಸಿದ್ದು, ಸುಮಾರು ಒಂದು ತಿಂಗಳಕಾಲ ಹಾಕಿ ಸೇರಿದಂತೆ ವಿವಿಧ ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳ ತರಬೇತಿಯನ್ನು ಶಿಬಿರಾರ್ಥಿಗಳಿಗೆ ನೀಡಲಾಗಿದೆ. ಶಿಬಿರಲ್ಲಿ ಭಾಗವಹಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಲಿದೆ. ನಮ್ಮಲ್ಲಿ ಈ ಹಿಂದೆ ತರಬೇತಿ ಪಡೆದ ಅನೇಕ ಶಿಬಿರಾರ್ಥಿಗಳು ಉತ್ತಮ ಸ್ಥಾನ ಮಾನವನ್ನು ಅಲಂಕರಿಸಿದ್ದು, ಅಕಾಡೆಮಿಗೆ ಗೌರವ ತಂದಂತಾಗಿದೆ ಎಂದರು. ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಕುಂದ್ಯೋಳಂಡ ಗಣೇಶ್ ಮುತ್ತಪ್ಪ ಮಾತನಾಡಿ, ಮಕ್ಕಳು ಜೀವನದಲ್ಲಿ ಸದ್ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಯಾಗಿ…






