ಲೇಖಕ: admin

ಮಡಿಕೇರಿ ಏ.10 : ಅಮ್ಮತ್ತಿ ಗುಡ್ ಶಫರ್ಡ್ ಸಂಯುಕ್ತ ಪದವಿ ಪೂರ್ವ ಶಾಲೆಯ ಗೈಡ್ಸ್ ವಿದ್ಯಾರ್ಥಿನಿಯರಾದ ಎ.ಡಿ.ಪೊನ್ನಮ್ಮ ಹಾಗೂ ಎಂ.ಎ.ಮಧುಮಿತ ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕರ್ನಾಟಕ ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ರಾಜ್ಯ ಭವನದಲ್ಲಿ ನಡೆದ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು. ಎ.ಡಿ.ಪೊನ್ನಮ್ಮ ಹಾಗೂ ಎಂ.ಎ.ಮಧುಮಿತ ಗೆ ಶಾಲೆಯ ಗೈಡ್ಸ್ ಕ್ಯಾಪ್ಟನ್ ಮೇರಿ ರೊಜಾರಿಯೋ, ಸ್ಕೌಟ್ ಮಾಸ್ಟರ್ ಗಣೇಶ್ ಹಾಗೂ ಮುಖ್ಯ ಶಿಕ್ಷಕಿ ಸಿಸ್ಟರ್ ಜೆಸ್ಸಿ ಜೋಸೆಫ್ ಮಾರ್ಗದರ್ಶನ ನೀಡಿರುತ್ತಾರೆ. ಶಾಲಾ ವ್ಯವಸ್ಥಾಪಕರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

Read More

ಮಡಿಕೇರಿ ಏ.10 :  ಚೇರಂಬಾಣೆಯ ಬೇಂಗೂರು ಗ್ರಾಮದ ಇಂದಂಡ ಒಕ್ಕದ ಐದು ವರ್ಷಕೊಮ್ಮೆ ನಡೆಯುವ ಅಂಜಿ ಕೂಟ್ ಮೂರ್ತಿ ಗುರುಕಾರೋಣ ಕೋಲವು ಶ್ರದ್ಧಾಭಕ್ತಿಯಿಂದ ಜರುಗಿತು. ರಾತ್ರಿ ಅಂಜಿಕೊಟ್ ಮೂರ್ತಿಗಳಾದ, ಧರ್ಮದೇವತೆ, ಪಂಜುರುಳಿ ಪಾಸಾಣ ಮೂರ್ತಿ, ಅಂಗಾರ ಮತ್ತು ಗುಳಿಗ ಕೋಲಗಳು ನಡೆದು ಅಲ್ಲಿ ನೆರೆದಿದ್ದ ಗ್ರಾಮದ ಜನರನ್ನು ವಿಶೇಷ ಭಕ್ತಿಭಾವದಲ್ಲಿ ಮುಳುಗುವಂತೆ ಮಾಡಿತು. ಮಾರನೆಯ ದಿನ ಬೆಳಿಗ್ಗೆ ಒಕ್ಕದ ಗುರುಕಾರೋಣ ಕೋಲವು ನಡೆದು  ನೆರೆದಿದ್ದ ಕುಟುಂಬಸ್ಥರಿಗೆ ಅನುವಾದ ನೀಡಲಾಯಿತು. ಕೊಡಗಿನ ಬಿಳಿಗೇರಿ, ವಿರಾಜಪೇಟೆ, ನಾಪೋಕ್ಲು ಭಾಗಗಳಿಂದ ಆಗಮಿಸಿದ್ದ ಪಾತ್ರಿಗಳು  ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಇಂದಂಡ ಪೂವಯ್ಯ, ಕುಟುಂಬ ಪೂಜಾರಿಯಾದ ಇಂದಂಡ ಪ್ರವೀಣ್, ಇಂದಂಡ ಚಿಮ್ಮಣ್ಣ ದೇವಯ್ಯ, ಮತ್ತು ಕುಟುಂಬ ಅಧ್ಯಕ್ಷರಾದ ಇಂದಂಡ ಗಣೇಶ್ ಹಾಜರಿದ್ದರು.

Read More

ಸುಂಟಿಕೊಪ್ಪ ಏ.10 : ಯೇಸುಕ್ರಿಸ್ತರ ಪುನರುತ್ಥಾನದ ಪಾಸ್ಕಕಾಲದ (ಈಸ್ಟರ್) ಹಬ್ಬವನ್ನು ಸುಂಟಿಕೊಪ್ಪ ದೇವಾಲಯದ ವತಿಯಿಂದ ಸಂತ ಮೇರಿ ಶಾಲಾವರಣದಲ್ಲಿ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಸಂತಮೇರಿ ಸಂಭಾಗಣದಲ್ಲಿ ಯೇಸು ಕ್ರಿಸ್ತರು ಮಾನವರ ಪಾಪಕ್ಕಾಗಿ ಶಿಲುಬೆಯ ಮರದಲ್ಲಿ ಮರಣವನ್ನಾಪ್ಪಿದ್ದು, 3ನೇ ದಿನ ಸಮಾಧಿಯಿಂದ ಪುನರುತ್ಥಾನಗೊಂಡಿರುವುದನ್ನು ಕ್ರೈಸ್ತರು ಭಾಂದವರು ಪಾಸ್ಕ ಕಾಲದ (ಈಸ್ಟರ್) ಹಬ್ಬವನ್ನು ಆಚರಿಸುವುದು ವಾಡಿಕೆಯಾಗಿದೆ. ಸಂತ ಮೇರಿ ಶಾಲಾವರಣದಲ್ಲಿ ಮೈಸೂರು ಕೇತ್ರದ ಕೋಶಾಧಿಕಾರಿ ರೇ. ಫಾ. ಜೇಮ್ಸ್ ಡೊಮಿನಿಕ್ ಸಂತ ದೇವಾಲಯದ ಧರ್ಮಗುರುಗಳಾದ ಪಾಧರ್ ಅರುಳ್ ಸೇಲ್ವಕುಮಾರ್ ಅವರು ನೂತನ ಬೆಂಕಿಯನ್ನು ಆರ್ಶಿವಚಿಸಿ, ಜೇನುಮೇಣದಿಂದ ತಯಾರಿಸಲಾದ ದೊಡ್ಡ ಮೊಂಬತ್ತಿಯನ್ನು ಆರ್ಶಿವಚಿಸಿ ಸಂತ ಮೇರಿ ಶಾಲಾವರಣದಿಂದ ಅದನ್ನು ಬೆಳಗಿಸಿಕೊಂಡು ಭಕ್ತಾಧಿಗಳೊಂದಿಗೆ ಮೆರವಣಿಗೆಯೊಂದಿಗೆ ಪೀಠದಲ್ಲಿ ತಂದು ಗುರುಗಳು ಪ್ರತಿಷ್ಠಾಪಿಸಿದರು. ನಂತರ ಪ್ರಾರ್ಥನಾ ಕೂಟ ಹಾಗೂ ಆಡಂಬರ ದಿವ್ಯ ಬಲಿಪೂಜೆ ನಡೆಯಿತು. ಇದೇ ಸಂದರ್ಭ ಪ್ರಭು ಕ್ರಿಸ್ತರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಬಲಿಪೂಜೆಯನ್ನು ಸಮರ್ಪಿಸಿದರು. ಚಾಲ್ರ್ಸ್ ಸಂತ ಕ್ಲಾರ ಕನ್ಯಾಸ್ತ್ರೀ ಕಾನ್ವೆಂಟಿನ ಕನ್ಯಾಸ್ತ್ರೀಯರು,…

Read More

ಮಡಿಕೇರಿ ಏ.10 :  ಕಾರು ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ  ಸೀಗೆತೋಡುವಿನಲ್ಲಿ ನಡೆದಿದೆ. ತಿರುಪತಿಯಿಂದ ಗೋಣಿಕೊಪ್ಪಲು ಮಾರ್ಗವಾಗಿ ಮೂರ್ನಾಡುವಿಗೆ ತೆರಳುತ್ತಿದ್ದ ಕಾರಿಗೆ ಪಿರಿಯಾಪಟ್ಟಣದಿಂದ ಗೋಣಿಕೊಪ್ಪಲಿಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡಿದೆ. ಅದೃಷ್ಟವಶಾತ್  ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ . ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಡಿಕೇರಿ ಏ.9 : ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾ ನಡೆಸಿರುವ 5, 7, 10 ಹಾಗೂ 12ನೇ ತರಗತಿಗಳ ಪಬ್ಲಿಕ್ ಪರೀಕ್ಷೆಯಲ್ಲಿ ಜಿಲ್ಲೆಯ 2800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಮಟ್ಟದ RANK ಪಟ್ಟಿ ಈ ಕೆಳಗಿನಂತಿದೆ. 12ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಪಾಲಿಬೆಟ್ಟ ಮದ್’ರಸ ವಿದ್ಯಾರ್ಥಿನಿಗಳಾದ ಇರ್ಫಾನ ಹಾಗೂ ರಿಝ್ವಾನಾ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದರೆ ಫಾರಿಸಾ ಆಝಾದ್ ನಗರ ತೃತೀಯ ಸ್ಥಾನವನ್ನು ಪಡೆದರು. 10ನೇ ತರಗತಿಯಲ್ಲಿ ಫರೀದಾ ಕುಂಜಿಲ ಪ್ರಥಮ ಸ್ಥಾನ ಗಳಿಸಿದರೆ ನಾಪೋಕ್ಲುವಿನ ಝಿಯಾ ಝೈನಬ ಹಾಗೂ ಅಮ್ಮತ್ತಿಯ ಮುಹಮ್ಮದ್ ಅಜ್’ನಾಸ್ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದುಕೊಂಡರು. ಏಳನೇ ತರಗತಿಯಲ್ಲಿ ರಿಶಾನಾ ಪಾಲಿಬೆಟ್ಟ ಹಾಗೂ ಫಾತಿಮಾ ಐಫಾ ಆಝಾದ್ ನಗರ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದರೆ ಮೂರ್ನಾಡುವಿನ ಹಬೀಬ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಐದನೇ ತರಗತಿಯಲ್ಲಿ 7ನೇ ಹೊಸಕೋಟೆಯ ಇಝಾನ್ ಫೆಬಿನ್ ಪ್ರಥಮ ಸ್ಥಾನವನ್ನು ಪಡೆದರೆ ಮುಹಮ್ಮದ್ ಆಶಿಖ್…

Read More

ಸೋಮವಾರಪೇಟೆ ಏ.9 : ಕಳೆದ ಒಂದೂವರೆ ದಶಕಗಳಿಂದ ಗ್ರಾಮದ ರಸ್ತೆಗೆ ಅನುದಾನ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಿ ಸುಳಿಮಳ್ತೆ ಗ್ರಾಮಸ್ಥರು ಮುಂಬರುವ ವಿಧಾನಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ್ದಾರೆ. ಗ್ರಾಮದಲ್ಲಿ ಸಭೆ ನಡೆಸಿದ ಗ್ರಾಮಸ್ಥರು, ತೀರ್ಮಾನ ತೆಗದುಕೊಂಡು ಗ್ರಾಮದ ಮುಖ್ಯರಸ್ತೆಗೆ ಮತದಾನ ಬಹಿಷ್ಕಾರದ ಬ್ಯಾನರ್ ಕಟ್ಟಿದ್ದರು. ಹೊನವಳ್ಳಿ ಜಂಕ್ಷನ್‌ನಿಂದ ಸುಳಿಮಳ್ತೆ ಮಾರ್ಗವಾಗಿ ದೊಡ್ಡಮಳ್ತೆ ಹೊನ್ನಮ್ಮನ ಕೆರೆ ಜಂಕ್ಷನ್ ತನಕ ರಸ್ತೆ ಕಾಮಗಾರಿಗೆ ಅನುದಾನ ಕೋರಲಾಗಿತ್ತು. ಆದರೆ ಇದುವರೆಗೆ ಜನಪ್ರತಿನಿಧಿಗಳು ಅನುದಾನ ಕಲ್ಪಿಸದೆ ಅನ್ಯಾಯ ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದರು. ಕೃಷಿಕರು ವಾಸಿಸುವ ಗ್ರಾಮ, ರಸ್ತೆ ಗುಂಡಿಬಿದ್ದು ವಾಹನ ಚಾಲನೆ ಕಷ್ಟಕರವಾಗಿದೆ. ಕೃಷಿ ಫಸಲನ್ನು ಸಾಗಿಸಲು ಕಷ್ಟವಾಗುತ್ತಿದೆ. ಪ್ರತಿವರ್ಷ ಗೌರಿ-ಗಣೇಶ ಹಬ್ಬದಂದು ಐತಿಹಾಸಿಕ ಹಿನ್ನೆಲೆಯುಳ್ಳ ದೊಡ್ಡಮಳ್ತೆ ಗ್ರಾಮದಲ್ಲಿರುವ ಹೊನ್ನಮ್ಮನ ಕೆರೆ ಜಾತ್ರೆಗೆ ಸಾವಿರಾರು ಜನರು ಸೇರುತ್ತಾರೆ. ಹೆಚ್ಚಿನ ಜನರು ಇದೇ ರಸ್ತೆಯನ್ನು ಅವಲಂಭಿಸಿದ್ದಾರೆ. ಆದರೂ ರಸ್ತೆಗೆ ಅನುದಾನ ಕಲ್ಪಿಸದೆ ಅನ್ಯಾಯವೆಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಗೋವಿಂದ, ಹಿರಿಯರಾದ ಎಸ್.ಆರ್.ಪುಟ್ಟರಾಜು, ಹೊನವಳ್ಳಿ ಚಂದ್ರಶೇಖರ್,…

Read More

ಸೋಮವಾರಪೇಟೆ ತಾಲ್ಲೂಕಿನ ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಿಂದ ಕೆರೆಕೊಪ್ಪ ಮಾರ್ಗವಾಗಿ ನಗರಳ್ಳಿ ಮತ್ತು ಶಾಂತಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಭಾನುವಾರ ಗ್ರಾಮಸ್ಥರು ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚಿದರು. ಈ ರಸ್ತೆಯು ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ಬೆಟ್ಟವನ್ನು ತಲುಪಲು ಹತ್ತಿರದ ಮಾರ್ಗವಾಗಿದ್ದು ಅತೀ ಹೆಚ್ಚು ಪ್ರವಾಸಿಗರ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿರುವ ಕಾರಣದಿಂದ ರಸ್ತೆಯನ್ನು ಗ್ರಾಮಸ್ಥರೇ ಶ್ರಮದಾನದ ಮೂಲಕ ಗುಂಡಿ ಮುಚ್ಚಿದರು. ಶ್ರಮದಾನದಲ್ಲಿ ಯು.ಕೆ.ಸೋಮಶೇಖರ್, ಸಿ.ಕೆ.ನಾಗರಾಜ್, ಕೆ.ಕೆ.ಲಕ್ಷ್ಮೀಕಾಂತ ಕೆ,ಡಿ.ಗಿರೀಶ್, ಸಿ.ಸಿ.ದಯಾನಂದ, ಪ್ರದೀಪ್ ಕುಮಾರ್, ಗಣೇಶ್, ದಿನೇಶ್ ಭಾಗವಹಿಸಿದ್ದರು.

Read More

ಸೋಮವಾರಪೇಟೆ ಏ.9 : ಚಿಲ್ಲರೆ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಚಿಲ್ಲರೆ ಅಂಗಡಿಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 17.280 ಲೀ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಐಗೂರು ಸಮೀಪದ ಯಡವಾರೆ ಗ್ರಾಮ ನಿವಾಸಿಯೊಬ್ಬರು  ತನ್ನ ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದ ಅಧಿಕಾರಿಗಳು ಈಚೆಗೆ ದಾಳಿ ನಡೆಸಿದ್ದರು. ಉಪ ವಿಭಾಗ ಅಬಕಾರಿ ಅಧೀಕ್ಷಕರಾದ ಆರ್.ಎಂ. ಚೈತ್ರಾ ಅರೋಪಿ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.

Read More

ಸೋಮವಾರಪೇಟೆ ಏ.9 : ಸೋಮವಾರಪೇಟೆ ತಾಲ್ಲೂಕಿನ ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಕರೆಯಲ್ಪಡುವ ನಗರಳ್ಳಿ ಸುಗ್ಗಿ ಉತ್ಸವದ ಪ್ರಯುಕ್ತ ಸುಗ್ಗಿ ಆಚರಣೆಯ ವಿಧಿವಿಧಾನದಂತೆ ದೇವಿಯ ತವರೂರೆಂದು ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಸಂಜೆ ದೀಪಗಳನ್ನು ತಂದು ಪೂಜಿಸಿದರು. ಅನಾದಿ ಕಾಲದಿಂದಲೂ ನಡೆದುಕೊಂಡು ಬರುತ್ತಿರುವ ಕೂತಿ ಗ್ರಾಮದ ಚಾವಡಿಕಟ್ಟೆಯಲ್ಲಿ ಗ್ರಾಮದ ಮನೆಯಿಂದ ಗ್ರಾಮಸ್ಥರು ಸಾಮೂಹಿಕವಾಗಿ ದೀಪಗಳನ್ನು ಇಟ್ಟು ಸಾಮೂಹಿಕವಾಗಿ ಪೂಜೆ ಮಾಡಲಾಯಿತು. ನಂತರ ದೇವರಕಟ್ಟೆಯಲ್ಲಿ ಗ್ರಾಮಸ್ಥರು ಸುಗ್ಗಿ ಕುಣಿತದೊಂದಿಗೆ ಪೂಜಾ ಕಾರ್ಯ ನಡೆಸಿದರು. ಕೂತಿ ಗ್ರಾಮದ ಅಧ್ಯಕ್ಷ ಎಚ್.ಡಿ. ಮೋಹನ್, ಉಪಾಧ್ಯಕ್ಷ ಜಗದೀಶ್, ಕಾರ್ಯದರ್ಶಿ ವಿನೋದ್ ಕುಮಾರ್, ಖಜಾಂಚಿ ಕಿಶನ್, ಗ್ರಾಮದ ಪಟೇಲರಾದ ಬಸವರಾಜ್, ಹಿರಿಯರಾದ ಕೆ.ಟಿ. ಪರಮೇಶ್, ಗಣೇಶ್, ದಿನೇಶ್, ಗಿರೀಶ್, ಅರ್ಚಕ ಅನಂತರಾಮ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಏ.9 : ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಕೊಡವ ಕುಟುಂಬಗಳ ನಡುವಿನ 23ನೇ ವರ್ಷದ ಪ್ರತಿಷ್ಠಿತ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ನಮ್ಮೆ’ಯಲ್ಲಿ ಕುಪ್ಪಂಡ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಎದುರಾಳಿ ತಂಡದ ವಿರುದ್ಧ ಸಮಬಲ ಪ್ರದರ್ಶನ ನೀಡಿದರೂ ಶೂಟ್‌ಔಟ್‌ನಲ್ಲಿ ಕೇವಲ 2 ಗೋಲು ದಾಖಲಿಸಿದ ಕುಲ್ಲೇಟಿರ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಇಂದು ನಡೆದ ಅಂತಿಮ ಪಂದ್ಯಾವಳಿಯನ್ನು ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರು ಬೆಳ್ಳಿಯ ಹಾಕಿ ಸ್ಟಿಕ್‌ನಿಂದ ಬೆಳ್ಳಿಯ ಹಾಕಿ ಚೆಂಡನ್ನು ಹೊಡೆಯುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ಬಳಿಕ ನಡೆದ ರೋಚಕ ಪಂದ್ಯಾಟದಲ್ಲಿ ಕುಪ್ಪಂಡ ತಂಡ ಮೊದಲ ಕ್ವಾಟರ್‌ನಲ್ಲಿ 1 ಗೋಲು ಗಳಿಸಿ ಮುನ್ನಡೆ ಪಡೆಯಿತು. ರಭಸದ ಪ್ರದರ್ಶನ ನೀಡಿದ ಕುಲ್ಲೇಟಿರ ತಂಡ ದ್ವಿತೀಯಾರ್ಧದಲ್ಲಿ ಎದುರಾಳಿ ಕುಪ್ಪಂಡ ವಿರುದ್ದ 1 ಗೋಲು ದಾಖಲಿಸಿ ಸಮಬಲ ಸಾಧಿಸಿತು. ಆದರೆ ನಿಗಧಿತ ಅವಧಿಯಲ್ಲಿ ಇತ್ತಂಡಗಳಿಗೆ ಒಟ್ಟು 11 ಪೆನಾಲ್ಟಿ ಕಾರ್ನರ್ ಅವಕಾಶ ದೊರೆಯಿತಾದರೂ, ಯಾವುದೇ…

Read More