ಡಿ.10 ರಂದು ಜನಸಂಪರ್ಕ ಸಭೆ :: ಮಡಿಕೇರಿ ಡಿ.8 NEWS DESK :: ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿ.10 ರಂದು ಬೆಳಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 10 ರಂದು ಮಧ್ಯಾಹ್ನ 2.30 ಗಂಟೆಯಿಂದ 03.30 ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಹಾಗೂ ಗೋಣಿಕೊಪ್ಪ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. :: ಡಿ.11…
ಲೇಖಕ: admin
ಮಡಿಕೇರಿ ಡಿ.8 NEWS DESK : ಮಡಿಕೇರಿ ನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಗರದ ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಪ್ರಾಣಿ ಕಲ್ಯಾಣವನ್ನು ಮನನದಲ್ಲಿಟ್ಟುಕೊಂಡು, ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಖಾಸಗಿ ಹಾಗು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಆವರಣಗಳಲ್ಲಿ ಇರುವ ಬೀದಿ ನಾಯಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಡಿಕೇರಿ ನಗರಸಭೆ ಕೈಗೊಂಡಿದೆ. ಈ ಕಾರ್ಯಕ್ರಮದ ಸತತ ಮತ್ತು ಜವಾಬ್ದಾರಿಯುತ ಅನುಷ್ಠಾನಕ್ಕಾಗಿ ಎನ್ಜಿಒ ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದ್ದು, ಮಡಿಕೇರಿ ನಗರಸಭೆಯೊಂದಿಗೆ ಸಹಭಾಗಿತ್ವಕ್ಕಾಗಿ ವಿನಂತಿಸುತ್ತೇವೆ. ಈ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರ ಗೊಂಡ ಬೀದಿನಾಯಿಗಳಿಗೆ ಸಹಜ ಸಂರಕ್ಷಣೆ ಪೋಷಣೆ, ಆಹಾರ, ನೀರು, ವೈದ್ಯಕೀಯ ಚಿಕಿತ್ಸೆ, ಜವಾಬ್ದಾರಿ ನಿರ್ವಹಣೆಗಾಗಿ ಎದುರು ನೋಡುತಿದ್ದೇವೆ ಎಂದು ನಗರಸಭಾ ಪೌರಾಯುಕ್ತ ಕೆ.ಆರ್.ರಮೇಶ್ ತಿಳಿಸಿದ್ದಾರೆ. ಈ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂದರ್ಭದಲ್ಲಿ ಅಗತ್ಯ ತಾಂತ್ರಿಕ ಮಾರ್ಗದರ್ಶನ, ಕಾನೂನು ಬೆಂಬಲ ಮತ್ತು ಅನುಮತಿಯ ವ್ಯವಸ್ಥೆಯನ್ನು ಮಡಿಕೇರಿ ನಗರಸಭೆಯು ಒದಗಿಸುತ್ತದೆ. ಪ್ರಾಣಿ ಕಲ್ಯಾಣಕ್ಕೆ ಬದ್ಧವಾಗಿರುವ, ಸರ್ಕಾರಕ್ಕೆ ನೋಂದಾಯಿತ ಮತ್ತು ಮಾನ್ಯತೆ…
ಮಡಿಕೇರಿ ಡಿ.8 NEWS DESK : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15 ಸಾವಿರ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್ಎಸ್ಎಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ.ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ/ ಸ್ನಾತಕೋತ್ತರ ಪದವಿ(ಪಿಎಚ್ಡಿ)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ…
ಮಡಿಕೇರಿ ಡಿ.8 NEWS DESK : 66/11 ಕೆ.ವಿ ಶನಿವಾರಸಂತೆ ಮತ್ತು 66/11 ಕೆವಿ ಮಲ್ಲಿಪಟ್ಟಣ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲ್ಲಿ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಬೆಳಗಾವಿ ಡಿ.8 NEWS DESK : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ – 2025 ಆರಂಭವಾಗಿದ್ದು, ಮೊದಲ ದಿನವೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಹಾಗೂ ಇತರ ಶಾಸಕರೊಂದಿಗೆ ವಿವಿಧ ಅಭಿವೃದ್ಧಿ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಿದರು.
ಮಡಿಕೇರಿ ಡಿ.8 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ವಿಮೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮಕ್ಕೆ ರಿಪಬ್ಲಿಕ್ ಟಿವಿ ನೆಟ್ವರ್ಕ್ ಹಾಗೂ ಹೆಡ್ ಇಂಟರ್ ನ್ಯಾಷನಲ್ ಬಿಸಿನೆಸ್ ಸಂಸ್ಥೆ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ ಚಾಲನೆ ನೀಡಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಮೆ ಕಾರ್ಡ್ ಹಸ್ತಾಂತರಿಸಿ ಮಾತನಾಡಿದ ಕಿಶನ್ ಮಾದಪ್ಪ ಅವರು, ಸಮಾಜಕ್ಕಾಗಿ ದುಡಿಯುವ ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪತ್ರಕರ್ತರ ಸಂಕಷ್ಟಗಳಿಗೆ ವೈಯಕ್ತಿಕವಾಗಿಯು ಸ್ಪಂದಿಸುವುದಾಗಿ ಭರವಸೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗವನ್ನು ಸರಕಾರ ನಿಲ್ರ್ಯಕ್ಷಿಸುತ್ತ ಬಂದಿದೆ. ಸರಕಾರಗಳು ಪತ್ರಕರ್ತರ ಪರ ಚಿಂತನೆ ಮಾಡಿ ಅವರಿಗೆ ಶಕ್ತಿ ತುಂಬಿ ಭದ್ರತೆ ನೀಡುವ ಜವಾಬ್ದಾರಿ ಹೊಂದಿರಬೇಕು. ಜನರಿಗೆ ಸರಕಾರದ ವೈಫಲ್ಯ ಕಂಡುಬಂದಲ್ಲಿ ಬದಲಿಸುವ ಶಕ್ತಿಯಿದೆ. ಈ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಧ್ಯಮ ಕ್ಷೇತ್ರ…
ಮಡಿಕೇರಿ ಡಿ.8 NEWS DESIK : ಇತ್ತೀಚೆಗೆ ದುಬೈಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ 15ನೇ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅನ್ವಿತ್ ಎಸ್. ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ನಗರದ ಬ್ರೈನೋಬ್ರೈನ್ ಅಬಕಾಸ್ ಸಂಸ್ಥೆಯ ಮುಖ್ಯಸ್ಥರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ಬಳಿ ಅನ್ವಿತ್ ಎಸ್. ತರಬೇತಿ ಪಡೆಯುತ್ತಿದ್ದಾನೆ. ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಅನ್ವಿತ್ ಸೇರಿದಂತೆ ಕರ್ನಾಟಕ ರಾಜ್ಯದ ಆರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಮಾರು 16 ದೇಶಗಳ 1800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮದೆನಾಡಿನ ಬಿಜಿಎಸ್ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿರುವ ಎಂಟು ವರ್ಷದ ಅನ್ವಿತ್ ಎಸ್. ಮದೆನಾಡು ಮದೆ ಮಹೇಶ್ವರ ಪದವಿಪೂರ್ವ ಕಾಲೇಜ್ ನ ಉಪನ್ಯಾಸಕ ಶ್ರೀನಿವಾಸ ವಿ. ಹಾಗೂ ಪವಿತ್ರ ಎಂ.ಎನ್ ದಂಪತಿಯ ಪುತ್ರ. ಬಹುಮಾನ ವಿತರಣಾ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಬ್ರೈನೋಬ್ರೈನ್ ಅಂತರಾಷ್ಟ್ರೀಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಹ್ಮಣ್ಯಂ ಅವರು ಅನ್ವಿತ್…
ವಿರಾಜಪೇಟೆ ಡಿ.9 NEWS DES : ಮುಂದಿನ ದಿನದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವಿರಾಜಪೇಟೆಯ 19 ವಲಯಗಳಲ್ಲಿ 16 ವಲಯಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಹೆಚ್.ಮತೀನ್ ಹೇಳಿದರು. ವಿರಾಜಪೇಟೆ ನಗರದ ನಿರೀಕ್ಷಣಾ ಮಂದಿರದ ಆವರಣದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಬಡ ಜನತೆಗೆ ತುಂಬಾ ಅನುಕೂಲವಾಗಿದೆ, ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ನಿರೀಕ್ಷೆಗೂ ಮೀರಿ ಕೋಟಿ ಲೆಕ್ಕದಲ್ಲಿ ಅನುದಾನ ತಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗಳು ಇಂದು ಅಭಿವೃದ್ಧಿಯತ್ತ ಸಾಗುತ್ತಿದೆ, ವಿರಾಜಪೇಟೆ ಪಟ್ಟಣದ ಮುಖ್ಯರಸ್ತೆ ಕಾಮಗಾರಿ ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ರಸ್ತೆ ಅಗಲಿಕರಣ ಅಭಿವೃದ್ಧಿಗೆ ಕಾಮಗಾರಿ ಪ್ರರಂಭಗೋಂಡಿದ್ದು…
*ವಿರಾಜಪೇಟೆ ಡಿ.9 NEWS DES : ಮುಂದಿನ ದಿನದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವಿರಾಜಪೇಟೆಯ 19 ವಲಯಗಳಲ್ಲಿ 16 ವಲಯಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಹೆಚ್.ಮತೀನ್ ಹೇಳಿದರು. ವಿರಾಜಪೇಟೆ ನಗರದ ನಿರೀಕ್ಷಣಾ ಮಂದಿರದ ಆವರಣದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಬಡ ಜನತೆಗೆ ತುಂಬಾ ಅನುಕೂಲವಾಗಿದೆ, ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ನಿರೀಕ್ಷೆಗೂ ಮೀರಿ ಕೋಟಿ ಲೆಕ್ಕದಲ್ಲಿ ಅನುದಾನ ತಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗಳು ಇಂದು ಅಭಿವೃದ್ಧಿಯತ್ತ ಸಾಗುತ್ತಿದೆ, ವಿರಾಜಪೇಟೆ ಪಟ್ಟಣದ ಮುಖ್ಯರಸ್ತೆ ಕಾಮಗಾರಿ ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ರಸ್ತೆ ಅಗಲಿಕರಣ ಅಭಿವೃದ್ಧಿಗೆ ಕಾಮಗಾರಿ ಪ್ರರಂಭಗೋಂಡಿದ್ದು…
ಮಡಿಕೇರಿ ಡಿ.8 NEWS DESK : ಪ್ರೊ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನಾಚರಣೆ ವಿರಾಜಪೇಟೆಯಲ್ಲಿ ನಡೆಯಿತು. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮೇಣದ ಬತ್ತಿಗಳನ್ನು ಹಚ್ಚಿ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂದೇಶಗಳಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟವು ನಮ್ಮ ಗುರಿಯಾಗಬೇಕು. ಅವರ ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು, ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ವಿಶ್ವ ಮಾನವ ಡಾ.ಅಂಬೇಡ್ಕರ್ ಪರಿನಿರ್ವಾಣ 1956 ಡಿಸೆಂಬರ್ 6 ರಂದು ದೆಹಲಿಯಲ್ಲಿ ಆಯಿತು. ಪರಿನಿರ್ವಾಣ ಎಂದರೆ ಬೌದ್ಧ ಧರ್ಮದಲ್ಲಿ “ಸಂಪೂರ್ಣ ಮೋಕ್ಷ” ಎಂದರ್ಥ ಎಂದು ವಿವರಿಸಿದರು, ದಲಿತ ಸಂಘರ್ಷ ಸಮಿತಿಯ ಸದಸ್ಯರಾದ ವೈ.ಬಿ.ಗಣೇಶ್, ಲವ, ಗಣೇಶ್, ಜಯಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.






