ಲೇಖಕ: admin

ಮಡಿಕೇರಿ ಏ.9 : ಪೋಷಕರು ಮಕ್ಕಳಿಗೆ ಹಾಕಿ ಕ್ರೀಡೆಯಲ್ಲಿ ಒಲವು ಮೂಡಿಸುವ ಮೂಲಕ ಪ್ರೋತ್ಸಾಹಿಸಬೇಕು, ಆ ಮೂಲಕ ಭವಿಷ್ಯದ ದಿನಗಳಲ್ಲಿ ಕೊಡಗಿನಿಂದ ಹೆಚ್ಚು ಮಂದಿ ಆಟಗಾರರು ಭಾರತ ಹಾಕಿ ತಂಡವನ್ನು ಪ್ರತಿನಿಧಿಸುವಂತಾಗಬೇಕು ಎಂದು ಭಾರತ ಹಾಕಿ ತಂಡದ ಮಾಜಿ ನಾಯಕ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತ, ಒಲಿಂಪಿಯನ್ ಧನ್‌ರಾಜ್ ಪಿಳ್ಳೆ ಕರೆ ನೀಡಿದರು. ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿತ 23ನೇ ವರ್ಷದ ಕೊಡವ ಕೌಟುಂಬಿಕ ‘ಅಪ್ಪಚೆಟ್ಟೋಳಂಡ ಕಪ್ ಹಾಕಿ ನಮ್ಮೆ 2023’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದು ಕಾಲದಲ್ಲಿ ಭಾರತ ಹಾಕಿ ತಂಡದಲ್ಲಿ 8ರಿಂದ 10 ಮಂದಿ ಕೊಡಗಿನ ಆಟಗಾರರು ಇರುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಈ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಅವರು ವಿಷಾಧಿಸಿದರು. ಮಕ್ಕಳು, ಯುವಕರಲ್ಲಿ ಹಾಕಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಲು ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಸಹಕಾರಿಯಾಗಿದೆ. ಇಂತಹ ಕ್ರೀಡಾಕೂಟಗಳಿಂದ ಮತ್ತಷ್ಟು ಯುವ ಹಾಕಿಪಟುಗಳು ರಾಜ್ಯ ಮತ್ತು ರಾಷ್ಟ್ರವನ್ನು ಪ್ರತಿನಿಧಿಸುವಂತಾಗಲಿ ಎಂದು…

Read More

ಮಡಿಕೇರಿ ಏ.9 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ. ತೆರೆದ ಜೀಪ್ ನಲ್ಲಿ ಸಫಾರಿ ನಡೆಸಿದ ಅವರು ವನ್ಯಜೀವಿಗಳನ್ನು ವೀಕ್ಷಿಸಿದರು. ಮೋದಿ ಅವರು ಟೋಪಿ, ಗಾಗಲ್ಸ್ ಜೊತೆಗೆ ಸಫಾರಿ ದಿರಿಸಿನಲ್ಲಿ ಕಾಡಿನಲ್ಲಿ ಮಿಂಚಿದರು. ಒಟ್ಟು 9 ವಾಹನಗಳು ಪ್ರಧಾನಿ ಅವರ ಜೊತೆಗಿದ್ದು, ಸಫಾರಿ ಮುಗಿಸಿ ತಮಿಳುನಾಡಿನ ತೆಪ್ಪಕಾಡಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಡಿಕೇರಿ ಏ.9 : ಹಾಕತ್ತೂರು-ಬಿಳಿಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಬಾವ (ಖ.ಸಿ) ಅವರ ಹೆಸರಿನಲ್ಲಿ ಮೇ 7, 8 ಮತ್ತು 9 ರಂದು ನಡೆಯಬೇಕಾಗಿದ್ದ ಉರೂಸ್ ನ್ನು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಮುoದೂಡಲ್ಪಟ್ಟ ಉರೂಸ್ ಮೇ 14, 15 ಮತ್ತು 16 ರಂದು ಉಲಮಾ-ಉಮಾರ, ಸಾದತುಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಬದರ್ ಜಮಾಅತ್ ಸಮಿತಿ ಕಾರ್ಯದರ್ಶಿ ಎಸ್.ಎ.ಅಬ್ದುಲ್ ಖಾದರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 93538 34014 ನ್ನು ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಏ.8 :  ಆಸಕ್ತಿಯಿಂದ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಉತ್ತಮ ಭವಿಷ್ಯ ಕಂಡುಕೊಳ್ಳಬಹುದೆoದು ಒಲಂಪಿಯನ್‌ಗಳಾದ ಮನೆಯಪಂಡ ಸೋಮಯ್ಯ ಹಾಗೂ ಅಂಜಪರವoಡ ಸುಬ್ಬಯ್ಯ ಅವರುಗಳು ಕರೆ ನೀಡಿದರು. ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇಲ್ಲಿನ ಜ.ತಿಮ್ಮಯ್ಯ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ದಿ.ಶಂಕರ್ ಸ್ವಾಮಿ ಸ್ಮರಣಾರ್ಥ ಉಚಿತ ಬೇಸಿಗೆ ಕ್ರೀಡಾ ಶಿಬಿರದಲ್ಲಿ ಬಾಗವಹಿಸಿ ಅವರು ಮಕ್ಕಳಿಗೆ ಹಿತವಚನ ನುಡಿದರು. ಸೊಮಯ್ಯ ಮಾತನಾಡಿ ಇಂತಹ ಶಿಬಿರಗಳಿಂದ ಸಾಕಷ್ಟು ಕಲಿಯಬಹುದಾಗಿದೆ. ಜೀವನದಲ್ಲಿ ಐದು ಎಸ್‌ಗಳನ್ನು, ಅಂದರೆ ‘ಸ್ಪೀಡ್, ಸ್ಟ್ರೇಂತ್, ಸ್ಟೆಮಿನಾ, ಸ್ಕಿಲ್ ಹಾಗೂ ಸ್ಪೋರ್ಟ್ಸ್ಮೆನ್‌ಶಿಪ್’ ಇವುಗಳನ್ನು ಅಳವಡಿಸಿಕೊಂಡರೆ ಉತ್ತಮ ಕ್ರಿಡಾಪಟು ಹಾಗೂ ಉತ್ತಮ ಮನುಜನಾಗಲು ಸಾಧ್ಯವಾಗುತ್ತದೆ. ಉತತಮ ಭವಿಷ್ಯ ರುಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಎ.ಬಿ.ಸುಬ್ಬಯ್ಯ ಮಾತನಾಡಿ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡರೆ ಉತ್ತಮ ಪ್ರಜೆಯಾಗಲು ಸಾಧ್ಯ. ಸಮಾಜದಲ್ಲೂ ಗುರುತಿಸಲ್ಪಡುತ್ತಾರೆ, ಮಕ್ಕಳು ಟಿವಿ, ಮೊಬೈಲ್ ಬಿಟ್ಟು ಮೈದಾನಕ್ಕೆ ಬರಬೇಕು. ಶಾರೀರಿಕ ದೃಢತೆ ಇದ್ದರೆ ಜೀವನವನ್ನು ಸಂತೋಷದಿoದ ಕಳೆಯಬಹುದು. ಕ್ರಿಡೆಯಿಂದ ಇದು ಸಾಧ್ಯವಾಗಲಿದೆ. ಶಿಬಿರದಲ್ಲಿ ಕಲಿಸುವದನ್ನು ನಿರಂತರ ಅಭ್ಯಾಸ ಮಾಡಬೇಕು. ಇಲ್ಲಿ ತರಬೇತುದಾರರು…

Read More

ಮಡಿಕೇರಿ ಏ.8 : ಬಿರು ಬಿಸಿಲು ಮತ್ತು ಭಾರೀ ಪ್ರಮಾಣದಲ್ಲಿ ಹೂಳು ತುಂಬಿರುವುದರಿAದ ಮಡಿಕೇರಿ ನಗರಕ್ಕೆ ನೀರು ಪೂರೈಸುವ ಪ್ರಮುಖ ನೀರು ಸಂಗ್ರಹಗಾರ ಕೂಟುಹೊಳೆ ಸಂಪೂರ್ಣ ಬರಿದಾಗಿದೆ. ನಗರದ ಕೆಲವು ಬಡಾವಣೆಗಳ ನಿವಾಸಿಗಳು ನೀರಿನ ಕೊರತೆಯನ್ನು ಎದುರಿಸುತ್ತಿದ್ದಾರೆ. ಜಲಾಶಯದಲ್ಲಿ ಪ್ರಸ್ತುತ 10ರಿಂದ 15 ಅಡಿಯಷ್ಟೇ ನೀರು ನಿಂತಿದ್ದು, ಡೆಡ್ ಸ್ಟೋರೇಜ್ ತಲುಪಿರುವ ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಪಂಪ್ ಮಾಡಲು ಕೂಡ ಸಾಧ್ಯವಿಲ್ಲದಂತಾಗಿದೆ. ಮಳೆ ನೀರು ಮತ್ತು ಜಲ ಮೂಲವನ್ನು ನಂಬಿರುವ ಕೂಟುಹೊಳೆ ಜಲಾನಯನ ವ್ಯಾಪ್ತಿಯಲ್ಲಿ ಮಳೆ ಬಾರದಿದ್ದಲ್ಲಿ ಜಲಾಶಯ ಸಂಪೂರ್ಣ ಬತ್ತಿ ಹೋಗುವ ಆತಂಕವೂ ಎದುರಾಗಿದೆ. ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಷಮಕ್ಕೆ ತಿರುಗಲಿದೆ. ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗಲಿದ್ದು, ಜನತೆ ಸಹಕರಿಸುವಂತೆ ನಗರಸಭೆ ಮನವಿ ಮಾಡಿದೆ. ಕೂಟುಹೊಳೆಯಲ್ಲಿ ತುಂಬಿರುವ ಹೂಳನ್ನು ತೆಗೆಯದೆ ಇರುವುದರಿಂದ ನೀರಿನ ಶೇಖರಣೆಯಲ್ಲಿ ಕುಸಿತ ಕಂಡು ಬಂದಿದೆ. ಬೇಸಿಗೆಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಕೊರತೆಯನ್ನು ನೀಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳದೆ ಇಷ್ಟು ದಿನ ಸುಮ್ಮನಿದ್ದ ನಗರಸಭೆ…

Read More

ಮಡಿಕೇರಿ ಏ.8 : ಕಾಡಾನೆಯೊಂದು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಮೇಲೆ ದಾಳಿ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಮೆಟ್ಟಳ್ಳದಲ್ಲಿ ನಡೆದಿದೆ. ಸ್ವಿಫ್ಟ್ ಮತ್ತು ಸ್ಯಾಂಟ್ರೋ ಕಾರಿನ ಮೇಲೆ ದಾಳಿ ಮಾಡಿದ ಕಾಡಾನೆ ಸಾನಿಫ್ ಎಂಬುವವರ ಸ್ವಿಫ್ಟ್ ಕಾರನ್ನು ಪಕ್ಕದಲ್ಲೇ ಇದ್ದ ಹೆದ್ದಾರಿವರೆಗೆ ತಳ್ಳಿಕೊಂಡು ಬಂದಿದೆ. ನಂತರ ಅಲ್ಲಿಂದ ಕಾಡಾನೆ ಕಾಲ್ಕಿತ್ತಿದ್ದು, ಕಾರಿಗೆ ಹಾನಿಯಾಗಿದೆ. ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಏ.8 : ಕೊಡವ ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ತ್ರಿವೇಣಿ ಪೊಮ್ಮಕ್ಕಡ ಕೂಟ ಅಸ್ತಿತ್ವಕ್ಕೆ ಬಂದಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಕೂಟದ ಅಧ್ಯಕ್ಷೆ ಕಿಕ್ಕೇರಿಯಂಡ ಲೀಲಾ ಅಯ್ಯಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.11 ರಂದು ತ್ರಿವೇಣಿ ಪೊಮ್ಮಕ್ಕಡ ಕೂಟವನ್ನು ಅಸ್ಥಿತ್ವಕ್ಕೆ ತರಲಾಗಿದೆ. ಸುಮಾರು 19 ಸದಸ್ಯರಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ನೊಂದ ಕೊಡವರಿಗೆ ಸಹಾಯ ಮಾಡುವುದು, ಕಡು ಬಡತನದಲ್ಲಿರುವರಿಗೆ ಸಹಾಯ, ಕಾನೂನು ಅರಿವು, ಇತ್ಯಾದಿ ಸೇವೆಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಆಕಾಶವಾಣಿಯಲ್ಲಿ ಕೊಡವ ಸಿರಿ ಮತ್ತು ಮಹಿಳಾ ಲೋಕಾದಲ್ಲಿ ವಿವಿಧ ಕಾರ್ಯಕ್ರಮ ನೀಡುವುದು, ಕಡುಬಡವ ಕೊಡವ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುವುದು, ಮದುವೆಯ ನಂತರ ಕಿರುಕುಳಕ್ಕೆ ಒಳಗಾದ ಮಹಿಳೆಗೆ ಸಾಂತ್ವಾನ ಹೇಳುವುದು ಸೇರಿದಂತೆ ಇತ್ಯಾದಿ ಸೇವೆಗಳನ್ನು ಮಾಡಲಾಗುವುದು ಎಂದು ತಿಳಿಸಿದ ಅವರು, ಹೆಚ್ಚಿನ ಮಾಹಿತಿಗಾಗಿ 9972375541, 9686092250 ಸಂಪರ್ಕಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಬೊಪ್ಪಂಡ ಸರಳ ಕರುಂಬಯ್ಯ, ಕಾರ್ಯದರ್ಶಿ ಮಲ್ಚೀರ ಯಶೋಧ ದೇವಯ್ಯ, ಸದಸ್ಯರಾದ…

Read More

ಮಡಿಕೇರಿ ಏ.8 : ಕೊಡವ ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ತ್ರಿವೇಣಿ ಪೊಮ್ಮಕ್ಕಡ ಕೂಟ ಅಸ್ತಿತ್ವಕ್ಕೆ ಬಂದಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಕೂಟದ ಅಧ್ಯಕ್ಷೆ ಕಿಕ್ಕೇರಿಯಂಡ ಲೀಲಾ ಅಯ್ಯಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.11 ರಂದು ತ್ರಿವೇಣಿ ಪೊಮ್ಮಕ್ಕಡ ಕೂಟವನ್ನು ಅಸ್ತಿತ್ವಕ್ಕೆ ತರಲಾಗಿದೆ. ಸುಮಾರು 19 ಸದಸ್ಯರಿದ್ದು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ನೊಂದ ಕೊಡವರಿಗೆ ಸಹಾಯ ಮಾಡುವುದು, ಕಡು ಬಡತನದಲ್ಲಿರುವರಿಗೆ ಸಹಾಯ, ಕಾನೂನು ಅರಿವು, ಇತ್ಯಾದಿ ಸೇವೆಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಆಕಾಶವಾಣಿಯಲ್ಲಿ ಕೊಡವ ಸಿರಿ ಮತ್ತು ಮಹಿಳಾ ಲೋಕಾದಲ್ಲಿ ವಿವಿಧ ಕಾರ್ಯಕ್ರಮ ನೀಡುವುದು, ಕಡುಬಡವ ಕೊಡವ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುವುದು, ಮದುವೆಯ ನಂತರ ಕಿರುಕುಳಕ್ಕೆ ಒಳಗಾದ ಮಹಿಳೆಗೆ ಸಾಂತ್ವಾನ ಹೇಳುವುದು ಸೇರಿದಂತೆ ಇತ್ಯಾದಿ ಸೇವೆಗಳನ್ನು ಮಾಡಲಾಗುವುದು ಎಂದು ತಿಳಿಸಿದ ಅವರು, ಹೆಚ್ಚಿನ ಮಾಹಿತಿಗಾಗಿ 9972375541, 9686092250 ಸಂಪರ್ಕಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷೆ ಬೊಪ್ಪಂಡ ಸರಳ ಕರುಂಬಯ್ಯ, ಕಾರ್ಯದರ್ಶಿ ಮಲ್ಚೀರ ಯಶೋಧ ದೇವಯ್ಯ, ಸದಸ್ಯರಾದ…

Read More

ಮಡಿಕೇರಿ ಏ.8 : ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ತು, ಪುರಾತತ್ವ ಸಂಗ್ರಹಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯಲಿರುವ ‘ಬಣ್ಣ-2023’ ಮಕ್ಕಳ ಬೇಸಿಗೆ ಶಿಬಿರಕ್ಕೆ ದಾಖಲಾತಿ ಆರಂಭಗೊಂಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ ಲೋಕೇಶ್ ಊರುಬೈಲ್, ನಗರದ ಜ್ಯೂನಿಯರ್ ಕಾಲೇಜಿನ ಆವರಣದಲ್ಲಿ ಏ.22 ರಿಂದ 30ರ ವರೆಗೆ ಶಿಬಿರ ನಡೆಯಲಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಯೋಗ, ಭಜನೆ, ಯಕ್ಷಗಾನ, ಡ್ರಾಯಿಂಗ್, ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ನೃತ್ಯ, ವ್ಯಕ್ತಿತ್ವ ವಿಕಸನ, ಪರಿಸರ ಶಿಕ್ಷಣ, ಜನಪದ ಕಲೆ, ಪ್ರಥಮ ಚಿಕಿತ್ಸೆ, ಅಗ್ನಿ ಅನಾಹುತದ ರಕ್ಷಣೆ, ಜೀವನ ಪ್ರೀತಿ, ಅಭಿನಯ ಇತ್ಯಾದಿ ತರಗತಿಗಳನ್ನು ಆಯಾಯ ಶಿಕ್ಷಕರ ಮಾರ್ಗದರ್ಶನದ ಮುಖಾಂತರ ವಾರಪೂರ್ತಿ ನಡೆಸುತ್ತಿರುತ್ತದೆ ಎಂದು ತಿಳಿಸಿದರು. ರಾಜ್ಯದ ವಿವಿಧ ಕ್ಷೇತ್ರದ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ತರಬೇತಿಗಾಗಿ ಭಾಗವಹಿಸುತ್ತಿದ್ದು, ಹದಿನೇಳು (6-17) ವರ್ಷ…

Read More

ಮಡಿಕೇರಿ ಏ.8 : ಕ್‌ಗ್ಗಟ್ಟ್‌ನಾಡ್ ಹಿರಿಯ ನಾಗರಿಕ ವೇದಿಕೆ ಮತ್ತು ನಿನಾದ ವಿದ್ಯಾಸಂಸ್ಥೆ ಸಹಯೋಗದಲ್ಲಿ ಪೊನ್ನಂಪೇಟೆಯಲ್ಲಿ ಕೊಡವ ಭಾಷಿಕ ಜನಾಂಗಗಳಿಗೆ ಆಯೋಜಿಸಿದ್ದ ’ಉಮ್ಮತ್ ಬೊಳಕ್’ ಕಾರ್ಯಕ್ರಮದಲ್ಲಿ ಮಹಿಳೆಯರು ಉಮ್ಮತ್ತಾಟ್, ಪುರುಷರು ಬೊಳಕಟ್ ಸ್ಪರ್ಧೆಯಲ್ಲಿ ಪಾಲ್ಗಗೊಂಡು ಸಂಸ್ಕೃತಿಕ ಅನಾವರಣಗೊಳಿಸಿದರು. ಪೊನ್ನಂಪೇಟೆ ನಿನಾದ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡವ ಸೀರೆ, ಪತ್ತಾಕ್, ಜೋಮಾಲೆಯಲ್ಲಿ ಮಹಿಳೆಯರು ಕಂಗೊಳಿಸಿದರು. ಪುರುಷರು ಕುಪ್ಯಚೇಲೆ, ಪೀಚೆಕತ್ತಿ ತೊಟ್ಟು ಬೊಳಕಾಟ್ ಪ್ರದರ್ಶನ ನೀಡಿದರು. ಚೆಕ್ಕೇರ ಪಂಚಮ್ ತ್ಯಾಗರಾಜ್ ಅವರಿಂದ ಕೊಡವ ಹಾಡು ಮೂಡಿ ಬಂತು. ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಕಾಳಿಮಾಡ ಎಂ.ಮೋಟಯ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಉಮ್ಮತ್ತಾಟ್ ಎಂಬುವುದು ಕೊಡವ ಜಾನಪದ ನೃತ್ಯವಾಗಿದೆ. ಉಮ್ಮತ್ ಎಂದರೆ ಹೂವಿನ ಹೆಸಳಿನಂತಿರುವ ತಾಳದಲ್ಲಿ ಹೆಜ್ಜೆಗೆ ತಕ್ಕವಾಗಿ ಬಡಿದುಕೊಂಡು ಕುಣಿಯುವ ವಿಶಿಷ್ಟ ಕಲೆಯಾಗಿದೆ. ತಾಳಕ್ಕೆ ತಕ್ಕ ಹೆಚ್ಚೆ ಈ ಕಲೆಯ ವಿಶೇಷತೆಯಲ್ಲೊಂದು ಎಂದರು. ಇಂತಹ ನೃತ್ಯ ಕಲೆಯನ್ನು ಪೋಷಿಸುವುದು ಎಲ್ಲರ ಜವಾಬ್ದಾರಿ. ಸಂಸ್ಕೃತಿ, ನೀತಿಯ ನಡೆ ಉಳಿಯಲು ಆಚರಣೆ…

Read More