ಲೇಖಕ: admin

ಕುಶಾಲನಗರ ಏ.8 : ಪ್ರತಿಯೊಬ್ಬರೂ ಜಲಮೂಲಗಳ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕಾಗಿದೆ ಎಂದು ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಜಿ. ಕೆಂಚಪ್ಪ ಕರೆ ನೀಡಿದ್ದಾರೆ.  ಮಹಾ ಆರತಿ ಬಳಗ ಆಶ್ರಯದಲ್ಲಿ ಸ್ಥಳೀಯ ಗೌರಿ ಗಣೇಶ ದೇವಾಲಯ ಟ್ರಸ್ಟ್ ಸಹಯೋಗದೊಂದಿಗೆ ಜೀವನದಿ ಕಾವೇರಿಗೆ  ನಡೆದ 143 ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನದಿ ತೊರೆಗಳು ಕಲುಷಿತಗೊಳ್ಳದಂತೆ ಎಚ್ಚರವಹಿಸಿ ಸ್ವಚ್ಛವಾಗಿ ಹರಿಯುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.  ಕುಶಾಲನಗರ ಕೊಡವ  ಸಮಾಜದ ಅಧ್ಯಕ್ಷರಾದ  ಮಂಡೆಪಂಡ  ಬೋಸ್ ಮೊಣ್ಣಪ್ಪ ಮಾತನಾಡಿ, ಪಟ್ಟಣ ಗ್ರಾಮಗಳ ತ್ಯಾಜ್ಯಗಳು ನೇರವಾಗಿ ನದಿ ಸೇರಿದಂತೆ ಶಾಶ್ವತ ಯೋಜನೆಗಳು ರೂಪಿಸಬೇಕು.  ಆ ಮೂಲಕ ಸ್ವಚ್ಛ ಕಾವೇರಿ ಕನಸು ನನಸಾಗಲು  ಸಾಧ್ಯ ಎಂದರು.  ಅರ್ಚಕರಾದ ನೇತೃತ್ವದಲ್ಲಿ ಕುಂಕುಮ ಅರ್ಚನೆ, ಅಷ್ಟೋತ್ತರ ನಂತರ ಸಾಮೂಹಿಕವಾಗಿ ಕಾವೇರಿ ನದಿಗೆ ಮಹಾ ಆರತಿ ಬೆಳಗಲಾಯಿತು.  ಗೌರಿ ಗಣೇಶ ದೇವಾಲಯ ಟ್ರಸ್ಟ್   ಅಧ್ಯಕ್ಷರಾದ ಸುಚಿತ್ರ ತಮ್ಮಯ್ಯ, ಮಮತಾ, ಭವಾನಿ, ಹೇಮಾ, ಲಾವಣ್ಯ, ನಿತಿನ್ ಮತ್ತು ಮಹಾ…

Read More

ಮಡಿಕೇರಿ ಏ.8 : ಕರ್ನಾಟಕ ರಾಜ್ಯದ ಭಾಗವಾಗಿರುವ ಕೊಡಗು ಜಿಲ್ಲೆಗೆ ಸಂವಿಧಾನಾತ್ಮಕವಾಗಿ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಕೊಡವರನ್ನು ಎಸ್‍ಟಿ ಪಟ್ಟಿಗೆ ಸೇರಿಸುವುದು ಮತ್ತು ಕೊಡವ ನ್ಯಾಷನಲ್ ಕೌನ್ಸಿಲ್ ನ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಯೋಗವೊಂದನ್ನು ರಚನೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಲಾಗಿದೆ. ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ವಕೀಲ ಸತ್ಯ ಸಬರ್ವಾಲ್ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಅವರ ಪೀಠದ ಮುಂದೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಕೊಡವರ ಸ್ಥಿತಿಗತಿಯ ಕುರಿತು ವಿವರಿಸಲಾಗಿದೆ. ಅರ್ಜಿ ಸ್ವೀಕರಿಸಿದ ನ್ಯಾಯಪೀಠ ಏ.17ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಲ್ಪಡುವ ರಾಜ್ಯ ಕಾನೂನು ಇಲಾಖೆ ಕಾರ್ಯದರ್ಶಿ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಲ್ಪಡುವ ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ಕೊಡವ…

Read More

ಮಡಿಕೇರಿ ಏ.8  :  ಕೊಡಗು ಜಿಲ್ಲೆಯಲ್ಲಿ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ಸ್ತ್ರೀಶಕ್ತಿ ಸಂಘಟನೆಯ ಜಿಲ್ಲಾ ಒಕ್ಕೂಟದ ಸಹಯೋಗದಲ್ಲಿ ಏ.30 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಗಾಂಧಿ ಮೈದಾನದಲ್ಲಿ ರಂಗೋಲಿ ಸ್ಪಧೆ೯ಯನ್ನು ಆಯೋಜಿಸಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷೆ ರೆಹನಾ ಸುಲ್ತಾನ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಗಾಂಧಿ ಮೈದಾನದಲ್ಲಿ 18 ವಷ೯ ಮೇಲ್ಪಟ್ಟ ಮಹಿಳೆಯರಿಗಾಗಿ ಪುಡಿ ರಂಗೋಲಿ ಮತ್ತು ಪುಪ್ಪ ರಂಗೋಲಿ ವಿಭಾಗಗಳಲ್ಲಿ ಸ್ಪಧೆ೯ ಆಯೋಜಿಸಲಾಗಿದೆ. ಮತದಾನದ ಮಹತ್ವ ಸಾರುವ ವಿಷಯದಲ್ಲಿಯೇ ವಿಭಿನ್ನವಾಗಿ ರಂಗೋಲಿ ಮೂಡಿಬರಬೇಕು. ಸ್ಪಧಿ೯ಗಳು ಏ.30 ರಂದು ಬೆಳಗ್ಗೆ 10 ಗಂಟೆಯೊಳಗೆ ಗಾಂಧಿ ಮೈದಾನದ ಸ್ಪಧಾ೯ ಸ್ಥಳದಲ್ಲಿಯೇ ಹೆಸರು ನೋಂದಾಯಿಸಬೇಕು.

Read More

ನಾಪೋಕ್ಲು ಏ.8 : ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಭಕ್ತ ಜನಸಂಘದ ವತಿಯಿಂದ ಮಳೆಗಾಗಿ ಪರ್ಜನ್ಯ ಹೋಮ ನಡೆಯಿತು. ಈ ಸಂದರ್ಭ ಅಖಿಲ ಕೊಡವ ಸಮಾಜದ ಅಧ್ಯಕ್ಷರು ಹಾಗೂ ದೇವತಕ್ಕರಾದ ಪರದಂಡ ಸುಮನ್ ಸುಬ್ರಮಣಿ ಮಾತನಾಡಿ, ಜಿಲ್ಲೆಯ ಜನರ ಶಾಂತಿ ಸುಭಿಕ್ಷೆಗಾಗಿ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಪರ್ಜನ್ಯ ಹೋಮ ನೆರವೇರಿಸಲಾಗಿದೆ. ಜಿಲ್ಲೆಯ ಎಲ್ಲೆಡೆ ಮಳೆಯಾಗಬೇಕು. ಸಮೃದ್ಧಿ ನೆಲೆಸೆಬೇಕು ಎಂಬ ಆಕಾಂಕ್ಷೆಯೊಂದಿಗೆ ತಕ್ಕಮುಖ್ಯಸ್ಥರು ಒಟ್ಟಾಗಿ ದೇವನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಸಂಕಲ್ಪ ಕೈಗೊಂಡಾಗಿನಿಂದ ಅಲ್ಲಲ್ಲಿ ಮಳೆ ಬರಲು ಆರಂಭಿಸಿದೆ ಎಂದರು. ಪುತ್ತೂರಿನ ತಂತ್ರಿ ಗಿರೀಶ್ ಭಟ್ ನೇತೃತ್ವದಲ್ಲಿ ಮುಖ್ಯ ಅರ್ಚಕ ಕುಶಭಟ್, ಶ್ರೀಕಾಂತ್ ಹಾಗೂ ಶ್ರೀನಿವಾಸ್ ಪರ್ಜನ್ಯ ಹೋಮ ಹಾಗೂ ಪೂಜಾ ವಿಧಿವಿಧಾನಗಳು ನೆರವೇರಿತು. ಈ ಸಂದರ್ಭ ಭಕ್ತ ಜನಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ, ಕಲಿಯಂಡ ಹ್ಯಾರಿ ಮಂದಣ್ಣ, ಪರದಂಡ ಡಾಲಿ, ಪ್ರಹ್ಲಾದ, ವಿಠಲ, ಸದಾ ನಾಣಯ್ಯ, ಜೋಯಪ್ಪ, ಶಂಭು ನಂಜಪ್ಪ, ಪಾಡಂಡ ನರೇಶ್, ಕೇಟೋಳಿರ ಕುಟ್ಟಪ್ಪ, ಕಣಿಯರ ನಾಣಯ್ಯ, ಕಲಿಯಂಡ…

Read More

ಮಡಿಕೇರಿ ಏ.8 : ನಗರದ ಶ್ರೀ ಮುತ್ತಪ್ಪನ್ ಕ್ಷೇತ್ರಂನ ಪುನರ್ ಪ್ರತಿಷ್ಟಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ ಅಂಗವಾಗಿ ಸಂಜೆ ಕಲಶ ಹಾಗೂ ತಾಲಾ ಪೊಲಿ ಮೆರವಣಿಗೆ ನಡೆಯಿತು. ನಗರದ ಗಾಂಧಿ ಮೈದಾನದಿಂದ ಆರಂಭಗೊಂಡ ಮೆರವಣಿಗೆಗೆ ಮಡಿಕೇರಿ ನಗರ ಪೊಲೀಸ್ ಠಾಣಾಧಿಕಾರಿ ಶ್ರೀನಿವಾಸ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುದೀರ್, ಪ್ರಮುಖರಾದ ಕೆ.ಎಸ್.ರಮೇಶ್, ಉನ್ನಿಕೃಷ್ಣ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ವಿ.ಹಿಂ.ಪ ಪ್ರಮುಖರಾದ ಸುರೇಶ್ ಮುತ್ತಪ್ಪ ಹಿಂದೂ ಮಲಯಾಳಿ ಸಂಘದ ವಾಸುದೇವ್, ಚೇತನ್ ಇನ್ನಿತರರು ಇದ್ದರು. ಮೆರವಣಿಗೆಯಲ್ಲಿ ಕಡಗದಾಳು, ನೀರುಕೊಲ್ಲಿ, ಸಂಪಿಗೆಕಟ್ಟೆ, ಕೆಎಸ್‌ಆರ್‌ಟಿಸಿ, ಸಂಪಿಗೆಕಟ್ಟೆ, ಕೆಎಸ್‍ಆರ್‍ಟಿಸಿ ಡಿಪೋ ಮುಂಭಾಗ, ಮೈತ್ರಿ ಜಂಕ್ಷನ್‍ನಿಂದ ಆಗಮಿಸಿದ್ದ ಮುತ್ತಪ್ಪ ದೇವರ ಕಶದೊಂದಿಗೆ ಮಹಿಳೆಯರು ಹಾಗೂ ಮಕ್ಕಳು ತಾಲಾ ಪೊಲಿಯೊಂದಿಗೆ ಭಾಗವಹಿಸಿದ್ದರು. ಮಂಗಳೂರಿನ ಕಲಾತಂಡಗಳು, ಮುತ್ತಪ್ಪ ದೇವರ ಮೂರ್ತಿಯ ಮಂಟಪದೊಂದಿಗೆ ಚಂಡೆ, ವಾದ್ಯಗಳು ಮೆರವಣಿಗೆಯನ್ನು ಮುನ್ನಡೆಸಿದವು. ವಾಹನ ದಟ್ಟಣೆಯ ನಡುವೆ ಸಾಗಿದ ಮೆರವಣಿಗೆ ಮುತ್ತಪ್ಪ ದೇವಾಲಯದಲ್ಲಿ…

Read More

ಮಡಿಕೇರಿ ಏ.8 :   ಸೋಮವಾರಪೇಟೆ ತಾಲೂಕಿನ ಗೋಪಾಲಪುರ ಚರ್ಚಿನಲ್ಲಿ ಗುಡ್ ಫ್ರೈಡೆ (ಶುಭ ಶುಕ್ರವಾರ)ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನಲ್ಲಿ ಸಂಜೆ  ಪ್ರಾರ್ಥನೆ ಆರಂಭಿಸಿ ಚರ್ಚ್ ನ ಹಿಂಭಾಗ ಇರುವ ಶಿಲುಬೆಟ್ಟದಲ್ಲಿ 15 ಶಿಲುಬೆಯ ಪ್ರಾರ್ಥನೆಯನ್ನು ಮಾಡಿ ಗುಡ್ ಫ್ರೈಡೆ ಆಚರಿಸಲಾಯಿತು. ಈ ಸಂದರ್ಭ  ಫಾದರ್ ಜಾಕಬ್ ಕೊಲ್ಲನೂರು ದೇವರ ಸಂದೇಶವನ್ನು ಭಕ್ತಾದಿಗಳಿಗೆ ಬೋಧಿಸಿದರು.  ಯೇಸುವಿನ ಪ್ರೀತಿ, ತ್ಯಾಗ, ಸಂಕೇತವಾಗಿ ಈ ಗುಡ್ ಫ್ರೈಡೆಯನ್ನು ಆಚರಿಸತ್ತೇವೆ ಎಂದು ತಿಳಿಸಿದರು. ಗೋಪಾಲಪುರ ಚರ್ಚ್ ಗುರುಗಳಾದ ಫಾದರ್ ಜಾಕಪ್  ಹಾಜರಿದ್ದರು.

Read More

ಸುಂಟಿಕೊಪ್ಪ ಏ.7 : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪವಿತ್ರ ಗುರುವಾರದ ಸಂಜೆ ಕಡೆಯ ಭೋಜನ ಮತ್ತು ಶುಭ ಶುಕ್ರವಾರ (ಗುಡ್ ಫ್ರೈಡೇ) ಅಂಗವಾಗಿ ವಿಶೇಷ ಬಲಿಪೂಜೆ ನಡೆಯಿತು. ಸಂತ ಮೇರಿ ಶಾಲಾ ಆವರಣದಲ್ಲಿ ನಡೆದ ಪ್ರಾರ್ಥನಾ ಕೂಟವನ್ನು ಮೈಸೂರು ಧರ್ಮಕೇತ್ರದ ಜೇಮ್ಸ್ ಡೊಮಿನಿಕ್ ಹಾಗೂ ದೇವಾಲಯದ ಧರ್ಮಗುರುಗಳಾದ ಫಾಧರ್ ಅರುಳ್ ಸೆಲ್ವಕುಮಾರ್ ನೇರವೇರಿಸಿದರು. ಪವಿತ್ರ ಗುರುವಾರ ಕಡೆಯ ಭೋಜನದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಬಲಿಪೂಜೆಯೊಂದಿಗೆ ಶಿಷ್ಯರ ಪಾದ ತೊಳೆಯುವ ವಿಧಿ ವಿಧಾನ ನಡೆಯಿತು. ತಾವು ಮರಣ ಹೊಂದುವ ಹಿಂದಿನ ದಿನ ಪ್ರಭುಕ್ರಿಸ್ತರು ಶಿಷ್ಯರ ಪಾದಗಳನ್ನು ತೊಳೆದು ಕಡೆಯ ಭೋಜನವನ್ನು ಸವಿದಿದ್ದ ಸ್ಮರಣೆಯನ್ನು ಮಾಡಲಾಯಿತು. ಮೈಸೂರು ಧರ್ಮಕೇತ್ರದ ಜೇಮ್ಸ್ ಡೊಮಿನಿಕ್, ಅರುಳ್ ಸೆಲ್ವಕುಮಾರ್ ಅವರು ಕ್ರೈಸ್ತ ಬಾಂಧವರ ಪಾದಗಳನ್ನು ತೊಳೆಯುವ ಸಂಪ್ರದಾಯವನ್ನು ನೆರವೇರಿಸಿದರು. ನಂತರ ಮಧ್ಯರಾತ್ರಿಯವರೆಗೆ ವಿಶೇಷ ಪ್ರಾರ್ಥನೆ ನಡೆಯಿತು. ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಶುಭ ಶುಕ್ರವಾರದ ಅಂಗವಾಗಿ ಕ್ರೈಸ್ತ ಬಾಂಧವರು ಸಂತಮೇರಿ ಶಾಲಾ ಸಭಾಂಗಣದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.…

Read More

ಮಡಿಕೇರಿ ಏ.7 : ನಗರದ ಬಾಲಭವನದ ಮಕ್ಕಳಿಗೆ ಇನ್ನರ್ ವೀಲ್ ಸಂಸ್ಥೆಯಿಂದ ದಂತ ತಪಾಸಣೆ ಮತ್ತು ಚಿಕಿತ್ಸೆಯನ್ನು ಉಚಿತವಾಗಿ ಕೈಗೊಳ್ಳಲಾಯಿತು. ಇನ್ನರ್ ವೀಲ್ ಸದಸ್ಯೆ ದಂತ ವೈದ್ಯೆ ಡಾ ವಿ. ದೀಪಾ ಅವರು ಬಾಲಭವನದ ಮಕ್ಕಳ ದಂತ ಆರೋಗ್ಯದ ತಪಾಸಣೆ ನಡೆಸಿ ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡಿದರು. ದಂತ ಸಂರಕ್ಷಣೆಯ ಬಗ್ಗೆ ಸೂಕ್ತ ಮಾಹಿತಿಯನ್ನೂ ಡಾ.ದೀಪಾ ನೀಡಿದರು. ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯರಾದ  ಉಮಾಗೌರಿ, ಮಲ್ಲಿಗೆ ಪೈ, ಶಪಾಲಿ ರೈ ಮತ್ತು ನಮಿತಾ ರೈ ಪಾಲ್ಗೊಂಡಿದ್ದರು.

Read More

ಮಡಿಕೇರಿ –    ವಿಶ್ವಚಿತ್ರಕಲಾ ದಿನದ ಅಂಗವಾಗಿ ಮತದಾನ ಮಾಡಿ ಸಂದೇಶದ ಚಿತ್ರಕಲಾ ಸ್ಪಧೆ೯. ಮಡಿಕೇರಿ ಏಪ್ರಿಲ್ 7 –    ಕೊಡಗು ಜಿಲ್ಲಾ  ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ  ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಏಪ್ರಿಲ್ 15 ರಂದು ವಿಶ್ವಚಿತ್ರ ಕಲಾ ದಿನಾಚರಣೆ ಸಂದಭ೯  ಚಿತ್ರಕಲಾ ಸ್ಪಧೆ೯ಯನ್ನು ಆಯೋಜಿಸಿದೆ ಮಡಿಕೇರಿ ರಾಜಾಸೀಟ್ ನಲ್ಲಿ ಏಪ್ರಿಲ್ 15 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಚಿತ್ರಕಲಾ ಸ್ಪಧೆ೯ ವಿದ್ಯಾಥಿ೯ಗಳು ಮತ್ತು ಸಾವ೯ಜನಿಕ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ.ವಿಶ್ವಚಿತ್ರಕಲಾ ದಿನದ ಅಂಗವಾಗಿ ಜಿಲ್ಲೆಯ ಚಿತ್ರಕಲಾವಿದರು ಕೂಡ ವೈವಿಧ್ಯಮಯ ಚಿತ್ರಕಲೆ ರಚಿಸಲಿದ್ದಾರೆ. ವಿದ್ಯಾಥಿ೯ಗಳು ಮತ್ತು ಸಾವ೯ಜನಿಕ ವಿಭಾಗದಲ್ಲಿ ನಡೆಯುವ ಚಿತ್ರಕಲಾ ಸ್ಪಧೆ೯ಯಲ್ಲಿ  ಮತದಾನದ ಮಹತ್ವದ ವಿಷಯದಲ್ಲಿ ಚಿತ್ರಕಲೆ ರಚಿಸಬಹುದಾಗಿದೆ. ಪ್ರೌಡಶಾಲಾ ಮತ್ತು ಕಾಲೇಜು ವಿಭಾಗದಲ್ಲಿ ವಿದ್ಯಾಥಿ೯ಗಳಿಗೆ ಚಿತ್ರಕಲಾ ಸ್ಪಧೆ೯ ಆಯೋಜಿತವಾಗಿದ್ದರೆ ಸಾವ೯ಜನಿಕರಿಗೆ ಮುಕ್ತವಿಭಾಗದಲ್ಲಿ ಸ್ಪಧೆ೯ ಆಯೋಜಿಸಲ್ಪಟ್ಟಿದೆ.  ಚಿತ್ರಕಲೆಗೆ ಅಗತ್ಯ ಪರಿಕರಗಳನ್ನು ಸ್ಪಧಿ೯ಗಳೇ ತರಬೇಕು. ಇದೇ ಸಂದಭ೯ ನಾನು…

Read More

ಮಡಿಕೇರಿ ಏ.7 : ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದ ಪೀಠಾಧ್ಯಕ್ಷರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಬೃಹತ್ ಜಾಗತಿಕ ಧಾರ್ಮಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞದ ಕೊಡಗು ಜಿಲ್ಲಾ ಅಭಿಯಾನಕ್ಕೆ ಕುಶಾಲನಗರದಲ್ಲಿ ಚಾಲನೆ ನೀಡಲಾಯಿತು. ಕುಶಾಲನಗರದ ಶ್ರೀ ವಾಸವಿ ಕನ್ಯಕ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಮಠದ ಸಂಕರ್ಷಣ ಪ್ರಖಂಡದ ಗೀತಾ ಪ್ರಚಾರಕ ಶ್ರೀ ರಮಣ ಆಚಾರ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭಿಯಾನದ ಜಿಲ್ಲಾ ಗೌರವಾಧ್ಯಕ್ಷರಾಗಿ ಕುಶಾಲನಗರದ ಉದ್ಯಮಿ ಎಸ್ ಕೆ ಸತೀಶ್ ಅವರನ್ನು ಜಿಲ್ಲಾ ಗೌರವ ಸಲಹೆಗಾರರಾಗಿ ಹಿರಿಯ ಪತ್ರಕರ್ತರಾದ ಜಿ. ಚಿದ್ವಿವಿಲಾಸ್ ಆಯ್ಕೆ ಮಾಡಲಾಯಿತು. ಕೊಡಗು ಜಿಲ್ಲಾ ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ಗೌರವಾಧ್ಯಕ್ಷರಾಗಿ ಆಯ್ಕೆಗೊಂಡ ಎಸ್ ಕೆ ಸತೀಶ್ ಅವರು ಜಿಲ್ಲಾ ತಾಲೂಕು ಮತ್ತು ಗ್ರಾಮವಾರು ಸಂಯೋಜಕರನ್ನು ಘೋಷಿಸಿದರು. ಜಿಲ್ಲೆಯ ತಾಲೂಕುಗಳಿಗೆ ಹಾಗೂ ಗ್ರಾಮವಾರು ಸಂಯೋಜಕರುಗಳನ್ನು ನೇಮಕ ಮಾಡಲಾಯಿತು. ಕೋಟಿಗೀತಾ ಲೇಖನ ಯಜ್ಞದ ಕೊಡಗು ಜಿಲ್ಲಾ ಮಹಿಳಾ ಘಟಕದ ಸಂಯೋಜಿಕಿಯಾಗಿ ಅಪೇಕ್ಷಿಸುವವರು…

Read More