ಲೇಖಕ: admin

ಮಡಿಕೇರಿ ಏ.7 : ಪಕ್ಷದಲ್ಲಿ ಭಿನ್ನಾಭಿಪ್ರಾಯ ಬದಿಗೊತ್ತಿ ಕೊಡಗು ಜಿಲ್ಲೆಯಲ್ಲಿ ಎರಡು ವಿಧಾನಸಭಾ ಸ್ಥಾನಗಳನ್ನು ಕಾಂಗ್ರೆಸ್ಸಿಗೆ ಒಲಿಸಿಕೊಳ್ಳುವ ಮೂಲಕ ಕೊಡಗು ಜಿಲ್ಲೆಯನ್ನು ಬಿಜೆಪಿ ಮುಕ್ತವನ್ನಾಗಿಸಬೇಕಾಗಿದೆ ಎಂದು ಕಾಂಗ್ರೆಸ್ ಪ್ರಮುಖರು ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಎಸ್.ಚಂದ್ರಮೌಳಿ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದಲ್ಲಿ ಅಭ್ಯರ್ಥಿಗಳು ಸಾಂಕೇತಿಕ ಮಾತ್ರ, ಕಾಂಗ್ರೆಸ್ ಪಕ್ಷದ ಗೆಲುವು ಮುಖ್ಯ ಎಂದರು. ಜಿಲ್ಲೆಯಲ್ಲಿರುವ ಬಿಜೆಪಿ ವಿರುದ್ಧದ ಅಲೆಯನ್ನು ಬಂಡವಾಳವನ್ನಾಗಿಸಿಕೊoಡು ಕಾರ್ಯನಿರ್ವಹಿಸಿ ಪ್ರತಿಯೊಬ್ಬರು ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕಾಗಿದೆ ಎಂದರು ಈ ನಿಟ್ಟಿನಲ್ಲಿ ಪಕ್ಷದಲ್ಲಿ ಒಗ್ಗಟ್ಟಿನ ಅಗತ್ಯವಿದೆ ಎಂದ ಚಂದ್ರಮೌಳಿ, ರಾಜಕಾರಣದಲ್ಲಿ ಆಕಾಂಕ್ಷಿಗಳ ಸಂಖ್ಯೆ ಅಧಿಕವಿದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಬೇಕಾಗಿದೆ ಎಂದು ಹೇಳಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದಿಂದ ಡಾ. ಮಂತರ್ ಗೌಡ ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ, ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳೊಂದಿಗೆ ಒಂದು ಪ್ರಬಲ ಸಮುದಾಯದ ಮತಗಳು ಸೇರಿ ಒಟ್ಟಾರೆ ಮಂತರ್ ಗೌಡ ಅವರ ಗೆಲುವಿಗೆ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ತಾನು ಈಗಾಗಲೇ ಕಾರ್ಯಾಂಗ, ನ್ಯಾಯಾಂಗದಲ್ಲಿ…

Read More

ಕುಶಾಲನಗರ ಏ.7 :  ಕುಶಾಲನಗರದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಕೇಂದ್ರ ಸರ್ಕಾರ ನೀಡುವ ರಾಷ್ಟ್ರಮಟ್ಟದ “ನಾನಾಜಿ ದೇಶಮುಖ್ ಸರ್ವೋತ್ತಮ್ ಪಂಚಾಯತ್ ಸತತ ವಿಕಾಸ್” ಪುರಸ್ಕಾರ ಕ್ಕೆ ಆಯ್ಕೆಯಾಗಿದೆ.  2023 ನೇ ಸಾಲಿನ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಗಳನ್ನು ಘೋಷಿಸಲಾಗಿದ್ದು ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಪ್ರಶಸ್ತಿಯ ಹೆಗ್ಗಳಿಕೆಗೆ ಪಾತ್ರವಾಗಿದೆ  ನಾನಾಜಿ   ದೇಶಮುಖ್ ಸರ್ವೋತ್ತಮ್ ಪಂಚಾಯ್ತಿ ಸತತ ವಿಕಾಸ ಪುರಸ್ಕಾರ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯಿತಿಗಳಿಗೆ ನೀಡಲಾಗುತ್ತಿದ್ದು  ಪ್ರಥಮ ಬಹುಮಾನ 1.5 ಕೋಟಿ ಎರಡನೇ ಬಹುಮಾನ 75 ಲಕ್ಷ ಹಾಗೂ ಮೂರನೇ ಬಹುಮಾನ ಮೊತ್ತ 50 ಲಕ್ಷ ರೂಪಾಯಿಗಳಾಗಿರುತ್ತದೆ. 2021-22 ನೇ ಸಾಲಿನಲ್ಲಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಗ್ರಾಮ ಪಂಚಾಯಿತಿ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ. ಮುಳ್ಳುಸೋಗೆ  ಗ್ರಾಮ ಪಂಚಾಯಿತಿಗೆ ಇದೀಗ 1.5 ಕೋಟಿ ರೂ. ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿದೆ.  ಇದೀಗ ಮುಳ್ಳುಸೋಗೆ  ಗ್ರಾಮ ಪಂಚಾಯಿತಿ ಈ…

Read More

ಮಡಿಕೇರಿ ಏ.7 : ರಾಜ್ಯ ವಿಧಾನಸಭಾ ಚುನಾವಣೆಗೆ ಈ ಬಾರಿ ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ ಅವರ ಹೆಸರು ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಮಂತರ್ ಗೌಡ ಅವರ ಪ್ರಭುದ್ಧ ಅಭಿವೃದ್ಧಿ ಯೋಚನೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೊಡಗು ಸಂಪ್ರಾದಾಯಿಕ ಕೃಷಿ ಆಧಾರಿತ ನಾಡು, ಕೃಷಿ ಬಿಕಟ್ಟು ಇಲ್ಲಿನ ಜನತೆಗೆ ತೊಂದರೆ ಮಾಡಿದೆ. ಯುವಕರನ್ನು ಅತಂತ್ರವಾಗಿ ಹೊರ ಜಿಲ್ಲೆಗಳಿಗೆ ತೆರಳುವಂತೆ ಮಾಡಿದೆ ಎಂದರು. ಡಾ. ಮಂಥರ್ ಗೌಡ ಅವರ ಯೋಚನೆ ಹಾಗೂ ಯೋಜನೆಗಳು ಭವಿಷ್ಯದ ಕೊಡಗನ್ನು ನಿರ್ಮಿಸಲು ಹೊರಟಿರುವ ಯೋಜನೆಗಳಗಿದ್ದು, ರಾಜ್ಯಕ್ಕೆ ಮಾದರಿಯಾಗಿದೆ. ಕೊಡಗಿನ ಗ್ರಾಮೀಣ ಶಾಲೆಗಳಿಗೆ ಮೂಲಭೂತ ಸೌಕರ್ಯ ಒಗಿಸಲು ಯೋಜನೆಯನ್ನು ಹಾಕಿಕೊಂಡಿದ್ದಾರೆ. ಕೊಡಗಿನ ಭತ್ತದ ತಳಿಗಳ ಸಂರಕ್ಷಣೆ, ಪ್ರಾಕೃತಿಗೆ ಹಾನಿ ಮಾಡದ ರೀತಿಯಲ್ಲಿ ಸುಸ್ಥಿತ ಪ್ರವಾಸೋದ್ಯಮ, ವಿವಿಧ ತಳಿಯ ತರಕಾರಿಗಳನ್ನು ಬೆಳೆದು ಆಧುನಿಕ ಮಾರುಕಟ್ಟೆಯಲ್ಲಿ ಗಮನ ಸೆಳೆಯುವುದು,…

Read More

ಗುವಾಹಟಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿದರು. ಬಳಿಕ ಜೀಪ್ ಸಫಾರಿ ನಡೆಸಿದ ರಾಷ್ಟ್ರಪತಿಗಳು, ಆನೆಗಳಿಗೆ ಆಹಾರವನ್ನು ನೀಡಿದರು. ಸಫಾರಿ ವೇಳೆ ರಾಷ್ಟ್ರಪತಿಗಳು ಒಂದು ಕೊಂಬಿನ ಘೇಂಡಾಮೃಗಗಳು, ಕಾಡು ಎಮ್ಮೆಗಳು, ಜಿಂಕೆಗಳು ಮತ್ತು ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ನೋಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಮಡಿಕೇರಿ ಏ.7 :  ನಾಪೋಕ್ಲುವಿನಲ್ಲಿ ಆಯೋಜಿತ 23ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ನಮ್ಮೆ ‘ಅಪ್ಪಚೆಟ್ಟೋಳಂಡ ಹಾಕಿ ಉತ್ಸವ’ದ ಸೆಮಿಫೈನಲ್‍ಗಳಲ್ಲಿ ವೀರೋಚಿತ ಗೆಲುವು ಸಾಧಿಸಿದ ಕುಲ್ಲೇಟಿರ ಮತ್ತು ಕುಪ್ಪಂಡ (ಕೈಕೇರಿ) ತಂಡಗಳು ಏ.9 ರಂದು ಪ್ರಶಸ್ತಿಗಾಗಿ ಸೆಣಸಲಿವೆ. ಕಿಕ್ಕಿರಿದು ನೆರೆದ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕುಲ್ಲೇಟಿರ ತಂಡ ಟೈ ಬ್ರೇಕರ್ ಮೂಲಕ ಬಲಿಷ್ಠ ನೆಲ್ಲಮಕ್ಕಡ ತಂಡವನ್ನು 4-3 ಗೋಲುಗಳ ಅಂತರದಿಂದ ಮಣಿಸುವ ಮೂಲಕ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿತು. ಅತ್ಯಂತ ಕುತೂಹಲಕಾರಿಯಾಗಿ ನಡೆದ ಪಂದ್ಯದ ಮೊದಲಾರ್ಧದ 24 ನೇ ನಿಮಿಷ ಕುಲ್ಲೇಟಿರ ತಂಡಕ್ಕೆ ದೊರೆತ ಪೆನಾಲ್ಟಿ ಕಾರ್ನರ್‍ನ್ನು ತಂಡದ ಯಾಶಿಕ್ ಅವರು ಗೋಲಾಗಿ ಪರಿವರ್ತಿಸಿ ತಂಡಕ್ಕೆ 1-0 ಗೋಲಿನ ಮುನ್ನಡೆಯನ್ನು ದೊರಕಿಸಿಕೊಟ್ಟರು. ದ್ವಿತೀಯಾರ್ಧದ 52ನೇ ನಿಮಿಷ ನೆಲ್ಲಮಕ್ಕಡ ತಂಡದ ಮೊಣ್ಣಪ್ಪ ಅವರು ಸೊಗಸಾದ ಗೋಲು ಬಾರಿಸುವ ಮೂಲಕ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತು. ನಂತರ ವಿಜೇತ ತಂಡವನ್ನು ನಿರ್ಧರಿಸಲು ನಡೆದ ಟೈಬ್ರೇಕರ್‍ನಲ್ಲಿ ಕುಲ್ಲೇಟಿರ ತಂಡದ ನಾಚಪ್ಪ, ಯತಿನ್,…

Read More

ಕುಶಾಲನಗರ, ಏ.7: ಕುಶಾಲನಗರದ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಂಗ ಸಮಿತಿ ಶ್ರೀ ರಾಮಸೇವಾ ಸಮಿತಿ ವತಿಯಿಂದ ಶ್ರೀ ರಾಮೋತ್ಸವ ಪ್ರಯುಕ್ತ ಸರಣಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಖ್ಯಾತಿಯ ತಾಳಮದ್ದಳೆ,  ಪುತ್ತೂರಿನ ಆಧೀಶಕ್ತಿ ಯಕ್ಷಗಾನ ಬಳಗದಿಂದ ಶ್ರೀರಾಮ ಪಟ್ಟಾಭಿಷೇಕ ಎಂಬ ಪೌರಾಣಿಕ‌ ಪ್ರಸಂಗ  ಪ್ರೇಕ್ಷಕರ ಗಮನ ಸೆಳೆಯಿತು. ಸುಬ್ರಾಯ ಸಂಪಾಜೆಯವರ ಕಂಚಿನ ಕಂಠದ ಭಾಗವತಿಕೆಗೆ ಪದ್ಮಶ್ರೀ ತಂಡದ ಕಲಾವಿದರು ಪೂರಕವಾದ ಅರ್ಥ ವಿವರಣೆ ನೀಡಿದರು.   

Read More

ಮಡಿಕೇರಿ ಏ.7 :  ವಿಧಾನ ಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿಯಾಗಿದ್ದ ಹರಪ್ಪಳ್ಳಿ ರವೀಂದ್ರ ಅವರು ಕಾಂಗ್ರೆಸ್ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸರ್ವತೋಮುಖ ಪ್ರಗತಿಯ ಚಿಂತನೆಯಡಿ ಕೊಡಗಿನ ಚಿತ್ರಣವನ್ನೇ ಬದಲಿಸಬೇಕೆನ್ನುವ ಉದ್ದೇಶದಿಂದ ರಾಜಕೀಯ ಅಧಿಕಾರವನ್ನು ಪಡೆಯಲು ಕಾಂಗ್ರೆಸ್ ಪಕ್ಷದಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕೊನೆಯ ಕ್ಷಣಗಳಲ್ಲಿ ಪಕ್ಷದ ಟಿಕೆಟ್ ವಂಚಿತನಾಗಿದ್ದೇನೆ. ಶನಿವಾರ ಶನಿವಾರಸಂತೆಯಲ್ಲಿ ಬೆಂಬಲಿಗರ ಸಭೆ ನಡೆಯಲಿದ್ದು, ಅಲ್ಲಿನ ನಿರ್ಧಾರದಂತೆ ಮುಂದಿನ ಹೆಜ್ಜೆ ಇಡುವುದಾಗಿ ತಿಳಿಸುತ್ತಲೆ, ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆಗಳನ್ನು ತೆರೆದಿಟ್ಟು, ಏ.17 ರಂದು ನಾಮಪತ್ರ ಸಲ್ಲಿಕೆ ಮಾಡಬೇಕೆನ್ನುವ ಉದ್ದೇಶವಿದೆಯೆಂದು ತಿಳಿಸಿದರು. ಕಳೆದ ಎರಡೂವರೆ ದಶಕಗಳಿಂದ ಪ್ರಚಾರದ ಹಂಗಿಲ್ಲದೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬರುತ್ತಿದ್ದೇನೆ. ತಾನು ಒಕ್ಕಲಿಗರ ಸಂಘದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವ ಕುಮಾರ್ ಅವರು, ಮಡಿಕೇರಿ ಕ್ಷೇತ್ರದಿಂದ ಟಿಕೆಟ್ ನೀಡುವ ಭರವಸೆ ನೀಡಿ ತನ್ನನ್ನು ಕಾಂಗ್ರೆಸ್‍ಗೆ ಕರೆ ತಂದರು. ಇದೀಗ…

Read More

ನಾಪೋಕ್ಲು ಏ.7 :   ದುಬೈಯ ಹೈ ಗೇಟ್ ಅಂತಾರಾಷ್ಟ್ರೀಯ ಶಾಲೆಯ ವತಿಯಿಂದ ನೀಡಲ್ಪಡುವ 2023ನೇ ಸಾಲಿನ ಉನ್ನತ ಪ್ರಭಾವಶಾಲಿ ಪ್ರಶಸ್ತಿಯನ್ನು ನಾಪೋಕ್ಲುವಿನ ಚೇರಿಯಪರಂಬು ನಿವಾಸಿ ಆಸಿಫ್ ಹಂಝ ಪಡೆದುಕೊಂಡಿದ್ದಾರೆ. ಆಸಿಫ್ ನಾಪೋಕ್ಲು ಸಮೀಪದ ಚೆರಿಯಪಂಬು ಗ್ರಾಮದ ಹಂಝ ಕತ್ತಣೀರ ಹಾಗೂ ಪರವಂಡ ಫಾತಿಮಾ ದಂಪತಿಯ ಪುತ್ರನಾಗಿದ್ದು, ಇವರು ದುಬೈಯ ಸೌಂದರ್ಯ ವರ್ಧಕದ ಖಾಸಗಿ ಸಂಸ್ಥೆಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವರದಿ :ಝಕರಿಯ ನಾಪೋಕ್ಲು   

Read More

ಮಡಿಕೇರಿ ಏ.7 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 16ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಏ.21 ಮತ್ತು 22 ರಂದು ನಡೆಯಲಿದೆ. ಕೇರಳದ ಪಯ್ಯನೂರ್ ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಏ.21 ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಏ.22 ರಂದು ಬೆಳಿಗ್ಗೆ 7 ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಏ.7 : ಆಸ್ಟ್ರೇಲಿಯ ನ್ಯೂ ಸೌತ್ ವೇಲ್ಸ್ ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ ಕೊಡಗಿನ ಕಲಿಯಂಡ ಚರಿಶ್ಮಾ ಭಾರೀ ಅಂತರದಲ್ಲಿ ಜಯ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಚರಿಶ್ಮಾ ಕೊಳಕೇರಿಯ ಕಲಿಯಂಡ ಮಾದಪ್ಪ ಮತ್ತು ಭಾನುಮತಿಯವರ ಪುತ್ರಿ.

Read More