ಚೆಯ್ಯಂಡಾಣೆ ಏ.6 : ಚೆಯ್ಯಂಡಾಣೆ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ. ಗ್ರಾಮದ ನರಿಯಂದಡ, ಚೇಲಾವರ,ಕರಡ ಗ್ರಾಮದಲ್ಲಿ ಸಾದಾರಣ ಮಳೆಯಾಗಿದ್ದು ಬಿಸಿಲಿನಿಂದ ಒಣಗುತ್ತಿದ್ದ ಗಿಡಗಳಿಗೆ ತಂಪೆರಗಿದಂತಿದೆ. ವರ್ಷದ ಮೊದಲ ಮಳೆ ಸುರಿದಿದ್ದು, ಕೊಡಗು ಜಿಲ್ಲೆಯ ಹಲವೆಡೆ ಮೋಡ ಮುಸುಕಿದ ವಾತಾವರಣ ಕಂಡು ಬಂದಿದೆ. ವರದಿ : ಅಶ್ರಫ್
ಲೇಖಕ: admin
ವಿರಾಜಪೇಟೆ ಏ.6 : ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ಸರ್ಕಾರ ರದ್ದು ಮಾಡಿದ ನಿರ್ಧಾರ ಸಂವಿಧಾನ ವಿರೋಧಿಯಾಗಿದೆ ಎಂದು ನಾಲ್ಕುನಾಡು ಮುಸ್ಲಿಂ ಒಕ್ಕೂಟದ ಪ್ರಮುಖ, ಅಲ್ಪಸಂಖ್ಯಾತ ಮುಖಂಡ ಕುಂಜಿಲದ ನಾಸರ್ ಮಕ್ಕಿ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿಯಲ್ಲಿ ಮುಸ್ಲಿಮರಿಗಿದ್ದ ಶೇ.4 ಮೀಸಲಾತಿಯನ್ನು ರದ್ದು ಮಾಡಿರುವುದು ಜನದ್ರೋಹದ ಕ್ರಮವಾಗಿದೆ. ಮುಸ್ಲಿಮರಿಗೆ 2(ಬಿ) ಪ್ರವರ್ಗದಡಿ ಇದ್ದ ಮೀಸಲಾತಿಯನ್ನು ರದ್ದು ಮಾಡಿ ಒಕ್ಕಲಿಗರಿಗೆ ಮತ್ತು ಪಂಚಮಸಾಲಿ ಸಮುದಾಯಕ್ಕೆ ಹಂಚಿರುವುದು ಅತ್ಯಂತ ಅವೈಜ್ಞಾನಿಕ. ಇದು ಸಮಾಜದಲ್ಲಿ ಕೆಟ್ಟ ಸಂದೇಶ ರವಾನೆಯಾದಂತಾಗಿದೆ ಎಂದರು. ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ರಾಜಕೀಯ ಪ್ರೇರಿತವಾಗಿ ಕೈಗೊಂಡ ನಿರ್ಧಾರ ಇದಾಗಿದೆ ಎಂದು ಆರೋಪಿಸಿದ ಅವರು, ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿ ತೆಗೆದಿರುವುದು ಎಂದಿಗೂ ಒಪ್ಪಲು ಸಾಧ್ಯವಿಲ್ಲ. ಮುಸ್ಲಿಂ ಸಮುದಾಯದಲ್ಲೂ ಕಡು ಬಡವರು ಮತ್ತು ಬಡವರು ಇದ್ದಾರೆ. ಮುಸ್ಲಿಮರ ಮೀಸಲಾತಿಯನ್ನು ರದ್ದುಗೊಳಿಸಿರುವುದರಿಂದ ಸಮುದಾಯದ ಪ್ರತಿಭಾವಂತರು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗಲಿದ್ದಾರೆ ಎಂದು…
ಮಡಿಕೇರಿ ಏ.6 : 2023 ವಿಧಾನ ಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ, ಬಸ್ ಹಾಗೂ ಇತರೆ ಯಾವುದೇ ವಾಹನಗಳ ಮೇಲೆ, ಯಾವುದೇ ರಾಜಕೀಯ ವ್ಯಕ್ತಿಗಳ ಭಾವಚಿತ್ರ ಅಥವಾ ಪಕ್ಷಗಳನ್ನು ಬಿಂಬಿಸುವ ಬ್ಯಾನರ್, ಬಿತ್ತಿಪತ್ರಗಳು ಹಾಗೂ ಇತರೇ ಚಿತ್ರಗಳನ್ನು ಪೂರ್ವಾನುಮತಿ ಇಲ್ಲದೆ ಪ್ರದರ್ಶಿಸುವಂತಿಲ್ಲ ಹಾಗೂ ಪ್ರದರ್ಶನದ ಬ್ಯಾನರ್/ ಕಟೌಟ್ ಇತರೆ ಚಿತ್ರಗಳನ್ನು 24 ಗಂಟೆಗಳ ಒಳಗಾಗಿ ಕಡ್ಡಾಯವಾಗಿ ತೆರವುಗೊಳಿಸುವುದು. ತಪ್ಪಿದಲ್ಲಿ ಅಂತಹ ವಾಹನಗಳನ್ನು ಚುನವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವೆಂದು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ನೋಡೆಲ್ ಅಧಿಕಾರಿ ಎಸ್.ಎನ್ . ಮಧುರ ತಿಳಿಸಿದ್ದಾರೆ.
ವಿರಾಜಪೇಟೆ: ಏ.6 : ರಾಮಭಕ್ತ ಹನುಮನ ಜಯಂತಿಯನ್ನು ವಿರಾಜಪೇಟೆ ಪಟ್ಟಣದ ಶ್ರೀವೀರಾಂಜನೇಯ ದೇವಾಲಯ ಹಾಗೂ ಚಿಕ್ಕಪೇಟೆಯ ಚತ್ರಕೆರೆಯ ಶ್ರೀಗಣಪತಿ ಆಂಜನೇಯ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಭಕ್ತರಿಂದ ಶ್ರೀರಾಮ ಭಜನೆ, ಹನುಮನ ಸಂಕೀರ್ತನೆಗಳು ನಡೆಯಿತು. ವಿಶೇಷ ಅಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ ಪೂಜೆ ನಡೆಯಿತು. ಮಹಾಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು. ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಅರ್ಚಕರು ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ನಾಪೋಕ್ಲು ಏ.6 : ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯ ಹಲವೆಡೆ ಮೋಡ ಮುಸುಕಿದ ವಾತಾವರಣ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಇದೇ ರೀತಿಯ ಹವಾಗುಣವಿದ್ದು, ಜನ ಮಳೆಗಾಗಿ ಎದುರು ನೋಡುತ್ತಿದ್ದಾರೆ. ನಾಪೋಕ್ಲು ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮಳೆ ಸುರಿದು ತಂಪಾಗಿದೆ. ಬಲ್ಲಮಾವಟಿ, ನೆಲಜಿ, ಎಮ್ಮೆಮಾಡು , ಕಕ್ಕಬ್ಬೆ, ಕೋಟೇರಿ ವ್ಯಾಪ್ತಿಯಲ್ಲಿ ಆಲಿಕಲ್ಲು ಸಹಿತ 96 ಸೆಂಟ್ ಮಳೆಯಾಗಿದೆ. ಗಾಳಿ ಮಳೆಗೆ ನಾಪೋಕ್ಲು – ಕಕ್ಕಬೆ ಮುಖ್ಯ ಸಂಪರ್ಕ ರಸ್ತೆಯ ಕೋಟೇರಿಯಲ್ಲಿ ಮರವೊಂದು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮತ್ತೆ ಉತ್ತಮ ಮಳೆಯಾಗುವ ನಿರೀಕ್ಷೆ ಮೂಡಿದೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಏ.6 : ಮೂರ್ನಾಡು ಸಮೀಪದ ಕಿಗ್ಗಾಲು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವರಿಗೆ ಕೋಟ್ಟಿ ಹಾಡುವುದು, ದೇವ ತಕ್ಕರ ಮನೆಯಿಂದ ಭಂಡಾರವನ್ನು ಬನಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆದು ಕಟ್ಟು ಸಡಿಲಿಸಿ ನಂತರ ದೈವ ಸನ್ನಿಧಿಯಲ್ಲಿ ಕುಟ್ಟಿಚಾತ ತೆರೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ನಂತರ ಭಂಡಾರವನ್ನು ಅಂಬಲಕ್ಕೆ ತಂದು ರಾತ್ರಿ ಮೆಲೇರಿಗೆ ಅಗ್ನಿ ಸ್ಪರ್ಶ ನಡೆದ ನಂತರ ಬೆಳಗ್ಗಿನವರೆಗೆ ಹಲವು ದೈವಗಳ ತೆರೆ ನಡೆಯಿತು. ಮುಂಜಾನೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆಯಿತು. ನಂತರ ಶ್ರೀ ಚಾಮುಂಡೇಶ್ವರಿ ದೈವದ ದೊಡ್ಡಮುಡಿ ತೆರೆಯೊಂದಿಗೆ ಉತ್ಸವವು ಸಂಪನ್ನಗೋಂಡಿತು.
ಸೋಮವಾರಪೇಟೆ ಏ.6 : ಸೋಮವಾರಪೇಟೆ ತಾಲ್ಲೂಕು ಆಡಳಿತದಿಂದ ಡಾ.ಬಾಬು ಜಗಜೀವನ್ರಾಂ ಅವರ 116ನೇ ಜನ್ಮದಿನಾಚರಣೆಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಏ.6 : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ ಅವರ ಹೆಸರನ್ನು ಕೆಪಿಸಿಸಿ ಘೋಷಿಸಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಮಡಿಕೇರಿ ಏ.6 : ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯ ವತಿಯಿಂದ ನೂತನ ಕೊಡಗು ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಪ್ರೊ. ಅಶೋಕ ಸಂಗಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಾಯಿ ಶಂಕರ ವಿದ್ಯಾ ಸಂಸ್ಥೆಯ ಮುಖ್ಯಸ್ಥ ಕೋಳೇರ ಝರು ಗಣಪತಿ, ಟ್ರಸ್ಟಿ ಗಾನ ಕಾರ್ಯಪ್ಪ, ಬಿ.ಇಡಿ ಪದವಿ ಕಾಲೇಜಿನ ಪ್ರಾಂಶುಪಾಲ ಪಿ.ಎ.ನಾರಾಯಣ್, ಪದವಿ ಕಾಲೇಜು ಪ್ರಾಂಶುಪಾಲ ಟಿ.ಸಿ.ಗೀತಾ ನಾಯ್ಡು ಹಾಗೂ ಸಿಬ್ಬಂದಿ ಮಂದಣ್ಣ ಹಾಜರಿದ್ದರು.
ಸಿದ್ದಾಪುರ ಏ.6 : ವಲಯ ಕಾಂಗ್ರೆಸ್ ಸಮಿತಿ ಸಲಹೆಯಂತೆ ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಸಮಿತಿಗೆ ಹೆಚ್ಚುವರಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಗ್ರಾ.ಪಂ ಸದಸ್ಯ ಈ. ಎಚ್ ಹನೀಫ ಅವರನ್ನ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸಾಬು ವರ್ಗೀಸ್ ಮುಂದುವರೆಯಲಿದ್ದಾರೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್ ತಿಳಿಸಿದ್ದಾರೆ.






