ಲೇಖಕ: admin

ಮಡಿಕೇರಿ ಮೇ 17 : ಇದೇ ಮೇ, 20 ಮತ್ತು 21 ರಂದು ನಡೆಯುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೇ, 20 ಮತ್ತು 21 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.50 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆಯು ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ 722 ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆ 240 ವಿದ್ಯಾರ್ಥಿಗಳು, ಸಂತ ಜೋಸೆಫರ ಶಾಲೆ 312 ವಿದ್ಯಾರ್ಥಿಗಳು ಒಟ್ಟು 1274 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಇರಬೇಕು ಎಂದು ಅವರು ಹೇಳಿದರು.

Read More

ಮಡಿಕೇರಿ ಮೇ 17 : ಇದೇ ಮೇ, 20 ಮತ್ತು 21 ರಂದು ನಡೆಯುವ ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೇ, 20 ಮತ್ತು 21 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆವರೆಗೆ ಮತ್ತು ಮಧ್ಯಾಹ್ನ 2.30 ರಿಂದ 3.50 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆಯು ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ 722 ವಿದ್ಯಾರ್ಥಿಗಳು, ಸಂತ ಮೈಕಲರ ಶಾಲೆ 240 ವಿದ್ಯಾರ್ಥಿಗಳು, ಸಂತ ಜೋಸೆಫರ ಶಾಲೆ 312 ವಿದ್ಯಾರ್ಥಿಗಳು ಒಟ್ಟು 1274 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಇರಬೇಕು ಎಂದು ಅವರು ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು ಅವರು ಮಾಹಿತಿ ನೀಡಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ…

Read More

ಮಡಿಕೇರಿ ಮೇ 17 :  ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವ್ಯಾಲಿ ಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಜಿಲ್ಲೆಗೆ ಸಚಿವ ಸ್ಥಾನ ದೊರೆಯದೆ ಹಲವು ವರ್ಷಗಳೇ ಕಳೆದಿದೆ. ಸುಮಾರು 20 ವರ್ಷಗಳ ನಂತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಸಚಿವ ಸಂಪುಟದಲ್ಲಿ ಕೊಡವರೊಬ್ಬರಿಗೆ ಪ್ರಾತಿನಿಧ್ಯ ನೀಡಬೇಕೆಂದು ಮನವಿ ಮಾಡಿದ್ದಾರೆ. ಕೊಡಗು ಪುಟ್ಟ ಜಿಲ್ಲೆಯಾದರು ಇಲ್ಲಿಯವರೆಗೆ ನಿರೀಕ್ಷಿತ ಅಭಿವೃದ್ಧಿಯನ್ನು ಕಂಡಿಲ್ಲ. ಜಿಲ್ಲೆಯನ್ನು ಪ್ರತಿನಿಧಿಸಲು ಸಚಿವರು ಕೂಡ ಇರಲಿಲ್ಲ. ಕೊಡಗಿನಲ್ಲಿ ಕೊಡವರ ಪರವಾಗಿ ಪ್ರಭಾವ ಬೀರಲು ಯಾವುದೇ ಮಠ, ಮಂದಿರಗಳಿಲ್ಲ. ಕೊಡವರು ಸೂಕ್ಷ್ಮ ಬುಡಕಟ್ಟು ಜನಾಂಗವಾಗಿದ್ದು, ಕೊಡವರೊಬ್ಬರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿದೆ. ಜಿಲ್ಲೆಯವರೇ ಸಚಿವರು ಹಾಗೂ ಉಸ್ತುವಾರಿ ಸಚಿವರಾದರೆ ಸ್ಥಳೀಯ ಸಮಸ್ಯೆಗಳನ್ನು ಶೀಘ್ರ ಅರಿತು ಸೂಕ್ತ ಪರಿಹಾರವನ್ನು ತಕ್ಷಣ ಕೈಗೊಳ್ಳಬಹುದಾಗಿದೆ. ಕೊಡವರ ಕುಲ ಶಾಸ್ತ್ರ ಅಧ್ಯಯನ, ಕೊಡವರನ್ನು…

Read More

ನಾಪೋಕ್ಲು  ಮೇ 17 :  ಬಲ್ಲಮಾವಟಿಯ ಭಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶರತ್ ಫ್ರೆಂಡ್ಸ್ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಕೆ.ಎ.12 ವಾರಿಯರ್ಸ್ ಕೊಡಗು ತಂಡದ ವಿರುದ್ಧ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕೆಎ 12 ತಂಡ ಏಳು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿತು. ಇದನ್ನು ಸುಲಭವಾಗಿ ಬೆನ್ನತ್ತಿದ ಶರತ್ ಫ್ರೆಂಡ್ಸ್ ತಂಡ 2.3 ಓವರ್ ನಲ್ಲಿ ಒಂದು ವಿಕೆಟ್ ನಷ್ಟಕ್ಕೆ 29 ರನ್ ಗಳಿಸಿ ಗೆಲುವು ಸಾಧಿಸಿತು. ವಿಜೇತ ಶರತ್ ಫ್ರೆಂಡ್ಸ್ ತಂಡಕ್ಕೆ ರೂ. 25555 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು ದ್ವಿತೀಯ ಸ್ಥಾನ ಪಡೆದ ಕೆಎ 12 ಕೊಡಗು ವಾರಿಯರ್ಸ್ ತಂಡಕ್ಕೆ ರೂ.13,333 ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿಎಸ್ ಸುರೇಶ್,ಟ್ರೋಫಿ ದಾನಿ ಎಂ.ಎಂ.ಅಪ್ಪಣ್ಣ,ಎಡಿಕೇರಿ…

Read More

ಮಡಿಕೇರಿ ಮೇ 17 :  ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವ ಸಮೂಹ ಯಾವುದೇ ಕಾರಣಕ್ಕೂ ಉದ್ವೇಗ ಮತ್ತು ಪ್ರಚೋದನೆಗೆ ಒಳಗಾಗಬಾರದು. ಈ ನಾಡಿನ ಕಾನೂನನ್ನು ಗೌರವಿಸುವ ಮೂಲಕ ಶಾಂತಿಯನ್ನು ಕಾಪಾಡಬೇಕು,ಅಪಪ್ರಚಾರ ಮಾಡುವವರಿಗೆ ಆಹಾರವಾಗಬಾರದು ಎಂದು ಟಿ.ಎಂ.ಶಾಹಿದ್ ಮನವಿ ಮಾಡಿದರು. ಮುಸ್ಲಿಂ ಧ್ವಜವನ್ನು ಹಾರಿಸಿದರೆ ಪಾಕಿಸ್ತಾನದ ಧ್ವಜವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರ ಹಾದಿ ತಪ್ಪಿಸಲು ಮತ್ತು ಅಶಾಂತಿಯನ್ನು ಮೂಡಿಸಲು ಈ ರೀತಿಯ ಅಪಪ್ರಚಾರಗಳು ಆರಂಭಗೊಂಡಿದೆ. ಆದ್ದರಿಂದ ರಾಜ್ಯದ ಮುಸಲ್ಮಾನರು ಹಾಗೂ ಕ್ರೈಸ್ತರು ಜಾಗೃತಗೊಳ್ಳಬೇಕು. ಪ್ರಚೋದನೆ ಮತ್ತು ಆಮಿಷಗಳಿಗೆ ಒಳಗಾಗಬಾರದು, ಯಾವುದೇ ಅನ್ಯಾಯ ಅಥವಾ ಗೊಂದಲಗಳಾದಲ್ಲಿ ಶಾಸಕರುಗಳ ಗಮನಕ್ಕೆ ತರುವ ಪ್ರಯತ್ನ ಮಾಡಿ. ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದರು. ಎಲ್ಲಾ ಸಮುದಾಯದಲ್ಲೂ ಕೆಲವರು ಕೋಮುವಾದಿಗಳಿದ್ದಾರೆ, ಯಾವುದೇ ಸಮುದಾಯ ಅಥವಾ ಸಂಘಟನೆ ಇರಲಿ. ಕಾನೂನು ಮೀರಿ ವರ್ತಿಸಿದರೆ ನೂತನ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂಬರುವ ಜಿ.ಪಂ, ತಾ.ಪಂ ಮತ್ತು ಲೋಕಸಭಾ…

Read More

ಮಡಿಕೇರಿ ಮೇ 17 :  ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಸಲ್ಮಾನರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ಮುಖ್ಯ ವಕ್ತಾರ ಮತ್ತು ಕೊಡಗು ಜಿಲ್ಲಾ ಮಾಜಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ, ಧರ್ಮ, ಭೇದ ಮರೆತು ರಾಜ್ಯದ ಸರ್ವ ಧರ್ಮೀಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿ ಅಧಿಕಾರಕ್ಕೆ ತಂದಿದ್ದಾರೆ. ಮುಸಲ್ಮಾನರು ಸಂಪೂರ್ಣವಾಗಿ ಕಾಂಗ್ರೆಸ್ ಗೆ ಮತ ಚಲಾಯಿಸುವ ಮೂಲಕ ಪಕ್ಷವನ್ನು ಬಲಗೊಳಿಸಿದ್ದಾರೆ ಎಂದರು. ಸರ್ಕಾರ ರಚಿಸುವ ಸಂದರ್ಭ ಓರ್ವ ಮುಸಲ್ಮಾನ ಶಾಸಕರಿಗೆ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಐವರು ಮುಸಲ್ಮಾನರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಪಕ್ಷದ ವರಿಷ್ಠರ ಬಳಿಯೂ ಕೋರುವುದಾಗಿ ಹೇಳಿದರು. ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಡಾ.ಮಂತರ್ ಗೌಡ ಅವರು ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ…

Read More

ಮಡಿಕೇರಿ ಮೇ 17 : ಡಿ.ಶಿವಪ್ಪ ಸ್ಮರಣಾರ್ಥ ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ 19 ರಿಂದ ಮೇ 28ರ ವರೆಗೆ ರಾಜ್ಯಮಟ್ಟದ 25ನೆ ಬೆಳ್ಳಿ ಮಹೋತ್ಸವದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಪ್ರವರ್ತಕರು ಹಾಗೂ ಗೋಲ್ಡ್ ಕಪ್ ದಾನಿ ಬಿ.ವಿನೋದ್ ಶಿವಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಪ್ರಾಥಮಿಕ ಸರ್ಕಾರಿ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೇ 19 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತು ಎ.ಎಸ್.ಪಿ. ಸುಂದರ್ ರಾಜ್, ಬ್ಲೂಬಾಯ್ಸ್ ಯುವಕ ಸಂಗದ ಸ್ಥಾಪಕರಾದ ಜೆರ್ಮಿ ಡಿಸೋಜ, ಹಿರಿಯ ಆಟಗಾರ ಪ್ಯಾಟ್ರಿಕ್ ಸೇರಿದಂತೆ ಹಲವಾರು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಾರಿ ಪಂದ್ಯಾವಳಿಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು, ಕೇರಳದ ಕ್ಯಾಲಿಕಟ್, ಮಲಪುರಂ, ಕೂತುಪರಂಬು, ಕಂಬ್ಳೆ, ಉಪ್ಪಳ, ನಂಜನಗೂಡು, ಕೆಜಿಎಫ್‍ನ ವಾರಿಯರ್ಸ್ ಪುಟ್ಬಾಲ್ ಕ್ಲಬ್, ಕೊಡಗಿನ ಪ್ರತಿಷ್ಟಿತ ತಂಡಗಳಾದ…

Read More

ನಾಪೋಕ್ಲು ಮೇ 17 :  ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು, ತಾಳ್ಮೆ, ಸಂಯಮ, ಶಿಕ್ಷಣ  ಸೇರಿದರೆ ಮಾತ್ರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ನಾಪೋಕ್ಲು ಗ್ರಾ.ಪಂ ಸದಸ್ಯ ಹಾಗೂ ಸ್ಥಳದಾನಿ ಕುಲ್ಲೇಟಿರ ಅರುಣ್ ಬೇಬ ಹೇಳಿದರು. ನಾಪೋಕ್ಲು ಬಳಿಯ ಹಳೇ ತಾಲೂಕಿನ ಶ್ರೀ ಭಗವತಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಹಳೇ ತಾಲೂಕು ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕಿ ಹಾಗೂ ಕಾರ್ಯಕರ್ತೆಯರ ಉತ್ತಮ ಸೇವೆ ಹಾಗೂ ಕಠಿಣ ಪರಿಶ್ರಮದಿಂದ ಈ ಅಂಗನವಾಡಿ ಕೇಂದ್ರವು ಮಡಿಕೇರಿ ತಾಲೂಕಿನಲ್ಲಿಯೇ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ಮಾದರಿ ಅಂಗನವಾಡಿ ಪ್ರಶಸ್ತಿ ಪಡೆದಿರುವುದು ಶ್ಲಾಘನೀಯ,ಈ ಅಂಗನವಾಡಿಯಲ್ಲಿ ಇನ್ನು ಕೆಲವು ಸಮಸ್ಯೆಗಳಿದ್ದು, ಇದನ್ನು ಸರಿಪಡಿಸಿ ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆಯುವಂತ್ತಾಗಬೇಕು. ಇದಕ್ಕೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಅರುಣ್ ಬೇಬ ಭರವಸೆ ನೀಡಿದರು.…

Read More

ಸುಂಟಿಕೊಪ್ಪ ಮೇ 16:   ಗುಡ್ಡಪ್ಪ ರೈ ಬಡಾವಣೆಯ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಉತ್ಸವದ ಅಂಗವಾಗಿ ದೇವಿಗೆ ¨ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನದ ಮಹಾಪೂಜೆ ಮಂಗಳಾರತಿಯ ಬಳಿಕ ಪ್ರಸಾದ ವಿತರಣೆ ನಡೆಯಿತು. ಸಂಜೆ 5 ಗಂಟೆಯವರೆಗೆ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸುಂಟಿಕೊಪ್ಪ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಿಂದ ನೂರಾರು ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು. ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷ ಅಯ್ಯಪ್ಪ, ಉಪಾಧ್ಯಕ್ಷ ಬಿ.ಬಿ.ಜಿನ್ನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಮೋಹನ, ಗೌರವ ಅಧ್ಯಕ್ಷ ರಾಜ ಸರ್ವ ಸದಸ್ಯರು ಹಾಜರಿದ್ದರು.

Read More

ಸೋಮವಾರಪೇಟೆ ಮೇ 16 : ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದಿಂದ ಬೇಸತ್ತ ಮತದಾರರು ಕಾಂಗ್ರೆಸ್‍ಗೆ ಮತನೀಡಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗನ್ನು ಬಿಜೆಪಿ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸಲು ತಳಮಟ್ಟದಿಂದಲೇ ಪಕ್ಷ ಸಂಘಟನೆ ಮಾಡಿದ ಹಿನ್ನೆಲೆಯಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಕ್ಕಿಸಿಕೊಳ್ಳಲಾಗಿದೆ ಎಂದು ಹೇಳಿದರು. ಬ್ಲಾಕ್‍ನ 107 ಬೂತ್‍ಗಳಲ್ಲಿ 5 ಬೂತ್‍ಗಳಲ್ಲಿ ಮಾತ್ರ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆದಿರುವುದು ಬಿಟ್ಟರೆ, ಉಳಿದ ಎಲ್ಲಾ ಬೂತ್‍ಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ ಎಂದರು. ಭ್ರಷ್ಟಾಚಾರಕ್ಕೆ ಬಿಜೆಪಿ ಪರೋಕ್ಷ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸೋಲು ಕಾಣಬೇಕಾಯಿತು. ತಾಲ್ಲೂಕು ಕಚೇರಿ ಸೇರಿದಂತೆ ಇನ್ನಿತರ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಇಲ್ಲದಂತಾಗಿದೆ. ಅಕ್ರಮ-ಸಕ್ರಮದಲ್ಲಿ ರೈತರ ಶೋಷಣೆ ಮಾಡಲಾಗಿದೆ. ಲಂಚ ನೀಡದ ಹಿನ್ನೆಲೆಯಲ್ಲಿ ದುರಸ್ತಿ ಸೇರಿದಂತೆ ಹೆಚ್ಚಿನ ಕಡತಗಳು ಕಚೇರಿಯಲ್ಲೇ ಕೊಳೆಯುತ್ತಿವೆ. ಪ್ರತಿ ಕಡತಕ್ಕೂ ಲಕ್ಷದ ಲೆಕ್ಕದಲ್ಲಿ ಹಣವನ್ನು ನಿಗದಿ ಮಾಡಿಕೊಂಡಿದ್ದಾರೆ.…

Read More