ಸೋಮವಾರಪೇಟೆ ಏ.6 : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾದಾನಕ್ಕಾಗಿ ಇಂತಹ ಶೈಕ್ಷಣಿಕ ಸಂಸ್ಥೆಗಳನ್ನು ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಬಸವ ಪಟ್ಟಣದ ತೋಟಂದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಅಭಿಪ್ರಾಯಿಸಿದರು. ಯಡೂರು ಗ್ರಾಮದ ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಹಾಗೂ ಕಾಲೇಜು ವತಿಯಿಂದ ನಡೆದ ಸರಸ್ವತಿ ಪೂಜೆ ಹಾಗೂ ಕಾಲೇಜು ಸಂಸ್ಥಾಪಕರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಲು ಅನೇಕ ದಾನಿಗಳು ತನು, ಮನ, ಧನವನ್ನು ವಿನಿಯೋಗಿಸಿದ್ದಾರೆ. ಅಂತಹವರನ್ನು ಗೌರವಿಸುವುದು ಶ್ಲಾಘನೀಯ ಎಂದು ಹೇಳಿದರು. ವಿದ್ಯಾರ್ಥಿಗಳು ರಾಷ್ಟ್ರದ ಭವ್ಯ ಪ್ರಜೆಗಳು. ಚುನಾವಣೆ ಘೋಷಣೆಯಾಗಿದೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಯುವಸಮುದಾಯ ಮತದಾನ ಮಾಢಬೇಕು. ಅದರಲ್ಲೂ ಯೋಗ್ಯ ವ್ಯಕ್ತಿಗೆ ಮತದಾನ ಮಾಡಿ ತಮ್ಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ಸಂಸ್ಥಾಪಕ ಸಮಿತಿ ಕಾರ್ಯದರ್ಶಿ ಎ.ಪಿ.ಶಂಕರಪ್ಪ ಹಾಗೂ ಶಾರದಮ್ಮ ದಂಪತಿಗಳು, ಸಂಸ್ಥಾಪಕ ಅಧ್ಯಕ್ಷ…
ಲೇಖಕ: admin
ಸೋಮವಾರಪೇಟೆ ಏ.6 : ಸೋಮವಾರಪೇಟೆ ತಾಲ್ಲೂಕು ಆಡಳಿತದಿಂದ ಡಾ.ಬಾಬು ಜಗಜೀವನ್ರಾಂ ಅವರ 116ನೇ ಜನ್ಮದಿನಾಚರಣೆಯನ್ನು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ತಹಶೀಲ್ದಾರ್ ಎಸ್.ಎನ್.ನರಗುಂದ ಅವರು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಏ.5 : ಕಾಂಗ್ರೆಸ್ ಆಡಳಿತಾವಧಿಯಲ್ಲಿ ಈ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು. ಆದರೆ ಇಂದು ಬಿಜೆಪಿ ನೇತೃತ್ವದ ಸರ್ಕಾರ ಇದೆಲ್ಲವನ್ನು ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರು ಆರೋಪಿಸಿದ್ದಾರೆ. ಸಿದ್ದಾಪುರದ ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ನ ‘ಗ್ಯಾರಂಟಿ ಕಾರ್ಡ್’ ವಿಶ್ವಾಸಾರ್ಹವಾಗಿದ್ದು, ಇತರೆ ಪಕ್ಷಗಳ ಗ್ಯಾರಂಟಿಗಳು ನಂಬಿಕೆಗೆ ಅರ್ಹವಾಗಿಲ್ಲ. ಬಿಜೆಪಿ ಸೋಲಿನ ಹತಾಶೆಯಲ್ಲಿದೆ, ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ದುಡಿಯುವ ವರ್ಗಗಳ ಕೈಗೆ ಭೂಮಿ ಹಕ್ಕು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸರು, ರೈತರಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪನವರೆ ಎಂದು ತಿಳಿಸಿದ ಮಧು ಬಂಗಾರಪ್ಪ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹಾಯಧನದೊಂದಿಗೆ ಅಡುಗೆ ಸಿಲಿಂಡರ್ ನೀಡಿದರು. ಆದರೆ…
ಮಡಿಕೇರಿ ಏ.5 : ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಟಿ.ಕೆ.ಸಾಯಿಕುಮಾರ್ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಸಿದ್ದಾಪುರದಲ್ಲಿ ಮಧು ಬಂಗಾರಪ್ಪ ಹಾಗೂ ಎ.ಎಸ್.ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಡಿಕೇರಿ ಏ.5 : ಮಡಿಕೇರಿ ನಗರಕ್ಕೆ ಕುಡಿಯುವ ನೀರು ಸರಬರಾಜು ಕಳೆದ ಎರಡು ದಿನಗಳಿಂದ ಕಡಿಮೆ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪೌರಾಯುಕ್ತರಾದ ವಿಜಯ್ ಅವರು ಇಂದು ಕೂಟುಹೊಳೆಗೆ ಭೇಟಿ ನೀಡಿ ವೀಕ್ಷಿಸಿದರು. ನಗರಸಭೆಯ ಸಹಾಯಕ ಅಭಿಯಂತರರು ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿಯಂತರರು ಹಾಗೂ ಸೀನಿಯರ್ ವಾಲ್ ಮೆನ್ ಗಳೊಂದಿಗೆ ಕೂಟುಹೊಳೆ ಜಾಕ್ ವೆಲ್ ಗೆ ಹಾಗೂ ಕುಂಡಮೇಸ್ತ್ರಿ ಜಾಕ್ ವೆಲ್ ಗೆ ಪರಿಶೀಲಿಸಲಾಯಿತು. ಪ್ರಸ್ತುತ ಇದುವರೆಗೂ ಮಳೆಯಾಗದ ಕಾರಣ ಕೂಟುಹೊಳೆಯಲ್ಲಿ ಸಂಪೂರ್ಣ ನೀರಿಲ್ಲದೆ ಬತ್ತಿದ್ದು ಇವಾಗ ಕುಂಡಾಮೇಸ್ತ್ರಿಯಿಂದ ಲಿಫ್ಟ್ ಮಾಡಿ ಕೂಟುಹೊಳೆಯಿಂದ ರನ್ ಮಾಡಿ ನಗರಕ್ಕೆ ನೀರನ್ನು ಒದಗಿಸಲಾಗುತ್ತಿದೆ. ಇದೇ ರೀತಿ ಮಳೆ ಆಗದಿದ್ದಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರನ್ನು ಕೊರತೆ ಉಂಟಾಗುವುದರಿಂದ ಇದನ್ನು ಸರಿದೂಗಿಸುವ ಹಿನ್ನೆಲೆಯಲ್ಲಿ 23 ವಾರ್ಡ್ ಗಳಲ್ಲಿ ದಿನ ಬಿಟ್ಟು ದಿನ ನೀರನ್ನು ನೀಡುವಂತಹ ಸಲಹೆಗಳು ಬಂದಿವೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ನವದೆಹಲಿ ಏ.5 : ಗಣರಾಜ್ಯೋತ್ಸವದ ಹಿನ್ನೆಲೆ ಘೋಷಿಸಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಾಧಕರಿಗೆ ಪ್ರದಾನ ಮಾಡಿದರು. ಉಮ್ಮತ್ತಾಟ್ ನೃತ್ಯ ಕಲಾವಿದೆ ಕೊಡಗಿನ ಐಮುಡಿಯಂಡ ರಾಣಿ ಮಾಚಯ್ಯ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕದ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಸಾಹಿತಿ, ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್.ಎಲ್.ಬೈರಪ್ಪ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಿರಿ ಧಾನ್ಯ ಬಳಕೆ ಕುರಿತು ಪ್ರೋತ್ಸಾಹಿಸುತ್ತಿರುವ ವೈದ್ಯ ಡಾ.ಖಾದರ್, ಬೀದರ್ ನ ರಶೀದ್ ಅಹಮ್ಮದ್ ಖಾತ್ರಿ ಸೇರಿದಂತೆ ಕರ್ನಾಟಕದ ಒಟ್ಟು 8 ಮಂದಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಮಡಿಕೇರಿ ಏ.5 : ಬೇಸಿಗೆಯ ಹಿನ್ನೆಲೆ ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಕ್ಷೀಣಿಸಿರುವುದರಿಂದ ಮಡಿಕೇರಿ ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲಾಗುವುದು ಎಂದು ಮಡಿಕೇರಿ ನಗರಸಭೆ ತಿಳಿಸಿದೆ.
ಮಡಿಕೇರಿ ಏ.5 : ಕೊಡಗಿನ ಪುರಾತನ ದೇವಾಲಯಗಳಲ್ಲಿ ಒಂದಾದ ಮಡಿಕೇರಿಯ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವವು ಏ.6 ರಿಂದ 8ರವರೆಗೆ ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ಮಾತನಾಡಿ, ಮೂರು ದಿನಗಳ ಕಾಲ ನಡೆಯಲಿರುವ ಪೂಜಾ ವಿಧಿವಿಧಾನಗಳು ಕುರಿತು ಮಾಹಿತಿ ನೀಡಿದರು. ಏ.6 ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಶಕ್ತಿಗಣಪತಿ ದೇವರಿಗೆ 21 ತೆಂಗಿನ ಕಾಯಿಗಳ ಮಹಾ ಗಣಪತಿ ಹೋಮ, 8 ಗಂಟೆಗೆ ಕಲಶ ಪೂಜೆ, ಶ್ರೀ ನಾಗದೇವರಿಗೆ ನೂರುಂಪಾಲುಂ (ನಾಗತಂಬಿಲ) ಸಮರ್ಪಣೆ, 10.30 ಗಂಟೆಗೆ ಕಲಶಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಪ್ರಸಾದ ವಿತರಣೆ ಜರುಲಿದೆ. ಸಂಜೆ 4.30 ಗಂಟೆಗೆ ಕೇರಳದ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಶ್ರೀ ಬ್ಲಾತೂರ್ ಚಂದ್ರ್ ಮಡೆಯಚ್ಚನ್ ನೇತೃತ್ವದಲ್ಲಿ ಧ್ವಜಾರೋಹಣದ ಮೂಲಕ ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಸಂಜೆ 5 ಗಂಟೆಗೆ ಶ್ರೀ ಮುತ್ತಪ್ಪ ದೈವಕೋಲಗಳ ವೀಕ್ಷಣೆಗೆ ದಾನಿಗಳ ಸಹಾಯದಿಂದ…
ಮಡಿಕೇರಿ ಏ.5 : ಪೊನ್ನಂಪೇಟೆ ತಾಲ್ಲೂಕು ಹುದಿಕೇರಿ ಗ್ರಾ.ಪಂ.ವ್ಯಾಪ್ತಿಯ ಬೆಳ್ಳೂರು ಗ್ರಾಮದ ಹೆಮ್ಮಾಡು ಕಾಲೋನಿಯಲ್ಲಿ ಕುಡಿಯುವ ನೀರಿನ ಬವಣೆಯನ್ನು ಪರಿಹರಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿದಂತೆ ಇತ್ತೀಚೆಗೆ ಸಾರ್ವಜನಿಕರು ಜಿಲ್ಲಾಡಳಿತ ಗಮನಕ್ಕೆ ತಂದಿದ್ದರು. ಆ ದಿಸೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಪೊನ್ನಂಪೇಟೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಸ್ಥಳದಲ್ಲಿಯೇ ‘ನಾನ್ ರಿಟರ್ನ್ ವಾಲ್’ ನಿಂದ ಸಮಸ್ಯೆ ಉಂಟಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಿ ಗ್ರಾಮಕ್ಕೆ ಕುಡಿಯುವ ನೀರನ್ನು ಒದಗಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಡಿಕೇರಿ ಏ.5 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಂ ಅವರ 116 ನೇ ಜನ್ಮ ದಿನಾಚರಣೆಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು. ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಇತರರು ಪುಷ್ಪನಮನ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿದ ಕೀರ್ತಿ ಬಾಬು ಜಗಜೀವನ್ ರಾಂ ಅವರಿಗೆ ಸಲ್ಲುತ್ತದೆ ಎಂದರು. ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಂ ಅವರು ಕೃಷಿ, ರಕ್ಷಣಾ ಸಚಿವರಾಗಿ ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಅವರು ಹೇಳಿದರು. ‘ಅಭಿವೃದ್ಧಿ ಹೊಂದುತ್ತಿರುವ…






