ಮಡಿಕೇರಿ, ಡಿ.8 NEWS DESK : ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ 2025–26 ನೆರವೇರಿತು. 80 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಎರಡು ವರ್ಷಗಳಿಂದ ಕೊಡಗು ವಿದ್ಯಾಲಯ ಈ ಪಂದ್ಯಾವಳಿಗೆ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕೂಡ ಅದನ್ನು ಯಶಸ್ವಿಯಾಗಿ ಆಯೋಜಿಸಿತು. ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ಅಧ್ಯಕ್ಷ ಮಲ್ಲೆಂಗಡ ರಚನ್ ಪೊನ್ನಪ್ಪ ದೀಪ ಬೆಳಗಿಸಿ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಟೇಬಲ್ ಟೆನಿಸ್ ಕ್ರೀಡೆ ಶಿಸ್ತು, ಏಕಾಗ್ರತೆ ಮತ್ತು ಕ್ರೀಡಾತ್ಮಕತೆಯನ್ನು ಬೆಳೆಸುವ ಕ್ರೀಡೆಯಾಗಿದೆ ಎಂದು ರಚನ್ ಪೊನ್ನಪ್ಪ ಹೇಳಿದರು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿದ ಶಾಲಾ ಆಡಳಿತ ಮಂಡಳಿ ನಿದೇ೯ಶಕ ಗುರುದತ್ ಸಿ. ಎಸ್. ಟೇಬಲ್ ಟೆನಿಸ್ ಮನಸ್ಸಿನ ಏಕಾಗ್ರತೆ ಮತ್ತು ಗಮನವನ್ನು ವೃದ್ಧಿಸುವ ಕ್ರೀಡೆ ಎಂದು ತಿಳಿಸಿದರು. ಟೇಬಲ್ ಟೆನ್ನಿಸ್ ಟ್ರೈನಿಂಗ್ ಅಕಾಡೆಮಿಯ ಸಂಚಾಲಕ ಹರಿಶಂಕರ್ ಸೇರಿದಂತೆ ಅತಿಥಿಗಳಿಗೆ ಗೌರವ ಸಲ್ಲಿಸಲಾಯಿತು. ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ, ಆಡಳಿತಾಧಿಕಾರಿ ರವಿ…
ಲೇಖಕ: admin
ಮಡಿಕೇರಿ ಡಿ.8 NEWS DESK : 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2025-26ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜ.1, 2025 ರಿಂದ ಡಿಸೆಂಬರ್ 31, 2025ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ…
ಮಡಿಕೇರಿ ಡಿ.8 NEWS DESK : ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡುಗಳು ಒಂದೆಡೆ ಸೇರಿ ನಡೆಸುವ ಇತಿಹಾಸ ಪ್ರಸಿದ್ಧ ‘ಕೈಮುಡಿಕೆ ಪುತ್ತರಿ ಕೋಲ್ ಮಂದ್’ ಕುಂದ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಅವರ ನೇತೃತ್ವದಲ್ಲಿ ಸಂಭ್ರಮದಿಂದ ನಡೆಯಿತು. ಮೂರು ನಾಡಿನ ತಕ್ಕ ಮುಖ್ಯಸ್ಥರು, ಮೂರು ಕಡೆಯಿಂದ ಪಟ್ಟು ಹಿಡಿದು ಓಡಿ ಬಂದು ಮಂದ್ ಮಧ್ಯ ಭಾಗದಲ್ಲಿರುವ ಆಲದ ಮರಕ್ಕೆ ಕೋಲು ಬಾರಿಸುವ ಮೂಲಕ ಮಂದ್’ಗೆ ಚಾಲನೆ ನೀಡಲಾಯಿತು. ನಂತರ ಮೂರು ನಾಡಿನವರು ಒಟ್ಟಾಗಿ ಸೇರಿ ಪುತ್ತರಿ ಕೋಲು ಹೊಡೆಯುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಬಾಚಿರಣಿಯಂಡ ಅಪ್ಪಣ್ಣ ಹಾಗೂ ಅಖಿಲ ಕೊಡವ ಸಮಾಜ ಪೊಮ್ಮಕಡ…
ದಾದರ್ (ಹೆಬ್ಬಾಲೆ) NEWS DESK : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಮುಂಬೈನ ದಾದರ್ ನ ಚೈತ್ಯ ಭೂಮಿಗೆ ದೇಶ ವಿವಿಧೆಡೆಯಿಂದ ಜನ ಸಾಗರವೇ ಹರಿದು ಬಂದಿತು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿವಸ್ ಎಂದು ಆಚರಿಸಲಾಗುತ್ತದೆ. ಅವರಿಗೆ ಗೌರವ ಸಲ್ಲಿಸಲು ಲಕ್ಷಾಂತರ ಜನರು ಪ್ರತಿ ವರ್ಷ ದಾದರ್ ನಲ್ಲಿ ಸೇರುತ್ತಾರೆ. ಮತ್ತು ಅನೇಕರು ದಾದರ್ನ ಚೈತ್ಯ ಭೂಮಿಗೆ “ಜೈ ಭೀಮ್” ಜೈ ಭೀಮ್ ಎಂದು ಕೂಗುತ್ತಾ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುತ್ತಾರೆ. ಶ್ವೇತ ವರ್ಣದ ವಸ್ತ್ರ ಹಾಗೂ ನೀಲಿ ಬಣ್ಣ ಟವಲ್ ಅನ್ನು ಧರಿಸಿಕೊಂಡು ಆಗಮಿಸಿದ್ದ ಅಭಿಮಾನಿಗಳು ಅಂಬೇಡ್ಕರ್ ಅಮರ್ ಹೇ,ಜೈ ಜೈ ಭೀಮ್, ಬಾಬಾ ಸಹೇಬ್ ಕೀ ಜೈ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಹತ್ತಾರು ಕಿಲೋಮೀಟರ್ ಉದ್ದದ ಸರದಿ ಸಾಲಿನಲ್ಲಿ ಬಂದು ಅಂಬೇಡ್ಕರ್ ಸಮಾಧಿ ವೀಕ್ಷಣೆ ಮಾಡಿ ಗೌರವ ಸಲ್ಲಿಸಿದರು. ಮಹಾಪರಿನಿರ್ವಾಣ ದಿವಸ್ ಅವರ ಅಸಾಧಾರಣ ಕೊಡುಗೆಗಳನ್ನು ಗೌರವಿಸುವ ಮತ್ತು ನ್ಯಾಯಯುತ ಮತ್ತು…
ಕುಶಾಲನಗರ ಡಿ.8 NEWS DESK : ಕೊಡಗು ಜಿಲ್ಲೆಯ ಅರೆಸೇನಾಪಡೆ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರನ್ನು ಕುಶಾಲನಗರದ ಪುರಸಭೆಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಕಳೆದ 13 ವರ್ಷಗಳಿಂದ ಮಡಿಕೇರಿಯ ಮಹದೇವಪೇಟೆಯಲ್ಲಿ ಖಾಸಗಿ ಕಟ್ಟಡದಲ್ಲಿ ವರ್ಷಕ್ಕೆ 50 ಸಾವಿರ ಬಾಡಿಗೆಯಲ್ಲಿ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಅರೆಸೇನಾಪಡೆಗೆ ಸೇರಿದ ಹಾಲಿ ಮತ್ತು ಮಾಜಿ 4000 ಯೋಧರಿದ್ದೇವೆ. ನಮ್ಮಲ್ಲಿ ವಯಸ್ಸಾದ ನಿವೃತ್ತ ಯೋಧರು ಹೆಚ್ಚಿನ ಸಂಖ್ಯೆಯಲ್ಲಿದ್ದು ಕೆಲವರು ವಯೋಸಹವಾಗಿ ಸಾವನ್ನಪ್ಪುತ್ತಿದ್ದಾರೆ. ಅವರಿಗೆ ಮರಣ ನಿಧಿ ಕೊಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕುಶಾಲನಗರದ ಮುಳ್ಳುಸೋಗೆಯ ಸರ್ವೆ ನಂಬರ್ 11/01 ರಲ್ಲಿ ಇರುವ 60 ಸೆಂಟು ಜಾಗವನ್ನು ಅರೆಸೇನಾಪಡೆ ಯೋಧರ ಒಕ್ಕೂಟಕ್ಕೆ ನೀಡುವ ಮೂಲಕ ಭವನ ಕಟ್ಟಿಕೊಳ್ಳಲು ಸರ್ಕಾರದಿಂದ ಜಾಗ ಹಾಗೂ ಸೂಕ್ತ ಅನುದಾನ ಒದಗಿಸಿಕೊಡಬೇಕು. ಹಾಗಾದಲ್ಲಿ ವರ್ಷಕ್ಕೊಮ್ಮೆ ಪಾವತಿಸುವ ಬಾಡಿಗೆ ಹಣ ಉಳಿತಾಯವಾದರೆ, ಮಾಜಿ ಯೋಧರ ಕುಟುಂಬಗಳಿಗೆ ನೆರವು ನೀಡಲು ಅನುವಾಗಲಿದೆ ಎಂದು ಮನವಿ ಪತ್ರದ ಮೂಲಕ ಶಾಸಕರಲ್ಲಿ…
ಕುಶಾಲನಗರ ಡಿ.8 NEWS DESK : ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಎರಡು ದಿನಗಳ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಾರ್ಷಿಕ ಶಿಬಿರ ನಡೆಯಿತು. ಕೊಡಗು ಜಿಲ್ಲಾ ಹಾಗೂ ಕುಶಾಲನಗರ ತಾಲ್ಲೂಕು ಸಮಿತಿಗಳ ವತಿಯಿಂದ ನಡೆದ ಶಿಬಿರವನ್ನು ಸ್ಕೌಟ್ಸ್ ಜಿಲ್ಲಾ ಆಯುಕ್ತರಾದ ಜಿಮ್ಮಿ ಸಿಕ್ವೇರಾ ಧ್ವಜಾರೋಹಣ ನೆರವೇರಿಸಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳ ಕಾರ್ಯಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭ ಜ್ಞಾನಗಂಗಾ ಶಾಲೆಯ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ, ಪ್ರಾಂಶುಪಾಲೆ ಸತ್ಯ ಸುಲೋಚನಾ, ಸ್ಕೌಟ್ಸ್ ತರಬೇತುದಾರ ಕೆ.ಯು.ರಂಜಿತ್, ಜಿಲ್ಲಾ ಸಂಘಟನಾ ಆಯುಕ್ತೆ ಯು.ಸಿ.ದಮಯಂತಿ, ಸಿ.ಎಂ. ಸುಲೋಚನಾ, ಕೆ.ಬಿ.ಗಣೇಶ್, ಎಂ.ಎಸ್.ಗಣೇಶ್, ಡಿ.ವಿ.ಗಣೇಶ್ ಇದ್ದರು.
ಕಾರ್ಕಳ ಡಿ.8 NEWS DESK : ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಾರ್ಷಿಕೋತ್ಸವ ಆವಿರ್ಭವವು “ಸಿಂದೂರ ಸಂಭ್ರಮ” ಪರಿಕಲ್ಪನೆಯಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಜಿ.ರಾಮಕೃಷ್ಣ ಆಚಾರ್, ಸ್ಥಾಪಕರು, ಎಸ್. ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ ಮುನಿಯಾಲು ಅವರು ಮಾತನಾಡಿ’ ಕಾಲೇಜುಗಳು ಬರಿಯ ಪಠ್ಯದ ಅಭ್ಯಾಸ ನೀಡುವ ಸ್ಥಳವಲ್ಲ. ವಿದ್ಯಾರ್ಥಿಗಳ ಸಾಮಥ್ರ್ಯವನ್ನೆತ್ತಿ ಹಿಡಿಯುವ ವೇದಿಕೆಗಳಾಗಬೇಕು. ಅಂತಹ ವೇದಿಕೆಗಳನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿ ಕೊಡುತ್ತಿರುವ ಕ್ರಿಯೇಟಿವ್ ಕಾಲೇಜಿನ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್, ವಿಶ್ರಾಂತ ಪ್ರಾಚಾರ್ಯರಾದ ಕೆ.ಗುಣಪಾಲ್ ಕಡಂಬ, ಖ್ಯಾತ ನಟ ಶನಿಲ್ ಗೌತಮ್ ಇವರು ತಮ್ಮ ಮಾತುಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಂತಹ ಕಾರ್ಯಕ್ರಮಗಳನ್ನು ಕಾಲೇಜು ಕೈಗೊಂಡಿರುವ ಬಗ್ಗೆ ಶ್ಲಾಘಿಸಿದರು. ಕ್ರಿಯೇಟಿವ್ ಯಕ್ಷಾರಾಧನಮ್ ಹವ್ಯಾಸಿ ಕಲಾವಿದರಿಂದ ‘ಶ್ರೀರಾಮಾನುಗ್ರಹ ಸಿಂದೂರ ವಿಜಯ’ ಯಕ್ಷಗಾನ ಪ್ರದರ್ಶನ ನಡೆಯಿತು. ದಿ. ಎಚ್.ಎಸ್ ವೆಂಕಟೇಶಮೂರ್ತಿಯವರ ಸವಿ ನೆನಪಿನ ಕುರಿತ ‘ಭಾವ ನಮನ’ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ…
ಮಡಿಕೇರಿ ಡಿ.8 NEWS DESK : ಹೆರವನಾಡು ಗ್ರಾಮದ ಕೆಟೋಳಿ ಮೋಹನರಾಜ್ ಎಂಬವರ ಮನೆಯ ಅಂಗಳದಲ್ಲಿದ್ದ 6 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೇರ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ನಾಪೋಕ್ಲು ಡಿ.8 NEWS DESK : `ಇಗ್ಗುತ್ತಪ್ಪ ದೇವಡ ಪುತ್ತರಿ ನಮ್ಮೆ ಪೊಯಿಲೆ ಪೊಯಿಲೆ’ ಘೋಷಣೆಯೊಂದಿಗೆ ಸಮೀಪದ ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ಮಂದ್ನಲ್ಲಿ ಭಾನುವಾರ ಹುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಹುತ್ತರಿ ಕೋಲಾಟದ ಕಾರ್ಯಕ್ರಮ ನಡೆಯಿತು. ಬೇತು ಗ್ರಾಮದ ಇತಿಹಾಸ ಪ್ರಸಿದ್ದ ಮಕ್ಕಿ ಶ್ರೀ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಕಡತಲೆ (ಖಡ್ಗ) ದೊಂದಿಗೆ ಸಾಂಪ್ರದಾಯಿಕ ಕಾಪಳ ಕಳಿ ಕೊಂಬು ಕೊಟ್ಟು ವಾಲಗ, ದುಡಿಕೊಟ್ಟ್ ಪಾಟ್ನೊಂದಿಗೆ ಬೇತು ಗ್ರಾಮದ “ಕುರುಂಬರಾಟ್” ಎಂಬಲ್ಲಿ ವಿಶ್ರಾಂತಿ ಪಡೆದು ಬಳಿಕ ಬಿದ್ದಾಟಂಡ ವಾಡೆಗೆ ಗ್ರಾಮಸ್ಥರು ಮೆರವಣಿಗೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ನೂರಂಬಡ ಮಂದ್ನಲ್ಲಿ ಬಿದ್ದಾಟಂಡ ಕುಟುಂಬದ ತಕ್ಕಮುಖ್ಯಸ್ಥರು ಸಾಂಪ್ರದಾಯಿಕ ಉಡುಪು ಬಿಳಿ ಕುಪ್ಪಸ ಧರಿಸಿ ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಂಪ್ರದಾಯದ0ತೆ ದೇವರ ತಿರುವಭರಣ ಕೋಲನ್ನು ಬರಮಾಡಿಕೊಂಡರು. ಅದರಂತೆ ನಾಪೋಕ್ಲು ಗ್ರಾಮದವರು ದುಡಿಕೊಟ್ಟ್ ಪಾಟ್ಆಗಿ ವಾಡೆಗೆ ಆಗಮಿಸಿದ್ದರು. ಹಾಗೇನೆ ಕೊಳಕೇರಿಯ ಗ್ರಾಮಸ್ಥರು ಬರುತ್ತಿದ್ದಂತೆ ಅವರನ್ನು…
ಬೆಂಗಳೂರು NEWS DESK ಡಿ.7 : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ನಡೆಯಿತು. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ್ ಕುಮಾರ್ ಪಂದ್ಯಾಟವನ್ನು ಉದ್ಘಾಟಿಸಿದರು. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಮಾತನಾಡಿ ಪಂದ್ಯಾಟವು ವಕೀಲರಿಗೆ ಹಬ್ಬದ ವಾತಾವರಣ ನಿರ್ಮಿಸಿದ್ದು, ಹಳೆ ಸ್ನೇಹಿತರ ಸಮ್ಮಿಲನ ಹಾಗೂ ಹೊಸಬರ ಪರಿಚಯಕ್ಕೆ ವೇದಿಕೆಯಾಗಿದೆ ಎಂದರು. ಪತ್ನಿ ಕಾಂಚನ್ ಪೊನ್ನಣ್ಣ ಮತ್ತಿತರರು ಉಪಸ್ಥಿತರಿದ್ದರು.






