ಸುಂಟಿಕೊಪ್ಪ ಜ.29 NEWS DESK : ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ಆಲ್ ಇಂಡಿಯಾ ಫುಟ್ಬಾಲ್ ಹಬ್ಬಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ. ‘ಮಿಡ್ಸಿಟಿ ಎಸ್ಎಂ ವತಿಯಿಂದ 3ನೇ ವರ್ಷ ಆಲ್ ಇಂಡಿಯಾ 5ಸ್ ಫುಟ್ಬಾಲ್ ಪಂದ್ಯಾವಳಿ’ ಜ.30, 31 ಹಾಗೂ ಫೆ.1 ರಂದು ಸುಂಟಿಕೊಪ್ಪದ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ತಂಡಗಳು ಭಾಗವಹಿಸುತ್ತಿದ್ದು, ಈ ಪ್ರತಿಷ್ಠಿತ ಟೂರ್ನಿಯಲ್ಲಿ ಒಟ್ಟು 32 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಈಗಾಗಲೇ ಫುಟ್ಬಾಲ್ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಯುವ ಕ್ರೀಡಾಳುಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆಯಾಗಲಿರುವ ಈ ಪಂದ್ಯಾವಳಿ ಕೊಡಗು ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಮಹತ್ವದ ಸ್ಥಾನ ಪಡೆಯಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪಂದ್ಯಾವಳಿಯ ವಿಜೇತ ತಂಡಕ್ಕೆ ರೂ. 2,05,000 ನಗದು ಬಹುಮಾನ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ. 1,05,000 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. ಇಷ್ಟು ದೊಡ್ಡ ಮೊತ್ತದ ಬಹುಮಾನ ಘೋಷಣೆಯೇ ದೇಶದಾದ್ಯಂತ ತಂಡಗಳನ್ನು ಆಕರ್ಷಿಸುತ್ತಿದೆ. ಟೂರ್ನಿಗೆ ಪ್ರವೇಶ…
ಲೇಖಕ: admin
ಬೆಂಗಳೂರು ಜ.29 NEWS DESK : ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಗಣರಾಜ್ಯೋತ್ಸವ ಶಿಬಿರ -2026 (ಆರ್ ಡಿಸಿ -2026) ನಲ್ಲಿ ಕರ್ನಾಟಕ ಮತ್ತು ಗೋವಾದ ಎನ್ ಸಿಸಿ ನಿರ್ದೇಶನಾಲಯ ಸತತ 2ನೇ ಬಾರಿಗೆ ಪ್ರತಿಷ್ಠಿತ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ದೇಶಾದ್ಯಂತ 17 ನಿರ್ದೇಶನಾಲಯಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಒಟ್ಟಾರೆ, ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆರ್ ಡಿಸಿ -2026ನಲ್ಲಿ ಭಾಗವಹಿಸಿದ್ದ ಎಲ್ಲ 16 ನಿರ್ದೇಶನಾಲಯಗಳನ್ನು ಹಿಂದಿಕ್ಕಿ ಕರ್ನಾಟಕ ಮತ್ತು ಗೋವಾದ ಕೆಡೆಟ್ ಗಳು ಅತ್ಯುತ್ತಮ ಪಥಸಂಚಲನ , ಫೈರಿಂಗ್ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಸಾಧಾರಣ ಪ್ರದರ್ಶನಗಳನ್ನು ನೀಡಿದ್ದಾರೆ. ಈ ಗಮನಾರ್ಹ ಸಾಧನೆಯು ನಿರ್ದೇಶನಾಲಯದ ಸ್ಥಿರ ಶ್ರೇಷ್ಠತೆ, ಶಿಸ್ತು ಹಾಗೂ ಉನ್ನತ ತರಬೇತಿ ಮಾನದಂಡಗಳ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ರಕ್ಷಣಾ ಸಚಿವಾಲಯದ ಪ್ರಕಾರ, ವರ್ಷವಿಡೀ ವ್ಯಾಪಕ ಶ್ರೇಣಿಯ ಎನ್ ಸಿಸಿ ಚಟುವಟಿಕೆಗಳಲ್ಲಿ ಸ್ಥಿರವಾದ ಬಹುವಿಧದ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ನಿರ್ದೇಶನಾಲಯಕ್ಕೆ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿಯನ್ನು ನೀಡಲಾಗುವುದು. ಮೌಲ್ಯಮಾಪನ ಮಾನದಂಡಗಳಲ್ಲಿ ಪ್ರಮುಖವಾಗಿ…
ಕುಶಾಲನಗರ ಜ.29 NEWS DESK : ಗೊಂದಿಬಸವನಹಳ್ಳಿ ರಸ್ತೆಯಲ್ಲಿ ಇರುವ ಬಲಮರಿ ಗಣಪತಿ ದೇವಾಲಯದ 28ನೇ ವಾರ್ಷಿಕೋತ್ಸವ ಹಾಗೂ ಪೂಜಾ ಕಾರ್ಯಕ್ರಮ ಕಳೆದ ಎರಡು ದಿನಗಳಿಂದ ಶ್ರದ್ಧಾಭಕ್ತಿಯಿಂದ ನೆರವೇರಿತು. ಬುಧವಾರ ಕಳಸ ಸ್ಥಾಪನೆ, ಶುದ್ದಿ ಪುಣ್ಯಾಹ, ಗಣಪತಿ ಹೋಮ, ನವಗ್ರಹ ಪೂಜೆ ಸೇರಿದಂತೆ ಇತರೇ ಧಾರ್ಮಿಕ ಕಾರ್ಯಗಳು ಜರುಗಿದವು. ಗುರುವಾರ ಬೆಳಗ್ಗೆ ಗಣಪತಿ ಹೋಮ, ಸ್ವಾಮಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಗಣಪತಿ ದೇವರನ್ನು ಬಗೆ ಬಗೆಯ ಪುಷ್ಪಗಳಿಂದ ಅಲಂಕಾರ ಮಾಡಿ ಮಹಾ ಮಹಾ ಮಂಗಳಾರತಿ ನೆರವೇರಿಸಲಾಯಿತು. ಬಳಿಕ ನೆರೆದ ಭಕ್ತರಿಗೆ ಪ್ರಸಾದ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೇವಾಲಯದ ಅರ್ಚಕ ಪ್ರಕಾಶ್ ಭಟ್ ನೇತೃತ್ವದ ಅರ್ಚಕರ ತಂಡದಿಂದ ಪೂಜಾ ವಿಧಿಗಳು ನಡೆದವು. ದೇವಾಲಯ ಸಮಿತಿ ಗೌರವಾಧ್ಯಕ್ಷ ಎಂ.ಕೆ.ದಿನೇಶ್, ನಿಕಟಪೂರ್ವ ಅಧ್ಯಕ್ಷ ರೇಣುಕುಮಾರ್, ಪ್ರಭಾರ ಅಧ್ಯಕ್ಷ ಕೆ.ವಿ.ಅರುಣ್, ಉಪಾಧ್ಯಕ್ಷ ಶಿವರಾಂ, ಖಜಾಂಚಿ ಬಿ.ಸಿ.ಆನಂದ್, ನಿರ್ದೇಶಕ ರಾದ ಗೋವಿಂದರಾಜ್, ರಾಮಕೃಷ್ಣಾಚಾರ್, ಪೂವಯ್ಯ, ಮುತ್ತಣ್ಣ, ಲಿಂಗಂ, ಜಿ.ಬಿ.ಜಗದೀಶ್, ಲವಕುಮಾರ್,ಭೀಮಯ್ಯ, ಎಸ್.ನಾಗರಾಜು,ಹನುಮರಾಜ್ ಸೇರಿದಂತೆ ಭಕ್ತ ಸಂಕುಲ ನೆರೆದಿತ್ತು.
ಕುಶಾಲನಗರ ಜ.29 NEWS DESK : ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸಿ ಅವರಲ್ಲಿನ ಕಲೆಯನ್ನು ಪ್ರೋತ್ಸಾಹಿಸುವ ಮೂಲಕ ಕಲಾವಿದರ ಬೆನ್ನು ತಟ್ಟುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷೆ ಡಾ.ನಯನ ಹರಿಶ್ಚಂದ್ರ ಹೇಳಿದರು. ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಗುಮ್ಮನಕೊಲ್ಲಿಯ ವಾಲ್ಮೀಕಿ ಭವನದಲ್ಲಿ ನಡೆದ ಸ್ವರ ಸಂಭ್ರಮ ಕರೋಕೆ ಗಾಯನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವರ ಸಂಭ್ರಮ ಸ್ಪರ್ಧಾ ಕಾರ್ಯಕ್ರಮವಲ್ಲ. ಬದಲಿಗೆ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ. ಸಂಗೀತ ನಮ್ಮ ಜೀವನದ ಅವಿಭಾಜ್ಯ ಅಂಗ. ಸುಮಧುರ ಗೀತೆಗಳು ಮನಸ್ಸಿನ ದಣಿವಾರಿಸುತ್ತದೆ. ಈ ನಿಟ್ಟಿನಲ್ಲಿ ಗಾಯನ ಕಲಾವಿದರನ್ನು ಪ್ರೋತ್ಸಾಹಿಸಲು, ಕಲೆಯನ್ನು ಪರಿಚಯಿಸಲು ಇಂತಹ ಕಾರ್ಯಕ್ರಮಗಳು ಅತ್ಯವಶ್ಯಕ ಎಂದರು. ಕೊಡಗು, ಮೈಸೂರು, ಹಾಸನ ಜಿಲ್ಲೆಗಳ ವಿವಿಧೆಡೆಗಳಿಂದ ಆಗಮಿಸಿದ್ದ 30ಕ್ಕೂ ಅಧಿಕ ಗಾಯಕರು ಸುಮಧುರ ಗೀತೆಗಳ ಮೂಲಕ ಮನರಂಜಿಸಿದರು. ಪಾಲ್ಗೊಂಡ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಿನಿಮಾ ಕಲಾವಿದರು ಸೇರಿದಂತೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ…
ಕುಶಾಲನಗರ ಜ.29 NEWS DESK : ರೋಟರಿ ಕುಶಾಲನಗರ ಮೂಲಕ ಹಸಿ ಕಸದ ನಿರ್ವಹಣೆ ಯೋಜನೆಯೊಂದಿಗೆ ಸ್ವಚ್ಛ ಕುಶಾಲನಗರ ಅಭಿಯಾನ ಫೆ.1 ರಿಂದ ಹಮ್ಮಿಕೊಳ್ಳಲಾಗುತ್ತದೆ ಎಂದು ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ತಿಳಿಸಿದ್ದಾರೆ. ಕುಶಾಲನಗರ ರೋಟರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವ ಅಂಗವಾಗಿ ಈಗಾಗಲೇ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ ತಿಂಗಳ ಅಂತ್ಯ ತನಕ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ವಿವಿಧ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಛ ಕುಶಾಲನಗರ ನಿರ್ಮಿಸುವುದು ಸುವರ್ಣ ಮಹೋತ್ಸವದ ಧ್ಯೇಯವಾಗಿದೆ ಎಂದು ಹೇಳಿದ ಅವರು ಈ ಸಂಬಂಧ ಕುಶಾಲನಗರ ಪಟ್ಟಣದಲ್ಲಿ ಒಂದು ತಿಂಗಳ ಕಾಲ ವಾಹನಗಳ ಮೂಲಕ ನಾಗರಿಕರಿಗೆ ಕಸ ವಿಲೇವಾರಿ ಬಗ್ಗೆ ಮಾಹಿತಿ ಅರಿವು ನೀಡುವ ಕೆಲಸ ನಡೆಯಲಿದೆ ಇದರೊಂದಿಗೆ ನಮ್ಮ ತಂಡ ಪ್ರತಿ ಮನೆಮನೆಗೆ ತೆರಳಿ ಸ್ವಚ್ಛತಾ ಬಗ್ಗೆ ಮಾಹಿತಿ ನೀಡಿ ಸಹಿ ಸಂಗ್ರಹ ಯೋಜನೆ…
ನಾಪೋಕ್ಲು ಜ.29 NEWS DESK : ಕಕ್ಕಬ್ಬೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವು ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಜರುಗಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ಎ.ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು ಉದ್ಘಾಟಿಸಿ, ಕಲಿಕಾ ಹಬ್ಬಕ್ಕೆ ಶುಭ ಹಾರೈಸಿದರು. ನಂತರ ಮಕ್ಕಳಿಂದ ವಿವಿಧ ಕಲಿಕಾ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯ ವಿಜೇತರರಿಗೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭ ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪೊಂಗೆರ ಶಿಲ್ಪಾ, ಕಕ್ಕಬೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸಫಿಯ, ಇಂದಿರಾ, ಕಕ್ಕಬೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯವರಾದ ಕಲ್ಪನಾ ಪಿ.ಆರ್., ಯವಕಪಾಡಿ ಶಾಲೆಯ ಎಸ್ಡಿಎಂಸಿ ಸದಸ್ಯರಾದ ಗಿರಿಜಾ, ಕಕ್ಕಬೆ ಶಾಲೆಯ ಮುಖ್ಯೋಪಾಧ್ಯಾಯರಾದ ಮಾಲತಿ ಕ್ಲಸ್ಟರ್ ನ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದಾನಿಗಳಾದ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿನ್ನಪ್ಪ ವಿದ್ಯಾರ್ಥಿಗಳಿಗೆ ಸೇರಿದಂತೆ ಆಗಮಿಸಿದ ಸರ್ವರಿಗೂ…
ಸುಂಟಿಕೊಪ್ಪ ಜ.29 NEWS DESK : ಜಮೀನುಗಳ ಮಣ್ಣಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ನಿರ್ವಹಿಸದೆ ಇರುವುದರಿಂದ ಕೃಷಿಕರು ಕೃಷಿಯಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಲು ಕಾರಣವೆಂದು ಚೆಟ್ಟಳ್ಳಿ ಕಾಫಿ ಮಂಡಳಿಯ ಡಾ.ಸೈಯದ್ ನದಾಬ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 7ನೇ ಹೊಸಕೋಟೆ ಕಲ್ಲುಕೋರೆ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸೋಮವಾರಪೇಟೆ ತಾಲ್ಲೂಕು ಹಾಗೂ ಗುಡ್ಡೆಹೊಸೂರು ವಲಯ ಕೃಷಿ ನೀರಾವರಿ ಮತ್ತು ಮಣ್ಣು ಪರೀಕ್ಷೆ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕೃಷಿಕರು ಕಾಲ ಕಾಲಕ್ಕೆ ಮಣ್ಣು ಪರೀಕ್ಷೆಗೆ ಒಳಪಡಿಸಿಕೊಳ್ಳುವುದ್ದರಿಂದ ಮಣ್ಣಿನ ಮಹತ್ವವನ್ನು ಹೆಚ್ಚಿಸಿಕೊಳ್ಳಬಹುದಲ್ಲದೆ, ಹುಳಿ ಮಣ್ಣು ನಿರ್ವಹಣೆ ರಾಸಯನಿಕ ಗೊಬ್ಬರ ಹಾಕುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿಯವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೈತರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಾಗೂ ಗುಡ್ಡೆಹೊಸೂರು ವಲಯದ ಸತ್ಯನಾರಾಯಣ ಪೂಜಾ ಸಮಿತಿ…
ಮಡಿಕೇರಿ ಜ.29 NEWS DESK : ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಪ್ರತಿವರ್ಷ ನಡೆಸಿಕೊಂಡು ಬರುತ್ತಿರುವ ಮುಸ್ಲಿಂ ಸಮಾಜದ ಬಡ ಮತ್ತು ಅನಾಥ ಹೆಣ್ಣು ಮಕ್ಕಳ ಉಚಿತ ಸಾಮೂಹಿಕ ವಿವಾಹ ಸಮಾರಂಭ ಫೆ.1 ರಂದು ನಡೆಯಲಿದೆ. ಸುಂಟಿಕೊಪ್ಪದ ಎಸ್.ಎಸ್,ಹಾಲ್ ನಲ್ಲಿ ಪೂರ್ವಾಹ್ನ 10.30 ಗಂಟೆಗೆ ಸಮಾರಂಭ ನಡೆಯಲಿದ್ದು, ಆಯ್ದ 11 ಜೋಡಿ ವಧು ವರರು ಸತಿಪತಿಗಳಾಗಲಿದ್ದಾರೆ. ವಧುವಿಗೆ ಚಿನ್ನದ ಸರ ಮತ್ತು ಬಳೆಯನ್ನು ಅಲ್ ಅಮೀನ್ ಸಮಿತಿಯು ನೀಡಲಿದೆ. ವಧು-ವರರಿಗೆ ಉಡುಪು ಹಾಗೂ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವವರಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನೂ ಮಾಡಲಿದೆ. ಈ ಸಾಮೂಹಿಕ ವಿವಾಹಕ್ಕೆ ತಗಲುವ ವೆಚ್ಚವನ್ನು ಭರಿಸಲು ಅಲ್ ಅಮೀನ್ ಸಮಿತಿಯು ಸಮಾಜ ಬಾಂಧವರನ್ನೇ ಅವಲಂಬಿತವಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಹೆಚ್.ಅಹ್ಮದ್ ಹಾಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಾಲನಗರ ಜ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ಕ್ರೀಡೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭರತನಾಟ್ಯ, ಜಾನಪದ ನೃತ್ಯ ಹಾಗೂ ಸಮೂಹ ನೃತ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನ ರಂಜಿಸಿದರು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು. ಪೋಷಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು. ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬೇಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕಮಲಮ್ಮ ಮಾತನಾಡಿ, ವಾರ್ಷಿಕೋತ್ಸವಕ್ಕೆ ಶುಭಹಾರೈಸಿದರು. ಗ್ರಾಮಸ್ಥರು ಹಾಗೂ ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಎಲ್ಲಾರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಾಲೆಗಳು ಹೊಣೆಗಾರಿಕೆ ಬಹುಮುಖ್ಯವಾದರೂ…
ಮಡಿಕೇರಿ ಜ.29 NEWS DESK : ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಕೊಡಗು, ಪರಾಕ್ರಮ್ ದಿವಸ್- ಪರೀಕ್ಷಾ ಪೇ ಚರ್ಚಾದೊಂದಿಗೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದಂದು ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಕೊಡಗು ಶಾಲೆಯಲ್ಲಿ ಪರಾಕ್ರಮ್ ದಿವಸ್ ಆಚರಿಸಲಾಯಿತು. ಪರೀಕ್ಷಾ ಪೇ ಚರ್ಚಾ- ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಸಕಾರಾತ್ಮಕತೆಯಿಂದ ಪರೀಕ್ಷೆಯನ್ನು ಸಮೀಪಿಸಲು ಮತ್ತು ಅವುಗಳನ್ನು ಹಬ್ಬದಂತೆ ಆಚರಿಸಲು ಪ್ರೇರೇಪಿಸುವ ಮಹತ್ವದ ಸಾಮೂಹಿಕ ಚಳುವಳಿಯಾಗಿ ವಿಕಸನಗೊಂಡಿದೆ ಎಂದು ಗಣ್ಯರು ಹೇಳಿದರು. ಜ.12 ರಿಂದ ಜನವರಿ 23 ರವರೆಗೆ ಪರೀಕ್ಷಾ ಪೆ ಚರ್ಚಾ ಅಡಿಯಲ್ಲಿ ಚಟುವಟಿಕೆಗಳ ಪುಷ್ಪಗುಚ್ಛವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾಲಯವು ಆಪರೇಷನ್ ಸಿಂಧೂರ್ ಕುರಿತು ರಸಪ್ರಶ್ನೆಯನ್ನು ಆಯೋಜಿಸಿತು, ಇದು ಸ್ವದೇಶಿಯ ಕೇಂದ್ರ ವಿಷಯಗಳು ಮತ್ತು ನಮ್ಮ ಸಶಸ್ತ್ರ ಪಡೆಗಳ ಧೈರ್ಯ, ಶೌರ್ಯ ಮತ್ತು ರಾಷ್ಟ್ರಕ್ಕೆ ಅವರ ನಿಸ್ವಾರ್ಥ ಸೇವೆಯ ಆಚರಣೆಯನ್ನು ಕೇಂದ್ರೀಕರಿಸಿದೆ. ಪಿಎಂಶ್ರೀ ಕೇಂದ್ರೀಯ…






