ಲೇಖಕ: admin

ಮಡಿಕೇರಿ ಏ.3 : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಣುಸೂರು ಬಳಿ ನಡೆದಿದೆ. ಕೇರಳದ ಕಣ್ಣೂರಿನ ನಿವಾಸಿ ಶ್ರೀಧರನ್ ಅವರ ಪುತ್ರ ರಾಜೇಶ್(43) ಎಂಬುವವರೇ ಮೃತರು. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಾಜೇಶ್ ಊರಿಗೆ ತೆರಳಲು ಪ್ರಯಾಣ ಬೆಳೆಸಿದ್ದರು. ಹುಣಸೂರು ಬಳಿ ಬರುತ್ತಿದ್ದ ವೇಳೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ಬಸ್ ಚಾಲಕ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರೂ ಬದುಕುಳಿಯಲಿಲ್ಲ.

Read More

ಜಾರ್ಖಂಡ್ ಏ.3 : ಜಾರ್ಖಂಡ್ ರಾಜ್ಯದ ಛತ್ರದಲ್ಲಿ ಸಿಆರ್‌ಪಿಎಫ್ ಕೋಬ್ರಾ ಬೆಟಾಲಿಯನ್, ಜೆಎಪಿ ಮತ್ತು ಐಆರ್‌ಬಿ, ಪಲಾಮು ಮತ್ತು ಚತ್ರಾ ಜಿಲ್ಲೆಗಳ ಪೊಲೀಸ್ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ನಕ್ಸಲರು ಬಲಿಯಾಗಿದ್ದಾರೆ. ಹತ್ಯೆಗೀಡಾದ ಐವರ ಪೈಕಿ ಇಬ್ಬರಿಗೆ ತಲಾ 25 ಲಕ್ಷ ರೂ. ಹಾಗೂ ಮೂವರಿಗೆ ತಲಾ 5 ಲಕ್ಷ ರೂ ಇನಾಮು ಘೋಷಣೆ ಮಾಡಲಾಗಿತ್ತು. ಹತ್ಯೆಯಾದ ನಕ್ಸಲರಿಂದ ಎಕೆ 47, ಇನ್ಸಾಸ್ ರೈಫಲ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

Read More

ಜಮ್ಮು ಏ.3 : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್ ಹಾರಾಟದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಡ್ರೋನ್ ನಿಂದ ಬೀಳಿಸಲಾಗಿದೆ ಎನ್ನಲಾಗಿರುವ ಶಸ್ತ್ರಾಸ್ತ್ರಗಳನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ. ಮುಂಜಾನೆ ರಖ್ ಬರೋತಿಯ ರೈಲ್ವೆ ಮಾರ್ಗದ ಬಳಿ ಮೂರು ಪಿಸ್ತೂಲ್ ಮತ್ತು 4 ಗ್ರೆನೇಡ್‌ಗಳು ಪತ್ತೆಯಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಾಂಬಾ) ಸುರೀಂದರ್ ಚೌಧರಿ ತಿಳಿಸಿದ್ದಾರೆ. ಹೊಲದಲ್ಲಿ ಶಂಕಿತ ಶಸ್ತ್ರಾಸ್ತ್ರ ಬಿದ್ದಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ತಂಡ ಕಾರ್ಯಾಚರಣೆ ನಡೆಸಿತು.

Read More

ವಿರಾಜಪೇಟೆ ಏ.3 : ಜೆ.ಡಿ.ಎಸ್. ಪಕ್ಷದಲ್ಲಿ ಸಕ್ರೀಯರಾಗಿದ್ದು, ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಪಕ್ಷದ ಪ್ರಮುಖರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಾಳಲೆ ಮತ್ತು ಚೆನ್ನಯ್ಯನಕೋಟೆ ಗ್ರಾಮದ ಜೆ.ಡಿ.ಎಸ್ ಪ್ರಮುಖ ನಾಯಕರಾದ ಎಂ.ಸಿ.ದೇವಯ್ಯ, ಅಕ್ಬರ್, ವಿ.ಸಿ.ದೇವರಾಜ್ ಮತ್ತು ಎಂ.ಕೆ.ವಸಂತ್ ಅವರುಗಳನ್ನು ಎ.ಎಸ್. ಪೊನ್ನಣ್ಣ ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖರು ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ, ಜಾತ್ಯಾತೀತ ನಿಲುವುಗಳ ಮೇಲೆ ತತ್ವ ಸಿದ್ದಾಂತಗಳನ್ನು ಒಪ್ಪಿ ಸಮರ್ಥ ನಾಯಕರನ್ನು ಚುನಾಯಿಸುವ ದೃಷ್ಟಿಯಿಂದ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೆರ್ಪಡೆಗೊಂಡಿರುವವರಿಗೆ ಅಭಿನಂದನೆ ಸಲ್ಲಿಸಿದರು. ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಒತ್ತು ನೀಡಿ ಎಂದು ಹೇಳಿದರು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಮಾತನಾಡಿ, ಪಕ್ಷದ ಮೇಲೆ ವಿಶ್ವಾಸವನ್ನಿಟ್ಟು…

Read More

ಮಡಿಕೇರಿ ಏ.3 : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕರ್ನಾಟಕ ಶಾಸ್ತ್ರೀಯ ನೃತ್ಯ ಮತ್ತು ತಾಳವಾದ್ಯ ವಿಭಾಗದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮಡಿಕೇರಿಯ ಎಸ್.ಪಿ.ಮೌಲ್ಯ ಪುಟ್ಟಯ್ಯ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಇವಳು ಮಡಿಕೇರಿಯ ಕೇಕಡ ಪಳಂಗಪ್ಪ (ಪ್ರವೀಣ್) ಹಾಗೂ ಮಾಲ ದಂಪತಿಗಳ ಪುತ್ರಿಯಾಗಿದ್ದು, ನಾಟ್ಯನಿಕೇತನ ನೃತ್ಯಾಲಯದ ವಿದುಷಿ ಪೂರ್ಣಿಮ ಅವರ ಬಳಿ ನೃತ್ಯಾಭ್ಯಾಸ ಮಾಡುತ್ತಿದ್ದಾಳೆ.

Read More

ನಾಪೋಕ್ಲು ಏ.3 : ನಾಪೋಕ್ಲು ನಾಡಕಚೇರಿಯಲ್ಲಿ ಸ್ಥಳೀಯ ಹೋಬಳಿಗೆ ಒಳಪಟ್ಟ ಅಂಗವಿಕಲ ಹಾಗೂ 80 ವರ್ಷ ಮೇಲ್ಪಟ್ಟ ಮತದಾರರಿಗೆ ನಮೂನೆ 12 ಡಿ ವಿತರಿಸುವ ಬಗ್ಗೆ ಬೂತ್ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿ ನಮೂನೆಯನ್ನು ವಿತರಿಸಲಾಯಿತು. ಈ ಸಂದರ್ಭ ಕಂದಾಯ ಪರಿವೀಕ್ಷಕ( Ri) ರವಿಕುಮಾರ್ ಹಾಗೂ ಗ್ರಾಮ ಲೆಕ್ಕಿಗರು, ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ : ದುಗ್ಗಳ ಸದಾನಂದ)

Read More

ನಾಪೋಕ್ಲು ಏ.3 : ಮೇರಿ ಮಾತೆ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚರ್ಚಿನ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್ ತೆಂಗಿನ ಗರಿಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಭಕ್ತಾದಿಗಳಿಗೆ ಗರಿಗಳನ್ನು ವಿತರಿಸಲಾಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿದ್ದರು. (ವರದಿ : ದುಗ್ಗಳ ಸದಾನಂದ)

Read More

ಮಡಿಕೇರಿ ಏ.3 : ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ದೊಡ್ಡಹಬ್ಬದ ಪ್ರಯುಕ್ತ ಮಧ್ಯಾಹ್ನ ಬೋಳ್‍ಕಾಟ್, ಚೋಪ್ ಆಟ್ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಏ.2 : ಸಮಾಜದಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದ್ದು, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಇಲಾಖೆಯ ಪಾತ್ರ ಮಹತ್ವದಾಗಿದೆ ಎಂದು ನಿವೃತ್ತ ವೃತ್ತನಿರೀಕ್ಷಕ ಎನ್.ದಿವಾಕರ್ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ‘ಧ್ವಜ ದಿನಾಚರಣೆ’ ಹಾಗೂ ‘ಫೀಲ್ಡ್ ಕೆ.ಎಂ.ಮಾರ್ಷಲ್ ಕಾರ್ಯಪ್ಪ ಟ್ರೋಫಿ’ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭ ಹಲವಾರು ಸವಾಲುಗಳು ಎದುರಾಗುತ್ತವೆ. ಈ ಸಂದರ್ಭ ಧೈರ್ಯಗುಂದದೇ ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಸಮಾಜದ ಸ್ವಾಸ್ಥö್ಯ ಕಾಪಾಡಲು ಪೊಲೀಸರು ಶ್ರಮಿಸುತ್ತಾರೆ. ಸಾರ್ವಜನಿಕರು ಈ ಸೇವೆಯನ್ನು ಮುಕ್ತವಾಗಿ ಶ್ಲಾಘಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಪೊಲೀಸ್ ಇಲಾಖೆಯ ಕಾರ್ಯ ದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪೊಲೀಸ್ ಧ್ವಜ ದಿನಾಚರಣೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ…

Read More

ಮಡಿಕೇರಿ ಏ.2 : ಬಸ್ ನಲ್ಲಿ ಸಿಕ್ಕಿದ ಮಾಂಗಲ್ಯ ಸರವನ್ನು ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಹುಣಸೂರು ಡಿಪೋಗೆ ಸೇರಿದ ಹುಣಸೂರು-ಕೊಯಮುತ್ತೂರು ಮಾರ್ಗದ ಬಸ್ ಚಾಲಕ ತಾಂಡವಮೂರ್ತಿ ಹಾಗೂ ನಿರ್ವಾಹಕ ಆರ್.ಪಿ.ಶಿವಕುಮಾರ್ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಂಜನಗೂಡು ತಾಲ್ಲೂಕಿನ ಸುತ್ತೂರಿನ ಮಧು ಅವರ ಪತ್ನಿ ಸುಮಾ ಅವರು ಬಸ್ ನಲ್ಲಿ ಮಾಂಗಲ್ಯ ಸರ ಕಳೆದುಕೊಂಡಿದ್ದರು. ಬಸ್ ಇಳಿದ ನಂತರ ಮಾಂಗಲ್ಯ ಸರ ಇಲ್ಲದನ್ನು ಕಂಡು ಗಾಬರಿಯಾಗಿ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಕಂಡಕ್ಟರ್ ನಂಬರ್ ಪಡೆದು ಸಂಪರ್ಕಿಸಿ ಸರದ ಬಗ್ಗೆ ಮಾಹಿತಿ ನೀಡಿದರು. ಬಸ್ ನಲ್ಲಿ ಮಾಂಗಲ್ಯ ಸರ ಬಿದ್ದಿರುವ ಬಗ್ಗೆ ಬಸ್ ಸಿಬ್ಬಂದಿ ತಿಳಿಸಿದರು. ಬಸ್ ಚಾಮರಾಜನಗರಕ್ಕೆ ಮರಳಿ ಬಂದ ನಂತರ ಹುಣಸೂರು ಡಿಪೋ ವ್ಯವಸ್ಥಾಪಕರ ಸೂಚನೆಯಂತೆ ಚಾಲಕ ತಾಂಡವಮೂರ್ತಿ ಹಾಗೂ ನಿರ್ವಾಹಕ ಆರ್.ಪಿ.ಶಿವಕುಮಾರ್ ಅವರು ಚಾಮರಾಜನಗರ ಡಿಪೋ ಮ್ಯಾನೇಜರ್ ಕುಮಾರನಾಯ್ಕ ಅವರ ಮೂಲಕ ಮಾಂಗಲ್ಯದ ಸರವನ್ನು ವಾರಸುದಾರರಿಗೆ ಒಪ್ಪಿಸಿದರು.

Read More