ಮಡಿಕೇರಿ ಏ.2 : ಪುರಾತನ ಕಾಲದ ದೇವಾಲಯದ ಜೀರ್ಣೋದ್ಧಾರದ ಸಂದರ್ಭ ಚೋಳರ ಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿದೆ. ಕುಣಿಗಲ್ ತಾಲ್ಲೂಕಿನ ಅಮೃತೂರು ನರಸಿಂಹಸ್ವಾಮಿ ದೇವಾಲಯದಲ್ಲಿ ಕಾಮಗಾರಿ ನಡೆಸುತ್ತಿದ್ದಾಗ ಮಡಿಕೆಯಲ್ಲಿ 65 ಚಿನ್ನದ ನಾಣ್ಯಗಳಿರುವುದು ಕಂಡು ಬಂದಿದೆ. ಅಮೃತೂರಿನ ದೊಡ್ಡಕೆರೆ ಆಲದ ಮರದ ಬಳಿ ಇರುವ ಪುರಾತನ ಚೋಳರಕಾಲದ ಶ್ರೀ ನರಸಿಂಹಸ್ವಾಮಿ ದೇವಾಲಯ ಇದಾಗಿದೆ. ಶಿಥಿಲಗೊಂಡ ಕಾರಣ ಜೀರ್ಣೋದ್ಧಾರ ಕಾರ್ಯ ನಡೆಸಲಾಗುತ್ತಿತ್ತು.
ಲೇಖಕ: admin
ಮಡಿಕೇರಿ ಏ.2 : ಶೌರ್ಯ ಘಟಕದ ವತಿಯಿಂದ ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಇಂದು ಸ್ವಚ್ಛತಾ ಶ್ರಮದಾನ ನಡೆಯಿತು. ಶೌರ್ಯ ಘಟಕದ ಸಂಯೋಜಕಿ ರೋಹಿಣಿ ಬಿ.ವಿ, ಸದಸ್ಯರುಗಳಾದ ತಾರಾಮಣಿ, ಯಶೋಧ, ಕವಿತ, ಜಯಶೀಲ ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರುಗಳು ಪಾಲ್ಗೊಂಡಿದ್ದರು.
ಶ್ರೀಮಂಗಲ ಏ.2 : ಟಿ.ಶೆಟ್ಟಿಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಚೆಟ್ಟಂಗಡ ಕುಟುಂಬದ ಆಶ್ರಯದಲ್ಲಿ ಎರಡನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಪಂದ್ಯಾವಳಿಗೆ ಭಾನುವಾರ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಪಂದ್ಯಾವಳಿಗೆ ಮುನ್ನ ಟಿ.ಶೆಟ್ಟಿಗೇರಿ ಕೊಡವ ಸಮಾಜದಿಂದ ಮುಖ್ಯ ಮಾರ್ಗದಲ್ಲಿ ಆಟದ ಮೈದಾನದವರೆಗೆ ಕೊಡವ ಸಂಸ್ಕೃತಿಯ ಶ್ರೀಮಂತಿಕೆಯನ್ನು ಸಾರುವ ಸಾಂಸ್ಕೃತಿಕ ಮೆರವಣಿಗೆ ಗಮನ ಸೆಳೆಯಿತು.ಚೆಟ್ಟಂಗಡ ಕುಟುಂಬ ಹಗ್ಗ ಜಗ್ಗಾಟ ಪಂದ್ಯಾವಳಿಯಿಂದ ಟಿ. ಶೆಟ್ಟಿಗೇರಿ ಪಟ್ಟಣ ಮತ್ತು ಆಟದ ಮೈದಾನದಲ್ಲಿ ಹಬ್ಬದ ಸಡಗರ ಸಂಭ್ರಮ ಮೂಡಿಸಿದೆ. ಮೆರವಣಿಗೆಯಲ್ಲಿ ತಳಿಯತಕ್ಕಿ ಬೊಳಕ್, ದುಡಿಕೊಟ್ಟ್ ಪಾಟ್, ಬಾಳೋ ಪಾಟ್,ಒಡ್ಡೋಲಗ ಸಹಿತ ನೂರಾರು ಮಹಿಳೆಯರು, ಮಕ್ಕಳು, ಪುರುಷರು ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರಗು ನೀಡಿದರು. ಮೈದಾನದಲ್ಲಿ ಊರ್ ತಕ್ಕರಾದ ಚೆಟ್ಟಂಗಡ ಹ್ಯಾರಿ ಅವರು ಮೈದಾನವನ್ನು ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ದೇಶ ತಕ್ಕರು ಹಾಗೂ ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ಹಗ್ಗ…
ಮಡಿಕೇರಿ ಏ.2 : ಪೊಲೀಸ್ ಇಲಾಖೆಯಲ್ಲಿನ ಶ್ಲಾಘನೀಯ ಸೇವೆಗೆ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ಕೊಡಗು ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಮಡಿಕೇರಿ ವಿಭಾಗದ ಸಿಐಡಿ ಅರಣ್ಯ ಸಂಚಾರಿ ಪೊಲೀಸ್ ದಳದ ಉಪನಿರೀಕ್ಷಕಿ ಸಿ.ಯು.ಸವಿ ಹಾಗೂ ಜಿಲ್ಲಾ ಅಪರಾಧ ಪತ್ತೆ ದಳದ ಮುಖ್ಯಪೇದೆ ಎಂ.ಎನ್.ನಿರಂಜನ್ ಪದಕ ವಿಜೇತರು. ಸವಿ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಸೇವೆಯಲ್ಲಿದ್ದು, ನಂಜನಗೂಡು, ಬೈಲುಕುಪ್ಪೆ ಸೇರಿದಂತೆ ವಿವಿಧೆಡೆ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಮಡಿಕೇರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮೂಲತಃ ಕೊಳಕೇರಿಯ ನಿವಾಸಿಯಾಗಿದ್ದಾರೆ. ಮಡಿಕೇರಿಯ ಅಶೋಕಪುರ ನಿವಾಸಿಯಾಗಿರುವ ಎಂ.ಎನ್.ನಿರಂಜನ್ ಅವರು ಕಳೆದ 22 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲಾ ಅಪರಾಧ ಗುಪ್ತ ದಳದಲ್ಲಿ ಸೇವೆಯಲ್ಲಿರುವ ನಿರಂಜನ್ ಅವರು ಈ ಹಿಂದೆ ಮಡಿಕೇರಿ ಗ್ರಾಮಾಂತರ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅಪರಾಧ ಗುಪ್ತ ದಳದಲ್ಲಿ ಪತ್ತೆ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇವರನ್ನು ಮುಖ್ಯಮಂತ್ರಿ ಪೊಲೀಸ್ ಪದಕಕ್ಕೆ ಆಯ್ಕೆ…
ಸುಂಟಿಕೊಪ್ಪ ಏ.2 : ದೇಶಾದ್ಯಂತ ಕ್ರೈಸ್ತ ಬಾಂಧವರು ಪಾಸ್ಕಕಾಲದ ಆಚರಣೆಯ ಅಂಗವಾಗಿ ಗರಿಗಳ ಭಾನುವಾರವನ್ನು ಆಚರಿಸಿದರು. ತೆಂಗಿನ ಗರಿಗಳೊಂದಿಗೆ ಪಾಸ್ಕಹಬ್ಬದ ಪವಿತ್ರ ವಾರದ ಆಚರಣೆಗೆ ಮುನ್ನುಡಿಯನ್ನು ಇಟ್ಟರು. ಸುಂಟಿಕೊಪ್ಪದ ಸಂತ ಅಂತೋಣಿಯವರ ದೇವಾಲಯದಲ್ಲಿ ಪೂಜೆ ಹಾಗೂ ಪ್ರಾರ್ಥನೆಯನ್ನು ಶೃದ್ಧಾಭಕ್ತಿಯಿಂದ ಸಲ್ಲಿಸಿದರು. ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಅರುಳ್ ಸೆಲ್ವಕುಮಾರ್ ಹಾಗೂ ಉಪಯಾಜಕರಾದ ಚಾಲ್ಸ್ ಅವರು ಸಂತ ಮೇರಿ ಶಾಲಾ ಮೈದಾನದಲ್ಲಿ ಇಂದು ಬೆಳಿಗ್ಗೆ ತೆಂಗಿನ ಗರಿಗಳನ್ನು ಆಶೀರ್ವಚಿಸಿ ನಂತರ ಕ್ರೈಸ್ತ ಬಾಂಧವರಿಗೆ ವಿತರಿಸಿದರು. ನಂತರ ಶಾಲಾ ಆವರಣದಿಂದ ದೇವಾಲಯದವರೆಗೆ ಗರಿಗಳನ್ನು ಹಿಡಿದು ವಿಶೇಷ ಪ್ರಾರ್ಥನೆಯೊಂದಿಗೆ ಮೆರವಣಿಗೆ ನಡೆಸಿದರು. ದೇವಾಲಯದಲ್ಲಿ ಬಲಿಪೂಜೆಯನ್ನು ಆರ್ಪಿಸುವ ಮೂಲಕ ಮುಂದಿನ ಪವಿತ್ರ ವಾರಕ್ಕೆ ಮುನ್ನುಡಿ ಇಡಲಾಯಿತು. ಸಂತ ಕ್ಲಾರ ಕನ್ಯಾಸ್ತ್ರೀ, ಕಾನ್ವೆಂಟಿನ ಕನ್ಯಾಸ್ತ್ರೀಯರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾಧಿಗಳು ಬಲಿಪೂಜೆ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಪಾಸ್ಕಕಾಲದ ಆಚರಣೆಯ ಅಂಗವಾಗಿ ಕ್ರೈಸ್ತ ಬಾಂಧವರು ಮಾಂಸಹಾರವನ್ನು ತ್ಯಜಿಸಿ 40 ದಿನಗಳ ಉಪವಾಸ ಆಚರಿಸುತ್ತಾರೆ.
ಮಡಿಕೇರಿ ಏ.2 : ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ನಿವೃತ್ತ ಉದ್ಯೋಗಿ ಆಲೀರ ಆಲಿ ಹಾಜಿ (72)ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೂಲತಃ ಪೊನ್ನಂಪೇಟೆಯವರಾಗಿದ್ದು, ಮಡಿಕೇರಿಯ ಗಣಪತಿ ಬೀದಿಯಲ್ಲಿ ನೆಲೆಸಿದ್ದರು.
ಮಡಿಕೇರಿ ಏ.2 : ಸಮಾಜದಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದ್ದು, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಇಲಾಖೆಯ ಪಾತ್ರ ಮಹತ್ವದಾಗಿದೆ ಎಂದು ನಿವೃತ್ತ ವೃತ್ತನಿರೀಕ್ಷಕ ಎನ್.ದಿವಾಕರ್ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ‘ಧ್ವಜ ದಿನಾಚರಣೆ’ ಹಾಗೂ ‘ಫೀಲ್ಡ್ ಕೆ.ಎಂ.ಮಾರ್ಷಲ್ ಕಾರ್ಯಪ್ಪ ಟ್ರೋಫಿ’ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭ ಹಲವಾರು ಸವಾಲುಗಳು ಎದುರಾಗುತ್ತವೆ. ಈ ಸಂದರ್ಭ ಧೈರ್ಯಗುಂದದೇ ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಸಮಾಜದ ಸ್ವಾಸ್ಥö್ಯ ಕಾಪಾಡಲು ಪೊಲೀಸರು ಶ್ರಮಿಸುತ್ತಾರೆ. ಸಾರ್ವಜನಿಕರು ಈ ಸೇವೆಯನ್ನು ಮುಕ್ತವಾಗಿ ಶ್ಲಾಘಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಪೊಲೀಸ್ ಇಲಾಖೆಯ ಕಾರ್ಯ ದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪೊಲೀಸ್ ಧ್ವಜ ದಿನಾಚರಣೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ…
ನಾಪೋಕ್ಲು ಏ.2 : ನಾಪೋಕ್ಲು ಶ್ರೀ ರಾಮ ಮಂದಿರದ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಅರ್ಚಕ ರವಿಉಡುಪ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಅಧಿಕ ಸಂಖ್ಯೆಯ ಭಕ್ತರು, ಶ್ರೀರಾಮ ಟ್ರಸ್ಟಿನ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ : ದುಗ್ಗಳ ಸದಾನಂದ)
ಮಡಿಕೇರಿ ಏ.2 : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಇಲಾಖೆಯಿಂದ ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 14 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಜಿಲ್ಲೆಯಿಂದ ಹೊರ ಹೋಗುವ ಮತ್ತು ಒಳ ಬರುವ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೊಡಗು ಜಿಲ್ಲೆ ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಹಿನ್ನೆಲೆಯಲ್ಲಿ 3 ಅಂತರ್ ರಾಜ್ಯ ಚೆಕ್ಪೋಸ್ಟ್ ತೆರೆಯಲಾಗಿದೆ. ಕೇರಳ ಗಡಿಯ ಕರಿಕೆ, ಮಾಕುಟ್ಟ ಹಾಗೂ ಪೆರುಂಬಾಡಿ ಅಂತರ್ ರಾಜ್ಯ ಚೆಕ್ಪೋಸ್ಟ್ ಗಳಾಗಿದ್ದು, 11 ಅಂತರ್ ಜಿಲ್ಲಾ ಚೆಕ್ಪೋಸ್ಟ್ ಗಳು ಕಾರ್ಯಾಚರಿಸುತ್ತಿವೆ. ಮೈಸೂರು, ಹಾಸನ, ಸುಳ್ಯ ಸಂಪರ್ಕಿಸುವ ಪ್ರದೇಶಗಳಲ್ಲಿ 100 ಮೀಟರ್ ಅಂತರದಲ್ಲಿ ತಲಾ 2 ಚೆಕ್ಪೋಸ್ಟ್ ತೆರೆಯಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೊಡಗಿನಿಂದ ಹೊರ ಹೋಗುವ ವಾಹನಗಳನ್ನು ಕೊಡಗು ಗಡಿಯಲ್ಲಿ ತಪಾಸಣೆ…
ಸೋಮವಾರಪೇಟೆ ಏ.2 : ಸೋಮವಾರಪೇಟೆ ಸಮೀಪದ ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಖ್ಯಾತಿಯಾಗಿರುವ ಸುಗ್ಗಿ ಉತ್ಸವಕ್ಕೆ ಪೂರ್ವಭಾವಿಯಾಗಿ ದೇವಿಯ ತವರೂರೆಂದು ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಭಾನುವಾರ ವಿಶೇಷ ಪೂಜೆ ನಡೆಯಿತು. ಸುಗ್ಗಿ ಉತ್ಸವ ಇದೇ ಏ.10 ರಂದು ನಗರಳ್ಳಿಯಲ್ಲಿ ನಡೆಯಲಿದೆ. ಅನಾದಿಕಾಲದಿಂದಲೂ ನಡೆದು ಕೊಂಡು ಬಂದAತೆ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಗ್ರಾಮದ ಮನೆಗಳಲ್ಲಿರುವ ಬಂದುಕುಗಳನ್ನು ತಂದಿಟ್ಟು ನಂತರ ಸಾಮೂಹಿಕವಾಗಿ ಪೂಜೆ ಮಾಡಲಾಯಿತು. ನಂತರ ದೇವರ ಕಟ್ಟೆಗೆ ಗ್ರಾಮಸ್ಥರು ಬಂದೂಕು ಹಿಡಿದು ಪ್ರದಕ್ಷಿಣೆ ಬಂದು ಬಂದುಕಿನಿAದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಪದ್ಧತಿಯನ್ನು ಆಚರಿಸುವುದರೊಂದಿಗೆ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಪ್ರಮುಖ ಸುಗ್ಗಿ ಆಚರಣೆಯು ಏಪ್ರಿಲ್ ಮೇ ತಿಂಗಳಲ್ಲಿ ನಗರಳ್ಳಿ ಗ್ರಾಮದ ಸುಗ್ಗಿ ಕಟ್ಟೆ ಹಾಗೂ 12 ದೇವರ ಬನದಲ್ಲಿ ವಿವಿಧ ಆಚರಣೆಗಳೊಂದಿಗೆ ನಡೆಯುತದೆ. ಈ ಆಚರಣೆಯಲ್ಲಿ ಕೂತಿನಾಡು ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೇಕನಳ್ಳಿ,…






