ಮಡಿಕೇರಿ ಮಾ.30 : ನೆಲಜಿ ಫಾರ್ಮರ್ ಡೆವಲಪ್ಮೆಂಟ್ ಹಾಗೂ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ಮೇ 27 ಮತ್ತು 28 ರಂದು ಬಲ್ಲಮಾವಟಿಯಲ್ಲಿ ‘ಕೊಡವ ಒಕ್ಕ ತೋಕ್ ನಮ್ಮೆ’ಯನ್ನು ಆಯೋಜಿಸಲಾಗಿದೆಯೆಂದು ಅಸೋಸಿಯೇಷನ್ ಅಧ್ಯಕ್ಷ ಮಂಡೀರ ನಂದಾ ನಂಜಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೇ27 ರಂದು ಪ್ರಥಮ ವರ್ಷದ ಕೊಡವ ಕುಟುಂಬಗಳ ನಡುವಿನ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ಮೇ 28 ರಂದು ಮುಕ್ತ ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕೊಡವ ಕುಟುಂಬಗಳ ನಡುವಿನ ಸ್ಪರ್ಧೆ ಮತ್ತು ಮುಕ್ತ ಸ್ಪರ್ಧೆ 0.22 ಮತ್ತು 12 ಬೋರ್ ಬಂದೂಕು ವಿಭಾಗಗಳಲ್ಲಿ ನಡೆಯಲಿದೆ. 0.22 ವಿಭಾಗ 50 ಮೀ. ಗುರಿಯನ್ನು ಹಾಗೂ 12 ಬೋರ್ ವಿಭಾಗ 30 ಮೀಟರ್ ಗುರಿಯನ್ನು ಹೊಂದಿರುತ್ತದೆಯೆಂದು ತಿಳಿಸಿದರು. ಕೊಡವ ಕುಟುಂಬಗಳ ನಡುವಿನ ತೋಕ್ ನಮ್ಮೆಯಲ್ಲಿ ಈಗಾಗಲೆ 150 ತಂಡಗಳು ಪಾಲ್ಗೊಂಡಿವೆ. ಈ ಹಿಂದೆ ಪಂದ್ಯಾವಳಿಯನ್ನು ಜ.12 ಮತ್ತು 14 ರಂದು…
ಲೇಖಕ: admin
ಶ್ರೀ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಉಡುಪಿಯ ನವಶಕ್ತಿಪೀಠಗಳಲ್ಲೊಂದಾದ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ಶಕ್ತಿಪೀಠ. ಉಡುಪಿ ಕುರಿತು ಕರ್ನಾಟಕದ ಕರಾವಳಿ ತೀರದಲ್ಲಿ ನೆಲೆಸಿರುವ ಒಂದು ಪ್ರಖ್ಯಾತ ಪ್ರವಾಸಿ ತಾಣ ಉಡುಪಿ. ಉಡುಪಿಯು ಕೇವಲ ಕಡಲ ತೀರಗಳಿಂದಾಗಿ ಮಾತ್ರವಲ್ಲದೆ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದ ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲೊಂದು. ಉಡುಪಿಯು ಮೂಲತಃ ಶ್ರೀಕೃಷ್ಣ ಮಠದಿಂದಾಗೆ ದೇಶದಲ್ಲೆ ಸಾಕಷ್ಟು ಪ್ರಸಿದ್ಧಿಗಳಿಸಿದ ಧಾರ್ಮಿಕ ಕೇಂದ್ರವಾಗಿದೆ.ಉಡುಪಿಯಲ್ಲಿ ಸಾಕಷ್ಟು ಇತರೆ ದೇವಾಲಯಗಳಿದ್ದು ಎಲ್ಲವೂ ವಿಶೇಷ ಹಾಗೂ ಮಹತ್ವವುಳ್ಳ ದೇವಾಲಯಗಳೆ ಆಗಿವೆ. ಅಂತೆಯೆ ಕರ್ನಾಟಕದಲ್ಲಿ ಉಡುಪಿಯನ್ನು ದೇವಾಲಯಗಳ ಪಟ್ಟಣ ಎಂದೆ ಕರೆಯುತ್ತಾರೆ. ಅಲ್ಲದೆ ಉಡುಪಿಯು ತನ್ನದೆ ಆದ ಕೆಲವು ವಿಶೇಷ ಶಕ್ತಿಪೀಠಗಳಿಂದಾಗಿ ಪ್ರವಾಸಿಗರ ಗಮನಸೆಳೆಯುತ್ತದೆ. ಅವುಗಳಲ್ಲೊಂದಾಗಿದೆ ಇಂದ್ರಾಣಿ ಶಕ್ತಿಪೀಠ. ನಿರ್ಮಾಣ ಶ್ರೀ ಇಂದ್ರಾಣಿ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನವು 11ನೇ ಶತಮಾನದ ದೇವಾಲಯವಾಗಿದ್ದು, ಇದು ದುರ್ಗಾ ದೇವಿಗೆ ಸಮರ್ಪಿತವಾಗಿದೆ. ಈ ದೇವಾಲಯವನ್ನು 1993 ರಲ್ಲಿ ಪುನಃ ನಿರ್ಮಾಣ ಮಾಡಲಾಗಿದೆ. ನೇಪಾಳದ ಪ್ರಖ್ಯಾತ ಪಶುಪತಿನಾಥ ದೇವಾಲಯ ಮಾಜಿ ಮುಖ್ಯ ಅರ್ಚಕರಾದ ರಾವಲ್ ಪದ್ಮನಾಭ ಶಾಸ್ತ್ರಿಯವರ…
ನಂದಿ ಬೆಟ್ಟಗಳು ಬೆಂಗಳೂರಿನಿಂದ ಕೇವಲ 60 ಕಿ.ಮೀ ಅಂತರದಲ್ಲಿದ್ದು, ಸಮುದ್ರ ಮಟ್ಟದಿಂದ ಸುಮಾರು 4851 ಅಡಿ ಎತ್ತರದಲ್ಲಿದೆ. ಈ ಬೆಟ್ಟವು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿದೆ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರದಲ್ಲಿರುವುದರಿಂದ ಸುಲಭವಾಗಿ ಪ್ರಯಾಣ ಮಾಡಬಹುದಾಗಿದ್ದು, ಹೆಸರಾಂತ ಪ್ರವಾಸಿ ಆಕರ್ಷಣೆಯಾಗಿದೆ. ನಂದಿ ಬೆಟ್ಟಗಳು ಆಸಕ್ತಿದಾಯಕವಾದ ಇತಿಹಾಸವನ್ನು ಹೊಂದಿದೆ. ಇದರ ಹಿಂದಿನ ರಹಸ್ಯವು ಅದರ ಮೂಲವನ್ನು ಸುತ್ತುವರೆದಿದೆ. ಬೆಟ್ಟಗಳು ಮಲಗಿರುವ ನಂದಿಯ ಆಕಾರವನ್ನು ಹೊಂದಿರುವುದರಿಂದ ಈ ಹೆಸರು ಬಂದಿದೆ ಎಂದು ಕೆಲವರು ಹೇಳುತ್ತಾರೆ. ಚೋಳರ ಕಾಲದಲ್ಲಿ ಆನಂದ ಗಿರಿ ಎಂಬ ಹೆಸರಿನಲ್ಲಿ ಬೆಟ್ಟಗಳು ಅಸ್ತಿತ್ವದಲ್ಲಿದ್ದವು ಎಂದೂ ಹೇಳಲಾಗುತ್ತದೆ. ಚೋಳರ ಕಾಲದ ವಿಶಿಷ್ಟವಾದ ದೇವಾಲಯದ ವಾಸ್ತುಶಿಲ್ಪವು ಈ ಬೆಟ್ಟಗಳಲ್ಲಿ ಅಸ್ತಿತ್ವದಲ್ಲಿದೆ ಮತ್ತು ಬೆಟ್ಟಗಳು ಭಾರತದ ಆರಂಭಿಕ ಸ್ವಾತಂತ್ರ್ಯ ಹೋರಾಟದ ಭಾಗವಾಗಿದೆ, ಏಕೆಂದರೆ ಟಿಪ್ಪು ಸುಲ್ತಾನ್ ಇಲ್ಲಿ ನಂದಿದುರ್ಗ ಎಂಬ ಕೋಟೆಯನ್ನು ನಿರ್ಮಿಸಿದನು, ಇದನ್ನು ಅಜೇಯ ಕೋಟೆ ಎಂದು ಪರಿಗಣಿಸಲಾಗಿದೆ. ನಂತರ ಇದು 1791 ರಲ್ಲಿ ಬ್ರಿಟಿಷರ ವಶವಾಯಿತು. ನಂದಿ ಬೆಟ್ಟಕ್ಕೆ ಭೇಟಿ ನೀಡುವುದು ಒಂದು…
ಮಡಿಕೇರಿ ಮಾ.30 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2022 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ವರದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದವರು ಮಾತ್ರ ವರದಿ ಸಲ್ಲಿಸಬಹುದಾಗಿದ್ದು ಏಪ್ರಿಲ್ ತಿಂಗಳ 15 ರೊಳಗೆ ತಮ್ಮ ವರದಿಯನ್ನು ಪತ್ರಿಕಾಭವನಕ್ಕೆ ತಲುಪಿಸಬೇಕಾಗಿದೆ.ನಂತರ ಬಂದ ವರದಿಗಳನ್ನು ಸ್ವೀಕರಿಸಲಾಗುವುದಿಲ್ಲ. ವರದಿಗಳು 2022 ರ ಜನವರಿಯಿಂದ 2022 ಡಿಸೆಂಬರ್ 31 ರೊಳಗೆ ಪ್ರಕಟವಾಗಿರಬೇಕು. ಪ್ರಶಸ್ತಿಗೆ ವರದಿ ಹಾಕುವವರು ಮೂರು ಪ್ರತಿಗಳನ್ನು ಹಾಕಬೇಕು.ದೃಶ್ಯಮಾಧ್ಯಮದವರು ತಮ್ಮ ಚಾನಲ್ ಗಳಲ್ಲಿ ಪ್ರಸಾರವಾದ ವರದಿಯ ಸಿಡಿ ಯನ್ನು ಸಲ್ಲಿಸಬೇಕು. 1. ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿ 2.ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿ 3. ಸಂಘದ ಉಪಾಧ್ಯಕ್ಷರಾಗಿದ್ದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿ 4.ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ 5.ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಲ್ಲಿ ಸ್ಥಾಪಿಸಿದ…
ಶ್ರೀ ರಾಮನವಮಿ ಹಿಂದೂ ದೇವರಾದ ರಾಮನ ಹುಟ್ಟಿದ ದಿನ. ಶ್ರೀ ರಾಮ ರಾಮಾಯಣದ ಕಥಾ ನಾಯಕ ಹಾಗೂ ಆದಿಕಾಲದ ಭಾರತದ ಅಯೋಧ್ಯೆಯ ರಾಜ. ದಶರಥ ಮಹಾ ರಾಜ ಶ್ರೀ ರಾಮನ ತಂದೆ. ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ಶ್ರೀ ರಾಮನವಮಿ ಯುಗಾದಿಯ ಎಂಟು ದಿನಗಳ ನಂತರ ಚೈತ್ರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ. ಈ ದಿನವನ್ನು ರಾಮನ ಕಥಾ ವಾಚನಗೋಷ್ಠಿಗಳು , ಹಿಂದೂ ಪವಿತ್ರ ಮಹಾಕಾವ್ಯವಾದ ರಾಮಾಯಣ ಸೇರಿದಂತೆ ರಾಮನ ಕಥೆಗಳನ್ನು ಓದಿ ಅನುಸರಿಸಲಾಗಿದೆ. ಈ ದಿನದಂದು ಕೆಲವು ವೈಷ್ಣವ ಹಿಂದೂಗಳು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ, ಇತರರು ತಮ್ಮ ಮನೆಯಲ್ಲಿಯೇ ಪ್ರಾರ್ಥಿಸುತ್ತಾರೆ ಮತ್ತು ಕೆಲವರು ಪೂಜೆ ಮತ್ತು ಆರತಿಯ ಭಾಗವಾಗಿ ಸಂಗೀತದೊಂದಿಗೆ ಭಜನೆ ಅಥವಾ ಕೀರ್ತನೆಯಲ್ಲಿ ಭಾಗವಹಿಸುತ್ತಾರೆ. ಕೆಲವು ಭಕ್ತರು ಶಿಶು ರಾಮನ ಸಣ್ಣ ಪ್ರತಿಮೆಗಳನ್ನು ತೆಗೆದುಕೊಂಡು ಅದಕ್ಕೆ ಅಭಿಷೇಕವನ್ನು ಮಾಡಿ, ವಸ್ತ್ರವನ್ನು ತೊಡಿಸಿ ನಂತರ ಅದನ್ನು ತೊಟ್ಟಿಲಲ್ಲಿ ಇರಿಸುವ ಮೂಲಕ ಪೂಜಿಸುತ್ತಾರೆ. ದತ್ತಿ ಕಾರ್ಯಕ್ರಮಗಳು ಮತ್ತು ಹಲವು…
ಮಡಿಕೇರಿ ಮಾ.30 : ಕುಲಶೇಖರದಲ್ಲಿರುವ ಶ್ರೀ ವೀರನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ ನಡೆಯುತ್ತಿದೆ. ಆ ಪ್ರಯುಕ್ತ ಪ್ರತೀ ಭಾನುವಾರ ಬೇರೆ ಬೇರೆ ಊರಿನ ಸಂಘಸಂಸ್ಥೆಯಿಂದ ಶ್ರಮದಾನ ನಡೆಯುತ್ತಿದೆ. ಅದರಂತೆ ಮಡಿಕೇರಿಯ ಕುಲಾಲ/ಕುಂಬಾರ ಯುವ ಘಟಕ, ಅರಸಿನಮಕ್ಕಿ ಕುಲಾಲ ಸಂಘ, ಮಳಲಿ ಕುಲಾಲ ಸಂಘ, ಪೊಳಲಿ ಕುಲಾಲ ಸಂಘ, ಕುರ್ತ್ತಾ ಕುಲಾಲ ಸಂಘಗಳಿಂದ ಶ್ರಮದಾನ ನಡೆಯಿತು. ಶ್ರಮದಾನದ ಬಳಿಕ ನಡೆದ ಸಭೆಯಲ್ಲಿ ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ, ಸಮುದಾಯದ ಕಷ್ಟ ಸುಖಗಳನ್ನು ಹಂಚಿಕೊಂಡು, ಅನಿಷ್ಠ ಪದ್ಧತಿಗಳ ವಿರುದ್ಧ ಜನಜಾಗೃತಿ, ಬಡವರಿಗೆ ಸಾಮೂಹಿಕ ವಿವಾಹದ ಮುಖಾಂತರ ಸಹಾಯ ನೀಡುವುದು, ವಿದ್ಯಾರ್ಥಿ ಗಳ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ, ವಿದ್ಯಾರ್ಥಿ ನಿಲಯ ಸ್ಥಾಪಿಸುವುದು ಇತ್ಯಾದಿ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ರೀ ವೀರನಾರಾಯಣ ದೇವಸ್ಥಾನ ಅಣಿಗೊಳ್ಳಲಿದೆ ಎಂದರು. ಪ್ರಪಂಚದ ಮೂಲ್ಯ, ಕುಲಾಲ್ರನ್ನು ಒಗ್ಗೂಡಿಸಿ ಶ್ರೀ ವೀರನಾರಾಯಣ ದೇವರ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು. ಸಮಿತಿ ಸದಸ್ಯ ಸುಂದರ ಕುಲಾಲ್ ಶ್ರಮದಾನ ಕ್ಕೆ…
ಸುಂಟಿಕೊಪ್ಪ ಮಾ.29 : ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿಯ ಕೂರ್ಗಳ್ಳಿ ತೋಟದಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆನ್ರಿ ಗೊನ್ಸಾಲ್ವೆಸ್ (61) ಬುಧವಾರ ಅಪರಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕುಶಾಲನಗರ ಮಾ.29 : ನಿರಂತರ ಕಾರ್ಯಕ್ರಮ ಚಟುವಟಿಕೆಗಳ ಮೂಲಕ ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಲು ಸಾಧ್ಯ ಎಂದು ಕುಶಾಲನಗರದ ಪ್ರಿಯಾಂಕ ಗಂಗಾಧರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದ ಕಣಿವೆ ಶ್ರೀ ರಾಮಲಿಂಗೇಶ್ವರ ರಥೋತ್ಸವ ಪ್ರಯುಕ್ತ ಕರ್ನಾಟಕ ಜಾನಪದ ಪರಿಷತ್ತು ಮತ್ತು ದೇವಾಲಯ ಸಮಿತಿ ವತಿಯಿಂದ ನಡೆದ ಹಳ್ಳಿಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯ ಮೂಲಕ ಪರಸ್ಪರ ಉತ್ತಮ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಅವರು ಹೇಳಿದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಾನಪದ ಪರಿಷತ್ ಜಿಲ್ಲಾ ಖಜಾಂಚಿ ಸಂಪತ್ ಕುಮಾರ್ ಸರಳಾಯ ಅವರು ಮಾತನಾಡಿ, ಕಲೆಗಳ ಬಗ್ಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಅರಿವು ಜಾನಪದ ಸಂಸ್ಕೃತಿ ಬಗ್ಗೆ ಮೂಡಿಸಲಾಗುತ್ತಿದೆ ಎಂದರು. ಜನಪದೀಯ ಪ್ರತಿಭೆಗಳನ್ನು ಹುಡುಕಿ ಗೌರವಿಸುವ ಕೆಲಸ ಪರಿಷತ್ತು ಮೂಲಕ ನಡೆಯುತ್ತಿದೆ ಎಂದರು. ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷರಾದ ಕೆ.ಎನ್.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಭಾರದ್ವಾಜ ಕೆ.ಆನಂದತೀರ್ಥ,…
ಮಡಿಕೇರಿ ಮಾ.29 : ಕೊಡಗು ಜಿಲ್ಲೆಗೆ ಸೀಮಿತವಾಗಿ ಪ್ರಣಾಳಿಕೆ ತಯಾರಿಸಲು ಜಿಲ್ಲಾ ಆಮ್ ಆದ್ಮಿ ಪಾರ್ಟಿ ಜನಾಭಿಪ್ರಾಯ ಸಂಗ್ರಹ ಸಭೆ ನಡೆಸಿತು. ಪೊನ್ನಂಪೇಟೆಯ ಐಬಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡು ಹಲವು ಸಲಹೆ ಸೂಚನೆಗಳನ್ನು ನೀಡಿದರು. ಪ್ರತಿ ತಾಲ್ಲೂಕಿನಲ್ಲಿ ಉನ್ನತ ದರ್ಜೆಯ ಕಾಲೇಜು, ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲ್ಲಿ ಗ್ರಾಮ ಕ್ಲಿನಿಕ್ ಆರಂಭ, ಕಂದಾಯ ಇಲಾಖೆಯಲ್ಲಿ ರೈತರ ಪಹಣಿ, ಆರ್.ಟಿ.ಸಿ, ಸರ್ವೆ ಕಾರ್ಯ ಸರಿಪಡಿಸುವುದು, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ವ್ಯತ್ಯಾಸ ಮತ್ತು ಕೊರತೆ ನೀಗಿಸುವುದು, ಕೊಡಗಿನ ವಿಧಾನಸಭಾ ಕ್ಷೇತ್ರಗಳನ್ನು ಕನಿಷ್ಠ ಮೂರಕ್ಕೆ ಏರಿಕೆ ಮಾಡುವುದು, ಜಿಲ್ಲೆಯ ಭಾಷೆ, ಸಂಸ್ಕೃತಿಗೆ ಒತ್ತು ನೀಡುವುದು, ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದು, ಗುಡಿಸಲು ಮುಕ್ತ ಗ್ರಾಮ ಸೇರಿದಂತೆ ಹಲವು ಪ್ರಗತಿಪರ ವಿಚಾರಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸುವ ಬಗ್ಗೆ ಸಲಹೆಗಳು ಕೇಳಿ ಬಂತು. ಪಕ್ಷದ ಜಿಲ್ಲಾಧ್ಯಕ್ಷ ಬೋಜಣ್ಣ ಸೋಮಯ್ಯ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ. ಸಂಘಟನಾ ಕಾರ್ಯದರ್ಶಿ ಎಂ.ಕೆ.ಅಪ್ಪಯ್ಯ, ಪೊನ್ನಪ್ಪ,…
ಮಡಿಕೇರಿ ಮಾ.29 : ಭಾರತ ಚುನಾವಣಾ ಆಯೋಗವು ವಿಧಾನಸಭಾ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಆ ನಿಟ್ಟಿನಲ್ಲಿ ಮಾರ್ಚ್, 29 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ವಿಧಾನಸಭಾ ಚುನಾವಣೆಯು ಮೇ, 10 ರಂದು ಮತದಾನ ನಡೆಯಲಿದೆ. ಮೇ, 13 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಏಪ್ರಿಲ್, 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್, 20 ಕೊನೆಯ ದಿನವಾಗಿದೆ. ಏಪ್ರಿಲ್, 21 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಏಪ್ರಿಲ್, 24 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ…






