ಲೇಖಕ: admin

ಮಡಿಕೇರಿ NEWS DESK ಡಿ.7 : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯು ಭಾನುವಾರ ಜರುಗಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಮೇಜರ್ ಜನರಲ್ ಕಾಳೆಂಗಡ ಸಿ. ಕಾರ್ಯಪ್ಪ (ನಿವೃತ್ತ), ಏರ್ ಮಾರ್ಷಲ್ ನಂದಾ ಕಾರ್ಯಪ್ಪ(ನಿ), ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಗ್ರೂಪ್ ಕ್ಯಾಪ್ಟನ್ ಮನು ಭೀಮಯ್ಯ(ನಿ), ಏರ್ ಕಮಾಂಡರ್ ದೇವಯ್ಯ(ನಿ), ಲೆ.ಕರ್ನಲ್ ಕಾವೇರಪ್ಪ(ನಿ), ಕರ್ನಲ್ ನಾಚಪ್ಪ (ನಿ),  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಬಿ.ಆರ್.ಶೆಟ್ಟಿ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ನಿವೃತ್ತ ಸೈನಾಧಿಕಾರಿಗಳು, ಎನ್‍ಸಿಸಿ ವಿದ್ಯಾರ್ಥಿಗಳು ಇತರರು ಯುದ್ಧ ಸ್ಮಾರಕಕ್ಕೆ  ಪುಷ್ಪ ಗುಚ್ಛವಿರಿಸಿ, ಗೌರವಪ ನಮನ ಸಲ್ಲಿಸಿದರು. ಕರ್ತವ್ಯ ಪಾಲನೆ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ ಯೋಧರ ಸ್ಮರಣಾರ್ಥ ಎರಡು ನಿಮಿಷಗಳ ಕಾಲ ಮೌನಾಚರಿಸಲಾಯಿತು. ಪೊಲೀಸ್ ತಂಡದವರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಮೇ‌.ಜ.…

Read More

ಮಡಿಕೇರಿ NEWS DESK ಡಿ.7 : ಸರ್ವರಲ್ಲೂ ಹಿತವನ್ನು ಬಯಸುವ ವಿಪ್ರ ಸಮಾಜವು ತನ್ನ ಪಾರಂಪರಿಕವಾದ ಪೂಜಾ ಕಾರ್ಯಗಳಿಗಷ್ಟೆ ಸೀಮಿತವಾಗದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವಿಪ್ರ ಬಾಂಧವರಿಗಾಗಿ ನಡೆದ ‘ವಿಪ್ರ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವರಲ್ಲೂ ಒಳಿತನ್ನು ಬಯಸುವ ಬ್ರಾಹ್ಮಣ ಸಮೂಹದ ಸರ್ವರೂ ಒಂದಾಗಿ, ಸಂಘಟಿತರಾಗುವ ಅವಶ್ಯಕತೆ ಇದೆ. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅತ್ಯವಶ್ಯವೆಂದು ಅಭಿಪ್ರಾಯಿಸಿದ ಅವರು, ಈ ನಿಟ್ಟಿನಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸದಸ್ಯತ್ವವನ್ನು ಸಮಾಜದ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿರುವ ಬ್ರಾಹ್ಮಣ ಸಮಾಜ ಬಾಂಧವರನ್ನು ಒಂದಾಗಿ ಬೆಸೆಯುವ ಮತ್ತು ಯುವ ಸಮೂಹದಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ನಿಟ್ಟಿನಲ್ಲಿ…

Read More

ಮಡಿಕೇರಿ NEWS DESK ಡಿ.7 : ಕೊಡಗಿನ ಸುಗ್ಗಿ ಹಬ್ಬ ಪುತ್ತರಿಯ ಹಿನ್ನೆಲೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವರ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು. ಪುತ್ತರಿ ದಿನ ಕೊಯ್ಲು ಮಾಡಿದ ಕದಿರನ್ನು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಪಟ್ಟಮಾಡ ಕುಶ, ಮಂದಪಂಡ ಮನೋಜ್ ಹಾಗೂ ನಂದೇಟಿರ ಮೋಹನ್ ಸುಬ್ಬಯ್ಯ ಅವರುಗಳು ಸ್ಮಾರಕಗಳಿಗೆ ಕಟ್ಟಿ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿದ ಎನ್.ಯು.ನಾಚಪ್ಪ ಅವರು ಹಿರಿಯರಿಗೆ ಗೌರವ ಅರ್ಪಿಸಿ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯದ ಪರವಾದ ಸಿಎನ್‌ಸಿಯ ಹೋರಾಟಕ್ಕೆ ಬೆಂಬಲ ಕೋರಲಾಯಿತು ಎಂದರು.

Read More

ಮಡಿಕೇರಿ NEWS DESK ಡಿ.7 : ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು  ದೇಶದ ಅಮೂಲ್ಯ ರತ್ನವಾಗಿದ್ದು, ದೇಶಕ್ಕೆ ನೀಡಿದ ಅವರ ಕೊಡುಗೆ ಅಪಾರವಾಗಿದೆ. ಸಂವಿಧಾನದ ಮೂಲಕ ಎಲ್ಲಾ ವರ್ಗಕ್ಕೆ ನ್ಯಾಯವನ್ನು ನೀಡಿದ್ದು ಶೋಷೀತ ಸಮುದಾಯ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರುವಂತಾಗಲು ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ ಎಂದು ಬಿಜೆಪಿ  ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಹೇಳಿದರು. ಮಡಿಕೇರಿಯ ಅಂಬೇಡ್ಕರ್ ಬಾಲಕರ  ವಿದ್ಯಾರ್ಥಿ ನಿಲಯದಲ್ಲಿ ಎಸ್.ಸಿ ಮೋರ್ಚಾದ ವತಿಯಿಂದ ನಡೆದ ಡಾ.ಅಂಬೇಡ್ಕರ್ ಅವರ 69 ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಅವರ ಸಂವಿಧಾನ ಆಧುನಿಕ ಭಾರತಕ್ಕೆ ಭದ್ರ ಬುನಾದಿಯನ್ನು ಹಾಕಿಕೊಟ್ಟಿದೆ. ನ್ಯಾಯವಾದಿ ಅರ್ಥಶಾಸ್ತ್ರಜ್ಞ, ತತ್ವಜ್ಞಾನಿ ಸಮಾಜ ಸುಧಾರಕ ಮಾತ್ರವಲ್ಲದೆ ರಾಷ್ಟ್ರ ನಿರ್ಮಾಣಕಾರರಾಗಿ ಅವರ ನಿರಂತರ ಪ್ರಯತ್ನಗಳು ಇಂದು ರಾಷ್ಟ್ರ ಎಲ್ಲಾ ರೀತಿಯಲ್ಲಿ  ಮುಂದೆ ಬರಲು ಕಾರಣವಾಗಿದೆ. ಅಂಬೇಡ್ಕರ್ ಅವರು  ವಿದ್ಯಾಭ್ಯಾಸಕ್ಕಾಗಿ ಪಟ್ಟಂತಹ ಆ ಕಷ್ಟದ ದಿನಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಮನೆ ಮನದಲ್ಲೂ ನೆನೆಸಿಕೊಳ್ಳುವಂತಾಗಬೇಕೆಂದರು. ಈ…

Read More

ಮಡಿಕೇರಿ ಡಿ.6 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ ಪಡೆದು ರಾಷ್ಟ್ರಕ್ಕೆ ಒಳ್ಳೆಯ ಸಂವಿಧಾನ ನೀಡಿದ್ದಾರೆ. ಅವರ ಜೀವನ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು. ದೇಶ ವಿದೇಶಗಳಲ್ಲಿ ಅಂಬೇಡ್ಕರ್ ಅವರ ಅಧ್ಯಯನ ಕೇಂದ್ರಗಳು ಹಾಗೂ ಸಂಶೋಧನಾ ಕೇಂದ್ರಗಳು ಇವೆ. ಇಡೀ ಪ್ರಪಂಚದಲ್ಲಿಯೇ ಅವರು ಅಜರಾಮರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಸ್ಮರಿಸಿದರು. ದೇಶ ವಿದೇಶಗಳಲ್ಲಿಯೂ ಸಹ ಅವರ ಪ್ರತಿಮೆಯನ್ನು ಕಾಣಬಹುದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ ಮತ್ತು ಸಾಮಾಜಿಕ ಹೋರಾಟ ರಾಷ್ಟ್ರದಲ್ಲಿ ಒಂದು ರೀತಿ ಮಹಾನ್ ಕ್ರಾಂತಿ ಎಂದು…

Read More

ಮಡಿಕೇರಿ ಡಿ.6 NEWS DESK  : ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಪ್ರಧಾನಮಂತ್ರಿಯವರ ಗ್ರಾಮ ಸಡಕ್ ಯೋಜನೆ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ ಮಿಷನ್, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ, ಪ್ರಧಾನಮಂತ್ರಿ ಆವಾಸ್ ಯೋಜನೆ, ಎನ್‍ಆರ್‍ಎಲ್‍ಎಂ., ಸಂಜೀವಿನಿ ಯೋಜನೆ ಸೇರಿದಂತೆ ಹಲವು ಯೋಜನೆಗಳಿದ್ದು, ಇವುಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಸ್ಟೀವರ್ಟ್‍ಹಿಲ್ ನಲ್ಲಿ ಕಸ ವಿಲೇವಾರಿ ಸಂಬಂಧಿಸಿದಂತೆ ಮಾತನಾಡಿದ ಸಂಸದರು ಕಳೆದ ಏಳು ತಿಂಗಳಾದರೂ ಸಹ ಕಸ…

Read More

ಮಡಿಕೇರಿ ಡಿ.6 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.11 ರಂದು ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ ಅವರು ಬೆಳಗ್ಗೆ 10.30 ಗಂಟೆಗೆ ವಾರ್ಷಿಕ ಮಹಾಸಭೆಯನ್ನು ನಿವೃತ್ತ ಡಿಜಿಪಿ ಡಾ.ಎಂ.ಎ.ಗಣಪತಿ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಎನ್.ಮಾದಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. *ಮೂವರಿಗೆ ಸನ್ಮಾನ* ವಾರ್ಷಿಕ ಮಹಾಸಭೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್, ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಹೆಚ್ಚವರಿ ವರಿಷ್ಠಾಧಿಕಾರಿಗಳಾದ ಬಿ.ಕೆ.ದಿನೇಶ್ ಮತ್ತು ಪೊಲೀಸ್ ಅಧಿಕಾರಿ ಎಂ.ಕೆ.ತಮ್ಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಮಾಹಿತಿಯನ್ನಿತ್ತರು. *ಪ್ರತಿಭಾ ಪುರಸ್ಕಾರ* ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶಂಕರಿ ಬಿದರಿ ಅವರು ಮಣವಟ್ಟೀರ ಪೊನ್ನಪ್ಪ ಅವರ ಸ್ಮರಣಾರ್ಥ ನೀಡಿರುವ ದತ್ತಿಯಡಿ ಕೆಎಸ್‍ಆರ್‍ಪಿ ನಿವೃತ್ತ…

Read More

ಚೆಟ್ಟಳ್ಳಿ ಡಿ.6 NEWS DESK : ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ಮತ್ತು ಅಧಿಕ ಮೌಲ್ಯದ ವಿದೇಶಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿ ಸಂಘದ ವತಿಯಿಂದ ಆಫ್ ಸೀಸನ್ ಲಿಚ್ಚಿ ಬೆಳೆಯಲ್ಲಿನ ಸವಾಲುಗಳು ಮತ್ತು ಭವಿಷ್ಯದ ನಿರೀಕ್ಷೆಗಳು ಕುರಿತು ವಿಚಾರ ಮಂಥನ ಕಾರ್ಯಕ್ರಮ ಚೆಟ್ಟಳ್ಳಿಯಲ್ಲಿ ನಡೆಯಿತು. ಭವಿಷ್ಯದಲ್ಲಿ ಹೆಚ್ಚು ಬೇಡಿಕೆ ಇರುವ ಲಿಚ್ಚಿ ಹಣ್ಣನ್ನು ಬೆಳೆದು ಅಧಿಕ ಲಾಭ ಗಳಿಸುವಂತೆ ಸಂಪನ್ಮೂಲ ವ್ಯಕ್ತಿಗಳು ಬೆಳೆಗಾರರಿಗೆ ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಹಾರ ಕೃಷಿ ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಅಜಯ್ ಕುಮಾರ್ ಸಿಂಗ್ ಅವರು ಲಿಚ್ಚಿ ಬೆಳೆಗೆ ಯೋಗ್ಯವಾದ ಪ್ರದೇಶದಲ್ಲಿ ಈ ಹಣ್ಣಿನ ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಭಾರತೀಯ ಕೃಷಿ ವಿಶ್ವ ವಿದ್ಯಾನಿಲಯ ಲಿಚ್ಚಿ ಕೃಷಿ ಕುರಿತು ಸಂಶೋಧನೆ ನಡೆಸುತ್ತಿದೆ. ಕೊಡಗು ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಆಫ್ ಸೀಸನ್ ಲಿಚ್ಚಿ ಬೆಳೆಯುತ್ತಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಲಿಚ್ಚಿ ಕೃಷಿಕರ ಬೇಡಿಕೆಗೆ ತಕ್ಕಂತೆ ಕೇಂದ್ರದಿಂದ ತಳಿಗಳನ್ನು ವಿತರಿಸಲಾಗುತ್ತಿದೆ ಎಂದರು. ರಾಷ್ಟ್ರೀಯ…

Read More

ಕುಶಾಲನಗರ ಡಿ.6 NEWS DESK : ಸುತ್ತೂರಿನಲ್ಲಿ ಜ.15 ರಿಂದ 20 ರವರೆಗೆ ಜರುಗುವ ಸುತ್ತೂರು ಜಾತ್ರಾ ಕಾರ್ಯಕ್ರಮಕ್ಕೆ ಭಕ್ತ ಜನರನ್ನು ಆಹ್ವಾನಿಸಲು ರಾಜ್ಯಾದ್ಯಂತ ಸಂಚಾರ ಮಾಡುತ್ತಿರುವ ಪ್ರಚಾರ ರಥ  ಕುಶಾಲನಗರಕ್ಕೆ ಆಗಮಿಸಿತು. ಈ ಸಂದರ್ಭ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಆಗಮಿಸಿ ಪ್ರಚಾರ ರಥದಲ್ಲಿನ ಸುತ್ತೂರು ಮಠದ ಸ್ಥಾಪನಾಚಾರ್ಯ ಶ್ರೀ ಶಿವರಾತ್ರೀಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ರಾದ ವಿ.ಪಿ.ಶಶಿಧರ್ ಈ ಸಂದರ್ಭ ಮಾತನಾಡಿ, ಸುತ್ತೂರು ಜಾತ್ರೆಯಲ್ಲಿ ನಾಡಿನ ಪರಂಪರೆಗಳನ್ನು ಬಿಂಬಿಸುವ ದೇಸೀಯಾ ಕ್ರೀಡೆಗಳ ಪ್ರದರ್ಶನಗಳೊಂದಿಗೆ ಸಾಮೂಹಿಕ ವಿವಾಹ, ಕೃಷಿ ಮೇಳ, ವಸ್ತು ಪ್ರದರ್ಶನ, ರೈತರಿಗೆ ಕೃಷಿ ಮಾಹಿತಿ ಸೇರಿದಂತೆ ಎಲ್ಲವು ಒಂದೇ ಕಡೆ ನಡೆಯುತ್ತದೆ. ಆಗಮಿಸುವ ಸಹಸ್ರ ಭಕ್ತ ಜನರಿಗೆ ಮೂರು ಹೊತ್ತು ಪ್ರಸಾದದ ವ್ಯವಸ್ಥೆಯೂ ಇರುತ್ತದೆ ಎಂದರು. ಕೊಡಗು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಸುತ್ತೂರು ಜಾತ್ರೆಗೆ ಕೊಡಗಿನ ಭಕ್ತ ಜನ…

Read More

ಹಾಸನ ಡಿ.6 NEWS DESK : ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕಂದಾಯ ಇಲಾಖೆಯ ದರಖಾಸ್ತು ಪೋಡಿ, ಪೌತಿ ಖಾತೆ, ಕಂದಾಯ ಗ್ರಾಮ, 94ಸಿ ಹಕ್ಕುಪತ್ರಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸವಲತ್ತು ವಿತರಣೆ ಮಾಡಿದರು. ಇದರಿಂದ ಜಿಲ್ಲೆಯ ಸುಮಾರು 50,000ಕ್ಕೂ ಹೆಚ್ಚಿನ ಕುಟುಂಬಗಳಿಗೆ ಅನುಕೂಲವಾಗಲಿದೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸಂಸದರಾದ ಶ್ರೇಯಸ್ ಪಟೇಲ್ ಸೇರಿದಂತೆ ಜಿಲ್ಲೆಯ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Read More