ಲೇಖಕ: admin

ಕುಶಾಲನಗರ ಜ.29 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಘಟಕ, ವಿದ್ಯಾರ್ಥಿ ಸಂಘ ಹಾಗೂ ಎಸ್.ಡಿ.ಎಂ.ಸಿ. ಸಮಿತಿಯ ಆಶ್ರಯದಲ್ಲಿ  ಸ್ವಾತಂತ್ರ್ಯ ಭಾರತದ ಸೇನಾ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕೆ.ಎಂ. ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಸೇನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಠ ಸೇವೆ ಕುರಿತು ಮಾತನಾಡಿದ  ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಎಂದರೆ ಒಂದು ರೀತಿ ಸ್ಪೂರ್ತಿ ಹಾಗೂ ಚಿಲುಮೆ. ಶಿಸ್ತಿನ ಸಿಪಾಯಿ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು’ ಎಂದು ಹೇಳಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆಯನ್ನು ಪ್ರತಿಯೊಬ್ಬರೂ ತಮ್ಮ…

Read More

ಮಡಿಕೇರಿ, ಜ.29 NEWS DESK : ಕೊಡಗು ಕಲಾವಿದರ ಬಳಗದ ವತಿಯಿಂದ ಚೆಯ್ಯಂಡಾಣೆಯ ಸಿನಿಮಾ ಕಲಾವಿದೆ ಚೆರುವಾಳಂಡ ಸುಜಲಾ ಹಾಗೂ ನಾಣಯ್ಯ ದಂಪತಿ ತೋಟದ ಮನೆಯಲ್ಲಿ ಜಿಲ್ಲೆಯ ಹಲವಷ್ಟು ಹಿರಿ-ಕಿರಿಯ ಸಿನಿಮಾ ಕಲಾವಿದರುಗಳು, ಬರಹಗಾರರು, ನಿರ್ದೇಶಕರು, ಗಾಯಕರು, ಛಾಯಾಚಿತ್ರ ಕಲಾವಿದರುಗಳು ಸಂತಸ ಸಮ್ಮಿಲನದಲ್ಲಿ ಭಾಗಿಗಳಾದರು. ದಶಕಗಳ ಹಿಂದೆ ಆರಂಭಗೊಂಡ ನೋಂದಾಯಿತ ಕಲಾವಿದರ ಸಂಘವೂ ಕಾರ್ಯಚಟುವಟಿಕೆಗಳಿಲ್ಲದೆ ನಿಷ್ಕ್ರಿಯವಾಗಿತ್ತು. ನಟ ನೆರವಂಡ ಉಮೇಶ್ ಹಾಗೂ ತಂಡದವರ ಸಂಚಾಲಕತ್ವದಲ್ಲಿ ವರ್ಷದಿಂದೀಚೆಗೆ ಸಂಘ ಮರುಜೀವ ಪಡೆದುಕೊಂಡಿದೆ. ರಾಜ್ಯದ ಹಲವೆಡೆಗಳಿಂದ ಕಲಾವಿದರುಗಳು ಆಗಮಿಸಿದ್ದು, ಮೈಸೂರಿನಲ್ಲಿ ನೆಲೆಸಿರುವ ಸಂಗೀತಗಾರ, ಹಾರ್ಮೋನಿಯಂ ವಾದಕ ಚೆಕ್ಕೇರ ಅಪ್ಪಯ್ಯ ಅವರ ಉಪಸ್ಥಿತಿ, ಮಾತು, ಹಾಡು ಎಲ್ಲರಲ್ಲಿ ಸಂಚಲನ ಮೂಡಿಸಿತು. ಟಿ.ಡಿ. ಮೋಹನ್ ಅವರಿಂದ ಪ್ರಾರ್ಥನೆ, ಭವಾನಿ ನಾಣಯ್ಯ ಅವರಿಂದ ದೈವಸ್ತುತಿ, ಅಜಿತ್, ಬೋಸು ಅವರುಗಳಿಂದ ಹಾಡು, ಕಲಾವಿದೆ ಶ್ಯಾಮಲ ಅವರ ನೃತ್ಯ ನೆರೆದಿದ್ದವರನ್ನು ರಂಜಿಸಿತು. ಕಲಾಸೇವೆ ಹಾಗೂ ಕಲಾವಿದರಿಗೆ ನೀಡಿದ ಆತಿಥ್ಯ ಗಮನಿಸಿ ಸುಜಲಾ ಹಾಗೂ ನಾಣಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಳಗದ…

Read More

ಮಡಿಕೇರಿ NEWS DESK ಜ.28 : ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್ ನಲ್ಲಿ ಜ.29ರಿಂದ ಫೆ.6ರ ವರೆಗೆ ನಡೆಯುವ 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಕೊಡವ ಸಾಕ್ಷ್ಯ ಚಿತ್ರ ಆಯ್ಕೆಯಾಗಿದೆ. ‘ಯೂ’ ಅರ್ಹತಾಪತ್ರ ಪಡೆದಿರುವ ‘ಉಮ್ಮತ್ತಾಟ್’ ಜನಪದದಲ್ಲಿ ಸಿಬಿಎಫ್ ಸಿ ದಾಖಲಾತಿ ಹೊಂದಿದ ಸಾಕ್ಷ್ಯಚಿತ್ರವಾಗಿದೆ. ಈ ಬಾರಿಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದ್ದು, ‘ಮಹಿಳಾ ಸಬಲೀಕರಣ’ ವಿಭಾಗದಲ್ಲಿ ‘ಉಮ್ಮತ್ತಾಟ್’ ಪ್ರದರ್ಶನಗೊಳ್ಳಲಿದೆ ಎಂದು ಸಾಕ್ಷ್ಯ ಚಿತ್ರದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ತಿಳಿಸಿದ್ದಾರೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ನಿರ್ದೇಶಿಸಿರುವ ‘ಉಮ್ಮತ್ತಾಟ್’ ಕೊಡವ ಜಾನಪದ ನೃತ್ಯ ಪ್ರಕಾರದ ಮೇಲೆ ಬೆಳಕು ಚೆಲ್ಲಿದೆ. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕಲೆಯ ಒಟ್ಟು 13 ನೃತ್ಯ ಪ್ರಕಾರಗಳನ್ನು ಚಿತ್ರೀಕರಿಸಲಾಗಿದ್ದು, 153 ಕಲಾವಿದರು ನೃತ್ಯ ಮಾಡಿದ್ದಾರೆ. ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ದೇಶನದ ಸಾಕ್ಷ್ಯಚಿತ್ರಕ್ಕೆ ‘ಉಮ್ಮತ್ತಾಟ್’ ತರಬೇತುದಾರರಾದ ಕಲಾವಿದೆ ಬೊಳ್ಳಜಿರ ಯಮುನಾ…

Read More

ಗೋಣಿಕೊಪ್ಪ ಜ.28 NEWS DESK : ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಕಳತ್ಮಾಡು ಲಯನ್ಸ್ ಶಾಲೆಯ ವಿದ್ಯಾರ್ಥಿ ಎಂ.ಚಾರಿಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಶಾಲನಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾಕಾರಂಜಿ ಮತ್ತು ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಭಾಗವಹಿಸಿ, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಯನ್ಸ್ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿರುವ ಚಾರಿಕ ಅತ್ತೂರು ಗದ್ದೆಮನೆ ನಿವಾಸಿ ಮದು ಮತ್ತು ವಿಶಾಲಕ್ಷಿ ದಂಪತಿಗಳ ಪುತ್ರಿ.

Read More

ಮಡಿಕೇರಿ ಜ.28 NEWS DESK : ಮಡಿಕೇರಿ ತಾಲ್ಲೂಕು ನಾಪೋಕ್ಲು ಹೋಬಳಿಯ ಬೇತು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿ ಮಹಲ್ ನ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಪ್ರಮುಖರು ಶಾಲೆಗೆ ಸೇರಿದ ಜಾಗಗಳ ಹದ್ದುಬಸ್ತು ಗುರುತಿಸಬೇಕೆಂದು ಒತ್ತಾಯಿಸಿದರು. ನಾಪೋಕ್ಲುವಿನಲ್ಲಿ ಬಹಳ ವರ್ಷಗಳ ಹಿಂದೆ ಸ್ಥಳೀಯ ದಾನಿಗಳು ಹಾಗೂ ಸರಕಾರದಿಂದ ಮಂಜೂರಾದ ಒಟ್ಟು 47.52 ಏಕರೆ ಜಾಗವಿತ್ತು. ಇದರಲ್ಲಿ ಸುಮಾರು ಹತ್ತು ಏಕರೆ ಜಾಗವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಗೆ ಮತ್ತು 7.52 ಏಕರೆಯನ್ನು ಅಂಬೇಡ್ಕರ್ ವಸತಿ ಶಾಲೆಗೆ ಕರ್ನಾಟಕ ಪಬ್ಲಿಕ್ ಶಾಲೆಯ ಜಾಗದಿಂದ ವಿಂಗಡಿಸಿ ನೀಡಲಾಗಿದೆ.  ಇತ್ತೀಚೆಗೆ ಶಾದಿಮಹಲ್ ನಿರ್ಮಿಸಲು ಭೂಮಿಪೂಜೆ ನೆರವೇಸರಿಸಲಾಗಿದ್ದು, ಕಾಮಗಾರಿ ನಡೆಯುತ್ತಿದೆ. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ಸದಸ್ಯರು…

Read More

ಸುಂಟಿಕೊಪ್ಪ ಜ.28 NEWS DESK : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್.ಜೀವಿಕ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಪುಣೆಯಲ್ಲಿ ಜ.30 ರಿಂದ ಫೆ.2 ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಆಫ್ ಫೆಡರೇಶನ್ ವತಿಯಿಂದ ನಡೆಯಲ್ಲಿರುವ ಕರಾಟೆ ಸ್ಪರ್ಧೆಯಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ತರಗತಿ 9ನೇ ತರಗತಿಯ ವಿದ್ಯಾರ್ಥಿನಿ ಆರ್.ಜೀವಿಕ ರಾಜ್ಯ ತಂಡದಲ್ಲಿ ಸ್ಪರ್ಧಿಸಲಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜಕುಮಾರ್ ಹಾಗೂ ಮಡಿಕೇರಿಯ ಸರಕಾರಿ ಆಸ್ಪತ್ರೆಯಲ್ಲಿ ದಾದಿಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಿ ದಂಪತಿಗಳ ಪುತ್ರಿ. ಜೀವಿಕ ಮುಖ್ಯ ತರಬೇತಿದಾರರಾದ ಮುಖೇಶ್ ಹಾಗೂ ಸಹ ತರಬೇತಿದಾರರಾದ ಅಕ್ಷಯ್ ಹಾಗೂ ಅಂಕಿತ್ ಅವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾಳೆ.  ವಿದ್ಯಾರ್ಥಿನಿಯ ಸಾಧನೆಯನ್ನು ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ವಿಜಯ್‍ಕುಮಾರ್ ಹಾಗೂ ಪ್ರಾಂಶುಪಾಲರಾದ ಸೆಲ್ವರಾಜ್ ಆರ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಪ್ರತಿಭೆಯನ್ನು  ಪ್ರಶಂಸಿ ಶುಭ ಹಾರೈಸಿದರು.

Read More

ಮಡಿಕೇರಿ ಜ.28 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ನಗರದ ಕೊಡಗು ವಿದ್ಯಾಲಯ ಶಾಲೆಯ ಸಭಾಂಗಣದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಸಾಧನೆಯನ್ನು ಸ್ಮರಿಸುವಂತಾಗಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗಿನ ಕಣ್ಮಣಿಗಳು ಎಂದು ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸಮಯಪ್ರಜ್ಞೆ, ಶಿಸ್ತಿಗೆ ಹೆಸರುವಾಸಿಯಾಗಿದ್ದರು. ಅವರಂತೆ ಏರ್ ಮಾರ್ಷಲ್(ನಿವೃತ್ತ) ಕಾರ್ಯಪ್ಪ ಅವರು ಕೂಡ ಭಾರತೀಯ ಸೇನೆಗೆ ತಮ್ಮದೇಯಾದ ಕೊಡುಗೆ…

Read More

ಮಡಿಕೇರಿ ಜ.28 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ಕುಶಾಲನಗರದಲ್ಲಿ ನಡೆದ ‘ಹಿಂದೂ ಸಂಗಮ’ ಶೋಭಾಯಾತ್ರೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರು ಪಾಲ್ಗೊಳ್ಳುವ ಮೂಲಕ ಕಾಂಗ್ರೆಸ್ ನ ದ್ವಿಮುಖ ಸಿದ್ಧಾಂತವನ್ನು ಬಯಲು ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಅವರು ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್‍ಎಸ್‍ಎಸ್ ಸಿದ್ಧಾಂತವನ್ನು ತೀವ್ರವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ಘೋಷಿಸುತ್ತಲೇ ಬಂದಿದ್ದಾರೆ. ಆದರೆ ಮಡಿಕೇರಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ನಾಯಕರ ಪ್ರತಿಪಾದನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಶಾಸಕರ ಈ ನಡೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರು ಒಪ್ಪಿಕೊಳ್ಳುತ್ತಾರೆಯೇ ಅಥವಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಾದಲ್ಲಿ ಮೌನಕ್ಕೆ ಶರಣಾಗಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಜಾತ್ಯತೀತ ಜನತಾದಳ ಯಾವುದೇ ಜಾತಿ, ಧರ್ಮ, ಜನಾಂಗ ಮತ್ತು ಸಂಘ ಸಂಸ್ಥೆಗಳ ವಿರೋಧಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗಾಗಿ ಆರ್‍ಎಸ್‍ಎಸ್ ನ್ನು ಮುಂದೆಯಿಂದ…

Read More

ಮಡಿಕೇರಿ ಜ.28 NEWS DESK : ಗಣರಾಜ್ಯೋತ್ಸವದ ಪ್ರಯುಕ್ತ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ಆಯೋಜಿಸಲಾಗಿದ್ದ ಸ್ಕೇಟಿಂಗ್ ನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಡಿಕೇರಿಯ ಮಂಗಳಾದೇವಿ ನಗರದ ತೋರೆರ ಯುವಾನ್ ಬೋಪಣ್ಣ ಟಿ. (5) ಗೆ ಏಷ್ಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಮತ್ತು ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಯುಎಸ್‍ಎ ಅಧಿಕೃತ ಮಾನ್ಯತೆ ನೀಡಿವೆ. ಯುವಾನ್ ಬೋಪಣ್ಣ 1 ಗಂಟೆ 26 ನಿಮಿಷ 26 ಸೆಕೆಂಡುಗಳ ಕಾಲ ನಿರಂತರವಾಗಿ ಸ್ಕೇಟಿಂಗ್ ಮಾಡಿ ಅಸಾಧಾರಣ ಸಹನಾ ಶಕ್ತಿ, ಶಿಸ್ತು ಮತ್ತು ದೃಢಸಂಕಲ್ಪವನ್ನು ಪ್ರದರ್ಶಿಸಿದ್ದಾನೆ. ಆ ಮೂಲಕ ಎರಡು ವಿಶ್ವ ದಾಖಲೆ ಪ್ರಯತ್ನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾನೆ. ಕೊಡಗು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೋಶಾಧಿಕಾರಿ ತೋರೆರ ಎಂ.ಮುದ್ದಯ್ಯ ಅವರ ಮೊಮ್ಮಗ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ತೋರೆರ ಎಂ.ಮುತ್ತಣ್ಣ ಮತ್ತು ರಂಜಿತಾ ಎಂ. ದಂಪತಿಯ ಪುತ್ರ ಯುವಾನ್ ಬೋಪಣ್ಣ ಟಿ. ಕಿಡ್‍ಝೀ ಪ್ರೀಸ್ಕೂಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Read More

ಮಡಿಕೇರಿ ಜ.28 NEWS DESK : ಭಾರತೀಯ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರ 127 ನೇ ಜನ್ಮಜಯಂತಿಯನ್ನು ಮಡಿಕೇರಿಯ ರೋಶನಾರದಲ್ಲಿ ಪುಪ್ಪನಮನದ ಮೂಲಕ ಬಾವಪೂಣ೯ವಾಗಿ ಆಚರಿಸಲಾಯಿತು. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ನೆಚ್ಚಿನ ಮನೆಯಾಗಿದ್ದ ನಗರದ ಹೊರವಲಯದಲ್ಲಿನ ರೋಶನಾರ ಬಳಿಯಲ್ಲಿರುವ ಕಾಯ೯ಪ್ಪ ಅವರ ಸಮಾಧಿ ಸ್ಥಳಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರಿಗೆ ಪ್ರಿಯವಾಗಿದ್ದ ಭಜನೆ, ದೇಶಭಕ್ತಿಗೀತ ಗಾಯನ ಜರುಗಿತು. ಈ ಸಂದಭ೯ ಮಾತನಾಡಿದ ಕಾಯ೯ಪ್ಪ ಅವರ ಪುತ್ರ ನಿವೖತ್ತ ಏರ್ ಮಾಷ೯ಲ್ ನಂದಾಕಾಯ೯ಪ್ಪ, ಪ್ರತೀಯೋವ೯ ಭಾರತೀಯನಿಗೂ ತನ್ನ ದೇಶ ಮೊದಲಾಗಬೇಕು. ಭಾರತೀಯತೆ ಆದ್ಯತೆಯಾಗಿರಬೇಕು. ಕೃತಕ ಬುದ್ದಿಮತ್ತೆಯ ಪ್ರಬಾವ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಮಾಧ್ಯಮಗಳಲ್ಲಿ ಬಂದದ್ದೆಲ್ಲಾ ನಿಜವಾಗಿರುವುದಿಲ್ಲ. ಯಾವುದೇ ವಿಚಾರಗಳನ್ನು ಪರಾಮಶಿ೯ಸಿ ಎಂದು ಕಿವಿಮಾತು ಹೇಳಿದರು. ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮುನ್ನ ಎಲ್ಲಾ ಸೌಲಭ್ಯಗಳೊಂದಿಗೆ ದೇಶಸೇವೆಗೆ ಪ್ರಾಮುಖ್ಯತೆ ನೀಡುವ ಭಾರತೀಯ ಸೇನಾ ಪಡೆಯಲ್ಲಿ ಕಾಯ೯ನಿವ೯ಹಿಸಲು ಆದ್ಯತೆ ನೀಡಿ…

Read More