ಮಡಿಕೇರಿ ಏ.8 : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಪೊನ್ನಂಪೇಟೆಯ ಕೆ.ಪಿ.ಎಸ್. ಸಿ ಶಾಲೆಯ ವಿದ್ಯಾರ್ಥಿನಿ ಬಿ.ಎಸ್. ಕೀರ್ತಿ 605 (ಶೇಕಡ 96.8 ) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಈಕೆ ಪೊನ್ನಂಪೇಟೆಯ ನಿಸರ್ಗ ನಗರದ ಬಿ. ಆರ್ ಸುಧಾಕರ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರಿ.
ಲೇಖಕ: admin
ಮಡಿಕೇರಿ ಮೇ 8 : ಕಾಟಕೇರಿ ಕೂರನಬಾಣೆಯ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸಂಜೆ ದೈವಗಳ ಭಂಡಾರ ತೆಗೆಯಲಾಯಿತು. ನಂತರ ಮಂತ್ರವಾದಿ ಗುಳಿಗ ಪಾಷಾಣ ಮೂರ್ತಿ ಹಾಗೂ ಕೊರತಿ ದೈವದ ನೇಮಗಳು ನೆರವೇರಿತು. ಮುಂಜಾನೆ ಕೊರಗಜ್ಜ ದೈವದ ನೇಮ, ಧರ್ಮದೈವದ ನೇಮೋತ್ಸವ ನಡೆದಿದ್ದು, ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು.
ನಾಪೋಕ್ಲು ಮೇ 8 : ಕಕ್ಕುಂದ ಕಾಡು ವ್ಯಾಪ್ತಿಯಲ್ಲಿ ಕೊಡಗು ಬಲಿಜ ಸಮಾಜ ನೇತೃತ್ವದಲ್ಲಿ ಮನೆ ಮನೆ ಮತದಾನ ಜಾಗೃತಿ ಅಭಿಯಾನ ನಡೆಯಿತು. ಈ ಸಂದರ್ಭ ಕೊಡಗು ಬಲಿಜ ಸಮಾಜ ಅಧ್ಯಕ್ಷ ಟಿ.ಎಲ್.ಶ್ರೀನಿವಾಸ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಬಡತನ ರೇಖೆಗಿಂತಾ ಕೆಳಗೆ ಇರುವ ಬಲಿಜ ಮತದಾರರೇ ಅಧಿಕವಾಗಿದ್ದು, ಹಲವರು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯಕ ಸಮಾಜ ಒಕ್ಕೂಟ ಮೂಲಕ 102 ಜಾತಿ ಜನಾಂಗಗಳ ಬೇಡಿಕೆ ಈಡೇರಿಕೆಗೂ ಹೋರಾಟ ನಡೆದಿದೆ, ನಾಪೋಕ್ಲುವಿನಲ್ಲಿ ಸುಮಾರು 25 ಬಲಿಜ ಕುಟುಂಬಗಳಿದ್ದು ಜಮ್ಮಾ ಹಿಡುವಳಿದಾರರೂ ಇದ್ದಾರೆ ಎಂದರು. ಇದೇ ಸಂದರ್ಭ ಎಲ್ಲ ಬಲಿಜ ಜನಾಂಗದ ಮನೆ ಮನೆಗೆ ತೆರಳಿ ‘ಮತದಾನದ ದಿನ ಯಾರೂ ಮನೆಯಲ್ಲಿ ಉಳಿಯದೇ ಮತದಾನದಲ್ಲಿ ಭಾಗಿಯಾಗಿ ಎಂದು ಮನವಿ ಮಾಡಲಾಯಿತು. ಕೊಡಗು ಬಲಿಜ ಸಮಾಜ ನಿರ್ದೇಶಕಿ ಟಿ.ವಿ.ಭವಾನಿ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ, ಮೇ 8 : ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತ ಶಯನ ಅವರು ಬರೆದಿರುವ ಪತ್ರಿಕೋದ್ಯಮದ, ಅನುಭವ ಆಧಾರಿತ ಪುಸ್ತಕ ‘ಸೊಡರು’ ಮೇ 14 ರಂದು ಮಡಿಕೇರಿಯಲ್ಲಿ ಬಿಡುಗಡೆಗೊಳ್ಳಲಿದೆ. ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಯಂ.ಸಿ. ನಾಣಯ್ಯ, ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸ್ಥಾಪಕ ಕೆ.ಬಿ.ಗಣಪತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರೆಸ್ ಕ್ಲಬ್ ಹಾಗೂ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎ.ಪೊನ್ನಪ್ಪ, ಗಡಿನಾಡ ಸಂಚಾರಿ ಪತ್ರಿಕೆಯ ಸಂಪಾದಕ ಟಿ.ಪಿ.ರಮೇಶ್, ‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಭಾಗವಹಿಸಲಿದ್ದಾರೆ. ಪುಸ್ತಕದೊಳಗೆ ವರದಿಗಾರಿಕೆ ಸಂದರ್ಭ ಉಂಟಾಗುವ ಎಡರು ತೊಡರುಗಳು, ಇರಿಸು ಮುರಿಸುಗಳು, ಕಾನೂನು ಅಡಚಣೆಗಳು, ಬೆದರಿಕೆಗಳು, ಸ್ವಯಂಕೃತ ಅಪರಾಧಗಳು ಇತ್ಯಾದಿ ವಿಚಾರ ಉದಾಹರಣೆ ಸಹಿತ ನೀಡಲಾಗಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮ ಜಿ. ಚಿದ್ವಿಲಾಸ್ ಅವರ ಮಾಲೀಕತ್ವದ ರೆಡ್ಬ್ರಿಕ್ಸ್ ಕಟ್ಟಡದ ಸತ್ಕಾರ ಸಭಾಂಗಣದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ. ಸಭಾಂಗಣದಲ್ಲಿ…
ಮಡಿಕೇರಿ ಏ.8 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ ಬಲರಾಮ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. 67 ವರ್ಷದ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ. ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು ಕುಡಿಯಲು ಆಗದೇ ತೀವ್ರ ಅಸ್ವಸ್ಥಗೊಂಡಿತ್ತು.
ಮಡಿಕೇರಿ ಏ.8 : ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಕೊಡಗು 9ನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡಿಸಿದ ಸುದ್ದಿಗೋಷ್ಠಿಯಲ್ಲಿ , ‘ಚಿತ್ರದುರ್ಗ ಹೆಚ್ಚು ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೆಯ ಜಿಲ್ಲೆ ಮಂಡ್ಯ, ಮೂರನೇ ಜಿಲ್ಲೆ ಹಾಸನ ಜಿಲ್ಲೆಯಾಗಿದೆ. ಬೆಂಗಳೂರು ಗ್ರಾಮಾಂತರ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಜಿಲ್ಲೆ ಯಾದಗಿರಿ ಜಿಲ್ಲೆಯಾಗಿದೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.
ಮಡಿಕೇರಿ ಮೇ 7 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಪರ ನಗರದಲ್ಲಿ ಭರ್ಜರಿ ಪ್ರಚಾರ ನಡೆಯಿತು. ಮತಯಾಚನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಅವರು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದಾಪುರ ಮೇ 7 : ಅಸ್ಸಾಂ ರಾಜ್ಯದಲ್ಲಿ ಅಭಿವೃದ್ಧಿಯಾಗಿದ್ದರೆ ಅಲ್ಲಿನ ಕಾರ್ಮಿಕರು ವಲಸೆ ಹೋಗುತ್ತಿದ್ದಾರೆಯೇ ಎಂದು ಸಿಪಿಐ ಪಕ್ಷದ ಮುಖಂಡ ಕೆ.ವಿ ಸುನಿಲ್ ಪ್ರಶ್ನಿಸಿದ್ದಾರೆ. ಸಿದ್ದಾಪುರದ ಎ ಐ ಟಿ ಯು ಸಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೊಡಗು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿಲ್ಲೆಯ ಕಾರ್ಮಿಕರು, ಬೆಳೆಗಾರರು ಹಾಗೂ ಅಭಿವೃದ್ಧಿಯ ಬಗ್ಗೆ ಮಾತನಾಡದೆ ಇತರ ಪಕ್ಷದವರನ್ನು ದೂರುವ ಮೂಲಕ ಧರ್ಮ ರಾಜಕೀಯ ವ್ಯವಸ್ಥೆಯಡಿಯಲ್ಲಿ ಜನಾಂಗಗಳ ನಡುವೆ ಕಂದಕ ಸೃಷ್ಟಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಕಾರ್ಮಿಕರು ಸೇರಿದಂತೆ ಅಲ್ಲಿನ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಯಾವುದೇ ಅಭಿವೃದ್ಧಿ ಕಾಣದೆ ನಿರುದ್ಯೋಗ ಸಮಸ್ಯೆಯಿಂದ ಅಸ್ಸಾಂ ರಾಜ್ಯದವರು ಕೆಲಸ ಹುಡುಕಿ ಹೊರ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗಷ್ಟೇ ಕೊಡಗು ಜಿಲ್ಲೆಗೂ ಬಂದಿರುವ ಅಸ್ಸಾಂ ಸೇರಿದಂತೆ ಇತರ ರಾಜ್ಯದ ಕಾರ್ಮಿಕರು.ಕೆಲಸ ಕೊಟ್ಟ ಮಾಲೀಕನನ್ನೇ ಗುರಿಯಾಗಿಸಿ ಅಪರಾಧ ಕೃತ್ಯಗಳನ್ನು ಮಾಡಿದ್ದಾರೆ. ಅಸ್ಸಾಂ ಸೇರಿದಂತೆ ಇತರ ರಾಜ್ಯದ…
ಮಡಿಕೇರಿ ಮೇ 7 : ವಿರಾಜಪೇಟೆ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಿ.ಎಸ್.ರವೀಂದ್ರ ಪರವಾಗಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮತಯಾಚಿಸಿದರು. ಇಂದು ಐಮಂಗಲ, ಬಿಳುಗುಂದ, ಕಾವಾಡಿ, ಅಂಬಟ್ಟಿ, ಬಿಟ್ಟಂಗಾಲ, ಮಗ್ಗುಲ,ಚಂಬೆಬೆಳ್ಳೂರು ಕಡೆಗಳಲ್ಲಿ ಚುನಾವಣೆ ಪ್ರಚಾರ ನಡೆಸಿದರು. ಪಕ್ಷದ ಜಿಲ್ಲಾಧ್ಯಕ್ಷ ಬೋಜಣ್ಣ ಸೋಮಯ್ಯ ಮತ್ತಿತರರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮೇ 7 : ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುವ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸಮಿತಿಯ ತೀರ್ಮಾನದಂತೆ, ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ದಲಿತ ಕಲ್ಯಾಣಕ್ಕೆ ಪೂರಕವಾದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ಒಳಮೀಸಲಾತಿ ಜಾರಿಗೆ ತರಲು ತಾರತಮ್ಯ ಮಾಡುವ ಮೂಲಕ ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ. ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಅತ್ಯಾಚಾರ, ಕೋಮು ಗಲಭೆ, ದೌರ್ಜನ್ಯ ಹೆಚ್ಚಾಗಿದೆ. ಪೆಟ್ರೋಲ್,…






