ಲೇಖಕ: admin

ಮಡಿಕೇರಿ ಮೇ 7 : ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸುವ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರ್ಧರಿಸಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಸಮಿತಿಯ ತೀರ್ಮಾನದಂತೆ, ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ದಲಿತ ಕಲ್ಯಾಣಕ್ಕೆ ಪೂರಕವಾದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ಒಳಮೀಸಲಾತಿ ಜಾರಿಗೆ ತರಲು ತಾರತಮ್ಯ ಮಾಡುವ ಮೂಲಕ ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ. ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಅತ್ಯಾಚಾರ, ಕೋಮು ಗಲಭೆ, ದೌರ್ಜನ್ಯ ಹೆಚ್ಚಾಗಿದೆ. ಪೆಟ್ರೋಲ್,…

Read More

ಮಡಿಕೇರಿ ಮೇ 7 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ತೀರಾ ಕೀಳು ಮಟ್ಟದ ಪದ ಬಳಕೆ ಮಾಡುವ ಮೂಲಕ ವೈಯುಕ್ತಿಕ ತೇಜೋವಧೆ ಮಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ಪ್ರಮುಖರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಕಾಂಗ್ರೆಸಿಗರು ತಮ್ಮ ಅಭ್ಯರ್ಥಿ ಪೊನ್ನಣ್ಣ ಅವರ ಕುರಿತು ಬಿಜೆಪಿ ತೇಜೋವಧೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ತನ್ನ ಚುನಾವಣಾ ಪ್ರಚಾರದ ಸಂದರ್ಭ ಅಭ್ಯರ್ಥಿಯ ಹಿನ್ನೆಲೆಯನ್ನು ಮಾತ್ರವೇ ಮತದಾರರಿಗೆ ತಿಳಿಸಿದೆ. ಪ್ರತಿಸ್ಪರ್ಧಿ ಅಭ್ಯರ್ಥಿಯ ಪೂರ್ವಪರವನ್ನು ಮತದಾರರಿಗೆ ತಿಳಿಸುವುದು ವೈಯುಕ್ತಿಕ ತೇಜೋವಧೆ ಅಲ್ಲ, ರಾಜಕೀಯ ಕ್ಷೇತ್ರದಲ್ಲಿ ಇರುವವರು ಇದನ್ನು ಮೊದಲು ಅರಿತುಕೊಳ್ಳಬೇಕು ಎಂದರು. ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರ ಕುರಿತು ಅವಹೇಳನಕಾರಿ ಮತ್ತು ಕೀಳು ಪದ ಬಳಕೆ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು. ::: ಪ್ರಣಾಳಿಕೆ ‘ಎಡಿಟ್’ ::: ಕಾಂಗ್ರೆಸ್ ಪಕ್ಷ…

Read More

ಮಡಿಕೇರಿ ಮೇ 7 : ಹನುಮಾನ್ ವಿರೋಧಿಗಳನ್ನು ಸೋಲಿಸಿ, ಅಪ್ಪಚ್ಚು ರಂಜನ್ ಅವರನ್ನು ಗೆಲ್ಲಿಸಿ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ಜನರಲ್ ವಿ.ಕೆ.ಸಿಂಗ್ ಕರೆ ನೀಡಿದ್ದಾರೆ. ಕುಶಾಲನಗರ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಅವರ ಪರ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿ.ಕೆ.ಸಿಂಗ್, ಕಾಂಗ್ರೆಸ್‌ನಿoದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ, ಅದು ಯಾವಾಗಲೂ ದೇಶವನ್ನು ತುಚ್ಛ ರೀತಿಯಲ್ಲಿ ಬಿಂಬಿಸುವ ಕೆಲಸವನ್ನೇ ಮಾಡುತ್ತಾ ಬಂದಿದೆ ಎಂದು ವಿ.ಕೆ. ಸಿಂಗ್ ಟೀಕಿಸಿದರು. ಈ ಬಾರಿ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಿ, ಅಭಿವೃದ್ಧಿ ಕೆಲಸ-ಕಾರ್ಯಗಳು ನಿರಂತರವಾಗಿ ಮುಂದುವರೆಯಬೇಕಿದೆ ಎಂದು ಜನರಲ್ ವಿ.ಕೆ.ಸಿಂಗ್ ಆಶಯ ವ್ಯಕ್ತಪಡಿಸಿದರು. ಕೊಡಗಿನ ಮಣ್ಣಿಗೆ ಅಪಾರ ಶಕ್ತಿಯಿದೆ. ಆ ಶಕ್ತಿಯ ಬಲದಿಂದ ಹನುಮನನ್ನು ಮಾನ್ಯ ಮಾಡದವರನ್ನು ಸೋಲಿಸುವ ಮೂಲಕ ನಮ್ಮ ಬಲ ಪ್ರದರ್ಶಿಸುವ ಕಾಲ ಕೂಡಿ ಬಂದಿದೆ ಎಂದು ಹೇಳಿದರು. ನನಗೆ ಕೊಡಗಿನ ಬಗ್ಗೆ ಮೊದಲಿನಿಂದಲೂ ಭಾರೀ ಗೌರವವಿದೆ. ಭಾರತೀಯ ಸೇನೆಯ ಮೊತ್ತಮೊದಲ ಮುಖ್ಯಸ್ಥ ಜನರಲ್ ಕಾರ್ಯಪ್ಪ…

Read More

ಶನಿವಾರಸಂತೆ ಮೇ 6 : ಭಾರತದಲ್ಲಿ ಮುಂದುವರೆದ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಜನತೆಗೆ ಕಾಂಗ್ರೆಸ್‌ನ ಉಚಿತ ಗ್ಯಾರಂಟಿಗಳ ಅಗತ್ಯವಿಲ್ಲವೆಂದು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮಾ ಸ್ಪಷ್ಟಪಡಿಸಿದ್ದಾರೆ. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ನಡೆದ ಬಿಜೆಪಿ ಪಕ್ಷದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು, ‘ಕೊಡಗಿನ ಜನತೆಗೆ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಡಾ. ಹಿಮಂತ್ ಬಿಸ್ವಾಸ್ ಶರ್ಮಾ, ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಅಪ್ಪಚ್ಚು ರಂಜನ್ ಅವರನ್ನು ಸ್ಪಷ್ಟಬಹುಮತದೊಂದಿಗೆ ಗೆಲ್ಲಿಸುವಂತೆ ಮನವಿ ಮಾಡಿದರು. ಸ್ಪಷ್ಟ ಬಹುಮತ- ಈ ಹಿಂದೆ ಬಿಜೆಪಿ 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಲಾಗುತ್ತಿದ್ದರೂ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ‘ಬಜರಂಗದಳದ ನಿಷೇಧ’ ಪ್ರಸ್ತಾಪದಿಂದಾಗಿ ಬಿಜೆಪಿ 150 ಸ್ಥಾನಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವೆಂದು ಹೇಳಿದರು. ಓಲೈಕೆ ರಾಜಕಾರಣ-ಧರ್ಮದ ಆಧಾರದ ಮೀಸಲಾತಿಯನ್ನು ರದ್ದುಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಭಿನಂದನಾರ್ಹ ಕಾರ್ಯಮಾಡಿದೆ. ಆದರೆ ಕಾಂಗ್ರೆಸ್ ಪಕ್ಷ ತನ್ನ…

Read More

ಮಡಿಕೇರಿ ಮೇ 6 : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಕಳಶ ಸ್ಥಾಪನೆಯ ವಿಧಿವಿಧಾನಗಳು. (ಚಿತ್ರ- ಗಿರೀಶ್ ಕೊಲ್ಲೂರು)

Read More

ಮಡಿಕೇರಿ ಮೇ 6 : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಪರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮತಯಾಚಿಸಿದರು. ಇದೇ ಸಂದರ್ಭ ಅವರು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ಆರತಿ ಬೆಳಗಿದರು. ಬಿಜೆಪಿ ಪ್ರಮುಖರು ಹಾಗೂ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

Read More

ಸೋಮವಾರಪೇಟೆ ಮೇ 6 : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಚಲನ ಚಿತ್ರ ನಟ ಸಾಧುಕೋಕಿಲ, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ|| ಮಂತರ್ ಗೌಡ ಅವರ ಪರವಾಗಿ ಶನಿವಾರ ಬಿರುಸಿನ ಪ್ರಚಾರ ನಡೆಸಿದರು. ಮಾದಾಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಾಧುಕೋಕಿಲ, ಶ್ರೇಷ್ಠ ನಾಯಕರು ಹುಟ್ಟಿದ ಪುಣ್ಯ ಭೂಮಿ ಕೊಡಗು ಜಿಲ್ಲೆ ಸೇನೆ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಾಕಷ್ಟು ಕೊಡುಗೆಯನ್ನು ನೀಡಿದೆ. ಆದರೆ, ಯಾವುದೇ ಗುರುತರ ಅಭಿವೃದ್ಧಿಯಾಗಿಲ್ಲ. ಕಳೆದ 25 ವರ್ಷಗಳಿಂದ ಇಲ್ಲಿ ಶಾಸಕರಾಗಿ ಆಯ್ಕೆಯಾಗುತ್ತಿರುವ ಶಾಸಕ ಅಪ್ಪಚ್ಚು ರಂಜನ್ ಅವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಇಂದಿಗೂ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸಮಸ್ಯೆಗಳು ಎದ್ದು ಕಾಣುತ್ತಿವೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಯುವ ನಾಯಕ ಮಂತರ್ ಗೌಡ ಅವರಿಗೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಅಭ್ಯರ್ಥಿ ಡಾ.ಮಂತರ್ ಗೌಡ ಮಾತನಾಡಿ, ನಮ್ಮ  ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ, ಎಲ್ಲಾ ಸಮಸ್ಯೆ…

Read More

ಮಡಿಕೇರಿ ಮೇ 6 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂತರ್ ಗೌಡ ಪರ ನಗರದ ಪ್ರಮುಖ ಬಡಾವಣೆಗಳಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಮತಯಾಚನೆ ಸಂದರ್ಭ ಮಾತನಾಡಿದ ಅವರು ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂದರು. ಅಭಿವೃದ್ಧಿಯ ಚಿಂತನೆಯೊAದಿಗೆ ಕಣಕ್ಕಿಳಿದಿರುವ ಉತ್ಸಾಹಿ ಯುವ ರಾಜಕಾರಣಿ ಮಂತರ್ ಅವರ ಪರ ಯುವ ಸಮೂಹ ಒಲವು ತೋರಿದೆ. ಈ ಹಿಂದೆ ಕಂಡರಿಯದಷ್ಟು ಜನಬೆಂಬಲ ಕಾಂಗ್ರೆಸ್ ಅಭ್ಯರ್ಥಿಗೆ ದೊರೆಯುತ್ತಿದೆ. ಆದ್ದರಿಂದ ಮಂತರ್ ಗೆಲವು ಖಚಿತವೆಂದರು. ನಗರ ಕಾಂಗ್ರೆಸ್ ಉಸ್ತುವಾರಿಯ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಯೋಜನೆಗಳ ಕುರಿತು ಮತದಾರರಿಗೆ ವಿವರಿಸಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ನಗರ ಉಸ್ತುವಾರಿ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಉಪಾಧ್ಯಕ್ಷ ಮಹಮ್ಮದ್ ಯಾಕುಬ್, ಡಿಸಿಸಿ…

Read More

ಮಡಿಕೇರಿ ಮೇ 6 :  ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಲಬ್ನ ಸಾಮಾನ್ಯ ಸದಸ್ಯರಾಗುವವರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಸಂಪಾದಕರು ಅಥವಾ ಜಿಲ್ಲಾ ವರದಿಗಾರರಿಂದ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯ. ಸದಸ್ಯರಾಗುವವರು ಪತ್ರಕರ್ತರಾಗಿರುವುದು ಹಾಗೂ ಪತ್ರಿಕಾ ಕಾರ್ಯಾಲಯದಲ್ಲಿ ಇರುವುದು ಕಡ್ಡಾಯ. ಸಾಮಾನ್ಯ ಸದಸ್ಯರಾಗುವವರು ಕಡ್ಡಾಯವಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆಯದಿದ್ದರೇ ಕ್ಲಬ್ನ ಆಜೀವ ಸದಸ್ಯತ್ವ ಮತ್ತು ಸಾಮಾನ್ಯ ಸದಸ್ಯತ್ವ ರದ್ದಾಗುತ್ತದೆ. ಸಾಮಾನ್ಯ ಸದಸ್ಯತ್ವಕ್ಕೆ ವೃತ್ತಿನಿರತ ಪತ್ರಕರ್ತರು, ಪತ್ರಿಕಾ ಸಂಪಾದಕರು, ಉಪಸಂಪಾದಕರು, ಪತ್ರಿಕಾ ಅಧಿಕೃತ ಛಾಯಾಚಿತ್ರಕಾರರು, ಮಾಧ್ಯಮ ಪ್ರತಿನಿಧಿಗಳು, ವ್ಯವಸ್ಥಾಪಕ ಸಂಪಾದಕರು, ಪತ್ರಿಕಾ ಮಾಲೀಕತ್ವ ಹೊಂದಿರುವ ಸಂಪಾದಕರು…

Read More

ಮಡಿಕೇರಿ ಮೇ.6 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಹಾಗೂ ಮತಎಣಿಕೆ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ, 8 ರ ಸಂಜೆ 6 ರಿಂದ ಮೇ, 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಮೇ, 12 ರ ಮಧ್ಯರಾತ್ರಿ 12 ರಿಂದ ಮೇ, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಸ್ಟಾರ್ ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.

Read More