ಲೇಖಕ: admin

ಮಡಿಕೇರಿ ಮೇ 6 : ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್ ಅವಧಿ 6 ತಿಂಗಳು ಜುಲೈ, 1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನಲ್ಲಿ ಸಹಕಾರ ತರಬೇತಿ ಪ್ರಾರಂಭಿಸಲಾಗುತ್ತಿದ್ದು, ಕೊಡಗು ಮತ್ತು ಹಾಸನ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪಡೆದ ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು. ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು. ಪ್ರತ್ಯೇಕ ತರಗತಿ ಹಾಗೂ ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ, ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇದೆ. ತರಬೇತಿ ಪಡೆದವರಿಗೆ ವಿವಿಧ ರೀತಿಯ ಸಹಕಾರ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ. ಸಹಕಾರ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಆದ್ಯತೆ. ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ಮಾಹಿತಿಗೆ…

Read More

ಮಡಿಕೇರಿ ಮೇ 6 : ರಾಜ್ಯ ಬಾಲ ಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ (1 ರಿಂದ 10ನೇ ತರಗತಿ) 5 ರಿಂದ 16 ವರ್ಷದ ಮಕ್ಕಳಿಗಾಗಿ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಅಂಡ್ ಗೈಡ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ. ಇಲ್ಲಿ ಮೇ, 15 ರಿಂದ 29 ರವರೆಗೆ ಉಚಿತ ಬೇಸಿಗೆ ಶಿಬಿರ  ನಡೆಯಲಿದೆ. ಈ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿ ನೀಡಲಾಗುವುದು. ಆದ್ದರಿಂದ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಮೇ, 12 ರೊಳಗೆ ದೂರವಾಣಿ ಸಂಖ್ಯೆ 8618861505, 6363285685 ಕಚೇರಿ ಸಮಯದಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಮೇ 6 : ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ರೋಟರ್ಯಾಕ್ಟ್ ಕ್ಲಬ್ ಪದವಿ ಕಾಲೇಜು ಮೂರ್ನಾಡು ಸಹಯೋಗದಲ್ಲಿ ಮೂರ್ನಾಡು ಬಳಿಯ ಹೆಚ್.ಪಿ ಪೆಟ್ರೋಲ್ ಬಂಕ್ ಬಳಿಯಿಂದ ಮೂರ್ನಾಡು ಬಾಚೆಟ್ಟಿರ ಲಾಲುಮುದ್ದಯ್ಯ ಕ್ರೀಡಾಂಗಣದ ವರೆಗೆ ಮತದಾನ ಮಹತ್ವ ಸಾರುವ ಜಾಗೃತಿ ಜಾಥವು ನಡೆಯಿತು. ಸ್ಪರ್ಧೆಗೆ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ. ಆಕಾಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಡಿಕೇರಿ ರೋಟರಿ ಸಂಸ್ಥೆಯ ಮುಖ್ಯಸ್ಥರಾದ ಅನಿಲ್ ಎಚ್.ಟಿ, ಮಡಿಕೇರಿ ವುಡ್ಸ್‍ನ ಅಧ್ಯಕ್ಷ ಸಂಪತ್ ಕುಮಾರ್, ಕಾರ್ಯದರ್ಶಿ ವಸಂತ್ ಕುಮಾರ್, ಮಡಿಕೇರಿ ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷ ಧನಂಜಯ್, ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ.ಮಾದಪ್ಪ, ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಸ್ವೀಪ್ ಸಮಿತಿಯ ನವೀನ್, ಸಮಿತಿಯ ಪದಾಧಿಕಾರಿಗಳು, ರೋಟರಿ ವುಡ್ಸ್‍ನ ಸದಸ್ಯರಾದ ಹರೀಶ್, ನವೀನ್, ಬೋಪಣ್ಣ, ರೋಟರ್ಯಾಕ್ಟ್ ಕ್ಲಬ್‍ನ ಅಧ್ಯಕ್ಷೆ ಶ್ರೀರಕ್ಷಾ, ಕಾರ್ಯದರ್ಶಿ ಸಂಜಯ್, ಸದಸ್ಯರು ಇದ್ದರು. ಮತದಾನ ಜಾಗೃತಿ ಮೂಡಿಸಲು…

Read More

ಮಡಿಕೇರಿ ಮೇ 6 : ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಮತ್ತು ಭಾರತೀಯ ಮಾಹಿತಿ ಸೇವೆ(ಐಐಎಸ್) ವಿಭಾಗದ ಅಧಿಕಾರಿ ಪವನ್  ನಾಗರಹೊಳೆಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ತೆರೆಯಲಾಗಿರುವ ‘ಸಾಂಪ್ರದಾಯಿಕ’ ಮತಗಟ್ಟೆಗೆ ಭೇಟಿ ನೀಡಿ ವೀಕ್ಷಿಸಿದರು. ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಆಶ್ರಮ ಶಾಲೆಯ ಪ್ರಾಂಶುಪಾಲರಾದ ಎನ್.ಎಸ್.ಬಸವರಾಜು, ಐಟಿಡಿಪಿ ಇಲಾಖೆಯ ತಾಲ್ಲೂಕು ಅಧೀಕ್ಷಕರಾದ ನವೀನ್ ಕುಮಾರ್ ಇತರರು ಇದ್ದರು.

Read More

ಮಡಿಕೇರಿ ಮೇ 6 :  ಮಿನಿ ವಿಮಾನಗಳ ಸಂಗ್ರಹದೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗಿತ್ತು. ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮತ್ತು ಜಿ.ಪಂ.ಸಿಇಒ ಜತೆಯೂ ಫೋಟೋ ತೆಗೆಸಿಕೊಳ್ಳಲು ಗ್ರಾಮಸ್ಥರು ಮುಗಿಬಿದ್ದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮಿನಿ ವಿಮಾನಗಳ ಫೋಟೋವನ್ನು ತಮ್ಮ ಕ್ಯಾಮರದಲ್ಲಿ ತೆಗೆಯುವುದರ ಜೊತೆಗೆ ಸಾರ್ವಜನಿಕರ ಫೋಟೋಗಳನ್ನೂ ಕೂಡ ಮಿನಿ ವಿಮಾನಗಳ ಜತೆ ತೆಗೆಯುವುದರೊಂದಿಗೆ ಜನರ ಮೆಚ್ಚುಗೆ ಗಳಿಸಿದರು. ನೀವು ನಿಲ್ಲಿ.. ನಾನು ಫೋಟೋ ತೆಗೆಯುತ್ತೇನೆ ಎಂದು ಜನರನ್ನು ಹುರಿದುಂಬಿಸುತ್ತಾ ಜಿಲ್ಲಾಧಿಕಾರಿಗಳು ತಮ್ಮದೇ ಫೋಟೋ ತೆಗೆಯುತ್ತಾ ಗಮನ ಸೆಳೆದರು.

Read More

ಮಡಿಕೇರಿ ಮೇ 6 : ಬಾಳೆಲೆ ಬಳಿಯ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ಮತದಾನದ ಮಹತ್ವವನ್ನು ಸಾರಿದ ಮಿನಿ ವಿಮಾನಗಳು ವಿಭಿನ್ನ ರೀತಿಯಲ್ಲಿ ಬಾನಂಗಣದಲ್ಲಿ ಮತದಾನದ ಮಹತ್ವ ಸಾರುವ ಮೂಲಕ ಕಿಕ್ಕಿರಿದು ಸೇರಿದ್ದ ಗ್ರಾಮಸ್ಥರ ಮನ ಸೆಳೆದವು. ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಆಶ್ರಯದಲ್ಲಿ ಬಾಳೆಲೆ ಕಾರ್ಮಾಡು ಗ್ರಾಮ ನಿವಾಸಿ ಕೊಳ್ಳಿಮಾಡ ರಾಜಿ ಗಣಪತಿ ಅವರ ಸಂಗ್ರಹದಲ್ಲಿರುವ ಮಿನಿ ವಿಮಾನಗಳ ಪ್ರದರ್ಶನ ಮತ್ತು ಹಾರಾಟ ಅತ್ಯಾಕರ್ಷಕವಾಗಿ ಜರುಗಿತು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮತ್ತು ಜಿ.ಪಂ.ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಮಿನಿ ವಿಮಾನ ಹಾರಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಮತದಾನ ಮಹತ್ವ ಸಾರುವ ಸಂದೇಶ ಅಭಿಯಾನಕ್ಕೆ ಚಾಲನೆ ನೀಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಮಾಡು ಗ್ರಾಮದ ಖಾಸಗಿ ಏರ್‍ಸ್ಟ್ರಿಪ್‍ನಲ್ಲಿ ಮಿನಿ ವಿಮಾನಗಳು ಸದ್ದುಮಾಡುತ್ತಾ ಬಾನಂಗಣದಲ್ಲಿ ಹಾರಾಟ ನಡೆಸಿದವು. ಮಿನಿ ಸೆಸ್ನಾ, ಎಕ್ಸ್‍ಎಫ್ 80, ಎಕ್ಸ್ 380 ಶ್ರೇಣಿಯ ಮಿನಿ ವಿಮಾನಗಳು, ಮಿನಿ ಹೆಲಿಕಾಪ್ಟರ್…

Read More

ಮಡಿಕೇರಿ ಮೇ 6 : ಮಡಿಕೇರಿ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪಿ.ಕೆ.ಬೋಪಣ್ಣ ಪರವಾಗಿ ನಗರದ ವಿವಿಧೆಡೆ ಬಿರುಸಿನ ಮತ ಪ್ರಚಾರ ನಡೆಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ಕನ್ನಿಕ ಲೇಔಟ್, ಸುಬ್ರಹ್ಮಣ್ಯ ನಗರ, ಡೈರಿ ಲೇಔಟ್, ಗಾಳಿಬೀಡು ರಸ್ತೆ, ಎಫ್‍ಎಂಸಿ ಕಾಲೇಜು ರಸ್ತೆ ಕಡೆಗಳಲ್ಲಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಕೆ.ಪಿ.ಬೋಪಣ್ಣ ಕೊಡಗಿನ ವಿವಿಧೆಡೆ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಎರಡು ಕ್ಷೇತ್ರದಲ್ಲೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಕ್ಷದ ವತಿಯಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರು ತನಗೆ ಮತ ನೀಡಿ ಗೆಲ್ಲಿಸಿದ್ದಲ್ಲಿ ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಲಾಗುವುದೆಂದು ಭರವಸೆ ನೀಡಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಪ್ರಮುಖರಾದ ಮುರಳಿ, ಕಲ್ಯಾಣಿ, ಶಿಲ್ಪ ಬೋಪಣ್ಣ, ಥೋಮಸ್ ಮತ್ತು ಇತರರು ಈ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಮೇ 6 :  ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾ ಯುವಕರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ 200 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಭದ್ರಕೋಟೆಯಾಗಿರುವ ಕೊಟ್ಟಮುಡಿಯಲ್ಲಿ  ಜೆಡಿಎಸ್ ಅಭ್ಯರ್ಥಿ ‌ನಾಪಂಡ ಮುತ್ತಪ್ಪ ಹಾಗೂ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸೀರ್ ‌ಮೂರ್ನಾಡು ಅವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭ ಮಾತನಾಡಿದ, ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ  ಕೊಡಗು ಕಾಂಗ್ರೆಸ್ ನಲ್ಲಿ‌ ಅಲ್ಪಸಂಖ್ಯಾತರನ್ನು ಬರೀ ವೋಟ್ ಗಾಗಿ ಬಳಸಲಾಗುತ್ತಿದೆ. ಬಿಜೆಪಿ ಕೋಮುವಾದಿ ಪಕ್ಷವಾಗಿದೆ. ಅಲ್ಪಸಂಖ್ಯಾತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದ ಜೆಡಿಎಸ್ ಪಕ್ಷ. ಅಲ್ಪಸಂಖ್ಯಾತರನ್ನು ರಾಜ್ಯಾಧ್ಯಕ್ಷರಾಗಿ ಮಾಡಿರುವ ಏಕೈಕ ಪಕ್ಷ ವಾಗಿದೆ ಎಂದರು. ಈ ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸುವ ಮುನ್ಸೂಚನೆ ಬಹುತೇಕರಿಗೆ ಸಿಕ್ಕಿದೆ, ಇದರಿಂದಲೇ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ‌ತೊರೆದು ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು  ನಾಪಂಡ ಮುತ್ತಪ್ಪ ಹೇಳಿದರು. ಜೆಡಿಎಸ್ ಅಲ್ಪಸಂಖ್ಯಾತ ಘಟಕದ  ಜಿಲ್ಲಾಧ್ಯಕ್ಷ ಜಾಸೀರ್ ಮೂರ್ನಾಡು ಮಾತನಾಡಿ,…

Read More

ಮಡಿಕೇರಿ ಮೇ 6 : ಆಮ್ ಆದ್ಮಿ ಪಕ್ಷದ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವೀಂದ್ರ ಪರವಾಗಿ ವಿ.ಬಾಡಗ, ಬಾಳೆಲೆ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಯಿತು. ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಕುಂದಾ, ವಿ.ಬಾಡಗ, ರುದ್ರಗುಪ್ಪೆ, ದೇವರಪುರ, ತಿತಿಮತಿ, ಮಲ್ಲೂರು, ಬಾಳೆಲೆ, ಕಾನೂರು ಕಡೆಗಳ ಮನೆ ಮನೆಗೆ ತೆರಳಿ ಪಕ್ಷದ ಯೋಜನೆಗಳ ಕರಪತ್ರವನ್ನು ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಅಭ್ಯರ್ಥಿ ಸಿ.ಎಸ್.ರವೀಂದ್ರ ಮಾತನಾಡಿ, ಈಗಾಗಲೇ ಜಿಲ್ಲೆಯ ಹಲವೆಡೆ ಬಿರುಸಿನ ಪ್ರಚಾರ ನಡೆದಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತ್ತಿದೆ. ಈ ಬಾರಿ ಬದಲಾವಣೆ ಬಯಸುತ್ತಿರುವ ಮತದಾರರು ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More

ವಿರಾಜಪೇಟೆ ಮೇ 6 : ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿ ನೇಮಕವಾದ ಪ್ರೊ.ಅಶೋಕ ಸಂಗಪ್ಪ ಆಲೂರ ಅವರನ್ನು ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕುಲಪತಿಗಳ ಕಚೇರಿಯಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಕರ್ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕರಾದ ಬಿ.ಡಿ.ಹೇಮ ಹಾಜರಿದ್ದರು.

Read More