ಮಡಿಕೇರಿ ಮೇ 6 : ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಲೋಕದ ಬೆಳವಣಿಗೆಗೆ ಅಪಾರವಾದ ಕೊಡುಗೆ ನೀಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜಿಲ್ಲಾ ಕಚೇರಿಯಲ್ಲಿ ನಡೆದ ಪರಿಷತ್ತಿನ 109ನೇ ಸಂಸ್ಥಾಪನಾ ದಿನದ ಕುರಿತು ಮಾತನಾಡಿದ ಅವರು, 108 ವರ್ಷಗಳ ಹಿಂದೆ ಕನ್ನಡ ನಾಡು ನುಡಿ ಸಂಸ್ಕೃತಿಗಳ ಉಳಿವಿಗೆ ಸ್ಥಾಪನೆಯಾದ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು 1955ರಲ್ಲಿ ಮೈಸೂರು ಸಂಸ್ಥಾನದ ದೊರೆಗಳಾದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದಿವಾನರುಗಳಾದ ಸರ್. ಎಂ.ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ಅವರು ಸ್ಥಾಪಿಸಿದ ಕರ್ನಾಟಕ ಸಾಹಿತ್ಯ ಪರಿಷತ್ತು 1935 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಎಂದು ಮರುನಾಮಕರಣ ಗೊಂಡಿತು ಎಂದು ಹೇಳಿದರು. ಹೋಬಳಿ ಮಟ್ಟದಲ್ಲಿಯೂ ಪರಿಷತ್ತಿನ ಘಟಕಗಳನ್ನು ರಚಿಸುವ ಮೂಲಕ ಪ್ರತಿ ಗ್ರಾಮದಲ್ಲೂ ಕನ್ನಡದ ಬೆಳವಣಿಗೆ ಅದರ ಸಂಸ್ಕೃತಿಯ ಉಳಿವು ಅರಿವು ಆಗಬೇಕು ಎನ್ನುವ…
ಲೇಖಕ: admin
ಮಡಿಕೇರಿ ಮೇ 6 : ಕಳೆದ ಎರಡೂವರೆ ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಬಿಜೆಪಿಯ ‘ಗ್ರೇಟರ್ ಮಡಿಕೇರಿ ಟೂರಿಸಂ ಕಾರಿಡಾರ್’ ಒಳಗೊಂಡ ಪ್ರಣಾಳಿಕೆ ಹಾಸ್ಯಾಸ್ಪದವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಸುದೀರ್ಘ ಆಡಳಿತದಿಂದ ಬೇಸತ್ತಿರುವ ಜನತೆ ಬದಲಾವಣೆಯನ್ನು ಬಯಸಿದ್ದಾರೆ. ಜಿಲ್ಲೆಯ 2 ಕ್ಷೇತ್ರಗಳ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಪ್ರವಾಸೋದ್ಯಮದ ಅಭಿವೃದ್ಧಿ ಸೇರಿದಂತೆ ದೂರದೃಷ್ಟಿಯ ಕಾಂಗ್ರೆಸ್ ಪ್ರಣಾಳಿಕೆ ಕಾರ್ಯಗತಗೊಳ್ಳಲಿದೆ ಎಂದರು. ಜಿಲ್ಲಾಡಳಿತ ಭವನದ ಕಳಪೆ ತಡೆಗೋಡೆ, ಗಡಿ ಅಭಿವೃದ್ಧಿಯ ಅನುದಾನ ಸೇರಿದಂತೆ 9.50 ಕೋಟಿ ವೆÉಚ್ಚದ ಸುವರ್ಣ ಸಮುಚ್ಛಯ ಭವನವಿನ್ನೂ ಪೂರ್ಣಗೊಳ್ಳದೆ ಪಾಳು ಬಂಗಲೆಯಂತೆ ನಿಂತಿರುವುದು, 4 ಕೋಟಿ ವೆಚ್ಚದ ಕೊಡಗು ಹೆರಿಟೇಜ್ ಅಪೂರ್ಣವಾಗಿ ಪಳೆಯುಳಿಕೆಯಂತೆ ತೋರುತ್ತಿರುವುದು, ಸರ್ವಋತು ರಸ್ತೆಗಳು ಗಬ್ಬೆದ್ದು ಅವುಗಳಿಗೆ ತೇಪೆ ಹಾಕುತ್ತಿರುವುದು ಬಿಜೆಪಿ ಜನಪ್ರತಿನಿಧಿಗಳ ಸಾಧನೆಯಾಗಿದೆ ಎಂದು ಟೀಕಿಸಿದರು. ಶಾಸಕರುಗಳ ವೈಫಲ್ಯವನ್ನು ಅರಿತಿರುವ ಜಿಲ್ಲೆಯ ಮತದಾರ ಕಾಂಗ್ರೆಸ್ ಅಭ್ಯರ್ಥಿಗಳಾದ…
ಮಡಿಕೇರಿ ಮೇ 6 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಅವರು, ನನಗೆ ಯಾರೂ ಪ್ರತಿಸ್ಪರ್ಧಿ ಇಲ್ಲವೆಂದು ಹೇಳಿಕೊಳ್ಳುತ್ತಿದ್ದಾರೆ. ಕಳೆದ 25 ವರ್ಷಗಳ ಕಾಲ ಇವರಿಗೆ ಪ್ರತಿಸ್ಪರ್ಧಿ ಇಲ್ಲದಿರಬಹುದು. ಆದರೆ ಈಗ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ರಂಜನ್ ಅವರನ್ನು ಸೋಲಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದವರು ಮತ್ತೆ ಮತ್ತೆ ಗೆದ್ದು ಬರುತ್ತಿರುವುದು ಹೇಗೆ ಎಂದೇ ತಿಳಿಯುತ್ತಿಲ್ಲ. ಗೆದ್ದ ನಂತರ ಐದು ವರ್ಷ ಸುಮ್ಮನಿದ್ದು, ಚುನಾವಣೆ ಸಂದರ್ಭ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಕೊನೆಯ ಮೂರು ದಿನ ಚಟುವಟಿಕೆಯಲ್ಲಿ ತೊಡಗುತ್ತಾರೆ ಹೊರತು ಅಭಿವೃದ್ಧಿಪರ ಚಿಂತನೆಯನ್ನೇ ಮಾಡುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತವಾಗಿದೆ. ಆದ್ದರಿಂದ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಅನಿವಾರ್ಯವಾಗಿದೆ. ಇವರುಗಳು ಗೆದ್ದರೆ ಅಭಿವೃದ್ಧಿ ಕಾರ್ಯಗಳು ಸುಲಭವಾಗಲಿದೆ, ಮಂತರ್…
ಮಡಿಕೇರಿ ಮೇ 6 : ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರ ಪರ ಪ್ರಚಾರದಲ್ಲಿ ತೊಡಗಿರುವ ಬುದ್ಧಿ ಜೀವಿ ಅಡ್ಡಂಡ ಕಾರ್ಯಪ್ಪ ಅವರು ಇಡೀ ಕೊಡವ ಜನಾಂಗವನ್ನು ಅಪಮಾನ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಆರೋಪಿಸಿದ್ದಾರೆ. ಬಿಜೆಪಿ ಗೆ ಕೊಡವರ ಮೇಲೆ ನೈಜ ಪ್ರೀತಿ ಇದ್ದರೆ ಕಾರ್ಯಪ್ಪ ಅವರನ್ನು ಪಕ್ಷದಿಂದ ತಕ್ಷಣ ಉಚ್ಛಾಟಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀಣಾ ಅಚ್ಚಯ್ಯ, ಕೊಡವರು ಹಾಗೂ ಕೊಡವತಿಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾರ್ಯಪ್ಪ ಅವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಹೇಳಿದರು. ಅಭಿವೃದ್ಧಿ ಪರ ಚಿಂತನೆಯನ್ನು ಮರೆತು ವೈಯುಕ್ತಿಕ ತೆಜೋವಧೆ ಮಾಡುವ ಮೂಲಕ ಮತ ಗಳಿಸುವುದು ಬಿಜೆಪಿಯ ಚಾಳಿಯಾಗಿದೆ. ಅಡ್ಡಂಡ ಕಾರ್ಯಪ್ಪ ಅವರು ಒಬ್ಬ ಕೊಡವನಾಗಿ ಇಡೀ ಕೊಡವ ಸಮುದಾಯವನ್ನು ತೇಜೋವಧೆ ಮಾಡಿದ್ದಾರೆ. ನಾನೊಬ್ಬ ಕೊಡವ ಹೆಣ್ಣುಮಗಳಾಗಿ ಹೇಳಿಕೊಳ್ಳಲಾಗದಂತಹ ಅವಾಚ್ಯ ಶಬ್ಧಗಳನ್ನು ಅವರು ಬಳಕೆ ಮಾಡಿದ್ದಾರೆ, ಇದರಿಂದ ನನಗೆ ತುಂಬಾ…
ಮಡಿಕೇರಿ ಮೇ 6 : ಓಮನ್ನಲ್ಲಿ ಮೇ 23 ರಿಂದ ಜೂನ್ 1ರ ತನಕ ಜರುಗಲಿರುವ ಪುರುಷರ ಜೂನಿಯರ್ ಏಷ್ಯಾಕಪ್ ಹಾಕಿ-2023 ಚಾಂಪಿಯನ್ಶಿಪ್ಗೆ ಭಾರತ ಜೂನಿಯರ್ ಹಾಕಿ ತಂಡಕ್ಕೆ ಜಿಲ್ಲೆಯ ಯುವ ಆಟಗಾರ ಚಂದುರ ಬಿ.ಪೂವಣ್ಣ ಆಯ್ಕೆಗೊಂಡಿದ್ದಾರೆ. ಇದು ಮುಂಬಲಿರುವ ಎಫ್.ಐ.ಎಸ್. ಜೂನಿಯರ್ಮೆನ್ಸ್ ವರ್ಲ್ಡ್ ಕಪ್ ಹಾಕಿ ಪಂದ್ಯಾಟಕ್ಕೆ ಅರ್ಹತೆ ಗಳಿಸುವ ಪ್ರತಿಷ್ಠಿತ ಪಂದ್ಯಾವಳಿಯೂ ಆಗಿದೆ. ಹಾಕಿ ಇಂಡಿಯಾ 18 ಆಟಗಾರರ ಹೆಸರನ್ನು ಜೂನಿಯರ್ ಏಷ್ಯಾಕಪ್ ಪಂದ್ಯಾವಳಿಗೆ ಪ್ರಕಟಿಸಿದ್ದು, ಇದರಲ್ಲಿ ಪೂವಣ್ಣ ಕೂಡ ಒಬ್ಬರಾಗಿದ್ದಾರೆ. ಉತ್ತಮ್ ಸಿಂಗ್ ತಂಡದ ನಾಯಕರಾಗಿದ್ದು, ಕರ್ನಾಟಕ ರಾಜ್ಯದಿಂದ ಪೂವಣ್ಣ ಹಾಗೂ ಹೆಚ್.ಎಸ್.ಮೋಹಿತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪೂವಣ್ಣ 2022ರಲ್ಲಿ ಜರುಗಿದ 10ನೇ ಸುಲ್ತಾನ್ ಆಫ್ ಜೋಹಾರ್ಕಪ್ ಪ್ರಶಸ್ತಿ ಗಳಿಸಿದ್ದ ಜೂನಿಯರ್ ಇಂಡಿಯಾ ತಂಡವನ್ನೂ ಈ ಹಿಂದೆ ಪ್ರತಿನಿಧಿಸಿದ್ದರು. ಇವರು ಮೂಲತಃ ಕಂಡಂಗಾಲದ ನಿವಾಸಿ ಚಂದುರ ಎಸ್.ಬಾಬಿ (ಪ್ರಭು) ಹಾಗೂ ಅನಿಲ (ತಾಮನೆ ಮಲ್ಲೇಂಗಡ, ಬಾಡಗರಕೇರಿ) ದಂಪತಿ ಪುತ್ರ.
ಮಡಿಕೇರಿ ಮೇ 6 : ಬಾಳೆಯಡ ಕಿಶನ್ ಪೂವಯ್ಯ ಮೂಲತಃ ನಾಪೋಕ್ಲುವಿನ ಬಾಳೆಯಡ ಬಿ.ಕೆ ಚರ್ಮಣ್ಣ, ಬಿ.ಸಿ.ಮಾಚಮ್ಮ ದಂಪತಿಯ ಪುತ್ರ. ವಿರಾಜಪೇಟೆಯಲ್ಲಿ ಜನಿಸಿದ ಕೊಡಗಿನ ವಿವಿಧ ಸ್ಥಳಗಳಲ್ಲಿ ತಮ್ಮ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣವನ್ನು ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರಿನಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಹಾವನೂರು ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಮಡಿಕೇರಿಯಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ವೃತ್ತಿಯಿಂದ ವಕೀಲರು ಮತ್ತು ನೋಟರಿಯಾದರೂ ಸಹ ಪ್ರವೃತ್ತಿಯು ಕೃಷಿ ಮತ್ತು ಸಮಾಜ ಸೇವೆ, ರಾಜಕೀಯ, ಕ್ರೀಡೆ ಇತ್ಯಾದಿ ಇವರ ವಿಶೇಷತೆ. ಸುಮಾರು 8 ವರ್ಷಗಳ ಕಾಲ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿದ್ದ ಇವರು ಪ್ರಸ್ತುತ ಜಿಲ್ಲಾ ಸಮಿತಿಯ ಆಹ್ವಾನಿತ ಸದಸ್ಯರಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಕನ್ನಡ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಿದ್ದವರು ಕೊಡವ ಸಾಹಿತ್ಯ ಅಕಾಡೆಮಿಯ ಸಮಾರಂಭಗಳಲ್ಲಿ, ಉಪ ಸಮಿತಿಗಳ ಸದಸ್ಯನಾಗಿ, ಸ್ಥಳೀಯ ವಾಹಿನಿಗಳಲ್ಲಿ ಮತ್ತು ಆಕಾಶ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಣೆ, …
ಮಡಿಕೇರಿ ಮೇ 6 : ಚುನಾವಣಾ ಪ್ರಚಾರಕ್ಕಾಗಿ ಜಿಲ್ಲೆಯ ಗಡಿ ಅರಕಲಗೂಡಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂತಪ್ಪ ಆಗಮಿಸಿ ದೊಡ್ಡಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೋಟೆ. ಇಲ್ಲಿನ ಜನತೆ ಪ್ರಜ್ಞಾವಂತರು ಈ ಹಿಂದಿನಿಂದಲೂ ನಮ್ಮನ್ನು ಆಶೀರ್ವಾದಿಸುತ್ತಾ ಬಂದಿದ್ದಾರೆ. ಈ ಭಾರಿಯು ನಮ್ಮ ಪಕ್ಷದಿಂದ ಅಪ್ಪಚ್ಚು ರಂಜನ್ ಹಾಗೂ ಬೋಪಯ್ಯ ಸ್ಪರ್ಧಿಸಿದ್ದು, ನಿಮ್ಮೆಲ್ಲರ ಆಶೀರ್ವಾದ ಅವರ ಮೇಲಿರಲಿ ಎಂದರು. ರಾಜ್ಯದ ಜನತೆ ಬಿಜೆಪಿ ಪರವಾಗಿದ್ದಾರೆ. ಈ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಈ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ದೇವರು, ಬಸವ ಪಟ್ಟಣ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಪಕ್ಷದ ಪ್ರಮುಖರು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಮೇ 6 : ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಂಗೋಲಿ ಸ್ಪರ್ಧೆ ಮತ್ತು ಜಾಥ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಾಲನೆ ನೀಡಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಜಾಗೃತಿ(ಸ್ವೀಪ್) ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಸ್ತ್ರೀ ಶಕ್ತಿ ಒಕ್ಕೂಟಗಳು ಹಾಗೂ NRLM ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು. ಪೊನ್ನಂಪೇಟೆ ಗ್ರಾ.ಪಂ ವ್ಯಾಪ್ತಿಯಲ್ಲಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಂಡು ಘೋಷಣೆಗಳನ್ನು ಕೂಗುವ ಮೂಲಕ ಮೂಲಕ ಸಾರ್ವಜನಿಕವಾಗಿ ಮತದಾನ ಜಾಗೃತಿಯನ್ನು ಮೂಡಿಸಲಾಯಿತು. ನಂತರ ಮತದಾನ ಜಾಗೃತಿ ರಂಗೋಲಿ ಸ್ಪರ್ಧೆಯಲ್ಲಿ ಉತ್ತಮವಾಗಿ ರಂಗೋಲಿಯನ್ನು ಚಿತ್ರಿಸಿದ ಮಹಿಳೆಯರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ರಂಗೋಲಿ ಸ್ಪರ್ಧೆಯಲ್ಲಿ 19 ವರ್ಷದ ಒಳಗಿನ ಮಕ್ಕಳಿಗೂ ಅವಕಾಶವನ್ನು ನೀಡಿ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಅಲ್ಲದೇ ಸ್ಪರ್ಧೆಯಲ್ಲಿ …
ಮಡಿಕೇರಿ ಮೇ 6 : ಕೆಪಿಸಿಸಿ ಸದಸ್ಯರಾಗಿದ್ದ ಕದ್ದಣಿಯಂಡ ಹರೀಶ್ ಬೋಪಣ್ಣ ಕಾಂಗ್ರೆಸ್ ಪಕ್ಷ ತೊರೆದು ಭಾರತೀಯ ಜನತಾ ಪಾರ್ಟಿ ಗೆ ಸೇರ್ಪಡೆಗೊಂಡಿದ್ದಾರೆ. ಶಾಸಕ ಕೆ.ಜಿ.ಬೋಪಯ್ಯ ಅವರ ಸರಳತೆ, ಸಜ್ಜನಿಕೆ ಹಾಗೂ ಬಿಜೆಪಿ ಯ ತತ್ವ ಸಿದ್ಧಾಂತವನ್ನು ಮೆಚ್ಚಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿರುವುದಾಗಿ ಹರೀಶ್ ಬೋಪಣ್ಣ ಸ್ಪಷ್ಟಪಡಿಸಿದರು. ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಹಾಗೂ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಮೇ.5 : ಚುನಾವಣೆಯಲ್ಲಿ ಸೋಲಿನ ಭೀತಿಯನ್ನು ಎದುರಿಸುತ್ತಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ನನ್ನ ವಿರುದ್ಧ ಅಪಪ್ರಚಾರ ಮಾಡುವ ಮೂಲಕ ಮತದಾರರಲ್ಲಿ ಗೊಂದಲ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿರುವ ತಾವು, ಬಿಜೆಪಿಯನ್ನು ಬೆಂಬಲಿಸುತ್ತಿರುವುದಾಗಿ ಕಾಂಗ್ರೆಸ್ ಪಕ್ಷದವರು ಹಾಗೂ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಿರುವುದಾಗಿ ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್ ಪಕ್ಷದ ಪ್ರಬಲ ಪೈಪೋಟಿಯಿಂದಾಗಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಭಯ ಕಾಡುತ್ತಿದೆ ಎಂದು ಟೀಕಿಸಿದರು. ::: ನಿಲುವು ಸ್ಪಷ್ಟಪಡಿಸಲಿ: ಹಿಜಾಬ್, ಹಲಾಲ್ ಘಟನೆಗಳ ಸಂದರ್ಭ ಧ್ವನಿ ಎತ್ತದ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗುವ ಭೀತಿಯಲ್ಲಿ ಜೆಡಿಎಸ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ. ಬಿಜೆಪಿಯ ‘ಬೀ ಟಿಂ’ ಆಗಿರುವ ಕಾಂಗ್ರೆಸ್ ಪಕ್ಷ, ಟಿಪ್ಪು ಜಯಂತಿ ಬಗ್ಗೆ ತಮ್ಮ ನಿಲುವು ಏನೆಂದು ಸ್ಪಷ್ಟಪಡಿಸಲಿ ಎಂದು ನಾಪಂಡ ಮುತ್ತಪ್ಪ ಸವಾಲೆಸೆದರು. ನಾನು ಓರ್ವ…






