ಮಡಿಕೇರಿ ಮೇ 5 : ಕುಂಜಿಲದಲ್ಲಿ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಪರ ಬಿರುಸಿನ ಮತ ಪ್ರಚಾರ ನಡೆಯಿತು. ಈ ಸಂದರ್ಭ ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪ, ಪ್ರಮುಖರಾದ ಮಹಮ್ಮದ್ ಹಾಜಿ, ಬಶೀರ್ ಪೊಯಕರೆ ರಝು ಕುಂಡಂಡ, ಮುಸ್ತು ಬಾರಿಕೆ, ಹಸನ್ ಪಯ್ಯಡಿ , ಹಂಸ ಮಾತನಾಡಿ ಕಾಂಗ್ರೆಸ್ ಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ಸೂಚಿಸಲಾಗುತ್ತಿದ್ದು, ಪೊನ್ನಣ್ಣ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕುಂಜಿಲ ಬೂತ್ ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ನಿರಂತರ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಮೇ 5 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ಕೊಡಗು ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಜಾಥವು ನಡೆಯಿತು. ಜಾಗೃತಿ ಜಾಥಗೆ ಜಿ.ಪಂ.ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಚಾಲನೆ ನೀಡಿದರು. ಜಾಥವು ಮಹದೇವ ಪೇಟೆಯ ಎ.ವಿ.ಶಾಲೆ ಬಳಿಯಿಂದ ಆರಂಭವಾಗಿ ಮಹದೇವಪೇಟೆಯ ಪ್ರಮುಖ ರಸ್ತೆ ಮೂಲಕ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ತಲುಪಿತು. ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ರಾಣಿ ಮಾಚಯ್ಯ ಮಾತನಾಡಿ ಇದೇ ಮೇ 10 ರಂದು ನಡೆಯುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹರೆಲ್ಲರೂ ಮತದಾನ ಮಾಡುವ ಮೂಲಕ ಸಂಭ್ರಮಿಸಬೇಕು ಎಂದು ಕರೆ ನೀಡಿದರು. ಜಿಲ್ಲಾಡಳಿತ, ಸ್ವೀಪ್ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮತದಾನ ಮಹತ್ವ ಕುರಿತು ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತಪ್ಪದೇ ಮತದಾನ ಮಾಡುವಂತಾಗಬೇಕು ಎಂದು ರಾಣಿ ಮಾಚಯ್ಯ ಕೋರಿದರು. ಜಾಥಗೆ ಚಾಲನೆ ನೀಡಿ…
ಮಡಿಕೇರಿ ಮೇ 5 : ಭಾಗಮಂಡಲ ಸಮೀಪದ ಕಡೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಗೆಲುವಿಗಾಗಿ ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಪೊನ್ನಣ್ಣ ಅವರ ಸಹೋದರ ನರೇನ್ ಕಾರ್ಯಪ್ಪ ಮತ್ತು ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳು ವಿಶೇಷ ಪ್ರಾರ್ಥನೆ ನೆರವೇರಿಸಿದರು. ದೇವಾಲಯದ ಮುಖ್ಯಸ್ಥರಾದ ಗಣೇಶ್ ಶ್ರೀನಿವಾಸ್, ಚರಣ್ ಕುಮಾರ್, ಸುಜಯ್ ನೇತೃತ್ವದಲ್ಲಿ ಪೂಜೆ ನಡೆಯಿತು. ಈ ಸಂದರ್ಭ ಪ್ರಮುಖರಾದ ಮಂಗೇರಿರ ಜಗದೀಶ್, ಪ್ರೇಮ್ ಕುಮಾರ್ ಮನು, ದೀಪಕ್, ಕೆದಂಬಾಡಿ ರಮೇಶ್, ಹರೀಶ್ ಕುಮಾರ್, ವಿಶು ಪ್ರವೀಣ್ ಕುಮಾರ್, ದೊಡ್ಡೇರ ರಘು, ಹೇಮರಾಜು, ಶಿವಕುಮಾರ್, ಕೀರ್ತಿ ಉತ್ತಪ್ಪ, ಹಾರೀಶ್, ವೇಣುಗೋಪಾಲ್ ಸರು, ಬಾಚಿಮಂಡ ಲವ ಚಿಣ್ಣಪ್ಪ, ಕರಣ್ ಕಾರ್ಯಪ್ಪ ಹಾಗೂ ಮತ್ತಿತರರು ಹಾಜರಿದ್ದರು.
ಕುಶಾಲನಗರ ಮೇ 5 : ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಅಂಶ ಪ್ರಕಟವಾದ ಹಿನ್ನೆಲೆಯಲ್ಲಿ ಕುಶಾಲನಗರದ ವಿವಿಧ ದೇವಾಲಯಗಳಲ್ಲಿ ಹನುಮಾನ್ ಚಾಲಿಸಾ ಪಾರಾಯಣ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕುಶಾಲನಗರ ರಾಮಾಂಜನೇಯ ಉತ್ಸವ ಸಮಿತಿಯ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸೇರಿ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಮುಖರಾದ ಜಿಎಲ್ ನಾಗರಾಜ್, ನವನೀತ್ ಪೊನ್ನಟ್ಟಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಸಮಿತಿಯ ಪ್ರಮುಖರಾದ ಪ್ರವೀಣ್, ರಾಜೀವ್, ಪುಂಡರಿಕಾಕ್ಷ,, ಆರ್ ರಾಜೀವ್, ವಿನು ಅಮೃತರಾಜ್, ಆಮೆ ಜನಾರ್ಧನ್ ಮತ್ತಿತರರು ಇದ್ದರು. ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಸಂಚಾಲಕರಾದ ಸಂತೋಷ್ ನೇತೃತ್ವದಲ್ಲಿ ವಿವಿಧ ದೇವಾಲಯಗಳಲ್ಲಿ ಕಾರ್ಯಕರ್ತರು ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮೇ 5 : ‘ಇದು ನನ್ನ ಕೊನೇ ಚುನಾವಣೆಯಾಗಿದ್ದು, ಮುಂದಿನ ಸಲ ಯುವಕರಿಗೆ ಸ್ಪರ್ಧಿಸಲು ಅವಕಾಶ ನೀಡಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಾಗುತ್ತದೆ’ ಎಂದು ಐದು ಬಾರಿಯ ಶಾಸಕ, ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸುತ್ತಲೆ, ತಮ್ಮ ಪಕ್ಕದಲ್ಲೆ ಕುಳಿತಿದ್ದ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರು ಹಾಗೂ ಈ ಬಾರಿಯ ಚುನಾವಣಾ ಆಕಾಂಕ್ಷಿಯೂ ಆಗಿದ್ದ ಬಿ.ಬಿ. ಭಾರತೀಶ್ರತ್ತ ಅರ್ಥಗರ್ಭಿತ ನೋಟ ಬೀರುವ ಮೂಲಕ ಮುಂದಿನ ಚುನಾವಣೆಯ ಸ್ಪರ್ಧಿ ಯಾರಾಗಬಹುದೆನ್ನುವ ಬಗ್ಗೆ ಮೌನವಾಗಿಯೇ ಉತ್ತರ ನೀಡಿದಂತೆ ಕಂಡು ಬಂದಿತು. ಕಾಂಗ್ರೆಸ್ ತೊರೆದಿರುವ ಜೀವಿಜಯ ತನಗೆ ಬೆಂಬಲ ನೀಡುವ ವಿಶ್ವಾಸವಿದೆ. ಕಾಂಗ್ರೆಸ್ ಉಪಾಧ್ಯಕ್ಷ ಅನಂತ ಕುಮಾರ್ ಬಿಜೆಪಿಗೆ ತನ್ನ ಅಪಾರ ಬೆಂಬಲಿಗರೊಂದಿಗೆ ಸೇರಲಿರುವುದು ಮತ್ತಷ್ಟು ಬಲ ನೀಡಲಿದೆ ಎಂದೂ ರಂಜನ್ ನುಡಿದರು. ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿಜೆಪಿಗೆ?- ಕಾಂಗ್ರೆಸ್ನ ಜಿಲ್ಲಾಧ್ಯಕ್ಷರಾಗಿದವರೊಬ್ಬರು ಬಿಜೆಪಿಗೆ ಸಧ್ಯದಲ್ಲಿಯೇ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಈಗ ನಾಯಕರಿಲ್ಲದ ಮನೆಯಂತಾಗಿದೆ ಎಂದು ರಂಜನ್ ಲೇವಡಿ…
ಮಡಿಕೇರಿ ಮೇ 5 : ಮಡಿಕೇರಿ ಕ್ಷೇತ್ರದ ಸಮೃದ್ಧ ಭವಿಷ್ಯಕ್ಕಾಗಿ ಸುಸ್ಥಿರ ಯೋಜನೆಯ ಪರಿಕಲ್ಪನೆಯೊಂದಿಗೆ ‘ಗ್ರೇಟರ್ ಮಡಿಕೇರಿ ಟೂರಿಸಂ ಕಾರಿಡಾರ್’ ಪ್ರಮುಖ ಅಂಶಗಳನ್ನು ಒಳಗೊಂಡ ಮಡಿಕೇರಿ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಬಿಡುಗಡೆಗೊಳಿಸಿದರು, ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅಭ್ಯರ್ಥಿ ಅಪ್ಪಚ್ಚು ರಂಜನ್, ಮಡಿಕೇರಿ ಕ್ಷೇತ್ರದ 24 ಗ್ರಾಮಗಳನ್ನು ಒಳಗೊಂಡ ಗ್ರೇಟರ್ ಮಡಿಕೇರಿ ಟೂರಿಸಂ ಕಾರಿಡಾರ್ನ್ನು ಮುಂದಿನ ದಿನಗಳಲ್ಲಿ ರೂಪಿಸಲಾಗುತ್ತದೆ. ಮಡಿಕೇರಿ ಕ್ಷೇತ್ರದಾದ್ಯಂತ ಇರುವ ಪ್ರವಾಸಿ ಮತ್ತು ಧಾಮಿಕ ಕ್ಷೇತ್ರಗಳನ್ನು ಒಳಗೊಂಡ ಟೂರಿಸಂ ಕಾರಿಡಾರ್ ಇದಾಗಿರಲಿದೆ ಎಂದರು. ಮಡಿಕೇರಿ, ಕೆ.ನಿಡುಗಣೆ ಭಾಗಮಂಡಲ, ತಲಕಾವೇರಿ, ಕೆ.ನಿಡುಗಣಿ, ಗಾಳಿಬೀಡು, ಗರ್ವಾಲೆ, ಕಿರಗಂದೂರು, ಬೆಟ್ಟದಳ್ಳಿ, ಶಾಂತಳ್ಳಿ, ಸಕಲೇಶಪುರ, ಹಾನಗಲ್ಲು, ಚೌಡ್ಲು , ಸೋಮವಾರಪೇಟೆ, ದೊಡ್ಡಮಳ್ತೆ, ಗೌಡಳ್ಳಿ, ಶನಿವಾರಸಂತೆ, ನಿಡ್ತ, ತೊರೆನೂರು, ಹೆಬ್ಬಾಲೆ, ಕೂಡು ಮಂಗಳೂರು, ಕುಶಾಲನಗರ, ಗುಡ್ಡೆಹೊಸೂರು, ನಂಜರಾಯಪಟ್ಟಣ, ನಾಕೂರು ಶಿರಂಗಾಲ, ಕಂಬಿಬಾಣೆ ಸೇರಿದಂತೆ ಮಡಿಕೇರಿ ಕ್ಷೇತ್ರದ ಹಲವು ಗ್ರಾಮಗಳಲ್ಲಿನ ಪ್ರವಾಸೋದ್ಯಮ ತಾಣಗಳನ್ನು ಗ್ರೇಟರ್ ಮಡಿಕೇರಿ ಟೂರಿಸಂ ಕಾರಿಡಾರ್…
ಮಡಿಕೇರಿ ಮೇ 9 : ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೆ ಕೊಡಗಿನ ಜಿಲ್ಲಾ ಕೇಂದ್ರ್ರ ಮಡಿಕೇರಿಯಲ್ಲಿ ಸಂತೆಯ ದಿನವಾದ ಇಂದು ಜಾತ್ಯತೀತ ಜನತಾ ದಳ ಮತ್ತು ಕಾಂಗ್ರೆಸ್ ಪಕ್ಷಗಳಿಂದ ರೋಡ್ ಶೋ ಮತ್ತು ಬೈಕ್ ಜಾಥದ ಮೂಲಕ ಮತದಾರರ ಬಳಿ ಸಾಗುವ ಪ್ರಯತ್ನ ನಡೆಯಿತು. ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಗಣೇಶ್ ಅವರ ನೇತೃತ್ವದಲ್ಲಿ, ನೂರಾರು ಕಾರ್ಯಕರ್ತರೊಂದಿಗೆ ನಗರದ ಎ.ವಿ.ಶಾಲೆಯ ಬಳಿಯಿಂದ ನಗರದ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸುವ ಮೂಲಕ ಭರ್ಜರಿ ಮತಯಾಚನೆ ನಡೆಸಿದರು. ಶುಕ್ರವಾರದ ಸಂತೆಗೆಂದು ಮಡಿಕೇರಿ ಸುತ್ತಮುತ್ತಲಿನಿಂದ ಆಗಮಿಸಿದ್ದ ಗ್ರಾಮೀಣರು, ನಗರದ ನಿವಾಸಿಗಳನ್ನು ಸಂಪರ್ಕಿಸಿದ ಅಭ್ಯರ್ಥಿ ನಾಪಂಡ ಮುತ್ತಪ್ಪ ಮತ್ತು ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು, ಪಕ್ಷದ ಕರಪತ್ರವನ್ನು ನೀಡಿ ‘ ಬದಲಾವಣೆಗಾಗಿ ಜೆಡಿಎಸ್ ಬೆಂಬಲಿಸಿ’ ಎಂದು ಮನವಿ ಮಾಡಿಕೊಂಡರು. ಕಾಂಗ್ರೆಸ್ನಿಂದ ಬೈಕ್ ರ್ಯಾಲಿ : ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್…
ಮಡಿಕೇರಿ ಮೇ 5 : 19 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ವಾರ್ಷಿಕ ತರಬೇತಿ ಶಿಬಿರವು ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಸ್ಕೂಲ್ನಲ್ಲಿ ನಡೆಯಿತು. ಹಿರಿಯ ವಿಭಾಗ (ಸೀನಿಯರ್ ವಿಂಗ್) ಎನ್ಸಿಸಿ ಕೆಡೆಟ್ಗಳು ಮತ್ತು ಜೂನಿಯರ್ ವಿಭಾಗ (ಜೂನಿಯರ್ ವಿಂಗ್) ಎನ್ಸಿಸಿ ಕೆಡೆಟ್ಗಳಿಗೆ 10 ದಿನಗಳ ಶಿಬಿರವನ್ನು ಮಡಿಕೇರಿಯ 19 ಕರ್ನಾಟಕ ಬಿಎನ್ ಎನ್ಸಿಸಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ಜೆಫಿರಿನ್ ಗಿಲ್ಬರ್ಟ್ ಅರಾನ್ಹಾ, ಲೆಫ್ಟಿನೆಂಟ್ ಕರ್ನಲ್ ಚಾಕೋ ಹಾಗೂ ಹಲವಾರು ಎನ್ಸಿಸಿ ಮೇಲುಸ್ತುವಾರಿಗಳ ನೇತೃತ್ವದಲ್ಲಿ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಜೊತೆಗೆ ಕೊಡಗು ಜಿಲ್ಲೆಯ ವಿವಿಧ ಸಂಸ್ಥೆಗಳಿಂದ 520 ಕೆಡೆಟ್ಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ನಾಯಕತ್ವದ ಗುಣ, ಶಿಸ್ತು, ಕರ್ತವ್ಯನಿಷ್ಠೆ, ಸಮಯಪಾಲನೆ, ಕ್ರಮಬದ್ಧತೆ, ನ್ಯಾಯಸಮ್ಮತ ಅಧಿಕಾರ, ಮೌಲ್ಯ, ಆತ್ಮ ವಿಶ್ವಾಸ ಮತ್ತು ಸ್ವಾವಲಂಬನೆಯ ಮಟ್ಟವನ್ನು ಹೆಚ್ಚಿಸುವ ಬಗ್ಗೆ ತರಬೇತಿ ನೀಡಲಾಯಿತು. ಎನ್ಸಿಸಿ ಕೆಡೆಟ್ಗಳಿಗೆ ಸಮಾಜ ಕಲ್ಯಾಣ, ಪರಿಸರ ಜಾಗೃತಿ, ಸಾಹಸ ಮತ್ತು ಮನರಂಜನಾ ಚಟುವಟಿಕೆಗಳಿಗೆ ಒತ್ತು ನೀಡುವ ಮೂಲಕ…
ಮಡಿಕೇರಿ ಮೇ 5 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಧ್ವಜಾರೋಹಣದ ಮೂಲಕ ವಿವಿಧ ಪೂಜಾ ಕೈಂಕರ್ಯಗಳಿಗೆ ಚಾಲನೆ ದೊರೆಯಿತು. ನಂತರ ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ಪೂಜೆ, ತೀರ್ಥ ಸ್ನಾನ, ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಿತು. ನಂತರ ದೇವಾಲಯದ ಆವರಣದ ಸುತ್ತಲೂ ದೇವಿಯ ರಥೋತ್ಸವ ನಂತರ ನೆರವೇರಿತು. ಬಳಿಕ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ಹಾಗೂ ತಾಯಿಯ ದರ್ಶನ ನೆರವೇರಿತು. ಸಂಜೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ನಡೆಯಿತು. ನಗರದ ಹಾಗೂ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಮೇ 5 : ಕೇಂದ್ರ ಹಾಗೂ ರಾಜ್ಯ ಸರ್ಕಾರ ದುಡಿಯುವ ವರ್ಗವನ್ನು ನಿರ್ಲಕ್ಷ್ಯಿಸುತ್ತಲೇ ಬರುತ್ತಿರುವುದರಿಂದ ನೊಂದವರ ಧ್ವನಿಯಾಗಿ ಹೋರಾಟ ನಡೆಸಲು ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ನನಗೆ ಜನರು ಮತ ನೀಡಿ ಗೆಲುವು ತಂದುಕೊಡಬೇಕೆಂದು ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರದಲ್ಲಿ 11ನೇ ಸಂಖ್ಯೆಯಲ್ಲಿರುವ ಕುಡುಗೋಲು, ತೆನೆ ಗುರುತಿಗೆ ಮತ ನೀಡಿ ಜನಸೇವೆಗೆ ಅವಕಾಶ ನೀಡಬೇಕೆಂದು ಕೋರಿದರು. ಕಳೆದ 20 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಿಪಿಐ ಮತ್ತು ಎಐಟಿಯುಸಿ ಸಂಘಟನೆ ಜಂಟಿಯಾಗಿ ದುಡಿಯುವ ವರ್ಗದ ಪರ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಕಾರ್ಮಿಕ ವರ್ಗ ನಿತ್ಯ ಅನುಭವಿಸುತ್ತಿರುವ ಸಂಕಷ್ಟ, ರೈತರ ಸಮಸ್ಯೆಗಳು, ವನ್ಯ ಜೀವಿ ದಾಳಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸುವುದಕ್ಕಾಗಿ “ಸೂರಿಗಾಗಿ ಸಮರ” ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟವನ್ನು ನಡೆಸಲಾಗಿತ್ತು. ಆದರೆ ಆಡಳಿತ ನಡೆಸುವವರಿಂದ ಕೇವಲ ಭರವಸೆ ಮಾತ್ರ ದೊರೆಯಿತೇ…






