ಲೇಖಕ: admin

ಮಡಿಕೇರಿ ಮೇ 5 : ನಗರದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ನವೀಕೃತಗೊಂಡಿರುವ ಶ್ರೀ ಕೋದಂಡ ರಾಮ ದೇವಾಲಯದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಂದ ಜರುಗಿತು. ಪ್ರತಿಷ್ಠಾಪನೆಯ ಮೂರನೇ ದಿನದಂದು ಬ್ರಹ್ಮಕುಂಭಾಭಿಷೇಕದೊಂದಿಗೆ ವಿವಿಧ ಪೂಜಾದಿ, ಹೋಮ ಹವನಗಳು ಜರುಗಿದವು. ಬೆಳಿಗ್ಗೆ ವಿಜಯ ವಿನಾಯಕ ದೇವಾಲಯದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯ, ಮೈಸೂರಿನ ಕೆ.ಶ್ರೀನಿವಾ ಉಪಾಧ್ಯ ನೇತೃತ್ವದಲ್ಲಿ ಹಣಪತಿ ಹೋಮ, ವಿಶೇಷ ಶಾಂತಿ ಹೋಮ, ಪ್ರಾಯಶ್ಚಿತ ಹೋಮ, ಪ್ರತಿಷ್ಠಾ ಹೋಮ, ದೇವರ ಪ್ರತಿಷ್ಠೆ ಹಾಗೂ ತತ್ವಕಲಾ ಹೋಮ, ಪೂರ್ಣಹುತಿ, ವ್ಯಾಸ ಪೂಜೆ, ಅಲಂಕಾರ ಪೂಜೆ, ನೈವೇದ್ಯ ಮಹಾಪೂಜೆ ನೆರವೇರಿತು. ನಂತರ ಕ್ಷೇತ್ರದ ಮುಂದಿನ ನಿತ್ಯ ನೈಮಿತ್ತಿಕಾದಿಗಳ ಬಗ್ಗೆ ಪ್ರತಿಜ್ಞಾವಿಧಿ ಪ್ರಸನ್ನ ಪೂಜೆ, ಆಚಾರ್ಯ ಪೂಜೆ, ಮಂಗಳ ಮಂತ್ರಾಕ್ಷತೆ, ರಾಷ್ಟ್ರಾಶೀರ್ವಾದ ನಡೆಯಿತು. ನಗರದ ಸೇರಿದಂತೆ ವಿವಿಧಡೆಗಳಿಂದ ಸಹಸ್ತಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶ್ರೀ ಕೊದಂಡರಾಮ ಜೀರ್ಣೋದ್ಧಾರ ಸಮಿತಿ, ಕೋದಂಡರಾಮ ದೇವಾಲಯ ಟ್ರಸ್ಟ್, ಪ್ರತಿಷ್ಟಾ…

Read More

ಮಡಿಕೇರಿ ಮೇ 5 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರ ವಿರುದ್ಧ ಬಿಜೆಪಿ ಮಂದಿ ವೈಯುಕ್ತಿಕ ತೇಜೋವಧೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಕ್ಷೇತ್ರದ ಕಾಂಗ್ರೆಸ್ ವಕ್ತಾರ ಬಿ.ಎಸ್.ತಮ್ಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ವಿರಾಜಪೇಟೆ ಕ್ಷೇತ್ರಕ್ಕೆ ಒಬ್ಬ ಉತ್ತಮ ವ್ಯಕ್ತಿತ್ವದ, ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ ಯುವಕನನ್ನು ಕಣಕ್ಕಿಳಿಸಿದೆ. ಇವರಿಗೆ ದೊರೆಯುತ್ತಿರುವ ಜನ ಬೆಂಬಲದಿಂದ ಭಯಗೊಂಡಿರುವ ಬಿಜೆಪಿಯ ಮನು ಮುತ್ತಪ್ಪ ಹಾಗೂ ಅಡ್ಡಂಡ ಕಾರ್ಯಪ್ಪ ಅವರು, ಪೊನ್ನಣ್ಣ ಅವರ ತೇಜೋವಧೆಯಲ್ಲಿ ತೊಡಗಿದ್ದಾರೆ. ವೃತ್ತಿಪರವಾದ ವಕಾಲತ್ತುಗಳನ್ನು ಆಧರಿಸಿ ಅಪಪ್ರಾಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಮಂದಿ ಎಷ್ಟೇ ತೇಜೋವಧೆಯಲ್ಲಿ ತೊಡಗಿದರೂ ಪೊನ್ನಣ್ಣ ಅವರು ಅದಕ್ಕೆ ಪ್ರತಿಕ್ರಿಯೆ ನೀಡದೆ ಅಭಿವೃದ್ಧಿಪರ ಚಿಂತನೆಯೊಂದಿಗೆ ಮತಯಾಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ, ಭ್ರಷ್ಟಚಾರ ರಹಿತ ಆಡಳಿತ ಮತ್ತು ಸಾಮರಸ್ಯ ಜೀವನದ ನೆಲೆಗಟ್ಟಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಉದ್ದೇಶದಿಂದ ನಾವು ವೈಯುಕ್ತಿಕ ಟೀಕೆ ಮತ್ತು ಅಪಪ್ರಚಾರ ಮಾಡುವುದಿಲ್ಲ. ಜಿಲ್ಲೆಯ…

Read More

ಮಡಿಕೇರಿ ಮೇ 5 : ಗಿರಿಜನರ ಅಭಿವೃದ್ಧಿಗಾಗಿ 28 ಸಾವಿರ ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲಿಟ್ಟ ಕೇಂದ್ರ ಸರ್ಕಾರ ಈ ಯೋಜನೆಯ ಜಾಹೀರಾತಿಗಾಗಿ ನೂರಾರು ಕೋಟಿ ರೂ. ಗಳನ್ನು ವ್ಯಯ ಮಾಡಿತೇ ಹೊರತು, ಇಲ್ಲಿಯವರೆಗೆ ಗಿರಿಜನರ ಅಭಿವೃದ್ಧಿಯಾಗಿಲ್ಲವೆಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಿರಿಜನರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ನೂರಾರು ಕೋಟಿ ರೂ. ಗಳನ್ನು ಖರ್ಚು ಮಾಡಿ ಜಾಹೀರಾತು ಮೂಲಕ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ತುಳಿತಕ್ಕೆ ಒಳಗಾದ ಗಿರಿಜನರ ಸ್ಥಿತಿ ಇಂದಿಗೂ ಹೀನಾಯವಾಗಿದೆ. ಪ್ರಧಾನಮಂತ್ರಿಗಳು ಅಭಿವೃದ್ಧಿ ಪರವಾಗಿ ಮಾತನಾಡುತ್ತಿಲ್ಲ, ಜನತೆಗೆ ರಕ್ಷಣೆ ನೀಡಿದ್ದೇವೆ ಎಂದು ಜಾಹಿರಾತಿನ ಮೂಲಕ ಹೇಳುತ್ತಿದ್ದಾರೆ. ಆದರೆ ಅತ್ಯಾಚಾರ, ಹಲ್ಲೆ, ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ ಮತ್ತು ದ್ವೇಷದ ರಾಜಕಾರಣ ನಡೆಯುತ್ತಿದೆ. ದೇಶದಲ್ಲಿ ಹಿಟ್ಲರ್‍ಗೂ ಮೀರಿದ ಆಡಳಿತ ನಡೆಯುತ್ತಿದ್ದು, ಮಾನವ ಹಕ್ಕುಗಳಿಗೆ ಬೆಲೆ ಇಲ್ಲದಾಗಿದೆ…

Read More

ಮಡಿಕೇರಿ ಮೇ 5 : ಕೇಂದ್ರ ಹಾಗೂ ರಾಜ್ಯ ಸರ್ಕಾರ ದುಡಿಯುವ ವರ್ಗವನ್ನು ನಿರ್ಲಕ್ಷ್ಯಿಸುತ್ತಲೇ ಬರುತ್ತಿರುವುದರಿಂದ ನೊಂದವರ ಧ್ವನಿಯಾಗಿ ಹೋರಾಟ ನಡೆಸಲು ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ನನಗೆ ಜನರು ಮತ ನೀಡಿ ಗೆಲುವು ತಂದುಕೊಡಬೇಕೆಂದು ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರದಲ್ಲಿ 11ನೇ ಸಂಖ್ಯೆಯಲ್ಲಿರುವ ಕುಡುಗೋಲು, ತೆನೆ ಗುರುತಿಗೆ ಮತ ನೀಡಿ ಜನಸೇವೆಗೆ ಅವಕಾಶ ನೀಡಬೇಕೆಂದು ಕೋರಿದರು. ಕಳೆದ 20 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಿಪಿಐ ಮತ್ತು ಎಐಟಿಯುಸಿ ಸಂಘಟನೆ ಜಂಟಿಯಾಗಿ ದುಡಿಯುವ ವರ್ಗದ ಪರ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಕಾರ್ಮಿಕ ವರ್ಗ ನಿತ್ಯ ಅನುಭವಿಸುತ್ತಿರುವ ಸಂಕಷ್ಟ, ರೈತರ ಸಮಸ್ಯೆಗಳು, ವನ್ಯ ಜೀವಿ ದಾಳಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸುವುದಕ್ಕಾಗಿ “ಸೂರಿಗಾಗಿ ಸಮರ” ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟವನ್ನು ನಡೆಸಲಾಗಿತ್ತು. ಆದರೆ ಆಡಳಿತ ನಡೆಸುವವರಿಂದ ಕೇವಲ ಭರವಸೆ ಮಾತ್ರ ದೊರೆಯಿತೇ…

Read More

ಮಡಿಕೇರಿ ಮೇ 5 : ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ 6ನೇ ವರ್ಷದ ಗೌಡ ಕುಟುಂಬಗಳ ನಡುವಣ “ಗೌಡ ಫುಟ್ಬಾಲ್ ಟ್ರೋಫಿ 2023” ಪಂದ್ಯಾವಳಿ ಗೆ  ಚಾಲನೆ ದೊರೆಯಿತು. ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ  ಮೇ  14 ರವರೆಗೆ ನಡೆಯಲಿರುವ ಪಂದ್ಯಾವಳಿಯನ್ನು   ಗೌಡ ಫುಟ್ಬಾಲ್ ಅಕಾಡೆಮಿ ಅಧ್ಯಕ್ಷ ಬಡುವಂಡ್ರ ದುಷ್ಯಂತ ಅವರು  ತೆಂಗಿನ ಕಾಯಿ ಗೆ ಗುಂಡು ಹೊಡೆಯುವ ಮೂಲಕ ಚಾಲನೆ ನೀಡಿದರು. ಮೊದಲ ಪಂದ್ಯಾವಳಿಯ ಕ್ರೀಡಾಪಟುಗಳಿಗೆ ಕಟ್ಟೆಮನೆ ರಾಕೇಶ್ ಶುಭಹಾರೈಸಿದರು. ಪಂದ್ಯಾವಳಿಗೂ ಮುನ್ನ ಗಣಪತಿ ಹೋಮ ನಂತರ   ಮೆರವಣಿಗೆ ಮೂಲಕ  ಕ್ರೀಡಾಂಗಣಕ್ಕೆ ಗಣ್ಯರು ಹಾಗೂ ಕ್ರೀಡಾಪಟುಗಳು ಆಗಮಿಸಿದರು.

Read More

ಮಡಿಕೇರಿ ಮೇ 5 :  ಕರ್ನಾಟಕ ರಾಜ್ಯ ವಿಧಾನಸಭೆಗೆ ಮೇ 10 ರಂದು ನಡೆಯುತ್ತಿರುವ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರ ಪಾಲ್ಗೊಂಡು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು. ಎಲ್ಲರೂ ಮತದಾನ ಮಾಡಲೇಬೇಕೆಂದು ಪ್ರೇರಣೆ ನೀಡುವ ಉದ್ದೇಶದಿಂದ ಮತದಾನ ಮಾಡಿದ ಪ್ರವಾಸಿಗರಿಗೆ ಮಡಿಕೇರಿ ತಾಲ್ಲೂಕಿನ ಇಬ್ನಿವಳವಾಡಿ ಗ್ರಾಮದ ಇಬ್ಬನಿ ಸ್ಪ್ರಿಂಗ್ ರೆಸಾರ್ಟ್ ನಲ್ಲಿ ತಂಗುವ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ರೆಸಾರ್ಟ್ನ ಮಾಲೀಕ ಚೆಯ್ಯಂಡ ಸತ್ಯ ಗಣಪತಿ ತಿಳಿಸಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರ ಪ್ರಭುವಾಗಿರುತ್ತಾನೆ. ಮತದಾನ ಮಾಡದೆ ನಿರ್ಲಕ್ಷ್ಯ ವಹಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಅರ್ಥಹೀನವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜೆಗಳೇ ಪ್ರಭುಗಳು ಎನ್ನುವುದನ್ನು ಸಾಬೀತು ಪಡಿಸಬೇಕಾಗಿದೆ. ಮತದಾನ ಮಾಡಿ ರೆಸಾರ್ಟ್ ಗೆ ಆಗಮಿಸಿ ತಂಗುವ ಪ್ರವಾಸಿಗರಿಗೆ ಮೇ 10 ರಂದು ಶೇ.20 ರಷ್ಟು ರಿಯಾಯಿತಿ ನೀಡಲಾಗುತ್ತದೆ. ರೆಸಾರ್ಟ್ ಗೆ ಬರುವವರು ಮತದಾನ ಮಾಡಿದ ಕುರಿತು ಬೆರಳಿನ ಗುರುತನ್ನು ತೋರಿಸಿ…

Read More

ಮಡಿಕೇರಿ ಮೇ 5 : ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಚುನಾವಣಾ ರಾಜಕೀಯ ಜಾಹೀರಾತು ಸಂಬಂಧಿಸಿದಂತೆ ಪೂರ್ವಾನುಮತಿ ಪಡೆದು ಪ್ರಕಟಿಸಲಾಗುತ್ತಿದೆ. ಮುಂದುವರೆದು ವಿಧಾನಸಭಾ ಚುನಾವಣೆಯ ಮತದಾನವು ಮೇ 10 ರಂದು ನಡೆಯಲಿದ್ದು, ಈ ಹಿನ್ನೆಲೆ ಚುನಾವಣಾ ಆಯೋಗವು ಕೆಲವು ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಮೇ 9 ಹಾಗೂ 10 ರಂದು ಅಭ್ಯರ್ಥಿಗಳು/ ಸಂಸ್ಥೆಗಳು ಅಥವಾ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ‘ಚುನಾವಣಾ ರಾಜಕೀಯ ಜಾಹೀರಾತು’ ಪ್ರಕಟಿಸಬೇಕಾದರೆ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ವತಿಯಿಂದ ಮುಂಚಿತವಾಗಿ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ಚುನಾವಣಾ ರಾಜಕೀಯ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮೇ 9 ಹಾಗೂ 10 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ, ಸಂಬಂಧಿಸಿದ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ, 7 ರೊಳಗೆ ಜಿಲ್ಲಾ ಮಟ್ಟದ ಎಂಸಿಎಂಸಿ ಗೆ ಅರ್ಜಿ ಸಲ್ಲಿಸಬೇಕು. ವಿದ್ಯುನ್ಮಾನ ಮಾಧ್ಯಮಗಳಿಗೆ…

Read More

ಮಡಿಕೇರಿ ಮೇ 5 :  ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ರೋಟರ್ಯಾಕ್ಟ್ ಕ್ಲಬ್ ಪದವಿ ಕಾಲೇಜು ಮೂರ್ನಾಡು ಸಹಯೋಗದಲ್ಲಿ ಮೇ 6 ರಂದು ಬೆಳಗ್ಗೆ 8 ಗಂಟೆಗೆ ಮತದಾನ ಮಹತ್ವ ಸಾರುವ ಮ್ಯಾರಥಾನ್ ಆಯೋಜಿಸಲಾಗಿದೆ. ಮೇ, 6 ರಂದು ಬೆಳಗ್ಗೆ 8 ಗಂಟೆಗೆ ಮೂರ್ನಾಡು ರಸ್ತೆಯ ಎಚ್.ಪಿ.ಪೆಟ್ರೋಲ್ ಬಂಕ್ ಬಳಿಯಿಂದ ಮೂರ್ನಾಡುವಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದವರೆಗೆ ಮತದಾನ ಮಹತ್ವ ಸಾರುವ ಮ್ಯಾರಥಾನ್ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್. ಆಕಾಶ್ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು, ಕ್ರೀಡಾಪಟುಗಳು, ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡು ಮತದಾನದ ಮಹತ್ವದ ಸಂದೇಶವನ್ನು ಮ್ಯಾರಥಾನ್ ಮೂಲಕ ತಿಳಿಸಬೇಕೆಂದು ಮೂರ್ನಾಡು ಪದವಿ ಕಾಲೇಜಿನ ರೋಟರ್ಯಾಕ್ಟ್ ಪ್ರಮುಖರು ಕೋರಿದ್ದಾರೆ. ಸ್ಪರ್ಧಾರ್ಥಿಗಳು ಮೇ, 6 ರಂದು ಬೆಳಗ್ಗೆ 7.30 ಗಂಟೆಗೆ ಸ್ಥಳದಲ್ಲಿ ಹಾಜರಿರಬೇಕು. ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುತ್ತದೆ. ಸ್ಪರ್ಧೆಗೆ ಹೆಸರು ನೋಂದಾಯಿಸಲು ಕೊನೆ ದಿನ ಮೇ, 5 ರ…

Read More

ಮಡಿಕೇರಿ ಮೇ 5 : ಕೊಡಗು ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಮೇ 6 ರಂದು ಬೆಳಗ್ಗೆ 10 ಗಂಟೆಗೆ ಬಾಳೆಲೆ ಬಳಿಯ ಕಾರ್ಮಾಡು ಗ್ರಾಮದಲ್ಲಿ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮಿನಿ ವಿಮಾನಗಳ ಹಾರಾಟ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ಜಿ.ಪಂ.ಸಿಇಒ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ತಿಳಿಸಿದ್ದಾರೆ. ಮೇ, 6 ರಂದು ಬೆಳಗ್ಗೆ 10 ಗಂಟೆಗೆ ಬಾಳೆಲೆ ಕಾರ್ಮಾಡು ಗ್ರಾಮದ ಕೊಳ್ಳಿಮಾಡ ರಾಜಿ ಗಣಪತಿ ಮತ್ತು ತಂಡದಿಂದ ಗ್ರಾಮದ ಖಾಸಗಿ ಏರ್‍ಸ್ಟ್ರಿಪ್‍ನಲ್ಲಿ 30 ಕ್ಕೂ ಅಧಿಕ ಮಿನಿ ವಿಮಾನಗಳ ಪ್ರದರ್ಶನ ಮತ್ತು ಹಾರಾಟ ಕಾರ್ಯಕ್ರಮ ನಡೆಯಲಿದೆ. ಯುವ ಮತದಾರರು, ಗ್ರಾಮಸ್ಥರು, ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಈ ವಿಭಿನ್ನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಿನಿ ವಿಮಾನಗಳ ಹಾರಾಟದ ಪ್ರದರ್ಶನ ವೀಕ್ಷಿಸಿ ಮತದಾನ ಮಹತ್ವದ ಸಂದೇಶವನ್ನು ಎಲ್ಲೆಡೆ ಸಾರುವಂತೆ ಡಾ.ಆಕಾಶ್ ಅವರು…

Read More

ಮಡಿಕೇರಿ ಮೇ 5 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಅಲಿ ಎಮ್ಮೆಮಾಡುವಿನಲ್ಲಿ  ಪ್ರಚಾರ ಸಭೆಯ ಮೂಲಕ ಮತಯಾಚನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಮನ್ಸೂರ್ ಅಲಿ, ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿದೆ‌. ಆದರೆ ಜೆಡಿಎಸ್ ಪಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ರಾಷ್ಟ್ರೀಯ ಪಕ್ಷಗಳಿಗೆ ಜಿಲ್ಲೆಯ ಜನತೆ ಅಧಿಕಾರ ನೀಡಿದರು ಸಹಾ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ ಎಂದು ದೂರಿದರು. ಅಲ್ಪಸಂಖ್ಯಾತರ ಏಳಿಗೆಗೆ ಯಾವುದೇ ಯೋಜನೆಗಳನ್ನು ರೂಪಿಸದೇ, ಕೇವಲ ಧರ್ಮಗಳ ಮಧ್ಯದಲ್ಲಿ ವಿಷ ಬೀಜ ಬಿತ್ತುವ ಪಕ್ಷಗಳಿಗೆ ಈ ಬಾರಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಬರಲಿದ್ದು, ಎಚ್.ಡಿ ಕುಮಾರಸ್ವಾಮಿ ಅಧಿಕಾರ ಬರಲಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಅಲಿ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಪ್ರಚಾರ ಸಭೆಯಲ್ಲಿ ಕಾಳೇರ ಆಲಿ,…

Read More