ಮಡಿಕೇರಿ ಮೇ 5 : ಕೊಡಗು ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಮೇ 6 ರಂದು ಬೆಳಗ್ಗೆ 10 ಗಂಟೆಗೆ ಬಾಳೆಲೆ ಬಳಿಯ ಕಾರ್ಮಾಡು ಗ್ರಾಮದಲ್ಲಿ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮಿನಿ ವಿಮಾನಗಳ ಹಾರಾಟ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ಜಿ.ಪಂ.ಸಿಇಒ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ತಿಳಿಸಿದ್ದಾರೆ. ಮೇ, 6 ರಂದು ಬೆಳಗ್ಗೆ 10 ಗಂಟೆಗೆ ಬಾಳೆಲೆ ಕಾರ್ಮಾಡು ಗ್ರಾಮದ ಕೊಳ್ಳಿಮಾಡ ರಾಜಿ ಗಣಪತಿ ಮತ್ತು ತಂಡದಿಂದ ಗ್ರಾಮದ ಖಾಸಗಿ ಏರ್ಸ್ಟ್ರಿಪ್ನಲ್ಲಿ 30 ಕ್ಕೂ ಅಧಿಕ ಮಿನಿ ವಿಮಾನಗಳ ಪ್ರದರ್ಶನ ಮತ್ತು ಹಾರಾಟ ಕಾರ್ಯಕ್ರಮ ನಡೆಯಲಿದೆ. ಯುವ ಮತದಾರರು, ಗ್ರಾಮಸ್ಥರು, ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಈ ವಿಭಿನ್ನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಿನಿ ವಿಮಾನಗಳ ಹಾರಾಟದ ಪ್ರದರ್ಶನ ವೀಕ್ಷಿಸಿ ಮತದಾನ ಮಹತ್ವದ ಸಂದೇಶವನ್ನು ಎಲ್ಲೆಡೆ ಸಾರುವಂತೆ ಡಾ.ಆಕಾಶ್ ಅವರು…
ಲೇಖಕ: admin
ಮಡಿಕೇರಿ ಮೇ 5 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಅಲಿ ಎಮ್ಮೆಮಾಡುವಿನಲ್ಲಿ ಪ್ರಚಾರ ಸಭೆಯ ಮೂಲಕ ಮತಯಾಚನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಮನ್ಸೂರ್ ಅಲಿ, ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿದೆ. ಆದರೆ ಜೆಡಿಎಸ್ ಪಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ರಾಷ್ಟ್ರೀಯ ಪಕ್ಷಗಳಿಗೆ ಜಿಲ್ಲೆಯ ಜನತೆ ಅಧಿಕಾರ ನೀಡಿದರು ಸಹಾ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ ಎಂದು ದೂರಿದರು. ಅಲ್ಪಸಂಖ್ಯಾತರ ಏಳಿಗೆಗೆ ಯಾವುದೇ ಯೋಜನೆಗಳನ್ನು ರೂಪಿಸದೇ, ಕೇವಲ ಧರ್ಮಗಳ ಮಧ್ಯದಲ್ಲಿ ವಿಷ ಬೀಜ ಬಿತ್ತುವ ಪಕ್ಷಗಳಿಗೆ ಈ ಬಾರಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಬರಲಿದ್ದು, ಎಚ್.ಡಿ ಕುಮಾರಸ್ವಾಮಿ ಅಧಿಕಾರ ಬರಲಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಅಲಿ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಪ್ರಚಾರ ಸಭೆಯಲ್ಲಿ ಕಾಳೇರ ಆಲಿ,…
ನಾಪೋಕ್ಲು ಮೇ 5 : ನೆಲಜಿ ಗ್ರಾಮದ ಶ್ರೀ ಇಗುತ್ತಪ್ಪ ದೇವರ ಭಕ್ತ ಜನ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಭಕ್ತ ಜನಸಂಘದ ವಾರ್ಷಿಕ ಭಕ್ತ ಸಮಾರಾಧನೆ ಉತ್ಸವ ನಡೆಯಿತು. ನಂತರ ನಡೆದ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪುಚ್ಚಿಮಾಡ ಡಾ.ಸಂತೋಷ್, ಗ್ರಾಮದ ಕ್ರೀಡಾಕೂಟಗಳು, ದೇವಾಲಯದ ಆಚರಣೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಯುವಕರ ಪಾಲ್ಗೊಳ್ಳುವಿಕೆ ಇಳಿಮುಖಗೊಳ್ಳುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಕೇವಲ ಹಿರಿಯರೇ ಸಾಮುದಾಯಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಿದೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಎಲ್ಲಾ ಪ್ರಮುಖ ಕಾರ್ಯಕ್ರಮಗಳಲ್ಲಿ ಬಂದು ಸಹಕರಿಸಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷ ಮುಕ್ಕಾಟಿರ ಎಂ. ವಿನಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಊರಿನ ಎಲ್ಲಾ ಭಕ್ತಾದಿ ಬಂಧುಗಳ ಸಹಕಾರ ಸಮಿತಿ ಸದಸ್ಯರ ಸಕ್ರಿಯತೆ, ತಕ್ಕ ಮುಖ್ಯಸ್ಥರು ಹಾಗೂ ಹಿರಿಯರ ಸಹಕಾರದಿಂದ ಮಾತ್ರ ಭಕ್ತ ಜನ ಸಂಘದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮುನ್ನಡೆಸಲು ಸಾಧ್ಯ. ಊರಿನ ಯುವಕರು ದೇವರ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಮಣವಟ್ಟಿರ ಎಂ.ಚಂಗಪ್ಪ, ತಕ್ಕ…
ನಾಪೋಕ್ಲು ಮೇ 5 : ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ವಿವಿಧ ಕೋಲಗಳು ಜರುಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು. ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲಗಳು ಗಮನ ಸೆಳೆದವು. ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು. ಉತ್ಸವದ ಅಂಗವಾಗಿ ಎತ್ತೇರಾಟ ಹಾಗೂ ರಾತ್ರಿ ದೀಪಾರಾಧನೆ ನಡೆಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ತಕ್ಕಮುಖ್ಯಸ್ಥರು ವಾರ್ಷಿಕ ಉತ್ಸವದ ನೇತೃತ್ವ ವಹಿಸಿಸಿದ್ದು, ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೆರಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಮೇ 4 : ನರೇಂದ್ರ ಮೋದಿ ಅವರು ಈ ರಾಷ್ಟ್ರದ ಪ್ರಧಾನಿಯಾಗಿದ್ದು, ಅವರನ್ನು ಗೌರವಿಸುತ್ತೇನೆ. ಆದರೆ ಅವರ ಮನಸು ಬದಲಾವಣೆಯಾಗಬೇಕು, ಭಾರತದಷ್ಟು ವಿಶಾಲವಾಗಬೇಕು. ಇಂದು ರಾಜ್ಯಕ್ಕೆ ಪದೇ ಪದೇ ಬರುತ್ತಿರುವ ಮೋದಿ ಅವರು, ಮುಚ್ಚುವ ಸ್ಥಿತಿಯಲ್ಲಿರುವ 6 ಸಾವಿರ ಸರ್ಕಾರಿ ಶಾಲೆಗಳು, ಏಕೋಪಾಧ್ಯಾಯ ಇರುವ ಒಂದು ಸಾವಿರ ಪ್ರೌಢ ಶಾಲೆಗಳು ಮತ್ತು ಅಭಿವೃದ್ಧಿಯ ಬಗ್ಗೆ ಮಾತನಾಡಬೇಕು. ಚುನಾವಣೆಯ ಬಗೆಗಿನ ಹೆದರಿಕೆಯಿಂದ ಮೋದಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆಯೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ. ::: ಗಲ್ಲ್ಲಿ ಗಲ್ಲಿಗೆ ಬಂದಿಲ್ಲ ::: ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಪದೇ ಪದೇ ಇಂದು ಭೇಟಿ ನೀಡುತ್ತಿದ್ದು, ಈ ಅವಧಿಯಲ್ಲಿ ಅವರು ಅನ್ನ, ಅಕ್ಷರ, ಆರೋಗ್ಯ, ಉದ್ಯೋಗ, ಆರ್ಥಿಕ ನೀತಿಗಳ ಬಗ್ಗೆ ಮಾತನಾಡಿಲ್ಲ. ರಾಷ್ಟçದ ಪ್ರಧಾನಿಗಳಾಗಿದ್ದವರಲ್ಲಿ ಯಾರೊಬ್ಬರು ಈ ರೀತಿ ಗಲ್ಲಿ ಗಲ್ಲಿಗೆ ಬಂದಿಲ್ಲವೆಂದು ಟೀಕಿಸಿದರು. ಚುನಾವಣಾ ಹಂತದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳ ಕುರಿತು ಮಾತನಾಡುವುದಕ್ಕಿಂತ…
ಮಡಿಕೇರಿ ಮೇ 4 : ಬಿಜೆಪಿಯ ವಿರುದ್ಧ ಗೆಲುವು ಸಾಧಿಸಬಲ್ಲ ಜಾತ್ಯತೀತ ನಿಲುವಿನ ಪಕ್ಷವನ್ನು ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷ ಬೆಂಬಲಿಸಲಿದೆಯೆoದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಸ್.ಆರ್.ಮಂಜುನಾಥ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಪ್ಯಾಸಿಸ್ಟ್ ಕೋಮುವಾದಿ ಚಿಂತನೆಗಳನ್ನು ಹೊಂದಿರುವ ಪಕ್ಷದ ಆಡಳಿತದಿಂದ ಶ್ರೀಸಾಮಾನ್ಯರ, ಮಹಿಳೆೆಯರ, ರೈತರು, ಕಾರ್ಮಿಕ ವರ್ಗದ ಸಂಕಷ್ಟಗಳಿಗೆ ಕಿವಿಯಾಗುವವರು ಯಾರು ಇಲ್ಲ ಎನ್ನುವ ಪರಿಸ್ಥಿತಿ ನಿಮಾರ್ಣವಾಗಿದೆ. ನಿರುದ್ಯೋಗದ ಸಮಸ್ಯೆಯಿಂದ ಯುವ ಸಮೂಹ ತತ್ತರಿಸಿದ್ದು, ದುಶ್ಚಟಗಳಿಗೆ ಬಲಿಯಾಗುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೆಲ ದಿನಗಳ ಹಿಂದೆ ಕೂಡಿಗೆಯ ಭುವನಗಿರಿ ಎಂಬಲ್ಲಿ, ಅತ್ಯಂತ ಜೀರ್ಣಾವಸ್ಥೆಯಲ್ಲಿರುವ ಮನೆಯಲ್ಲಿ ಬದುಕು ಸವೆಸುತ್ತಿರುವ ಶತಾಯುಷಿ ವೃದ್ಧೆಯಿಂದ ಮತಹಾಕಿಸಲು ಆಡಳಿತ ವ್ಯವಸ್ಥೆ ಸ್ಥಳಕ್ಕೆ ತೆರಳಿದೆ. ಆ ವೃದ್ಧೆ ವಾಸವಿರುವ ಪರಿಸ್ಥಿತಿಗಳು, ಆಕೆಯ ಅಸಹಾಯಕತೆಗಳು ಇಲ್ಲಿ ಗೌಣವಾಗಿದೆ. ಪ್ರಸ್ತುತ ಓಟು ಮಾತ್ರ ಮುಖ್ಯವಾಗಿದ್ದು, ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಟೀಕಿಸಿದರು. ಜಾತಿ ಮತ ಧರ್ಮಗಳ ವಿಚಾರವೆತ್ತಿ, ಭಾವನೆಗಳನ್ನು ಕೆದಕುವ ರಾಜಕಾರಣವಷ್ಟೆ ಇಂದು ಕಾಣುತ್ತಿದೆ.…
ಮಡಿಕೇರಿ ಮೇ 4 : ಕಾರಣಾಂತರಗಳಿoದ ಕಾಂಗ್ರೆಸ್ ಪಕ್ಷದಿಂದ ಹೊರಗುಳಿದಿದ್ದ ಪ್ರಮುಖರಾದ ಶ್ರೀಮತಿ ಬಂಗೇರ, ವೀಣಾಕ್ಷಿ, ತಜಸುಂ, ಗಿಲ್ಬರ್ಟ್ ಲೋಬೋ, ಕೆ.ಈ.ಮ್ಯಾಥ್ಯು ಹಾಗೂ ಸುನಿಲ್ ನಂಜಪ್ಪ ಅವರುಗಳು ಇಂದು ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ ಹೆಚ್.ಎಂ.ನoದಕುಮಾರ್ ಹಾಗೂ ನಗರಾಧ್ಯಕ್ಷ ಬಿ.ವೈ.ರಾಜೇಶ್ ಅವರುಗಳ ಸಮ್ಮುಖದಲ್ಲಿ ಸೇರ್ಪಡೆಗೊಂಡ ಪ್ರಮುಖರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದರು. ಈ ಸಂದರ್ಭ ಮಾತನಾಡಿದ ಧರ್ಮಜ ಉತ್ತಪ್ಪ, ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಒಗ್ಗಟ್ಟನಿಂದ ಶ್ರಮಿಸಲಾಗುತ್ತಿದೆ. ಜಿಲ್ಲೆಯ ಜನ ಬದಲಾವಣೆಯನ್ನು ಬಯಸಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಲಿದೆ ಎಂದರು. ಪಕ್ಷದ ಜಿಲ್ಲಾ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರ ಘಟಕದ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಬಾಷ, ಪರಿಶಿಷ್ಟ ಘಟಕದ ಅಧ್ಯಕ್ಷ ಮುದ್ದುರಾಜು, ಪ್ರಮುಖರಾದ…
ಮಡಿಕೇರಿ ಮೇ 4 : ದಕ್ಷಿಣ ಕೊಡಗಿನ ಕೊಟ್ಟಗೇರಿಯ ಲಕ್ಷ್ಮಣ ತೀರ್ಥ ಸಂಘದ ಒಂಭತ್ತನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಇದೇ ಮೇ 21 ಮತ್ತು 22 ರಂದು ಬಾಳೆಲೆಯಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ಸಂಘದ ಅಧ್ಯಕ್ಷ ಮಚ್ಚಮಾಡ ಅಯ್ಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮೇ21 ರಂದು ಮಧ್ಯಾಹ್ನ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದ್ದು, ಮೇ22 ರಂದು ಸಂಜೆ 6 ಗಂಟೆಯ ಬಳಿಕ ಅಂತಿಮ ಪಂದ್ಯ ನಡೆಯಲಿದೆ. ಪಂದ್ಯಾವಳಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದ್ದು, 25 ರಿಂದ 30 ತಂಡಗಳು ಪಾಲ್ಗೊಳ್ಳ್ಳುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ತಂಡಗಳು ಮೇ15 ರ ಒಳಗಾಗಿ 5 ಸಾವಿರ ರೂ. ಶುಲ್ಕದೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಈ ಕುರಿತ ಮಾಹಿತಿಗಾಗಿ ಮಚ್ಚಮಾಡ ಅಯ್ಯಪ್ಪ ಮೊ.9480731797, ಮಾಚಂಗಡ ಸುಬ್ರಮಣಿ ಮೊ.9980672958, ಅಳಮೇಂಗಡ ಚಂಗಪ್ಪ ಮೊ.9481114113, ಮಾಚಂಗಡ ದರ್ಶನ್ ಮೊ.9632085536 ಅವರನ್ನು ಸಂಪರ್ಕಿಸಬಹುದೆಂದು…
ಮಡಿಕೇರಿ ಮೇ 4 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಪರ ಮತಯಾಚಿಸುವ ಸಲುವಾಗಿ ಮೇ 5 ರಂದು ನಗರದಲ್ಲಿ ಬೈಕ್ ಜಾಥಾ ನಡೆಯಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ತಿಳಿಸಿದ್ದಾರೆ. ನಗರದ ಫೀ.ಮಾ.ಕಾರ್ಯಪ್ಪ ಕಾಲೇಜು ರಸ್ತೆಯಿಂದ ಹಳೆಯ ಖಾಸಗಿ ಬಸ್ ನಿಲ್ದಾಣ, ಜನರಲ್ ತಿಮ್ಮಯ್ಯ ವೃತ್ತ ಮತ್ತು ಫೀ.ಮಾ.ಕಾರ್ಯಪ್ಪ ವೃತ್ತದವರೆಗೆ ಬೃಹತ್ ಬೈಕ್ ಜಾಥಾ ನಡೆಯಲಿದೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಮೇ 4 : ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ದಿ ಶೂನ್ಯವಾಗಿದ್ದು, ಖಾಸಗಿ ಬಸ್ಸು ನಿಲ್ದಾಣವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ ಆರೋಪಿಸಿದ್ದಾರೆ. ವಿರಾಜಪೇಟೆಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗೋಣಿಕೊಪ್ಪ ವಾಣಿಜ್ಯ ನಗರಿಯಾಗಿದ್ದು ಪ್ರತಿದಿನ ಸಾವಿರಾರು ಸಾರ್ವಜನಿಕರು ನಗರಕ್ಕೆ ಬಂದು ಹೋಗುತ್ತಾರೆ. 100ಕ್ಕೂ ಅಧಿಕ ಖಾಸಗಿ ಹಾಗು ರಾಜ್ಯ ರಸೆತ ಸಾರಿಗೆ ಸಂಸ್ಥೆ ಬಸ್ಸುಗಳು ಬಂದು ಹೋಗುತ್ತಿದೆ. ಬಸ್ಸು ನಿಲುಗಡೆ ಮಾಡಲು ಬಸ್ಸು ನಿಲ್ದಾಣ ಇಲ್ಲ. ನಗರದ ಸುತ್ತಮುತ್ತ ವಾರ್ಡ್ಗಳಲ್ಲಿ 198 ಕುಟುಂಬಗಳು ಇಂದಿಗೂ ಕೂಡ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದಾರೆ. ಕಳೆದ 12 ವರ್ಷಗಳ ಹಿಂದೆ ನಗರ ಹಾಗು ಹೊಸೂರು, ಹಾತೂರು ಅರುವತೋಕ್ಲು ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದರೂ ಇವರೆಗೆ ಕಾರ್ಯಗತಗೊಂಡಿಲ್ಲ. ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪ ಕೇವಲ ಪ್ರಸ್ತಾಪವಾಗಿಯೇ ಇದೆ ಎಂದು ಟೀಕಿಸಿದರು. ಕಾನೂನು ಘಟಕದ ಮಾಜಿ ಅಧ್ಯಕ್ಷ ಡಿ.ಸಿ.ಧ್ರುವ ಕುಮಾರ್ ಮಾತನಾಡಿ…






