ಕೂಡಿಗೆ ಮಾ.18 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಆರಂಭಗೊಂಡ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಸುಗಮವಾಗಿ ನಡೆಯಿತು. ಪರೀಕ್ಷೆಯ ಪ್ರಥಮ ದಿನವಾದ ಬುಧವಾರ ವಿದ್ಯಾರ್ಥಿಗಳು ಕನ್ನಡ ಭಾಷಾ ಪರೀಕ್ಷೆಯನ್ನು ಬರೆದು ಪರೀಕ್ಷಾ ಕೇಂದ್ರದಿಂದ ಸಂತಸದಿಂದ ಹೊರ ಬರುತ್ತಿದ್ದ ದೃಶ್ಯ ಕಂಡುಬಂತು. ಪರೀಕ್ಷೆಯು ಏ.2ರ ವರೆಗೆ ನಡೆಯಲಿದೆ. ಮೊದಲ ಕನ್ನಡ ಪರೀಕ್ಷೆಯಲ್ಲಿ ನೋಂದಾಯಿತ 259 ವಿದ್ಯಾರ್ಥಿಗಳ ಪೈಕಿ 254 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 5 ಮಂದಿ ಪುನಾವರ್ತಿತ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕೂಡುಮಂಗಳೂರು ಸರ್ಕಾರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದರು. :: ಪೋಷಕರಲ್ಲಿ ಸಂತಸ :: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಎರಡು ವರ್ಷಗಳ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಪುನರ್ ಆರಂಭಿಸಿದ್ದು, ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಂತಸ ತಂದಿದೆ. ಕೂಡಿಗೆ ಭಾಗದಲ್ಲಿ 8 ಪ್ರೌಢಶಾಲೆಗಳಿದ್ದು, ಪ್ರಸಕ್ತ…
ಲೇಖಕ: admin
ಮಡಿಕೇರಿ ಮಾ.18 NEWS DESK : ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ತಾಜಲ್ ಇಸ್ಲಾಂ ಮುಸ್ಲಿಂ ಜಮಾತ್ ಅಧ್ಯಕ್ಷರಾದ ಕೆ.ಎಂ.ಹುಸೇನ್ ಶಾಫಿ, ಮಾಜಿ ಅಧ್ಯಕ್ಷರಾದ ಅಬೂಬಕರ್ ಸಕಾಪಿ, ಆಡಳಿತ ಮಂಡಳಿ ಸದಸ್ಯರಾದ ಮೆನ್ ಮಹಮ್ಮದ್, ಎಮ್.ಎ.ಹನೀಫ್ ಹಾಗೂ ಧರ್ಮ ಗುರುಗಳು ಆಹ್ವಾನ ಪತ್ರಿಕೆಯನ್ನು ನೀಡಿ ಉರುಸ್ ಸಮಾರಂಭಕ್ಕೆ ಆಹ್ವಾನಿಸಿದರು. ಎಮ್ಮೆಮಾಡು ಉರುಸ್ ಪ್ರಾಮುಖ್ಯತೆ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದ ಶಾಸಕರು, ಸುಮಾರು 400 ವರ್ಷಕ್ಕೂ ಅಧಿಕ ಇತಿಹಾಸ ಇರುವ ಈ ಉತ್ಸವಕ್ಕೆ, ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದ ಎಲ್ಲಾ ಧರ್ಮದ ಭಕ್ತರು ಆಗಮಿಸಿ ಪ್ರಾರ್ಥಿಸುತ್ತಾರೆ ಎಂದು ವಿವರಿಸಿದರು. ಇದೇ ಸಂದರ್ಭ ಸಭಾಪತಿಗಳಾದ ಯು.ಟಿ ಖಾದರ್, ಅಲ್ಪಸಂಖ್ಯಾತ ಸಚಿವರಾದ ಜಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಝೀರ್ ಅಹಮದ್, ಶಾಂತಿನಗರ ಶಾಸಕರಾದ ಎನ್.ಎ ಹ್ಯಾರೀಸ್ ಮತ್ತು ಮಡಿಕೇರಿ ಶಾಸಕರಾದ ಡಾ. ಮಂಥರ್…
ಮಡಿಕೇರಿ ಮಾ.18 NEWS DESK : ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದು ತಪ್ಪಿಸುವಲ್ಲಿ ರಾಜ್ಯಾದ್ಯಂತ ಗ್ರಾಹಕರ ಕಾಯ್ದೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿದ್ದು, ವಂಚನೆಗೆ ಅಥವಾ ಮೋಸಕ್ಕೆ ತುತ್ತಾದರೆ, ಪರಿಹಾರ ಒದಗಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕ್ರಮವಹಿಸಲಿದೆ ಎಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ರಾಜ್ಯ ಆಯೋಗದ ಅಧ್ಯಕ್ಷರು ಹೇಳಿದರು. ಗ್ರಾಹಕರಿಗೆ ಸರಿಯಾದ ಸೇವೆ ಒದಗಿಸಬೇಕು ಎಂಬುದು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕಚೇರಿಗೆ ಬೇಕಾದ ಎಲ್ಲಾ ರೀತಿಯ ಮೂಲ ಸೌಲಭ್ಯವನ್ನು ಕಲ್ಪಿಸಲು ರಾಜ್ಯ ಗ್ರಾಹಕರ…
ಮಡಿಕೇರಿ NEWS DESK ಮಾ.18 : ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.21 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ “ವಿಚಾರ ಸಂಕಿರಣ” ನಡೆಯಲಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಂಡಿರುವ “ಕೊಡವ ಕ್ವೆಸ್ಟ್” ವಿಚಾರ ಸಂಕಿರಣದಲ್ಲಿ ಮಾಜಿ ಸಂಸದ ಮತ್ತು ಖ್ಯಾತ ವಿದ್ವಾಂಸ ಡಾ.ಎಲ್.ಹನುಮಂತಯ್ಯ, ಖ್ಯಾತ ವಕೀಲರುಗಳಾದ ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ.ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಅವರುಗಳು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಆನಿಮಿಸ್ಟಿಕ್ ಕೊಡವರಿಗಾಗಿ ಸಂವಿಧಾನದ ಅಡಿಯಲ್ಲಿ “ಭೂ-ರಾಜಕೀಯ ಸ್ವಾಯತ್ತತೆ” ಮತ್ತು “ವಿಶೇಷ ಸ್ಥಾನಮಾನ”ಕ್ಕಾಗಿ ವಿಚಾರ ಸಂಕಿರಣದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು. ಭಾರತದ ಈಶಾನ್ಯ ರಾಜ್ಯಗಳಿಗೆ 244 ಮತ್ತು 371 ನೇ ವಿಧಿಗಳಡಿಯಲ್ಲಿ ನೀಡಲಾಗಿರುವ ಮಾದರಿಯಲ್ಲೇ, ಅಲ್ಪಸಂಖ್ಯಾತ ಸೂಕ್ಷ್ಮ ಕೊಡವ ಜನಾಂಗದ ಭೂಮಿ, ಎಸ್ಟಿ ಜನಾಂಗೀಯ ವರ್ಗೀಕರಣ, ಕೊಡವರ ಧಾರ್ಮಿಕ ಸಂಸ್ಕಾರವಾದ ಸಾಂಪ್ರದಾಯಿಕ…
ಸೋಮವಾರಪೇಟೆ, NEWS DESK ಮಾ.18 : ಜಮೀನು ತೆರವು ಕಾರ್ಯಾಚರಣೆ ಸಂದರ್ಭ ಅರಣ್ಯಾಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಇಂದು ಮಸಗೊಡು ಗ್ರಾಮದಲ್ಲಿ ನಡೆದಿದೆ. ಮಸಗೋಡು ಗ್ರಾಮದಲ್ಲಿ 2.50 ಎಕರೆ ಜಾಗವನ್ನು ಅರಣ್ಯ ಇಲಾಖೆಯವರು ಜೆಸಿಬಿಯಿಂದ ತೆರವುಗೊಳಿಸಲು ಯತ್ನಿಸಿದಾಗ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅರಣ್ಯ ಇಲಾಖೆಯವರಿಗೆ ಘೇರಾವು ಹಾಕಿದರು. ರೈತರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕದಲುವುದಿಲ್ಲವೆಂದು ರೈತರು ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್ 2ರವರೆಗೆ ನಡೆಯಲಿರುವ ಈ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಹಬ್ಬದ ಕಳೆ ಮತ್ತು ಬಿಗಿ ಭದ್ರತೆ ಮನೆಮಾಡಿದೆ. ಪರೀಕ್ಷಾರ್ಥಿಗಳ ವಿವರ ಮತ್ತು ವ್ಯವಸ್ಥೆ: ವಿದ್ಯಾರ್ಥಿಗಳ ಸಂಖ್ಯೆ: ಪರೀಕ್ಷೆ ಬರೆಯುತ್ತಿರುವವರ ಪೈಕಿ 4,44,172 ಬಾಲಕರು ಮತ್ತು 4,21,816 ಬಾಲಕಿಯರಿದ್ದಾರೆ. ಕೇಂದ್ರಗಳ ಸಂಖ್ಯೆ: ರಾಜ್ಯದಾದ್ಯಂತ ಒಟ್ಟು 2,871 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರಥಮ ಭಾಷೆ ಪರೀಕ್ಷೆ: ಇಂದು ಮೊದಲ ದಿನ ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ವಿವಿಧ ಪ್ರಥಮ ಭಾಷೆಗಳ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಸರ್ಕಾರದ ಬಂಪರ್ ಕೊಡುಗೆ: ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ತಲುಪಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು (Hall Ticket) ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪ್ರಾಧಿಕಾರದ…
ಕೊಡಗು ಜಿಲ್ಲೆಯಲ್ಲಿನ ಮಾನವ ವನ್ಯಜೀವಿ ಸಂಘರ್ಷ ಕುರಿತು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ರವರ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯಿತು. ಈ ಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಆನೆದಾಳಿ ಹಾಗೂ ವನ್ಯ ಜೀವಿಗಳಿಂದ ಸ್ಥಳೀಯ ನಿವಾಸಿಗಳು ಬಲಿಯಾದ ವಿಚಾರದ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಮಾ.17 NEWS DESK : ಸೋಮವಾರಪೇಟೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್, 02 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ತಾ.ಪಂ.ಇಒ ಪರಮೇಶ್ ಅವರು ತಿಳಿಸಿದ್ದಾರೆ.
ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ (ಈಶ್ವರನ) ದೇವಾಲಯ ವಾರ್ಷಿಕ ಉತ್ಸವವು ಮಾ.20ರ ವರೆಗೆ ನಡೆಯಲಿದೆ. ಮಾ.18 ರಂದು ಬೆಳಿಗ್ಗೆ 5 ಗಂಟೆಗೆ ಇರುಬೆಳಕು, ಮಧ್ಯಾಹ್ನ 12 ಗಂಟೆಗೆ ದೊಡ್ಡ ಹಬ್ಬ, ಎತ್ತು ಪೋರಾಟ, ತೆಂಗಿನಕಾಯಿ ಗುಂಡು ಹೊಡೆಯುವುದು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ, 3 ಗಂಟೆಗೆ ದೇವರು ಹೊರಗೆ ಬರುವುದು, ಸಂಜೆ 6 ಗಂಟೆಗೆ ಪೇಟೆ ಮೆರವಣಿಗೆ ನಡೆಯಲಿದೆ. ಮಾ. 19 ರಂದು ಮಧ್ಯಾಹ್ನ 12 ಗಂಟೆಗೆ ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ, ಬಸವನ ಕಟ್ಟೆಯಲ್ಲಿ ಪೂಜೆ, ಸಂಜೆ 6 ಗಂಟೆಗೆ ದೇವರ ಜಳಕ, ಅವಬೃತ ಸ್ನಾನ, ರಾತ್ರಿ 8 ಗಂಟೆಗೆ ದೇವರ ಪ್ರದಕ್ಷಿಣೆ ನೃತ್ಯ ನಡೆಯಲಿದೆ. ಮಾ. 20ರಂದು ಹಗಲು 11 ಗಂಟೆಗೆ ಕೊಡಿಮರ ಇಳಿಸುವುದು 12 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾದ ವಿನಿಯೋಗ ಅನ್ನ…
ವಿರಾಜಪೇಟೆ ಮಾ.17 NEWS DESK : ಮೂರ್ನಾಡು ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಾ.15 ರಂದು ಮಹಿಳಾ ದಿನಾಚರಣೆ ಹಾಗೂ ಒಕ್ಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಭಾ ಕಾರ್ಯಕ್ರಮಕ್ಕೂ ಮುನ್ನ ಮನರಂಜನಾ ಆಟಗಳು ನಡೆಯಲಿದೆ. 10.30 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಹಾಕತ್ತೂರು ಶಾಲೆಯ ಮುಖ್ಯ ಶಿಕ್ಷಕರಾದ ತೆಕ್ಕಡೆ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೂರ್ನಾಡು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಲ್ಲುಮುಟ್ಲು ಜಶ್ಮಿ ಚಿಂತು ವಹಿಸಲಿದ್ದಾರೆ. ಜಂಬರ ಉದ್ಘಾಟನೆಯನ್ನು ಕವಿ ಹಾಗೂ ಸಾಹಿತಿ ಪೂಜಾರೀರ ಕೃಪಾ ದೇವರಾಜ್ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ವಿಶೇಷ ಸೀರೆ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಟ್ಟೆಮನೆ ಪ್ರೇಮ ಗಣೇಶ್ ಉದ್ಘಾಟಿಸಲಿದ್ದಾರೆ. ಮಹಿಳೆಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗೌಡ ಮಹಿಳಾ ಒಕ್ಕೂಟದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






