ಸೋಮವಾರಪೇಟೆ ಜ.28 NEWS DESK : ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಮಾನವೀಯ ದೃಷ್ಟಿಯಿಂದ ಮೊಗೇರ ಸಮಾಜದ ವತಿಯಿಂದ ರಕ್ಷಿಸಿ ಚಿಕಿತ್ಸೆ ಒದಗಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಸೋಮವಾರಪೇಟೆ ಪಟ್ಟಣದಲ್ಲಿ ಅಲೆದಾಡುತ್ತಾ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ಮಹಿಳೆಯನ್ನು ಕೆಲವರು ಸಾಮಾಜಿಕ ಜಾಲತಾಣದ ಗುಂಪುಗಳಲ್ಲಿ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸೋಮವಾರಪೇಟೆ ಮೊಗೇರ ಸಮಾಜದ ಸದಸ್ಯರು ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು. ಸಭೆಯ ತೀರ್ಮಾನದಂತೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಮೊಗೇರ ಸಮಾಜದ ಉಪಾಧ್ಯಕ್ಷರಾದ ಪಿ.ಕೆ.ಚಂದ್ರು, ಜಿಲ್ಲಾ ಮೊಗೇರ ಸಮಾಜದ ಸದಸ್ಯರಾದ ಕೆ.ಬಿ.ನಂದ, ಹರೀಶ್ ತಣ್ಣೀರುಹಳ್ಳ, ವಿಜಯ್ ಕಾಗಡಿಕಟ್ಟೆ, ಹರೀಶ್ ಬಿಲ್ಕಿಕೊಪ್ಪ ಹಾಗೂ ರವಿ ಕರ್ಕಲಿ ಅವರುಗಳು ಸುನಂದ ಅವರ ಕುಟುಂಬದವರೊಂದಿಗೆ ಹರೀಶ್ ಅವರ ಕಾರಿನಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಮಾಜದ ಅಧ್ಯಕ್ಷರಾದ ಜನಾರ್ದನ್ ಮರಗೋಡು ಹಾಗೂ ರವಿ ಪಿ.ಎಂ.…
ಲೇಖಕ: admin
ಮಡಿಕೇರಿ ಜ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ತಹಶೀಲ್ದಾರ್ ಶ್ರೀಧರ, ಡಿವೈಎಸ್ಪಿಗಳಾದ ಸೂರಜ್, ಮೇದಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ…
ವಿರಾಜಪೇಟೆ ಜ.28 NEWS DESK : ದೇಶದ ಐಕ್ಯತೆಗೆ ಕುಟುಂಬ ಜೀವನ ಕಾರಣ. ಮೂರು ಅಕ್ಷರಗಳಲ್ಲಿಯೇ ಸಮರ್ಥ ಸತ್ವ ಹೊಂದಿರುವ ಸದೃಢ ದೇಶ ಭಾರತ. ಎಲ್ಲಾ ಜನರನ್ನು, ಮನಸ್ಸನ್ನು ಬೆಸೆಯುವ ಮೂಲಕ ಹಿಂದೂ ಧರ್ಮದ ಅಭಿಮಾನವನ್ನು ಜನರಿಗೆ ತಲುಪಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕದ ದಕ್ಷಿಣ ಕರ್ನಾಟಕ ಪ್ರಾಂತ ಸಹ ಕಾರ್ಯವಾಹಕ ಪಿ.ಎಸ್.ಪ್ರಕಾಶ್ ಕರೆ ನೀಡಿದರು. ಅಮ್ಮತ್ತಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಆಶ್ರಯದಲ್ಲಿ ಕೊಡವ ಸಮಾಜದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಶತಮಾನೋತ್ಸವ ಆಚರಿಸುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ತನ್ನ ಕಾರ್ಯ ಯೋಜನೆಯಲ್ಲಿ ಹಿಂದೂ ಸಮಾಜೋತ್ಸವ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಖಂಡ ಹಿಂದೂ ಸಮಾಜ ದೇಶದಲ್ಲಿ ಹರಿದು ಹಂಚಿ ಹೋಗಿರುವುದನ್ನು ಒಗ್ಗೂಡಿಸುವ ಸಲುವಾಗಿ ಶೋಭಾಯಾತ್ರೆ ನಡೆಸಲಾಗುತ್ತಿದೆ. ಹಿಂದೂ ಸಮಾಜದವರು ಜಾತಿ ಬೇಧ ಮರೆತು ಸಂಘಟಿತರಾಗಿ ನಾವೆಲ್ಲ ಒಂದು, ನಾವೆಲ್ಲ ಮುಂದು ಎನ್ನುವ ಮೂಲಕ, ಯುವಕರ ಪ್ರಜ್ಞೆ ಧರ್ಮದೆಡೆಗೆ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು…
ಮುಂಬೈ NEWS DESK ಜ.28 : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಬಾರಾಮತಿ ಬಳಿ ನಡೆದಿದೆ. ಇಂದು ಬೆಳಗ್ಗೆ ಮುಂಬೈನಿಂದ ಟೇಕಾಫ್ ಆಗಿದ್ದ ವಿಮಾನವು ಸುಮಾರು ಒಂದು ಗಂಟೆಯ ಪ್ರಯಾಣದ ನಂತರ 9 ಗಂಟೆಯ ಸುಮಾರಿಗೆ ಬಾರಾಮತಿಯಲ್ಲಿ ಲ್ಯಾಂಡಿಂಗ್ ಗೆ ಸಿದ್ಧವಾಗಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ವಿಮಾನ ಪತನಗೊಂಡಿತು. ಅಪಘಾತದಲ್ಲಿ ಅಜಿತ್ ಪವಾರ್, ಅವರ ಇಬ್ಬರು ಸಿಬ್ಬಂದಿ ಹಾಗೂ ಇಬ್ಬರು ವಿಮಾನ ಸಿಬ್ಬಂದಿ ಸದಸ್ಯರು (ಪೈಲಟ್ ಸಿಬ್ಬಂದಿ) ಸೇರಿದಂತೆ ವಿಮಾನದಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಡಿಕೇರಿ ಜ.28 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಪೊನ್ನಂಪೇಟೆ ತಾಲ್ಲೂಕು ಘಟಕದ ವತಿಯಿಂದ ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯು ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಎಂಟರಿಂದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು ಚೇಂದಿರ ರಮ್ಯಾ ಜಗನ್ ಅವರ ವಾಟ್ಸಾಪ್ ಸಂಖ್ಯೆ 8550833420 ಗೆ ದಿನಾಂಕ 05/02/2026ರ ಒಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಎಲ್ಲರಿಗೂ, ಡಿಜಿಟಲ್ ಅಭಿನಂದನಾಪತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪೊನ್ನಂಪೇಟೆ ತಾಲೂಕು ಕಾರ್ಯದರ್ಶಿಯಾದ ನಳಿನಿ ಹೆಚ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಪೋಕ್ಲು ಜ.28 NEWS DESK : ಚೀಯಕ ಪೂವಂಡ ಕುಟುಂಬದ ವತಿಯಿಂದ ಏಪ್ರಿಲ್ನಲ್ಲಿ ಆಯೋಜಿಸಲಾಗಿರುವ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅಧಿಕ ಸಂಖ್ಯೆಯ ಕೊಡವ ಕುಟುಂಬಗಳು ಪಾಲ್ಗೊಳ್ಳುವುದರ ಮೂಲಕ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ನಲ್ಲಿ ಕ್ರೀಡೆ ದಾಖಲಾಗಲು ಪ್ರಯತ್ನಿಸಬೇಕು ಎಂದು ಚೀಯಕ ಪೂವಂಡ ಕುಟುಂಬದ ಅಧ್ಯಕ್ಷ ಸಿ.ಎಂ.ಅಪ್ಪಚ್ಚು ಹೇಳಿದರು. ನಾಲ್ನಾಡು ಪ್ಲಾಂಟಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲುವಿನ ಕೆಪಿಎಸ್ ಶಾಲಾ ಆಟದ ಮೈದಾನದಲ್ಲಿ ಏ.23 ರಿಂದ 26ರ ವರೆಗೆ 4 ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟದ ಯಶಸ್ವಿಗಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕ್ರೀಡಾಕೂಟಕ್ಕೆ ಅಂದಾಜು 60 ಲಕ್ಷ ವೆಚ್ಚವಾಗಲಿದ್ದು, ಕುಟುಂಬವಾರು 20,000 ರೂ.ಧನಸಹಾಯವನ್ನು ಸಂಗ್ರಹಿಸಲಾಗುತ್ತಿದೆ ಎಂದರು. ಹಗ್ಗ ಜಗ್ಗಾಟ ಕ್ರೀಡಾ ಕೂಟದ ಅಧ್ಯಕ್ಷ ಸಿ.ಕೆ.ಬೋಪಣ್ಣ ಮಾತನಾಡಿ, ಹಗ್ಗ ಜಗ್ಗಾಟ ಕ್ರೀಡಾಕೂಟದ ಯಶಸ್ಸಿಗೆ ಪರಸ್ಪರ ಸರ್ವರ ಸಹಕಾರ ಅಗತ್ಯ. ಜನಾಂಗದ ಕ್ರೀಡಾ ಅಭಿಮಾನಿ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್ ನಲ್ಲಿ…
ಮಡಿಕೇರಿ ಜ.28 NEWS DESK : ಸೈನಿಕ ಶಾಲೆ ಕೊಡಗಿನ ಎನ್ಸಿಸಿ ಸೀನಿಯರ್ ಡಿವಿಷನ್ (SD) ಘಟಕದ 23 ವಿದ್ಯಾರ್ಥಿಗಳ ದಳವು ಮಡಿಕೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಗಳ ಸಂದರ್ಭದಲ್ಲಿ ಪ್ರದರ್ಶಿಸಿದ ಅತ್ಯುತ್ತಮ ಪೆರೇಡ್ ಪ್ರದರ್ಶನಕ್ಕಾಗಿ `ಉತ್ತಮ ದಳ’ ಟ್ರೋಫಿ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಪ್ರತಿಷ್ಠಿತ ಪಾರಿತೋಷಕವು ಸತತ ಮೂರು ವರ್ಷಗಳಿಂದ ನಿರಂತರವಾಗಿ ಶಾಲೆಯು ಪಡೆಯುತ್ತಾ ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಪೆರೇಡ್ ಸಂದರ್ಭದಲ್ಲಿ ವಿದ್ಯಾರ್ಥಿಗಳು ತೋರಿದ ಉನ್ನತ ಶಿಸ್ತು, ಸಮನ್ವಯತೆ ಹಾಗೂ ನಿಖರತೆಯನ್ನು ಕಂಡು ಸಮಾರಂಭದಲ್ಲಿ ನೆರೆದಿದ್ದ ಗಣ್ಯ ಅತಿಥಿಗಳು ಹಾಗೂ ಸಾರ್ವಜನಿಕರು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಪೆರೇಡ್ನಲ್ಲಿನ ಅತ್ಯುತ್ತಮ ಸಾಧನೆಗಾಗಿ ನೀಡಲಾದ `ಪೆರೇಡ್ ಶ್ರೇಷ್ಠತೆ ಟ್ರೋಫಿ’ಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಮಡಿಕೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ದಳಕ್ಕೆ ಪ್ರದಾನ ಮಾಡಿದರು. ಸೈನಿಕ ಶಾಲೆ ಕೊಡಗಿನ ಜೂನಿಯರ್ ಡಿವಿಷನ್ ಎನ್ಸಿಸಿ ಘಟಕದ ಕಮಾಂಡಿಂಗ್…
ಚೆಟ್ಟಳ್ಳಿ ಜ.28 NEWS DESK : ಚೆಟ್ಟಳ್ಳಿಯ ಸೇಂಟ್ ಸೆಬಾಸ್ಟಿಯನ್ ಚರ್ಚ್ನ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ವಲಯ ಶ್ರೇಷ್ಠಗುರುಗಳಾದ ಡೋಮಿನಿಕ್ ಜೇಮ್ಸ್ ಅವರ ನೇತೃತ್ವದಲ್ಲಿ ಹಾಗೂ ಒಂಬತ್ತು ಧರ್ಮಗುರುಗಳ ಸಾನ್ನಿಧ್ಯದಲ್ಲಿ ದೇವಾಲಯದಲ್ಲಿ ಭವ್ಯ ಧಾರ್ಮಿಕ ಬಲಿಪೂಜೆ ನೆರವೇರಿತು. ನಂತರ ಸಂತರ ಭವ್ಯ ತೇರು ಮೆರವಣಿಗೆ, ಸಾಮೂಹಿಕ ಗೀತೆಗಳು ಹಾಗೂ ಪ್ರಾರ್ಥನೆಯೊಂದಿಗೆ ಚೆಟ್ಟಳ್ಳಿ ಪಟ್ಟಣದಿಂದ ದೇವಾಲಯದವರೆಗೆ ಭಕ್ತಿಭಾವದಿಂದ ಮೆರವಣಿಗೆ ನಡೆಯಿತು. ಬಳಿಕ ಪರಮ ಪ್ರಸಾದದ ಭವ್ಯ ಆಶೀರ್ವಾದದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಹಬ್ಬದ ಅಂಗವಾಗಿ ಸಾಮೂಹಿಕ ಭೋಜನ ವ್ಯವಸ್ಥೆಯನ್ನೂ ಏರ್ಪಡಿಸಲಾಗಿದ್ದು, ಭಕ್ತರು ಸಹಭೋಜನದಲ್ಲಿ ಭಾಗವಹಿಸಿದರು. ಹಬ್ಬದ ಎಲ್ಲಾ ಕಾರ್ಯಕ್ರಮಗಳು ಚೆಟ್ಟಳ್ಳಿ ಚರ್ಚ್ನ ಧರ್ಮಗುರುಗಳಾದ ಫಾದರ್ ಜೆರಾಲ್ಡ್ ಸಿಕ್ವೇರಾ ಅವರ ಮಾರ್ಗದರ್ಶನದಲ್ಲಿ ಹಾಗೂ ಪಾಲನಾ ಸಮಿತಿಯ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನೆರವೇರಿದವು. ಈ ಸಂದರ್ಭ ಧಾರ್ಮಿಕ ಕನ್ಯಾಸ್ತ್ರೀಯರು, ಹತ್ತಿರದ ವಿವಿಧ ಚರ್ಚುಗಳಿಂದ ಆಗಮಿಸಿದ ಕ್ರೈಸ್ತ ಬಂಧುಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು.
ಮಡಿಕೇರಿ ಜ.27 NEWS DESK : ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸೋಮವಾರಪೇಟೆಯ ತಾನ್ಯ ಮುರಳೀಧರ್ ಪ್ರತಿನಿಧಿಸಿದ್ದ ರಾಜ್ಯ ರಾಷ್ಟ್ರೀಯ ಸೇವಾದಳ (ಎನ್ಎಸ್ಎಸ್) ತಂಡ ಪ್ರಥಮ ಬಹುಮಾನ ಪಡೆದುಕೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಗೌರವ ರಕ್ಷೆ ನೀಡುವ ಸಂದರ್ಭ ರಾಜ್ಯ ರಾಷ್ಟ್ರಿಯ ಸೇವಾದಳ ತಂಡ ಆಕರ್ಷಕ ಪಥಸಂಚಲನದ ಮೂಲಕ ಗಮನ ಸೆಳೆಯಿತು. ಅಲ್ಲದೆ, ಪ್ರಥಮ ಬಹುಮಾನಕ್ಕೂ ಭಾಜನವಾಯಿತು. ತಂಡಕ್ಕೆ ರಾಜ್ಯ ಮಟ್ಟದಿಂದ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ತಾನ್ಯ ಕೂಡ ಒಬ್ಬರಾಗಿದ್ದು, ಪ್ರಶಂಸನಾ ಪತ್ರ ಪಡೆದುಕೊಂಡಿದ್ದಾರೆ. ಸೋಮವಾರಪೇಟೆಯ ಹಿರಿಯ ಪತ್ರಕರ್ತ ಎಸ್.ಎ.ಮುರಳೀಧರ ಹಾಗೂ ಸರಿತಾ ದಂಪತಿಯ ಪುತ್ರಿ ತಾನ್ಯ ಈ ಹಿಂದೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದ ದಕ್ಷಿಣ ವಲಯ ಆರ್ಡಿ ಕ್ಯಾಂಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಈಕೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಅರಣ್ಯ ಶಾಸ್ತ್ರ ಪದವಿ ವ್ಯಾಸಂಗ…
ಸಿದ್ದಾಪುರ NEWS DESK ಜ.27 : ಕೊಡಗು ಜಿಲ್ಲೆಯಲ್ಲಿ ಲವ್ ಜಿಹಾದ್, ಮತಾಂತರ ಮತ್ತು ಲ್ಯಾಂಡ್ ಜಿಹಾದ್ ವ್ಯಾಪಕವಾಗಿದೆ ಎಂದು ಆರೋಪಿಸಿ ಹಿಂದೂ ಸುರಕ್ಷಾ ಸಮಿತಿ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿತು. ಸಿದ್ದಾಪುರದ ಶ್ರೀಅಯ್ಯಪ್ಪ ದೇವಸ್ಥಾನದ ಬಳಿಯಿಂದ ಸಿದ್ದಾಪುರ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಮಾಜಘಾತುಕ ಶಕ್ತಿಗಳ ವಿರುದ್ಧ ಸರಕಾರ ಹಾಗೂ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಹಿಂದೂ ಸುರಕ್ಷಾ ಸಮಿತಿಯ ಸಂಯೋಜಕ ಕುಕ್ಕೇರ ಅಜಿತ್ ಅವರು, ಲವ್ ಜಿಹಾದ್ ಹಾಗೂ ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಗಳು ಜಾಗೃತರಾಗಬೇಕು ಎಂದು ಕರೆ ನೀಡಿದರು. ಪ್ರೀತಿ ಪ್ರೇಮದ ನಾಟಕವಾಡಿ ಹಿಂದೂ ಯುವತಿಯರನ್ನು ಲವ್ ಜಿಹಾದ್ ಮಾಡಲಾಗುತ್ತಿದೆ, ಕೊಡಗು ಜಿಲ್ಲೆಯಲ್ಲಿ ಲ್ಯಾಂಡ್ ಜಿಹಾದ್ ಕೂಡ ನಡೆಯುತ್ತಿದೆ ಎಂದು ಆರೋಪಿಸಿದರು. ಹಿಂದೂ ಪರ ಸಂಘಟನೆಗಳ ಮುಖಂಡ ಪುತ್ತೂರಿನ ಗುಣರಾಜ್ ಭಟ್ ಮಾತನಾಡಿ, ಲವ್ ಜಿಹಾದ್ ಕೇವಲ…






