ಮಡಿಕೇರಿ ಏ.3 : ಡಬಲ್ ಎಂಜಿನ್ ಸರ್ಕಾರ ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕಾಗಿ ಒತ್ತು ನೀಡಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದ ಜನಪರ ಯೋಜನೆಗಳು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಅನಿತಾ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ಹಲವು ಯೋಜನೆಗಳ ಮೂಲಕ ನಾರಿಶಕ್ತಿಯ ಅಭ್ಯುದಯಕ್ಕೆ ಕಂಕಣಬದ್ಧರಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದುಡಿಯುತ್ತಿದೆ ಎಂದರು. 2014 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರದಲ್ಲಿ ಅತಿ ಹೆಚ್ಚು ಮಹಿಳಾ ಮಂತ್ರಿಗಳನ್ನು ಹೊಂದಿರುವ ವಿಶಿಷ್ಟ ಹೆಗ್ಗಳಿಕೆಗೆ ಪಾತ್ರವಾಗಿದೆ. ಡಬಲ್ ಎಂಜಿನ್ ಸರ್ಕಾರದಿಂದ ಮಹಿಳೆಯರು ಮಹಾಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಆರೋಗ್ಯ, ಜೀವನೋಪಾಯ ಮತ್ತು ಶಿಕ್ಷಣದಿಂದ ಜೀವನದ ಗುಣಮಟ್ಟ ಸುಧಾರಿಸಿದೆ. ಜಲಜೀವನ್ ಮಿಷನ್ ಮೂಲಕ ನೀರಿನ ಸಂಪರ್ಕ, ಸ್ವಚ್ಛಭಾರತ್ ಮಿಷನ್, ಉಜ್ವಲ ಯೋಜನೆಯಿಂದ ಉಚಿತ ಎಲ್ಪಿಜಿ ಸಂಪರ್ಕ, ಗರ್ಭಿಣಿ ಮಹಿಳೆಯರ ಸುಧಾರಣೆಗೆ ಮಾತೃಪೂರ್ಣ ಯೋಜನೆ, ಮಾತೃ…
ಲೇಖಕ: admin
ಮಡಿಕೇರಿ ಮೇ 3 : ವಿಧಾನಸಭಾ ಚುನಾವಣೆಯಲ್ಲಿ ಪ್ರಜಾ ಪರಿವರ್ತನಾ ವೇದಿಕೆಯ ಕೊಡಗು ಜಿಲ್ಲಾ ಘಟಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಲಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಸ್.ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆಯ ರಾಜ್ಯ ಸಮಿತಿಯ ನಿರ್ದೇಶನದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ವೇದಿಕೆಯ ಎಲ್ಲಾ ಮತದಾರರು, ಕಾರ್ಯಕರ್ತರು, ಸಂಘಟನೆಯ ಅಭಿಮಾನಿಗಳು ಹಾಗೂ ಜಿಲ್ಲೆಯ ಸಮಸ್ತ ಮತದಾರರು ಈ ಬಾರಿಯ ಬದಲಾವಣೆಯ ದೃಷ್ಟಿಯಿಂದ ತಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷದ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಗಳಿಗೆ ನೀಡಿ ಜಯಶೀಲರನ್ನಾಗಿ ಮಾಡಿ ಜನ ಸೇವೆಗೆ ಅವಕಾಶವನ್ನು ಮಾಡಿಕೊಡಬೇಕಾಗಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎ.ಗಣೇಶ್, ಸಂಘಟನಾ ಕಾರ್ಯದರ್ಶಿ ಹೊನ್ನಪ್ಪ, ಜಿಲ್ಲಾ ಖಜಾಂಚಿ ಜಿ.ರಾಮ, ಮುಖಂಡರಾದ ಸುನೀಲ್ ಉಪಸ್ಥಿತರಿದ್ದರು.
ಮಡಿಕೇರಿ ಮೇ 3 : ಕರ್ನಾಟಕ ರಾಜ್ಯದಲ್ಲಿ ಪೂರ್ಣ ಬಹುಮತದ ಭಾರತೀಯ ಜನತಾ ಪಾರ್ಟಿಯ ಸರಕಾರ ಅಧಿಕಾರಕ್ಕೆ ಬರಬೇಕೆಂದು ಜನತೆ ಬಯಸಿದ್ದು, ಈ ಚುನಾವಣೆಯಲ್ಲಿ ಪಕ್ಷ 125 ರಿಂದ 130 ಸ್ಥಾನಗಳನ್ನು ಪಡೆಯುವುದು ಖಚಿತವೆಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬಲ್ ಇಂಜಿನ್ ಸರ್ಕಾರ, ತನ್ನ ಆಡಳಿತಾವಧಿಯಲ್ಲಿ ಜನಪರವಾದ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿದೆಯೆಂದು ತಿಳಿಸಿದರು. ರಾಜ್ಯದ ಬಿಜೆಪಿ ಸರ್ಕಾರ ಸಮಾಜದ ವಿವಿಧ ಸ್ತರಗಳ ಜನರ ಪ್ರಗತಿಗಾಗಿ ಹತ್ತಾರು ಪ್ಯಾಕೇಜ್ಗಳನ್ನು ವಿವಿಧ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರ ನೀಡಿದೆ. ಕೋವಿಡ್ ಕಾಲದಲ್ಲಿ ಸರ್ಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದರು. ಮಡಿಕೇರಿ ಕ್ಷೇತ್ರದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿರಾಜಪೇಟೆ ಕ್ಷೇತ್ರದ ಕೆ.ಜಿ.ಬೋಪಯ್ಯ ಅವರು ಚುನಾವಣೆಯಲ್ಲಿ ನಿಚ್ಚಳ ಬಹುಮತದೊಂದಿಗೆ ನಿರಾಯಾಸ ಗೆಲುವನ್ನು ದಾಖಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್…
ಮಡಿಕೇರಿ ಮೇ 3 : ನಗರದ ಮಲ್ಲಿಕಾರ್ಜುನ ಬಡಾವಣೆಯ ನವೀಕೃತಗೊಂಡಿರುವ ಶ್ರೀ ಕೋದಂಡ ರಾಮ ದೇವಾಲಯದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಆರಂಭಗೊಂಡಿದ್ದು, ಇಂದು ನಗರದಲ್ಲಿ ವೈಭವದ ಧಾರ್ಮಿಕ ಮೆರವಣಿಗೆ ನಡೆಯಿತು. ವೇದಬ್ರಹ್ಮ ಶ್ರೀಕೃಷ್ಣ ಉಪಾಧ್ಯ ಹಾಗೂ ವಿದ್ವಾನ್ ಕೆ.ಶ್ರೀನಿವಾಸ ಉಪಾಧ್ಯ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗುತ್ತಿದ್ದು, ಮೇ2 ರ ಸಂಜೆಯಿAದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ಪ್ರಾರಂಭಗೊಂಡವು. ಇಂದು ಬೆಳಿಗ್ಗೆ 9 ಗಂಟೆಗೆ ಪ್ರಧಾನ ಕಲಶ ಸಹಿತ ಉತ್ಸವ ಮೂರ್ತಿ ಹೊತ್ತ ಮಂಟಪದೊಂದಿಗೆ ಧಾರ್ಮಿಕ ಮೆರವಣಿಗೆ ನಗರದ ಮುಖ್ಯ ರಸ್ತೆಯಲ್ಲಿ ನಡೆಯಿತು. ದೇವಾಲಯದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಜಿ.ರಾಜೇಂದ್ರ ಹಾಗೂ ಶ್ರೀ ಕೋದಂಡ ರಾಮ ದೇವಾಲಯ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಹೆಚ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಎಸ್.ಎಸ್., ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಸುಬ್ಬರಾವ್, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸುಧಾಕರ್ ಹೆಚ್.ವಿ., ಖಜಾಂಚಿ ತಿಮ್ಮಯ್ಯ ಹೆಚ್.ಎನ್., ಜೀರ್ಣೋದ್ಧಾರ ಸಮಿತಿ…
ಮಡಿಕೇರಿ ಮೇ 3 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿಯಾದರು. ಹಿರಿಯರಾದ ಬೊಟ್ಟೋಳಂಡ ಮಿಟ್ಟು ಚೆಂಗಪ್ಪ ಅವರ ನಿವಾಸದಲ್ಲಿ ಭೇಟಿಯಾದ ನಾಚಪ್ಪ ಹಾಗೂ ಹರಿಪ್ರಸಾದ್ ಕೊಡವಲ್ಯಾಂಡ್ ಜಿಯೋ-ರಾಜಕೀಯದ ಬಹುಕಾಲದ ಬೇಡಿಕೆಯ ಕುರಿತು ಚರ್ಚಿಸಿದರು.
ಮಡಿಕೇರಿ ಮೇ 3 : ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ 6 ನೇ ವರ್ಷದ ಗೌಡ ಕುಟುಂಬಗಳ ನಡುವಣ “ಗೌಡ ಫುಟ್ಬಾಲ್ ಟ್ರೋಫಿ 2023” ಪಂದ್ಯಾವಳಿ ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇದೇ ಮೇ 4 ರಿಂದ 14 ರವರೆಗೆ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಕಾಡೆಮಿಯ ಅಧ್ಯಕ್ಷ ದುಷ್ಯಂತ್ ಬಡುವಂಡ್ರ ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ಪಂದ್ಯಾವಳಿಯ ಉದ್ಘಾಟನೆ ನಡೆಯಲಿದೆ. ಒಟ್ಟು 64 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಸುಮಾರು 4 ಸಾವಿರ ಪ್ರೇಕ್ಷಕರಿಗೆ ಗ್ಯಾಲರಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮುಕ್ಕಾಟಿ ತಂಡ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಪಡಿಕಲ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತ್ತು. ::: ಮೇ 4 ರ ಪಂದ್ಯಗಳು ::: ಮುಕ್ಕಾಟಿ ‘ಎ’ ಮತ್ತು ಕಾಯರ್ತೋಡಿ ಕೊಂಬಂಡ ಮತ್ತು ಕಾನಡ್ಕ ಮಗೇರನಾ ಮತ್ತು ಪಾರೇರ ಯಾಲದಾಳು ಮತ್ತು ಬಾರಿಕೆ ಪಟ್ಟೆಮನೆ ಮತ್ತು ಬಡುವಂಡ್ರ ಉಡುದೊಳಿರ ಮತ್ತು ಪರಿಚನ ಬೈಲೆ ಮತ್ತು ಉಳುವಾರನ
ಮಡಿಕೇರಿ ಮೇ 3 : ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ ನಗರದ ಜಿಲ್ಲಾ ಕ್ರೀಡಂಗಣದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಮಕ್ಕಳ ಉಚಿತ ಬೇಸಿಗೆ ಶಿಬಿರ ಮುಕ್ತಾಯಗೊಂಡಿತು. ಅತಿಥಿ ಗಣ್ಯರೊಂದಿಗೆ ಶಿಬಿರದ ಮಕ್ಕಳು, ಪೋಷಕರು, ವಾಂಡರರ್ಸ್ ಪದಾಧಿಕಾರಿಗಳು ಸಂಭ್ರಮದಿಂದ ಪಾಲ್ಗೊಂಡು ೨೯ನೇ ವರ್ಷದ ಶಿಬಿರಕ್ಕೆ ತೆರೆ ಎಳೆದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ್ದ ನೂರಕ್ಕೂ ಅಧಿಕ ಮಕ್ಕಳು ತಾವು ಶಿಬಿರದಲ್ಲಿ ಕಲಿತ ಪ್ರಾಣಾಯಾಮವನ್ನು ಅತಿಥಿಗಳೆದುರು ಪ್ರದರ್ಶಿಸಿ ಮೆಚ್ಚುಗೆಗಳಿಸಿದರು. ಶಿಬಿರದ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಹಾಕಿ ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು. ಇದೇ ಸಂದರ್ಭ ಶಿಬಿರದ ಬಗ್ಗೆ ಶಿಬಿರಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಬಿರಾರ್ಥಿಗಳ ಪರವಾಗಿ ಸೃಷ್ಟಿ, ಆದ್ಯ ಹಾಗೂ ದಾರಿಕಾ, ಪೋಷಕರ ಪರವಾಗಿ ಬೊಟ್ಟೋಳಂಡ ನಿವ್ಯ ದೇವಯ್ಯ ಅನಿಸಿಕೆ ವ್ಯಕ್ತಪಡಿಸಿದರೆ, ತರಬೇತುದಾರರ ಪರವಾಗಿ ವಾಂಡರರ್ಸ್ ಆಡಳಿತಾಧಿಕಾರಿ ಬೊಪ್ಪಂಡ ಶಾಂ ಪೂಣಚ್ಚ ಮಾತನಾಡಿದರು. ಡೆಕಾಥ್ಲಾನ್…
ಮಡಿಕೇರಿ ಮೇ 3 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಬಿ.ಎಸ್.ಅನಂತಕುಮಾರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಪರ ಒಲವು ತೋರಿರುವ ಅವರು ಸಧ್ಯದಲ್ಲೇ ಶನಿವಾರಸಂತೆಯಲ್ಲಿ ಶಕ್ತಿ ಪ್ರದರ್ಶನ ಮಾಡುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಂತಕುಮಾರ್ ಕಾಂಗ್ರೆಸ್ ಪಕ್ಷ ನನಗೆ ಅನ್ಯಾಯ ಮಾಡಿಲ್ಲ, ಆದರೆ ಪಕ್ಷದ ಜಿಲ್ಲಾಧ್ಯಕ್ಷರು, ನಾಯಕರು ಹಾಗೂ ಅಭ್ಯರ್ಥಿ ನನ್ನನ್ನು ಕಡೆಗಣಿಸಿದ್ದಾರೆ. ನನ್ನ ಸ್ವಾಭಿಮಾನಕ್ಕೆ ದಕ್ಕೆ ಬಂದಿರುವುದರಿಂದ ಪಕ್ಷದಿಂದ ಹೊರ ಹೋಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುತ್ತೇನೆ ಎಂದು ಹೇಳಿದರು. ನಾನು ಜಿಲ್ಲಾ ಉಪಾಧ್ಯಕ್ಷನಾಗಿದ್ದರೂ ಕಳೆದ 6 ತಿಂಗಳುಗಳಿಂದ ಜಿಲ್ಲಾಧ್ಯಕ್ಷರು ನನಗೆ ಕರೆ ಮಾಡಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿಲ್ಲ. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಕ್ಷದ ಸಭೆ, ಸಮಾರಂಭಗಳಿಗೆ ನನ್ನನ್ನು ಆಹ್ವಾನಿಸುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಪಕ್ಷ ಸಂಘಟನೆ ಅತಿ ಮುಖ್ಯವಾಗಿದ್ದು, ಯಾರೂ ಕೂಡ ನಮ್ಮನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಶನಿವಾರಸಂತೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೃಹತ್ ಮಟ್ಟದಲ್ಲಿ ಬೆಳೆಸಿದ್ದೇನೆ. ಆದರೆ ನನ್ನ ಗಮನಕ್ಕೆ ತಾರದೆ…
ಸೋಮವಾರಪೇಟೆ ಮೇ 3 : ಮಕ್ಕಳ ಮನಸ್ಸು ವಿಕಾಸನಗೊಳ್ಳಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೂ ಪೋಷಕರು ಆದ್ಯತೆ ನೀಡಬೇಕೆಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾಪ್ರಾಚಾರ್ಯರು ಹಾಗೂ ಸಿನಿಮಾ ನಟಿ ಡಾ.ಪವಿತ್ರ ಹೇಳಿದರು. ಸೋಮವಾರಪೇಟೆಯ ಯಶೋದೆ ರಂಗ ಟ್ರಸ್ಟ್ ಆಶ್ರಯದಲ್ಲಿ ಸಾಂದೀಪನಿ ಪ್ರೌಢ ಶಾಲೆ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ಕಳೆದ ಇಪ್ಪತ್ತು ದಿನಗಳು ನಡೆದ ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇಂದು ಪೋಷಕರು ತಮ್ಮ ಮಕ್ಕಳು ಹೆಚ್ಚಿನ ಅಂಕಗಳಿಸಬೇಕು, ರ್ಯಾಂಕ್ ಬರಬೇಕು ಎಂದು ಆಶಿಸುತ್ತಾರೆ. ಆದರೆ ಅವರ ಮಾನಸಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಗಮನವೇ ಹರಿಸುವುದಿಲ್ಲ ಎಂದು ವಿಷಾದಿಸಿದರು. ನಿಮ್ಮ ಮಕ್ಕಳ ಅಂಕಗಳು ಅಂಕಪಟ್ಟಿಯಲ್ಲಿ ಕಂಡರೆ ಅವರ ಪಠ್ಯೇತರ ಚಟುವಟಿಕೆ ಅವರ ಮುಂದಿನ ಜೀವನದಲ್ಲಿ ಕಾಣಬಹುದು ಎಂದರು. ಅವರ ಚಟುವಟಿಕೆಗಳು ಕೇವಲ ಬೇಸಿಗೆ ಶಿಬಿರಕ್ಕೆ ಮೀಸಲಾಗದೆ ಅವರಿಗೆ ನಿತ್ಯವೂ ಪ್ರೋತ್ಸಾಹಿಸಿ ಎಂದರು. ನಾವು ದ್ರಾವಿಡ ಕನ್ನಡಿಗರು ಸಂಸ್ಥೆಯ ಮುಖ್ಯಸ್ಥ ಅಭಿಗೌಡ ಮಾತನಾಡಿ, ಇಂದಿನ ಒತ್ತಡದ ಶಿಕ್ಷಣದ ನಡುವೆ ಮಕ್ಕಳ…
ಮಡಿಕೇರಿ ಮೇ 4 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಪರ ನಗರದ ವಿವಿಧೆಡೆ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು. ನಗರದ ಬೂತ್ ನಂಬರ್ 210 ರಲ್ಲಿ ಬೂತ್ ಅಧ್ಯಕ್ಷ ಶಾ ಹಾಗೂ ಮಡಿಕೇರಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರೌವೂಫ್ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಮಂತರ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಎಂ.ಎನ್.ರೌವೂಫ್ ಮಡಿಕೇರಿ ಕ್ಷೇತ್ರದ ಜನತೆ ಮಂತರ್ ಗೌಡ ಅವರ ಒಲವು ತೋರುತ್ತಿದ್ದು, ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಐಸಿಸಿ ಕೊಡಗು ವೀಕ್ಷಕರಾದ ಹಸೀನ ಬಾನು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಬೂತ್ ಬಿ ಎಲ್ ಎ ಹಾಗೂ ಸೇವಾದಳದ ಪ್ರಮುಖರಾದ ಹಬೀಬ್, ಮಡಿಕೇರಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಯಶ್ ದೋಳ್ಪಾಡಿ, ಮಾಜಿ ಉಪಾಧ್ಯಕ್ಷ ಮೋಹನ್, ಬ್ಲಾಕಿನ ಪ್ರಮುಖರಾದ ಸುಹೇಲ್, ಯೂನುಸ್, ರಿಯಾಜ್, ಅಲ್ಪಸಂಖ್ಯಾತ ಘಟಕದ…






