ಲೇಖಕ: admin

ಮಡಿಕೇರಿ ಮಾ.24 :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿರುವ “ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ”ವನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.

Read More

ಮಡಿಕೇರಿ ಮಾ.24 :  ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ  ವತಿಯಿಂದ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯಗಳಿಕೆ ತರಬೇತಿ ಯೋಜನೆಯಡಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ವಿರಾಜಪೇಟೆಯ ಶಿವಕೇರಿಯ 30 ಪಲಾನುಭವಿಗಳಿಗೆ ಸಂಸದ ಪ್ರತಾಪ್ ಸಿಂಹ ಪ್ರಮಾಣಪತ್ರ, ರೂ.6000 ವಿದ್ಯಾರ್ಥಿವೇತನ ಮತ್ತು ಹೊಲಿಗೆ ಯಂತ್ರವನ್ನು ವಿತರಿಸಿ ಶುಭಕೋರಿದರು. ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಅಧಿಕಾರಿಗಳು ಹಾಜರಿದ್ದರು.

Read More

ನಾಪೋಕ್ಲು ಮಾ.24 : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಪಾಲೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಿ ಭಕ್ತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಪಂಚಲಿಂಗೇಶ್ವರ ದೇವಾಲಯದ ಆವರಣದಲ್ಲಿ ರೂ.55 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಉದ್ಘಾಟಿಸಿ ಮಾತನಾಡಿದರು. ದೇವಾಲಯದ ತಡೆಗೋಡೆ ಕುಸಿದಿದ್ದು, ಸಾರ್ವಜನಿಕರಿಂದ ತಡೆಗೋಡೆ ನಿರ್ಮಿಸಬೇಕೆಂದು ಮನವಿ ಬಂದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಮುಖಾಂತರ 55 ಲಕ್ಷ ರೂ.ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ ಎಂದರು. ಬೆಟ್ಟಗೇರಿ ಗ್ರಾ.ಪಂ ಅಧ್ಯಕ್ಷ ನಾಪಂಡ ರ‍್ಯಾಲಿ (ryali) ಮಾದಯ್ಯ ಮಾತನಾಡಿ ಕಾಮಗಾರಿಯ ಮಾಹಿತಿಯನ್ನು ನೀಡಿದರು. ಇದಕ್ಕೂ ಮುನ್ನ ಅರ್ವತ್ತೋಕ್ಲು ಗ್ರಾಮ ವ್ಯಾಪ್ತಿಯಲ್ಲಿ 2.15 ಕೋಟಿ ರೂ.ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಚಾಲನೆ ನೀಡಿದರು. ಈ ಸಂದರ್ಭ ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಎಡಿಕೇರಿ ವಾಸುದೇವ್, ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ಎ ರಾಮಣ್ಣ, ಎಡಿಕೇರಿ ಪ್ರವೀಣ, ಕಾಫಿ ಮಂಡಳಿ ಮಾಜಿ ಅಧಿಕಾರಿ ಅಚ್ಚುಡ ಅನಂತ್…

Read More

ಮಡಿಕೇರಿ ಮಾ.24 : ಇಬ್ನಿವಳವಾಡಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕೋತ್ಸವ ಮಾ.25 ರಂದು ನಡೆಯಲಿದೆ. ಮುಂಜಾನೆಯಿಂದಲೇ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ 1.30 ಗಂಟೆಗೆ ಕೊಡಿಯಾಟ್, 2 ಗಂಟೆಗೆ ಆಂಗೋಲ ಪೋಂಗೊಲ, ಪೀಲಿ ಆಟ್, ಕೊಂಬಾಟ್ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಲಿದೆ.  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.

Read More

ನಾಪೋಕ್ಲು  ಮಾ.24 :  ಶಾಲೆಯ ಬೀಗ ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೋಜು ಮಸ್ತಿ ಮಾಡಿ  ಪರಾರಿಯಾಗಿರುವ ಘಟನೆ ನಾಪೋಕ್ಲುವಿನಲ್ಲಿ  ನಡೆದಿದೆ. ನಾಪೋಕ್ಲು ಹಳೇ ತಾಲ್ಲೂಕು ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಪ್ರಾಥಮಿಕ ಪಬ್ಲಿಕ್ ಶಾಲೆಯ ಕೊಠಡಿಯ ಬೀಗ ಹೊಡೆದು ಒಳನುಗ್ಗಿದ ಕಿಡಿಗೇಡಿಗಳು ಅನೈತಿಕ ಚಟುವಟಿಕೆ ಅನೈತಿಕ ಚಟುವಟಿಕೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಶಾಲೆಗೆ ಬಂದಾಗ ಶಾಲೆಯ ಒಳಾಂಗಣದ ಕೊಠಡಿಯ ಬೀಗ ಹೊಡೆದಿರುವುದು ಗೋಚರಿಸಿದೆ. ಈ ಬಗ್ಗೆ ಮಕ್ಕಳು ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಶಿಕ್ಷಕರು ಪರಿಶೀಲಿಸಿದಾಗ ಶಾಲೆಯ ಮೇಲ್ಚಾವಣಿಯಲ್ಲಿ ಮಹಿಳೆ ಮತ್ತು ಗಂಡಸರ ಬಟ್ಟೆಗಳು ಹಾಗೂ  ಸಿಗರೇಟ್ ತುಂಡುಗಳು ಪತ್ತೆಯಾಗಿದೆ. ಘಟನೆ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ, ಶಾಲೆಯ ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎನ್. ಎಸ್. ಶಿವಣ್ಣ, ಆಡಳಿತ ಮಂಡಳಿ ಸದಸ್ಯ…

Read More

ಮಡಿಕೇರಿ ಮಾ.23 : ರಾಷ್ಟ್ರ ರಕ್ಷಣೆಗಾಗಿ ಶತ್ರುವಿನ ಗುಂಡಿಗೆ ಮೊದಲು ಎದೆಯೊಡ್ಡುವ ಗಡಿಭದ್ರತಾ ಪಡೆ ಸಿಬ್ಬಂದಿಗಳು ನಿವೃತ್ತರಾದ ಬಳಿಕ ಅವರಿಗೆ ಮೂಲಭೂತ ಸೌಲಭ್ಯಗಳು ದೊರಕುತ್ತಿಲ್ಲ. ಈ ಬಗ್ಗೆ ಸರ್ಕಾರಗಳು ಸೂಕ್ತ ಸ್ಪಂದನವನ್ನು ನೀಡುತ್ತಿಲ್ಲವೆನ್ನುವ ಅಸಮಾಧಾನ ಅರೆ ಸೇನಾ ಪಡೆಯ ನಿವೃತ್ತ ಯೋಧರ ಸಮಾವೇಶದಲ್ಲಿ ವ್ಯಕ್ತವಾಯಿತು. ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರ ಸಭಾಂಗಣದಲ್ಲಿ ನಡೆದ ಸಮಾವೇಶವನ್ನು ಸಮಾಜ ಸೇವಕ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕೊಡಗು ನಿವೃತ್ತ ಅರೆ- ಮಿಲಿಟರಿ ಸಂಘದ ಅಧ್ಯಕ್ಷ ಪುಲಿಯಂಡ ಚಂಗಪ್ಪ ಅವರು, ನಿವೃತ್ತ ಅರೆ ಮಿಲಿಟರಿ ಯೋಧರ ಜ್ವಲಂತ ಸಮಸ್ಯೆಗಳ ಕುರಿತು ಅತಿಥಿಗಳಿಗೆ ಮಾಹಿತಿ ಒದಗಿಸಿದರು. ಅರೆಸೇನಾ ಪಡೆಯ ಮಾಜಿ ಯೋಧ ನೂರೇರ ಭೀಮಯ್ಯ ಮಾತನಾಡಿ, ದೇಶದ ಸೇನಾ ಪಡೆ ಮತ್ತು ಅರೆಸೇನಾ ಪಡೆ ಒಂದೇ ಎಂಬ ಭಾವನೆ ಜನತೆಯಲ್ಲಿದೆ. ಈ ಹಿಂದೆ ಸಂಘದ ದಶಮಾನೋತ್ಸವದ ಸಂದರ್ಭ ನಮ್ಮ ಅಹವಾಲುಗಳನ್ನು ಕೊಡಗಿನ ಹಾಲಿ ಶಾಸಕರಿಗೆ ನೀಡಲಾಗಿದ್ದರು ಸೂಕ್ತ ಸ್ಪಂದನ ದೊರಕಿಲ್ಲವೆಂದು ತಮ್ಮ…

Read More

ಮಡಿಕೇರಿ ಮಾ.23 : ಅನುಪಯುಕ್ತ ರಾಸಾಯನಿಕದ ಸರಕುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಗ್ನಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕೊಯಮತ್ತೂರಿನಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿದ್ದ ಲಾರಿ ಬುಧವಾರ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ. ಲಾರಿಯ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಚಾಲಕ ತಕ್ಷಣ ಕುಶಾಲನಗರದ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಲಾರಿಯಲ್ಲಿದ್ದ ದಾಖಲೆಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೊರಬಂದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ತಕ್ಷಣ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ತಂಡಕ್ಕೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿ ರಾಸಾಯನಿಕ ವಸ್ತುಗಳಿಗೆ ತಗುಲಿ ಅಪಾಯಕಾರಿ ಪರಿಸ್ಥಿತಿ ಸೃಷ್ಟಿಯಾಯಿತು. ಸ್ಥಳೀಯ ಅಧಿಕಾರಿಗಳ ಕೋರಿಕೆ ಮೇರೆಗೆ ಪಿರಿಯಾಪಟ್ಟಣ ಭಾಗದಿಂದ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳ ತಂಡ ಬೆಂಕಿ ಶಮನಗೊಳಿಸಲು ಪ್ರಯತ್ನಿಸಿದರು. ಮುಂಜಾನೆ 5 ಗಂಟೆಯವರೆಗೆ ಎರಡು ಅಗ್ನಿಶಾಮಕ ವಾಹನಗಳ ಸಹಕಾರದಿಂದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪೊಲೀಸರು ಸ್ಥಳದಲ್ಲಿದ್ದು ಹೆದ್ದಾರಿ ವಾಹನ ಸಂಚಾರ…

Read More

ಮಡಿಕೇರಿ ಮಾ.23 : ಕುಶಾಲನಗರ, ಶನಿವಾರಸಂತೆ ಹೋಬಳಿ ಮುಳ್ಳೂರು ಗ್ರಾಮದ ಎಸ್.ದರ್ಶನ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ. ಪ್ರೊ. ಎಂ ಜಯಶಂಕರ್ ಅವರ ಮಾರ್ಗದರ್ಶನದಲ್ಲಿ ದರ್ಶನ್ ಅವರು ಮಂಡಿಸಿದ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿ ಎಚ್ ಡಿ ಪದವಿ ನೀಡಲಾಗಿದೆ.  ಮಾರ್ಚ್ 15 ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ  ಪದವಿ ಪ್ರಧಾನ ಮಾಡಲಾಯಿತು.  ದರ್ಶನ್ ಅವರು ಮುಳ್ಳೂರು ಗ್ರಾಮದ ಕೆ.ವಿ ಜಾತು ಮತ್ತು ದಿ.ತಂಗಮ್ಮ ಅವರ ಸೊಸೆಯಾಗಿದ್ದು ಕುಶಾಲನಗರ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಎಂ ಸಿ ಉದಯಕುಮಾರ್ ಅವರ ಪತ್ನಿಯಾಗಿದ್ದಾರೆ.

Read More

ಮಡಿಕೇರಿ ಮಾ.23 : ಫಲಾನುಭವಿಗಳ ಸಮಾವೇಶದ ಹೆಸರಿನಲ್ಲಿ ಮುಖ್ಯಮಂತ್ರಿಗಳ ಕೊಡಗು ಜಿಲ್ಲಾ ಭೇಟಿ ನಿರಾಶಾದಾಯಕವಾಗಿತ್ತು ಮತ್ತು ಜನಸಾಮಾನ್ಯರ ಹಲವು ನಿರೀಕ್ಷೆಗಳನ್ನು ಹುಸಿ ಮಾಡಿದ ಭೇಟಿ ಇದಾಗಿತ್ತು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ತಾ.ಪಂ ಮಾಜಿ ಸದಸ್ಯ ಕೆ.ಐ.ಮಹಮ್ಮದ್ ರಫೀಕ್ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಚುನಾವಣೆ ಘೋಷಣೆಗೆ ಒಂದೆರಡು ವಾರ ಇರುವಾಗ ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಗಳಿಗೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ಮಾಡಿದ್ದಾರೆ. ನೀತಿ ಸಂಹಿತೆಯ ನಂತರ ಯಾವುದೇ ಕಾಮಗಾರಿ ನಡೆಯುವುದಿಲ್ಲವೆಂದು ತಿಳಿದಿದ್ದರೂ ಜನರ ಕಣ್ಣಿಗೆ ಮಣ್ಣೆರಚುವ ತಂತ್ರಗಾರಿಕೆಯನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ರೀತಿಯ ಭೇಟಿ, ಶಂಕುಸ್ಥಾಪನೆಗಳಿoದ ಕೊಡಗು ಜಿಲ್ಲೆಗೆ ಯಾವುದೇ ಲಾಭವಿಲ್ಲ. ಬಜೆಟ್ ನಲ್ಲಿ ಕೊಡಗಿನ ರಸ್ತೆಗಳ ಅಭಿವೃದ್ಧಿಗೆಂದು 100 ಕೋಟಿ ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಆದರೆ ಇನ್ನೆರಡು ತಿಂಗಳುಗಳಲ್ಲಿ ಮತ್ತೆ ಮಳೆಗಾಲ ಆರಂಭವಾಗುತ್ತದೆ. ಈ ಬಾರಿಯ ಮಳೆಗೆ ಇನ್ನೆಷ್ಟು ನಷ್ಟ ಸಂಭವಿಸುತ್ತದೋ ತಿಳಿದಿಲ್ಲ. ಕೇವಲ 100…

Read More

ಮಡಿಕೇರಿ ಮಾ.23 : ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ವಿರಾಜಪೇಟೆ ತಾಲ್ಲೂಕಿನ 21 ಸಾವಿರ ಮನೆಗಳಿಗೆ ಏಕ ಕಾಲದಲ್ಲಿ ಕುಡಿಯುವ ನೀರಿನ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಬಾಳುಗೋಡುವಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಲಾಗಿರುವ ಕುಡಿಯುವ ನೀರು ಸರಬರಾಜು ಟ್ಯಾಂಕ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಕೇಂದ್ರದಲ್ಲಿದ್ದ ಸರ್ಕಾರ ಐದು ವರ್ಷಕೊಮ್ಮೆ ಒಂದು ವಿಧಾನಸಭಾ ಕ್ಷೇತ್ರದ 3 ಅಥವಾ 4 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ನೀಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಒಂದು ತಾಲ್ಲೂಕಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಏಕಕಾಲಕ್ಕೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕವನ್ನು ನೀಡುತ್ತಿದೆ ಎಂದರು. ಈಗಾಗಲೇ ಒಂದೇ ಬಾರಿಗೆ 303 ಗ್ರಾಮಗಳಲ್ಲಿ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗ ಮತ್ತಷ್ಟು ಅಭಿವೃದ್ಧಿ ಹೊಂದಲಿದ್ದು, ಜನರ ಆಶೀರ್ವಾದ…

Read More