ಲೇಖಕ: admin

ಸೋಮವಾರಪೇಟೆ ಮೇ 2 : ಯಾವುದೇ ದೇಶದ್ರೋಹ ಪ್ರಕರಣದಲ್ಲಿ ಭಾಗಿಯಾಗದೇ, ಹಿಂದೂಗಳ ರಕ್ಷಣೆ ಹಾಗೂ ಏಳಿಗೆಗೆ ಶ್ರಮಿಸುತ್ತಿರುವ ಭಜರಂಗದಳವನ್ನು ನಿಷೇಧ ಮಾಡುತ್ತೇವೆಂದು ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ಕಾಂಗ್ರೆಸ್ ಪಕ್ಷದ ಕ್ರಮ ಖಂಡನೀಯವೆoದು ಭಜರಂಗದಳದ ಸೋಮವಾರಪೇಟೆ ತಾಲ್ಲೂಕು ಸಂಚಾಲಕ ಜೀವನ್ ನೇಗಳ್ಳೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಮಮಂದಿರ ನಿರ್ಮಾಣದ ಸಂದರ್ಭ ಮುಂಚೂಣಿಯಲ್ಲಿದ್ದ ಭಜರಂಗದಳ ರಾಷ್ಟ್ರದ 60ಸಾವಿರ ಹಳ್ಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಗೋಹತ್ಯೆ ನಿಷೇಧ, ಮತಾಂತರ, ಲವ್‌ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ದೇಶಭಕ್ತ ಸಂಘಟನೆಯನ್ನು ನಿಷೇಧಿಸುವುದಾಗಿ ಹೇಳಿರುವ ಕಾಂಗ್ರೆಸ್ ನ್ನು ಸೋಲಿಸಿ ಹಿಂದೂಗಳ ಪರವಾಗಿರುವ ಪಕ್ಷವನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಕೊಡಗಿನಲ್ಲಿ ಪ್ರಕೃತಿವಿಕೋಪ ಸಂಭವಿಸಿದ ಸಂದರ್ಭ ಭಜರಂಗದಳ ಕಾರ್ಯಕರ್ತರು ಜೀವದ ಹಂಗುತೊರೆದು ಸಂಕಷ್ಟದಲ್ಲಿದ್ದ ಸಂತ್ರಸ್ತರನ್ನು ರಕ್ಷಣೆ ಮಾಡಿದ್ದಾರೆ. ಕೋವಿಡ್ ಸಂದರ್ಭ ಮೃತರೋಗಿಗಳ ಶವಸಂಸ್ಕಾರ ಮಾಡಿದ್ದಾರೆ. ನಿರಂತರ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಘಟನೆಯನ್ನು ನಿಷೇಧ ಮಾಡಲು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲವೆಂದರು. ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ಭಜರಂಗದಳ…

Read More

ಸೋಮವಾರಪೇಟೆ ಮೇ 2: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಬದಲಾಯಿಸಲು ಸಂಚು ರೂಪಿಸುವ ಕೋಮುವಾದಿ ಪಕ್ಷಗಳನ್ನು ತಿರಸ್ಕರಿಸುವಂತೆ ದಲಿತ ಸಂಘರ್ಷ ಸಮಿತಿಗಳ ಐಕ್ಯಹೋರಾಟ ಚಾಲನಾ ಸಮಿತಿಯ ಜಿಲ್ಲಾ ಘಟಕ ಮನವಿ ಮಾಡಿದೆ. ರಾಜ್ಯದಲ್ಲಿ ಜಾತ್ಯಾತೀತ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂಬ ಸದುದ್ದೇಶದಿಂದ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತದ ಅಭ್ಯರ್ಥಿ ಡಾ.ಮಂಥರ್‌ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯವನ್ನು ಕಾಪಾಡಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ಬಿಜೆಪಿ ನೇತೃತ್ವದ ಸರ್ಕಾರ ಇಡೀ ದೇಶದ ಸರ್ಕಾರಿ ಸಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡಲು ಮುಂದಾಗಿದೆ. ದಲಿತ, ಹಿಂದುಳಿದ ವರ್ಗ, ಕಡು ಬಡವರು ಹಾಗೂ ಅಲ್ಪಸಂಖ್ಯಾತರಿಗಿದ್ದ ಮೀಸಲಾತಿಯನ್ನು ನಾಶ ಮಾಡುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಎಲ್ಲಾ ದಲಿತ ಸಂಘಟನೆಗಳನ್ನು ಒಟ್ಟಿಗೆ ಸೇರಿಸಿ ಕಟ್ಟಿರುವ ಐಕ್ಯ ಹೋರಾಟ ಸಮಿತಿ ಕೊಡಗು ಜಿಲ್ಲೆಯಲ್ಲಿ…

Read More

ಮಡಿಕೇರಿ ಮೇ 2 : ವಿಧಾನಸಭಾ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸುವ ಕುರಿತು ಉಲ್ಲೇಖಿಸಿರುವುದು ಹಿಂದೂಗಳಿಗೆ ಮಾಡಿದ ಅವಮಾನ ಮತ್ತು ಈ ಪ್ರಸ್ತಾಪ ಖಂಡನೀಯವೆoದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಮಾತೃಶಕ್ತಿ ದುರ್ಗವಾಹಿನಿಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ದೇಶಭಕ್ತ ಸಂಘಟನೆಯಾಗಿರುವ ಭಜರಂಗದಳ ದೇಶದ 60 ಸಾವಿರ ಗ್ರಾಮಗಳಲ್ಲಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿದೆ. ದೇಶಭಕ್ತ ಸಂಘಟನೆಯೊoದನ್ನು ದೇಶವಿರೋಧಿ ಸಂಘಟನೆಯ ಜೊತೆ ತುಲನೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ತಿಳಿಸಿದ್ದಾರೆ. ಶ್ರೀರಾಮ ಮಂದಿರ ಹೋರಾಟದಿಂದ ಹಿಡಿದು ಹಿಂದೂ ಶ್ರದ್ಧಾಕೇಂದ್ರಗಳ ರಕ್ಷಣೆ, ಗೋರಕ್ಷಣೆ, ಲವ್ ಜಿಹಾದ್ ಗೆ ಬಲಿಯಾದ ಹೆಣ್ಣುಮಕ್ಕಳ ರಕ್ಷಣೆ ಮತ್ತು ಆರೈಕೆಯನ್ನು ಭಜರಂಗದಳ ಮಾಡಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ದೇಶಕ್ಕೆ ದೇಶವೇ ತತ್ತರಿಸಿ ತನ್ನವರ ಅಂತ್ಯ ಸಂಸ್ಕಾರಕ್ಕೆ ಸಂಬoಧಿಕರೇ ಭಯಪಡುವಂತಹ…

Read More

ಮಡಿಕೇರಿ ಮೇ 2 : ಸಾರ್ವಜನಿಕರು ಪಾವತಿಸಿದ ತೆರಿಗೆ ಹಣ ಭ್ರಷ್ಟ ವ್ಯವಸ್ಥೆಯ ಪರಿಣಾಮ ಪೋಲಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಕುಂಟಿತಗೊಳ್ಳುತ್ತಿದೆ. ಇದೇ ಕಾರಣಕ್ಕೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕೆನ್ನುವ ಉದ್ದೇಶದಿಂದ ನಾನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮತದಾರರು ವಿಶ್ವಾಸವಿಟ್ಟು ಮತ ನೀಡುವ ಮೂಲಕ ಜನಸೇವೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಶ್ರೀಕೃಷ್ಣ ಗೋಶಾಲೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಗೆದ್ದು ಬಂದರೆ ಅಥವಾ ಸೋತರೂ ಕೊಡಗು ಜಿಲ್ಲೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳನ್ನು ರಚಿಸಲು ಹೋರಾಟ ಮಾಡುವುದಾಗಿ ತಿಳಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿ ಕೂಡ ಹಣವಿಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಮತ್ತು ಯಾವ ರೀತಿ ಅಭಿವೃದ್ಧಿ ಕಾರ್ಯ ಮಾಡಬಹುದು ಎನ್ನುವುದನ್ನು ಸಾಬೀತು ಪಡಿಸಲು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ಜನಬೆಂಬಲ ಪ್ರಾಮಾಣಿಕರ ಪರ ಇರಲಿದೆ ಎನ್ನುವ ವಿಶ್ವಾಸವಿದೆ ಎಂದರು. 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಅನಾಥವಾಗಿ ಅಲೆದಾಡುತ್ತಿದ್ದ ಗೋವುಗಳಿಗೆ ಆಶ್ರಯ ನೀಡುವ…

Read More

ಮಡಿಕೇರಿ ಮೇ 2 : ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿoದ ಗೆಲುವು ಸಾಧಿಸಲು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮ ವಹಿಸಬೇಕೆಂದು ವಿಧಾನ ಪರಿಷತ್ ನ ವಿರೋಧ ಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕರೆ ನೀಡಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮತ್ತು ವಲಯ ಮಟ್ಟದ ಚುನಾವಣಾ ಕಾರ್ಯಾಗಾರ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಹರಿಪ್ರಸಾದ್, ಬೂತ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿನ ರುವಾರಿಗಳಾಗಿದ್ದು, ಮೇ 10 ರವರೆಗೆ ನಿರಂತರ ಜನ ಸಂಪರ್ಕದಲ್ಲಿರುವoತೆ ಕಿವಿಮಾತು ಹೇಳಿದರು. ವಿದ್ಯಾವಂತ ಹಾಗೂ ಪ್ರಜ್ಞಾವಂತ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಇವರುಗಳ ಗೆಲುವು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ಕಾAಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸುಜು ತಿಮ್ಮಯ್ಯ ಮಾತನಾಡಿ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಒಗ್ಗಟ್ಟಿನಿಂದ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು. ಬ್ಲಾಕ್ ಪ್ರಚಾರ…

Read More

ಮಡಿಕೇರಿ ಮೇ 2 : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ವಿ.ಜೆ.ಮೋಹನ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎನ್.ರೌವೂಫ್, ಕಾರ್ಯದರ್ಶಿಗಳಾಗಿ ಇಬ್ರಾಹಿಂ ಮಡಿಕೇರಿ, ಹಮೀದ್ ಕಡಗದಾಳು, ಕಾರ್ಯಕಾರಿಣಿ ಸದಸ್ಯರಾಗಿ ಸ್ವರ್ಣಲತಾ ಹಾಗೂ ಸುಭಾಶ್ ಆಳ್ವ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 2 : ಆಮ್ ಆದ್ಮಿ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಕೆ.ಪಿ.ಬೋಪಣ್ಣ ಪರವಾಗಿ ಮಕ್ಕಂದೂರು, ಸೋಮವಾರಪೇಟೆಯ ವಿವಿಧೆಡೆ ಬಿರುಸಿನ ಪ್ರಚಾರ ನಡೆಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಟ್ಟಿಹೂಳೆ, ಮಾದಾಪುರ, ಕುಂಬೂರು, ಐಗೂರು, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಕಡೆಗಳಲ್ಲಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಅಭ್ಯರ್ಥಿ ಕೆ.ಪಿ.ಬೋಪಣ್ಣ, ಎಎಪಿ ಪಕ್ಷದಿಂದ ಜಿಲ್ಲೆಯ ಉದ್ದ ಅಗಲಕ್ಕೂ ಒಂದು ಸುತ್ತಿನ ಪ್ರಚಾರ ಕಾರ್ಯ ಮುಗಿದಿದ್ದು, ಬಾರಿ ಜನ ಬೆಂಬಲ ವ್ಯಕ್ತವಾಗಿದೆ ಹಾಗೂ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಪ್ರಮುಖರಾದ ಮುರಳಿ, ಕಲ್ಯಾಣಿ, ಶಿಲ್ಪ ಬೋಪಣ್ಣ, ಥೋಮಸ್ ಮತ್ತು ಇತರರು ಹಾಜರಿದ್ದರು.

Read More

ಮಡಿಕೇರಿ ಮೇ 2 : ಜಿಲ್ಲಾಡಳಿತ, ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮೇ, 6 ರಂದು ಸಂಜೆ 6.30 ಗಂಟೆಗೆ ಕುಶಾಲನಗರದ ಗಣಪತಿ ದೇವಸ್ಥಾನದಿಂದ ‘ಕ್ಯಾಂಡಲ್ ದೀಪದೊಂದಿಗೆ’ ಜಾಥ ನಡೆಯಲಿದೆ. ಗಣಪತಿ ದೇವಸ್ಥಾನದಿಂದ ಟೌನ್ ಕಾಲೋನಿ ಮತ್ತು ರಥ ಬೀದಿ ಮೂಲಕ ಬಸ್ ನಿಲ್ದಾಣಕ್ಕೆ ಜಾಥ ತಲುಪಲಿದೆ. ಜಾಥದಲ್ಲಿ ಪಾಲ್ಗೊಳ್ಳುವವರು ಕ್ಯಾಂಡಲ್ ಅಥವಾ ಮಣ್ಣಿನ ದೀಪವನ್ನು ತೆಗೆದುಕೊಂಡು ಬರಬೇಕು. ಜಾಥಾದಲ್ಲಿ ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 2 : ನಿವೇಶನದ ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಕಾನ್ಶಿರಾಂ ನಗರದ ನಿವಾಸಿಗಳು ಕಳೆದ 36 ದಿನಗಳಿಂದ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಸೂಕ್ತ ಭರವಸೆ ನೀಡಿರುವ ಹಿನ್ನೆಲೆ ಧರಣಿಯಿಂದ ಹಿಂದೆ ಸರಿದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಅವರ ಸಲಹೆಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ಗ್ರಾ.ಪಂ ಅಧ್ಯಕ್ಷರಾದ ಕುಸುಮಾವತಿ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಮೊಣ್ಣಪ್ಪ ಅವರುಗಳು ಸ್ಥಳಕ್ಕೆ ಭೇಟಿ ನೀಡಿ ಧರಣಿ ನಿರತರೊಂದಿಗೆ ಸಮಾಲೋಚಿಸಿದರು. ಚುನಾವಣೆ ಬಳಿಕ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಚುನಾವಣಾ ಬಹಿಷ್ಕಾರದ ನಿರ್ಧಾರ ಕೈಬಿಡುವಂತೆ ಮನವೊಲಿಸಿದರು. ಧರಣಿ ನಿರತರು ಮಾತನಾಡಿ ಕಳೆದ 36 ದಿನಗಳಿಂದ 260…

Read More

ಮಡಿಕೇರಿ ಮೇ 2 : ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮೇ, 05 ರಂದು ಮಡಿಕೇರಿ ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ಜಾಥ ನಡೆಯಲಿದೆ ಎಂದು ಜಿ.ಪಂ.ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಮೇ, 05 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ನಗರದ ಎ.ವಿ.ಶಾಲೆ ಬಳಿಯಿಂದ ಮತದಾನದ ಮಹತ್ವ ಸಾರುವ ಸಂದೇಶದೊಂದಿಗೆ ಜಾಥ ಆರಂಭವಾಗಲಿದೆ. ಮಡಿಕೇರಿ ಮಾರುಕಟ್ಟೆ, ಮಹದೇವಪೇಟೆಗಾಗಿ ಸಾಗಿ ಹಳೆ ಬಸ್ ನಿಲ್ದಾಣದಲ್ಲಿ ಜಾಥ ಸಮಾಪನಗೊಳ್ಳಲಿದೆ. ಈ ಜಾಥಾದಲ್ಲಿ ಎಲ್ಲಾ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಜಾಥವನ್ನು ಯಶಸ್ವಿಗೊಳಿಸುವಂತೆ ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಕೋರಿದ್ದಾರೆ.

Read More