ಸುಂಟಿಕೊಪ್ಪ ಮಾ.23: ಸುಂಟಿಕೊಪ್ಪ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಅನೂಫ್ ವಿಜಯನ್ ಆಯ್ಕೆಯಾಗಿದ್ದಾರೆ. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ಸುಂಟಿಕೊಪ್ಪ ಕಾಂಗ್ರೆಸ್ ಹಿರಿಯ ಮುಖಂಡರ ಸೂಚನೆ ಮೇರೆಗೆ ಅನೂಪ್ ವಿಜಯನ್ ಅವರನ್ನು ನೇಮಕಗೊಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮಾ.23 : ತಮ್ಮ ಅಧಿಕಾರದ ಅವಧಿಯಲ್ಲಿ ವಿವಿಧ ಭಾಗ್ಯಗಳನ್ನು ನೀಡಿದ್ದೇನೆ ಎನ್ನುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೆ, ಚುನಾವಣಾ ಹೊಸ್ತಿಲಲ್ಲಿ ಇರುವಾಗಲು ‘ಕ್ಷೇತ್ರ ಭಾಗ್ಯ’ವೇ ಇಲ್ಲದಂತ್ತಾಗಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನುವ ದಯನೀಯ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಇವರು ನೀಡಿರುವ ವಿವಿಧ ಭಾಗ್ಯಗಳಿಗೆ ಜನತೆ ಬೆಲೆ ನೀಡಿಲ್ಲ ಮತ್ತು ಅವರ ಬಗ್ಗೆ ವಿಶ್ವಾಸವೂ ಜನರಿಗಿಲ್ಲವೆಂದು ಟೀಕಿಸಿದರು. ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಅವರು ಕೊನೆಗೆ ‘ವರುಣಾ ಕ್ಷೇತ್ರ’ಕ್ಕೆ ಬರಲಿದ್ದಾರೆ. ಜನತೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ನ ಭರವಸೆಗಳನ್ನು ನಂಬಿ ಮಂಗಗಳಾಗಬೇಡಿ, ಉತ್ತರ ಕರ್ನಾಟಕದ ಜನತೆ ಮಂಗ್ಯಗಳಾಗಬೇಡಿ, ಇದು ಟೋಪಿ ಹಾಕುವ ಕಾರ್ಯಕ್ರಮ ಎಂದು ಆರೋಪಿಸಿದರು. ಚುನಾವಣಾ ಹಂತದಲ್ಲಿ ಉಚಿತವಾಗಿ ಏನನ್ನೇ ಕೊಡುತ್ತೇವೆ ಎಂದರೂ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಬಿಜೆಪಿಯನ್ನೂ ನಂಬಬೇಡಿ ಎಂದು ಖಡಕ್ ಆಗಿ ನುಡಿದ ಪ್ರತಾಪ ಸಿಂಹ, ಪಂಜಾಬ್ನಲ್ಲಿ ಎಎಪಿ…
ಮಡಿಕೇರಿ ಮಾ.23 : ಕಾಫಿ ಬೆಳೆಗಾರರ 10 ಹೆಚ್.ಪಿ.ವರೆಗಿನ ಪಂಪ್ ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಮುಖ್ಯಮಂತ್ರಿಗಳು ಆದೇಶ ಮಾಡಿದ್ದರು ಕೂಡ ಬಾಕಿ ಉಳಿಸಿಕೊಂಡಿರುವ ಬೆಳೆಗಾರರ ಪಂಪ್ ಸೆಟ್ಗಳ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಕಚೇರಿವರೆಗೆ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಚೆಸ್ಕಾಂ ಅಧಿಕಾರಿಗಳು ಮುಖ್ಯಮಂತ್ರಿಗಳ ಆದೇಶವನ್ನೇ ಉಲ್ಲಂಘಿಸುತ್ತಿದ್ದಾರೆ. ಅವರುಗಳು ತಮ್ಮನ್ನೇ ಸೂಪರ್ ಸಿ.ಎಂ. ಎಂದು ಭಾವಿಸಿಕೊಂಡಿದ್ದಾರೆ. ಬಾಕಿ ಉಳಿಸಿಕೊಂಡಿರುವ ಬೆಳೆಗಾರರ ವಿದ್ಯುತ್ ಸಂಪರ್ಕ ಕಡಿತ ಮಾಡಿರುವುದಕ್ಕೆ ಸಂಬಂಧಿಸಿದ ಅಧಿಕಾರಿಗಳು ರೈತರ ಕ್ಷಮೆ ಕೇಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಸುಜೈ ಬೋಪಯ್ಯ, ಲಕ್ಷ್ಮಣ್ ಅವರುಗಳು ಬಾಕಿ ಉಳಿಸಿಕೊಂಡಿರುವ ಬೆಳೆಗಾರರಿಗೂ ಉಚಿತ ವಿದ್ಯುತ್ ನೀಡುವಂತೆ ಮುಖ್ಯಮಂತ್ರಿಗಳು ಮಾ.18ರಂದು…
ಮಡಿಕೇರಿ ಮಾ.23 : ಅತ್ಯಾಧುನಿಕ ತುರ್ತು ಚಿಕಿತ್ಸಾ ವಾಹನಗಳನ್ನು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಹಸ್ತಾಂತರಿಸಿದರು. ನಗರದ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಬಳಿ ಮೂಲಭೂತ ಸೌಲಭ್ಯ ಒಳಗೊಂಡ ತುರ್ತು ಚಿಕಿತ್ಸಾ ವಾಹನ (17 ಲಕ್ಷ ರೂ ವೆಚ್ಚ) ಮತ್ತು ಅಡ್ವಾನ್ಸ್ ಟೆಕ್ನಾಲಜಿ (ಐಸಿಯುನಲ್ಲಿರುವ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ) ಒಳಗೊಂಡಿರುವ 42 ಲಕ್ಷ ರೂ. ಒಟ್ಟು 59 ಲಕ್ಷ ರೂ ವೆಚ್ಚದ ತುರ್ತು ಚಿಕಿತ್ಸಾ ವಾಹನಗಳನ್ನು ವಿರಾಜಪೇಟೆ ಆಸ್ಪತ್ರೆಗೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಹಸ್ತಾಂತರಿಸಿದರು. ಕೋವಿಡ್ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಪ್ರಾಥಮಿಕ ಆಸ್ಪತ್ರೆಗಳಲ್ಲೂ ಸಹ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ಹಂತ ಹಂತವಾಗಿ ಹಲವು ಆರೋಗ್ಯ ಯೋಜನೆಗಳನ್ನು ಕಲ್ಪಿಸಲಾಗುತ್ತಿದೆ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ (ಜಿಲ್ಲಾಸ್ಪತ್ರೆ) ಮಲ್ಟಿ ಸ್ಪೆಷಾಲಿಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ದೊರೆಯುವ ಆರೋಗ್ಯ…
ಮಡಿಕೇರಿ ಮಾ.23 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಭದ್ರತಾ ಕೊಠಡಿ ಮತ್ತು ಮತ ಎಣಿಕೆ ಕೇಂದ್ರಗಳ ಸ್ಥಾಪನೆ ಸಂಬಂಧ ನಗರದ ಸಂತ ಜೋಸೆಫರ ಕಾಲೇಜಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಕ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ನಾಗರಾಜು, ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಸೆಸ್ಕ್ ಎಂಜಿನಿಯರ್ ಸಂಪತ್, ತಹಶೀಲ್ದಾರ್ ಕಿರಣ್, ಸಂತ ಜೋಸೆಫರ ಶಾಲೆಯ ಪ್ರಾಂಶುಪಾಲರು ಇತರರು ಇದ್ದರು.
ಮಡಿಕೇರಿ ಮಾ.23 : ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ಮಾರ್ಚ್, 24 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಿಂದ ಬಾಲಭವನದವರೆಗೆ ಜಾಥಾ ನಡೆಯಲಿದೆ. ಜಾಥಾವನ್ನು ಹಿರಿಯ ಪ್ರಧಾನ ನ್ಯಾಯಾಧೀಶರು ಹಾಗೂ ಜಿಲ್ಲಾಧಿಕಾರಿ ಅವರು ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಬಾಲಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಕ್ಷಯ ರೋಗ ನಿವಾರಣಾ ಕೇಂದ್ರದ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಮಾ.23 : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಅಧಿಕಾರಿಗಳು ಮಾ.27 ರಂದು ಸೋಮವಾರಪೇಟೆ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಮತ್ತು ಮಾ.31 ರಂದು ಮಡಿಕೇರಿ ಸುದರ್ಶನ ಅತಿಥಿ ಗೃಹದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ 1 ಗಂಟೆವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಮಾ.23 : ಐದನೇ ತರಗತಿಗೆ ಮಾ.27 ರಿಂದ 30 ರವರೆಗೆ ಮತ್ತು 8 ನೇ ತರಗತಿಗೆ ಮಾ.27 ರಿಂದ ಏಪ್ರಿಲ್, 01 ರವರೆಗೆ ಮೌಲ್ಯಾಂಕನ ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ. 5 ಮತ್ತು 8 ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ಹೇಳಿದ್ದಾರೆ. 5 ಮತ್ತು 8 ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿದೆ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿ ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಈ…
ಮಡಿಕೇರಿ ಮಾ.23 : ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ 6 ನೇ ವರ್ಷದ ಗೌಡ ಕುಟುಂಬಗಳ ನಡುವಣ ‘ಫುಟ್ಬಾಲ್ ಪಂದ್ಯಾವಳಿ’ ಮತ್ತು ಮರಗೋಡು ವ್ಯಾಪ್ತಿಯ ಗ್ರಾಮಗಳಿಗೆ ಸೀಮಿತವಾಗಿ ವಿವಿಧ ಜನಾಂಗಗಳಿಗೆ ‘ ಯೂನಿಟಿ ಕಪ್ ಫುಟ್ಬಾಲ್’ ಪಂದ್ಯಾವಳಿ ಮೇ6 ರಿಂದ 13ರವರೆಗೆ ನಡೆಯಲಿದೆ. ಸುದ್ದಿ ಗೋಷ್ಠಿಯಲ್ಲಿ ಗೌಡ ಫುಟ್ಬಾಲ್ ಅಕಾಡೆಮಿ ಪದಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಗೌಡ ಸಮುದಾಯಗಳ ನಡುವಿನ 7+3 ಆಟಗಾರರ ಫುಟ್ಬಾಲ್ ಪಂದ್ಯಾವಳಿಯಲ್ಲಿ 80 ಕ್ಕೂ ಹೆಚ್ಚಿನ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು 2 ಸಾವಿರ ರೂ. ಮೈದಾನ ಶುಲ್ಕದೊಂದಿಗೆ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ತಿಳಿಸಿದರು. ಪಂದ್ಯಾವಳಿ ವಿಜೇತ ತಂಡಕ್ಕೆ 60 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ 40 ಸಾವಿರ ರೂ. ಮತ್ತು ಟ್ರೋಫಿ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಿಗೆ ತಲಾ 10 ಸಾವಿರ ರೂ. ನಗದು ಮತ್ತು ಟ್ರೋಫಿಯನ್ನು ಬಹುಮಾನವಾಗಿ…
ಮಡಿಕೇರಿ ಮಾ.23 : ಯುಗಾದಿ ಹಬ್ಬದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ‘ಹಿಂದೂ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿ’ ಮಾ.24 ರಿಂದ 26ರವರೆಗೆ ನಾಪೋಕ್ಲುವಿನಲ್ಲಿ ನಡೆಯಲಿದೆಯೆಂದು ಬಜರಂಗದಳದ ನಾಪೋಕ್ಲು ವಿಭಾಗದ ಸಂಚಾಲಕ ರಾಧಕೃಷ್ಣ ರೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಾಪೋಕ್ಲುವಿನ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆರಂಭಿಕ ದಿನದಂದು ಬೆಳಿಗ್ಗೆ 9.30 ಗಂಟೆಗೆ ಪಂದ್ಯಾವಳಿಗೆ ಚಾಲನೆ ದೊರೆಯಲಿದ್ದು, ವಿ.ಹಿಂ.ಪ. ನಾಪೋಕ್ಲು ಸಂಚಾಲಕ ನಾಟೋಳಂಡ ಸಚಿನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಬಿದ್ದಾಟಂಡ ದಿನೇಶ್, ಹಿರಿಯ ವಕೀಲರು ಹಾಗೂ ಸಮಾಜ ಸೇವಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ವಿ.ಹಿಂ.ಪ. ಬೆಂಗಳೂರು ಪ್ರಮುಖ ಮುನಿಕೃಷ್ಣ, ಸಮಾಜ ಸೇವಕ ಡಾ.ಮಂಥರ್ ಗೌಡ, ಬ್ರೂ ವಿಲ್ಲಾ ಹೋಂ ಸ್ಟೇ ಮಾಲೀಕ ರೋಷನ್, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಉದ್ಯಮಿಗಳಾದ ಬಲ್ಲಂಡ ಗಿರಿ, ಕಂಗಂಡ ಅರುಣ, ನಾಪೋಕ್ಲು ಎಂ.ಪಿ.ಸ್ಟೋರ್ನ ಮಧು ಮೋಹನ, ಕುಶಾಲನಗರ ಆ್ಯಡ್ ಕೂರ್ಗ್ನ ಮಧು, ಗೋ…






