ಲೇಖಕ: admin

ಮಡಿಕೇರಿ ಮೇ 2 : ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರಿಗೆ ಬೆಂಬಲ ಸೂಚಿಸುವುದರಲ್ಲಿ ತಪ್ಪೇನು ಎಂದು ಅವರು ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದು ಸಿದ್ಧಾಂತದ ರಾಜಕಾರಣಕ್ಕೆ ಬೆಲೆ ಇಲ್ಲದಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಕೊಡಗು ಜಿಲ್ಲೆಯವರಿಗೇ ಟಿಕೆಟ್ ನೀಡಬೇಕೆಂದು ನಾನು ಮಾಡಿದ ಮನವಿಗೆ ಕೆಪಿಸಿಸಿ ಸ್ಪಂದನೆ ನೀಡಿಲ್ಲ ಮತ್ತು ನುಡಿದಂತೆ ನಡೆದುಕೊಂಡಿಲ್ಲ. ಆದ್ದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು. ವಿಧಾನಸಭಾ ಚುನಾವಣೆ ಕಳೆದ ನಂತರ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು. ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರು ಬಿಳಿಗೇರಿಯ ದೇವಾಲಯದಲ್ಲಿ ಮುಖಾಮುಖಿಯಾದಾಗ ಎಲ್ಲರನ್ನು ಸಮಾನವಾಗಿ ಕಾಣುವಂತೆ ಮತ್ತು ಸಂವಿಧಾನಕ್ಕೆ ಬದ್ಧರಾಗಿರುವಂತೆ ನಾನು ಸಲಹೆ ನೀಡಿದ್ದೆ. ಇದು ನನ್ನ ಕೊನೆಯ ಚುನಾವಣೆಯಾಗಿರುವುದರಿಂದ ಸಲಹೆಯಂತೆ ನಡೆದುಕೊಳ್ಳುವುದಾಗಿ ಅಪ್ಪಚ್ಚುರಂಜನ್ ಅವರು ಭರವಸೆ ನೀಡಿದ್ದಾರೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಅವರಿಗೆ…

Read More

ಮಡಿಕೇರಿ ಮೇ 2 :  ವಿದ್ಯಾರ್ಥಿಗಳಿಗೆ ಮುಂದಿನ ಜೀವನಕ್ಕೆ ಹೆಚ್ಚು ಪ್ರಯೋಜನವಾಗುವಂತಹ ವಿಚಾರವನ್ನು ಒಳಗೊಂಡ ವಸಂತ ವಿಹಾರ ಶಿಬಿರ  ಪ್ರಶಂಸನಾರ್ಹ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ನುಡಿದರು. ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ವತಿಯಿಂದ ನಡೆದ ವಸಂತ ವಿಹಾರ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಬೇಕಾದಷ್ಟು ಬೇಸಿಗೆ ಶಿಬಿರಗಳು ನಡೆಯುತ್ತಿವೆ ಕೆಲವೆಡೆ ನೃತ್ಯ ಕಲಿಕೆ, ಚಿತ್ರಕಲಾ ಕಲಿಕೆ, ಕರಾಟೆ, ಈಜು, ಕ್ರೀಡೆ ಇವೆಲ್ಲವನ್ನೂ ಒಳಗೊಂಡಂತಹ ಬೇಸಿಗೆ ಶಿಬಿರಗಳು ಎಲ್ಲೆಡೆ ಆಗುತ್ತಿದ್ದರೂ ಮಕ್ಕಳಿಗೆ ಜೀವನದ ಮೌಲ್ಯಶಿಕ್ಷಣ ತರಬೇತಿ ಯೋಗಾಸನ, ಪ್ರಾಣಾಯಾಮ, ಏಕಾಗ್ರತೆಯನ್ನು ಬೆಳೆಸಿಕೊಳ್ಳುವ ವಿಧಾನ, ವ್ಯಕ್ತಿತ್ವ ವಿಕಸನ, ಆಟ, ಪ್ರವಾಸ, ಕ್ರೀಡೆ, ಇವೆಲ್ಲವನ್ನು ಒಳಗೊಂಡಂತಹ ಶಿಬಿರ  ಪ್ರಶಂಸನಾರ್ಹ  ಎಂದರು. ಆಶ್ರಮವು ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ ಜಿಲ್ಲೆಯಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಮತ್ತು ಕೋವಿಡ್ ದುಸ್ಥಿತಿಯ ಸಂದರ್ಭದಲ್ಲಿ ಜನಸ್ನೇಹಿಯಾಗಿ ಲಕ್ಷಾಂತರ ರೂಪಾಯಿಗಳ ಅಹಾರ, ಬಟ್ಟೆ ಬರೆ ಗಳನ್ನು ನೀಡಿ ಮಾನವೀಯತೆ…

Read More

ನಾಪೋಕ್ಲು ಮೇ 2 : ಸಮಾಜದ ಎಲ್ಲಾ ವರ್ಗದ ಜನರಿಗೆ ಹತ್ತು ಹಲವಾರು ಕಾರ್ಯಕ್ರಮಗಳು, ಯೋಜನೆಗಳನ್ನು ರೂಪಿಸುವುದು ಮಾತ್ರವಲ್ಲ ಅದನ್ನು ಜನರಿಗೆ ತಲುಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ ಬೋಪಯ್ಯ ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗು ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳ ಅಭಿವೃದ್ಧಿಯಾಗಿದೆ. ಹುಣಸೂರು- ತಲಕಾವೇರಿ ರಾಜ್ಯ ಹೆದ್ದಾರಿ ಅಭಿವೃದ್ಧಿಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಸಾಲ ಸೌಲಭ್ಯ ಒದಗಿಸಲಾಗಿದ್ದು, ಅವರನ್ನು ಮುಖ್ಯ ವಾಹಿನಿಗೆ ತರಲು ಯೋಜನೆ ರೂಪಿಸಲಾಗಿದೆ ಎಂದರು. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ವಿರೋಧಿಗಳು ರಸ್ತೆಗಳ ಅಭಿವೃದ್ಧಿ ಆಗಿಲ್ಲ. ಮೂಲಭೂತ ಸೌಕರ್ಯಗಳು ಲಭಿಸಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷದ ವೈಫಲ್ಯಗಳನ್ನು ಹೇಳಲಿ ಎಂದು ಸವಾಲು ಹಾಕಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಹಿಂದುತ್ವ ಎನ್ನುವುದು ದೇಶದ ಅಸ್ಮಿತೆ. ಹಾಗೆಂದು…

Read More

ಸೋಮವಾರಪೇಟೆ ಮೇ 1 : ಮಡಿಕೇರಿ ಕ್ಷೇತ್ರಕ್ಕೆ ಅರಕಲಗೂಡುವಿನಿಂದ, ವಿರಾಜಪೇಟೆ ಕ್ಷೇತ್ರಕ್ಕೆ ಬೆಂಗಳೂರಿನಿಂದ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಅಮದು ಮಾಡಿಕೊಂಡಿದೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್‍ಸಿಂಹ ಹೇಳಿದರು. ಭಾರತೀಯ ಜನತಾಪಾರ್ಟಿಯ ವತಿಯಿಂದ ಸೋಮವಾರಪೇಟೆ ಜೇಸಿ ವೇದಿಕೆಯಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಸಚಿವ ಬಿ.ಎ.ಜೀವಿಜಯ, ಚಂದ್ರಮೌಳಿ, ಹರಪಳ್ಳಿ ರವೀಂದ್ರ, ಚಂದ್ರಕಲಾ, ಕೆ.ಎಂ.ಲೋಕೇಶ್ ಕುಮಾರ್ ಅವರಿಗೆ ಟಿಕೇಟ್ ನೀಡದೆ, ಹೊರಗಿನವರಿಗೆ ಕೊಟ್ಟು ಗೆಲುವು ಸಾಧಿಸುತ್ತೇವೆ ಎಂಬುದು ಭ್ರಮೆ ಎಂದು ಹೇಳಿದರು. ಕಾಂಗ್ರೆಸ್‍ನ ಇಬ್ಬರು ಅಭ್ಯರ್ಥಿಗಳು ಗೆಲವು ಸಾಧಿಸಿ ಏನೂ ಮಾಡಬೇಕಿಲ್ಲ. ಎಲ್ಲ ಅಭಿವೃದ್ಧಿ ಕೆಲಸಗಳನ್ನು ಅಪ್ಪಚ್ಚುರಂಜನ್ ಹಾಗೂ ಕೆ.ಜಿ.ಬೋಪಯ್ಯ ಮಾಡಿ ಮುಗಿಸಿದ್ದಾರೆ ಎಂದರು. ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, 1800ಕೋಟಿ ರೂ.ಗಳ ಅನುದಾನ ತಂದು ಮಡಿಕೇರಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಪರಿಶಿಷ್ಟ ಜಾತಿ-ಪಂಗಡದ ಕಾಲೋನಿ, ರಸ್ತೆಗಳನ್ನು ಕಾಂಕ್ರೀಟೀಕರಣ ಮಾಡಲಾಗಿದೆ. ಹಳ್ಳಿ ಹಳ್ಳಿಗೆ ರಸ್ತೆಗಳನ್ನು…

Read More

ಸುಂಟಿಕೊಪ್ಪ ಮೇ 1 : ಕಳೆದ 25 ವರ್ಷಗಳಿಂದ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟಿದ್ದೇನೆ ಎಂದು ಶಾಸಕ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಕಾನ್ ಬೈಲ್, ನಾಕೂರು ಶಿರಂಗಲ, ಕೊಡಗರಹಳ್ಳಿ, ಕಂಬಿಬಾಣೆ, ಸುಂಟಿಕೊಪ್ಪದಲ್ಲಿ ಪ್ರಚಾರ ನಡೆಸಿದ ಎಂ.ಪಿ.ಅಪ್ಪಚ್ಚು ರಂಜನ್ ಪಟ್ಟಣದಲ್ಲಿ ರೋಡ್ ಶೋ ನಡೆಸಿ, ನಂತರ ಕನ್ನಡ ವೃತ್ತದಲ್ಲಿ ಸಾರ್ವಜನಿಕ ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಳೆದ 25 ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಅಭಿವೃದ್ಧಿಗಳನ್ನು ವಿವರಿಸಿ ಹೇಳಿದ ರಂಜನ್, ಪ್ರಗತಿಯೇ ಬಿಜೆಪಿಯ ಮಂತ್ರ, ಆದರಿಂದ ಬಿಜೆಪಿಯೇ ಭರವಸೆ ಎಂದರು. ಪಟ್ಟಣದಲ್ಲಿ ರೋಡ್ ಶೋ ಸುಮಾರು ಎರಡು ಕಿ.ಮೀ. ಸಾಗಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕೊನೆಗೊಂಡಿತು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಪ್ರಮುಖರಾದ ವಿ.ಕೆ.ಲೋಕೇಶ್, ಅಭಿಮನ್ಯು ಕುಮಾರ್, ತಾ.ಪಂ.ಮಾಜಿ ಉಪಾಧ್ಯಕ್ಷರುಗಳಾದ ಅಭಿಮನ್ಯು ಕುಮಾರ್, ಶಂಕರ ನಾರಾಯಣ ಮಾತನಾಡಿದರು. ಈ ಸಂದರ್ಭ ತಾ.ಪಂ ಮಾಜಿ ಸದಸ್ಯೆ…

Read More

ಸೋಮವಾರಪೇಟೆ ಮೇ 2 : ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ, ಜನರ ಮನಸ್ಸನ್ನು ಗೆಲ್ಲಲಿಲ್ಲ. ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಮಾಡಿದ್ದರೆ ಚುನಾವಣಾ ಬಹಿಷ್ಕಾರ ಏಕೆ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಪ್ರಶ್ನಿಸಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರಪೇಟೆ ಜೇಸಿ ವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಈ ಬಾರಿಯೂ ಪ್ರಜ್ಞಾವಂತ ಮತದಾರರು ಅವರಿಗೆ ಮತ ನೀಡಿದರೆ ಮಡಿಕೇರಿ ಕ್ಷೇತ್ರ ಅಭಿವೃದ್ಧಿಯಲ್ಲಿ ಇನ್ನೂ ಇಪ್ಪತ್ತೈದು ವರ್ಷ ಹಿಂದಕ್ಕೆ ಹೋಗಲಿದೆ. ಕಳೆದ 25 ವರ್ಷಗಳಲ್ಲಿ ಯುವ ನಾಯಕರನ್ನು ಬೆಳೆಸಲಿಲ್ಲ ಎಂದು ದೂರಿದರು. ವೈಯಕ್ತಿಕ ಟೀಕೆಯನ್ನು ಮಾಡುವುದು ರಂಜನ್ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು ಎಂದರು. ಬಿಜೆಪಿಯವರು ಕೇಂದ್ರ ನಾಯಕರನ್ನು ಕರೆದು ರೋಡ್ ಶೋ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್‍ಗೆ ಕಾರ್ಯಕರ್ತರು ಮತ್ತು ಮುಖಂಡರುಗಳೇ ಸ್ಟಾರ್ ಪ್ರಚಾರಕರು. ನಮ್ಮ ಗೆಲುವಿಗೆ ಇವರೇ ಸಾಕು…

Read More

ಮಡಿಕೇರಿ ಮೇ 1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾಸಿರ್ ಮಕ್ಕಿ ನಾಪೋಕ್ಲುವಿನಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ನಾಪೋಕ್ಲು ಪಟ್ಟಣದ ಮನೆ, ಅಂಗಡಿ ಮುಂಗಟ್ಟುಗಳಿಗೆ ತೆರಳಿ ತಮಗೆ ಮತ ನೀಡುವಂತೆ ಮನವಿ ಮಾಡಿದರು. ಬಳಿಕ ವಿವಿಧ ಗ್ರಾಮಗಳಿಗೆ ತೆರಳಿ ಮನೆಮನೆಗಳಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ನಾಸಿರ್ ಮಕ್ಕಿ ಕಳೆದ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತರನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿಲ್ಲ. ಕೇವಲ ಮತ ಬ್ಯಾಂಕ್ ಗಾಗಿ ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದರು. ಇದೀಗ ಪರಿಸ್ಥಿತಿ ಬದಲಾಗಿದ್ದು, ಅಲ್ಪಸಂಖ್ಯಾತರು ಪ್ರಜ್ಞಾವಂತರಾಗಿದ್ದಾರೆ. ಆಮಿಷ ಮತ್ತು ಒತ್ತಡಗಳಿಗೆ ಮಣಿಯದೆ ಅಭಿವೃದ್ಧಿಪರ ಚಿಂತನೆಯೊoದಿಗೆ ಮತದಾನ ಮಾಡಲಿದ್ದಾರೆ. ರಾಜಕೀಯ ಪಕ್ಷಗಳು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿದ ಅವರು, ತಾವು ಭೇಟಿ ನೀಡಿದ ಕಡೆಗಳಲ್ಲಿ ಎಲ್ಲಾ ವರ್ಗದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಈ ಬಾರಿ ವಿರಾಜಪೇಟೆ ಕ್ಷೇತ್ರದಲ್ಲಿ ನಾನು ರಾಜಕೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಲಿದ್ದು, ಗೆಲುವು…

Read More

ಮಡಿಕೇರಿ ಮೇ 1 : ಕಾಡಾನೆ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ನೋಕ್ಯ ಗ್ರಾಮದ ಎಡಪಾರೆ ಎಂಬಲ್ಲಿ ನಡೆದಿದೆ. ಮಲ್ಲಂಗಡ ಸನ್ನಿ ಚಂಗಪ್ಪ(64) ಎಂಬುವವರೇ ಮೃತ ದುರ್ದೈವಿ. ಸೋಮವಾರ ಬೆಳಗ್ಗೆ 8.30 ಸುಮಾರಿಗೆ ಹಸುವನ್ನು ಮೇಯಿಸಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಮನೆ ಸಮೀಪದ ಗದ್ದೆಗೆ ಹಸುವನ್ನು ಮೇಯಿಸಲು ಹೋದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ಸನ್ನಿ ಚಂಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ಮಡಿಕೇರಿ ಮೇ 1 : ಎಐಟಿಯುಸಿ ಸಂಘಟನೆ ವತಿಯಿಂದ ಬಿಳಿಗೇರಿಯಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಎಐಟಿಯುಸಿ ಸದಸ್ಯ ಲೋಕೇಶ್ ಮಾತನಾಡಿ, ಕಾರ್ಮಿಕ ಹಕ್ಕುಗಳ ಹೋರಾಟದ ನೆನಪಿಗಾಗಿ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾರ್ಮಿಕರ ರಕ್ಷಣೆಗಾಗಿ ಕಾರ್ಮಿಕರ ಕಾನೂನುಗಳನ್ನು ರಚಿಸಿದ್ದಾರೆ. ಹಕ್ಕುಗಳ ಪ್ರತಿಪಾದನೆಗಾಗಿ ಎಲ್ಲಾ ಕ್ಷೇತ್ರಗಳ ಕಾರ್ಮಿಕರು ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಕರೆ ನೀಡಿದರು. ಪ್ರಮಾಣಿಕವಾಗಿ ಮಾಡುವ ಯಾವುದೇ ಕೆಲಸಕ್ಕೂ ಗೌರವವಿದೆ ಮತ್ತು ಅದನ್ನು ಗೌರವಿಸುವಂತಾಗಬೇಕು ಎಂದರು. ಮತ್ತೋರ್ವ ಸದಸ್ಯ ಸಂಜೀವ ಮಾತನಾಡಿ, ಕಾರ್ಮಿಕರ ಹೋರಾಟದ ಮೇ ದಿನಕ್ಕೆ ತನ್ನದೇ ಆದ ಚಾರಿತ್ರಿಕ ಮಹತ್ವವಿದೆ. ಕಾರ್ಮಿಕರು ದುಡಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಕಾರ್ಮಿಕರ ಶಕ್ತಿ ಆಗಾದವಾದದ್ದು. ಮಾಲೀಕರು ಕೂಡ ಅವರ ದುಡಿಮೆಗೆ ತಕ್ಕ ಕೂಲಿ ಕೊಡಬೇಕಿದೆ. ಅಲ್ಲದೆ ಕಾರ್ಮಿಕರಿಗೆ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಲೀಕರು ನೀಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಸದಸ್ಯರಾದ ಸೂರ್ಯ,…

Read More

ಮಡಿಕೇರಿ ಮೇ 1 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಸೋಮವಾರಪೇಟೆಯ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಿ ಮತಯಾಚಿಸಿದರು. ಈ ಸಂದರ್ಭ ಮಾತನಾಡಿದ ಸೋಮಪ್ಪ ಭಾರತೀಯ ಕಮ್ಯೂನಿಸ್ಟ್ ಪಕ್ಷ ಕಳೆದ ಅನೇಕ ವರ್ಷಗಳಿಂದ ಬಡವರ, ಕೂಲಿ ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಿದೆ ಎಂದರು. ಸಮುದಾಯದ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸಲು ಮತ್ತು ಕ್ಷೇತ್ರದ ಜನತೆಯ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲು ಚುನಾವಣಾ ಸ್ಪರ್ಧೆಗೆ ಇಳಿದಿದ್ದು, ಜನತೆ ಈ ಬಾರಿ ಮತ ನೀಡುವ ಮೂಲಕ ಆಶೀರ್ವದಿಸಬೇಕೆಂದು ಮನವಿ ಮಾಡಿದರು. ಪಕ್ಷದ ಕಾರ್ಯದರ್ಶಿ ಸುಂದರ, ಸಹಾ ಕಾರ್ಯದರ್ಶಿ ಸಭಾನ, ಸದಸ್ಯರಾದ ಪಾರ್ವತಿ, ಲಕ್ಷ್ಮೀ, ಆದಿ ದ್ರಾವಿಡ ಕಾರ್ಯದರ್ಶಿ ಮಧು, ಸಿಪಿಐ ಸಂಚಾಲಕ ರಂಜನ್ ಹಾಜರಿದ್ದರು.

Read More