ಲೇಖಕ: admin

ಸುಂಟಿಕೊಪ್ಪ ಏ.30 : ಕಾನ್ ಬೈಲ್ ನಾಕೂರು ಶಿರಂಗಲ, ಕೊಡಗನೂರು, ಕಂಬಿಬಾಣೆಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಮಡಿಕೇರಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ನಂತರ   ಮನೆಮನೆಗೆ ತೆರಳಿ ಮತ ಯಾಚಿಸಿದರು. ಹಲವು ಬಹಿರಂಗ ಸಭೆಗಳಲ್ಲಿ ಮಾತನಾಡಿದ ಅವರು ಕಳೆದ 25 ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು. ಪ್ರಗತಿಯೇ ಬಿಜೆಪಿಯ ಮಂತ್ರ, ಬಿಜೆಪಿಯೇ ಭರವಸೆ ಎಂದರು. ರೋಡ್ ಶೋ ಸುಮಾರು ಎರಡು ಕಿ. ಮೀ. ಸಾಗಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕೊನೆಗೊಂಡಿತು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ಜಿ.ಮೇದಪ್ಪ, ಬಿಜೆಪಿ ಪ್ರಮುಖರಾದ ಭಾರತೀಶ್, ಲೋಕೇಶ್, ಅಭಿಮನ್ಯು ಕುಮಾರ್ ಮಾತನಾಡಿದರು.

Read More

ಮಡಿಕೇರಿ ಏ.30 : ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಪಕ್ಷ  ಸ್ಪರ್ಧೆ ಮಾಡುತ್ತಿದೆ. ವಿರಾಜಪೇಟೆ ಕ್ಷೇತ್ರದಲ್ಲಿ  ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಇರುವ ಕಾರಣ ಪಕ್ಷದ ನಿಲುವು ಕುರಿತು ಮಡಿಕೇರಿಯ ಜಿಲ್ಲಾ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಅವರ ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಮತ್ತು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ನಾಯಕರುಗಳೊಂದಿಗೆ ಚರ್ಚಿಸಲಾಯಿತು.  ಜನಪರ ಹೋರಾಟಗಾರ ಅಮೀನ್ ಮೊಹಿಸಿನ್ ಅವರು ಮಡಿಕೇರಿ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡಲಿದ್ದು, ಕ್ಷೇತ್ರದಲ್ಲಿ ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದಾರೆ‌. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಜೆಸಿಬಿ ಪಕ್ಷಗಳಾಗಿದ್ದು, ಬೇಸತ್ತಿರುವ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಮಡಿಕೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್‌ಡಿಪಿಐ ಅಭ್ಯರ್ಥಿ ಅಮೀನ್ ಮೊಹಿಸಿನ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ಅಫ್ಸರ್ ಕೊಡ್ಲಿಪೇಟೆ ವಿಶ್ವಾಸ ವ್ಯಕ್ತಪಡಿಸಿದರು. ವಿರಾಜಪೇಟೆ ಕ್ಷೇತ್ರದಲ್ಲಿ  ಪಕ್ಷದ ಅಭ್ಯರ್ಥಿ ಕಣಕ್ಕೆ ಇಳಿಸದ ಕಾರಣ ಫ್ಯಾಸಿಸ್ಟ್ ಮನೋಭಾವನೆ ಇರುವ ಅಭ್ಯರ್ಥಿಗಳನ್ನು ಸೋಲಿಸುವ…

Read More

ಮಡಿಕೇರಿ ಏ.30 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಚುನಾವಣಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರಮೋದ್ ಗಣಪತಿ ಸೋಲಿನ ಭೀತಿಯಲ್ಲಿ ಹತಾಶೆಗೊಂಡಿರುವ ಪ್ರತಿಸ್ಪರ್ಧಿಗಳು ಟಿಪ್ಪುವಿನ ಪ್ರತಿಮೆ ಸ್ಥಾಪನೆ ಕುರಿತು ಡಾ.ಮಂತರ್ ಗೌಡರ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಯ ಆಧಾರದಲ್ಲಿ ಮತಯಾಚನೆ ಮಾಡಲು ಸಾಧ್ಯವಾಗದವರು ಭಾವನೆಗಳನ್ನು ಕೆಣಕಿ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಸಮೂಹ ಈ ಬಾರಿ ಅಭಿವೃದ್ಧಿಪರ ಚಿಂತನೆಯ ಉತ್ಸಾಹಿ ಯುವಕ ಡಾ.ಮಂತರ್ ಗೌಡ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇದನ್ನು ಸಹಿಸಿಕೊಳ್ಳಲಾಗದ ಪ್ರತಿಸ್ಪರ್ಧಿಗಳು ಮತದಾರರ ಹಾದಿ ತಪ್ಪಿಸುವುದಕ್ಕಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಏನೇ ಅಪಪ್ರಚಾರ ಮಾಡಿದರೂ ಬದಲಾವಣೆಯನ್ನು ಬಯಸಿರುವ ಕ್ಷೇತ್ರದ ಮತದಾರರು ಅತ್ಯಧಿಕ…

Read More

ಮಡಿಕೇರಿ ಏ.30 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ “ಮಡಿಕೇರಿಯಲ್ಲಿ ಉತ್ಕರ್ಷ 2023” ರ ಶೀರ್ಷಿಕೆಯಡಿ ಕಾಲೇಜು ವಾರ್ಷಿಕೋತ್ಸವ ಸಂಸ್ಥೆಯ ಆವರಣದಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಪ್ರಕೃತಿ ಸೌಂದರ್ಯದ ಕೊಡಗು ಜಿಲ್ಲೆಯಲ್ಲಿ ಶೈಕ್ಷಣಿಕ ಸಾಧನೆ ಮಾಡುತ್ತಿರುವುದು ಶ್ಲಾಘನೀಯವೆಂದರು. ಭಾರತದಲ್ಲಿ ಸ್ನಾತಕೊತ್ತರ ಸೀಟುಗಳ ಸಂಖ್ಯೆ ಹೆಚ್ಚಾಗುತಿದ್ದು, ಸಂಸ್ಥೆಯ ಕೊಡುಗೆ ಹೆಚ್ಚಾಗಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಕೆ.ಬಿ.ಕಾರ್ಯಪ್ಪ ಮಾತನಾಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 450 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ಇದೆ. ಕ್ರಿಟಿಕಲ್ ಕೇರ್ ಆಸ್ಪತ್ರೆ, ನೂತನ ಸಿಟಿ ಸ್ಕಾö್ಯನ್ ಉಪಕರಣ ಸೇರಿದಂತೆ ಸಂಸ್ಥೆಗೆ ಅಗತ್ಯವಿರುವೆಲ್ಲಾ ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ಪ್ರಧಾನ ಕಾರ್ಯದರ್ಶಿಗಳು ಕಾಳಜಿ ತೋರಿದ್ದಾರೆ ಎಂದರು. ::: ಸನ್ಮಾನ ::: ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್…

Read More

ಮಡಿಕೇರಿ ಏ.29 : ಆಮ್ ಆದ್ಮಿ ಪಾರ್ಟಿಯ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವೀಂದ್ರ ಪರ ಕರಿಕೆ,‌ ಭಾಗಮಂಡಲ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಯಿತು. ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ  ಚೇರಂಬಾಣೆ, ನಾಪೋಕ್ಲು, ಕೊಟ್ಟಾಮುಡಿ, ಕಾಕೋಟುಪರಂಬು, ಕಕ್ಕಬೆ, ಕಡಂಗ  ಕಡೆಗಳ ಮನೆ ಮನೆಗೆ ತೆರಳಿ ಪಕ್ಷದ ಯೋಜನೆಗಳ ಕರಪತ್ರವನ್ನು ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಮಾಜಿ ಅಧ್ಯಕ್ಷ ಎಂ.ಕೆ.ಅಪ್ಪಯ್ಯ ಹಾಗೂ ಮತ್ತಿರ ಕಾರ್ಯಕರ್ತರು ಹಾಜರಿದ್ದರು.  

Read More

ಮಡಿಕೇರಿ ಏ.29 :  ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ಮಾದಾಪುರ, ಮಡಿಕೇರಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸಿದ ಸೋಮಪ್ಪ ಹಾಗೂ ಕಾರ್ಯಕರ್ತರು ದುಡಿಯುವ ವರ್ಗದ ನಾಯಕನಿಗೆ ಮತ ನೀಡುವಂತೆ ಮನವಿ ಮಾಡಿದರು. ನಗರದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಿ ಮತಯಾಚಿಸಿದರು. ನಂತರ ಮಾತನಾಡಿದ ಸೋಮಪ್ಪ, ಭಾರತೀಯ ಕಮ್ಯೂನಿಸ್ಟ್ ಪಕ್ಷ ಕಳೆದ ಅನೇಕ ವರ್ಷಗಳಿಂದ ಬಡವರ, ಕೂಲಿ ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಎಲ್ಲಾ ಜನರ ಪರವಾಗಿ ಹೋರಾಟ ನಡೆಸಿ ನ್ಯಾಯ ಒದಗಿಸುವ ಪ್ರಯತ್ನ ಮಾಡಿದೆ ಎಂದರು. ವನ್ಯಜೀವಿ- ಮಾನವ ಸಂಘರ್ಷ, ದುಡಿಯುವ ವರ್ಗದ ಶೋಷಣೆ, ರೈತ ಸಮೂಹಕ್ಕೆ ಆಗುತ್ತಿರುವ ಅನ್ಯಾಯ ನಿಲ್ಲಬೇಕಿದೆ. ಕಾರ್ಮಿಕ ಸಮೂಹದ ಮೂಲಭೂತ ಬೇಡಿಕೆಗಳಿಗೆ ಸೂಕ್ತ ಸ್ಪಂದನ ದೊರಕಬೇಕಾಗಿದೆ. ಈ ಹಿನ್ನೆಲೆ ಸ್ಪರ್ಧೆಗೆ ಇಳಿದಿದ್ದು, ಜನತೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಪಕ್ಷದ…

Read More

ಮಡಿಕೇರಿ ಏ.29 :  ಕೊಡಗಿನ ಇತಿಹಾಸ ಪ್ರಸಿದ್ಧ ಬೇತು ಶ್ರೀ ಮಕ್ಕಿ ಶಾಸ್ತಾವು ದೇವರ ಉತ್ಸವವು ಮೇ 3 ಮತ್ತು 4 ರಂದು ನಡೆಯಲಿದೆ. ಮೇ 3  ರಂದು ಬೆಳಿಗ್ಗೆ 11.30 ಗಂಟೆಗೆ ದೇವರ ಎತ್ತು ಪೂರಾಟ, ಮಹಾಪೂಜೆ, ಪ್ರಸಾದ ವಿತರಣೆ ನೆರವೇರಲಿದ್ದು, ರಾತ್ರಿ 9.30 ಗಂಟೆಗೆ ಶ್ರೀ ದೇವರ ದೀಪಾರಾಧನೆ (ಅಂದಿಬೊಳಕು) ನಡೆಯಲಿದೆ. ಮೇ 4 ರಂದು ಬೆಳಿಗ್ಗೆ 9.30 ಗಂಟೆಗೆ ಕಲ್ಯಾ ಟ ಅಜ್ಜಪ್ಪ, ಮಧ್ಯಾಹ್ನ 1 ಗಂಟೆಗೆ ವಿಷ್ಣು ಮೂರ್ತಿ ಕೊಲ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ  ದೇವಾಲಯದ ಆಡಳಿತ ಮಂಡಳಿ ಕೋರಿದೆ.

Read More

ಮಡಿಕೇರಿ ಏ.29 : ನಮೂನೆ 12 ಡಿ ರಡಿ ಹೆಸರು ನೋಂದಾಯಿಸಿದ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಹಕ್ಕು ಚಲಾಯಿಸುವ ಪ್ರಕ್ರಿಯೆಗೆ ಶನಿವಾರ ಚಾಲನೆ ದೊರೆಯಿತು. ಕೊಡಗು ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ-106 ರ ಹುದುಗೂರು ಮತಗಟ್ಟೆ ವ್ಯಾಪ್ತಿಯಲ್ಲಿ ನಾಲ್ಕು ಜನ ಹಿರಿಯ ನಾಗರಿಕರು, ಮತಗಟ್ಟೆ ಸಂಖ್ಯೆ 151 ರ ಹುಲುಗುಂದ ಮತಗಟ್ಟೆಯಲ್ಲಿ ನಾಲ್ಕು ಮಂದಿ ಹಿರಿಯ ನಾಗರಿಕರು, ಒಬ್ಬರು ವಿಶೇಷ ಚೇತನರು, ಹಾಗೆಯೇ ಮತಗಟ್ಟೆ ಸಂಖ್ಯೆ 152 ರ ಚಿಕ್ಕತ್ತೂರಿನಲ್ಲಿ ಹಿರಿಯ ನಾಗರಿಕರು, ಮತಗಟ್ಟೆ 154 ರ ಸುಂದರ ನಗರದಲ್ಲಿ ಒಬ್ಬ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ಮೊದಲ ದಿನ 10 ಮಂದಿ ಮತಹಕ್ಕು ಚಲಾಯಿಸಿದ್ದಾರೆ ಎಂದು ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸೆಕ್ಟರ್ ಅಧಿಕಾರಿ ಪುಟ್ಟಸ್ವಾಮಿ ಅವರು ಮಾಹಿತಿ ನೀಡಿದ್ದಾರೆ. ಮಡಿಕೇರಿ ನಗರದ ವಿವಿಧ…

Read More

ಮಡಿಕೇರಿ ಏ.29 : ಅಯ್ಯಂಗೇರಿಯಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಅಯ್ಯಂಗೇರಿ ಬಿಜೆಪಿ ಸತ್ಯಕ್ಕೆ ದೂರವಾದ ಹೇಳಿಕೆ ನೀಡಿದೆ ಎಂದು ಅಯ್ಯಂಗೇರಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ಬೆಂಬಲಿತ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ಎಂ.ಅಬ್ದುಲ್ ರಾಶಿದ್, ಕಾಂಗ್ರೆಸ್ ಪಕ್ಷದಿಂದ ಇಲ್ಲಿಯವರೆಗೆ ಯಾವುದೇ ಕಾರ್ಯಕರ್ತರು ಬಿಜೆಪಿಗೆ ಹೋಗಿಲ್ಲ, ಬಿಜೆಪಿಗೆ ಸೇರ್ಪಡೆಗೊಂಡವರು ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಯ್ಯಂಗೇರಿ ಕಾಂಗ್ರೆಸ್ ವಲಯ ಅಧ್ಯಕ್ಷ  ಎಂ.ಎಂ.ಮೊಹಮ್ಮದ್, ಸಣ್ಣ ಪುಲಿಕೋಟು ಕಾಂಗ್ರೆಸ್ ಅಧ್ಯಕ್ಷ ದಾಮೋದರ, ಪ್ರಮುಖರಾದ ಹ್ಯಾರಿಸ್, ಅಬ್ದುಲ್ಲ ಹಾಗೂ ಬಡುವಂಡ ಮೊಯ್ದು  ಈ ಸಂದರ್ಭ  ಹಾಜರಿದ್ದರು.

Read More

ಮಡಿಕೇರಿ ಏ.29 : ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಬೆಂಬಲ ನೀಡಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಇಂದೂಧರ ಹೊನ್ನಾಪುರ, ಸದಾ ಸಮಾನತೆ, ಸಾಮರಸ್ಯವನ್ನೇ ಬಯಸುವ ದಸಂಸ, ದೇಶ ಮತ್ತು ರಾಜ್ಯದಲ್ಲಿ ಜಾರಿಯಲ್ಲಿರುವ ಸರ್ವಾಧಿಕಾರಿ, ಜನವಿರೋಧಿ ಆಡಳಿತವನ್ನು ಕಿತ್ತೊಗೆಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಗುಂಪುಗಳಾಗಿ ಹಂಚಿಹೋಗಿದ್ದ ಸಮಾನ ಮನಸ್ಕ ದಲಿತ ಸಂಘರ್ಷ ಸಮಿತಿಗಳ ಹತ್ತು ಬಣಗಳನ್ನು ಒಂದುಗೂಡಿಸುವ ಮೂಲಕ ಬೆಂಗಳೂರಿನಲ್ಲಿ ನಡೆದ ಡಾ.ಬಿ.ಆರ್.ಅಂಬೇಸ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡಲು ನಿರ್ಧರಿಸಿದೆ ಎಂದರು. ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರಿಗೆ ನೀಡಬೇಕಾದ ಕಲ್ಯಾಣ ಕಾರ್ಯಕ್ರಮ ಮತ್ತು ಹಲವು ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಕಾರ್ಪೋರೇಟ್‍ಗಳನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ…

Read More