ಮಡಿಕೇರಿ ಮಾ.21 : ಈ ಬಾರಿ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ರೈತ ಸಂಘದ ಅಂಗ ಪಕ್ಷವಾದ ಸರ್ವೋದಯ ಕರ್ನಾಟಕ ಪಕ್ಷದಿಂದ ಕಾಡ್ಯಮಾಡ ಮನು ಸೋಮಯ್ಯ ಸ್ಪರ್ಧಿಸುವುದು ಖಚಿತವಾಗಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಸಂಘದ ಪ್ರಮುಖರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜೈ ಬೋಪಯ್ಯ, ರಾಷ್ಟ್ರೀಯ ಪಕ್ಷಗಳು ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಸ್ಪರ್ಧೆಯಿಂದ ಹಿಂದೆ ಸರಿಯುತ್ತಾರೆ ಎಂದು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಅವರು ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಆದರೆ ರಾಷ್ಟ್ರೀಯ ಪಕ್ಷಗಳು ಮನು ಸೋಮಯ್ಯ ಅವರ ವ್ಯಕ್ತಿತ್ವ ಮತ್ತು ಅಪಾರ ಜನ ಬೆಂಬಲವನ್ನು ಗಮನಿಸಿ ಇಲ್ಲ ಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ. ರೈತ ಸಂಘ ಬೆಳೆಗಾರರು, ಕಾರ್ಮಿಕರು, ದಲಿತರ ಪರವಾಗಿ ಜಿಲ್ಲೆಯಲ್ಲಿ ಹಲವಾರು ಹೋರಾಟ ಮಾಡಿದ್ದು, ಜನಪರ ಕಾರ್ಯಕ್ರಮಗಳನ್ನು ನಡೆಸಿದೆ. ಈ ಎಲ್ಲಾ ವಿಚಾರಗಳು…
ಲೇಖಕ: admin
ಮಡಿಕೇರಿ ಮಾ.21 : ಮುಂದಿನ ಸಾಲಿಗೆ ಒಟ್ಟು 73,13,48,792 ರೂಪಾಯಿ ಗಾತ್ರದ ಆಯವ್ಯಯವನ್ನು ನಗರಸಭೆ ಅಧ್ಯಕ್ಷತೆ ನೆರವಂಡ ಅನಿತಾ ಪೂವಯ್ಯ ಮಂಡಿಸಿ ಅನುಮೋದನೆ ಪಡೆದುಕೊಂಡರು. ನಗರಸಭೆ ಸಭಾಂಗಣದಲ್ಲಿ ನಡೆದ ಆಯವ್ಯಯ ಅಂದಾಜುಪಟ್ಟಿಯನ್ನು ಅಧ್ಯಕ್ಷೆ ಸಭೆಯ ಮುಂದಿಟ್ಟು ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಿದರು. 2023-24ನೇ ಸಾಲಿನಲ್ಲಿ ಆರಂಭ ಶಿಲ್ಕು 12,09,89,630 ರೂಪಾಯಿ ಹೊಂದಿದ್ದು, ರೂ.61,03,59,162 ಸ್ವೀಕೃತಿಯೊಂದಿಗೆ ರೂ.73,13,48,792 ನಿರೀಕ್ಷಿತ ಆಯವ್ಯಯವನ್ನು ಸಿದ್ಧಪಡಿಸಲಾಗಿದೆ. ಈ ಪೈಕಿ ರೂ.66,88,08,000 ವೆಚ್ಚವಾಗಲಿದ್ದು, 6,25,40,792 ರೂಪಾಯಿ ಉಳಿಕೆಯಾಗಲಿದೆ ಎಂದು ಮಾಹಿತಿ ಒದಗಿಸಿದರು. ನಗರಸಭೆಯ ಸ್ವಂತ ಮೂಲಗಳಿಂದ ಬರುವ ನಿರೀಕ್ಷಿತ ಆದಾಯದ ಬಗ್ಗೆ ವಿವರಿಸಿದ ಅನಿತಾ ಪೂವಯ್ಯ, ಆಸ್ತಿ ತೆರಿಗೆ, ದಂಡಗಳಿಂದ ರೂ.3.85 ಕೋಟಿ, ನೀರಿನ ಶುಲ್ಕ ಠೇವಣಿಯಿಂದ ರೂ.96.50 ಲಕ್ಷ ಮಳಿಗೆಗಳ ಬಾಡಿಗೆಯಿಂದ ರೂ.1.25 ಕೋಟಿ, ರಾಜಾಸೀಟ್ ಹಾಗೂ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಗಳ ಹಾರಾಜಿನಿಂದ ರೂ.50 ಲಕ್ಷ, ಉದ್ದಿಮೆ ಸೇರಿದಂತೆ ಇತರ ಪರವಾನಗಿಯಿಂದ ರೂ.81 ಲಕ್ಷ, ಕಟ್ಟಡ ಪರವಾಗಿ, ಅಭಿವೃದ್ಧಿ ಶುಲ್ಕದಿಂದ ರೂ.50 ಲಕ್ಷ, ವಾಹನ ನಿಲುಗಡೆ…
ಮಡಿಕೇರಿ ಮಾ.21 : ಬರಹಗಾರ, ನಟ, ನಿರ್ದೇಶಕ, ನಿರ್ಮಾಪಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಬರೆದಿರುವ ಕೊಡವ ಮಕ್ಕಡ ಕೂಟದ 63ನೇ ಪುಸ್ತಕ “ಹೊಂಬೆಳಕು” ಇಂದು ಬಿಡುಗಡೆಗೊಂಡಿತು. ನಗರದ ಪತ್ರಿಕಾಭವನದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಸಾಮಾಜಿಕ ಕಳಕಳಿಯ ಪುಸ್ತಕ ಇದಾಗಿದೆ ಎಂದರು. ಮಕ್ಕಳಿಲ್ಲದ ಮನಸ್ಸುಗಳ ತುಡಿತ, ದತ್ತು ಶಿಶು ಸ್ವೀಕಾರದ ಸಾಮಾಜಿಕ ಜಾಗೃತಿ, ಜಾತಿಯನ್ನು ಮೀರಿದ ಮಾನವೀಯತೆ, ಪ್ರೀತಿ, ಸೌಹಾರ್ದತೆ, ಕುತೂಹಲ ಸೇರಿದಂತೆ ಅನೇಕ ಭಾವನಾತ್ಮಕ ವಿಚಾರಧಾರೆಗಳಿಗೆ ಒತ್ತು ನೀಡಿ ಕಥೆಯನ್ನು ಬರೆಯಲಾಗಿದೆ. ಇದು ಪ್ರಗತಿಪರ ಚಿಂತನೆಯ ಪುಸ್ತಕವಾಗಿದ್ದು, ಕೊಡವ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. “ಹೊಂಬೆಳಕು” ಪುಸ್ತಕ ರಚನೆಕಾರ ಚಿತ್ರ ನಿರ್ದೇಶಕ, ನಟ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ನಾನು ಸ್ವತ: ಕಂಡ ಕೆಲವು ಘಟನೆಗಳನ್ನು ಪುಸ್ತಕದ ರೂಪದಲ್ಲಿ ಹೊರತಂದಿದ್ದೇನೆ. ಮೊಬೈಲ್ ಪ್ರಪಂಚದಲ್ಲಿ ಕಾದಂಬರಿಗಳು ಬಾಂಧವ್ಯ ವೃದ್ಧಿಸುವ ಕೆಲಸ ಮಾಡುತ್ತಿದ್ದು, ಸಾಹಿತ್ಯದ ಬಗ್ಗೆ ಅಭಿರುಚಿ ಇರುವವರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು…
ವಿರಾಜಪೇಟೆ ಮಾ.21 : ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಬಿ.ಎಂ.ದುಶ್ಯಂತ್ ರೈ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಬಂಟರ ಸಂಘದ ಮಹಾಸಭೆಯು ಮಾ. 26 ರಂದು ಪಟ್ಟಣದ ಗೋಣಿಕೊಪ್ಪಲು ರಸ್ತೆಯಲ್ಲಿನ ಮಂಜುನಾಥ ಹೊಟೇಲ್ನಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯಕಾರಿ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ. ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮಹಾಸಭೆಯಲ್ಲಿ ಬಂಟರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಸಮುದಾಯ ಬಾಂಧವರು ಸಭೆಗೆ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಪ್ರಕಟಣೆಯಲ್ಲಿ ಕೋರಲಾಗಿದೆ.
ವಿರಾಜಪೇಟೆ ಮಾ.21 : 5 ಮತ್ತು 8ನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ, ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ, ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಲಾಗಿದೆ. ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಂಟಿಕೊಪ್ಪ,ಮಾ.21: ಕೆದಕಲ್ ಗ್ರಾಮ ಪಂಚಾಯಿತಿಯ ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬದಿಯಲ್ಲಿ ಪ್ರವಾಸಿಗರು ಹಾಗೂ ಕೆಲವು ಗ್ರಾಮಸ್ಥರು ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಅಶುಚಿತ್ವದ ವಾತಾವರಣ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಚ್ಚ ಭಾರತ ಯೋಜನೆಗೆ ಕೇಂದ್ರ ಸರಕಾರ ಗ್ರಾ.ಪಂ.ಗೆ ಅನುದಾನ ಬಿಡುಗಡೆಗೊಳಿಸುತ್ತಿದೆ. ಆದರೆ ಗ್ರಾ.ಪಂ. ನಿರ್ಲಕ್ಷ್ಯದಿಂದ ರಾಶಿಗಟ್ಟಲೆ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿ ತಂದು ಹಾಕಲಾಗುತ್ತಿದೆ. ಗ್ರಾ.ಪಂ ದಿವ್ಯ ಮೌನಕ್ಕೆ ಶರಣಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ವಚ್ಛತೆ ಕಾಪಾಡಲು ಪ್ರತಿಯೊಂದು ಗ್ರಾ.ಪಂ ಗೂ ಕಸ ವಿಲೇವಾರಿಗಾಗಿ ಗೂಡ್ಸ್ ವಾಹನವನ್ನು ನೀಡಲಾಗಿದೆ. ವಾಹನಗಳ ಮೂಲಕ ಕಸಗಳನ್ನು ವಿಲೇವಾರಿಗೊಳಿಸದೆ, ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ಗ್ರಾ.ಪಂ ವರ್ತಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ರಸ್ತೆ ಬದಿ ಕಸ ಹಾಕದಂತೆ ಸೂಚನಾ ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಡಿಕೇರಿ ಮಾ.21 : ಎಂಬತ್ತು ವರ್ಷ ಮೇಲ್ಪಟ್ಟ ಹಿರಿಯರು, ವಿಕಲಚೇತನರು, ಕೋವಿಡ್-19 ಸೋಂಕಿತ/ ಬಾದಿತ ವ್ಯಕ್ತಿಗಳು ಹಾಗೂ ಅಗತ್ಯ ಸೇವೆಯಲ್ಲಿರುವವರು, ಮತಗಟ್ಟೆ ಕೇಂದ್ರಕ್ಕೆ ತೆರಳಲು ಆಗದಿರುವ ಮತದಾರರಿಗೆ ‘ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿದೆ. ಈ ಅವಕಾಶವನ್ನು ಅರ್ಹರು ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಸಂಬಂಧ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರು, ಕೋವಿಡ್-19 ನಿಂದ ಬಾದಿತ ವ್ಯಕ್ತಿಗಳು ಹಾಗೂ ಅಗತ್ಯ ಸೇವೆಯಲ್ಲಿರುವ ವಿದ್ಯುತ್, ಬಿಎಸ್ಎನ್ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ, ವಿಮಾನಯಾನ, ರಾಜ್ಯ ರಸ್ತೆ ಸಾರಿಗೆ ನಿಗಮ, ಅಗ್ನಿಶಾಮಕ, ಮಾಧ್ಯಮ, ಸಂಚಾರಿ ಪೊಲೀಸ್ ಹಾಗೂ ಆಂಬ್ಯುಲೆನ್ಸ್ನಲ್ಲಿ ಸೇವೆ ನಿರ್ವಹಿಸುತ್ತಿರುವವರು ‘ಅಂಚೆ ಮತಪತ್ರ’ ಪಡೆದು ಮತದಾನ ಮಾಡಬಹುದಾಗಿದೆ ಎಂದು…
ಮಡಿಕೇರಿ ಮಾ.21 : ಕೊಡಗು ಹಿತರಕ್ಷಣಾ ವೇದಿಕೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವವನ್ನು ನಗರದ ತ್ಯಾಗರಾಜ ಕಾಲೋನಿಯ ಶಕ್ತಿ ವೃದ್ಧಾಶ್ರಮದ ವಾಸಿಗಳೊಡನೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್ ಮಾತನಾಡಿ, ವೇದಿಕೆ ನಡೆದು ಬಂದ ಹಾದಿ ಹಾಗೂ ವೇದಿಕೆಯ ಕಾರ್ಯ ವೈಕರಿಗಳ ಬಗ್ಗೆ ಮಾಹಿತಿ ನೀಡಿದರು. ಸಮಾಜ ಸೇವಕ ವಿಕ್ರಂ ಶೆಟ್ಟಿ ( ವಿಕ್ರಂ ಜಾದೂಗಾರ್ ) ಮಾತನಾಡಿ, ವೇದಿಕೆ ವತಿಯಿಂದ ಉತ್ತಮ ಕಾರ್ಯಕ್ರಮಗಳು ನಡೆಸಲಾಗುತ್ತಿದ್ದು, ಜನರ ಸಮಸ್ಯೆ ಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಗಳನ್ನು ನಡೆಸುವಂತಾಗಲಿ ಎಂದು ಹಾರೈಸಿದ ಅವರು, ವೇದಿಕೆಯ ಜನಪರ ಕೆಲಸಗಳಿಗೆ ನಮ್ಮ ಸಹಕಾರವಿದೆ ಎಂದು ಹೇಳಿದರು. ಪ್ರಾಸ್ತಾವಿಕ ಮಾತನಾಡಿದ ವೇದಿಕೆ ಅಧ್ಯಕ್ಷ ರವಿ ಗೌಡ, ವೇದಿಕೆಯು ಕಳೆದ ನಾಲ್ಕು ವರ್ಷಗಳಿಂದ ಉತ್ತಮ ರೀತಿಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದು, ಕೊಡಗಿನಾದ್ಯಂತ ಕೊಡಗು ಹಿತರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ವೇದಿಕೆಯ ಪ್ರತಿ ಸದಸ್ಯರು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸ್ಪಂದನೆ ನೀಡುತ್ತಿದ್ದು, ಮುಂದಿನ…
ಮಡಿಕೇರಿ ಮಾ.21 : ಗೋಣಿಕೊಪ್ಪದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಪೋಸ್ಟರ್ ಮೇಲೆ ಚಪ್ಪಲಿ ಚಿತ್ರವನ್ನಿಟ್ಟು ಅವಮಾನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ. ತಿತಿಮತಿಯ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಮಾನವ ಸರಪಳಿ ರಚಿಸಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದರು. ಬಿಜೆಪಿ ವತಿಯಿಂದ ಗೋಣಿಕೊಪ್ಪದಲ್ಲಿ ಆಯೋಜಿಸಿದ್ದ ವಿಜಯಸಂಕಲ್ಪ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟರ್ ಮೇಲೆ ಮುಖ್ಯಮಂತ್ರಿಯವರ ಭಾವಚಿತ್ರದ ಪೋಸ್ಟರ್ ಅಳವಡಿಸಿ, ಅವರ ಕಾಲಿನ ಚಪ್ಪಲಿ, ಅಂಬೇಡ್ಕರ್ ಚಿತ್ರದ ತಲೆಯ ಮೇಲೆ ಇರುವಂತೆ ವ್ಯವಸ್ಥಿತವಾಗಿ ಕಟ್ಟಿದ್ದಾರೆ. ಬಿಜೆಪಿ, ಸಂಘಪರಿವಾರದ ಕಿಡಿಕೇಡಿಗಳ ಮನಸ್ಥಿತಿ ಇಂತಹ ಕೃತ್ಯಗಳಿಂದ ತಿಳಿದು ಬರುತ್ತದೆ ಎಂದು ದೂರಿದರು. ಈ ವಿಷಯವಾಗಿ ಗೋಣಿಕೊಪ್ಪ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಇದುವರೆಗೂ ಬಂದಿಸಿರುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಗಡಿಪಾರು ಮಾಡುವಂತೆ ಸಂಘಟನೆಯ ಪ್ರಮುಖರು ಒತ್ತಾಯಿಸಿದರು.…
ಮಡಿಕೇರಿ ಮಾ.20 : ಕೊಡಗು ಗೌಡ ವಿದ್ಯಾ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಂಬೇಕಲ್ಲು ನವೀನ್ ಕುಶಾಲಪ್ಪ 1,118 ಮತ ಪಡೆದು ಜಯಗಳಿಸಿದ್ದಾರೆ. ಎದುರಾಳಿ ಕಟ್ಟೆಮನೆ ಸೋನಾ 949 ಮತ ಪಡೆದು ಪರಾಜಿತಗೊಂಡಿದ್ದಾರೆ. ನಗರದ ಕೊಡಗು ಗೌಡ ಸಮಾಜ ಆವರಣದಲ್ಲಿ 6 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. 5,100 ಸದಸ್ಯರ ಪೈಕಿ 2088 ಸದಸ್ಯರು ಮತದಾನ ಮಾಡಿದರು. ಇದರಲ್ಲಿ 38 ಮತಗಳು ಅಸಿಂಧುಗೊಂಡವು. ಅಧ್ಯಕ್ಷ, ಉಪಾಧ್ಯಕ್ಷ, ಕೋಶಾಧಿಕಾರಿ ಪ್ರತಿ ಸ್ಥಾನಕ್ಕೆ ಇಬ್ಬರು ಹಾಗೂ ಉಳಿದ 6 ನಿರ್ದೇಶಕ ಸ್ಥಾನಕ್ಕೆ ಒಟ್ಟು 12 ಮಂದಿ ಸ್ಪರ್ಧಿಸಿದ್ದು, ಕಾರ್ಯದರ್ಶಿಯಾಗಿ ಪೇರಿಯನ ಉದಯಕುಮಾರ್, ಜಂಟಿ ಕಾರ್ಯದರ್ಶಿಯಾಗಿ ತಳೂರು ಕೆ.ದಿನೇಶ್ ಕುಮಾರ್, ನಿರ್ದೇಶಕರುಗಳಾಗಿ (ಮಹಿಳಾ ಮೀಸಲು) ಕೆದಂಬಾಡಿ ಕಾಂಚನ ಕೀರ್ತನ್, ಪಾಂಡನ ಪುಷ್ಪವೇಣಿ ಪ್ರಕಾಶ್, ಪುದಿಯನೆರವನ ರೇವತಿ ರಮೇಶ್ ಅವಿರೋಧವಾಗಿ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಅಮೆ ಸಿ ಸೀತಾರಾಮ 1109 ಮತ ಪಡೆದು ಜಯಗಳಿಸಿದರೆ, ಕೆದಂಬಾಡಿ ಎಸ್.ಕೀರ್ತಿಕುಮಾರ್ 945 ಮತದಿಂದ ಸೋಲು ಅನುಭವಿಸಿದರು. ಕೋಶಾಧಿಕಾರಿ ಸ್ಥಾನಕ್ಕೆ ಸ್ಪರ್ಧಿಸಿದ್ದ…






