ಲೇಖಕ: admin

ಮಡಿಕೇರಿ ಏ.29 : ಹದಗೆಟ್ಟಿರುವ ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ನಿರ್ಧರಿಸಿದ್ದು, ಮತದಾರರು ನನಗೆ ಮತದಾನ ಮಾಡುವ ಮೂಲಕ ಜನಸೇವೆಗೆ ಅವಕಾಶ ನೀಡಬೇಕು ಎಂದು ಅಭ್ಯರ್ಥಿ ಪೊನ್ನೆಟಿ ಕೆ.ದರ್ಶನ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ವಿಲಾಸಿ ಜೀವನ, ಮತ್ತೊಬ್ಬರ ನಾಶವನ್ನು ಬಯಸುವುದು ಮತ್ತು ಸರ್ವಾಧಿಕಾರಿ ಧೋರಣೆ ರಾರಾಜಿಸುತ್ತಿದೆ. ಜಾತಿ ಜಾತಿಗಳ ನಡುವೆ ಒಡಕು ಮೂಡಿಸಿ ಅಶಾಂತಿ ಸೃಷ್ಟಿಸುವ ನಾಯಕರು ಹೆಚ್ಚಾಗುತ್ತಿದ್ದಾರೆ. ಈ ರೀತಿಯ ಗೊಂದಲಮಯ ವಾತಾವರಣದಿಂದ ಕ್ಷೇತ್ರವನ್ನು ಮುಕ್ತಗೊಳಿಸುವ ಚಿಂತನೆಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಮತದಾರರು ಪ್ರಮಾಣಿಕರನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಗ್ರಾಮೀಣ ಜನರನ್ನು ಒಡೆದು ಆಳಲಾಗುತ್ತಿದೆ, ಮುಗ್ಧ ಮನಸ್ಸಿನ ಬಡಜನರ ಹಾದಿ ತಪ್ಪಿಸಲಾಗುತ್ತಿದೆ. ಮದ್ಯ ವ್ಯಸನಿಗಳಾಗುತ್ತಿರುವ ಮಂದಿ ತಮ್ಮ ಭವಿಷ್ಯವನ್ನು ಮರೆಯುತ್ತಿದ್ದಾರೆ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ನ್ಯೂನತೆಗಳನ್ನು ಸರಿಪಡಿಸದೆ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಕಾಳಜಿ ವಹಿಸದೆ ಸ್ವಾರ್ಥಕ್ಕಾಗಿ ಅಧಿಕಾರವನ್ನು…

Read More

ಮಡಿಕೇರಿ ಏ.29 : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ, ಕುಶಾಲನಗರ ತಾಲ್ಲೂಕು ದೂ.ಸಂ.6361802037, ತಾಲ್ಲೂಕು ವಿಸ್ತರಣಾಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.9972171266 ಹಾಗೂ ಮಾಹಿತಿ ಕೇಂದ್ರ ಮಡಿಕೇರಿ 9972799091, ಸೋಮವಾರಪೇಟೆ 8548068519 ಮತ್ತು ವಿರಾಜಪೇಟೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಏ.29 :  ಕೊಡಗು ಹೆಗ್ಗಡೆ ಜನಾಂಗದ 20ನೇ ವರ್ಷದ ಕ್ರೀಡೋತ್ಸವಕ್ಕೆ ಮೂರ್ನಾಡು ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಮೇಜರ್ ಮಳ್ಳಡ ದೀಕ್ಷಿತ್ ದೇವಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು,  ಕೊಡಗು ಹೆಗ್ಗಡೆ ಜನಾಂಗದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪರಿಣತರನ್ನುಹೊಂದಿರುವುದು ಉತ್ತಮ ಬೆಳವಣಿಗೆ  ಎಂದರು. ಕ್ರೀಡಾಕೂಟವು ಸೋಲು ಗೆಲುವಿನ ಮಾಪನವಾಗದೆ ಜನಾಂಗದ ಮೇಲಿನ ಅಭಿಮಾನವನ್ನು ವೃದ್ಧಿಸಿ  ದೇಶಭಿಮಾನವನ್ನು ಇಮ್ಮಡಿಗೊಳಿಸುವ ಕಾರ್ಯಾಗಾರವಾಗಬೇಕೆಂದು ಕರೆ ನೀಡಿದರು. ಕೂಡಗು ಅರಣ್ಯ ಅಪರಾಧ ಪತ್ತೆ ದಳದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತುದಿಮಾಡ ಸವಿ ಮಾತನಾಡಿ, ಕೊಡಗಿನಲ್ಲಿ ಕರ್ತವ್ಯದಲ್ಲಿ ಇರುವಾಗ ಮುಖ್ಯ ಮಂತ್ರಿ ಪದಕ ಸಿಕ್ಕುವುದು ಸೌಭಾಗ್ಯವಾಗಿದ್ದು, ಜನಾಂಗ ಬಾಂಧವರು ಶ್ರಮವಹಿಸಿ ಉನ್ನತ ಹುದ್ದೆಗೇರುವುದರೊಂದಿಗೆ ಜಿಲ್ಲೆಯ ಕೀರ್ತಿಯನ್ನು ಉತ್ತುಂಗಕ್ಕೆರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮಾಜದ ಅಧ್ಯಕ್ಷ  ಪಡಿಞರಂಡ ಅಯ್ಯಪ್ಪ ಮಾತನಾಡಿ ಕ್ರೀಡಾ ಕೂಟದಲ್ಲಿ  ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಕ್ರೀಡಾ ಪಟುಗಳಿಗೆ ಶುಭಕೊರಿದರು. ಕೊಡಗು ಹೆಗ್ಗಡೆ ಸಮಾಜದ ಕಾರ್ಯದರ್ಶಿ ಚಂಗಚಂಡ ಕಟ್ಟಿಕಾವೇರಪ್ಪ, ಖಜಾಂಚಿ ಪಾನಿಕುಟ್ಟಿರ…

Read More

ಮಡಿಕೇರಿ ಏ.29 :  ಜಿಲ್ಲಾ ಬಿಜೆಪಿ ಪ್ರಮುಖರು ಅಮಿತ್ ಶಾ ಅವರಿಗೆ ಕೊಡಗಿನ ಪೇಟವನ್ನು ತೊಡಿಸಿ ಗೌರವಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ, ಜನರಿಗೆ ಕೈ ಬೀಸಿ ನಗುಬೀರಿದರು. ಅಮಿತ್ ಶಾ ಅವರು ಸಾಗಿ ಬಂದ ಹಾದಿಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪುಷ್ಪಮಳೆ ಸುರಿಸಿ ಘೋಷಣೆಗಳನ್ನು ಕೂಗಿದರು. ಆದರೆ ಶಾ ಪ್ರಚಾರ ಭಾಷಣ ಮಾಡದೆ ತೆರಳುವ ಮೂಲಕ ಕಾರ್ಯಕರ್ತರಲ್ಲಿ ನಿರಾಶೆ ಮೂಡಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ವಾಹನಗಳಲ್ಲಿ ಆಗಮಿಸಿದ ಸಹಸ್ರಾರು ಕಾರ್ಯಕರ್ತರು, ಶ್ರೀ ಚೌಡೇಶ್ವರಿ ದೇಗುಲದ ಬಳಿಯಿಂದ ಮಹದೇವಪೇಟೆಯವರೆಗೆ ಕಿಕ್ಕಿರಿದು ನೆರೆದಿದ್ದರು. ಅಮಿತ್ ಶಾ ಅವರ ಆಗಮನದ ವಿಳಂಬದೊಂದಿಗೆ ಬಿಸಿಲ ಬೇಗೆಯಿಂದ ಬಳಲಿದರು. ಆದರೆ ಸ್ಥಳ ಬಿಟ್ಟು ಕದಲದೆ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು.

Read More

ಮಡಿಕೇರಿ ಏ.29 : ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲೇಬೇಕೆನ್ನುವ ಉದ್ದೇಶದಿಂದ ಪಕ್ಷ ಪ್ರಬಲವಾಗಿ ನೆಲೆಯೂರಿರುವ ಕರಾವಳಿ ಕರ್ನಾಟಕ ಭಾಗದಲ್ಲಿ ಇರುವ ಸ್ಥಾನಗಳನ್ನು ಉಳಿಸಿಕೊಳ್ಳುವುದಕ್ಕಾಗಿ ರಾಷ್ಟ್ರ ಮತ್ತು ರಾಜ್ಯ ನಾಯಕರುಗಳ ದಂಡು ಪ್ರಚಾರದಲ್ಲಿ ತೊಡಗಿದೆ. ಬಿಜೆಪಿಯ ಭದ್ರಕೋಟೆ ಎಂದೇ ಪ್ರತಿಬಿಂಬಿತವಾಗಿರುವ ಕೊಡಗು ಜಿಲ್ಲೆಯ ಇಬ್ಬರು ಅಭ್ಯರ್ಥಿಗಳಾದ ಮಡಿಕೇರಿ ಕ್ಷೇತ್ರದ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ವಿರಾಜಪೇಟೆ ಕ್ಷೇತ್ರದ ಕೆ.ಜಿ.ಬೋಪಯ್ಯ ಅವರುಗಳ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಡಿಕೇರಿಯಲ್ಲಿ ರೋಡ್ ಶೋ ನಡೆಸಿದರು. ನಗರದ ಮಾರುಕಟ್ಟೆ ಬಳಿಯ ಶ್ರೀಚೌಡೇಶ್ವರಿ ದೇಗುಲದಿಂದ ಮಧ್ಯಾಹ್ನ 12.44 ಗಂಟೆಗೆ ಆರಂಭಗೊಂಡ ಚುನಾವಣಾ ರೋಡ್ ಶೋ ಜನರಲ್ ತಿಮ್ಮಯ್ಯ ವೃತ್ತದವರೆಗೆ ನಡೆಯಬೇಕಿತ್ತು. ಆದರೆ ಅಮಿತ್ ಶಾ ಅವರು ಉಡುಪಿಗೆ ತೆರಳಬೇಕಾದ ಅನಿವಾರ್ಯತೆ ಇದ್ದ ಕಾರಣ ಹಳೇ ಖಾಸಗಿ ಬಸ್ ನಿಲ್ದಾಣದ ಸ್ಕ್ವಾಡ್ರನ್ ಲೀಡರ್ ದೇವಯ್ಯ ವೃತ್ತದವರೆಗೆ ಮಾತ್ರ ರೋಡ್ ಶೋ ನಡೆಸಿದರು. ಸುಮಾರು ಅರ್ಧ ಗಂಟೆ ತಡವಾಗಿ ಹೆಲಿಕಾಪ್ಟರ್‍ನಲ್ಲಿ ನಗರದಂಚಿನ ಗಾಲ್ಫ್ ಮೈದಾನಕ್ಕೆ ಆಗಮಿಸಿದ ಅಮಿತ್…

Read More

ಮಡಿಕೇರಿ ಏ.29 : ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿ ಮಡಿಕೇರಿಯಲ್ಲಿ ರೋಡ್ ಶೋ ನಡೆಸುವ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರಾವಳಿ ಕರ್ನಾಟಕವನ್ನು ಬಿಜೆಪಿ ಸಂಪೂರ್ಣವಾಗಿ ಗೆಲ್ಲಲಿದೆ ಮತ್ತು ಕರ್ನಾಟಕದಲ್ಲಿ ನೂರಕ್ಕೆ ನೂರು ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೈಪೋಟಿಯೇ ಇಲ್ಲದಿರುವುದರಿಂದ ನಿರೀಕ್ಷೆಯ 150 ಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಪ್ರತಿ ಪಕ್ಷಗಳು ‘ಮೋದಿ’ ಅವರನ್ನು ಕೆಟ್ಟ ಭಾಷೆಯಿಂದ ತೆಗಳಿದರೆ ಬಿಜೆಪಿ ಬೆಂಬಲಿಗರು, ಸಮರ್ಥಕರ ಸಂಖ್ಯೆ ಹೆಚ್ಚಾಗುತ್ತದೆಯೇ ಹೊರತು ಮತ್ತೇನು ಆಗಲಾರದು ಎಂದು ಅಮಿತ್ ಶಾ ಹೇಳಿದರು. ಪುಟ್ಟ ಜಿಲ್ಲೆ ಕೊಡಗಿನಂತಹ ಗುಡ್ಡಗಾಡು ಪ್ರದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ರೋಡ್ ಶೋಗೆ ಜನ ಸೇರಿದ್ದು ನೋಡಿದರೆ ಬಿಜೆಪಿಯ ಗೆಲುವು ಮತ್ತು ಕರಾವಳಿ ಕರ್ನಾಟಕದಲ್ಲಿ…

Read More

ಮಡಿಕೇರಿ ಏ.29 : ಕೊಡಗು ಗೌಡ ಫುಟ್‍ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಮರಗೋಡುವಿನಲ್ಲಿ ನಡೆದ ಪಾಣತ್ತಲೆ ಕಪ್ ಫುಟ್ಬಾಲ್ ಅಂಗವಾಗಿ ನಡೆದ ವಿವಾಹಿತ ಮಹಿಳೆಯರ ಮುಕ್ತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಂ 11 ಮಾಲ್ದಾರೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ದ್ವಿತೀಯ ಸ್ಥಾನಕ್ಕೆ ಬ್ಲ್ಯಾಕ್ ಪ್ಯಾಂಥರ್ಸ್ ಕಟ್ಟೆಮಾಡು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಫೈನಲ್ ಪಂದ್ಯಾವಳಿಯಲ್ಲಿ ಮೊದಲು ಬ್ಯಾಟ್ ಮಾಡಿದ ಮಾಲ್ದಾರೆ ತಂಡ 4 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 58 ರನ್ ಪೇರಿಸಿತು. ಉತ್ತರವಾಗಿ ಆಡಿದ ಕಟ್ಟೆಮಾಡು ತಂಡ ಮೂರು ವಿಕೆಟ್ ಕಳೆದುಕೊಂಡು 48 ರನ್‍ಗಳಿಸಿ 10 ರನ್‍ಗಳ ಅಂತರದಿಂದ ಸೋಲನುಭವಿಸಿತು. ಉತ್ತಮ ಬ್ಯಾಟ್ಸ್‍ಮೆ ಪ್ರಶಸ್ತಿಯನ್ನು ಮಾಲ್ದಾರೆ ತಂಡದ ಸುಜಿತಾ ಪಡೆದರೆ, ಉತ್ತಮ ಬೌಲರ್ ಪ್ರಶಸ್ತಿಯನ್ನು ಕಟ್ಟೆಮಾಡುವಿನ ಬಿದ್ರುಪಣೆ ಜ್ಯೋತಿ, ಉತ್ತಮ ಆಲ್‍ರೌಂಡರ್ ಹಾಗೂ ಅತಿ ಹೆಚ್ಚು ರನ್‍ಗಳಿಕೆಯ ಪ್ರಶಸ್ತಿಯನ್ನು ಮಾಲ್ದಾರೆಯ ಪ್ರಮೀಳಾ ಹಾಗೂ ಬೆಸ್ಟ್ ಫೀಲ್ಡರ್ ಪ್ರಶಸ್ತಿಯನ್ನು ಕಟ್ಟೆಮಾಡುವಿನ ಬಡಕಡ ಶೃಂಗ ಪಡೆದುಕೊಂಡರು. ಕೊಡಗು ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಪಾಣತ್ತಲೆ ಜಗದೀಶ್…

Read More

ಮಡಿಕೇರಿ ಏ.29 :  ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ 5, 7, 10 ಹಾಗೂ +2 ತರಗತಿಗಳಿಗೆ ನಡೆಸುವ ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ದಾರುಲ್ ಉಲೂಂ ಮದ್ರಸ ಕುಶಾಲನಗರ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ ಎಂದು ಪ್ರಾಂಶುಪಾಲರಾದ ತಮ್ಲೀಖ್ ದಾರಿಮಿ ತಿಳಿಸಿದ್ದಾರೆ. ಉಸ್ತಾದ್ ಸ್ವಾಲಿಹ್ ಅಝ್ಹರಿಯವರ 5ನೇ ತರಗತಿಯಲ್ಲಿ 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು ಮಡಿಕೇರಿ ರೇಂಜ್ ಮಟ್ಟದಲ್ಲಿ ಮೊದಲ ಮೂರು ಸ್ಥಾನಗಳನ್ನು ಶೈಖ್ ಅಮಾನ್, ಮುಹಮ್ಮದ್ ಆಮೀರ್,ಆಯಿಷಾ ಫಾಝಿಲಾ ಕ್ರಮವಾಗಿ ಪಡೆದುಕೊಂಡಿದ್ದಾರೆ. ಪ್ರತ್ಯೇಕವಾಗಿ ಶೈಖ್ ಅಮಾನ್ ಜಿಲ್ಲಾ ಮಟ್ಟದಲ್ಲಿ 2ನೇ ಸ್ಥಾನ ಹಾಗೂ ಮುಹಮ್ಮದ್ ಆಮೀರ್ 3ನೇ ಸ್ಥಾನ ಪಡೆದಿದ್ದಾರೆ. ಮುಷ್ತಾಕ್ ದಾರಿಮಿ ಕಲಿಸುತ್ತಿರುವ 7ನೇ ತರಗತಿಯಲ್ಲಿ 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು ರೇಂಜ್ ಮಟ್ಟದಲ್ಲಿ 3ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 10ನೇ ತರಗತಿಯಲ್ಲಿ ಕಲಿಯುತ್ತಿರುವ ಸಫ್ವಾನ್ ಜೆ ಐ ಎಂಬ ವಿದ್ಯಾರ್ಥಿಯೂ ಡಿಸ್ಟಿಂಕ್ಷನೊಂದಿಗೆ ಕೊಡಗು ಜಿಲ್ಲೆಯಲ್ಲಿ ಮೊದಲ ರ್‍ಯಾಂಕ್ ಪಡೆದಿದ್ದಾರೆ. ಫಾತಿಮಾ ನಾಸರ್ 3ನೇ ಸ್ಥಾನ ಪಡೆದಿದ್ದು…

Read More

ಮಡಿಕೇರಿ ಏ.29 : ಮಡಿಕೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು. ನಗರದ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ  ಸಲ್ಲಿಸಿದರು. ನಂತರ ಹಳೇ ಖಾಸಗಿ ಬಸ್‍ ನಿಲ್ದಾಣದ ವರೆಗೆ ರೋಡ್ ಶೋ ನಡೆಸಿ ಅಭ್ಯರ್ಥಿಗಳ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಪಕ್ಷದ ಕಾರ್ಯಕರ್ತರು  ಹಾಜರಿದ್ದರು.

Read More

ನಾಪೋಕ್ಲು  ಏ.29 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (ಜೆಡಿಎಸ್ )ಅಭ್ಯರ್ಥಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಪೊನ್ನಂಪೇಟೆ ತಾಲೂಕಿನ ಕುಟ್ಟಗ್ರಾಮದಲ್ಲಿ ಬಿರುಸಿನ ಪ್ರಚಾರದ ಮೂಲಕ ಮಾತಯಾಚನೆ ನಡೆಸಿದರು. ಕುಟ್ಟಪಟ್ಟದಲ್ಲಿರುವ ಮಸೀದಿಯಲ್ಲಿ ಜುಮಾನಮಾಜಿನ ಬಳಿಕ ಕಾರ್ಯಕರ್ತರೊಂದಿಗೆ ಪಟ್ಟಣದ ಅಂಗಡಿ ಮುಂಗಟ್ಟು ಗಳಿಗೆ ತೆರಳಿ ವ್ಯಾಪಾರಿಗಳಲ್ಲಿ ಮಾತಯಾಚನೆಮಾಡಿದರು. ಬಳಿಕ ಮಾಪಿಳತ್ತೋಡು ಸೇರಿದಂತೆ ವಿವಿಧ ಗ್ರಾಮದ ಮನೆಗಳಿಗೆ ತೆರಳಿ ಬಿರುಸಿನ ಮತಯಾಚನೆ ಮಾಡಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಜಿಲ್ಲೆಗೆ ಹಲವಾರು ಜನಪರ ಕೆಲಸಗಳನ್ನು ಮಾಡಿದೆ. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯನ್ನು ಯಾವುದೇ ನಿಬಂಧನೆಗಳಿಲ್ಲದೆ ಜಾರಿಗೆ ತರಲಿದೆ. ಕ್ಷೇತ್ರದಲ್ಲಿ ಭೇಟಿ ನೀಡಿದ ಕಡೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಜನರು ಉತ್ತಮವಾಗಿ ಬೆಂಬಲವನ್ನು ನೀಡುತ್ತಿದ್ದಾರೆ.ಅದರಿಂದ ಈ ಬಾರಿ ವಿರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಮನ್ಸೂರ್ ಆಲಿ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಕುಟ್ಟ ಜೆಡಿಎಸ್ ಮುಖಂಡರಾದ ಕುಜ್ಞಪ್ಪ ,ರೆನ್ನಿ,ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರಾದ ಶರ್ಫುದ್ದೀನ್ ಗೋಣಿಕೊಪ್ಪ, ಮಜೀದ್ ಚೋಕಂಡಳ್ಳಿ,ಸೈಫುದ್ದೀನ್,ಕಾಳೆರಾ ಅಲಿ…

Read More