ಮಡಿಕೇರಿ ಮಾ.21 : ಅಲ್ಲಾರಂಡ ರಂಗಚಾವಡಿ ವತಿಯಿಂದ ಮಾ.27 ರಂದು ಮಡಿಕೇರಿಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಂಗ ಭೂಮಿ ಕಲಾವಿದ, ಕಸಾಪ ಮಾಜಿ ಅಧ್ಯಕ್ಷ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ.ತಿಮ್ಮೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಲ್ಲಾರಂಡ ರಂಗಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಸದಸ್ಯರಾದ ರಾಧ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ರಂಗ ಕಲಾವಿದರಾದ ಉಳ್ಳಿಯಡ ಡಾಟಿ ಪೂವಯ್ಯ, ಪಟ್ಟಡ ಧನು, ರಂಗ ಕರ್ಮಿ ಬಾಲಾಜಿ ಕಶ್ಯಪ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಮಾದೇಟಿರ ಬೆಳ್ಯಪ್ಪ ನಿರ್ದೇಶನದ “ಕಣಿವೆಯ ನೆಳಲಲ್ಲಿ” ನಾಟಕ ಪ್ರದರ್ಶನ ನಡೆಯಲಿದೆ ಎಂದು ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ ನಂಜಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮಾ.21 : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡುವ ಪ್ರಭಾಕರ ಕಲ್ಲೂರಾಯ ವಾರ್ಷಿಕ ದತ್ತಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಸ್ಮರಣಿಕೆಯನ್ನು ಹೊಂದಿದ್ದು, ಏ.30 ರಂದು ಕೇರಳದ ಕೊಚ್ಚಿನ್ ನಗರದ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎ.ಆರ್ ಸುಬ್ಬಯ್ಯಕಟ್ಟೆ ತಿಳಿಸಿದ್ದಾರೆ.
ಮಡಿಕೇರಿ ಮಾ.21 : ನಾಪೊಕ್ಲುವಿನಲ್ಲಿ ನಡೆದ ಅಪ್ಪಚೆಟ್ಟೊಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಭರವಸೆಯಂತೆ ಕೊಡವ ಅಭಿವೃದ್ಧಿ ನಿಗಮವನ್ನು ಅಧಿಕೃತವಾಗಿ ಘೋಷಿಸುವ ಮೂಲಕ ಸರಕಾರ ನುಡಿದಂತೆ ನಡೆದಿದೆ, ಮುಖ್ಯಮಂತ್ರಿಗಳಿಗೆ, ಶಾಸಕರುಗಳಿಗೆ ಹಾಗೂ ಸರ್ಕಾರಕ್ಕೆ ಕೊಡವ ಜನಾಂಗದ ಪರವಾಗಿ ಧನ್ಯವಾದಗಳು ಎಂದು ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜ ಹಾಗೂ ಅದರ ಅಂಗಸಂಸ್ಥೆಗಳು ಹರ್ಷ ವ್ಯಕ್ತಪಡಿಸಿದೆ. ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿರುವ ಅವರು ಇದರ ಯಶಸ್ಸಿನ ಹಿಂದೆ ಹಗಲಿರುಳು ಶ್ರಮಿಸಿರುವ ಯುಕೊ ಸಂಸ್ಥೆಯ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಹಾಗೂ ಬಳಗದವರ ಶ್ರಮ ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದವರಿಗೆ ಜನಾಂಗದ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.…
ಮಡಿಕೇರಿ ಮಾ.21 : ಚೆನ್ನೈನಲ್ಲಿ ಜರುಗಿದ ಇಂಡಿಯನ್ ನ್ಯಾಷನಲ್ ರೇಸಿಂಗ್ ಚಾಂಪಿಯನ್ ಶಿಪ್ ಮೋಟಾರ್ ರ್ಯಾಲಿಯ 4 ವಿಭಾಗಗಳಲ್ಲಿ ಕೊಡಗಿನ ಅಭಿನ್ ರೈ ಮೊದಲ ಸ್ಥಾನದೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಮದ್ರಾಸ್ ಮೋಟಾರ್ ಸ್ಪೋಟ್ಸ್ ಕ್ಲಬ್ ಆಯೋಜಿಸಿದ್ದ ಏಷ್ಟಾ ಪೆಸಿಫಿಕ್ ಮೋಟಾರ್ ರ್ಯಾಲಿಯಲ್ಲಿ ಹೋಂಡಾ ಸಿಟಿ ಕಾರ್ ನಲ್ಲಿ ಪಾಲ್ಗೊಂಡಿದ್ದ ಮೇಕೇರಿ ಗ್ರಾಮಮೂಲದ ಅಭಿನ್ ರೈ, ರಾಷ್ಟ್ರೀಯ ಮಟ್ಟದ ರ್ಯಾಲಿ ಚಾಲಕರಿಗೆ ಪ್ರಬಲ ಸ್ಪಧೆ೯ಯೊಡ್ಡಿದ್ದು 61 ಸ್ಪಧಿ೯ಗಳ ಪೈಕಿ ಅಂತಿಮ ಹಂತದಲ್ಲಿ 15 ನೇ ಸ್ಥಾನ ಪಡೆದುಕೊಂಡಿದ್ದಾರೆ. ಅಭಿನ್ ಜತೆ ನ್ಯಾವಿಗೇಟರ್ ಆಗಿ ಉದಯ್ ಕುಮಾರ್ ಪಾಲ್ಗೊಂಡಿದ್ದರು. ಈಗಾಗಲೇ 53 ಪ್ರಶಸ್ತಿಗಳನ್ನು ಅಭಿನ್ ಮೋಟಾರ್ ರ್ಯಾಲಿ ಕ್ಷೇತ್ರದಲ್ಲಿ ತನ್ನದಾಗಿಸಿಕೊಂಡ ಹಿರಿಮೆಗೆ ಪಾತ್ರರಾಗಿದ್ದಾರೆ. ಅಭಿನ್ ರೈ ಮೇಕೇರಿ ಗ್ರಾಮದ ರತ್ನಾಕರ್ ರೈ ಮತ್ತು ನಮಿತಾ ರೈ ದಂಪತಿ ಪುತ್ರನಾಗಿದ್ದಾನೆ.
ಮಡಿಕೇರಿ ಮಾ.21 : ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೊಡಗು ಜಿಲ್ಲೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೊಡಗು ಜಿಲ್ಲೆ, ಮೆಕ್ಗಿಲ್ ವಿಶ್ವವಿದ್ಯಾನಿಲಯ ಕೆನಡಾ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಶಾಖೆ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ಮಡಿಕೇರಿಯ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಸಭಾಂಗಣದಲ್ಲಿ “ವಿಪತ್ತು ನಿರ್ವಹಣೆಯಲ್ಲಿ ವಿಶೇಷಚೇತನರ ಅವಶ್ಯಕತೆಗಳ ಅಳವಡಿಕೆಯ” ವಿಷಯದ ಕುರಿತಂತೆ ಜಿಲ್ಲಾ ಮಟ್ಟದ ಪ್ರಸರಣ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು 2018 ರಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ವಿಪತ್ತು ಹಾಗೂ ಪ್ರವಾಹದ ಅನುಭವಗಳ ಕುರಿತಾದ ಮಾಹಿತಿಯನ್ನು ಹಂಚಿಕೊಂಡರು. 2018 ಆಗಸ್ಟ್ ಮಾಹೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದ ಅನುಭವಗಳ ಕುರಿತಾಗಿ ಹಾಗೂ ವಿಪತ್ತು ನಿರ್ವಹಣೆ ಯೋಜನೆಗೆ ನಿಯೋಜನೆಗೊಂಡಿದ್ದ ಎನ್.ಡಿ.ಆರ್.ಎಫ್ ತಂಡಗಳ ಕಾರ್ಯ ವೈಕರಿಗಳ…
ಚೆಟ್ಟಳ್ಳಿ ಮಾ.21 : ಚೆನ್ನೈನಲ್ಲಿ ನಡೆದ ಇಂಡಿಯನ್ ನ್ಯಾಷನಲ್ ಸೌತ್ ಇಂಡಿಯಾ ರ್ಯಾಲಿಯ ಜಿಪ್ಸಿಕ್ಲಾಸ್ ನಲ್ಲಿ ಕೊಡಗಿನ ಪೊನ್ನಂಪೇಟೆಯ ಕೊಕ್ಕೇಂಗಡ ದರ್ಶನ್ ನಾಚಪ್ಪ (ಡ್ರೈವರ್) ಹಾಗೂ ಮೇಕೇರಿರ ಅಭಿನವ್ ಗಣಪತಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ. ಮಾ.16 ರಿಂದ ಮಾ.19 ರವರೆಗೆ ಚೆನ್ನೈನಲ್ಲಿ ನಡೆದ ಈ ವರ್ಷದ ಮೊದಲ ಇಂಡಿಯನ್ ನ್ಯಾಷನಲ್ ರ್ಯಾಲಿ (INRC)ಯು ಚೆನ್ನೈನಲ್ಲಿ ಐಎನ್ ಆರ್ ಸಿ 1 ರಿಂದ ಐನ್ ಆರ್ ಸಿ 4 ಕ್ಯಾಟಗರಿ ಹಾಗೂ ಜಿಪ್ಸಿ ಕ್ಯಾಟಗರಿಯು ಹೆಚ್ಚಿನ ವೇಗದ ತೀರಾ ಅಪಾಯ ಕಾರಿ ರ್ಯಾಲಿ ನಡೆದಿದ್ದು, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ 60 ನುರಿತ ರ್ಯಾಲಿ ಪಟುಗಳು ಭಾಗವಹಿಸಿದರು. ಜಿಪ್ಸಿಕ್ಲಾಸ್ ನಲ್ಲಿ ಕೊಡಗಿನ ಪೊನ್ನಂಪೇಟೆಯ ಕೊಕ್ಕೇಂಗಡ ದರ್ಶನ್ ನಾಚಪ್ಪ (ಡ್ರೈವರ್) ಹಾಗೂ ಮೇಕೇರಿರ ಅಭಿನವ್ ಗಣಪತಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ. ದರ್ಶನ್ ನಾಚಪ್ಪ ಹಾಗೂ ಮೇಕೇರಿರ ಅಭಿನವ್ ಗಣಪತಿ ಈ ಹಿಂದೆ…
ಮಡಿಕೇರಿ ಮಾ.21 : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕರಿರೋವ೯ರಿಗೆ ಮಡಿಕೇರಿಯ ಇನ್ನರ್ ವೀಲ್ ಸಂಸ್ಥೆಯಿಂದ ಆಥಿ೯ಕ ನೆರವು ನೀಡಲಾಯಿತು. ನಗರದ ರೈಫಲ್ ರೇಂಜ್ ಬಡಾವಣೆ ನಿವಾಸಿ ವೇಲಾಯುಧನ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಇವರಿಗೆ ಚಿಕಿತ್ಸೆಗೆ ಅಗತ್ಯವಾಗಿದ್ದ ಆಥಿ೯ಕ ನೆರವಾಗಿ 5 ಸಾವಿರ ರು.ಗಳನ್ನು ಇನ್ನರ್ ವೀಲ್ ಸಂಸ್ಥೆಯಿಂದ ನೀಡಲಾಯಿತು. ಇನ್ನರ್ ವೀಲ್ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯರಾದ ಮಲ್ಲಿಗೆ ಪೈ, ಉಮಾಗೌರಿ, ಅ್ಯಗ್ನೇಸ್ ಮುತ್ತಣ್ಣ, ರಾಧಿಕ ವಿಶ್ವನಾಥ್ ಹಾಜರಿದ್ದರು.
ಸುಂಟಿಕೊಪ್ಪ ಮಾ.21 : ಗಡ್ಡಪ್ಪ ರೈ ಬಡಾವಣೆ ನಿವಾಸಿ ಪಾಸ್ಟರ್ ಪಿಲೋಮಿನಾರಾಜ್ ಹಾಗೂ ವರ್ಕ್ಶಾಪ್ ಅಂತೋಣಿ ಅವರ ತಾಯಿ ಮೇರಿ ಲೂರ್ದ್ ಸ್ವಾಮಿ (93) ನಿಧನರಾದರು. ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯ ಕ್ರಿಯೆಯು ಮಡಿಕೇರಿಯ ಸಿ.ಎಸ್.ಐ ಸ್ಮಶಾನದಲ್ಲಿ ನೆರವೇರಿತು.
ನಾಪೋಕ್ಲು ಮಾ.21 : ಹಳೆ ತಾಲೂಕಿನ ನಾಡು ಭಗವತಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮಾರ್ಚ್ 17 ರಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆದುಕೊಂಡು ಬಂದ ಶ್ರೀ ಭಗವತಿ ದೇವರ ಹಬ್ಬವು ಪಟ್ಟಣಿ ಆಚರಣೆಯೊಂದಿಗೆ ಸಂಪನ್ನ ಗೊಂಡಿತ್ತು. ಆರ0ಭದಲ್ಲಿ ಬಂಡಾರವನ್ನು ದೇವಾಲಯಕ್ಕೆ ತರಲಾಯಿತು. ನಂತರ ಅಂದಿಬೊಳಕು, ರಾತ್ರಿ ಶ್ರೀ ಭದ್ರಕಾಳಿ ದೇವರ ಕೋಲ ನಡೆಯಿತು. ದೇವರ ಊರ ಪ್ರದಕ್ಷಿಣೆ, ಎತ್ತುಪೋರಾಟ. ಪಟ್ಟಣಿ ಹಬ್ಬ ವಿಶೇಷ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ಬಳಿಕ ಗ್ರಾಮಸ್ಥರಿಂದ ಬೋಳಕಾಟ್, ದೇವರ ನೃತ್ಯ ಬಲಿ ಸಾಂಗವಾಗಿ ನೆರವೇರಿತು. ಉತ್ಸವದ ಧಾರ್ಮಿಕ ಪೂಜಾ ವಿಧಿ ವಿಧಾನವನ್ನು ಗಿರೀಶ್ ತಂತ್ರಿ ಪೇರೂರು, ದೇವಾಲಯದ ಮುಖ್ಯ ಅರ್ಚಕ ಹರೀಶ್ ಕೆಕುಣ್ಣಾಯ, ಹಾಗೂ ನೃತ್ಯ ಬಲಿಯನ್ನು ಜಯಚಂದ್ರ ನೆರವೇರಿಸಿ ಕೊಟ್ಟರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ, ನಿವೃತ್ತ ಶಿಕ್ಷಕ ಕುಲ್ಲೇಟಿರ ಗುರುವಪ್ಪ, ಕಾರ್ಯದರ್ಶಿ ಕಂಗಂಡ ಜಾಲಿ ಪೂವಪ್ಪ, ಆಡಳಿತ ಮಂಡಳಿ ನಿರ್ದೇಶಕರು, ತಕ್ಕ ಮುಖ್ಯಸ್ಥರು ಹಾಗೂ…
ನಾಪೋಕ್ಲು ಮಾ.21 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿಯಾಗಿ ಎ.ಎ.ಮೊಹಮ್ಮದ್ ಹಾಜಿ ನೇಮಕಗೊಂಡಿದ್ದಾರೆ. ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಕೆ. ಜಬ್ಬಾರ್ ಒ.ಐ.ಅ ಹಾಗೂ ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್ ಅವರ ಆದೇಶದ ಮೇರೆಗೆ ಆದೇಶ ಪತ್ರವನ್ನು ಮಹಮ್ಮದ್ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಕೊಡಗು ಜಿಲ್ಲಾ ವಕ್ಷ್ ಬೋರ್ಡ್ ಉಪಾಧ್ಯಕ್ಷ ಎಂ.ಎ.ಮೊಯಿದು, ಕೊಡಗು ಜಿಲ್ಲಾ ಕಾಂಗ್ರೆಸ್ ಮುಖಂಡ ಹನೀಫ್, ಕೆ.ಎಂ.ಅಶ್ರಫ್ ಎಮ್ಮೆಮಾಡು ಇನ್ನಿತರರು ಉಪಸ್ಥಿತರಿದ್ದರು. ಮಹಮ್ಮದ್ ಆಜಿ ಅವರು ಮರ್ಕಜ್ ವಿದ್ಯಾ ಸಂಸ್ಥೆ ಮತ್ತು ಕಾಲೇಜಿನ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಮುಸ್ಲಿಂ ಜಮಾಯತ್ನ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಕುಂಜಿಲ ಜಮಾಯತ್ತಿನ ಅಧ್ಯಕ್ಷರಾಗಿ ಕುಂಜಿಲ ಶಾಲೆಯ ಅಧ್ಯಕ್ಷರಾಗಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇರಿದಂತೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ವರದಿ : ದುಗ್ಗಳ ಸದಾನಂದ.






