ಸೋಮವಾರಪೇಟೆ ಮಾ.21 : ಗೋಣಿಕೊಪ್ಪದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಪೋಸ್ಟರ್ ಮೇಲೆ ಚಪ್ಪಲಿ ಚಿತ್ರವನ್ನಿಟ್ಟು ಅವಮಾನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಠಜಾತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು. ಈ ಸಂದರ್ಭ ಘಟಕದ ಜಿಲ್ಲಾಧ್ಯಕ್ಷ ಬಿ.ಇ.ಜಯೇಂದ್ರ ಮಾತನಾಡಿ, ಬಿಜೆಪಿ, ಸಂಘ ಪರಿವಾರದ ಕೆಲ ಕಿಡಿಕೇಡಿಗಳ ಮನಸ್ಥಿತಿ ಇಂತಹ ಕೃತ್ಯಗಳಿಂದ ತಿಳಿದು ಬರುತ್ತದೆ. ತಕ್ಷಣವೇ ಆರೋಪಿಗಳನ್ನು ಪತ್ತೆಹಚ್ಚಿ ಮೊಕದ್ದಮೆ ದಾಖಲಿಸಿ, ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆಯ ಮನವಿ ಪತ್ರವನ್ನು ತಶೀಲ್ದಾರ್ ಚಂದ್ರಹಾಸ್ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು. ವಿಜಯಸಂಕಲ್ಪ ದಿನದ ಕಾರ್ಯಕ್ರಮದ ಆಯೋಜಕರು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬಿಜೆಪಿ ಸಭೆಯೊಂದರಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ಮಸೀದಿಯೊಂದರಲ್ಲಿ ಅಜಾನ್ ಮೊಳಗಿದ ಸಂದರ್ಭ ಅಲ್ಪಸಂಖ್ಯಾತ ಜನಾಂಗದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.…
ಲೇಖಕ: admin
ಸೋಮವಾರಪೇಟೆ ಮಾ.21 : ಹಾಸನದ 2ನೇ ಘಟಕದ ವತಿಯಿಂದ ಸೋಮವಾರಪೇಟೆಯಿಂದ ಹಾಸನ, ಅರಸಿಕೆರೆ ಮಾರ್ಗದ ಮೂಲಕ ಶಿವಮೊಗಕ್ಕೆ ನೂತನ ಬಸ್ ಸಂಚಾರ ಪ್ರಾರಂಭಗೊಂಡಿದೆ. ಬೆಳಿಗ್ಗೆ 5 ಗಂಟೆಗೆ ಇಲ್ಲಿಂದ ಹೊರಟು, ಅರಕಲಗೂಡು ಮಾರ್ಗದ ಮೂಲಕ 7-15ಕ್ಕೆ ಹಾಸನ, 8-30ಕ್ಕೆ ಅರಸಿಕೆರೆ, 10ಕ್ಕೆ ಭದ್ರಾವತಿ ಹಾಗೂ 11ಕ್ಕೆ ಶಿವಮೊಗಕ್ಕೆ ತಲುಪುವುದು. ನಂತರ ಮಧ್ಯಾಹ್ನ 12-30ಕ್ಕೆ ಶಿವಮೊಗ್ಗದಿಂದ ಹೊರಟು ಅದೇ ಮಾರ್ಗದಲ್ಲಿ ರಾತ್ರಿ 9ಕ್ಕೆ ಸೋಮವಾರಪೇಟೆ ತಲುಪುವುದು ಎಂದು ನಿಯಂತ್ರಣಾಧಿಕಾರಿ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರಿನ ಗ್ರಾಮಾಂತರ ವಿಭಾಗದ ಕೆ.ಆರ್. ನಗರ ಡಿಪೋದಿಂದ ಸೋಮವಾರಪೇಟೆ ಮೂಲಕ ಬೆಂಗಳೂರಿಗೆ ನೂತನ ಮಾರ್ಗ ಪ್ರಾರಂಭಗೊಂಡಿದೆ. ಮಧ್ಯಾಹ್ನ 12ಕ್ಕೆ ಕೆ.ಆರ್. ನಗರದಿಂದ ಹೊರಟು, 2ಕ್ಕೆ ಮೈಸೂರು, 4.45ಕ್ಕೆ ಕುಶಾಲನಗರ, ಸಂಜೆ 6ಕ್ಕೆ ಸೋಮವಾರಪೇಟೆ, ಅರಕಲಗೂಡು, ಚನ್ನರಾಯಪಟ್ಟಣದ ಮೂಲಕ ರಾತ್ರಿ 11.15ಕ್ಕೆ ಬೆಂಗಳೂರು ತಲುಪುತ್ತದೆ ಎಂದು ನಿಯಂತ್ರಣಾಧಿಕಾರಿ ಪರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಮಾ.21 : ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆಯಲ್ಲಿ ಕೆಲ ನೌಕರರಿಂದ ರೈತರ ಶೋಷಣೆ ನಡೆಯುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ವಿವೇಕಾನಂದ ವೃತ್ತದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಜೇಸಿ ವೇದಿಕೆಯಲ್ಲಿ ಬಹಿರಂಗ ಸಭೆ ನಡೆಸಿ ಇಲಾಖೆಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್.ಸುರೇಶ್ ಮಾತನಾಡಿ, 1993 ಮತ್ತು 99ರಲ್ಲಿ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ ಅನೇಕ ರೈತರಿಗೆ ಇದುವರಗೆ ಭೂ ಮಂಜೂರಾತಿ ಆಗಿರುವುದಿಲ್ಲ. ಕೆಲವು ಪ್ರಭಾವಿಗಳಿಗೆ ಮಾತ್ರ ಸಿ ಮತ್ತು ಡಿ ಜಾಗದಲ್ಲಿ ಭೂ ಮಂಜೂರಾತಿ ಆಗಿರುತ್ತದೆ. ಉಳಿದ ರೈತರು ಏನೂ ಅನ್ಯಾಯ ಮಾಡಿದ್ದಾರೆ. ಎಲ್ಲಾ ರೈತರಿಗೂ ಸಿ ಮತ್ತು ಡಿ ಜಾಗದಲ್ಲಿ ಭೂ ಮಂಜೂರಾತಿ ಮಾಡುವಂತೆ ಆಗ್ರಹಿಸಿದರು. ರೈತರು ಬೀದಿಗಿಳಿದು ಪ್ರತಿಭಟನೆ ಮಾಡದಿದ್ದರೆ ರೈತರ ಶೋಷಣೆ ಮುಂದುವರಿಯಲಿದೆ ಎಂದು ಎಚ್ಚರಿಸಿದರು. ಜಮ್ಮಾ ಹಿಡುವಳಿ, ಕಂದಾಯ ವ್ಯಾಪ್ತಿಗೆ ಬಂದೇ ಇಲ್ಲ. ಇಂದಿಗೂ ಜಮ್ಮಾ ಹಿಡುವಳಿದಾರರಿಗೆ ಬೆಳೆಹಾನಿ…
ಮಡಿಕೇರಿ ಮಾ.20 : ಕೊಡವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರಕಾರ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಇಂದು ಮುಖ್ಯಮಂತ್ರಿಗಳು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮಾ.18ರಂದು ನಾಪೋಕ್ಲುವಿನಲ್ಲಿ ಆಯೋಜಿತ 23ನೇ ವರ್ಷದ ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಅಪ್ಪಚೆಟ್ಟೋಳಂಡ ಹಾಕಿ ಉತ್ಸವ 2023ಕ್ಕೆ ಚಾಲನೆ ನೀಡಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದರು. ಈ ಭರವಸೆಯಂತೆೆ ಇಂದು ಅಧಿಕೃತವಾಗಿ ಸಿ.ಎಂ. ನಿಗಮ ಸ್ಥಾಪನೆಯ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಈ ಹಿಂದೆ ಹಲವು ಬಾರಿ ಸರಕಾರದ ಮೇಲೆ ಒತ್ತಡ ಹೇರಲಾಗಿತ್ತು. ಜಿಲ್ಲೆಯ ಶಾಸಕರೊಂದಿಗೆ ವಿವಿಧ ಕೊಡವ ಸಂಘಟನೆಗಳ ಪ್ರಮುಖರು ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ನಿಗಮ ಸ್ಥಾಪನೆಗೆ ಆಗ್ರಹಿಸಿದ್ದರು. ಸರಕಾರದ ಅಧಿಕೃತ ಆದೇಶಕ್ಕೆ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಹರ್ಷ ವ್ಯಕ್ತಪಡಿಸಿದ್ದಾರೆ. ಅನೇಕ ವರ್ಷಗಳ ಬೇಡಿಕೆಯನ್ನು ಬಿಜೆಪಿ ಸರಕಾರ ಈಡೇರಿಸಿದೆ ಎಂದು ಶಾಸಕದ್ವಯರು ಹೇಳಿದ್ದಾರೆ. ಈ ಮೊದಲು ಯುಕೊ…
ಮಡಿಕೇರಿ ಮಾ.20 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಸಮಾಜ ಸೇವಕ ಡಾ. ಮಂಥರ್ ಗೌಡ, ಶಿಕ್ಷಣದಿಂದ ಮಾತ್ರ ಬದಲಾವಣೆ ತರಲು ಸಾಧ್ಯ. ವಿದ್ಯೆಯನ್ನು ಯಾರು ಕಸಿಯುವುದಿಲ್ಲ. ಜೊತೆಗೆ ಸಮಾಜದಲ್ಲಿ ಗೌರವವೂ ದೊರೆಯುತ್ತದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ದೊರೆಯಬೇಕು. ಎಚ್ಚರಿಕೆ ಹೆಜ್ಜೆ ಇಡುವ ಮೂಲಕ ಉತ್ತಮ ಸತ್ಪ್ರಜೆಯಾಗಿ ರೂಪುಗೊಳ್ಳಬೇಕು. ತಂತ್ರಜ್ಞಾನ ವೇಗದಲ್ಲಿ ನಾವು ಮುನ್ನಡೆಯಬೇಕು. ವಿದ್ಯಮಾನಗಳ ಬಗ್ಗೆ ಅರಿತುಕೊಳ್ಳ ಬೇಕೆಂದು ಕಿವಿಮಾತನಾಡಿದರು. ಸಭಾಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ನೇತ್ರ ತಜ್ಞ ಡಾ. ಪ್ರಶಾಂತ್, ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರೆ ಅವರಲ್ಲಿ ಸಕಾರಾತ್ಮಕ ಗುಣ ಹೆಚ್ಚಿ ಮತಷ್ಟು ಸಾಧನೆ ಮಾಡುವ ಗುರಿ ಬರುತ್ತದೆ ಎಂದರು. ಮಡಿಕೇರಿ ನಗರ ಸಹಾಯಕ…
ಶ್ರೀಮಂಗಲ ಮಾ.20 : ಪೊನ್ನಂಪೇಟೆ ತಾಲೂಕು ಬೆಳ್ಳೂರು-ಹರಿಹರ ಗ್ರಾಮದ ಬಾಚೀರ ಕುಟುಂಬದಿಂದ ಹರಿಹರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಏ.1 ರಿಂದ 9 ರವರೆಗೆ ನಡೆಯುವ ಕೊಡವ ಕೌಟುಂಬಿಕ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಟೈಸ್ ಬಿಡುಗಡೆ ಮಾಡಲಾಯಿತು. ಟಿ. ಶೆಟ್ಟಿಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಅಧ್ಯಕ್ಷ ಬಾಚೀರ ಎನ್.ಕಾರ್ಯಪ್ಪ , ಬಾಚೀರ ಕುಟುಂಬ ಅಧ್ಯಕ್ಷ ಸುಜಾ ಉತ್ತಯ್ಯ, ಸಂಚಾಲಕ ರಾಜ ಉತ್ತಪ್ಪ ನೇತೃತ್ವದಲ್ಲಿ ಟೈಸ್ ಬಿಡುಗಡೆ ನಡೆಯಿತು. ಈ ಸಂದರ್ಭ ಕುಟುಂಬ ಅಧ್ಯಕ್ಷ ಸುಜಾ ಉತ್ತಯ್ಯ ಮತ್ತು ಪಂದ್ಯಾವಳಿ ಅಧ್ಯಕ್ಷ ಕಾಶಿ ಕಾರ್ಯಪ್ಪ ವಿವರಣೆ ನೀಡಿ, ಪಂದ್ಯಾವಳಿಗೆ ಮೊದಲು ನೋಂದಾಯಿಸುವ 64 ತಂಡಗಳಿಗೆ ಮಾತ್ರ ಆದ್ಯತೆ ನೀಡಲು ನಿರ್ಧರಿಸಲಾಗಿತ್ತು, ಅದರಂತೆ 64 ತಂಡ ನೋಂದಣಿ ಆಗಿದೆ. ಈಗಾಗಲೇ ಪಂದ್ಯಾವಳಿಯ ವಿನ್ನರ್ಸ್ ತಂಡಕ್ಕೆ ರೂ.50 ಸಾವಿರ ಮತ್ತು ಟ್ರೋಫಿ, ರನ್ನರ್ಸ್ ತಂಡಕ್ಕೆ ರೂ.30 ಸಾವಿರ ಮತ್ತು ಟ್ರೋಫಿ, ಮೂರನೇ ಸ್ಥಾನ ಪಡೆಯುವ ತಂಡಕ್ಕೆ…
ಮಡಿಕೇರಿ ಮಾ.20 : ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯು ನಿರ್ಗತಿಕರ ಉನ್ನತಿಗೆ ಸಹಕಾರಿಯಾಗಲಿದ್ದು, ಇದು ಸಮಾನತೆ, ಪಾರದರ್ಶಕತೆ ಮತ್ತು ಸಮಾಜದಲ್ಲಿ ಉನ್ನತ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಎನ್ಸಿಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕ ಏರ್ ಕಮೊಡರ್ ಬಿ.ಎಸ್.ಕನ್ವರ್ (ವಿಶಿಷ್ಟ ಸೇವಾ ಪದಕ ವಿಜೇತರು) ಅಭಿಪ್ರಾಯಪಟ್ಟಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಎನ್ಸಿಸಿ ಕೆಡೆಟ್ಗಳಿಗೆ “ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯಲ್ಲಿ ಎನ್ಸಿಸಿಯ ಅಗತ್ಯತೆ”ಗಳ ಕುರಿತು ನಡೆದ ರಾಜ್ಯಮಟ್ಟದ ಕಾರ್ಯಾಗಾರ ಮತ್ತು ಸಮಾಲೋಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ತರವಾದ ನೀತಿ ಇದಾಗಿದ್ದು, ವಿದ್ಯಾರ್ಥಿಗಳಲ್ಲಿ ಗುಣಾತ್ಮಕತೆ ಹಾಗೂ ರಾಷ್ಟ್ರೀಯತೆಯನ್ನು ಬೆಳೆಸುವ ನಿರ್ದಿಷ್ಟ ಗುರಿಯನ್ನು ಹೊಂದಿದೆ. ಕೋವಿಡ್ ಜಾಗೃತಿ, ಲಸಿಕೆ, ಆಸ್ಪತ್ರೆ, ಸ್ವಸ್ಥ ಅಭಿಯಾನದ ಮೂಲಕ ನೀರಿನ ಸ್ವಚ್ಛತೆ, ಪ್ಲಾಸ್ಟಿಕ್ ಮರುಬಳಕೆಯಂತಹ ಜಾಗೃತಿ ಮೂಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಇದು ಕ್ರೀಯಾತ್ಮಕ ಚಿಂತನೆಯನ್ನು ಬೆಳೆಸುತ್ತದೆ. ಕಲಿಕೆ…
ಮಡಿಕೇರಿ ಮಾ.20 : ಗಿರಿಜನ ಬಾಹುಳ್ಯವಿರುವ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಪೇಟೆಯಲ್ಲಿ ಕಾಂಗ್ರೆಸ್ ಎಸ್ಟಿ ಘಟಕದ ವತಿಯಿಂದ ‘ಬುಡಕಟ್ಟು ಸಮುದಾಯಗಳ ಸಮಾವೇಶ’ ಬೃಹತ್ ಮೆರವಣಿಗೆಯೊಂದಿಗೆ ನಡೆಯಿತು. ಸಮಾವೇಶದಲ್ಲಿ ಪಾಲ್ಗೊಂಡ ಶ್ರೀ ಬೋಧಾನಂದ ಸ್ವಾಮೀಜಿ, ಕಳೆದ ಎರಡು ದಶಕಗಳಿಂದ ಜಿಲ್ಲೆಯಲ್ಲಿ ಒಂದೇ ಪಕ್ಷದ ಶಾಸಕರು ಅಧಿಕಾರದಲ್ಲಿದ್ದರೂ, ಗಿರಿಜನ ಸಮೂಹಕ್ಕೆ ಇಂದಿಗೂ ನೆಮ್ಮದಿಯ ಬದುಕಿಗೆ ಸೂಕ್ತ ಸೂರು, ಕುಡಿಯುವ ನೀರು, ಮೂಲ ಸೌಲಭ್ಯ ದೊರಕಿಲ್ಲ. ಬುಡಕಟ್ಟು ಸಮುದಾಯಕ್ಕೆ ವಿನಿಯೋಗವಾಗಬೇಕಾದ ಸರ್ಕಾರದ ಅನುದಾನ ಕೊಡಗಿನಲ್ಲಿ ಸಮರ್ಪಕವಾಗಿ ಬಳಕೆಯಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಆದಿವಾಸಿ ಸಮೂಹವನ್ನು ಸದಾ ಕತ್ತಲಲ್ಲಿಯೇ ಇರಿಸಲಾಗಿದೆ, ಶೋಷಿತ ಸಮೂಹವನ್ನು ನಿರ್ಲಕ್ಷಿಸಿದ ರಾಜಕಾರಣಿಗಳು ಮಾತ್ರ ಬೆಳೆದಿದ್ದಾರೆ ಎಂದು ಆರೋಪಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ, ಕಳೆದ 20 ವರ್ಷಗಳಿಂದ ಆದಿವಾಸಿಗಳ ಜೀವನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಟೀಕಿಸಿದರು. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಮಾತನಾಡಿ, ಕಾಂಗ್ರೆಸ್ನಿಂದ ವಿತರಿಸಲಾಗುತ್ತಿರುವ ‘ಗ್ಯಾರಂಟಿ ಕಾರ್ಡ್’ ಬೋಗಸ್ ಕಾರ್ಡ್’ ಅಲ್ಲ, ಇದು ಬದಲಾವಣೆಯ ಕಾರ್ಡ್. ಪ್ರತಿಯೊಬ್ಬರ…
ಶ್ರೀಮಂಗಲ ಮಾ.20 : ಯಾವುದೇ ಪಕ್ಷದಲ್ಲಿ ಗುರ್ತಿಸಿಕೊಂಡರೂ ಆ ಪಕ್ಷ ಅಥವಾ ಆ ಪಕ್ಷದ ಮುಖಂಡರಿಂದ ಜನಾಂಗಕ್ಕೆ ಆಗುತ್ತಿರುವ ದ್ರೋಹವನ್ನು ಅದುಮಿಟ್ಟುಕೊಳ್ಳಬಾರದು. ಕೊಡವ ಜನಾಂಗದ ಕೋವಿ ಹಕ್ಕು ಸೇರಿದಂತೆ ಜನಾಂಗದ ಹಕ್ಕುಗಳನ್ನು ಕಸಿದು ಜನಾಂಗವನ್ನು ನಿರ್ನಾಮ ಮಾಡಲು ಕೊಡವರ ಒಡನಾಟ ಇಟ್ಟುಕೊಂಡ ಮುಖಂಡರು ಕುತಂತ್ರ ರೂಪಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರವಹಿಸಬೇಕು, ಕೊಡವರ ವಿಶೇಷವಾದ ಕೋವಿ ಹಕ್ಕನ್ನು ಸೂರ್ಯ ಚಂದ್ರ ಇರುವವರೆಗೆ ಅಭಾದಿತವಾಗಿ ಮುಂದುವರಿಯಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿ.ಎಸ್.ಸಿ.)ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ಹೇಳಿದರು. ಬಿರುನಾಣಿಯ ಮರೆನಾಡು ಪ್ರೌಢಾಶಾಲೆ ಮೈದಾನದಲ್ಲಿ ಮರೆನಾಡ್ ಶೂಟರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 3ನೇ ವರ್ಷದ ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. “ನಮ್ಮ ತಾಯಿ, ಸಹೋದರಿಯರ ಮೇಲೆ ದೌರ್ಜನ್ಯ ಮಾಡಿದವರು ನಮ್ಮ ಪಕ್ಷದವರು”ಎಂದು ಮನ್ನಿಸಲು ಸಾಧ್ಯವಿಲ್ಲ ಎಂದ ಅವರು ಮಹಾಭಾರತ ಯುದ್ಧದಲ್ಲಿ ಪಾಂಡವ-ಕೌರವ ಸಹೋದರರೇ ಎದುರಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ದಯೆ, ಕನಿಕರ ಕಟ್ಟಿಟ್ಟು ಯುದ್ಧ ಮಾಡುವಂತೆ ಶ್ರೀ ಕೃಷ್ಟನ ಉಪದೇಶ…
ಮಡಿಕೇರಿ ಮಾ.20 : ಗುಡ್ಡೆಹೊಸೂರು ಸಮೀಪದ ಬಾಳುಗೋಡು ವ್ಯಾಪ್ತಿಯ ರಸುಲ್ ಪುರ ಕಲ್ಲುಮಂಟಿ ಬಸವೇಶ್ವರ ದೇವಾಲಯದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯ ಮಂಡಳಿ ಅಧ್ಯಕ್ಷ ಪಿ.ಬಿ.ಈರಪ್ಪ, ಕಾರ್ಯದರ್ಶಿ ರಾಮಚಂದ್ರ ನೇತೃತ್ವದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳನ್ನು ಯೋಗೇಶ್ ಭಟ್ಟರು ನೆರವೇರಿಸಿಕೊಟ್ಟರು. ಬೆಳಗ್ಗಿನಿಂದಲೇ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಎಲ್ಲರಿಗೂ ದೇವರ ಪ್ರಸಾದ ವಿನಿಯೋಗ ಮತ್ತು ಅನ್ನ ಸಂತರ್ಪಣೆ ನಡೆಯಿತು.






