ಮಡಿಕೇರಿ ಮಾ.20 : ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ವೃತ್ತದಲ್ಲಿ ಒಟ್ಟು 5 ಆನೆ ಕಾವಾಡಿಗ ಹುದ್ದೆಯ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2023 ರ ಮಾರ್ಚ್, 30 ರಿಂದ ಏಪ್ರಿಲ್, 29 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಪೂರ್ಣ ಮಾಹಿತಿ ಇಲಾಖಾ ವೆಬ್ಸೈಟ್ www.kfdrecruitment.in ನಲ್ಲಿ ಹಾಗೂ ಕಚೇರಿಯಲ್ಲಿ ಲಭ್ಯವಿರುತ್ತದೆ ಎಂದು ಆನೆ ಕಾವಾಡಿಗ ಹುದ್ದೆಯ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರಿ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಮಾ.20 : ಅರೆ ಸೇನಾಪಡೆ ನಿವೃತ್ತ (ಮಾಜಿ) ಯೋಧರ ಸಮಾವೇಶವು ಮಾರ್ಚ್, 23 ರಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪದ ಪರಿಮಳ ಮಂಗಳ ವಿಹಾರ ಸಭಾಂಗಣದಲ್ಲಿ ನಡೆಯಲಿದೆ. ಮಾಜಿ ಯೋಧರು ಅನುಭವಿಸುತ್ತಿರುವ ಸಮಸ್ಯೆಗಳು ಕುಂದುಕೊರತೆಗಳ ಬಗ್ಗೆ ಸಭೆ ನಡೆಯಲಿದೆ. ಅಡ್ವೋಕೇಟ್ ಜನರಲ್ ಮತ್ತು ಸಮಾಜ ಸೇವಕರಾದ ಎಸ್.ಎಸ್.ಪೊನ್ನಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ ಅವರು ಸಮಸ್ಯೆಗಳ ಬಗ್ಗೆ ಸಮಾಲೋಚಿಸಿ ವಿಚಾರ ವ್ಯಕ್ತಪಡಿಸಲಿದ್ದಾರೆ. ಫೀಲ್ಡ್ ಮಾರ್ಷಲ್ ಕೊಡವ ಕ್ಷೇಮಾಭಿವೃದ್ಧಿ ಸಂಘ ಹಾಗೂ ಗುರುಮನೆ-12 ಹಾಲಿ ಅಧ್ಯಕ್ಷರು, ಉದ್ಯಮಿ ಹಾಗೂ ಸಮಾಜ ಸೇವಕರಾದ ದೇಯಂಡ ಜಯಾಚಂಗಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. ಅರೆಸೇನಾಪಡೆ ಮಾಜಿ ಯೋಧರು ಕರ್ತವ್ಯ ನಿರತ ಯೋಧರ ಕುಟುಂಬದವರು, ಅವಲಂಬಿತರು ಸಮಾವೇಶಕ್ಕೆ ಆಗಮಿಸುವಂತೆ ಅರೆ ಸೇನಾಪಡೆ ನಿವೃತ್ತ(ಮಾಜಿ) ಯೋಧರ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪರವಾಗಿ ಕಾರ್ಯದರ್ಶಿ ಹಾಗೂ ಸಂಚಾಲಕರಾದ ನೂರೇರ ಎಂ.ಭೀಮಯ್ಯ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿ ಮೊ. 9481057868 ನ್ನು ಸಂಪರ್ಕಿಸಬಹುದು.
ಮಡಿಕೇರಿ ಮಾ.20 : ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ರಾಜ್ಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಸೋಮವಾರ ನಗರದ ಹಿಲ್ ರಸ್ತೆಯಲ್ಲಿ ಇರುವ ನಗರಸಭಾ ಹಿರಿಯ ಪ್ರಾಥಮಿಕ ಶಾಲೆ, ಮಹದೇವಪೇಟೆಯ ನಗರಸಭಾ ಹಿರಿಯ ಪ್ರಾಥಮಿಕ ಶಾಲೆ, ಸಂತ ಜೋಸೆಫರ ಕಾಲೇಜು ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ರ್ಯಾಂಪ್ ವ್ಯವಸ್ಥೆ ಮಾಡಬೇಕು. ಜೊತೆಗೆ ರೈಲಿಂಗ್ಸ್ ಇರಬೇಕು. ಗಾಲಿ ಕುರ್ಚಿ ವ್ಯವಸ್ಥೆ ಮಾಡಬೇಕು. ಒಂದು ಮತಗಟ್ಟೆಯಲ್ಲಿ 80 ವರ್ಷ ಮೇಲ್ಪಟ್ಟವರು ಎಷ್ಟು ಮಂದಿ ಇದ್ದಾರೆ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಪಿ.ಎಸ್.ವಸ್ತ್ರದ್ ಅವರು ಬಿಎಲ್ಒಗಳಿಗೆ ಸೂಚಿಸಿದರು. ಕಳೆದ ಬಾರಿ ಶೇ.60 ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ತೆರಳಿ ಮಾಹಿತಿ ಪಡೆದ ಸ್ವೀಪ್ ನೋಡಲ್ ಅಧಿಕಾರಿ ಅವರು ವೋಟರ್ ಹೆಲ್ಫ್ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕೆಲವು ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿ ಇದ್ದರೂ ಸಹ, ಮತದಾರರ ಪಟ್ಟಿಯಲ್ಲಿ ಹೆಸರು…
ಮಡಿಕೇರಿ ಮಾ.20 : ಸೋಮವಾರಪೇಟೆ ತಾಲ್ಲೂಕು ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳ ನೂತನ ಸಂಘ ಅಸ್ತಿತ್ವಕ್ಕೆ ಬಂದಿದೆ. ಸಂಘದ ನೂತನ ಅಧ್ಯಕ್ಷರಾಗಿ ಗೌತಮ್ ಶಿವಪ್ಪ ಸರ್ವಾನುಮತದಿಂದ ಆಯ್ಕೆಯಾದರು. ಖಜಾಂಚಿಯಾಗಿ ಕೆ.ರಾಜೀವನ್, ಕಾರ್ಯದರ್ಶಿಯಾಗಿ ನವೀನ ಬೆಂಬಳೂರು ಹಾಗೂ ಉಪಾಧ್ಯಕ್ಷರನ್ನಾಗಿ ಸುಮಂಗಳ ಅವರನ್ನು ಆಯ್ಕೆ ಮಾಡಲಾಯಿತು. ಸೋಮವಾರಪೇಟೆ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಇದೇ ಸಂದರ್ಭ ತಾಲ್ಲೂಕು ಆಹಾರ ಶಿರಸ್ತುದಾರರು ಹಾಗೂ ಆಹಾರ ನಿರೀಕ್ಷಕರ ಸಮ್ಮುಖದಲ್ಲಿ “ಅನ್ನಭಾಗ್ಯ” ಯೋಜನೆಯ ಸಮರ್ಪಕ ವಿತರಣೆಯ ಕುರಿತು ಚರ್ಚಿಸಲಾಯಿತು.
ಕಡಂಗ ಮಾ.20: ಅರಪಟ್ಟು ಗ್ರಾಮದಲ್ಲಿರುವ ಪುರಾತನ ದೇವಾಲಯ ಶ್ರೀ ಪಟ್ಟೋಟು ಉಮಾ ಮಹೇಶ್ವರ ದೇವರ ಪ್ರತಿಷ್ಠ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವದ ಅಂಗವಾಗಿ ಸಾಮೂಹಿಕ ರುದ್ರಾಭಿಷೇಕ ಹಾಗೂ ಮಹಾ ಪೂಜಾ ಕಾರ್ಯಕ್ರಮವನ್ನು ಅರ್ಚಕರಾದ ವಿದ್ಯಾಧರ್ ಭಟ್ ಹಾಗೂ ತಂಡದವರು ನೆರವೇರಿಸಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ನೆರಪಂಡ ಚಿತ್ರ ಬೆಳ್ಯಪ್ಪ ಹಾಗೂ ಸಮಿತಿ ಸದಸ್ಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ವಿಧಿಗಳಲ್ಲಿ ಭಾಗವಹಿಸಿದರು. ನಂಬಿಯಪ0ಡ ದಿವಂಗತ ಪೂವಯ್ಯ ಜ್ಞಾಪಕಾರ್ಥವಾಗಿ ಅವರ ಮಕ್ಕಳು ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇಸಿದರು. ವರದಿ : ನೌಫಲ್ ಕಡಂಗ
ಮಡಿಕೇರಿ ಮಾಚ್೯ 20 – ಸತ್ಪ್ರಜೆಗಳನ್ನು ರೂಪಿಸುವ ಹೊಣೆಗಾರಿಕೆಯುಳ್ಳ ಶಿಕ್ಷಕ ವೃತ್ತಿಯಲ್ಲಿರುವವರಿಗೆ ಎಂದಿಗೂ ನಿವೃತ್ತಿ ಎಂಬುದಿಲ್ಲ. ಇವರು ಸಮಾಜಕ್ಕೆ ಸದಾ ಮಾಗ೯ದಶ೯ಕರಾಗಿರುತ್ತಾರೆ ಎಂದು ಹಿರಿಯ ಚಿಂತಕ, ವೈದ್ಯ ಡಾ.ಎಂ.ಜಿ.ಪಾಟ್ಕರ್ ಅಭಿಪ್ರಾಯಪಟ್ಟಿದ್ದಾರೆ. ಕೂಡಿಗೆ ಕ್ರೀಡಾಶಾಲೆಯಲ್ಲಿ 36 ವಷ೯ಗಳ ಸುಧೀಘ೯ ಸೇವೆ ಸಲ್ಲಿಸಿದ್ದ ಕುಂತಿಬೋಪಯ್ಯ ಅವರ ಕುರಿತ ಕುಂತಿಬೋಪಯ್ಯ ಸಾಕ್ಷ್ಯ ಚಿತ್ರ ಕುಂತಿಟೀಚರ್ ನ್ನು ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಲೋಕಾಪ೯ಣೆ ಮಾಡಿ ಮಾತನಾಡಿದ ಡಾ.ಎಂ.ಜಿ.ಪಾಟ್ಕರ್, ಸಾವಿರಾರು ವಿದ್ಯಾಥಿ೯ಗಳಿಗೆ ಪಾಠ ಹೇಳಿ, ಸಂಸ್ಕಾರ ಕಲಿಸಿದ ಶಿಕ್ಷಕರು ನಿವೖತ್ತಿಯಾಗುವುದು ಸೇವಾ ದಾಖಲೆಗೆ ಮಾತ್ರವೇ ಆಗಿದ್ದು ನಿಜವಾದ ಅಥ೯ದಲ್ಲಿ ಸಮಾಜಕ್ಕೆ ಸದಾ ಮಾಗ೯ದಶ೯ಕರಾಗಿಯೇ ಇರುವ ಶಿಕ್ಷಕರಿಗೆ ನಿವೖತ್ತಿ ಎಂಬುದೇ ಇಲ್ಲ. ಆ ಪವಿತ್ರ ವೖತ್ತಿಯಲ್ಲಿರುವವರು ಸದಾ ಸಮಾಜದ ಹಿತಚಿಂತನೆ ಮಾಡುತ್ತಿರುತ್ತಾರೆ ಎಂದರು. ಪ್ರತೀಯೋವ೯ರ ಜೀವನದಲ್ಲಿಯೂ ಓವ೯ ಆದಶ೯ ಶಿಕ್ಷಕ ಪ್ರಮುಖ ಪಾತ್ರ ವಹಿಸಿರುತ್ತಾನೆ ಎಂದು ಹೇಳಿದ ಪಾಟ್ಕರ್ ಕೂಡಿಗೆ ಕ್ರೀಡಾಶಾಲೆಯಲ್ಲಿ ಸುಧೀಘ೯ ಸೇವೆ ಸಲ್ಲಿಸಿದ ಕುಂತಿಬೋಪಯ್ಯ ಅವರು ಕೊಡಗಿಗೆ ಮಾತ್ರವಲ್ಲ ದೇಶದಲ್ಲಿಯೇ ಆದಶ೯ ಶಿಕ್ಷಕಿಯರ ಸಾಲಿನಲ್ಲಿ ಮುಂಚೂಣಿಯಲ್ಲಿರುವ…
ನಾಪೋಕ್ಲು ಮಾ.20 : ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಸಾರಥ್ಯ ವಹಿಸಿದ್ದ 23ನೇ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಪಂದ್ಯಾವಳಿಯ ಮೊದಲ ದಿನ ವಿವಿಧ ತಂಡಗಳು ಸೆಣೆಸಾಟ ನಡೆಸಿದವು. ಮೂರು ಮೈದಾನಗಳಲ್ಲಿ ನಡೆದ ಪಂದ್ಯಗಳಲ್ಲಿ ಪೆಮ್ಮಡಿಯಂಡ, ಚೊಟ್ಟೆಯಂಡ, ಪುಟ್ಟಿಚಂಡ, ಚೇರಂಡ, ಕಬ್ಬಚ್ಚಿರ, ಅಮ್ಮಂಡ, ಕೊಂಡಿರ ಸೇರಿದಂತೆ ವಿವಿಧ ತಂಡಗಳು ಗೆಲುವು ಸಾಧಿಸಿದವು. ಮೈದಾನ ಒಂದರಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪೆಮ್ಮಡಿಯಂಡ ಮತ್ತು ಮಚ್ಚುರ ತಂಡಗಳು ಸೆಣೆಸಾಟ ನಡೆಸಿದವು. ಪೆಮ್ಮಡಿಯಂಡ ತಂಡ ನಾಲ್ಕು ಗೋಲು ಗಳಿಸಿದರೆ ಮಚ್ಚುರತಂಡ ಮೂರು ಗೋಲು ಗಳಿಸಿ ಸೋಲನ್ನನುಭವಿಸಿತು. ಎರಡನೇ ಪಂದ್ಯದಲ್ಲಿ ಕಾಂಡಂಡ ಮತ್ತು ಪುಟ್ಟಿಚಂಡ ತಂಡಗಳು ಸೆಣೆಸಾಡಿದವು ಪುಟ್ಟಿಚಂಡ ತಂಡ ಒಂದು ಗೋಲು ಗಳಿಸಿದರೆ ಕಾಂಡಂಡ ತಂಡ ಯಾವುದೇ ಗೋಲುಗಳಿಸಲಿಲ್ಲ. ಮೂರನೇ ಪಂದ್ಯದಲ್ಲಿ ಚೇರಂಡ ತಂಡ ಎರಡು ಗೋಲು ಗಳಿಸಿದರೆ ಅಲ್ಲಾರಂಡ ತಂಡ ಯಾವುದೇ ಗೋಲು ಗಳಿಸಲು ಶಕ್ತವಾಗಲಿಲ್ಲ. ಐದನೇ ಪಂದ್ಯದಲ್ಲಿ ಕಬ್ಬಚ್ಚಿರ ತಂಡ ಗೆಲುವು ಸಾಧಿಸಿತು. ಮೇಚಿಯಂಡ ತಂಡದ ವಿರುದ್ದ…
ಮಡಿಕೇರಿ ಮಾ.20 : ಅಹ್ಮದಿಯಾ ಮುಸ್ಲಿಮ್ ಜಮಾಅತ್ ನ ಯುವ ವಿಭಾಗವಾದ ಮಜ್ಲಿಸ್ ಖುದ್ದಾಮುಲ್ ಅಹ್ಮದಿಯಾ ವತಿಯಿಂದ ಕರ್ನಾಟಕದಾದ್ಯಂತ ನಡೆಯುತ್ತಿರುವ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಸಂಪಿಗೆ ಕಟ್ಟೆಯಿಂದ ರಾಜೇಶ್ವರಿ ಶಾಲೆಯವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಯುವ ಅಧ್ಯಕ್ಷ ಹದ್ಸರ್ ಅಹ್ಮದ್ ನೇತೃತ್ವದಲ್ಲಿ ಯುವ ವಿಭಾಗದ ಸದಸ್ಯರು ಹಾಗೂ ಪದಾಧಿಕಾರಿಗಳು ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಸೇರಿದಂತೆ ಇತ್ಯಾದಿ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿ ಸಂಗ್ರಹಿಸಿದ ಕಸವನ್ನು ನಗರಸಭಾ ಸದಸ್ಯರಾದ ಮನ್ಸೂರ್ ಅವರ ಸಮ್ಮುಖದಲ್ಲಿ ನಗರ ಸಭಾ ವಾಹನಕ್ಕೆ ನೀಡಲಾಯಿತು. ಈ ಸಂದರ್ಭ ಅಹ್ಮದಿಯಾ ಮುಸ್ಲಿಮ್ ಜಮಾಅತಿನ ಅಧ್ಯಕ್ಷ ಜಿ.ಎಂ.ಮೊಹಮ್ಮದ್ ಶರೀಫ್, ಖಾಲಿದ್ ಹಾಗೂ ಯುವ ವಿಭಾಗದ ಇತರ ಪದಾಧಿಕಾರಿಗಳು ಹಾಜರಿದ್ದರು.
ನಾಪೋಕ್ಲು ಮಾ.20 : ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಬೇತು ಗ್ರಾಮದಲ್ಲಿ ಸರ್ಕಾರದ ಮಳೆ ಪರಿಹಾರ ನಿಧಿ ಯೋಜನೆಯಡಿಯಲ್ಲಿ ನಿರ್ಮಿಸಲಾಗುತ್ತಿರುವ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾ.ಪಂ ಅಧ್ಯಕ್ಷೆ ಎಚ್.ಎಸ್ ಪಾರ್ವತಿ ಚಾಲನೆ ನೀಡಿದರು. ನಾಪೋಕ್ಲು -ಮಡಿಕೇರಿ ಮುಖ್ಯರಸ್ತೆಯ ತೋಟಗಾರಿಕಾ ಕ್ಷೇತ್ರದದಿಂದ 5.16 ಲಕ್ಷರೂ ವೆಚ್ಚದಲ್ಲಿ ಬೇತು ಗ್ರಾಮಕ್ಕೆ ಸಂಪರ್ಕಕಲ್ಪಿಸುವ ರಸ್ತೆ, ಬೇತಗ್ರಾಮದ ಕೊಂಡೀರ ಕುಟುಂಬಸ್ಥರ ಐನ್ ಮನೆಗೆ 1.88 ಲಕ್ಷದ ಕಾಂಕ್ರೆಟ್ ರಸ್ತೆ ಹಾಗೂ 2.36 ಲಕ್ಷ ರೂ ವೆಚ್ಚದಲ್ಲಿ ಬೇತು ಗ್ರಾಮದಿಂದ ಬಲಮುರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಕ್ಕಿ ಕಡವು ರಸ್ತೆ ಸೇರಿ ಒಟ್ಟು 9.4 ಲಕ್ಷರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಮರುಡಾಂಬರೀಕರಣ ಹಾಗೂ ಕಾಂಕ್ರೆಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಗ್ರಾಮಸ್ಥರಾದ ಕೊಂಡೀರ ರಾಜಪ್ಪಮಾತನಾಡಿ, ನಮ್ಮ ಗ್ರಾಮದ ವಿವಿಧ ರಸ್ತೆಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ. ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಕಾಳೆಯಂಡ ಸಾಬಾ ತಿಮ್ಮಯ್ಯ, ಕೆ.ಎ.ಇಸ್ಮಾಯಿಲ್, ಮಾಚೇಟ್ಟಿರ ಕುಶು ಕುಶಾಲಪ್ಪ,…
ನಾಪೋಕ್ಲು ಮಾ.20 : ಚೆರಿಯಪರಂಬು ಮುಹಿಯದ್ದೀನ್ ಜುಮಾ ಮಸೀದಿಯ 2023-24 ನೇ ಸಾಲಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪರವಂಡ ಝುಬೈರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎ ಸಿರಾಜುದ್ದೀನ್, ಉಪಾಧ್ಯಕ್ಷರಾಗಿ ಪಿ. ಎ.ಹಾರಿಸ್, ಸಹ ಕಾರ್ಯದರ್ಶಿಯಾಗಿ ಕೆ.ಎ.ಹಾರಿಸ್, ಕೆ.ಎ.ಮಾಹಿನ್, ಕೋಶಾಧಿಕಾರಿಯಾಗಿ ಪಿ.ಹೆಚ್.ಬಶೀರ್, ಸಮಿತಿ ಸದಸ್ಯರಾಗಿ ಪಿ.ಐ.ರಫೀಕ್ ಸಖಾಫಿ, ಅಶ್ರಫ್ ಪಿ.ಎಂ, ಅಬ್ದುಲ್ ರಹ್ಮಾನ್, ಪಿ.ಎ.ಹಾಶಿಮ್ , ಎಂ.ಎಸ್.ಹುಸೈನ್, ಎನ್.ಎ .ಅಶ್ರಫ್ , ಎಂ.ಎ.ಸಲಾಂ , ವಿ.ಎ.ನಝೀರ್ ಇವರುಗಳನ್ನು ಚೆರಿಯಪರಂಬುವಿನ ಮದರಸ ಸಭಾಂಗಣದಲ್ಲಿ ನಡೆದ ಜಮಾಅತ್ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ವರದಿ :ಝಕರಿಯ ನಾಪೋಕ್ಲು






