ಮಡಿಕೇರಿ ಏ.27 : ಭಾರತ ಚುನಾವಣಾ ಆಯೋಗವು ಮೇ 10 ರಂದು ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನ ನಿಗದಿಪಡಿಸಿದೆ. ಈ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿದೆ. ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿ ಕೊಡಬೇಕಾಗಿದೆ. ಆದ್ದರಿಂದ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಅಥವಾ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಏ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಕೃಷಿ ಇಲಾಖೆಯ ಉಪ ನಿರ್ದೇಶಕ ಬಾಲರಾಜ್ ರಂಗರಾವ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ನಯನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಹಾಗೂ ಇತರರು ಹಾಜರಿದ್ದರು.
ಮಡಿಕೇರಿ ಏ.27 : ಕೊಡಗು ಹೆಗ್ಗಡೆ ಸಮಾಜದ ವತಿಯಿಂದ ಏ.29 ರಿಂದ ಮೇ 2ರ ವರೆಗೆ ಕ್ರೀಡೋತ್ಸವ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ತಿಳಿಸಿದ್ದಾರೆ. ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಏ.29 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮುಖ್ಯ ಅಥಿತಿಗಳಾಗಿ ಟ್ರೋಫಿ ದಾನಿಗಳಾದ ಮೇಜರ್ ಮಳ್ಳಡ ದೀಕ್ಷಿತ್ ದೇವಯ್ಯ, ಪೊಲೀಸ್ ಉಪ ನಿರೀಕ್ಷಕ ಹಾಗೂ ಮುಖ್ಯಮಂತ್ರಿ ಪದಕ ವಿಜೇತ ತುದಿಮಾಡ ಸವಿ, ಕ್ರೀಡಾ ಸಮಿತಿಯ ಅಧ್ಯಕ್ಷ ಪಡಿಞರಂಡ ಪ್ರಭುಕುಮಾರ್, ಸಮಾಜದ ಉಪಾಧ್ಯಕ್ಷ ಕೊರಕುಟ್ಟಿರ ಸರ ಚಂಗಪ್ಪ, ಕಾರ್ಯದರ್ಶಿ ಚಂಗಚಂಡ ಕಟ್ಟಿಕಾವೇರಪ್ಪ, ಖಜಾಂಚಿ ಪಾನಿಕುಟ್ಟಿರ ಕುಟ್ಟಪ್ಪ, ಪ್ರಮುಖರಾದ ಪದಿಕಂಡ ನಾಗೇಶ್, ಕೊಂಗೆಪಂಡ ಕುಟ್ಟಪ್ಪ, ತೋರೆರ ಉಮೇಶ್ ಮತ್ತು ಹೆಗ್ಗಡೆ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕ್ರಿಕೆಟ್ ಸಿನಿಯರ್ ವಿಭಾಗದಲ್ಲಿ 19 ತಂಡಗಳು, ಕ್ರಿಕೆಟ್ ಜೂನಿಯರ್ ವಿಭಾಗದಲ್ಲಿ 5…
ಮಡಿಕೇರಿ ಏ.27 : ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷರಾಗಿ ಕಳಕಂಡ ಡಿ.ಮುತ್ತಪ್ಪ ಮರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಅಜ್ಜಮಾಡ ಮೋನಿ ಪೊನ್ನಪ್ಪ, ಉಪಾಧ್ಯಕ್ಷರಾಗಿ ಮತ್ರಂಡ ಸಿ.ಪೂವಣ್ಣ, ಜಂಟಿ ಕಾರ್ಯದರ್ಶಿಯಾಗಿ ಬೇರೇರ ಸೂರಜ್ ಮುತ್ತಣ್ಣ, ಖಜಾಂಚಿಯಾಗಿ ಬಾನಂಗಡ ವಿನೋದ್ ನೇಮಕಗೊಂಡಿದ್ದು, ನಿರ್ದೇಶಕರಾಗಿ ಬಿ.ಯು.ಪ್ರತಿಷ್ಟ, ಹೆಚ್.ಜಿ.ದಿನೇಶ್, ಎಂ.ಜಿ.ರಫಿಕ್, ಎ.ಜಿ.ಕಲ್ಪನ ಆಯ್ಕೆಯಾಗಿದ್ದಾರೆ. ಪ್ರತೀ ಎರಡು ವರ್ಷಕೊಮ್ಮೆ ನಡೆಯುವ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಕುಶಾಲನಗರ ಏ.27 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಕುಶಾಲನಗರ ವ್ಯಾಪ್ತಿಯ ಮಿಂಚಿನ ಸಂಚಾರ ನಡೆಸಿ, ಮತದಾರರನ್ನು ಭೇಟಿಯಾಗಿ ಬಿರುಸಿನ ಚುನಾವಣಾ ಮತಯಾಚನೆ ಕಾರ್ಯ ನಡೆಸಿದರು. ಮೈಸೂರು-ಕುಶಾಲನಗರ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿ ಬಳಿಯಿಂದ ಸಭೆಯ ಬಳಿಕ ಕಾರ್ಯಕರ್ತರೊಂದಿಗೆ ಪ್ರಚಾರ ಆರಂಭಿಸಿದ ಮುತ್ತಪ್ಪ, ನಗರದ ವಿವಿಧ ಕಡೆಗಳಿಗೆ ತೆರಳಿ ಮತ ಪ್ರಚಾರ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವುದನ್ನು ತಮ್ಮೊಂದಿಗೆ ಹೇಳಿದ್ದಾರೆಂದು ಮುತ್ತಪ್ಪ ತಿಳಿಸಿದರು. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯನ್ನು ಯಾವುದೇ ನಿಬಂಧನೆಗಳಿಲ್ಲದೆ ಜಾರಿಗೆ ತರಲಿದೆ. ಜೆಡಿಎಸ್ ಪಕ್ಷವು ಕ್ಷೇತ್ರದಲ್ಲಿ ಬಲಿಷ್ಠವಾಗಿದ್ದು, ಈ ಬಾರಿ ಗೆಲುವು ಸಾಧಿಸಲಿದೆ ಎಂದರು. ಕೊಡಗಿನಲ್ಲಿ ಉತ್ತಮ ಪರಿಕಲ್ಪನೆಯೊಂದಿಗೆ ಅತ್ಯಾಧುನಿಕ ರೀತಿಯ ವೈಜ್ಞಾನಿಕ ರೂಪುರೇμÉಗಳನ್ನು ಒಳಗೊಂಡ ಯೋಜನೆಗಳನ್ನು ಜಾರಿಗೆ ತರುವುದೇ ನಮ್ಮ ಮೊದಲ ಆದ್ಯತೆ ಆಗಿದ್ದು, ಬದ್ಧತೆ ಇಲ್ಲದ ರಾಷ್ಟ್ರೀಯ ಪಕ್ಷಗಳಿಗೆ ಜನ ತಕ್ಕ ಪಾಠ ಕಲಿಸಲಿದ್ದು, ಈ ಬಾರಿ…
ವಿರಾಜಪೇಟೆ ಏ.27 : ಪ್ರಸ್ತುತ ಜಗತ್ತು ನವನವೀನವಾದ ಆವಿಷ್ಕಾರಗಳನ್ನು ಎದುರು ನೋಡುತ್ತಿದೆ. ಯುವ ಜನತೆಯು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಾ ಜಗತ್ತಿನ ಆಶೋತ್ತರಗಳಿಗೆ ಸ್ಪಂದಿಸಲು ಚಿಂತನೆ ನಡೆಸಬೇಕು ಎಂದು ಮಂಗಳೂರಿನ ಯುವ ವಕೀಲ ಸಿ.ಎ.ಅನ್ವೇಶ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಕಾಲೇಜು ಸ್ನಾತಕೋತ್ತರ ವಿಭಾಗ, ಐಕ್ಯೂಎಸಿ ಮತ್ತು ವಾಣಿಜ್ಯಶಾಸ್ತø ವಿಭಾಗದ ವತಿಯಿಂದ ವಿಶ್ವ ಬೌದ್ಧಿಕ ಆಸ್ತಿ ಮತ್ತು ಹಕ್ಕುಗಳ ದಿನಾಚರಣೆಯ ಅಂಗವಾಗಿ ಕಾಲೇಜು ಸಭಾಂಗಣದಲ್ಲಿ ನಡೆದ ಬೌಧಿಕ ಆಸ್ತಿ ಮತ್ತು ಹಕ್ಕುಗಳ ರಾಷ್ಟøಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ, ಉಪನ್ಯಾಸ ನೀಡಿದರು. ಮನುಷ್ಯನ ಬೌದ್ಧಿಕ ಸಾಮಥ್ರ್ಯದಿಂದ ಸೃಷ್ಟಿಸಲ್ಪಟ್ಟ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಕ್ರಿಯೆಗಳನ್ನು ಬೌದ್ಧಿಕ ಸ್ವತ್ತುಗಳು ಅಥವಾ ಆಸ್ತಿಗಳೆಂದು ಹೇಳಬಹುದಾಗಿದೆ. ಯಾವುದೇ ಭೌತಿಕ ವಸ್ತುಗಿರುವ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯಗಳನ್ನು ಬೌದ್ಧಿಕ ಆಸ್ತಿ ಹೊಂದಿದ್ದು, ಈ ಕಾರಣ ಇದನ್ನು ಸ್ವತ್ತು ಅಥವಾ ಆಸ್ತಿ ಎಂದು ಪರಿಗಣಿಸಿ ಕಾನೂನಿನ ಮೂಲಕ ಬೌದ್ಧಿಕ ಆಸ್ತಿಯ ಹಕ್ಕುಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಸಾಹಿತ್ಯ, ಕಾಲತ್ಮಕ ಕೃತಿಗಳು ( ಸಂಗೀತ,…
ಮಡಿಕೇರಿ ಏ.27 : ಆಮ್ ಆದ್ಮಿ ಪಾರ್ಟಿಯ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವೀಂದ್ರ ಪರ ಅಮ್ಮತ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಯಿತು. ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಅಮ್ಮತ್ತಿ, ಇಂಜಿಲಗೆರೆ, ಸಿದ್ದಾಪುರ, ಪಾಲಿಬೆಟ್ಟ, ಕಾರ್ಮಾಡು ಕಡೆಗಳ ಮನೆ ಮನೆಗೆ ತೆರಳಿ ಪಕ್ಷದ ಯೋಜನೆಗಳ ಕರಪತ್ರವನ್ನು ನೀಡಿ ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಹಾಗೂ ಮತ್ತಿರ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಏ.27 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಮಂತರ್ ಗೌಡ ಪರ ಪತ್ನಿ ದಿವ್ಯಾ ಮಂತರ್ಗೌಡ ಮತಯಾಚನೆ ನಡೆಸಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಸುಂಟಿಕೊಪ್ಪ ಏ.27 : ಸಮಾಜಘಾತುಕ ಶಕ್ತಿಗಳನ್ನು ತಡೆಯಲು ಕಾನೂನು ಸುವ್ಯವಸ್ಥೆ ಬಿಗಿಗೊಳಿಸುವ ನಿಟ್ಟಿನಲ್ಲಿ ಸುಂಟಿಕೊಪ್ಪ ಪಟ್ಟಣದಲ್ಲಿ ಪೊಲೀಸರು ಹಾಗೂ ಕೇಂದ್ರ ಕೈಗಾರಿಕ ರಕ್ಷಣಾ ಪಡೆ, ಇಂಡೋಟಿಬೆಟಿಯನ್ ಗಡಿ ರಕ್ಷಣಾಪಡೆ ಪಥ ಸಂಚಲನ ನಡೆಸಿದರು. ಗದ್ದೆಹಳ್ಳದ ಬಳಿ ಕುಶಾಲನಗರ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ವೃತ್ತನಿರೀಕ್ಷಕರಾದ ಬಿ.ಜಿ.ಮಹೇಶ್, ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರೊಂದಿಗೆ ಸಿಐಎಫ್ನ ಅಧಿಕಾರಿ ಚೌಹಣ್ 100 ಕ್ಕೂ ಹೆಚ್ಚು ಮಂದಿಯ ಇಂಡೋಟಿಬೆಟಿಯನ್ ಗಡಿ ರಕ್ಷಣಾಪಡೆ ಪೊಲೀಸ್ ತುಕಡಿ ತಂಡದವರು ಸುಂಟಿಕೊಪ್ಪದ ಮುಖ್ಯ ರಸ್ತೆಯಲ್ಲಿ ಸಾಗಿ ಮಧುರಮ್ಮ ಬಡಾವಣೆಗಾಗಿ, ಪಂಪ್ಹೌಸ್, ಗುಡ್ಡಪ್ಪ ರೈ ಬಡಾವಣೆ, 1ನೇ ವಿಭಾಗಕ್ಕಾಗಿ ಸಾಗಿ ಮರಳಿ ಪೊಲೀಸ್ ಠಾಣೆಗೆ ಸಾಗಿದರು. ಕೊಡಗಿನ ಜನತೆ ಶಾಂತಿ ಪ್ರಿಯರು ಮಾತ್ರವಲ್ಲದೆ ಚುನಾವಣಾ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವವರಾಗಿದ್ದಾರೆ ಆದರೂ ಸಮಾಜದಲ್ಲಿ ಕೆಲವು ಕೀಡಿಗೇಡಿಗಳು ಮತ್ತು ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಎಚ್ಚರಿಕೆ ಹಾಗೂ ಶಾಂತಿ ಪ್ರಿಯ ಜನರಿಗೆ ಭದ್ರತೆಯನ್ನು ನೀಡುವ ನಿಟ್ಟಿನಲ್ಲಿ ಪಥಸಂಚಲ ನಡೆಸಲಾಗಿದೆ.
ಮಡಿಕೇರಿ ಏ.27 : ಕಾಂಗ್ರೆಸ್ ಅಭ್ಯರ್ಥಿಗಳು ಹೊರಗಿನವರು ಎನ್ನುವ ಜಿಲ್ಲೆಯ ಶಾಸಕರುಗಳ ಹೇಳಿಕೆ ಹಾಸ್ಯಾಸ್ಪದವಾಗಿದೆ. ಇಬ್ಬರು ಅಭ್ಯರ್ಥಿಗಳು ಸ್ವ ಕ್ಷೇತ್ರದವರೇ ಆಗಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಗುಣ ಹೊಂದಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆಯ ಎ.ಎಸ್.ಪೊನ್ನಣ್ಣ ಅವರು ಜಿಲ್ಲೆಯವರೇ ಆಗಿದ್ದಾರೆ. ಜನಪರ ಕಾಳಜಿ ಹೊಂದಿರುವ ಇವರು ವಿದ್ಯಾವಂತರಾಗಿದ್ದು, ಜನರ ಒಲವು ಇಬ್ಬರ ಮೇಲಿದೆ. ಇದೇ ಕಾರಣಕ್ಕೆ ಶಾಸಕರು ಹಾಗೂ ಬೆಂಬಲಿಗರು ಹತಾಶೆಗೊಂಡು ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವು ಅನಿವಾರ್ಯವಾಗಿದೆ. ಜನರು ಕೂಡ ಬದಲಾವಣೆಯನ್ನು ಬಯಸಿದ್ದು, ಗೆಲುವಿಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೂ.450 ಇದ್ದ ಅಡುಗೆ ಅನಿಲದ ಬೆಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 1150 ತಲುಪಿದ್ದು, ಕೂಲಿ ಕಾರ್ಮಿಕರು ಅನಿಲ ಬಳಸಲಾಗದ ಸ್ಥಿತಿಗೆ ತಲುಪಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್…






